Author: kannadanewsnow05

ಬೆಂಗಳೂರು: ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಮತ್ತು ಸರ್ಕಾರಿ ಪಾಲಿಟೆಕ್ನಿಕ್, ಎಂಜಿನಿಯರಿಂಗ್, ಕಿರಿಯ ತಾಂತ್ರಿಕ ಕಾಲೇಜುಗಳ ಅರೆಕಾಲಿಕ ಉಪನ್ಯಾಸಕರಿಗೆ ಅವರ ಸೇವಾವಧಿ ಹಾಗೂ ಶೈಕ್ಷಣಿಕ ಅರ್ಹತೆ ಆಧರಿಸಿ ಕನಿಷ್ಠ 5 ಸಾವಿರ ರು.ನಿಂದ ಗರಿಷ್ಠ 8 ಸಾವಿರ ರು.ವರೆಗೆ ವೇತನ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ. https://kannadanewsnow.com/kannada/state-government-sc-st-employees-conference-to-be-held-on-march-5-2-day-special-casual-leave-granted/ ಈ ಹಿಂದೆ ನೀಡಿದ್ದ ಭರವಸೆಯಂತೆ ಎಲ್ಲ ಅತಿಥಿ ಉಪನ್ಯಾಸಕರಿಗೂ ತಲಾ 5 ಲಕ್ಷ ರು. ಆರೋಗ್ಯ ವಿಮಾ ಸೌಲಭ್ಯ, ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ 60 ವರ್ಷ ಮೀರಿದ ನಂತರ ಭದ್ರತಾ ರೂಪದಲ್ಲಿ ವಾರ್ಷಿಕ 50 ಸಾವಿರ ರು. ನಂತರ ಗರಿಷ್ಠ 5 ಲಕ್ಷ ರು.ಗಳ ಇಡುಗಂಟು ಮಂಜೂರು ಮಾಡಲು ಉನ್ನತ ಶಿಕ್ಷಣ ಇಲಾಖೆ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳು ಆದೇಶಿಸಿವೆ. ಆದೇಶಾನುಸಾರ ಸೇವಾವಧಿ ಮತ್ತು ವಿದ್ಯಾರ್ಹತೆ ಆಧಾರದಲ್ಲಿ ಕ್ರಮವಾಗಿ 5, 6, 7 ಮತ್ತು 8 ಸಾವಿರದಂತೆ ನಾಲ್ಕು ರೀತಿಯಲ್ಲಿ ವೇತನ ಹೆಚ್ಚಿಸಲಾಗಿದೆ. https://kannadanewsnow.com/kannada/good-news-for-guest-lecturers-of-government-first-grade-colleges-technical-colleges-in-the-state/ ಪದವಿ ಕಾಲೇಜುಗಳಲ್ಲಿ 5…

Read More

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯೆ ನೀಡಿದ್ದು, ಒಂದು ವೇಳೆ ಅಲ್ಪಸಂಖ್ಯಾತರ ಮೇಲೆ ಈ ಆರೋಪ ಬಂದರೆ ಪ್ರಕರಣ ಮುಚ್ಚಿ ಹಾಕುವಂತೆ ಪೊಲೀಸರಿಗೆ ನಿರ್ದೇಶನವಿದೆ ಎಂದು ಗಂಭೀರವಾದಂತಹ ಆರೋಪ ಮಾಡಿದರು. https://kannadanewsnow.com/kannada/this-is-just-a-trailer-there-are-still-tragedies-ahead-mp-pratap-simha/ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಲ್ಪಸಂಖ್ಯಾತರ ಮೇಲೆ ಆರೋಪ ಬಂದರೆ ಅದನ್ನು ಮುಚ್ಚಿಹಾಕಿ. ಬಹು ಸಂಖ್ಯಾತರ ಮೇಲೆ ಆರೋಪ ಬಂದರೆ ಕೂಡಲೇ ಕ್ರಮ ಕೈಗೊಳ್ಳಿ ಎಂಬುದಾಗಿ ಪೊಲೀಸ್ ಇಲಾಖೆಗೆ ಸರ್ಕಾರದಿಂದ ಸ್ಪಷ್ಟ ನಿರ್ದೇಶನವಿದೆ.ಕರ್ನಾಟಕದ ಪ್ರಜೆಯಾಗಿ ಇದೆಲ್ಲಾ ನಮ್ಮ ಮನಸ್ಸಿಗೆ ಬೇಸರ ತರಿಸಿದೆ. ಹಾಗಿದ್ದರೆ, ಈಗ ಕೇಳಿಬಂದಿರುವ ಎರಡೂ ಆರೋಪಗಳು ಸಾಬೀತಾದರೆ ಸರ್ಕಾರ ವಿಸರ್ಜನೆ ಮಾಡುತ್ತಾರೆಯೇ ಎಂದು ಪ್ರಶ್ನಿಸಿದರು. https://kannadanewsnow.com/kannada/union-minister-smriti-irani-releases-haj-2024-guidelines/ ಗೃಹಸಚಿವರು ಒತ್ತಡದಲ್ಲಿದ್ದಾರೆ. ಅವರು ಇದ್ದ ರಿಪೋರ್ಟ್‌ ಇದ್ದ ಹಾಗೆ ಕೊಡುವವರು. ಅವರ ಮೇಲೆ ಒತ್ತಡ ಇರುವುದು ಸತ್ಯ. ಹಾಗಾಗಿ ರಿಪೋರ್ಟ್‌ ಕೊಟ್ಟೇ ಇಲ್ಲ ಅಂತ ಹೇಳಿಬಿಡಿ ಎಂದು ಪೊಲೀಸರಿಗೆ ಹೇಳಿರುತ್ತಾರೆ. ನಾನೂ ಕೂಡ ಗೃಹಸಚಿವ ಆಗಿದ್ದವನು. ವರದಿಯಲ್ಲಿ…

Read More

ಬೆಂಗಳೂರು : ರಾಜ್ಯ ಗುತ್ತಿಗೆದಾರರ ಸಮಾವೇಶಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಈ ವೇಳೆ ಗುತ್ತಿಗೆದಾರರಿಂದ ಐದು ಪೈಸೆ ನಾನು ಲಂಚ ಪಡೆದಿದ್ದರೆ ಇಂದೇ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. https://kannadanewsnow.com/kannada/have-you-gone-beyond-your-rights-sc-to-udhayanidhi-stalin-for-criticising-sanatan-dharma/ ಬೆಂಗಳೂರು ಅರಮನೆ ಮೈದಾನದಲ್ಲಿ ಗುತ್ತಿಗೆದಾರರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗುತ್ತಿಗೆದಾರರು ಬಾಕಿ ಹಣ ಕೊಡಿ ಎಂದು ಬೇಡಿಕೆ ವಿಚಾರವಾಗಿ ಮಾತನಾಡಿ, 1.20,000 ಕೋಟಿ ಒಟ್ಟಿಗೆ ಕೊಡಕ್ ಆಗುತ್ತಾ? ಬಾಕಿ ಬಿಲ್ ಕ್ಲಿಯರ್ ಮಾಡಲು ನಾನೇನು ದುಡ್ಡು ಪ್ರಿಂಟ್ ಮಾಡ್ಲಾ? ನನ್ನಿಂದ ಸುಳ್ಳು ಹೇಳೋಕೆ ಆಗಲ್ಲ ಎಂದು ತಿಳಿಸಿದರು. https://kannadanewsnow.com/kannada/bjps-private-fsl-report-will-not-be-taken-into-account-home-minister-g-parameshwara/ ನಾನು 5 ವರ್ಷ ಹಣಕಾಸಿನ ಮಂತ್ರಿಯಾಗಿದ್ದು, ಈ ಬಾರಿ 15ನೇ ಬಜೆಟ್ ಮಂಡಿಸಿದ್ದೇನೆ. ಯಾವತ್ತಾದರೂ ಕೂಡ LOC ಬಿಡುಗಡೆ ಮಾಡಲಿಕ್ಕೆ 5 ಪೈಸೆ ಗುತ್ತಿಗೆದಾರನ ಹತ್ತಿರ ಲಂಚ ಪಡೆದಿದ್ದರೆ ರಾಜಕೀಯ ನಿವೃತ್ತಿ ಪಡೆದುಕೊಳ್ಳುತ್ತೇನೆ. ಇವತ್ತಿನವರೆಗೆ ಎಲ್ ಓ ಸಿ ರಿಲೀಸ್ ಮಾಡೋದಕ್ಕೆ ಐದು ಪೈಸೆ ಪಡೆದಿದ್ದನ್ನು ಯಾರಾದ್ರೂ ಗುತ್ತಿಗೆದಾರ ಬಂದು ಹೇಳಿದರೆ…

Read More

ದಕ್ಷಿಣ ಕನ್ನಡ : ಇಡೀ ರಾಜ್ಯವೇ ಬೆಚ್ಚಿ ಬೆಳಿಸುವಂತಹ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರ ಮೇಲೆ ಕೇರಳ ಮೂಲದ ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ಆಸಿಡ್ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಎಸ್ ಪಿ ಸಿ ಬಿ ರಿಷ್ಯಂತ್ ಪರಿಚಯಸ್ಥನಿಂದಲೇ ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿಯಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಬೆಳಗ್ಗೆ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮೂವರ ಪೈಕಿ ಓರ್ವ ವಿದ್ಯಾರ್ಥಿನಿಗೆ ಗಂಭೀರ ಗಾಯವಾಗಿದೆ. ಹೀಗಾಗಿ ಆಕೆಯನ್ನ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ವಿದ್ಯಾರ್ಥಿನಿಯರಿಗೆ ಕೈಗೆ ಗಾಯವಾಗಿದೆ. ಘಟನೆ ನಡೆದ ಒಂದು ಗಂಟೆ ಒಳಗೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದರು. ಕಡಬದ ಸರ್ಕಾರಿ ಕಾಲೇಜಿನಲ್ಲಿ ಕೇರಳದ ಅಬೀನ್ ಎನ್ನುವ ಯುವಕದಿಂದ ಈ ಕೃತ್ಯ ನಡೆದಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರ ಮೇಲೆ ಅಭಿನ್ ಆಸಿಡ್ ದಾಳಿ ನಡೆಸಿದ್ದಾನೆ. ಮಾಸ್ಕ್ ಹಾಗೂ ಟೋಪಿ ಧರಿಸಿ ಬಂದು ಅಭಿನ್ ಆಸಿಡ್ ಎರ್ಚಿದ್ದಾನೆ. ತಕ್ಷಣ ಕಡಬ ಆಸ್ಪತ್ರೆಯಲ್ಲಿ ಮೂವರು…

Read More

ಹಾವೇರಿ : ಸಾಲಭಾದೇ ತಾಳದೆ ಗದಗ ಮೂಲದ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆಯ ಯಲವಿಗೆ ರೈಲು ನಿಲ್ದಾಣದ ಬಳಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. https://kannadanewsnow.com/kannada/bjps-private-fsl-report-will-not-be-taken-into-account-home-minister-g-parameshwara/ ಆತ್ಮಹತ್ಯೆ ಶರಣಾದವರು ಗೋನಾಳ ಗ್ರಾಮದ ತೆಲಿ ಕುಟುಂಬದವರು ಎಂದು ಹೇಳಲಾಗುತ್ತಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದವರು ಎಂದು ತಿಳಿದುಬಂದಿದೆ. ಮೊದಲು ರೈಲಿಗೆ ಸಿಲುಕಿ ಮಂಜುನಾಥ್ ತೇಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪತ್ರನನ್ನು ರಕ್ಷಿಸಲು ಹೋಗಿ ರೇಣವ್ವ ಕೂಡ ಸಾವನ್ನಪ್ಪಿದ್ದಾಳೆ. https://kannadanewsnow.com/kannada/modi-govt-treating-farmers-as-enemy-congress-president-mallikarjuna-kharge/ ತಾಯಿ ಹಾಗೂ ಪುತ್ರನ ಸಾವಿನ ಸುದ್ದಿ ತಿಳಿದು ಸಾವಕ್ಕ ನೇಣಿಗೆ ಶರಣಾಗಿದ್ದಾಳೆ. ಗೋನಾಳ ಗ್ರಾಮದ ಮನೆಯಲ್ಲಿ ಸಾವಕ್ಕ ನೇಣಿಗೆ ಶರಣಾಗಿದ್ದಾಳೆ.ಟ್ರ್ಯಾಕ್ಟರ್ ಸಾಲ ಪಾವತಿ ವಿಚಾರವಾಗಿ ಮಂಜುನಾಥ್ ಮನೆಯಲ್ಲಿ ಗಲಾಟೆ ಮಾಡಿಕೊಂಡಿದ್ದ ಎನ್ನಲಾಗುತ್ತಿದೆ. ಅದಾದ ನಂತರ ರೈಲುಗೆ ಸಿಲುಕಿ ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. https://kannadanewsnow.com/kannada/tumakuru-an-elderly-mans-life-was-blown-away-by-a-fake-doctors-injection/

Read More

ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಎಫ್​ಎಸ್​ಎಲ್​, ಗೃಹ ಇಲಾಖೆಯ ಫಾರೆನ್ಸಿಕ್ ವರದಿಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಧೃಡವಾಗಿದ್ದರೆ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ.ಖಾಸಗಿ ಸಂಸ್ಥೆಯವರು ನೀಡಿರುವ ಎಫ್​ಎಸ್​ಎಲ್ ವರದಿಯನ್ನು ಗಣನೆಗೆ ತೆಗೆದುಕೊಳ್ಳಲ್ಲ ಎಂದು ಗೃಹ ಸಚಿವೆ ಜಿ. ಪರಮೇಶ್ವರ್ ಹೇಳಿದರು. https://kannadanewsnow.com/kannada/modi-govt-treating-farmers-as-enemy-congress-president-mallikarjuna-kharge/ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇದು ನಮ್ಮ ಇಲಾಖೆಗೆ ಸಂಬಂಧಿಸಿದ್ದು. ನಮ್ಮ ವರದಿ ಬಂದ ಮೇಲೆ ಹೇಳುತ್ತೇನೆ. ಖಾಸಗಿಯವರಿಗೆ ಈ ರೀತಿ ವರದಿ ಕೊಡಲು ಅನುಮತಿ ಇದೆಯಾ? ಅವರಿಗೆ ಎನ್​​ಒಸಿ ಯಾರು ಕೊಟ್ಟಿದ್ದಾರೆ. ಎಲ್ಲವನ್ನು ಪರಿಶೀಲನೆ ಮಾಡುತ್ತೇನೆ ಎಂದರು. https://kannadanewsnow.com/kannada/tumakuru-an-elderly-mans-life-was-blown-away-by-a-fake-doctors-injection/ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್​ ವಿಚಾರವಾಗಿ ಮಾತನಾಡಿದ ಅವರು, ಸಭೆ ಮಾಡಿ ಈಗಾಗಲೇ ಎಲ್ಲವನ್ನೂ ಹೇಳಿದ್ದೇನೆ. ಕೆಲ ವಿಚಾರ ಹಂಚಿಕೊಳ್ಳಲು ಆಗಲ್ಲ. ಎನ್​ಐಎ ಈಗಾಗಲೆ ತನಿಖೆ ಆರಂಭಿಸಿದ್ದಾರೆ, ಎನ್​ಎಸ್​​ಜಿ ಕೂಡ ತನಿಖೆ ನಡೆಸುತ್ತಿದೆ. ಇದರ ಹಿಂದೆ ಯಾರಿದ್ದಾರೆ, ವ್ಯಕ್ತಿ ಇದ್ದಾರಾ, ಸಂಘಟನೆ ಇದೆಯಾ.? ಎಲ್ಲವನ್ನೂ ಪರಿಶೀಲನೆ ಮಾಡಬೇಕು…

Read More

ತುಮಕೂರು : ಪಾವಗಡದಲ್ಲಿ ನಕಲಿ ವೈದ್ಯ ನೀಡಿದ ಇಂಜೆಕ್ಷನ್ ನಿಂದ ವೃದ್ಧರೊಬ್ಬರೂ ಸಾವನ್ನಪ್ಪಿರುವ ಘಟನೆ ನಡೆದಿದೆ. ಪಾವಗಡ ತಾಲೂಕಿನ ಕೊತ್ತೂರಿನ ಕೋಟೆ ಚಿತ್ತಯ್ಯ (58) ಎನ್ನುವ ವೃದ್ಧ ಸಾವನಪ್ಪಿದ್ದಾರೆ. https://kannadanewsnow.com/kannada/bengaluru-3-mobile-phones-and-4-charging-cables-were-found-in-the-stomach-of-the-prisoner/ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕೊತ್ತೂರು ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ನಕಲಿ ವೈದ್ಯ ಮಾರುತಿಯಿಂದ ಇಂಜೆಕ್ಷನ್ ಪಡೆದಿದ್ದ ಚಿತ್ತಯ್ಯ ಇದೀಗ ಸಾವನ್ನಪ್ಪಿದ್ದರೆ. ಕಿಲಾರ್ಲಹಳ್ಳಿ ಗ್ರಾಮದಲ್ಲಿ ಮಾರುತಿ ಕ್ಲಿನಿಕ್ ಇಟ್ಕೊಂಡಿದ್ದ.ಪಾವಗಡ ತಾಲೂಕಿನಲ್ಲಿ ನಕಲಿ ವೈದ್ಯರ ಹಾವಳಿ ಇತ್ತೀಚಿಗೆ ಹೆಚ್ಚುತ್ತಿದೆ.ನಕಲಿ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಇದೀಗ ಸಾರ್ವಜನಿಕರು ಆಕ್ರೋಶ ಹೊರಹಾಕುತ್ತಿದ್ದಾರೆ. https://kannadanewsnow.com/kannada/breaking-three-2nd-puc-students-in-mangaluru-attacked-with-acid/

Read More

ದಕ್ಷಿಣಕನ್ನಡ : ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿ ಒಬ್ಬ ಆಸಿಡ್ ದಾಳಿ ನಡೆಸಿ ಪರಾರಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಈ ದುರ್ಘಟನೆ ನಡೆದಿದೆ. ಕೇರಳ ಮೂಲದ ವ್ಯಕ್ತಿ ಕಡಬ ತಾಲೂಕಿನ ಸರ್ಕಾರಿ ಕಾಲೇಜು ಬಳಿ ದ್ವಿತೀಯ ಪಿಯುಸಿ ಪರೀಕ್ಷೆಗೆ ತಯ್ಯಾರು ಮಾಡಿಕೊಂಡು ಕಾಲೇಜಿನ ವರಾಂಡದಲ್ಲಿ ಕುಳಿತಿದ್ದ ವೇಳೆ ಮುಖಕ್ಕೆ ಕಪ್ಪುಬಣ್ಣದ ಮಾಸ್ಕ್ ಹಾಗೂ ಟೋಪಿ ಧರಿಸಿದ್ದಾ ದುಷ್ಕರ್ಮಿ ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ನಡೆಸಿ ಪರಾರಿಯಾಗಿದ್ದಾನೆ. ಅಲಿನಾ, ಸಿಬಿ ಅರ್ಚನಾ, ಹಾಗೂ ಅಮೃತ ಎನ್ನುವ ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿಯಾಗಿದೆ.ತಕ್ಷಣ ಕಡಬ ತಾಲೂಕು ಆಸ್ಪತ್ರೆಗೆ ವಿದ್ಯಾರ್ಥಿಗಳನ್ನು ದಾಖಲಿಸಿಟಿ ನೀಡಲಾಗುತ್ತಿದೆ. ಆಸಿಡ್ ದಾಳಿ ನಡೆಸಿದ ದುಷ್ಕರ್ಮಿಯನ್ನು ಇದೀಗ ಪೊಲೀಸರು ವಶಪಡಿಸಿಕೊಂಡಿದ್ದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Read More

ತಮಿಳುನಾಡು : ತಮಿಳುನಾಡಿನ ಎರಡು ಶಾಲೆಗಳಿಗೆ ಬಾಂಬ್ ಬೆದರಿಕೆ ಈಮೇಲ್ ಸಂದೇಶ ಬಂದಿದೆ ಎಂದು ಹೇಳಲಾಗುತ್ತಿದ್ದು, ತಕ್ಷಣ ಶಾಲೆಗಳಿಗೆ ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ತಮಿಳುನಾಡಿನ ಕಾಂಚಿಪುರಂ ಹಾಗೂ ಕೊಯಮತೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದೆ ಎಂದು ಹೇಳಲಾಗುತ್ತಿದೆ. ಬೆದರಿಕೆ ಇ-ಮೇಲ್ ಸಂದೇಶ ಬಂದ ತಕ್ಷಣ ಪೊಲೀಸರು ತಪಾಸಣೆ ನಡೆಸಿದ್ದಾರೆ. ತಪಾಸಣೆ ನಂತರ ಹುಸಿ ಬಾಂಬ್ ಬೆದರಿಕೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಈ ವೇಳೆ ಶಾಲಾ ಅಡಳಿತದ ಇಮೇಲ್ ಗೆ ಸಂದೇಶ ಬಂದಿರುವುದನ್ನು ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಿದ ನಂತರ  ಇದು ಹುಸಿ ಬಾಂಬ್ ಬೆದರಿಕೆ ಸಂದೇಶ ಎಂದು ಸ್ಪಷ್ಟಪಡಿಸಿದರು. ವಿದ್ಯಾರ್ಥಿಗಳು ಪೋಷಕರು ಹಾಗೂ ಶಾಲಾ ಆಡಳಿತ ಮಂಡಳಿಯವರು ತಕ್ಷಣ ನೀಟ್ಟುಸಿರು ಬಿಟ್ಟಿದ್ದಾರೆ. ಕಳೆದ ತಿಂಗಳ ಹಿಂದೆ ಬೆಂಗಳೂರಿನ ಸುಮಾರು 60ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬೆ ಬೆದರಿಕೆ ಈಮೇಲ್ ಸಂದೇಶ ಬಂದಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ. ಆದರೆ ಇದುವರೆಗೂ ಈ ಮೇಲ್ ಸಂದೇಶ ಎಲ್ಲಿಂದ ಬಂದಿವೆ ಯಾರು…

Read More

ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ ಘೋಷಣೆ ಹಾಗೂ ರಾಮೇಶ್ವರಂ ಕಥೆಯಲ್ಲಿ ಬಾಂಬೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜೇಂದ್ರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಖಾಸಗಿ FSL ವರದಿ ಈಗಾಗಲೇ ಈ ಕುರಿತು ಧೃಡೀಕರಣ ನೀಡಿಯಾಗಿದೆ, ಸರ್ಕಾರಿ ವರದಿ ಕೂಡ ನಿಮ್ಮ ಕೈ ಸೇರಿದೆ ಆದಾಗ್ಯೂ ವರದಿ ಇನ್ನೂ ತಲುಪಿಲ್ಲ ಎಂಬ ಹಸೀ ಸುಳ್ಳು ಹೇಳುತ್ತಿರುವ ನಿಮ್ಮ ನಡೆ, ನಿಮ್ಮ ರಾಷ್ಟ್ರ ಬದ್ಧತೆಯನ್ನು ಪ್ರಶ್ನಿಸುವಂತಾಗಿದೆ ಎಂದು ಟ್ವೀಟ್ ನಲ್ಲಿ ಕಿಡಿ ಕಾರಿದ್ದಾರೆ. https://kannadanewsnow.com/kannada/ready-to-appear-before-ed-after-march-12-delhi-cm-arvind-kejriwal/ ರಾಜ್ಯ ಹಾಗೂ ಜನರ ಹಿತಾಸಕ್ತಿಯೇ ನಮ್ಮ ಮೊದಲ ಆದ್ಯತೆ, ದೇಶ ದ್ರೋಹಿ ಉಗ್ರರು ಹಾಗೂ ಪಾತಕಿಗಳಿಗೆ ಕರ್ನಾಟಕ ನೆಲೆಯಾಗಬಾರದೆಂಬುದಷ್ಟೇ ನಮ್ಮ ಪ್ರಾಮಾಣಿಕ ಕಾಳಜಿ, ಪ್ರಜಾಪ್ರಭುತ್ವದ ಹೃದಯ ಮಂದಿರ ವಿಧಾನ ಸೌಧಕ್ಕೆ ಧಾವಿಸಿ ಬಂದು ಪೋಲಿಸರ ಎದುರೇ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಕೂಗುವಷ್ಟರ ಮಟ್ಟಿಗೆ ವಿದ್ರೋಹಿಗಳು ಧೈರ್ಯತೋರುತ್ತಾರೆ, https://kannadanewsnow.com/kannada/payments-bank-controversy-paytms-upi-market-share-falls-to-11-in-february/ ಇದರ ಬೆನ್ನಲೇ ರಾಜಧಾನಿಯಲ್ಲಿ ಬಾಂಬ್ ಸ್ಫೋಟವಾಗುತ್ತದೆ ಎಂದರೆ ಈ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಿ…

Read More