Author: kannadanewsnow05

ದಕ್ಷಿಣಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನಲ್ಲಿ ಕೋಟೆ ಕಾರು ಸಹಕಾರಿ ಬ್ಯಾಂಕ್ ನಲ್ಲಿ ನಿನ್ನೆ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಫಿಯೆಟ್ ಕಾರಿನಲ್ಲಿ ದರೋಡೆಕೋರರು ಉಡುಪಿಯ ಟೋಲ್ ಗೇಟ್ ಬಳಿ ಟೋಲ್ ಶುಲ್ಕ ಕಟ್ಟುತ್ತಿದ್ದಾಗ ಓರ್ವ ದರೋಡೆಕೋರನ ಫೋಟೋ ಒಂದು ಇದೀಗ ವೈರಲಾಗಿದೆ. ಹೌದು ನಿನ್ನೆ ಕೋಟೆ ಕಾರು ಸಹಕಾರಿ ಬ್ಯಾಂಕಿಗೆ ನುಗ್ಗಿದ ದರೋಡೆಕೋರರು, ಬ್ಯಾಂಕ್ ಸಿಬ್ಬಂದಿಗಳಿಗೆ ಬಂದೂಕು ತೋರಿಸಿ ಬೆದರಿಕೆಯೊಡ್ಡಿ ಹಣ, ಚಿನ್ನಾಭರಣ ಸೇರಿ ಒಟ್ಟು 12 ಕೋಟಿ ರೂಪಾಯಿ ದೋಚಿದ್ದಾರೆ. ಬಳಿಕ ಅಲ್ಲಿಂದ ಅವರು ನೇರವಾಗಿ ಕೇರಳಕ್ಕೆ ತೆರಳಿ ಅಲ್ಲಿಂದ ಅಜ್ಞಾತ ಸ್ಥಳದಿಂದ ತಮಿಳುನಾಡಿನ ಕಡೆ ಬೋಟ್ನಲ್ಲಿ ಹೋಗುತ್ತಿರುವ ಶಂಕೆ ವ್ಯಕ್ತವಾಗಿದೆ. ಕೇರಳದಲ್ಲಿ ಸುತ್ತಾಡಿ ಪೊಲೀಸರ ತಂಡ ಇದೀಗ ದರೋಡೆಕೋರ ಮಾಹಿತಿ ಕಲೆ ಹಾಕುತ್ತಿದೆ. ದರೋಡೆ ಬಳಿಕ ದುಷ್ಕರ್ಮಿಗಳು ಉಡುಪಿಯ ಮಾರ್ಗವಾಗಿ ಕೇರಳಕ್ಕೆ ತೆರಳಿರುವ ಶಂಕೆ ವ್ಯಕ್ತವಾಗುತ್ತಿದೆ. ಈ ವೇಳೆ ಉಡುಪಿಯ ಬಳಿ ಟೋಲ್ ಗೇಟ್ ಬಳಿ ಕಾರು ಚಾಲನೆ ಮಾಡುತ್ತಿದ್ದ ದರೋಡೆಕೋರನೊಬ್ಬ ಮಾಸ್ಕನ್ನು…

Read More

ಚಿಕ್ಕಬಳ್ಳಾಪುರ : MBA ವಿದ್ಯಾರ್ಥಿ ಒಬ್ಬನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ವಿಟಿಯು ಕ್ಯಾಂಪಸ್ ನಲ್ಲಿ ಈ ಒಂದು ಘಟನೆ ನಡೆದಿದೆ.ಮೃತ ವಿದ್ಯಾರ್ಥಿಯನ್ನು ವಿ.ಬಾಬು ಎಂದು ತಿಳಿದುಬಂದಿದೆ. ಚಿಕ್ಕಬಳ್ಳಾಪುರ ತಾಲೂಕಿನ ವಿಟಿಯು ಕ್ಯಾಂಪಸ್ ನ ಹಾಸ್ಟೆಲ್ ರೂಮ್ನಲ್ಲಿ ಶವವಾಗಿ ಪತ್ತೆಯಾಗಿರುವ ಎಂಬಿಎ ವಿದ್ಯಾರ್ಥಿ ವಿ.ಬಾಬು, ಮೂಲತಃ ಕೋಲಾರ ಜಿಲ್ಲೆಯ ಶ್ರೀನಿವಾಸಪುರದವನೆಂದು ತಿಳಿದುಬಂದಿದೆ. ವಿದ್ಯಾರ್ಥಿ ವಿ ಬಾಬು ಈ ಒಂದು ಸಾವಿನ ಸುತ್ತ ಅನುಮಾನ ವ್ಯಕ್ತವಾಗಿದ್ದು, ಸ್ಥಳಕ್ಕೆ ನಂದಿ ಗಿರಿಧಾಮ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ವಿಜಯಪುರ : ಮೈಸೂರಿನ ಲಿಂಗಾಂಬುದ್ಧಿ ಸಾರ್ವಜನಿಕ ಉದ್ಯಾನವನದ ಬಳಿ ಚಿರತೆ ಪ್ರತ್ಯಕ್ಷವಾಗಿತ್ತು ಇದರ ಬೆನ್ನಲ್ಲೇ ಇದೀಗ ವಿಜಯಪುರದಲ್ಲೂ ಕೂಡ ಚಿರತೆ ಒಂದು ಪ್ರತ್ಯಕ್ಷ ಆಗಿದೆ ಎಂದು ಮಹಿಳೆಯೊಬ್ಬರು ನೋಡಿದ್ದಾಗಿ ಹೇಳಿಕೆ ನೀಡಿದ್ದಾರೆ. ಹೌದು ಚಿರತೆ ಓಡಾಡುತ್ತಿರುವುದನ್ನು ನೋಡಿರುವುದಾಗಿ ಮಹಿಳೆಯೊಬ್ಬರು ಹೇಳಿದ್ದಾರೆ. ಚಿರತೆ ನೋಡಿ ಮನೆ ಬಾಗಿಲು ಹಾಕಿಕೊಂಡಿದ್ದೇ. ಆದರೆ ಕೆಲ ಕ್ಷಣಗಳ ಬಳಿಕ ಬಾಗಿಲು ತೆರೆದು ನೋಡಿದಾಗ ಚಿರತೆ ಇರಲಿಲ್ಲ ಎಂದು ಮಹಿಳೆ ತಿಳಿಸಿದ್ದಾರೆ. ಮಹಿಳೆ ನೀಡಿದ ಮಾಹಿತಿಯ ಅನ್ವಯ ಸ್ಥಳಕ್ಕೆ ಅರಣ್ಯ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ. ಸಾಮಾನ್ಯವಾಗಿ ಹಗಲಿನ ವೇಳೆ ಚಿರತೆ ಓಡಾಡುವುದಿಲ್ಲ. ಸ್ಥಳೀಯರ ಮಾಹಿತಿ ಮೇರೆಗೆ ಚಿರತೆಗಾಗಿ ಇದೀಗ ಅರಣ್ಯ ಸಿಬ್ಬಂದಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ. ಸಾರ್ವಜನಿಕರು ಭಯ ಪಡದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮನವಿ ಮಾಡಿದ್ದಾರೆ.

Read More

ಹಾವೇರಿ : ಕರ್ನಾಟಕದ ಇತಿಹಾಸದಲ್ಲಿ ಶರಣರು, ಸಂತರು ಯಾವುದೇ ಜಾತಿ ಬೇಧವಿಲ್ಲದೆ ಸಮಾಜದಲ್ಲಿನ ಅಸ್ಪೃಶ್ಯತೆ ಯನ್ನು ತೊಡೆದು ಹಾಕುವಲ್ಲಿ ಅನೇಕರು ಹೋರಾಟ ಮಾಡಿದ್ದಾರೆ. ಬಸವಣ್ಣ, ಕನಕದಾಸರು ಸರ್ವಜ್ಞನ ನಾಡಿನಲ್ಲಿ ಅಸ್ಪರ್ಶತೆ ಇನ್ನೂ ಜೀವಂತವಾಗಿದೆ. 21ನೇ ಶತಮಾನದಲ್ಲಿ ಕೂಡ ಸರಕಾರಿ ಶಾಲೆಯಲ್ಲಿ ಅಸ್ಪರ್ಶತೆ ಆಚರಣೆ ಬೆಳಕಿಗೆ ಬಂದಿದೆ. ಹೌದು ಹಾವೇರಿ ತಾಲೂಕಿನ ದೇವಿ ಹೊಸೂರಿನ ಪ್ರಾಥಮಿಕ ಶಾಲೆಯಲ್ಲಿ ಈ ಒಂದು ಅಸ್ಪೃಶ್ಯತೆ ಆಚರಣೆ ಘಟನೆ ಬೆಳಕಿಗೆ ಬಂದಿದೆ. ಹಾವೇರಿ ತಾಲೂಕಿನ ದೇವಿ ಹೊಸೂರಿನ ಪ್ರಾಥಮಿಕ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ. ಪರಿಶಿಷ್ಟ ಜಾತಿ ವಿದ್ಯಾರ್ಥಿಯನ್ನು ಶಿಕ್ಷಕ ಪ್ರತ್ಯೇಕವಾಗಿ ಕೂರಿಸಿದ್ದಾನೆ.ಬೆಂಚ್ ಮೇಲೆ ಕೂರುತ್ತಿದ್ದ ವಿದ್ಯಾರ್ಥಿನಿಯನ್ನು ಶಿಕ್ಷಕ ಕೆಳಗೆ ಕೂಡಿಸಿದ್ದಾನೆ ಎನ್ನುವ ಆರೋಪ ಕೇಳಿಬಂದಿದೆ. ಶಿಕ್ಷಕನೊಬ್ಬ ಪರಿಶಿಷ್ಟ ಜಾತಿ ವಿದ್ಯಾರ್ಥಿನಿಯನ್ನು ಪ್ರತ್ಯೇಕವಾಗಿ ಕೂರಿಸಿರುವ ಘಟನೆ ವರದಿಯಾಗಿದೆ. ಶಾಲೆಯ ತರಗತಿಯಲ್ಲಿ ಬೆಂಚ್ ಮೇಲೆ ಕೂತಿದ್ದ ವಿದ್ಯಾರ್ಥಿಯನ್ನು ಶಿಕ್ಷಕ ಕೆಳಗೆ ಕೂಡಿಸಿದ್ದಾನೆ.15 ದಿನಗಳಿಂದ ತರಗತಿಯಲ್ಲಿ ಕೆಳಗೆ ಕೂರಿಸಿ ಶಿಕ್ಷಕ ತಾರತಮ್ಯ ಮಾಡಿರುವ ಆರೋಪ ಇದೀಗ ಕೇಳಿಬಂದಿದೆ. ಆದರೆ…

Read More

ಬೆಂಗಳೂರು : ಮೂರು ದಿನಗಳಲ್ಲಿ ಮೂರು ಪ್ರತ್ಯೇಕ ಜಿಲ್ಲೆಗಳಲ್ಲಿ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಪಕ್ಷ ನಾಯಕ ಆರ್ ಅಶೋಕ್ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ರಾಜ್ಯ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಗಂಭೀರವಾಗಿ ಆರೋಪಿಸಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯವು ಕೂಡ ಬಿಹಾರ್ ರಾಜ್ಯದಂತೆ ದರೋಡೆಕೋರರ ರಾಜ್ಯವಾಗಿದೆ. ಬೀದರ್ ನಲ್ಲಿ ಹಾಡು ಹಗಲೇ ದರೋಡೆ ನಡೆದಿದೆ. ಇಲ್ಲಿ ದರೋಡೆ ಮಾಡಿ ವಿಮಾನ ರೈಲುಗಳಲ್ಲಿ ಹೋಗುತ್ತಿದ್ದಾರೆ.ರಾಜ್ಯದಲ್ಲಿ ದರೋಡೆ ಕೋರರ ಜಾತ್ರೆ ನಡೆಯುತ್ತಿದೆ. ಪೊಲೀಸರು ಬಿಟ್ ನಲ್ಲಿ ಇದ್ದರೂ ಕೂಡ ಯಾರನ್ನು ಬಂಧಿಸಿಲ್ಲ. ಟೋಲ್ ಗಳಲ್ಲಿ ಏನು ಆಗಿದೆ ಅಂತ ಸ್ವತಃ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ. ಪೊಲೀಸರು ರಾಜ್ಯದ ಗೌರವವನ್ನು ಮಣ್ಣು ಪಾಲು ಮಾಡಿದ್ದಾರೆ. ಎಷ್ಟಾದರೂ ಕೂಡ ಸಿಎಂ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳ ಸಭೆ ಮಾಡಿಲ್ಲ. ಇನ್ಮುಂದೆ ಯಾದರೂ ಕುರ್ಚಿ ಜಗಳ ಬಿಟ್ಟು ಕೆಲಸ ಮಾಡಬೇಕು ಎಂದು…

Read More

ಬೀದರ್ : ಬೀದರ್ ನಲ್ಲಿ ರೈಲಿಗೆ ತಲೆಕೊಟ್ಟು ಯುವ ಗುತ್ತಿಗೆದಾರ ಸಚಿನ್ ಪಂಜಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಸಿಐಡಿ ಅಧಿಕಾರಿಗಳು ರಾಜು ಕಪನೂರ್ & ಗ್ಯಾಂಗ್ ಅನ್ನು ಬೀದರ್ ನ JMFC ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ವೇಳೆ ವಿಚಾರಣೆ ನಡೆಸಿದ  ನ್ಯಾಯಾಧೀಶ ಎನ್.ರಾಮಾಮೂರ್ತಿ ಎಲ್ಲಾ ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದ್ದಾರೆ. ಆರೋಪಿಗಳನ್ನು ಕೋರ್ಟಿಗೆ ಹಾಜರುಪಡಿಸಿದ ಸಿಐಡಿ ಅಧಿಕಾರಿಗಳು ಆರೋಪಿಗಳಾದ ರಾಜು ಕಪನೂರ್ ಮತ್ತು ಗ್ಯಾಂಗ್ ಕೋರ್ಟಿಗೆ ಹಾಜರುಪಡಿಸಿದ್ದರು. ಬೀದರ್ ನ JMFC ಕೋರ್ಟಿಗೆ ಸೇಡಿ CID ಅಧಿಕಾರಿಗಳ ತಂಡ ಹಾಜರುಪಡಿಸಿದ್ದರು. ಇದೀಗ ನ್ಯಾಯಾಧೀಶರು ರಾಜು ಕಪನೂರ್ ಮತ್ತು ಗ್ಯಾಂಗ್ ಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ. ಗುತ್ತಿಗೆದಾರ ಸಚಿನ್ ಪಾಂಚಾಳ್ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ. ಆತ್ಮಹತ್ಯೆಗು ಮುನ್ನ ಡೆತ್ ನೋಟ್ ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಅವರ ಆಪ್ತ ರಾಜು ಸೇರಿದಂತೆ ಹಲವರ ಹೆಸರು ಉಲ್ಲೇಖಿಸಿದ್ದ ಈ…

Read More

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ED ಅಧಿಕಾರಿಗಳಿಂದ ಯಾವುದೇ ಕ್ಷಣದಲ್ಲಾದರೂ ಕೂಡ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರಿಗೆ ಇಡಿ ಅಧಿಕಾರಿಗಳು ನೋಟಿಸ್ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹೌದು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿದ್ದ ಇಡಿ ಅಧಿಕಾರಿಗಳು ನಿನ್ನೆ ಪತ್ರಿಕ ಪ್ರಕಟಣೆ ಹೊರಡಿಸಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ 300 ಕೋಟಿ ಮೌಲ್ಯದ ಹಣ ಜಪ್ತಿ ಮಡಿಕೊಂಡಿದ್ದು, ಈ ಹಗರಣದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಗಳು, ರಾಜಕೀಯ ನಾಯಕರು ಸೇರಿ ಬೇರೆ ಬೇರೆ ವ್ಯಕ್ತಿಗಳು ಬೇನಾಮಿ ನಿವೇಶನ ಪಡೆದುಕೊಂಡಿರುವ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿತ್ತು. ಹಾಗಾಗಿ ಇದೀಗ ಯಾವುದೇ ಕ್ಷಣದಲ್ಲಾದರೂ ಕೂಡ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

Read More

ವಿಜಯಪುರ : ಶೀಘ್ರದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿಕೆ ನೀಡಿದ್ದಾರೆ. ಒಳ್ಳೆಯ ಅಧ್ಯಕ್ಷ ಆಗಬೇಕಾದರೆ ಚುನಾವಣೆ ಆಗಲಿ. ಬ್ಲಾಕ್, ತಾಲೂಕು & ಜಿಲ್ಲಾಧ್ಯಕ್ಷರ ಚುನಾವಣೆ ಪಾರದರ್ಶಕವಾಗಿರಲಿ. ನಮಗೆ ಓಟ್ ಹಾಕುವಂತೆ ಒತ್ತಾಯ ಹೇರುವಂತೆ ಇರಬಾರದು. ಇದಕ್ಕೆ ಅವಕಾಶ ನೀಡಬಾರದು ಎಂದು ಚೌಹಾಣ್ಗೆ ಮನವಿ ಮಾಡುತ್ತೇನೆ ಪ್ರತಿ ಜಿಲ್ಲೆಗೆ ಬೇರೆ ರಾಜ್ಯದ ಮುಖಂಡರನ್ನು ಉಸ್ತುವಾರಿಯನ್ನಾಗಿ ಮಾಡಿ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಒತ್ತಾಯಿಸಿದರು. ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ಸ್ಪರ್ಧೆ ಮಾಡುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಪ್ರಜಾತಂತ್ರ ವ್ಯವಸ್ಥೆಯಲ್ಲಿ ಎಲ್ಲರಿಗೂ ಸ್ಪರ್ಧೆ ಮಾಡುವ ಅವಕಾಶವಿದೆ.ಸಾಮಾನ್ಯ ಕಾರ್ಯಕರ್ತರು ಕೂಡ ಸ್ಪರ್ಧೆ ಮಾಡಲಿ. ಚುನಾವಣೆಗೆ ನಾವು ಸಕಲ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದರು. ಇನ್ನು ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೀವು ಸ್ಪರ್ಧಿಸುತ್ತೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಯಾರು…

Read More

ಚಿಕ್ಕಮಗಳೂರು : ತನ್ನ ಪತಿ ನನಗೆ ಮಾನಸಿಕ ಹಿಂಸೆ ನೀಡುತ್ತಿದ್ದೂ, ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾನೆ. ಅಲ್ಲದೆ ಆತನಿಗೆ ಬೇರೆ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಇದೆ ಎಂದು ಆರೋಪಿಸಿ ಚಿಕ್ಕಮಗಳೂರು ಜಿಲ್ಲೆಯ ಕಳಸ ಠಾಣೆಯ ಪಿಎಸ್ಐ ನಿತ್ಯಾನಂದ ಎನ್ನುವ ಅಧಿಕಾರಿಯ ಪತ್ನಿ ಇದೀಗ ದೂರು ನೀಡಿದ್ದಾರೆ. ಹೌದು ಪಿಎಸ್ಐ ನಿಂದ ಪತ್ನಿಯ ಮೇಲೆ ಹಲ್ಲೆ, ವರದಕ್ಷಿಣೆ ಕಿರುಕುಳ ಆರೋಪ ಕೇಳಿಬಂದಿದ್ದು, ಚಿಕ್ಕಮಗಳೂರು ಜಿಲ್ಲೆಯ ಕಳಸ ಠಾಣೆಯ ಪಿಎಸ್ಐ ನಿತ್ಯಾನಂದ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. ಪಿಎಸ್ಐ ನಿತ್ಯಾನಂದ ಪತ್ನಿ ಅಮಿತಾ ದೂರು ಆಧರಿಸಿ ಇದೀಗ FIR ದಾಖಲಾಗಿದೆ. ಕಳಸ ಪೊಲೀಸ್ ಕ್ವಾರ್ಟರ್ಸ್ ನಲ್ಲಿ ಹಲ್ಲೆ ಮಾಡಿದ್ದಾನೆ ಎಂದು ಪಿಎಸ್ಐ ನಿಂದ ಮಾನಸಿಕ ಹಿಂಸೆ ನೀಡುತ್ತಾನೆ ಎಂದು ಆರೋಪಿಸಿದ್ದಾರೆ. ಅಲ್ಲದೇ ಬೇರೆ ಮಹಿಳೆಯೊಂದಿಗೆ ಆತ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾನೆ. ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾನೆ ಎಂದು ಪಿ ಎಸ್ ಐ ವಿರುದ್ಧ ಪತ್ನಿ ಅಮಿತಾ ದೂರು ನೀಡಿದ್ದಾರೆ.ಪಿಎಸ್ಐ ನಿತ್ಯಾನಂದ ಸೇರಿ ಮುವರ ವಿರುದ್ಧ ಪತ್ನಿಮಿತ ಇದೀಗ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಪ್ರೇಯಸಿಯನ್ನು ಪ್ರಿಯಕರನೊಬ್ಬ ವಿಷ ಹಾಕಿ ಕೊಂದಿದ್ದು ಇದೀಗ ಪೋಲೀಸರ ತನಿಖೆಯ ಬೆಳಕಿಗೆ ಬಂದಿದೆ. ಜನವರಿ 1 ರಂದು ಬೆಂಗಳೂರಿನ ಎಚ್ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಕೊಲೆ ನಡೆದಿದ್ದು, ಘಟನೆಯ ಬಳಿಕ ಪೊಲೀಸರು ಇದು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ ತನಿಖೆ ಕೈಗೊಂಡಾಗ ಪ್ರಿಯಕರನೇ ಪ್ರೇಯಸಿಗೆ ವಿಷ ನೀಡಿ ಕೊಲೆ ಮಾಡಿದ್ದಾನೆ ಎಂದು ಬಹಿರಂಗವಾಗಿದೆ.. ಹೌದು ಬೆಂಗಳೂರಿನ ಹೆಚ್ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ದೀಪಂ ನಿವಾಸದ ಅಪಾರ್ಟ್ಮೆಂಟ್ ಜನೆವರಿ 1 ರಂದು ಈ ಒಂದು ಕೊಲೆಯಾಗಿದೆ. ಆದರೆ ಈಗ ಸಾವಿನ ಸೀಕ್ರೆಟ್ ಇದೀಗ ರಿವಿಲ್ ಆಗಿದೆ. ಮೃತಳನ್ನು ಉಜ್ಮಾ ಖಾನ್ ಎಂದು ತಿಳಿದುಬಂದಿದ್ದು, ಇನ್ನು ಪ್ರಿಯಕರನನ್ನು ಇಮ್ದಾದ್ ಭಾಷಾ ಎಂದು ತಿಳಿದುಬಂದಿದೆ. ಬೇರೆ ಬೇರೆ ಮದುವೆಯಾಗಿ ಇಬ್ಬರು ಡೈವೋರ್ಸ್ ಪಡೆದಿದ್ದರು. ಕುಂದಲಹಳಿಯ ಮನೆ ಒಂದರಲ್ಲಿ ಉಜ್ವಾ ಖಾನ್ ಮೃತಪಟ್ಟಿದ್ದಳು. ಈಕೆಯ ಪ್ರಿಯಕರ ಇಮ್ದಾದ್ ಭಾಷಾ ಆಕೆಗೂ ವಿಷ ನೀಡಿ ತಾನು ಕೂಡ ವಿಷ…

Read More