Author: kannadanewsnow05

ಮೈಸೂರು : ಮುಡಾದಲ್ಲಿ ಅಕ್ರಮ ನಿವೇಶನಗಳ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಈ ಒಂದು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಬಿಲ್ಡರ್ ಜಯರಾಮ್ ಅವರ ಮೊಬೈಲ್ ಅನ್ನು ಪರಿಶೀಲಿಸಿದ ED ಅಧಿಕಾರಿಗಳು, ಅವರ ಮೊಬೈಲಿನಿಂದ ಕೊಕೊನಟ್ ಕೋಡ್ ವರ್ಡ್ ನೋಡಿ ಅಧಿಕಾರಿಗಳೇ ಬೆಚ್ಚಿ ಬಿದ್ದಿದ್ದಾರೆ. ಹೌದು ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಕೋಟಿ ಕೋಟಿ ಕಳ್ಳ ವ್ಯವಹಾರಕ್ಕೆ ಕೋಕನಟ್ ಎಂದು ಕೋಡ್ ವರ್ಡ್ ಬಳಕೆ ಮಾಡಲಾಗಿತ್ತು. ಬೇನಾಮಿ ಡೀಲ್ ಗೆ ಬಿಲ್ಡರ್ ಜಯರಾಮ್ ಈ ಒಂದು ಕೋಡ್ ವರ್ಡ್ ಇಟ್ಟಿದ್ದ ಎಂದು ಇದೀಗ ಇಡೀ ಅಧಿಕಾರಿಗಳ ತನಿಖೆಯಲ್ಲಿ ಬಯಲಾಗಿದೆ. ED ಅಧಿಕಾರಿಗಳ ವಿಚಾರಣೆಯ ವೇಳೆ ಬಿಲ್ಡರ್ ಜಯರಾಮ್ ಅಸಲಿ ಸತ್ಯವನ್ನು ಬಾಯಿಬಿಟ್ಟಿದ್ದಾನೆ. ಅಧಿಕಾರಿಗಳಿಗೆ, ರಾಜಕಾರಣಿಗಳ ಜೊತೆಗೆ ಕೋಕನಟ್ ಸಂದೇಶದ ಮೂಲಕ ಬಿಲ್ಡರ್ ಜಯರಾಮ್ ಕೋಟ್ಯಾಂತರ ರೂಪಾಯಿ ವ್ಯವಹಾರ ನಡೆಸುತ್ತಿದ್ದ. 1 ಕೋಕನಟ್ ಅಂದರೆ 1 ಲಕ್ಷ, 50 ಕೋಕನಟ್ ಅಂದ್ರೆ 50 ಲಕ್ಷ ಎಂದು ಜಯರಾಮ್ ಕೊಕೊನಟ್ ಕೋಡ್…

Read More

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸಚಿವರ ಬಹಿರಂಗ ಹೇಳಿಕೆಯಿಂದ ಉಂಟಾಗಿದ್ದ ಗೊಂದಲಕ್ಕೆ ಇದೀಗ ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೆರೆ ಎಳೆದಿದ್ದಾರೆ. ಎಲರೂ ಬಾಯಿ ಮುಚ್ಚಿಕೊಂಡು ಇರಬೇಕು ಎಂದು ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ವಾರ್ನಿಂಗ್ ನೀಡಿದ ಬೆನ್ನಲ್ಲೆ ಕೈ ನಾಯಕರು ಇದೀಗ ಫುಲ್ ಸೈಲೆಂಟಾಗಿದ್ದಾರೆ. ಇನ್ನು ಈ ವಿಚಾರವಾಗಿ ಬೆಂಗಳೂರಲ್ಲಿ ಮಲ್ಲಿಕಾರ್ಜುನ ಖರ್ಗೆ ಪುತ್ರ ಸಚಿವ ಪ್ರಿಯಾಂಕ್ ಖರ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಮೊದಲು ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಅವರು ಸೂಚಿಸಿದ್ದರು. ಅದನ್ನು ಎ ಐ ಸಿ ಸಿ ಅಧ್ಯಕ್ಷರು ಮತ್ತೆ ಪುನರುಜ್ಜಾರ ಮಾಡಿದ್ದಾರೆ ಅಷ್ಟೇ. ಯಾರ ಬಾಯಿಗೂ ಕೂಡ ಬೀಗ ಹಾಕಲು ಆಗಲ್ಲ. ವಿವೇಚನೆ ಬಳಸಿ ಮಾತನಾಡಬೇಕು. ಮಾತಿನಿಂದ ಪಕ್ಷಕ್ಕೆ ಹಾನಿಯಾಗುತ್ತಾ ಎಂದು ಯೋಚಿಸಬೇಕು. ಬಿ ಫಾರಂ ಕೊಡಲು ಪಕ್ಷ ಬೇಕು ಬಳಿಕ ಅಧ್ಯಕ್ಷರು ಯಾರು? ರಾಹುಲ್ ಗಾಂಧಿ ಯಾರು? ಹೈಕಮಾಂಡ್ ಏನು ಮಾಡುತ್ತದೆ ಅಂತ ಹೇಳುವುದು ಸರಿಯಲ್ಲ. ಸಿಎಂ, ಡಿಸಿಎಂ…

Read More

ಬೆಂಗಳೂರು : ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಗಾಂಜಾ ಮಾರಾಟ ಮಾಡುತ್ತಿದ್ದ ಆಫ್ರಿಕಾ ಮೂಲದ ಡ್ರಗ್ ಪೆಡ್ಲರ್ ನನ್ನು ಇದೀಗ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸರು ಅರೆಸ್ಟ್ ಮಾಡಿದ್ದು, ಆತನಿಂದ ಸುಮಾರು 48 ಲಕ್ಷಕ್ಕೂ ಹೆಚ್ಚಿನ ಗಾಂಜಾ ಹಾಗೂ ಡ್ರಗ್ಸ್ ಅನ್ನು ಜಪ್ತಿ ಮಾಡಿದ್ದಾರೆ. ಆಫ್ರಿಕಾ ಮೂಲದ ಡ್ರಗ್ ಪೆಡ್ಲರ್ ಬಂಧನವಾಗಿದ್ದು, ಬೆಂಗಳೂರಿನ ಉತ್ತರ ತಾಲೂಕಿನ ಚಿಕ್ಕಬಾಣಾವರದ ವಿನಾಯಕ ನಗರದಲ್ಲಿ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ.ಸೋಲದೇವನಹಳ್ಳಿ ಪೊಲೀಸರಿಂದ ಆರೋಪಿ ಓಕೆಕೆ ಕ್ರಿಸ್ಟೋಫರ್ ಎನ್ನುವ ಆರೋಪಿಯನ್ನು ಸೆರೆ ಹಿಡಿದಿದ್ದಾರೆ. ಆತನಿಂದ 48 ಲಕ್ಷ ಮೌಲ್ಯದ 250 ಗ್ರಾಂ ಹೈಡ್ರೋ ಗಾಂಜಾ, ಹಾಗೂ 165 ಗ್ರಾಂ ಎಂಡಿಎಂಎ ಡ್ರಗ್ಸ್ ಅನ್ನು ಜಪ್ತಿ ಮಾಡಿದ್ದಾರೆ. ಈತ ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಆರೋಪಿ ಗಾಂಜಾ ಮಾರುತಿದ್ದ ಎನ್ನಲಾಗಿದೆ. ಈ ಕುರಿತು ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More

ಉಡುಪಿ : ಕೆಲವೊಂದು ವಿಚಿತ್ರವಾದ ಅಂತಹ ಘಟನೆಗಳನ್ನು ನಾವು ನೋಡಿರುತ್ತೇವೆ. ಕೇಳಿರುತ್ತೇವೆ. ಅದರಂತೆ ಇದೀಗ ಇಲ್ಲೊಂದು ಅಂಥದ್ದೇ ವಿಚಿತ್ರವಾದ ಘಟನೆ ನಡೆದಿದ್ದು, ತಮ್ಮ ಸ್ವಂತ ಬಸ್ ಅನ್ನು ತಾವೇ ಮಾರಾಟ ಮಾಡಿ, ಬಳಿಕ ಅಪ್ಪ ಮಗ ಇಬ್ಬರು ಸೇರಿ ಅದೇ ಬಸ್ ಅನ್ನು ಕದ್ದಿರುವಂತಹ ವಿಚಿತ್ರವಾದಂತಹ ಘಟನೆ ಉಡುಪಿಯಲ್ಲಿ ನಡೆದಿದೆ.ಸದ್ಯ ತಂದೆ ಮಗನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ ಹೌದು ಅಪ್ಪ ಮಗ ತಮ್ಮ ಬಸ್ ಅನ್ನು ತುಮಕೂರಿನ ಉದ್ಯಮಿಯೊಬ್ಬರಿಗೆ ಸೇಲ್ ಮಾಡಿ ಮತ್ತೆ ಅದನ್ನು ಕದ್ದು ತಂದಿದ್ದರೆ. ತುಮಕೂರಿನ ಉದ್ಯಮಿ ಸೆಕೆಂಡ್ ಹ್ಯಾಂಡ್ ಬಸ್ ಖರೀದಿಸಿ ಇದೀಗ ಕಕ್ಕಾಬಿಕ್ಕಿಯಾಗಿದ್ದಾರೆ. ಈ ಕುರಿತು ಉಡುಪಿ ಜಿಲ್ಲೆಯ ಕಾಪುವಿನಲ್ಲಿ ತಂದೆ ಮಗನ ವಿರುದ್ಧ ಇದೀಗ ‘FIR’ ದಾಖಲಾಗಿದೆ. ತುಮಕೂರಿನ ಕೊರಟಗೆರಿಯ ಸೈಯದ್ ಎನ್ನುವವರು ಬಸ್ ಖರೀದಿಸಿದ್ದರು. ಕಾಪುವಿನ ಸಮೀರ್ ಮಾಲೀಕತ್ವದ ಬಸ್ ಅನ್ನು ಖರೀಸಿದಿದ್ದರು. ಸೈಯದ್ ಮಗ ಸಿದ್ದಿಕ್ ಹಾಗೂ ಸ್ನೇಹಿತ ಜಾವೇದ ಜೊತೆ ಬಸ್ ಖರೀದಿಗೆ ಹೋಗಿದ್ದರು. 9,50,000 ನೀಡಿ ಬಸ್ ಖರೀದಿಸಿದ್ದರು.…

Read More

ಚಿಕ್ಕಮಗಳೂರು : ನಿನ್ನೆ ವಿಜಯಪುರದಲ್ಲಿ ಮುಸುಕು ದಾರಿ ಗ್ಯಾಂಗ್ ಒಂದು ಒಂಟಿ ಮನೆಗೆ ನುಗ್ಗಿ ಮನೆಯ ಮಾಲೀಕ ಹಾಗೂ ಆತನ ಪತ್ನಿಯ ಮೇಲೆ ಅವಾರ್ಡ್ನಿಂದ ಹಲ್ಲೆ ನಡೆಸಿ ದರೋಡಿಗೆ ಯತ್ನಿಸಿದ್ದ ಘಟನೆ ನಡೆದಿತ್ತು. ಇದೀಗ ಅಂತದ್ದೇ ಮುಸುಗು ದಾರಿ ಗ್ಯಾಂಗ್ ಒಂದು ಚಿಕ್ಕಮಂಗಳೂರಲ್ಲಿ ಆಕ್ಟಿವ್ ಆಗಿದ್ದು ಮನೆಗೆ ನುಗ್ಗಿ ಹಣ ಚಿನ್ನ ದೋಚಿ ಪ್ರಾದಿಯಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಹಿರೇಮಗಳೂರು ಬಳಿ ನಡೆದಿದೆ. ಹೌದು ಚಿಕ್ಕಮಂಗಳೂರಲ್ಲಿ ಖತರ್ನಾಕ್ ಗ್ಯಾಂಗ್ ಆಕ್ಟಿವ್ ಆಗಿದ್ದು, ಮನೆಯಲಿದ್ದ ವಸ್ತುಗಳನ್ನು ದೋಚಿ ಕಳ್ಳರು ಇದೀಗ ಪರಾರಿ ಆಗಿದ್ದಾರೆ. ಚಿನ್ನ ನಗದು ದೋಚಿ ಎಸ್ಕೇಪ್ ಆಗಿದ್ದಾರೆ ಎನ್ನಲಾಗಿದೆ.ಚಿಕ್ಕಮಂಗಳೂರು ತಾಲೂಕಿನ ಹಿರೇಮಗಳೂರು ಗ್ರಾಮದ ಮನೆಯಲ್ಲಿ ಖದೀಮರು ಕನ್ನ ಹಾಕಿದ್ದಾರೆ. ರಾಮಮ್ಮ ಎಂಬುವರ ಮನೆಯಲ್ಲಿ ನಗದು ಚಿನ್ನ ಬೆಳ್ಳಿ ಕಳ್ಳತನ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಕಳ್ಳತನಕ್ಕೂ ಮೊದಲು ಮನೆಯ ಸುತ್ತಲೂ ಇದ್ದಂತಹ ಸಿಸಿಟಿವಿ ಕ್ಯಾಮೆರಾ ಗಳನ್ನು ಒಡೆದು ಹಾಕಿದ್ದಾರೆ ಎನ್ನಲಾಗಿದೆ.

Read More

ಮೈಸೂರು : ಇತ್ತೀಚಿಗೆ ಬೆಂಗಳೂರಿನ ಸುತ್ತಮುತ್ತ ಚಿರತೆ ಕಾಣಿಸಿಕೊಂಡಿದ್ದು ಜನರಲ್ಲಿ ಆತಂಕ ಮೂಡಿಸಿತ್ತು. ಇದೀಗ ಮೈಸೂರಿನಲ್ಲಿ ಕೂಡ ಚಿರತೆ ಪ್ರತ್ಯಕ್ಷವಾಗಿದ್ದು ಮೈಸೂರಿನ ಲಿಂಗಂಬುದ್ಧಿ ಉದ್ಯಾನವನದಲ್ಲಿ ಇದೀಗ ಬೆಳಿಗ್ಗೆ ವಾಯುವಿಹಾರಕ್ಕೆ ತೆರಳಿದ್ದ ಹಲವರಿಗೆ ಚಿರತೆ ಓಡಾಡಿರುವುದು ಕಂಡು ಬಂದಿದೆ. ಹೌದು ಮೈಸೂರಿನ ಲಿಂಗಾಂಬುದ್ಧಿ ಕೆರೆ ಉದ್ಯಾನವನದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ರಾಮಕೃಷ್ಣನಗರ ಸಮೀಪವಿರುವ ಲಿಂಗಾಂಬುದ್ದಿ ಕೆರೆ ಉದ್ಯಾನವನದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು ಬೆಳಿಗ್ಗೆ ವಾಯುವಿಹಾರಕ್ಕೆ ತೆರಳಿದ್ದವರಿಗೆ ಚಿರತೆ ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ. ಚಿರತೆ ಕಂಡ ತಕ್ಷಣ ಕೂಡಲೇ ಅರಣ್ಯ ಇಲಾಖೆಯ ಸಿಬ್ಬಂದಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ ಲಿಂಗಬುಂದ್ಧಿ ಕೆರೆ ಉದ್ಯಾನವನ ಸಾರ್ವಜನಿಕರ ಪ್ರವೇಶಕ್ಕೆ ಇದೀಗ ನಿರ್ಬಂಧ ವಿಧಿಸಲಾಗಿದ್ದುಚಿರತೆ ಸೆರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಚರಣೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಒಂದು ಕಡೆ ಪ್ರಸ್ತುತ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಬಿವೈ ವಿಜಯೇಂದ್ರ ಅವರು ನಾನೇ ಬಿಜೆಪಿ ರಾಜ್ಯಾಧ್ಯಕ್ಷನಾಗಿ ಮುಂದುವರಿಯುತ್ತೇನೆ ಎಂದು ಹೇಳಿಕೆ ನೀಡಿದರೆ, ಮತ್ತೊಂದು ಕಡೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಬಣ ನವದೆಹಲಿಗೆ ತೆರಳಿ ಬಿಜೆಪಿ ಹೈಕಮಾಂಡ್ ಅವರನ್ನು ಭೇಟಿಯಾಗಿ ಇವರ ವಿರುದ್ಧ ದೂರು ನೀಡಿದ್ದಾರೆ. ಇದೆಲ್ಲದರ ನಡುವೆ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಶೀಘ್ರ ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆ ಕುರಿತು ಚುನಾವಣೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ಹೇಳಿಕೆ ನೀಡಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಶೀಘ್ರವೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣಾ ಪ್ರಕ್ರಿಯೆ ಶುರುವಾಗಲಿದೆ. ಚುನಾವಣಾ ನಡೆಯಿಸಿ ರಾಜ್ಯ ಬಿಜೆಪಿ ಘಟಕ ಅಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ. ಬೂತ್ ಕಮಿಟಿ ಅಧ್ಯಕ್ಷ ಸ್ಥಾನದಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೂ ಚುನಾವಣೆ ನಡೆಯಲಿದೆ. ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಯಾವುದೇ ರೀತಿಯಾದ ಗೊಂದಲ ಇಲ್ಲ. ಎಲ್ಲರೂ ಸೇರಿ ಚರ್ಚಿಸಿ ಬಿಜೆಪಿ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ ಎಂದು…

Read More

ದಕ್ಷಿಣಕನ್ನಡ : ಇತ್ತೀಚಿಗೆ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೆ ಇವೆ. ಪೊಲೀಸರು ಎಷ್ಟೇ ಕಠಿಣ ಕ್ರಮ ತೆಗೆದುಕೊಂಡರು ಸಹ ಇಂತಹ ದುಷ್ಕೃತ್ಯಗಳು ನಿಲ್ಲುತ್ತಿಲ್ಲ. ಇದೀಗ ದಕ್ಷಿಣ ಕನ್ನಡದಲ್ಲಿ ಶಾಲೆಯೊಂದರಲ್ಲಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಶಿಕ್ಷಕನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಹೌದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ವೀರಕಂಬ ವ್ಯಾಪ್ತಿಯ ಶಾಲೆಯೊಂದರ ಶಿಕ್ಷಕ ಶಾಲಾ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ ಬಗ್ಗೆ ಮಕ್ಕಳ ಸಹಾಯವಾಣಿಗೆ ದೂರು ನೀಡಿದ್ದು, ಈ ಸಂಬಂಧ ಈಗಾಗಲೇ ಶಿಕ್ಷಕನ ವಿಚಾರಣೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ್ದ ಈ ಶಿಕ್ಷಕ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಕೂಡ ಪಡೆದಿದ್ದ ಎನ್ನಲಾಗಿದೆ. ಶಾಲೆಯ 10ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಇತರ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿ ಬಂದಿದ್ದು,ಜಿಲ್ಲಾ ಮಕ್ಕಳ ರಕ್ಷಣ ಘಟಕದಿಂದ ತನಿಖೆ ಕೈಗೊಳ್ಳಲಾಗಿದೆ.

Read More

ಬೆಂಗಳೂರು : ಮದುವೆಗೆ ಒಪ್ಪದಂತಹ ಯುವತಿಗೆ ಪಾಗಲ್ ಪ್ರೇಮಿ ಒಬ್ಬ ಚಾಕು ಇರಿದು ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಜೆ.ಜೆ ನಗರದಲ್ಲಿ ನಡೆದಿದೆ. ಕಳೆದ ಮೂರು ದಿನಗಳ ಹಿಂದೆ ನಡೆದ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಚಾಕುವಿನಿಂದ ಯುವತಿಗೆ ಇರಿದ ಯುವಕನನ್ನು ಅಜೇಯ್ ಎಂದು ಗುರುತಿಸಲಾಗಿದ್ದು, ಯುವಕ ಮತ್ತು ಯುವತಿ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಮದುವೆಗೂ ಎಲ್ಲಾ ಸಿದ್ಧತೆ ನಡೆದಿತ್ತು. ಆದರೆ, ಕೊನೆ ಘಳಿಗೆಯಲ್ಲಿ ಯುವತಿ ಮದುವೆಗೆ ನಿರಾಕರಿಸಿದ್ದಾಳೆ. ಇದರಿಂದ ಕೋಪಗೊಂಡ ಪ್ರಿಯಕರ, ಯುವತಿಗೆ ಚಾಕುವಿನಿಂದ ಇರಿದಿದ್ದಾನೆ. ಗಾಯಗೊಂಡಂತಹ ಯುವತಿಯನ್ನು ತಕ್ಷಣ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಜಯನಗರ ಪೊಲೀಸರು ಆರೋಪಿ ಅಜಯ್ನನ್ನು ಅರೆಸ್ಟ್ ಮಾಡಿದ್ದು, ಜಯ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದಾರೆ.

Read More

ಶಿವಮೊಗ್ಗ : ಗುತ್ತಿಗೆದಾರರೊಬ್ಬರಿಂದ 10 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಸಾಮಾನ್ಯ ನಿಧಿ ಲೆಕ್ಕ ವಿಭಾಗದ ಕಚೇರಿ ವ್ಯವಸ್ಥಾಪಕನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮಹಾನಗರ ಪಾಲಿಕೆಯ ಸಾಮಾನ್ಯ ನಿಧಿ ಲೆಕ್ಕ ವಿಭಾಗದ ಕಚೇರಿ ವ್ಯವಸ್ಥಾಪಕ ಎಸ್‌.ಆರ್‌.ಸಿದ್ದೇಶ್‌ ಎಂದು ತಿಳಿದುಬಂದಿದೆ. ಸುನಿಲ್‌ ಕುಮಾರ್‌ ಎಂಬವರು ಮಹಾನಗರ ಪಾಲಿಕೆ ಆವರಣದ ಇಂಜಿನಿಯರ್‌ ಕಟ್ಟಡದ ಮೇಲ್ಭಾಗದಲ್ಲಿ ಶೆಡ್‌ ನಿರ್ಮಾಣಕ್ಕೆ ಗುತ್ತಿಗೆ ಪಡೆದಿದ್ದರು. 2024ರ ಡಿಸೆಂಬರ್‌ನಲ್ಲಿ ಶೆಡ್‌ ಪೂರ್ಣಗೊಂಡಿದ್ದು ಹಣ ಮಂಜೂರು ಮಾಡುವಂತೆ ಬಿಲ್‌ ಸಲ್ಲಿಸಿದ್ದರು. ಕಾಮಗಾರಿಯ ಒಟ್ಟು ಮೊತ್ತದಲ್ಲಿ 4 ಪರ್ಸೆಂಟ್‌ ಕಮಿಷನ್‌ ಹಣ ನೀಡಿದರೆ ಬಿಲ್‌ ಮಂಜೂರು ಮಾಡುವುದಾಗಿ ಸಾಮಾನ್ಯ ನಿಧಿ ಲೆಕ್ಕ ವಿಭಾಗದ ಕಚೇರಿ ವ್ಯವಸ್ಥಾಪಕ ಸಿದ್ದೇಶ್‌ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ. 11 ರೂ. ಹಣಕ್ಕೆ ಸಿದ್ದೇಶ್‌ ಬೇಡಿಕೆ ಇಟ್ಟಿದ್ದು, ಗುರುವಾರ 10 ಸಾವಿರ ರೂ. ಹಣ ಪಡೆಯುವ ಸಂದರ್ಭ ದಾಳಿ ನಡೆಸಿ ಬಂಧಿಸಲಾಗಿದೆ. ಲೋಕಾಯುಕ್ತ ಎಸ್‌ಪಿ ಮಂಜುನಾಥ್‌ ಚೌಧರಿ ಮಾರ್ಗದರ್ಶನದಲ್ಲಿ ದಾಳಿ ನಡೆದಿದೆ. ಸದ್ಯ ಸಿದ್ದೇಶ್…

Read More