Author: kannadanewsnow05

ಕಲಬುರ್ಗಿ : ರಾಜ್ಯದಲ್ಲಿ ಸೆಪ್ಟೆಂಬರ್ 22 ರಿಂದ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಆರಂಭವಾಗಿದ್ದು, ಆದರೆ ಇದುವರೆಗೂ ಮೆರವಣಿಗೆಯಷ್ಟೇ ಜಾತಿಗಣತಿ ಸಮೀಕ್ಷೆ ನಡೆದಿದೆ. ಅಲ್ಲದೆ ತಾಂತ್ರಿಕ ಸಮಸ್ಯೆ ಹಾಗೂ ಸರ್ವ ಸಮಸ್ಯೆಯಿಂದ ಜಾತಿಗಣತಿ ಸಮೀಕ್ಷೆ ಮಾಡಲು ಶಿಕ್ಷಕರು ಪರದಾಟ ನಡೆಸುತ್ತಿದ್ದು, ಇದೀಗ ಜಾತಿಗಣತಿಯನ್ನು ಮುಂದೂಡಬೇಕು ಎಂದು ಶಿಕ್ಷಕರು ಅಕ್ರೋಶ ಹೊರಹಾಕಿದ್ದಾರೆ. ಕಲ್ಬುರ್ಗಿಯಲ್ಲಿ ಜಾತಿಗಣತಿಯನ್ನು ತಕ್ಷಣವೇ ಮುಂದೊಡಬೇಕು ಎಂದು ನೂರಾರು ಶಿಕ್ಷಕರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ ಸಮೀಕ್ಷೆ ಬಿಟ್ಟು ತಾಲೂಕು ಕಚೇರಿಗೆ ಶಿಕ್ಷಕರು ಬಂದಿದ್ದಾರೆ ತಾಂತ್ರಿಕ ದೋಷದಿಂದ ಸರ್ವೆ ಆಗುತ್ತಿಲ್ಲ ದಿನಾಲು 80 ರಿಂದ 90 ಕಿಲೋಮೀಟರ್ ದೂರದಿಂದ ನಾವು ಬರುತ್ತೇವೆ ದಿನಪೂರ್ತಿ ಪಡೆದರು ಒಂದೇ ಒಂದು ಸರ್ವೇ ಆಗುತ್ತಿಲ್ಲ ಮೊಬೈಲ್ ಆಪ್ ನಲ್ಲಿ ಬಹಳಷ್ಟು ಸಮಸ್ಯೆಗಳು ಇವೆ. ಸಮೀಕ್ಷೆ ಮಾಡಲು ನಮಗೆ ಸೂಕ್ತ ತರಬೇಕು ಸಹ ನೀಡಿಲ್ಲ ಗಣತಿ ಮಾಡದಿದ್ದರೆ ಸಸ್ಪೆಂಡ್ ಮಾಡುವ ಬೆದರಿಕೆ ಹಾಕುತ್ತಾರೆ ಹೀಗಾದರೆ ನಾವು ಕೆಲಸ ಮಾಡೋದು ಹೇಗೆ ಅಂತ ಗರಂ ಆಗಿದ್ದಾರೆ.

Read More

ಬೆಂಗಳೂರು : ಪದ್ಮಶ್ರೀ ಪದ್ಮಭೂಷಣ ಪ್ರಶಸ್ತಿ ಪಡೆದ ಕನ್ನಡದ ಹಿರಿಯ ಖ್ಯಾತ ಸಾಹಿತಿ ಎಸ್ಎಲ್ ಭೈರಪ್ಪ (94) ಇದರ ರಾಗಿದ್ದು ಇದೀಗ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದು ಸಿಎಂ ಸಿದ್ದರಾಮಯ್ಯ ಅವರು ಎಸ್ಎಲ್ ಭೈರಪ್ಪ ಅವರ ಅಂತಿಮ ದರ್ಶನ ಪಡೆದರು. ಬಳಿಕ ಎಸ್ ಎಲ್ ಭೈರಪ್ಪ ಅವರ ಸ್ಮಾರಕ ನಿರ್ಮಾಣ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು. ಎಸ್ ಎಲ್ ಬೈರಪ್ಪ ಅವರ ಸ್ಮಾರಕ ನಿರ್ಮಾಣ ಮಾಡಬೇಕು ಎಂದು ವಿಪಕ್ಷ ನಾಯಕ ಆರ್ ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸೇರಿದಂತೆ ಹಲವರು ಆಗ್ರಹಿಸಿದ್ದರು. ಇದೀಗ ಸಾಹಿತಿ ಎಸ್ ಎಲ್ ಭೈರಪ್ಪ ಅವರ ಸ್ಮಾರಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಸಿಎಂ ಸಿದ್ದರಾಮಯ್ಯ ಸಹ ಎಸ್ ಎಲ್ ಭೈರಪ್ಪ ಅವರ ಸ್ಮಾರಕ ನಿರ್ಮಾಣ ಮಾಡಲಾಗುತ್ತದೆ ಎಂದು ಭೈರಪ್ಪ ಅವರ ಅಂತಿಮ ದರ್ಶನ ಪಡೆದ ಬಳಿಕ ಘೋಷಣೆ ಮಾಡಿದರು. ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ…

Read More

ಬೆಂಗಳೂರು : ಧರ್ಮಸ್ಥಳ ಪ್ರಕರಣದ ತನಿಖೆಗೆ ಮತ್ತಷ್ಟು ಚುರುಕು ಸಿಕ್ಕಿದ್ದು, ಇದೀಗ ಗೃಹ ಸಚಿವ ಜಿ ಪರಮೇಶ್ವರ್ ಅವರನ್ನು ಎಸ್ಐಟಿ ಮುಖ್ಯಸ್ಥ ಪ್ರಣಬ್ ಮೋಹಂತಿ ಭೇಟಿಯಾಗಿದ್ದಾರೆ. ಎಸ್ ಐ ಟಿ ತನಿಖಾ ಪ್ರಗತಿಯ ಬಗ್ಗೆ ಗೃಹ ಸಚಿವರ ಜೊತೆಗೆ ಪ್ರಣಬ್ ಮೋಹಂತಿ ಚರ್ಚಿಸಿದ್ದಾರೆ. ಬೆಂಗಳೂರಿನ ವಿಧಾನಸೌಧದಲ್ಲಿ ಎಸ್ಐಟಿ ಮುಖ್ಯಸ್ಥ ಪ್ರಣಬ್ ಮಹಾತೆ ಗೃಹ ಸಚಿವರ ಕಚೇರಿಯಲ್ಲಿ ಭೇಟಿಯಾಗಿ ಎಸ್ಐಟಿ ತನಿಖಾ ಪ್ರಗತಿಯ ಬಗ್ಗೆ ಚರ್ಚಿಸಿದರು ಧರ್ಮಸ್ಥಳ ಪ್ರಗತಿ ಕುರಿತು ಗೃಹ ಸಚಿವರಿಗೆ ಪ್ರಣಬ್ ಭವಂತಿ ಮಾಹಿತಿ ನೀಡಿದ್ದಾರೆ. ಇನ್ನು ನ್ಯಾಯಾಧೀಶರ ಮುಂದೆ ಆರೋಪಿ ಚಿನ್ನಯನನ್ನು ಅಧಿಕಾರಿಗಳು ಹಾಜರುಪಡಿಸಿದ್ದು ಬಿಎನ್ಎನ್ಎಸ್ 183 ಅಡಿ ಚಿನ್ನಯ್ಯ ಹೇಳಿಕೆ ದಾಖಲಿಸಲಿದ್ದಾನೆ.

Read More

ಬೆಂಗಳೂರು : ಪದ್ಮಶ್ರೀ, ಪದ್ಮಭೂಷಣ ಪ್ರಶಸ್ತಿ ಪಡೆದ ಕನ್ನಡದ ಹಿರಿಯ ಖ್ಯಾತ ಸಾಹಿತಿ ಎಸ್ಎಲ್ ಭೈರಪ್ಪ (94) ನಿಧನರಾಗಿದ್ದು ಇದೀಗ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದು ಸಿಎಂ ಸಿದ್ದರಾಮಯ್ಯ ಅವರು ಎಸ್ಎಲ್ ಭೈರಪ್ಪ ಅವರ ಅಂತಿಮ ದರ್ಶನ ಪಡೆದರು. ನಿನ್ನೆ ರಾಜಾಜಿನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಎಸ್ಎಲ್ ಭೈರಪ್ಪ ನಿಧನರಾಗಿದರು. ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ವೇಳೆ ಸಿಎಂ ಸಿದ್ದರಾಮಯ್ಯ, ಸಚಿವರಾದ ಶಿವರಾಜ ತಂಗಡಗಿ ಸೇರಿದಂತೆ ಹಲವು ಗಣ್ಯರು ಎಸ್ ಎಲ್ ಭೈರಪ್ಪ ಅವರ ಅಂತಿಮ ದರ್ಶನ ಪಡೆದರು. ಬಳಿಕ ಕುಟುಂಬಸ್ಥರಿಗೆ ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿದರು. ಇಂದು ಸಂಜೆ ಮೈಸೂರಿಗೆ ಭೈರಪ್ಪ ಅವರ ಪಾರ್ಥಿವ ಶರೀರ ಸ್ಥಳಾಂತರಿಸಲಾಗುತ್ತದೆ. ನಾಳೆ ಮೈಸೂರು ಬೆಟ್ಟದ ತಪ್ಪಲಿನ ರುದ್ರ ಭೂಮಿಯಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಎಸ್ಎಲ್ ಭೈರಪ್ಪ ಅವರ ಅಂತ್ಯಕ್ರಿಯೆ ನೆರವೇರಲಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ದೈಹಿಕ ಶಿಕ್ಷಕನಿಂದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಮಕ್ಕಳ ಆಯೋಗದಿಂದ ದೈಹಿಕ ಶಿಕ್ಷಕ ಮ್ಯಾಥ್ಯೂ ವಿರುದ್ಧ ಇದೀಗ ದೂರು ದಾಖಲಾಗಿದೆ ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಮ್ಯಾಥ್ಯೂ ದೈಹಿಕ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ. ಆತನ ವಿರುದ್ಧ ಇದೀಗ ದೂರು ದಾಖಲಾಗಿದೆ ಎಂದು ರಾಜ್ಯ ಮಕ್ಕಳ ಆಯೋಗ ಸದಸ್ಯ ಶಶಿಧರ್ ಕೋಸಂಬಿ ಮಾಹಿತಿ ನೀಡಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಅವರು, ಕ್ರಿಕೆಟ್ ಕೋಚಿಂಗ್ ಗೆ ಬರುತ್ತಿದ್ದ ಮಕ್ಕಳಿಗು ಸಹ ಆತ ನಗ್ನನಾಗಿ ವಿಡಿಯೋ ಕರೆ ಮಾಡಿದ್ದು ಕಂಡು ಬಂದಿದೆ. ಆರೋಪಿ ಮ್ಯಾಥ್ಯೂ ಮೊಬೈಲ್ ಅನ್ನು ವಶಕ್ಕೆ ಪಡೆಯಬೇಕಿದೆ. ಮಕ್ಕಳ ಮೇಲೆ ಏನಾದರೂ ಲೈಂಗಿಕ ದೌರ್ಜನ್ಯ ವಸಗಿದ್ದರೆ ಮಕ್ಕಳ ಆಯೋಗದಲ್ಲಿ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ. ಈ ಕುರಿತು ಕೋಣನಕುಂಟೆ ಪೊಲೀಸರೊಂದಿಗೆ ಸಮಾನಚಿಸುತ್ತೇವೆ ಎಂದು ತಿಳಿಸಿದರು. ಪ್ರಕರಣ ಹಿನ್ನೆಲೆ ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ದೈಹಿಕ ಶಿಕ್ಷಕ ಹಾಗೂ ಕ್ರಿಕೆಟ್ ಕೋಚ್ ಆಗಿ ಮ್ಯಾಚ್ ಕೆಲಸ ಮಾಡುತ್ತಿದ್ದ ಮ್ಯಾಥ್ಯೂ, ಈ ವೇಳೆ ಅಲ್ಲಿಗೆ…

Read More

1. ಪ್ರೀತಿ ಮತ್ತು ಸಂತೋಷ ದಿಂದಿರಬೇಕು. 2. ಮನಸ್ಸಿಗೆ ನೋವಾಗುವಂತೆ ಎಂದಿಗೂ ಮಾತನಾಡಬಾರದು. 3. ಕೋಪ ಮಾಡಿಕೊಳ್ಳ ಬಾರದು. 4. ಊಟದಲ್ಲಿ ಕೊರತೆಯನ್ನು ಹೇಳ ಬಾರದು. 5. ಅನ್ಯರ ಮುಂದೆ ಬಯ್ಯಬಾರದು. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 6. ಯಾವ ಜಾಗದಲ್ಲಿಯೂ ಬಿಟ್ಟು ಕೊಡಬಾರದು 7. ಮುಖ್ಯವಾದ ಸಮಾರಂಭಗಳಿಗೆ ಜೊತೆಯಲ್ಲಿ ಕರೆದುಕೊಂಡು ಹೋಗಬೇಕು. 8. ಕುಟುಂಬದ ಮುಖ್ಯವಾದ ವಿಷಯಗಳನ್ನು ಹೆಂಡತಿಯ ಜೊತೆಗೂಡಿ ಆಲೋಚಿಸಬೇಕು. 9. ಹೇಳುವುದನ್ನು ಸಮಾದಾನವಾಗಿ ಕೇಳಬೇಕು. 10. ಹೆಂಡತಿಯ ಮಾತನ್ನು ಅನುಸರಿಸಬೇಕು ಆದರಿಸಬೇಕು. 11. ಹಣವು ಮಾತ್ರ ದ್ಯೇಯವಲ್ಲ ಮಕ್ಕಳು ಮತ್ತು ಕುಟುಂಬಕ್ಕೆ ಮುಖ್ಯ ಒತ್ತನ್ನು ನೀಡಬೇಕು. 12. ವಾರಕ್ಕೆ ಒಂದು ಸಲವಾದರು ಮನಸ್ಸು ಬಿಚ್ಚಿ ಮಾತನಾಡಬೇಕು. 13. ವಷ೯ಕ್ಕೆ ಒಂದು ಸಲವಾದರು ಪ್ರವಾಸಕ್ಕೆ ಕರೆದು ಕೊಂಡು ಹೋಗಬೇಕು. 14. ಮಕ್ಕಳ ಶಿಕ್ಷಣದ ಬಗ್ಗೆ ಅಕ್ಕರೆ ತೋರಿಸಬೇಕು 15. ಮುಚ್ಚು ಮರೆ ಇರಕೂಡದು. ಪ್ರಧಾನ ಗುರುಗಳು…

Read More

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಲ್ಲಿರುವ ನಟ ದರ್ಶನ್ & ಗ್ಯಾಂಗ್ ಗೆ ಮತ್ತೊಂದು ಹೊಸ ಸಂಕಷ್ಟ ಶುರುವಾಗಿದೆ. ದರ್ಶನ ಮತ್ತು ಗ್ಯಾಂಗ್ ವಿರುದ್ಧ ಇಂದು ದೋಷರೋಪ ಸಲ್ಲಿಸಲಾಗುತ್ತಿದೆ. ಕೊಲೆ ಪ್ರಕರಣದಲ್ಲಿ ಕೋರ್ಟ್ ದೋಷಾರೋಪ ಹೊರಿಸಲಿದೆ. ದೋಷಾರೋಪದ ಬಳಿಕ ಸಾಕ್ಷಿ ವಿಚಾರಣೆಗೆ ಕೋರ್ಟ್ ದಿನಾಂಕ ನಿಗದಿ ಮಾಡಲಿದೆ. ಹಾಗಾಗಿ ದರ್ಶನ್ ಮತ್ತು ಆರೋಪಿಗಳು ಕೋರ್ಟಿಗೆ ಹಾಜರಾಗಬೇಕಿದ್ದು, ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ಇಂದು ದೋಷಾರೋಪ ಹೊರಸಲಿದೆ. ಎಲ್ಲಾ ಆರೋಪಿಗಳ ಹಾಜರಾತಿ ಬಳಿಕ ಚಾರ್ಜಸ್ ಫ್ರೇಮ್ ಪ್ರಕ್ರಿಯೆ ಶುರುವಾಗಲಿದೆ. ಎ೧ ಆರೋಪಿ ಪವಿತ್ರಾಗೌಡ ಅಂತಾ ಕೂಗಿದಾಗ ಕಟಕಟೆಗೆ ಬರಬೇಕಿದೆ, ನಿಮ್ಮ ಮೇಲೆ ಐಪಿಸಿ ಸೆಕ್ಷನ್ 302 ಕೊಲೆಯತ್ನ, 364 ಕಿಡ್ನ್ಯಾಪ್, 202 ಸಾಕ್ಷಿನಾಶ ಕೇಸ್ ದಾಖಲಾಗಿದೆ. ಇದನ್ನ ನೀವು ಒಪ್ಕೊತೀರಾ ಅಥವಾ ಅಲ್ಲಗೆಳೆಯುತ್ತೀರಾ ಅಂತಾ ನ್ಯಾಯಾದೀಶರು ಕೇಳಲಿದ್ದಾರೆ.‌ ಇದೆಲ್ಲಾ ಸುಳ್ಳು ವಿಚಾರಣೆ ನಡೆಯಲಿ ಅಂತಾ ಆರೋಪಿಗಳು ಹೇಳಿಕೆ ನೀಡುವ ಸಾಧ್ಯತೆ ಇದೆ. ಇದೇ ರೀತಿ ಎಲ್ಲಾ 17 ಆರೋಪಿಗಳನ್ನ ಕರೆದು ಅವರ…

Read More

ಶಿವಮೊಗ್ಗ : ನಿನ್ನೆ ಶಿವಮೊದಲ್ಲಿ ಯುವಕನೊಬ್ಬ ತಾನು ಪ್ರೀತಿಸಿದ ಯುವತಿಯನ್ನು ಬಲವಂತವಾಗಿ ಭದ್ರಾವತಿ ಕಾಲುವೆಗೆ ತಳ್ಳಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಯುವಕನನ್ನು ಅರೆಸ್ಟ್ ಮಾಡಲಾಗಿದೆ. ಭದ್ರಾವತಿ ತಾಲೂಕು ಅಂತರಗಂಗೆ ಬಳಿ ಯರೇಹಳ್ಳಿಯ ಬೋವಿ ಕಾಲೋನಿಯ ಸ್ವಾತಿ ಅಲಿಯಾಸ್ ಮಹಾಲಕ್ಷ್ಮಿ ಮೃತ ಯುವತಿ. ಯುವತಿಯ ಪೋಷಕರು ನೀಡಿದ ದೂರಿನ ಆಧಾರಲ್ಲಿ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೀಗ ಆರೋಪಿ ಸೂರ್ಯನನ್ನು ಬಂಧಿಸಲಾಗಿದೆ. ಯುವತಿಯ ಕುಟುಂಬಸ್ಥರು ಮೊದಲು ನಾಪತ್ತೆ ದೂರು ದಾಖಲಿಸಿದ್ದರು. ಸೆ.24ರಂದು ಕಾಲುವೆಯಲ್ಲಿ ಮಗಳ ಮೃತದೇಹ ಪತ್ತೆಯಾದ ಬಳಿಕ ಕೊಲೆ ಪ್ರಕರಣ ದಾಖಲಿಸಿದ್ದಾರೆ. ಇವರಿಬ್ಬರೂ ದೂರದ ಸಂಬಂಧಿಗಳಾಗಿದ್ದರು.‌ ಸೆಪ್ಟಂಬರ್ 21 ರಂದು ಯುವತಿಯನ್ನು ಸೂರ್ಯ ಮನೆಯಿಂದ ಕರೆದುಕೊಂಡು ಹೋಗಿ ಗ್ರಾಮದ ಆಚೆ ಇರುವ ಭದ್ರಾ ಕಾಲುವೆಗೆ ನೂಕಿದ್ದಾನೆಂದು ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರೇಯಸಿಯನ್ನು ಕಾಲುವೆಗೆ ನೂಕಿದ ಸೂರ್ಯ ದಡದ ಮೇಲೆ ವಿಷ ಕುಡಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದನು.

Read More

ಕಲಬುರ್ಗಿ : ರಾಜ್ಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಉಜಿನಿ ಮತ್ತು ಸೀನಾ ಡ್ಯಾಂನಿಂದ ಭೀಮಾ ಭಾರಿ ಪ್ರಮಾಣದಲ್ಲಿ ನದಿಗೆ ನೀರು ಬಿಡುಗಡೆ ಮಾಡಿದ್ದರಿಂದ ನದಿಗೆ ಇದುವರೆಗೂ 3.20 ಲಕ್ಷ ನೀರು ಬಿಟ್ಟು ಹಿನ್ನೆಲೆಯಲ್ಲಿ ಪ್ರವಾಹ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಕಲ್ಬುರ್ಗಿ ಜಿಲ್ಲೆಯ ಆಫ್ಜಲ್ಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿರುವ ಉತ್ತರಾದಿ ಮಠ ಸಂಪೂರ್ಣವಾಗಿ ಜಲಾವೃತವಾಗಿದೆ. ಮಣ್ಣೂರು ಗ್ರಾಮದಲ್ಲಿನ ದೇಶತೀರ್ಥ ವಿದ್ಯಾಪೀಠ ಉತ್ತರಾದಿ ಮಠಕ್ಕೆ ನದಿ ನೀರು ನುಗ್ಗಿದೆ ಮಠದಲ್ಲಿನ ಸಂಸ್ಕೃತ ಪಾಠ ಶಾಲೆಯ 15 ವಿದ್ಯಾರ್ಥಿಗಳು ಹಾಗೂ ಗೋಶಾಲೆಯಲ್ಲಿದ್ದ ಗೋವುಗಳನ್ನು ತಕ್ಷಣ ಬೇರೆ ಕಡೆಗೆ ಸ್ಥಳಾಂತರಿಸಲಾಗಿದೆ. ಅತಿಯಾದ ಮಳೆಯಾದರೆ ಅಥವಾ ಅಭಿಮಾನದಿಗೆ ಹೆಚ್ಚಿನ ನೀರು ಬಿಟ್ಟರೆ ಗ್ರಾಮದಲ್ಲಿರುವ ಯಲ್ಲಮ್ಮ ದೇವಸ್ಥಾನ ಕೂಡ ಸಂಪೂರ್ಣವಾಗಿ ಜಲಾವೃತವಾಗುತ್ತದೆ.

Read More

ಧಾರವಾಡ : ಯೂಟ್ಯೂಬರ್ ಮುಕಳೆಪ್ಪಾ ವಿವಾಹ ವಿವಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಕಳೆಪ್ಪ ವಿರುದ್ಧ ಯುವತಿ ಗಾಯತ್ರಿ ತಾಯಿ ಶಿವಕ್ಕ ಇದೀಗ ಅಕ್ರೋಶ ಹೊರ ಹಾಕಿದ್ದಾರೆ. ನನ್ನ ಮಗಳನ್ನು ಭೇಟಿ ಆದಾಗ ಅವಳ ಕೊರಳಲ್ಲಿ ತಾಳಿಯೆ ಇರಲಿಲ್ಲ. ಹಿಂದೂ ಧರ್ಮದಲ್ಲಿ ವಿವಾಹಿತೆಯರು ತಾಳಿ ಹಾಕಿಕೊಳ್ಳುತ್ತಾರೆ. ನನ್ನ ಮಗಳಿಗೆ ತಾಳಿ ಎಲ್ಲಿದೆ ಅಂತ ಕೇಳಿದಾಗ ಮನೆಯಲ್ಲಿದೆ ಅಂತ ಹೇಳಿದಳು. ನಿಜವಾಗಲು ಮದ್ವೆ ಆಗಿದ್ರೆ ಗಾಯತ್ರಿ ತಾಳಿ ತೋರಿಸುತ್ತಿದ್ದಳು. ಮುಕಳೆಪ್ಪ ನನ್ನ ಮಗಳಿಗೆ ಮೋಸ ಮಾಡುತ್ತಿದ್ದಾನೆ. ಹಿಂದೂ ಆಗಿದ್ದರೆ ಆಕೆ ಹಣೆಗೆ ಕುಂಕುಮ ಏಕೆ ಹಚ್ಚುತ್ತಿಲ್ಲ? ಮೆಹಂದಿಯಲ್ಲಿ ನಿಮ್ಮ ಭಾಷೆಯಲ್ಲಿ ಹೇಗೆ ಬರೆಸಿಕೊಳ್ಳುತ್ತಿದ್ದಳು. ನಿನ್ನ ಭಾಷೆಯಲ್ಲಿ ನಿನ್ನ ಹೆಸರು ಹಾಕಿಕೊಂಡಿದ್ದಾಳೆ. ನನ್ನ ಮಗಳನ್ನು ಇಷ್ಟು ದಿನ ಹೆತ್ತು ಹೊತ್ತು ಸಾಕಿ ಬೆಳೆಸಿದ್ದೇವೆ.

Read More