Author: kannadanewsnow05

ಕೋಲಾರ : ನೀನೆ ತಾನೆ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ತೀರ್ಮಾನಿಸಿದರೆ ಐದು ವರ್ಷಗಳ ಕಾಲ ನಾನೇ ಸಿಎಂ ಎಂದು ಹೇಳಿಕೆ ನೀಡಿದ್ದರು ಇದೀಗ ಆಹಾರ ಇಲಾಖೆ ಸಚಿವ ಕೆಎಚ್ ಮುನಿಯಪ್ಪ ಸಹ ಐದು ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಅವರೆ ಮುಂದುವರೆಯುತ್ತಾರೆ. ಸದ್ಯಕ್ಕೆ ಯಾವುದೇ ಬದಲಾವಣೆ ಇಲ್ಲ ಎಂದು ಮುನಿಯಪ್ಪ ತಿಳಿಸಿದ್ದಾರೆ. ಕೋಲಾರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ಪಕ್ಷ ಬಲಪಡಿಸಿ ಅಧಿಕಾರಕ್ಕೆ ತರುವಲ್ಲಿ ಅವರ ಶ್ರಮ ಸಾಕಷ್ಟಿದೆ. ಅಧ್ಯಕ್ಷರ ಆದಿಯಾಗಿ ಸಾಕಷ್ಟು ಜನರು ಸಿಎಂ ಆಗಲು ಅರ್ಹರಿದ್ದಾರೆ. ಆದರೆ ಬೆಳಗಾದರೆ ದಾರಿ ತಪ್ಪಿಸುವ ಕೆಲಸ ನಡೆಯುತ್ತಿದೆ. ಸಿಎಂ ಬದಲಾವಣೆಯ ಬಗ್ಗೆ ನಾವು ತೀರ್ಮಾನ ಮಾಡುವುದಿಲ್ಲ ಸಿಎಂ ಬದಲಾವಣೆ ವಿಚಾರ ಮಾತನಾಡುವುದು ಪ್ರಸ್ತುತ ಸಿಎಂ ಆಗಿ ಸಿದ್ದರಾಮಯ್ಯನವರೇ ಮುಂದುವರೆಯುತ್ತಾರೆ. 136 ಜನ ಶಾಸಕರಾಗಿ ಗೆದ್ದಿದ್ದೇವೆ ಅದಕ್ಕೆ ನಾಯಕತ್ವ ಬೇಕು ಎಂದು ತಿಳಿಸಿದರು. ಮುನಿಯಪ್ಪ ಸಿಎಂ ಆದರೆ ಸಂತೋಷ ಎಂದು ನಿನ್ನೆ ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದು ಅದಕ್ಕೆ ಪ್ರತಿಕ್ರಿಯಿಸಿದ ಅವರು…

Read More

ಬೆಂಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ನಲ್ಲಿ ನವೆಂಬರ್ ಕ್ರಾಂತಿ ಆಗಲಿದೆ ಎಂದು ಭಾರಿ ಚರ್ಚೆ ನಡೆಯುತ್ತಿದೆ. ಅಲ್ಲದೆ ಸಚಿವ ಸಂಪುಟ ಬದಲಾವಣೆ ಸಹ ಆಗಲಿದೆ ಎಂದು ಹೇಳಲಗುತ್ತಿದೆ. ಈ ವಿಚಾರವಾಗಿ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಪ್ರತಿಕ್ರಿಯೆ ನೀಡಿದ್ದು, ಸಚಿವ ಸಂಪುಟಕ್ಕೆ ಸೇರಿತ್ತೀರಾ ಎಂಬ ಪ್ರಶ್ನೆಗೆ ಮಂತ್ರಿ ಆಸೆ ಯಾರಿಗಿರಲ್ಲ ಹೇಳಿ ಅವಕಾಶ ಕೊಟ್ಟರು ಕೊಡಬಹುದು ಎಂದು ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನವೆಂಬರ್ ಕ್ರಾಂತಿ ಆದರೆ ಅದು ಬಿಜೆಪಿಯಲ್ಲೇ ಆಗಬಹುದು ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ವಿಪಕ್ಷ ನಾಯಕ ಆರ್.ಅಶೋಕಣ್ಣನ ಚೇರ್ ಗೆ ಸುನೀಲ ಅಣ್ಣ ಬರುತ್ತಾರೆ. ಅಶೋಕ್ ಅವರ ಕುರ್ಚಿ ಹೋಗುತ್ತೆ, ಇದೆ ಕ್ರಾಂತಿ ಅನ್ನಿಸುತ್ತೆ. ಪ್ರಯಶಹ ಬದಲಾವಣೆ ಇರಬಹುದೇನೋ? ಎಂದು ತಿಳಿಸಿದರು.

Read More

ಬೆಂಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ನಲ್ಲಿ ನವೆಂಬರ್ ಕ್ರಾಂತಿ ಆಗಲಿದೆ ಎಂದು ಭಾರಿ ಚರ್ಚೆ ನಡೆಯುತ್ತಿದೆ. ಈ ವಿಚಾರವಾಗಿ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಪ್ರತಿಕ್ರಿಯೆ ನೀಡಿದ್ದು, ನವೆಂಬರ್ ಕ್ರಾಂತಿ ಆದರೆ ಅದು ಬಿಜೆಪಿಯಲ್ಲೇ ಆಗಬಹುದು ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಪಕ್ಷ ನಾಯಕ ಆರ್.ಅಶೋಕಣ್ಣನ ಚೇರ್ ಗೆ ಸುನೀಲ ಅಣ್ಣ ಬರುತ್ತಾರೆ. ಅಶೋಕ್ ಅವರ ಕುರ್ಚಿ ಹೋಗುತ್ತೆ, ಇದೆ ಕ್ರಾಂತಿ ಅನ್ನಿಸುತ್ತೆ. ಪ್ರಯಶಹ ಬದಲಾವಣೆ ಇರಬಹುದೇನೋ? ಎಂದು ತಿಳಿಸಿದರು. ಸಚಿವ ಸಂಪುಟಕ್ಕೆ ಸೇರಿತ್ತೀರಾ ಎಂಬ ಪ್ರಶ್ನೆಗೆ ಮಂತ್ರಿ ಆಸೆ ಯಾರಿಗಿರಲ್ಲ ಹೇಳಿ ಅವಕಾಶ ಕೊಟ್ಟರು ಕೊಡಬಹುದು ಎಂದು ತಿಳಿಸಿದರು.

Read More

ಬೆಂಗಳೂರು : ಸಿಎಂ ಸ್ಥಾನದ ಬಗ್ಗೆ ಸಿದ್ದರಾಮಯ್ಯ ಹೇಳಿಕೆಯಲ್ಲಿ ವ್ಯತ್ಯಾಸ ವಿಚಾರಕ್ಕೆ ಸಂಬಂಧಪಟ್ಟಂತೆ ಅದು ನಿಮಗೆ ವ್ಯತ್ಯಾಸ ಕಾಣಬಹುದು ಆದರೆ ನಮಗಲ್ಲ ಸಿಎಂ ಸಾಫ್ಟ್ ಆಗಿದ್ದಾರೆ ಅಂತ ಯಾರು ರೇಟಿಂಗ್ ಮಾಡಿದ್ದು? ಸಾಫ್ಟ್ ಆಗಿದ್ದಾರೊ ಅಥವಾ ಹಾರ್ಡ್ ಆಗಿದ್ದಾರೊ ಅಂತ ಹೇಗೆ ಗೊತ್ತಾಗುತ್ತದೆ? ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, 2028 ರಲ್ಲೂ ಸ್ಪರ್ಧಿಸುವಂತೆ ಒತ್ತಾಯ ಇದೆ ಎಂಬ ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು ಮುಂದೆಯೂ ಸ್ಪರ್ಧೆ ಮಾಡೋದು ಅವರ ವೈಯಕ್ತಿಕ ತೀರ್ಮಾನ 2028ರಲ್ಲೂ ನೀವು ಸ್ಪರ್ಧಿಸಿ ಸ್ಪರ್ಧಿಸಬೇಡಿ ಅಂತ ಹೇಳೋಕಾಗಲ್ಲ ಅದು ಸಿಎಂ ಸಿದ್ದರಾಮಯ್ಯ ಅವರ ವೈಯಕ್ತಿಕ ವಿಚಾರ ಎಂದು ತಿಳಿಸಿದರು. ಕಾಂಗ್ರೆಸ್ ನಲ್ಲಿ ದಲಿತ ಮುಖ್ಯಮಂತ್ರಿ ಕೂಗು ವಿಚಾರಕ್ಕೆ ಸಂಬಂಧಪಟ್ಟಂತೆ ದಲಿತ ಸಿಎಂ ಬಗ್ಗೆ ಅವರವರ ಅಭಿಪ್ರಾಯ ಹೇಳುತ್ತಾರೆ. ಹೈಕಮಾಂಡ್ ತೀರ್ಮಾನ ಮಾಡಲಿದೆ ಈ ಬಗ್ಗೆ ಪದೇಪದೇ ಹೇಳಿಕೆ ಕೊಡುವುದು ಸರಿಯಲ್ಲ. ಇದು ಎಲ್ಲಿಗೆ ಹೋಗಿ ನಿಲ್ಲುತ್ತೆ ಗೊತ್ತಿಲ್ಲ.…

Read More

ಬೆಂಗಳೂರು : ಸಿಎಂ ಸ್ಥಾನದ ಬಗ್ಗೆ ಸಿದ್ದರಾಮಯ್ಯ ಹೇಳಿಕೆಯಲ್ಲಿ ವ್ಯತ್ಯಾಸ ವಿಚಾರಕ್ಕೆ ಸಂಬಂಧಪಟ್ಟಂತೆ ಅದು ನಿಮಗೆ ವ್ಯತ್ಯಾಸ ಕಾಣಬಹುದು ಆದರೆ ನಮಗಲ್ಲ ಸಿಎಂ ಸಾಫ್ಟ್ ಆಗಿದ್ದಾರೆ ಅಂತ ಯಾರು ರೇಟಿಂಗ್ ಮಾಡಿದ್ದು? ಸಾಫ್ಟ್ ಆಗಿದ್ದಾರೊ ಅಥವಾ ಹಾರ್ಡ್ ಆಗಿದ್ದಾರೊ ಅಂತ ಹೇಗೆ ಗೊತ್ತಾಗುತ್ತದೆ? ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, 2028 ರಲ್ಲೂ ಸ್ಪರ್ಧಿಸುವಂತೆ ಒತ್ತಾಯ ಇದೆ ಎಂಬ ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು ಮುಂದೆಯೂ ಸ್ಪರ್ಧೆ ಮಾಡೋದು ಅವರ ವೈಯಕ್ತಿಕ ತೀರ್ಮಾನ 2028ರಲ್ಲೂ ನೀವು ಸ್ಪರ್ಧಿಸಿ ಸ್ಪರ್ಧಿಸಬೇಡಿ ಅಂತ ಹೇಳೋಕಾಗಲ್ಲ ಅದು ಸಿಎಂ ಸಿದ್ದರಾಮಯ್ಯ ಅವರ ವೈಯಕ್ತಿಕ ವಿಚಾರ ಎಂದು ತಿಳಿಸಿದರು. ಕಾಂಗ್ರೆಸ್ ನಲ್ಲಿ ದಲಿತ ಮುಖ್ಯಮಂತ್ರಿ ಕೂಗು ವಿಚಾರಕ್ಕೆ ಸಂಬಂಧಪಟ್ಟಂತೆ ದಲಿತ ಸಿಎಂ ಬಗ್ಗೆ ಅವರವರ ಅಭಿಪ್ರಾಯ ಹೇಳುತ್ತಾರೆ. ಹೈಕಮಾಂಡ್ ತೀರ್ಮಾನ ಮಾಡಲಿದೆ ಈ ಬಗ್ಗೆ ಪದೇಪದೇ ಹೇಳಿಕೆ ಕೊಡುವುದು ಸರಿಯಲ್ಲ. ಇದು ಎಲ್ಲಿಗೆ ಹೋಗಿ ನಿಲ್ಲುತ್ತೆ ಗೊತ್ತಿಲ್ಲ.…

Read More

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ಡೆಲಿವರಿ ಬಾಯ್ ನಿಂದ ಮಾಡೆಲ್ ಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಆರ್ ಟಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಬ್ರೆಜಿಲ್ ಮೂಲದ ಮಾಡೆಲ್ ಗೆ ಡೆಲಿವರಿ ಬಾಯ್ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಬ್ಲಿಂಕಿಂಟ್ ಡೆಲಿವರಿ ಬಾಯ್ ಕುಮಾರರಾವ್ ಎಂಬಾತ ಲೈಂಗಿಕ ಕಿರುಕುಳ ನೀಡಿದ್ದು, ಫುಡ್ ಡೆಲಿವರಿ ಕೊಡಲು ಬಂದಿದ್ದಾಗ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಆರ್ ಟಿ ನಗರದಲ್ಲಿರುವ ಮಾಡೆಲ್ ಮನೆಯಲ್ಲಿಯೇ ಲೈಂಗಿಕ ಕಿರುಕುಳ ನೀಡಿದ್ದು, ಸೆಪ್ಟೆಂಬರ್ 17ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.. ಕುಮಾರ್ ರಾವ್ ಕಾಲೇಜು ವಿದ್ಯಾರ್ಥಿಯಾಗಿದ್ದು ಪಾರ್ಟ್ ಟೈಮ್ ಆಗಿ ಬ್ಲಿಂಕ್ ಇಟ್ ಡೆಲಿವರಿ ಮಾಡುತ್ತಿದ್ದ. ಸಂತ್ರಸ್ತೇ ಕೆಲಸ ಮಾಡುತ್ತಿದ್ದ ಕಂಪನಿ ಮ್ಯಾನೇಜರ್ ಕಾರ್ತಿಕ್ ದೂರು ನೀಡಿದ್ದಾರೆ. ಕುಮಾರ್ ರಾವ್ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು…

Read More

ಹಾಸನ : ಹಾಸನದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, ಕಳೆದ ಐದು ದಿನಗಳ ಹಿಂದೆ ಅಡುಗೆ ಅನಿಲ ಸೋರಿಕೆಯಿಂದಾಗಿ ಸುಟ್ಟಗಾಯವಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಂಪತಿ ಪೈಕಿ ಪತ್ನಿ ಸಾವನ್ನಪ್ಪಿದ್ದು, ಪತಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶೋಭಾ (42) ಮೃತಪಟ್ಟವರು ಎಂದು ತಿಳಿದುಬಂದಿದೆ. ನಗರದ ವೀರಾಂಜನೇಯ ಬಡಾವಣೆ ನಿವಾಸಿ, ಪಿರಿಯಾಪಟ್ಟಣ ತಾಲೂಕಿನ ಕಿತ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಸೀನಿಯರ್ ಹೆಲ್ತ್ ಇನ್ಸ್ಪೆಕ್ಟರ್ ಕುಮಾರ್‌ ಹಾಗು ಶೋಭಾ ಅ.23ರಂದು ಅಡುಗೆ ಮಾಡುತ್ತಿದ್ದ ವೇಳೆ ಗ್ಯಾಸ್ ಸೋರಿಕೆಯಾಗಿ ಮನೆಯಲ್ಲಿ ಪದಾರ್ಥಗಳಿಗೆ ಒಮ್ಮೆಲೆ ಬೆಂಕಿ ಹತ್ತಿಕೊಂಡು ಇಡೀ ಮನೆ ಆವರಿಸಿದ್ದು,ಪತಿ ಕುಮಾರ್ ರಕ್ಷಿಸಲು ಹೋಗಿ ಅವರು ಸಹ ತೀವ್ರಗಾಯಗೊಂಡಿದ್ದರು. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅ.27ರ ಸೋಮವಾರ ಚಿಕಿತ್ಸೆ ಫಲಕಾರಿಯಾಗದೆ ಶೋಭಾ ಸಾವನ್ನಪ್ಪಿದ್ದಾರೆ. ಪತಿ ಕುಮಾರ್ ಸಹ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಕಿಯ ತೀವ್ರತೆಗೆ ಮನೆಯ ಗೋಡೆಗಳು ಬಿರುಕು ಬಿಟ್ಟಿದೆ. ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ತುಮಕೂರು : ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿದಾರರಿಗೆ ಮಾಹಿತಿ ನೀಡದ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯ ಕುಣಿಗಲ್ ತಹಶೀಲ್ದಾರ್ ರಶ್ಮಿಗೆ 25,000 ದಂಡ ವಿಧಿಸಲಾಗಿದೆ.ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಅವರು ಈ ಆದೇಶ ಹೊರಡಿಸಿದ್ದು, ಮಾಹಿತಿ ಆಯೋಗದ ಆಯುಕ್ತ ರುದ್ರಣ್ಣ ಸೂಚನೆ ಮೇರೆಗೆ ಆದೇಶ ಹೊರಡಿಸಿದ್ದಾರೆ. ಕಡತ ಒಂದರ ಮಾಹಿತಿ ನೀಡುವಂತೆ ನರಸೇಗೌಡ ಎಂಬುವವರು ಅರ್ಜಿ ಸಲ್ಲಿಸಿದರು. ಕುಣಿಗಲ್ ತಾಲೂಕಿನ ಕುಂದೂರು ಗ್ರಾಮದ ನಿವಾಸಿ ನರಸೇಗೌಡ ಅರ್ಜಿ ಸಲ್ಲಿಸಿದ್ದರು. ಮಾಹಿತಿ ನೀಡಲು ವಿಳಂಬವಾಗಿದ್ದಕ್ಕೆ ಮಾಹಿತಿ ಆಯೋಗಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸಿದ ಮಾಹಿತಿ ಆಯೋಗ ತಹಶೀಲ್ದಾರ ರಶ್ಮಿಗೆ 25,000 ದಂಡ ಮತ್ತು ಶಿಸ್ತು ಕ್ರಮಕ್ಕೆ ಸೂಚನೆ ನೀಡಿದ್ದಾರೆ. ನವೆಂಬರ್ ವೇತನದಲ್ಲಿ 25,000 ದಂಡ ಹಿಡಿದಿಡುವಂತೆ ಆದೇಶಿಸಿದ್ದಾರೆ. ಅರ್ಜಿದಾರ ನರಸಿ ಗೌಡಗೆ 5000 ನೀಡುವಂತೆ ಆದೇಶ ಹೊರಡಿಸಿದ್ದಾರೆ.

Read More

ಬೆಂಗಳೂರು : ಮೊಂತಾ ಚಂಡಮಾರುತದ ಪರಿಣಾಮ ನೆಲೆಯಲ್ಲಿ ರೈಲುಗಳ ಸಂಚಾರದಲ್ಲಿ ವಿಳಂಬ ಆಗಿದೆ ಬೆಂಗಳೂರಿನಿಂದ ಹೊರಡಬೇಕಿದ್ದ ರೈಲುಗಳ ಸಂಚಾರದಲೂ ವಿಳಂಬವಾಗಿದ್ದು 12 ಗಂಟೆಗಳ ಕಾಲ ರೈಲುಗಳು ತಡವಾಗಿ ಸಂಚರಿಸಲಿವೆ. ಅಲ್ಲದೇ ಕಾಕಿನಾಡದಿಂದ ಬರಬೇಕಿದ್ದ ಎಕ್ಸ್ಪ್ರೆಸ್ ರೈಲು ರದ್ದಾಗಿದೆ ಕಾಕಿನಾಡ- ಎಸ್ಎಂವಿಟಿ ಬೆಂಗಳೂರು ಎಕ್ಸ್ಪ್ರೆಸ್ ರೈಲು ರದ್ದಾಗಿವೆ. ಬೆಂಗಳೂರು ನಾಗೇರ್ ಕಾಯಲ್ ರೈಲು ಸಂಚಾರ ಕೂಡ ಬಂದ್ ಆಗಿದ್ದು, ಕೆಲವು ರೈಲುಗಳ ವೇಳಾಪಟ್ಟಿಯನ್ನು ರೈಲ್ವೆ ಇಲಾಖೆ ಬದಲು ಮಾಡಿದೆ. 12 ಗಂಟೆಗಳ ಕಾಲ ತಡವಾಗಿ ಸಂಚರಿಸಲಿವೆ ಈ ಹಿನ್ನೆಲೆಯಲ್ಲಿ ಪ್ರಯಾಣಿಕರು ರೈಲ್ವೇ ನಿಲ್ದಾಣದಲ್ಲಿ ಮಾಹಿತಿ ಪಡೆದು ಸಂಚರಿಸಬೇಕು.

Read More

ಬಾಗಲಕೋಟೆ : ಬಾಗಲಕೋಟೆಯಲ್ಲಿ ಕಳೆದ ಕೆಲವು ದಿನಗಳ ಹಿಂದೆ ದೀಪಾವಳಿಯಂದೆ ಭೀಕರ ಅಗ್ನಿ ಅವಘಡ ಸಂಭವಿಸಿತ್ತು. ಒಂದು ಅಗ್ನಿ ದುರಂತದಲ್ಲಿ ಎಂಟು ಬೈಕ್ಗಳು ಹಾಗೂ ಮನೆಯ ಸಂಪೂರ್ಣವಾಗಿ ಸುಟ್ಟು ಕರಕಲಾಗಿತ್ತು. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸ್ನೇಹ ಮೇದಾರ ಸಾವನಪ್ಪಿದ್ದಾಳೆ. ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಸ್ನೇಹ ಚಿಕಿತ್ಸೆ ಪಡೆಯುತ್ತಿದ್ದಾಲಿ. ಆದರೆ l ಚಿಕಿತ್ಸೆ ಫಲಿಸದೆ ಸ್ನೇಹ ಸಾವನ್ನಪ್ಪಿದ್ದಾಳೆ. ಬಾಗಲಕೋಟೆ ತಾಲೂಕಿನ ಗದ್ದನಕೇರಿ ಕ್ರಾಸ್ ನಲ್ಲಿ ಘಟನೆ ನಡೆದಿತ್ತು ಹಬ್ಬಕ್ಕೆ ಹಚ್ಚಿದ ದೀಪಗಳಿಂದ ಬೆಂಕಿ ಹತ್ತಿಕೊಂಡಿತ್ತು 8 ಬೈಕ್ ಹಾಗೂ ಇಡೀ ಮನೆ ಸುಟ್ಟು ಕರಕಲಾಗಿತ್ತು. ಈ ಒಂದು ಘಟನೆಯಲ್ಲಿ ಸ್ನೇಹ ಗಂಭೀರವಾಗಿ ಗಾಯಗೊಂಡಿದ್ದಳು ಆದರೆ ಬೆಳಗಾವಿಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇದೀಗ ಸಾವನ್ನಪ್ಪಿದ್ದಾಳೆ.

Read More