Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ವರ್ಣಾರ್ಭಟದಿಂದ ಸಂಪೂರ್ಣ ಜನಜೀವನವೇ ಅಸ್ತವ್ಯಸ್ತವಾಗಿದೆ. ಹಾಗಾಗಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಚಿವರು ಶಾಸಕರು ಸೇರಿದಂತೆ ಅಧಿಕಾರಿಗಳು ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಳೆಹಾನಿ ಪರಿಶೀಲನೆ ನಡೆಸಿದ ಬಳಿಕ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿದ್ದರಾಮಯ್ಯ, ಬೆಂಗಳೂರಿನಲ್ಲಿ ಕಳೆದ 10 ವರ್ಷಗಳಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಹವಾಮಾನ ಬದಲಾವಣೆಯಿಂದ ಅತಿ ಹೆಚ್ಚು ಮಳೆಯಾಗಿದೆ. ಬಿಟಿಎಂ ಲೇಔಟ್ ನಲ್ಲಿ ವಿದ್ಯುತ್ ಹರಿದು ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿಸಿದರು. ಇನ್ಮುಂದೆ ಬೇಸ್ಮೆಂಟ್ ನಿರ್ಮಿಸುವುದಕ್ಕೆ ಅವಕಾಶ ನೀಡಬಾರದು. ತಗ್ಗು ಪ್ರದೇಶದಲ್ಲಿ ಬೇಸ್ಮೆಂಟ್ ನಿರ್ಮಿಸಲು ಅವಕಾಶ ನೀಡಬಾರದು. 166 ಸೂಕ್ಷ್ಮ ಅತಿ ಸೂಕ್ಷ್ಮ ಪ್ರದೇಶಗಳು ಅಂತ ಗುರುತಿಸಲಾಗಿದೆ. ಎಷ್ಟೇ ಪ್ರಭಾವಿಗಳಿದ್ದರೂ ರಾಜಕಾಲುವೇ ಒತ್ತುವರಿತರೆಗೆ ಸೂಚಿಸಿದ್ದೇನೆ. ಕೋರ್ಟ್ ನಿಂದ ತಡೆಯಾಜ್ಞೆ ತಂದ ಕಡೆ ಮಾತ್ರ ವಿಳಂಬ ಮಾಡಲಾಗಿದೆ ಎಂದರು. ಪಣತ್ತೂರು ಗಾರ್ಡನ್ನಲ್ಲೂ ಮಳೆ ನೀರು ಸರಿಯಾಗಿ ಹರಿಯುತ್ತಿಲ್ಲ. ಪಣತ್ತೂರು ಗಾರ್ಡನ್ನಲ್ಲಿ ರಸ್ತೆ…
ಬೆಂಗಳೂರು : ಬೆಂಗಳೂರಿನಲ್ಲಿ ಇದೀಗ ಭಾರಿ ಮಳೆಯಾಗುತ್ತಿದ್ದು ಕಳೆದ ಕೆಲವು ದಿನಗಳಿಂದ ಮಹಾ ಮಳೆಗೆ ಹಲವರು ಬಲಿಯಾಗಿದ್ದಾರೆ. ಗೋಡೆ ಕುಸಿದು ವೈಟ್ ಫೀಲ್ಡ್ ಬಳಿ ಮನೆ ಗೋಡೆ ಕುಸಿದು ಮಹಿಳೆ ಒಬ್ಬರು ಸಾವನ್ನಪ್ಪಿದ್ದರೆ, ಇನ್ನೂ ಅಪಾರ್ಟ್ಮೆಂಟ್ ನಲ್ಲಿ ಬೇಸ್ಮೆಂಟ್ ನಲ್ಲಿರುವ ನೀರು ಹೊರ ಹಾಕುವಾಗ ವಿದ್ಯುತ್ ಶಾಕ್ ನಿಂದ ಇಬ್ಬರು ಸಾವನಪ್ಪಿದ್ದರು. ಇದೀಗ ಬೈಕ್ ನಲ್ಲಿ ತೆರಳುವಾಗ ಮರ ಬಿದ್ದು ಸವಾರ ಒಬ್ಬರು ಸಾವನಪ್ಪಿದ್ದಾರೆ. ಹೌದು ಬೆಂಗಳೂರಿನಲ್ಲಿ ಮಹಾಮಳೆಗೆ ಇದೀಗ ಮತ್ತೊಂದು ಬಲಿಯಾಗಿದೆ. ಬೈಕ್ ನಲ್ಲಿ ತೆರಳುತ್ತಿದ್ದಾಗ ಮರ ಬಿದ್ದು ಸವಾರ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಕೋರಮಂಗಲದಲ್ಲಿ ಮರ ಉರುಳಿ ಬಿದ್ದು 50 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಆಡುಗೋಡಿ ನಿವಾಸಿ ಮೂಡಲಗಿರಿ (50) ಮೃತ ದುರ್ದೈವಿ ಎಂದು ತಿಳಿದುಬಂದಿದೆ.
ಬೆಂಗಳೂರು : ನಮ್ಮ ಮೆಟ್ರೋದಲ್ಲಿ ಯಾವಾಗಲೂ ಒಂದಿಲ್ಲೊಂದು ಕಿರಿಕ್ ಆಗುತ್ತಲೇ ಇರುತ್ತದೆ. ಇದೀಗ ವಿಕೃತ ಮನಸ್ಸಿನ ವ್ಯಕ್ತಿಯೊಬ್ಬ ಮಹಿಳೆಯರ ಆಕ್ಷೇಪಾರ್ಹ ವಿಡಿಯೋ ತೆಗೆದು ನೀಚ ಕೃತ್ಯ ಎಸಗಿದ್ದಾನೆ. ಅಪರಿಚಿತ ವ್ಯಕ್ತಿಯ ಹುಚ್ಚಾಟಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ದೂರು ದಾಖಲಾಗಿದೆ. ಹೌದು ಬೆಂಗಳೂರಿನ ಮೆಟ್ರೋ ರೈಲಲ್ಲಿ ಆಗಾಗ ಕಿರಿಕ್ ಘಟನೆಗಳು ನಡೆಯುತ್ತಿರುತ್ತವೆ. ಆದರೆ ಇದೀಗ ಕಾಮುಕನೊಬ್ಬ ಮಹಿಳೆಯರ ಅರಿವಿಗೆ ಬಾರದಂತೆ ನಿಮ್ಮ ಆಕ್ಷೇಪಾರ್ಹ ಪೋಟೋ, ವಿಡಿಯೋ ತೆಗೆದು ಸೋಷಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿ ವಿಕೃತಿ ಮೆರೆಯಲು ಮುಂದಾಗಿದ್ದಾರೆ. ಹೀಗೆ ಮೆಟ್ರೋ ನಿಲ್ದಾಣ ಮತ್ತು ರೈಲಿನೊಳಗೆ ಯುವತಿಯರು, ಮಹಿಳೆಯರ ಪೋಟೋ ತೆಗೆದ ಅಪರಿಚಿತ ವ್ಯಕ್ತಿಯೊಬ್ಬ ಸೋಷಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾನೆ. ಮೆಟ್ರೋದಲ್ಲಿ ಪ್ರಯಾಣಿಸುವ ಮಹಿಳೆಯರ ಅರಿವಿಗೆ ಬಾರದಂತೆ ಅವರ ಆಕ್ಷೇಪಾರ್ಹ ವಿಡಿಯೋಗಳನ್ನ ಚಿತ್ರೀಕರಿಸಿದ ಅಪರಿಚಿತ ವ್ಯಕ್ತಿ, ನಂತರ ಅವುಗಳನ್ನ ತನ್ನ ಇನ್ಸ್ಟಾ ಖಾತೆಯಲ್ಲಿ ಅಪ್ಲೋಡ್ ಮಾಡಿ ವಿಕೃತಿ ಮೆರೆದಿದ್ದಾನೆ. ಮೆಟ್ರೋ ಚಿಕ್ಸ್ ಪೇಜ್ ನಲ್ಲಿ ಈ ಆಕ್ಷೇಪಾರ್ಹ ವಿಡಿಯೋಗಳು ಅಪ್ಲೋಡ್…
ತುಮಕೂರು : ತುಮಕೂರಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಲೋರಸ್ ಬಯೋ ಕಂಪನಿಯಲ್ಲಿ ಕೆಮಿಕಲ್ ಸಂಪ್ ಕ್ಲೀನ್ ಮಾಡುವಾಗ ಉಸಿರುಗಟ್ಟಿ ಇಬ್ಬರು ಸಾವನಪ್ಪಿದ್ದಾರೆ. ತುಮಕೂರಿನ ಲೊರಸ್ ಬಯೋ ಕಂಪನಿಯಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ತುಮಕೂರಿನ ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ಲೊರಸ್ ಬಯೋ ಕಂಪನಿಯಲ್ಲಿ ಸಂಪ್ ನಲ್ಲಿ ಉಸಿರುಗಟ್ಟಿ ವೆಂಕಟೇಶ್ (32) ಹಾಗು ಪ್ರತಾಪ್ (23) ಸಾವನಪ್ಪಿದ್ದಾರೆ. ವೆಂಕಟೇಶ್ ಫ್ಯಾಕ್ಟರಿಯನ್ನು ನಾಲ್ವರು ಸಂಪ್ ಸ್ವಚ್ಛಗೊಳಿಸುತ್ತಿದ್ದರು. ಕಾರ್ಖಾನೆಯ ಸಂಪ್ ಕ್ಲೀನಿಂಗ್ ಗೆ ಮಂಜುನಾಥ್ ಮೊದಲು ಇಳಿದಿದ್ದಾರೆ.. ಈ ವೇಳೆ ಉಸಿರುಗಟ್ಟಿ ಮಂಜುನಾಥ್ ಸಂಪನೊಳಗೆ ಸಿಲುಕಿದ್ದಾರೆ. ಇದನ್ನು ಕಂಡ ಫ್ಯಾಕ್ಟರಿ ಸೆಕ್ಯೂರಿಟಿ ಗಾರ್ಡ್ ಪ್ರತಾಪ್ ಹಾಗೂ ಕಾರ್ಮಿಕರಾದ ವೆಂಕಟೇಶ್ ಯುವರಾಜ್ ಸಹ ಒಳಗೆ ಇಳಿದಿದ್ದರು. ಸಂಪ್ ಒಳಗೆ ಇಳಿದಿದ್ದ ನಾಲ್ವರು ಸಹ ಪ್ರಜ್ಞೆ ತಪ್ಪಿದ್ದಾರೆ. ತಕ್ಷಣ ಫ್ಯಾಕ್ಟರಿಯಲ್ಲಿದ್ದ ಇತರರಿಂದ ನಾಲ್ವರ ರಕ್ಷಣೆಗೆ ಯತ್ನಿಸಲಾಗಿದೆ. ಬಳಿಕ ನಾಲ್ವರನ್ನು ರಕ್ಷಣೆ ಮಾಡಿ ಸಿದ್ದಗಂಗಾ ಆಸ್ಪತ್ರೆಗೆ ರವಾನಿಸಲಾಗಿದೆ. ಈ ವೇಳೆ ಮಾರ್ಗ ಮಧ್ಯೆ ಸೆಕ್ಯೂರಿಟಿ ಗಾರ್ಡ್ ಪ್ರತಾಪ್ ಮತ್ತು…
ಉತ್ತರಕನ್ನಡ : ರಾಜಧಾನಿ ಬೆಂಗಳೂರು ಮಹಾನಗರ ಸೇರಿದಂತೆ ಈಗಾಗಲೇ ಹಲವು ಜಿಲ್ಲೆಗಳಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಇದೀಗ ಉತ್ತರಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಮಳೆಯ ಅಬ್ಬರದಿಂದ ಭಾರಿ ಅವಾಂತರ ಸೃಷ್ಟಿಯಾಗಿದೆ. ಕುಮಟಾ ತಾಲೂಕಿನ ಖೈರಾ ಕ್ರಾಸ್ ಬಳಿ ಭಾರಿ ಮಳೆಯಿಂದಾಗಿ ಗುಡ್ಡ ಕುಸಿತವಾಗಿದೆ. ಹೌದು ಅಂಕೋಲ ಮತ್ತು ಶಿರಸಿ ಸಂಪರ್ಕಿಸುವ ಮಾರ್ಗದಲ್ಲಿ ಗುಡ್ಡ ಕುಸಿದಿದ್ದು, ಆತಂಕದಲ್ಲಿ ಜನರು ಇದ್ದಾರೆ. ಗುಡ್ಡದ ಆಸು ಪಾಸಿನ ನೀವಾಸಿಗಳು ಅಲ್ಲಿಂದ ಸ್ಥಳಾಂತರವಾಗಲು ಈಗಾಗಲೇ ಸೂಚನೆ ನೀಡಲಾಗಿದೆ. ಹೆದ್ದಾರಿ ಕುಸಿದಿದ್ದರೂ ಕೂಡ ವಾಹನಗಳು ನಿರ್ಲಕ್ಷ ವಹಿಸಿ ಅದೇ ಮಾರ್ಗದಲ್ಲಿಯೇ ಸಂಚರಿಸುತ್ತಿವೆ. ಸ್ಥಳೀಯರು ಮುಂದಾಗುವ ಅನಾಹುತ ತಪ್ಪಿಸಲು ಕಲ್ಲುಗಳನ್ನು ಇಟ್ಟಿದ್ದಾರೆ. ಜೀವದ ಹಂಗು ತೊರೆದು ಸ್ಥಳೀಯರು ರಸ್ತೆಯನ್ನು ಬ್ಲಾಕ್ ಮಾಡಿದ್ದಾರೆ. ತಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮಿರ್ಜಾನ್ ಮತ್ತು ಕಥಗಾಲ್ ರಸ್ತೆಯನ್ನು ಅಧಿಕಾರಿಗಳು ತಕ್ಷಣವೇ ಬಂದ್ ಮಾಡಿದ್ದಾರೆ. ಸುಮಾರು 18 ಕಿಲೋಮೀಟರ್ ಸುತ್ತಿಕೊಂಡು ಶಿರಸಿಗೆ ಹೋಗುವ ಸ್ಥಿತಿ ನಿರ್ಮಾಣವಾಗಿದೆ. ಕುಮಟಾ ಮೂಲಕ ಶಿರಸಿಗೆ ಹೋಗುವ ಪರಿಸ್ಥಿತಿ…
ಬೆಂಗಳೂರು : ಬೆಂಗಳೂರಿನಲ್ಲಿ ಇದೀಗ ಭಾರಿ ಮಳೆಯಿಂದ ಜನತೆ ಸಂಪೂರ್ಣವಾಗಿ ಅಸ್ತವ್ಯಸ್ಥವಾಗಿದೆ. ಭಾರಿ ಮಳೆಯಿಂದ ರಸ್ತೆಯೆಲ್ಲ ಸಂಪೂರ್ಣವಾಗಿ ಜಲಾವೃತವಾಗಿವೆ. ಇದೀಗ ಬೆಂಗಳೂರಿನ ಓಕಳಿಪುರಂನಲ್ಲಿ ಭಾರಿ ಮಳೆ ಮತ್ತು ಗಾಳಿಗೆ ಬೃಹ ಗಾತ್ರದ ಮರ ಒಂದು ಮನೆಯ ಮೇಲೆ ಉರುಳಿ ಬಿದ್ದಿದೆ. ಹೌದು ಬೆಂಗಳೂರಿನ ಬಳಿ ಬೃಹತ್ಕಾರದ ಮರ ಒಂದು ಮನೆಯ ಮೇಲೆ ಬಿದ್ದಿದೆ. ಮರ ಬಿದ್ದ ಹಿನ್ನೆಲೆಯಲ್ಲಿ ಆರ್ಸಿಸಿ ಮನೆಯ ಗೋಡೆಗೆ ಹಾನಿ ಉಂಟಾಗಿದೆ. ಮನೆಯಲ್ಲಿದ್ದ ಮೂವರು ಸದಸ್ಯರು ಮರ ಬಿದ್ದಿದ ತಕ್ಷಣ ಕೂಡಲೇ ಹೊರಗೆ ಓಡಿಬಂದು ತಮ್ಮ ಪ್ರಾಣ ಉಳಿಸಿಕೊಂಡಿದ್ದಾರೆ.
ಚಾಮರಾಜನಗರ : ಪತಿ ಪತ್ನಿಯ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಆದರೆ ಇಂದು ಇಬ್ಬರ ಮಧ್ಯ ಗಲಾಟೆ ತರಕಕ್ಕೆರಿ ಸಿಟ್ಟಿಗೆದ್ದ ಪತಿ ಪತ್ನಿಗೆ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಒಡೆಯರ ಪಾಳ್ಯ ಸಮೀಪದ ಗುಳ್ಳದ ಬಯಲು ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಮಾದೇವಿ (28) ಎಂದು ತಿಳಿದುಬಂದಿದೆ. ಕೊಲೆ ಪಾತಕಿಯನ್ನು ಪತಿ ಭದ್ರ ಎಂದು ತಿಳಿದುಬಂದಿದೆ. ಇಂದು ಬೆಳಿಗ್ಗೆ ದಂಪತಿಗಳಿಬ್ಬರ ನಡುವೆ ಕೌಟುಂಬಿಕ ಕಲಹ ತಾರಕಕೇರಿದ್ದು, ಪತಿ ಚಾಕುವಿನಿಂದ ಇರಿದ ಪರಿಣಾಮ ಪತ್ನಿ ಮಾದೇವಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ, ಪತಿಯನ್ನು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು : ಗೃಹ ಸಚಿವ ಜಿ ಪರಮೇಶ್ವರ್ ಅವರ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಮೇಲೆ ಇಂದು ಜಾರಿ ನಿರ್ದೇಶನಲಯ (ED) ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸಿದರು. ಆದರೆ ವಿಪಕ್ಷ ನಾಯಕ ಆರ್ ಅಶೋಕ್ ಅವರು ಗಂಭೀರವಾದ ಆರೋಪ ಮಾಡಿದ್ದು,ನಟಿ ರನ್ಯಾರಾವ್ ಗೋಲ್ಡ್ ಸ್ಮಲಿಂಗ್ ಪ್ರಕರಣಕ್ಕೂ ಇಂದು ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಮೇಲೆ ಇಡಿ ದಾಳಿಗೂ ನಂಟಿದೆ ಎಂದು ಆರೋಪಿಸಿದ್ದಾರೆ. ಹೌದು ಗೃಹ ಸಚಿವ ಪರಮೇಶ್ವರ್ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಹಿಂದೆ ರನ್ಯಾ ರಾವ್ ಕೇಸ್ ಲಿಂಕ್ ಇದ್ಯಾ ಎಂಬ ಗಂಭೀರ ಪ್ರಶ್ನೆ ಎದ್ದಿದೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅಶೋಕ್, ರನ್ಯಾರಾವ್ ವಿದೇಶದಿಂದ ಚಿನ್ನ ತಂದು ಹಲವು ಪ್ರಮುಖರಿಗೆ ನೀಡಿರುವ ಮಾಹಿತಿಯಿದೆ. ಈ ಹಣ ಸಿದ್ದಾರ್ಥ ಶಿಕ್ಷಣ ಸಂಸ್ಥೆಯಲ್ಲಿ ಹೂಡಿಕೆ ಮಾಡುತ್ತಿದ್ದ ಬಗ್ಗೆ ಇಡಿ ಮಾಹಿತಿ ಸಂಗ್ರಹಿಸಿರಬಹುದು ಎಂಬ ಗಂಭೀರ ಆರೋಪ ಮಾಡಿದರು. ಮೊದಲು ಇಡಿ ದಾಳಿ ಮುಗಿದು ತನಿಖೆ ನಡೆಯಲಿದೆ. ತನಿಖೆ…
ಮೈಸೂರು : ಮೈಸೂರಿನಲ್ಲಿ ಯುವತಿಯ ಮೃತದೇಹ ಮತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯುವತಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರಬಹುದು ಎಂದು ಇದೀಗ ಯುವತಿಯ ಸಂಬಂಧಿ ಶಂಕೆ ವ್ಯಕ್ತಪಡಿಸಿದ್ದಾರೆ. ಮೃತ ಯುವತಿಯ ಸೋದರ ಮಾವನ ಮಗ ವೆಂಕಟೇಶ್ ಈ ಕುರಿತು ಗಂಭೀರವಾದ ಆರೋಪ ಮಾಡಿದ್ದಾರೆ. ಸ್ಥಳದಲ್ಲಿ ಶವ ನೋಡಿದಾಗ ಕೊಲೆ ಆಗಿರಬಹುದು ಎಂದು ತಿಳಿದಿದ್ದೆವು. ಆದರೆ ಮೃತದೇಹದ ಮೇಲೆ ಪ್ಯಾಂಟ್ ಉಲ್ಟಾ ಹಾಕಲಾಗಿತ್ತು. ಅಂದರೆ ಅತ್ಯಾಚಾರದ ನಂತರ ಕೊಲೆ ಮಾಡಿ ಬಟ್ಟೆ ತೊಡಿಸಿರಬಹುದು. ಕಳೆದ ಮೂರು ವರ್ಷಗಳಿಂದ ಡೇಕೇರ್ ಸೆಂಟರ್ ನಲ್ಲಿ ಯುವತಿ ಕೆಲಸ ಮಾಡುತ್ತಿದ್ದಳು. ನಿನ್ನೆ ಕೆ.ಆರ್ ಆಸ್ಪತ್ರೆಗೆ ಹೋಗಿ ಬರುತ್ತೇನೆ ಎಂದು ಯುವತಿ ಡೇಕೇರ್ ನಿಂದ ತೆರಳಿದ್ದಳು. ಆಸ್ಪತ್ರೆಗೆ ಹೊರಡುವ ಮುನ್ನ ತಂದೆಗೆ ಯುವತಿ ಕರೆ ಮಾಡಿದ್ದಾಳೆ. ಮಳೆ ಬರುತ್ತಿದೆ ಆಟೋದಲ್ಲಿ ಹೋಗುವಂತೆ ತಂದೆ ತಿಳಿಸಿದ್ದರು. ಆದರೆ ಬೆಳಿಗ್ಗೆ ಕುತ್ತಿಗೆಗೆ ವೇಲ್ನಿಂದ ಬಿಗಿದು ಹತ್ಯೆ ಮಾಡಿದ್ದಾರೆ. ಇದನ್ನೆಲ್ಲಾ ನೋಡಿದರೆ ಯಾರೋ ಅತ್ಯಾಚಾರ ಎಸಗಿ ಯುವತಿಯನ್ನು ಕೊಲೆ ಮಾಡಿದ್ದಾರೆ. ಬಡವರ ಹೆಣ್ಣುಮಕ್ಕಳಿಗೆ…
ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ಕೊಲೆ, ದರೋಡೆ ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದೀಗ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಚಂದಾಪುರ ರೈಲ್ವೆ ಹಳಿ ಬಳಿ ಸೂಟ್ಕೇಸ್ ಅಲ್ಲಿ ಬಾಲಕಿಯ ರುಂಡ ಮತ್ತು ಮುಂಡ ಬೇರ್ಪಡಿಸಿರುವ ಮೃತದೇಹ ಪತ್ತೆಯಾಗಿದೆ. ಹೌದು ಬಾಲಕಿಯ ಶವವೊಂದು ರುಂಡ – ಮುಂಡ ಕತ್ತರಿಸಿದ ಸ್ಥಿತಿಯಲ್ಲಿ, ಮುಚ್ಚಿದ ನೀಲಿ ಸೂಟ್ ಕೇಸ್ವೊಂದರಲ್ಲಿ ಪತ್ತೆಯಾದ ಆತಂಕಕಾರಿ ಘಟನೆ ಹಳೆ ಚಂದಾಪುರ ರೈಲ್ವೇ ಹಳಿ ಬಳಿ ನಡೆದಿದೆ. ಬಾಲಕಿಗೆ ಸುಮಾರು ಒಂಬತ್ತು ವರ್ಷ ವಯಸ್ಸಾಗಿದೆ ಎಂದು ತಿಳಿದು ಬಂದಿದೆ. ಬಾಲಕಿಯ ಚಹರೆ ಇನ್ನಷ್ಟೇ ಪತ್ತೆಯಾಗಬೇಕಿದೆ. ಘಟನೆ ಮಾಹಿತಿ ತಿಳಿದು, ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಸ್ಥಳಕ್ಕೆ ಸೂರ್ಯನಗರ ಠಾಣೆ ಪೊಲೀಸರು ಹಾಗೂ ಬಯ್ಯಪ್ಪನಹಳ್ಳಿ ರೈಲ್ವೇ ಸ್ಟೇಷನ್ ಸಿಬ್ಬಂದಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.