Author: kannadanewsnow05

ಬೆಳಗಾವಿ : ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆ ಹಣ ಮಹಿಳೆಯರ ಖಾತೆಗೆ ವರ್ಗಾವಣೆ ಅಥವಾ ಮಹಿಳೆಯರ ಖಾತೆಗೆ ಜಮೆ ಆಗುವುದು ವಿಳಂಬವಾಗುತ್ತಲ್ಲೇ ಇದ್ದು. ಇದೀಗ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಮುಂದಿನ 8 ದಿನಗಳಲ್ಲಿ ಯಜಮಾನಿಯರ ಖಾತೆಗೆ ಜಮೆ ಆಗಲಿದೆ ಎಂದು ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದರು. ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಸ್ತೆ ಅಪಘಾತದಿಂದ ನಾನು ವಿಶ್ರಂತಿ ಪಡೆಯುತ್ತಿದ್ದೆ. ವಿಶ್ರಾಂತಿಯಲ್ಲಿದ್ದ ಕಾರಣಕ್ಕೆ ಹಣ ವಿಳಂಬವಾಗಿದೆ. ಇನ್ನೊಂದು 8 ದಿನಗಳಲ್ಲಿ ಹಣ ಮಹಿಳೆಯರ ಖಾತೆಗೆ ಜಮೆಯಾಗಲಿದೆ ಎಂದು ಹೇಳಿದ್ದಾರೆ. ಕೆಲವು ತಾಂತ್ರಿಕ ದೋಷಗಳಿಂದ ಮಹಿಳೆಯರ ಖಾತೆಗೆ ಕಳೆದ ಮೂರು ತಿಂಗಳಿಂದ ಹಣ ಜಮೆಯಾಗಿಲ್ಲ. ಆದರೆ ಮುಂದಿನ 8 ದಿನಗಳಲ್ಲಿ ಗೃಹಲಕ್ಷ್ಮಿ  ಹಣ  ಜಮೆ ಆಗುತ್ತದೆ ಎಂದು ಸ್ಪಷ್ಟನೆ ನೀಡಿದರು. ಹೊಸ ಮಾದರಿಯಲ್ಲಿ ಗೃಹ ಲಕ್ಷ್ಮಿಯ ಹಣ ಜಮಾ ಆಗುತ್ತಿದೆ. ಬೆಂಗಳೂರು ಸುತ್ತಮುತ್ತಲಿನ ೫ ತಾಲ್ಲೂಕು ಪಂಚಾಯಿತಿಗಳಿಗೆ ಹಣ ನೀಡಿದ್ದೇವೆ. ಅಲ್ಲಿಂದ ಸಿಡಿಪಿಒ…

Read More

ದಕ್ಷಿಣಕನ್ನಡ : ಹೆರಿಗೆ ಆಗಿರಲಿ ಅಥವಾ ಇನ್ಯಾವುದೋ ಆಪರೇಷನ್ ಆಗಿರಲಿ ಶಸ್ತ್ರಚಿಕಿತ್ಸೆ ವೇಳೆ ವೈದ್ಯರು ರೋಗಿಗಳ ಹೊಟ್ಟೆಯಲ್ಲಿ ಕತ್ತರಿ ಸೇರಿದಂತೆ ಹಲವು ವಸ್ತುಗಳನ್ನು ಮರೆತು ಬಿಟ್ಟಿರುವ ದೃಶ್ಯವನ್ನು ಸಿನೆಮಾದಲ್ಲಿ ನೋಡಿರುತ್ತೇವೆ. ಆದರೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಮಹಿಳೆಯೊಬ್ಬರಿಗೆ ಸಿಸೇರಿಯನ್ ಬಳಿಕ ಸರ್ಜಿಕಲ್ ಬಟ್ಟೆ ಹೊಟ್ಟೆಯೊಳಗಿಟ್ಟು ವೈದ್ಯರು ಹೊಲಿಗೆ ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಹೌದು 2024ರ ನವೆಂಬರ್ 27ರಂದು ಪುತ್ತೂರಿನ ಖಾಸಗಿ ಆಸ್ಪತ್ರೆಗೆ, ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಬಂಗಾರಡ್ಕದ ಶರಣ್ಯ ಲಕ್ಷ್ಮೀ ಎಂಬವರು ಹೆರಿಗೆಗಾಗಿ ದಾಖಲಾಗಿದ್ದರು. ಅವರಿಗೆ ಸಿಸೇರಿಯನ್ ಶಸ್ತ್ರ ಚಿಕಿತ್ಸೆ ಮೂಲಕ ಹೆರಿಗೆ ಮಾಡಿ, ಡಿಸೆಂಬರ್ 2 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು.ಬಳಿಕ ಮಹಿಳೆಗ ವಿಪರೀತ ಜ್ವರದಿಂದ ಬಳಲಿದ್ದರು. ಈ ಬಗ್ಗೆ ಮಹಿಳೆಯ ಕುಟುಂಬದವರು ಹೆರಿಗೆ ಮಾಡಿಸಿದ ವೈದ್ಯ ಡಾ ಅನಿಲ್ ಬಳಿ ವಿಚಾರಿಸಿದ್ದರು. ಜ್ವರದ ಔಷಧಿ ನೀಡುವಂತೆ ವೈದ್ಯರು ಸೂಚಿಸಿದ್ದರು. ಅದಾದ ನಂತರ ಬಾಣಂತಿಯ ಸಮಸ್ಯೆ ಕಡಿಮೆಯೇ ಆಗದಿರುವುದರಿಂದ ಬಾಣಂತಿಯ ಕುಟುಂಬದವರು ಮಂಗಳೂರಿನ ವೈದ್ಯರನ್ನು ಸಂಪರ್ಕಿಸಿದ್ದರು. ಅಲ್ಲಿ…

Read More

ಕೊಪ್ಪಳ : ಬಲ್ಡೊಟ ಫ್ಯಾಕ್ಟರಿ ಸ್ಥಾಪನೆ ವಿರೋಧಿಸಿ ಇಂದು ಕೊಪ್ಪಳ ಬಂದ್ ಮಾಡಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ವ್ಯಾಪಾರಸ್ಥರು ವ್ಯಾಪಾರ ವಹಿವಾಟು ಸಂಪೂರ್ಣ ಬಂದ್ ಮಾಡಿ ಇದೀಗ ಬೆಂಬಲ ನೀಡಲಾಗಿದೆ. ಸ್ವಯಂ ಪ್ರೇರಣೆಯಿಂದ ವ್ಯಾಪಾರಿಗಳು ತಮ್ಮ ವ್ಯಾಪಾರಗಳನ್ನು ಬಂದ್ ಮಾಡಿ ಬೆಂಬಲ ಸೂಚಿಸಿದ್ದಾರೆ. ಪ್ರತಿಭಟನೆಯಲ್ಲಿ ಕನ್ನಡ ಪರ ಸಂಘಟನೆಗಳು, ರೈತಪರ ಸಂಘಟನೆಗಳು ಹಾಗೂ ವ್ಯಾಪಾರಸ್ಥರಿಂದ ಪ್ರತಿಭಟನೆ ಬೃಹತ್ ಮೆರವಣಿಗೆ ನಡೆಯುತ್ತಿದೆ. ಕೊಪ್ಪಳದಲ್ಲಿ ಬಲ್ದೋಟಾ ಫ್ಯಾಕ್ಟರಿ ಆರಂಭಕ್ಕೆ ತಯಾರಿ ಮಾಡಲಾಗಿದ್ದು, ಬೃಹತ್ ಸ್ಟೀಲ್ ಮತ್ತು ಪವರ್ ಪ್ಲಾಂಟ್ ಕಂಪನಿ ಯಾಗಿದೆ.ಬಲ್ದೋಟಾ 54,000 ಕೋಟಿ ಬಂಡವಾಳ ಹೂಡುತ್ತಿರುವ ಈ ಸಂಸ್ಥೆ ವಾರ್ಷಿಕ 10.50 ಮಿಲಿಯನ್ ಟನ್ ಕಬ್ಬಿಣ ಉತ್ಪಾದನೆ ಘಟಕ ಸ್ಥಾಪನೆ ಮಾಡುತ್ತಿದೆ. ಬಲ್ದೋಟಾ ಫ್ಯಾಕ್ಟರಿ ಆರಂಭದಿಂದ ಜನರಿಗೆ ತೊಂದರೆ ಆಗುತ್ತಿದೆ ಎಂದು ಆರೋಪ ಕೇಳಿ ಬಂದಿದೆ. ಜನ ಕ್ಯಾನ್ಸರ್ ಹಾಗೂ ಹಲವಾರು ರೋಗಗಳಿಗೆ ತುತ್ತಾಗುತ್ತಾರೆ ಎಂದು ಕಿಡಿ ಕಾರಲಾಗಿದೆ.ಕೊಪ್ಪಳ ತಾಲೂಕಿನಲ್ಲಿ 200ಕ್ಕೂ ಹೆಚ್ಚು ವಿವಿಧ ಫ್ಯಾಕ್ಟರಿಗಳಿವೆ. ಈಗಾಗಲೇ ಫ್ಯಾಕ್ಟರಿಗಳ ಮಾಲಿನ್ಯದಿಂದ ಬದುಕು ದುಸ್ತರವಾಗಿದೆ…

Read More

ಬೆಳಗಾವಿ: ಕನ್ನಡಿಗರ ಮೇಲೆ ಮರಾಠಿ ಭಾಷಿಕರ ಪುಂಡಾಟಕ್ಕೆ ಕಡಿವಾಣ ಹಾಕಬೇಕಿದ್ದ ಬೆಳಗಾವಿ ಜಿಲ್ಲಾಧಿಕಾರಿ ಮರಾಠಿ ಪ್ರೇಮ ಮೆರೆಯಲು ಮುಂದಾಗಿದ್ದು ಸದ್ಯ ಇವರ ನಡೆ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ. ಮರಾಠಿಗರ ಬಹುದಿನಗಳ ಬೇಡಿಕೆ ಯಾಗಿದ್ದ ಮರಾಠಿ ಭಾಷಿಕ ಪ್ರದೇಶದಲ್ಲಿ ಮರಾಠಿ ಭಾಷೆಯಲ್ಲೇ ದಾಖಲೆ ನೀಡಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮುಂದಾಗಿದ್ದಾರೆ. ಸದ್ಯ ಇವರ ನಡೆಗೆ ಕನ್ನಡಪರ ಸಂಘಟನೆ ಸದಸ್ಯರು ಸೇರಿದಂತೆ ಗಡಿ ಭಾಗದ ಕನ್ನಡಿಗರು ಜಿಲ್ಲಾಧಿಕಾರಿ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಎಂಇಎಸ್ ಮುಖಂಡರ ಜತೆ ರಾಷ್ಟ್ರೀಯ ಖ್ಯಾತರ ಆಯೋಗದ ಸದಸ್ಯರು ಜಿಲ್ಲಾಧಿಕಾರಿಯನ್ನು ಭೇಟಿಯಾಗಿ ಮರಾಠಿ ಭಾಷೆಯಲ್ಲೇ ದಾಖಲೆ ನೀಡುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ಜಿಲ್ಲಾಧಿಕಾರಿ ಸಮ್ಮತಿ ಸೂಚಿಸಿದ್ದಾರೆ ಎಂದು ಮರಾಠಿ ದಿನಪತ್ರಿಕೆಗಳಲ್ಲಿ ವರದಿಯಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಕನ್ನಡಪರ ಹೋರಾಟಗಾರ ಅಶೋಕ್ ಚಂದರಗಿ, ಮರಾಠಿ ಭಾಷೆಯಲ್ಲಿ ದಾಖಲೆ ನೀಡುವ ಅಧಿಕಾರ ಕೇವಲ ಸಚಿವ ಸಂಪುಟ ನಿರ್ಧಾರದಿಂದ ಆಗಬೇಕು. ಆದರೆ ಜಿಲ್ಲಾಧಿಕಾರಿ ನನಗೆ ಅಧಿಕಾರ ಇದೆ ಎಂದು…

Read More

ಬೆಂಗಳೂರು : ಬೆಂಗಳೂರಿನಲ್ಲಿ ನೂರಕ್ಕೂ ಹೆಚ್ಚು ಶಾಲಾ ವಾಹನಗಳನ್ನು ಇದೀಗ RTO ಅಧಿಕಾರಿಗಳು ಸೀಜ್ ಮಾಡಿದ್ದಾರೆ.ಖಾಸಗಿ ವಾಹನಗಳಿಗೆ ಬಿಸಿ ಮುಟ್ಟಿಸಿದ ಆರ್‌ಟಿಓ ಅಧಿಕಾರಿಗಳು ಬೆಂಗಳೂರಿನ ಪ್ರಮುಖ ಶಾಲಾ ಕಾಲೇಜು ವಾಹನಗಳನ್ನು ಇದೀಗ ಸೀಜ್ ಮಾಡಿದ್ದಾರೆ. ಬೆಂಗಳೂರಿನಲ್ಲಿ ಆರ್‌ಟಿಓ ಅಧಿಕಾರಿಗಳಿಂದ ಈ ಒಂದು ಭರ್ಜರಿ ಕಾರ್ಯಾಚರಣೆ ನಡೆದಿದೆ. ಮಕ್ಕಳನ್ನು ಚಾಲಕರು ಬೇಕಾಬಿಟ್ಟಿಯಾಗಿ ಕೂಡಿಸಿಕೊಂಡು ಹೋಗುತ್ತಿದ್ದರು. ವಾಹನಗಳ ಪರವಾನಿಗೆ ಚಾಲಕರು ಡಿಎಲ್ ಇಲ್ಲದೆ ಸಂಚರಿಸುತ್ತಿದ್ದರು. ನಿಯಮ ಪಾಲಿಸದ ಶಾಲಾ ವಾಹನಗಳನ್ನು ಆರ್ ಟಿ ಓ ಅಧಿಕಾರಿಗಳು ಇದೀಗ ಸೀಜ್ ಮಾಡಿದ್ದಾರೆ. ಶಾಲಾ ವಾಹನಗಳು ಶಾಲೆಯ ಹೆಸರಿನಲ್ಲಿ ನೋಂದಣಿ ಆಗಿರಬೇಕು ಆದರೆ ಸಾಕಷ್ಟು ವಾಹನಗಳು ಯಾರದೋ ಹೆಸರಿನಲ್ಲಿ ನೋಂದಣಿ ಆಗಿವೆ. ಹಾಗಾಗಿ ಆರ್ ಟಿ ಓ ಅಧಿಕಾರಿಗಳು ಇದೀಗ ನೂರಕ್ಕೂ ಹೆಚ್ಚು ಶಾಲಾ ವಾಹನಗಳನ್ನು ಸೀಸ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಮಾರ್ಚ್ 7 ರಂದು ವಿಚಾರಣೆ ಮುಂದೂಡಿತು. ಈ ವೇಳೆ ಅಂತಿಮ ವರದಿ ಕಾಪಿ ನೀಡಲು ದೂರುದಾರ ಸ್ನೇಹಮಯಿ ಕೃಷ್ಣ ಈ ವೇಳೆ ನ್ಯಾಯಾಲಯಕ್ಕೆ ಮನವಿ ಮಾಡಿದರು. ತಕರಾರು ಇದ್ದರೆ ಆಕ್ಷೇಪಣೆ ಸಲ್ಲಿಸುವಂತೆ ಇದೆ ವೇಳೆ ಕೋರ್ಟ್ ಸ್ನೇಹಮಯಿ ಕೃಷ್ಣಗೆ ಕೋರ್ಟ್ ಸೂಚಿಸಿತು. ನಮಗೆ ಲೋಕಾಯುಕ್ತ ತನಿಖೆಯ ಅಂತಿಮ ವರದಿಯ ಕಾಪಿ ನೀಡಿ ನಂತರ ತಕರಾರು ಅರ್ಜಿ ಸಲ್ಲಿಸುವುದಾಗಿ ಸ್ನೇಹಮಯಿ ಕೃಷ್ಣ ತಿಳಿಸಿದರು. ಈ ವೇಳೆ ಅಂತಿಮ ವರದಿ ನೀಡಲು ಲೋಕಾಯುಕ್ತ ಅಧಿಕಾರಿಗಳಿಗೆ ಜನಪ್ರತಿನಿಧಿಗಳ ಕೋರ್ಟ್ ಸೂಚನೆ ನೀಡಿ, ಮಾರ್ಚ್ 7 ರಂದು ವಿಚಾರಣೆ ಮುಂದೂಡಿ ನ್ಯಾಯಾಲಯ ಆದೇಶ ನೀಡಿತು. ಹಾಗಾಗಿ ಲೋಕಾಯುಕ್ತ ಅಧಿಕಾರಿಗಳು ಇಂದು ಸ್ನೇಹಮಯಿ ಕೃಷ್ಣಗೆ ಅಂತಿಮ ವರದಿಯ ಕಾಪಿ ನೀಡಲಿದ್ದಾರೆ.

Read More

ರಾಜಸ್ತಾನ : ರಾಜಸ್ಥಾನದಲ್ಲಿ ಮನಕಲಕುವ ಘಟನೆ ನಡೆದಿದ್ದು, 32 ಅಡಿ ಆಳದ ಕೊಳವೆ ಬಾವಿಗೆ ಬಿದ್ದ 5 ವರ್ಷದ ಬಾಲಕ ಮೃತಪಟ್ಟಿದ್ದಾನೆ.ಮೃತ ಬಾಲಕನನ್ನು ಪ್ರಲ್ಹಾದ್ ಹೋಗಿ ಅಂತ ಗುರುತಿಸಲಾಗಿದೆ. ಹೌದು ರಾಜಸ್ಥಾನದ ಝಾಲಾವರ್ ಜಿಲ್ಲೆಯ ಕೃಷಿ ಜಮೀನಿನಲ್ಲಿ ಭಾನುವಾರ 5 ವರ್ಷದ ಬಾಲಕ 32 ಅಡಿ ಆಳದ ಕೊಳವೆಬಾವಿಗೆ ಬಿದ್ದಿದ್ದ, ಕೂಡಲೇ ಅಧಿಕಾರಿಗಳ ತಂಡ ರಕ್ಷಣಾ ಕಾರ್ಯಾಚರಣೆ ಆರಂಭಿಸಿತ್ತು. NDRF ಹಾಗೂ SDRF ನ ನಿರಂತರ 14 ಗಂಟೆಗಳ ಕಾರ್ಯಾಚರಣೆ ನಡೆಸಲಾಗಿತ್ತು. ಆದ್ರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಲಕ ಸಾವನಪ್ಪಿದ್ದಾನೆ. ಪೊಲೀಸರ ಪ್ರಕಾರ, ಮಧ್ಯಾಹ್ನ 1.15 ರ ಸುಮಾರಿಗೆ ಪ್ರಹ್ಲಾದ್ ಮೈದಾನದಲ್ಲಿ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದೆ.ಪೋಷಕರು ಹೊಲದ ಇನ್ನೊಂದು ಬದಿಯಲ್ಲಿ ಕೆಲವು ಕೆಲಸಗಳಲ್ಲಿ ನಿರತರಾಗಿದ್ದಾಗ ಅವನು ಬೋರ್ವೆಲ್ ಬಳಿಯ ಕಲ್ಲಿನ ಚಪ್ಪಡಿ ಮೇಲೆ ಕುಳಿತು ಅದರಲ್ಲಿ ಜಾರಿ ಬಿದ್ದಿದ್ದಾನೆ ಎಂದು ವರದಿಯಾಗಿದೆ.

Read More

ಬೆಳಗಾವಿ : ಕನ್ನಡ ಮಾತಾಡು ಎಂದಿದ್ದಕ್ಕೆ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ನಮ್ಮ ಕಂಡಕ್ಟರ್​ ಮಹಾದೇವ ಹುಕ್ಕೇರಿ ಮೇಲೆ ಬೇಕು ಅಂತಾನೇ ಪೋಕ್ಸೋ ಕೇಸ್​ ಕೊಟ್ಟಿದ್ದಾರೆ. ಅವತ್ತು ಬಸ್​​ನಲ್ಲಿ ಒಬ್ಬರು – ಇಬ್ಬರು ಇರಲಿಲ್ಲ. 90 ಜನ ಪ್ರಯಾಣಿಸುತ್ತಿದ್ದರು. ನೋಡೋಣ ಆ ಬಗ್ಗೆ ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ ನೀಡಿದ್ದಾರೆ. ಬಿಮ್ಸ್ ಆಸ್ಪತ್ರೆ ಬಳಿ ಸಚಿವ ರಾಮಲಿಂಗ ರೆಡ್ಡಿ ಹೇಳಿಕೆ ನೀಡಿದ್ದು, ಕಂಡಕ್ಟರ್ ಆರೋಗ್ಯ ಸ್ಥಿತಿ ಚೆನ್ನಾಗಿದ್ದು, ಎರಡು ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ಅವರ ವಿರುದ್ಧ ಪೋಕ್ಸೋ ದೂರು ದಾಖಲಾಗಿದ್ದಕ್ಕೆ ಅವರು ಆತಂಕಗೊಂಡಿದ್ದಾರೆ. ಉದ್ದೇಶಪೂರ್ವಕವಾಗಿ ಕೇಸ್ ಕೊಟ್ಟಿದ್ದಾರೆ ನಾನು ಪ್ರಕರಣದ ಬಗ್ಗೆ ಗೃಹ ಸಚಿವರ ಜೊತೆಗೆ ಮಾತನಾಡುತ್ತೇನೆ. ಕಂಡಕ್ಟರ್ ಮಹದೇವಪ್ಪ ಜೊತೆಗೆ ಸರ್ಕಾರ ಹಾಗೂ ರಾಜ್ಯದ ಜನ ಇದ್ದಾರೆ MES ಗುಂಡಾಗಿರಿಗೆ ಬೆಂಬಲ ನೀಡಿದರೆ ಕೇಸ್ ದಾಖಲಿಸುತ್ತೇವೆ ಎಂದು ತಿಳಿಸಿದರು. ಅವತ್ತು ಇಬ್ಬರು ಹುಡುಗ – ಹುಡುಗಿ ಬಸ್​ನಲ್ಲಿ ಹತ್ತಿದ್ದರು. ಇಬ್ಬರೂ…

Read More

ಮಂಗಳೂರು : ಇತ್ತೀಚಿಗೆ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕೊಲೆ ಆರೋಪಿ ನಟ ದರ್ಶನ್ ಗೆ ರಾಜಾತಿಥ್ಯ ನೀಡುತ್ತಿರುವ ವಿಷಯ ಬಯಲಾಗಿತ್ತು. ಬಳಿಕ ಅಧಿಕಾರಿಗಳು ಅಲ್ಲಿ ತನಿಖೆ ನಡೆಸಿದ್ದರು. ಇದೀಗ ಮಂಗಳೂರು ಜೈಲಿನ ಒಳಗೆ ಗಾಂಜಾ ಸಪ್ಲೈ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ. ಹೌದು ಮಂಗಳೂರು ಕಾರ್ಯಾಗೃಹಕ್ಕೆ ಗಾಂಜಾ ಸಪ್ಲೈ ಆಗುತ್ತಿದೆ. ಹಾಡಹಗಲೇ ಜೈಲು ಒಳಗೆ ಪುಂಡರು ಗಾಜಾ ಎಸೆಯೋ ದೃಶ್ಯ ಇದೀಗ ಸೆರೆಯಾಗಿದೆ.ಕಾರಿನ ಡ್ಯಾಶ್ ಕ್ಯಾಮ್ ನಲ್ಲಿಯೇ ಈ ಒಂದು ಕೃತ್ಯ ಸೆರೆಯಾಗಿದೆ. ರಸ್ತೆಯಿಂದ ಜೈಲು ಕಾಂಪೌಂಡ್ ಒಳಗೆ ಪುಂಡರು ಗಾಂಜಾ ಎಸೆದಿರುವ ದೃಶ್ಯ ಸೆರೆಯಾಗಿದೆ. ಸ್ಕೂಟರ್ ನಲ್ಲಿ ಬಂದು ಪುಂಡರು ಗಾಜಾ ಎಸೆದು ಅಲ್ಲಿಂದ ಪರಾರಿ ಆಗಿರುವ ಘಟನೆ ನಡೆದಿದೆ.ಮಾಜಿ ಮೇಯರ್ ಕವಿತಾ ಸನಿಲ್ ಕಾರಿನ ಕ್ಯಾಮೆರಾದಲ್ಲಿ ಈ ಒಂದು ದೃಶ್ಯ ಸರಿಯಾಗಿದೆ ಎನ್ನಲಾಗಿದೆ.ರಸ್ತೆಯಿಂದ ಜೈಲು ಕಾಂಪೌಂಡ್ ಒಳಗೆ ಪುಂಡರು ಗಾಂಜಾ ಎಸೆದಿದ್ದಾರೆ. ನಂಬರ್ ಪ್ಲೇಟ್ ಇಲ್ಲದ ಸ್ಕೂಟರ್ ನಲ್ಲಿ ಬಂದು ಪುಂಡರು ಗಾಜಾ ಎಸೆಯದು…

Read More

ಹಾವೇರಿ : ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲಾಗಿ ಮೃತಪಟ್ಟಿರುವ ಘೋರ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಅತ್ತಿಗೇರಿಯಲ್ಲಿ ಈ ಒಂದು ಘಟನೆ ನಡೆದಿದೆ. ಮೃತ ಬಾಲಕರನ್ನು ಪ್ರಜ್ವಲ್ ದೇವರಮನಿ (15) ಸನತ್ ರೆಡ್ಡಿ (14) ಮೃತ ಬಾಲಕರು ಎಂದು ತಿಳಿದು ಬಂದಿದೆ. ಕೆರೆಯಲ್ಲಿ ಈಗಾಗಲೇ ಪ್ರಜ್ವಲ್ ದೇವರಮನಿ ಎನ್ನುವ ಬಾಲಕನ ಮದುವೆಯಾಗಿದ್ದು ಇನ್ನೂ ಸನತ್ ಎನ್ನುವ ಬಾಲಕನ ಮರ್ತದೇಹಕ್ಕಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ನಡೆದಿದೆ.

Read More