Subscribe to Updates
Get the latest creative news from FooBar about art, design and business.
Author: kannadanewsnow05
ಚಿಕ್ಕಮಗಳೂರು : ಪೊಲೀಸ್ ಕ್ವಾರ್ಟರ್ಸ್ ನಲ್ಲಿ ದೈಹಿಕವಾಗಿ ಹಾಗೂ ಮಾನಸಿಕವಾಗಿ ಹಲ್ಲೆ ಮಾಡಿದ್ದು ಅಲ್ಲದೆ, ವರದಕ್ಷಿಣೆ ಕಿರುಕುಳ ನೀಡಿದ್ದ ಆರೋಪದ ಹಿನ್ನೆಲೆಯಲ್ಲಿ ಇತ್ತೀಚಿಗೆ ಚಿಕ್ಕಮಗಳೂರು ಜಿಲ್ಲೆಯ ಕಳಸ ಠಾಣೆಯಲ್ಲಿ ಪಿಎಸ್ಐ ನಿತ್ಯಾನಂದ ಪತ್ನಿ ದೂರು ನೀಡಿದ್ದರು. ಇದೀಗ ಈ ಒಂದು ದೂರಿನ ಅನ್ವಯದ ಮೇಲೆ PSI ನಿತ್ಯಾನಂದನನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಹೌದು ಚಿಕ್ಕಮಗಳೂರು ಜಿಲ್ಲೆಯ ಕಳಸ ಠಾಣೆಯ ಪಿಎಸ್ಐ ನಿತ್ಯಾನಂದ ಅಮಾನತು ಅಮಾನತುಗೊಳಿಸಿ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಆದೇಶ ಹೊರಡಿಸಿದ್ದಾರೆ. ಪಿಎಸ್ಐ ನಿತ್ಯಾನಂದನ ವಿರುದ್ಧ ರಾತ್ರೋರಾತ್ರಿ ಪತ್ನಿ ಠಾಣೆಗೆ ಬಂದು ದೂರು ನೀಡಿದ್ದರು.ಕಳಸ ಪೋಲಿಸ್ ವಸತಿಗೃಹದಲ್ಲಿ ನನ್ನ ಮೇಲೆ ನಿತ್ಯಾನಂದ ಹಲ್ಲೆ ಮಾಡಿದ್ದಾನೆ ಎಂದು ಪತ್ನಿ ಅಮಿತಾ ದೂರು ನೀಡಿದ್ದರು. ಮಾನಸಿಕ ಹಾಗು ದೈಹಿಕ ಹಿಂಸೆ ನೀಡಿದ್ದು ಅಲ್ಲದೆ, ವರದಕ್ಷಿಣೆ ಕಿರುಕುಳ ನೀಡಿದ್ದ. ಮಹಿಳೆಯರ ಜೊತೆಗೆ ಪತಿ ನಿತ್ಯಾನಂದ ಅನೈತಿಕ ಸಂಬಂಧ ಹೊಂದಿದ್ದ ಅಲ್ಲದೆ ವರದಕ್ಷಣೆ ಕಿರುಕುಳ ನೀಡುತ್ತಿದ್ದಾನೆ ಎಂದು ಪತ್ನಿ ಅಮಿತಾ ಕಳಸ ಠಾಣೆಗೆ…
ಬೆಳಗಾವಿ : ಸಿಎಂ ಸಿದ್ದರಾಮಯ್ಯ ಕುರಿತು ನಾಜಿಯಾ ಖಾನ್ ಇದೀಗ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಮಹಿಳೆಯರ ಜೊತೆ ಸಿಎಂ ಸಿದ್ದರಾಮಯ್ಯ ಅಸಭ್ಯವಾಗಿ ವರ್ತಿಸುತ್ತಾರೆ ಎಂದು ಬೆಳಗಾವಿ ತಾಲೂಕಿನ ಸುಳೇಬಾವಿ ಗ್ರಾಮದಲ್ಲಿ ಈ ಒಂದು ಹೇಳಿಕೆ ನೀಡಿದ್ದಾರೆ. ಸಿಎಂ ಕಾಂಗ್ರೆಸ್ ಪಕ್ಷದ ಮಹಿಳಾ ಕಾರ್ಯಕರ್ತರಿಗೆ ಮುತ್ತು ನೀಡುತ್ತಾರೆ. ಸಿದ್ದರಾಮಯ್ಯ ನಡೆಯ ಬಗ್ಗೆ ನಾನು ವಿರೋಧಿಸಿದ್ದೇನೆ. ಪಕ್ಷದ ಮಹಿಳಾ ವಕ್ತಾರೆಯರಿಗೆ ಸಿದ್ದರಾಮಯ್ಯನವರು ಮತ್ತು ನೀಡುತ್ತಾರೆ.ಚಲನಚಿತ್ರ ನಟಿಯರನ್ನು ಕೂಡ ಬಿಡದೆ ಸಿಎಂ ಸಿದ್ದರಾಮಯ್ಯ ಅಪ್ಪಿಕೊಳ್ಳುತ್ತಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮುಂದುವರೆದು ಮಹಿಳಾ ಪತ್ರಕರ್ತೆಯರ ಜೊತೆಗೂ ಸಿಎಂ ಅಸಭ್ಯವಾಗಿ ವರ್ತಿಸಲು ಯತ್ನಿಸಿದ್ದಾರೆ. ನನ್ನ ಬಳಿ ನೊಂದ ಮಹಿಳಾ ಪತ್ರಕರ್ತೆಯರಲ್ಲಿ ಲಿಸ್ಟ್ ಕೂಡ ಇದೆ ಎಂದು ಬೆಳಗಾವಿ ತಾಲೂಕಿನ ಸುಳೇಬಾವಿ ಗ್ರಾಮದಲ್ಲಿ ಸಿಎಂ ಸಿದ್ದರಾಮಯ್ಯ ಕುರಿತು ನಾಜಿಯಾ ಖಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಬೆಳಗಾವಿ : ತನ್ನ ಪತಿ ಪರಸ್ತ್ರೀ ಜೊತೆಗೆ ಓಡಿ ಹೋಗಿದ್ದಾನೆ. ಹಾಗಾಗಿ ಆತನನ್ನು ಹುಡುಕಿ ಕೊಡುವಂತೆ ಗ್ರಾಮ ಪಂಚಾಯಿತಿ ಸದಸ್ಯೆಯೊಬ್ಬರು ಪೊಲೀಸ್ ಠಾಣೆಯ ಮುಂದೆ ಧರಣಿ ನಡೆಸುತ್ತಿರುವ ಘಟನೆ ಬೆಳಗಾವಿ ತಾಲೂಕಿನ ಮಾರಿಹಾಳ ಎಂಬ ಗ್ರಾಮದಲ್ಲಿ ನಡೆದಿದೆ. ಹೌದು ಪರಸ್ತ್ರಿ ಜೊತೆಗೆ ಪತಿ ಪರಾರಿಯಾಗಿದ್ದಾನೆ. ಕೂಡಲೇ ನನ್ನ ಪತಿಯನ್ನು ಹುಡುಕಿ ಕೊಡಿ ಎಂದು ಠಾಣೆಯ ಮುಂದೆ ಗ್ರಾ.ಪಂ ಸದಸ್ಯೆ ವಾಣಿಶ್ರೀ ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಳಗಾವಿ ತಾಲೂಕಿನ ಮಾರಿಹಾಳ ಠಾಣೆ ಎದರು ವಾಣಿಶ್ರೀ ಧರಣಿ ನಡೆಸುತ್ತಿದ್ದಾರೆ. 25 ದಿನಗಳ ಹಿಂದೆ ಪತಿ ಪರಸ್ತ್ರೀ ಜೊತೆಗೆ ಒಡಿ ಹೋಗಿದ್ದಾನೆ, ಮಾಸಾಬಿ ಎಂಬ ವಿವಾಹಿತ ಜೊತೆಗೆ ಬಸವರಾಜ್ ಓಡಿ ಹೋಗಿದ್ದಾನೆ ಎಂದು ಆರೋಪಿಸುತ್ತಿದ್ದು ಮಾರಿಹಾಳ ಠಾಣೆಗೆ ದೂರು ನೀಡಲು ಬಂದರೂ ಸಹ ಪೊಲೀಸರು ಸ್ಪಂದಿಸುತ್ತಿಲ್ಲ ಪೊಲೀಸರು ಸುಳ್ಳು ಹೇಳುತ್ತಿದ್ದಾರೆ ಎಂದು ವಾಣಿಶ್ರೀ ಆರೋಪಿಸಿದ್ದಾರೆ. ನನ್ನ ಮಕ್ಕಳು ಕೂಡ ಕರೆದುಕೊಂಡು ಹೋಗಿದ್ದಾನೆ. ಆಕೆ ನನ್ನ ಮಕ್ಕಳನ್ನು ನೋಡಿಕೊಳ್ಳುತ್ತೇನೆ ಎಂದು ಕರೆ ಮಾಡಿ ಹೇಳುತ್ತಾಳೆ. ಹಾಗಾಗಿ ಅವಳು ಆಕೆ…
ಉತ್ತರಕನ್ನಡ : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಮೂರು ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿದ್ದ ಘಟನೆ ನಡೆದಿತ್ತು. ಈ ಒಂದು ಘಟನೆ ಮಾಸುವ ಮುನ್ನವೇ ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಅಮಾನವೀಯ ಘಟನೆ ನಡೆದಿದ್ದು, ಗರ್ಭ ಧರಿಸಿದ್ದ ಹಸುವಿನ ರುಂಡವನ್ನೇ ಕತ್ತರಿಸಿರುವ ದುರುಳರು ದೇಹವನ್ನು ಕೊಂಡೊಯ್ದಿರುವ ಘಟನೆ ನಡೆದಿದೆ. ಹೌದು ಇಂತಹ ಒಂದು ಕೃತ್ಯ ಎಸಗಿ ದುಷ್ಕರ್ಮಿಗಳು ವಿಕೃತಿ ಮೆರೆದಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸಾಲ್ಕೋಡು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೃಷ್ಣ ಆಚಾರಿ ಎಂಬುವವರಿಗೆ ಸೇರಿದ ಹಸುವನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ನಿನ್ನೆ ಮೇವಿಗಾಗಿ ಬಿಟ್ಟಿದ್ದ ಹಸು ರಾತ್ರಿಯಾದರೂ ಬಂದಿರಲಿಲ್ಲ. ಬೆಳಿಗ್ಗೆ ಹಸುವಿಗಾಗಿ ಮಾಲೀಕ ಕೃಷ್ಣ ಆಚಾರ್ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಹಸುವಿನ ರಕ್ತ, ಕಾಲು, ರುಂಡ ಪತ್ತೆಯಾಗಿದೆ. ದುಷ್ಕರ್ಮಿಗಳು ಕೇವಲ ಹಸುವಿನ ರುಂಡವನ್ನು ಮಾತ್ರ ಅಲ್ಲಿ ಬಿಟ್ಟು ದೇಹವನ್ನು ಸೇವನಿಗೆ ಎಂದು ತೆಗೆದುಕೊಂಡು ಹೋಗಿದ್ದಾರೆ ಎಂದು ಹಸುವಿನ ಮಾಲೀಕರಾದಂತಹ ಕೃಷ್ಣ ಆಚಾರಿ ಅನುಮಾನ…
ಬೆಂಗಳೂರು : ನಮ್ಮ ಮೆಟ್ರೋದಲ್ಲಿ ಆಗಾಗ ಅಹಿತಕರ ಘಟನೆಗಳು ಹಾಗೂ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿರುತ್ತವೆ. ಇದೀಗ ನಮ್ಮ ಮೆಟ್ರೋ ಟ್ರ್ಯಾಕ್ ಕೆಳಬಾಗದಲ್ಲಿರುವಂತಹ ಲಕ್ಷಾಂತರ ಮೌಲ್ಯದ ಕಾಪರ್ ವಿದ್ಯುತ್ ಕೇಬಲ್ ಅನ್ನು ಕಿಡಿಗೇಡಿಗಳು ಕಳ್ಳತನ ಮಾಡಿದ್ದಾರೆ. ಆದರೆ ಮೆಟ್ರೋ ಸಿಬ್ಬಂದಿಗಳೇ ಈ ಒಂದು ಕೃತ್ಯ ಎಸಗಿದ್ದಾರೆ ಎನ್ನುವ ಶಂಕೆ ಇದೀಗ ವ್ಯಕ್ತವಾಗುತ್ತಿದೆ. ಹೌದು ನಮ್ಮ ಮೆಟ್ರೋ ರೈಲು ಟ್ರ್ಯಾಕ್ ಕೆಳಭಾಗದ ವಿದ್ಯುತ್ ಕೇಬಲ್ ಕಳುವು ಪಿಲ್ಲರ್ 12, 13 ಮತ್ತು 14ರ ಬಳಿ ಅಳವಡಿಸಿದ್ದ ಪವರ್ ಕೇಬಲ್ ಅನ್ನು ಕಳ್ಳತನ ಮಾಡಲಾಗಿದೆ. ಪೀಣ್ಯ, ರಾಜಾಜಿನಗರ ಹಾಗೂ ಬಸವನಗುಡಿಯ ಮೆಟ್ರೋ ಮಾರ್ಗದಲ್ಲಿ ಕೇಬಲ್ ಕಳ್ಳತನ ಮಾಡಲಾಗಿದೆ. ಉದ್ದದ ವಿದ್ಯುತ್ ಕೇಬಲ್ ಗಳನ್ನು ತುಂಡು ತುಂಡಾಗಿ ಮಾಡಿ ಕಳುವು ಮಾಡಲಾಗಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಕಾಪರ್ ವಿದ್ಯುತ್ ಕೇಬಲ್ ಇದೀಗ ಕಳ್ಳತನ ಮಾಡಲಾಗಿದೆ ಎಂದು ತಿಳಿದುಬಂದಿದೆ.ಪವರ್ ಕೇಬಲ್ ಕಳವು ಹಿಂದೆ ಮೆಟ್ರೋ ಸಿಬ್ಬಂದಿಗಳ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ.ಈ ಬಗ್ಗೆ ಮೆಟ್ರೋ ಸಹಾಯಕ ಭದ್ರತಾ ಅಧಿಕಾರಿ…
ರಾಯಚೂರು : ಇಟ್ಟ ಗುರಿ, ಮುಂದಿಟ್ಟ ಹೆಜ್ಜೆ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ನಾನು ರೈತನಾಯಕ ಬಿಎಸ್ ಯಡಿಯೂರಪ್ಪ ಅBIG NEWS : ಇಟ್ಟ ಗುರಿ, ಮುಂದಿಟ್ಟ ಹೆಜ್ಜೆ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ : ಬಿವೈ ವಿಜಯೇಂದ್ರ ಹೇಳಿಕೆವರ ಮಗನಾಗಿ ಹೇಳುತ್ತಿದ್ದೇನೆ ಎಂದು ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿಕೆ ನೀಡಿದರು. ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಮಾತನಾಡಿದ ಬಿ ವೈ ವಿಜೇಂದ್ರ ಅವರು, ವಿರೋಧಿ ಬಣಕ್ಕೆ ತಿರುಗೇಟು ನೀಡಿದ್ದಾರೆ. ಶಿಕಾರಿಪುರಕ್ಕೆ ಸೀಮಿತವಾಗದೆ ಪಕ್ಷವನ್ನು ಸಂಘಟನೆ ಮಾಡುತ್ತಿದ್ದೇನೆ ರಾಜ್ಯಾದ್ಯಂತ ಓಡಾಡಿ ಪಕ್ಷ ಸಂಘಟನೆ ಮಾಡುತ್ತಿದ್ದೇನೆ. ಗುರು ಹಿರಿಯರ ಆಶೀರ್ವಾದದಿಂದ ನಾನು ಮುನ್ನಡೆಯುತ್ತಿದ್ದೇನೆ. ಭಗವಂತನ ಕೃಪೆ ಹರ ಗುರು ಚರಮೂರ್ತಿಗಳ ಆಶೀರ್ವಾದ ಇದೆ. ಮುಂದಿನ ದಿನಗಳಲ್ಲಿ ಭಗವಂತ ಶಕ್ತಿ ಕೊಟ್ಟಾಗ ಕೆಲಸ ಮಾಡುತ್ತೇನೆ ಎಂದರು. ನೀರಾವರಿ ಯೋಜನೆಗಳು ಯುವಕರಿಗೆ ಉದ್ಯೋಗ ಕಲ್ಪಿಸುತ್ತೇನೆ. ಈಗಲೂ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿಗೆ ಹಾಹಾಕಾರವಿದೆ. ಭಗವಂತ ಶಕ್ತಿ ಕೊಟ್ಟರೆ ಸರ್ವಾಂಗೀನ…
ಮಂಡ್ಯ : ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ನರೇಗಾ ಎಂಜಿನಿಯರ್ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಬಸಾಪುರ ಗೇಟ್ ಬಳಿ ನಡೆದಿದೆ.ಮೃತಳನ್ನು ಮೂಲತಃ ಹಲಗೂರು ಸಮೀಪದ ಬಳೆಹೊನ್ನಿಗ ಗ್ರಾಮದ ನರೇಗಾ ಎಂಜಿನಿಯರ್ ಆಗಿದ್ದ ಶರಣ್ಯ ಗೌಡ (25) ಎಂದು ಗುರುತಿಸಲಾಗಿದೆ. ಮೂಲತಃ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಳೆಹೊನ್ನಿಗನ ಗ್ರಾಮದವಳಾದ ಶರಣ್ಯಾ ಗೌಡ, ಕಳೆದ ಒಂದು ವರ್ಷದಿಂದ ಕನಕಪುರ ವಿಭಾಗದಲ್ಲಿ ನರೇಗಾ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಳು.ಕನಕಪುರ ತಾಲೂಕಿನ ಸಾತನೂರು ಪಂಚಾಯಿತಿಯಲ್ಲಿ ನರೇಗಾ ಇಂಜಿನಿಯರ್ ಆಗಿ ಕರ್ತವ್ಯ ಮಾಡುತ್ತಿದ್ದ ಶರಣ್ಯಾ ಗೌಡ, ನಿನ್ನೆ ತನ್ನ ಕೆಲಸವನ್ನು ಮುಗಿಸಿ ವಾಪಸ್ ಹಲಗೂರಿನ ಬಳಿಯ ಸ್ವಗ್ರಾಮಕ್ಕೆ ಹೋುವಾಗ ಎರಡು ಬೈಕ್ಗಳ ನಡುವ ಮುಖಾಮುಖಿ ಡಿಕ್ಕಿಯಾಗಿವೆ. ಈ ವೇಳೆ ಬೈಕ್ನಿಂದ ಬಿದ್ದ ಶರಣ್ಯಾ ತಲೆಗೆ ಗಂಭೀರ ಗಾಯವಾಗಿದೆ. ಇದರಿಂದ ತಲೆ ಬಿದ್ದು ಗಂಭೀರ ಪೆಟ್ಟಿನಿಂದಾಗ ತೀವ್ರ ರಕ್ತಸ್ತಾವ ಉಂಟಾಗಿದೆ. ಅವರನ್ನು ಆಸ್ಪತ್ರೆಗೆ ಸೇರಿಸಲು ಯಾವುದೇ ವಾಹನಗಳು ಸರಿಯಾದ ಸಮಯಕ್ಕೆ ಲಭ್ಯವಾಗಲಿಲ್ಲ.…
ಹುಬ್ಬಳ್ಳಿ : ಸಾಲ ಕಟ್ಟುವ ಕಿರುಕುಳದಿಂದ ಬೇಸತ್ತ ವ್ಯಕ್ತಿಯೊಬ್ಬ ಚಲಿಸುತ್ತಿದ್ದ ಲಾರಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದರುವ ಘಟನೆ ಹುಬ್ಬಳ್ಳಿಯ ತಾರಿಹಾಳ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಹುಬ್ಬಳ್ಳಿಯ ಉಣಕಲ್ ನಿವಾಸಿ ಎಂದು ಸಿದ್ದು ಕೆಂಚಣ್ಣನವರ ಎಂದು ತಿಳಿದುಬಂದಿದೆ. ಸಿದ್ದು ಮಹೇಶ್ ಚಿಕ್ಕವೀರ ಮಠ ಬಳಿ 10 ಲಕ್ಷ ಸಾಲ ಪಡೆದಿದ್ದ. ಆದರೆ 10 ಲಕ್ಷ ಪಡೆದ ಸಾಲಕ್ಕೆ 65 ಲಕ್ಷ ಬಡ್ಡಿ ಕಟ್ಟಿದ್ದರು ಕೂಡ ಮಹೇಶ್ ಸಿದ್ದುಗೆ ಕಿರುಕುಳ ನೀಡುತ್ತಿದ್ದ. ಇನ್ನು ಹೆಚ್ಚು ಬಡ್ಡಿ ನೀಡುವಂತೆ ಮಹೇಶ್ ಚಿಕ್ಕವೀರಮಠ ಸಿದ್ದುಗೆ ಪೀಡಿಸುತ್ತಿದ್ದ ಇದರಿಂದ ಮನದೊಂದು ಸಿದ್ದು ಡೆತ್ ನೋಟ್ ಬರೆದು ವಾಟ್ಸಪ್ ಸ್ಟೇಟಸ್ ಹಾಕಿ ಆತ್ಮಹತ್ಯೆ ಮಾಡಿ ಕೊಂದಿದ್ದಾನೆ. ತಾರಿಹಾಳ ಬಳಿ ಲಾರಿಗೆ ತಲೆ ಕೊಟ್ಟು ಸಿದ್ದು ಕೆಂಚಣ್ಣನವರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಿಮ್ಸ್ ಆಸ್ಪತ್ರೆ ಶವಗಾರದಲ್ಲಿ ಸಿದ್ದು ಕೆಂಚಣ್ಣನವರ ಮೃತ ದೇಹ ಇದ್ದು ಶವಾಗಾರದ ಮುಂದೆ ಸಿದ್ದುವಿನ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ಬಡ್ಡಿ ದಂಧೆಕೊರನನ್ನು ಪೊಲೀಸರು ವಶಕ್ಕೆ…
ವಿಜಯಪುರ : ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರ ಮಧ್ಯ ವಾಕ್ಸಮರ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ಇದೀಗ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಹೇಳಿಕೆ ನೀಡಿದ್ದು, ಮನೆಯಲ್ಲಿ ಬಿಎಸ್ ಯಡಿಯೂರಪ್ಪ ಅವರಿಗೆ ಮುದಿಯ ಅಂತ ಕರೀತಾರೆ ಹೊರಗಡೆ ಮಾತ್ರ ಪೂಜೆ ತಂದೆಯವರು ಎಂದು ನಾಟಕ ಮಾಡುತ್ತಾರೆ ಎಂದು ತಿಳಿಸಿದರು. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನಿಗೆ ಮನೇಲಿ ವಿಜಯೇಂದ್ರ ಮುದಿಯಾ ಅಂತಾನೆ. ಯಡಿಯೂರಪ್ಪಗೆ ಮನೆಯಲ್ಲಿ ಕಿಮ್ಮತ್ತಿಲ್ಲ, ವಿಜಯೇಂದ್ರ ಹೊರಗಡೆ ಪೂಜ್ಯ ತಂದೆ, ಮನೆಯಲ್ಲಿ ಮುದಿಯಾ ಎಂದು ಕರೆಯುತ್ತಾನೆ ಎಂದರು. ವಿಜಯೇಂದ್ರ ಮಾಡಿದ ತಪ್ಪಿನಿಂದಲೇ ಯಡಿಯೂರಪ್ಪ ಜೈಲಿಗೆ ಹೋದದ್ದು, ಅವನಿಂದಲೇ ಹಾಳಾಗಿದ್ದು, ಮೊದಲು ಮಗನ ವ್ಯಾಮೋಹ ಬಿಡಲಿ. ಯಡಿಯೂರಪ್ಪಗೆ ಮನೆಯಲ್ಲಿ ಕಿಮ್ಮತ್ತಿಲ್ಲ. ಹೊರಗಡೆ ಪೂಜ್ಯ ತಂದೆ, ಮನೆಯಲ್ಲಿ ಮುದಿಯಾ ಎಂದು ಕರೆಯುತ್ತಾನೆ.ನಮ್ಮ ವಿರುದ್ಧ ಎರಡು ಹಂದಿಗಳು ಬಿಟ್ಟರೆ ಬೇರೆ ಯಾರೂ ಮಾತನಾಡಲ್ಲ. ಆ ಹಂದಿಗಳಿಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ.…
ಬೆಳಗಾವಿ : ಜನವರಿ 21ರಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಸಮಾವೇಶ ನಡೆಯುತ್ತಿದ್ದು, ಈ ಒಂದು ಸಮಾವೇಶದ ಸಿದ್ಧತೆಯನ್ನು ಈಗಾಗಲೇ ಡಿಸಿಎಂ ಡಿಕೆ ಶಿವಕುಮಾರ್ ಅವರು ಪರಿಶೀಲನೆ ನಡೆಸಿದ್ದು ಕಳೆದ ಎರಡು ದಿನಗಳಿಂದ ಬೆಳಗಾವಿಯಲ್ಲಿಯೇ ಠಿಕಾಣಿ ಹೂಡಿದ್ದಾರೆ. ಇದೀಗ ಡಿಕೆ ಶಿವಕುಮಾರ್ ಟೆಂಪಲ್ ರನ್ ಮಾಡಿದ್ದು ಸಮಾವೇಶ ಯಾವುದೇ ತೊಂದರೆ ಇಲ್ಲದೆ ಅತ್ಯಂತ ಸರಳವಾಗಿ ನಡೆಯಲಿ ಎಂದು ದೇವರ ಮೂರೆ ಹೋಗಿದ್ದಾರೆ. ಹೌದು ಡಿಸಿಎಂ ಡಿಕೆ ಶಿವಕುಮಾರ್ ಬೆಳಗಾವಿಯಲ್ಲಿರುವ ಕಪಿಲೇಶ್ವರ ದೇವಸ್ಥಾನಕ್ಕೆ ಇಂದು ಭೇಟಿ ನೀಡಿದ್ದರು. ಈ ವೇಳೆ ತಮ್ಮ ಅಂಗಿ ಬಿಚ್ಚಿ ಸಮಾವೇಶ ಸರಳವಾಗಿ ಯಾವುದೇ ಸಮಸ್ಯೆ ಆಗದೆ, ನಡೆಯಲಿ ಮತ್ತು ಯಶಸ್ವಿಯಾಗಲಿ ಎಂದು ದೇವರಿಗೆ ವಿಶೇಷ ಪೂಜೆ ಹಾಗೂ ಅಭಿಷೇಕ ಮಾಡಿದರು. ಪೂಜೆ ಮುಗಿದ ಬಳಿಕ ಕಪಲೇಶ್ವರ ದೇವಸ್ಥಾನದ ಅರ್ಚಕ ಮಂಜುನಾಥ್ ಅವರು ಮುಂದಿನ ಬಾರಿ ಡಿಕೆ ಶಿವಕುಮಾರ್ ಅವರು ಸಿಎಂ ಆಗಲಿ ಎಂದು ಅವರಿಗೆ ತ್ರಿಶೂಲ ನೀಡಿ ಆಶೀರ್ವದಿಸಿದರು. ಇವಳೇ ಡಿಸೆಂಬ್ ಡಿಕೆ ಶಿವಕುಮಾರ್ ಅರ್ಚಕರಿಂದ ಸನ್ಮಾನ ಸ್ವೀಕರಿಸಿ ಆಶೀರ್ವಾದ…