Subscribe to Updates
Get the latest creative news from FooBar about art, design and business.
Author: kannadanewsnow05
ಕಲಬುರ್ಗಿ : ನಕಲಿ ವೈದ್ಯರ ಕ್ಲಿನಿಕ್ ಗಳ ಮೇಲೆ ಆರೋಗ್ಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕಲ್ಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಕ್ಲಿನಿಕ್ ಗಳ ಮೇಲೆ ಇದೀಗ ಆರೋಗ್ಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಾಳಿಯ ಬಳಿಕ ನಕಲಿ ಕ್ಲಿನಿಕ್ ಗಳನ್ನು ಕ್ಲೋಸ್ ಮಾಡಿ ಬೀಗ ಜಡಿದಿದ್ದಾರೆ. ಕಲ್ಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಸೊನ್ನ, ನೆಲೋಗಿ ಗ್ರಾಮದಲ್ಲಿರುವ ನಕಲಿ ಕ್ಲಿನಿಕ್ ಗಳ ಮೇಲೆ ಆರೋಗ್ಯ ಅಧಿಕಾರಿಗಳು ದಾಳಿ ಮಾಡಿ ಕ್ಲಿನಿಕ್ ಗಳಿಗೆ ಬೀಗ ಹಾಕಿದ್ದಾರೆ. ನಕಲಿ ವೈದ್ಯರು ಅನಧಿಕೃತವಾಗಿ ಕ್ಲಿನಿಕ್ ನಡೆಸುತ್ತಿದ್ದರು ಸಾರ್ವಜನಿಕರಿಂದ ದೂರು ಹಿನ್ನೆಲೆ, ಜಿಲ್ಲಾ ಆರೋಗ್ಯ ಅಧಿಕಾರಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಮತ್ತೆ ಓಪನ್ ಮಾಡಿದರೆ ಆಸ್ತಿ ಮುಟ್ಟುಗೊಲು ಹಾಕುವುದಾಗಿ ಎಚ್ಚರಿಕೆ ನೀಡಿ ನಕಲಿ ಕ್ಲಿನಿಕ್ ಗಳಿಗೆ ಅಧಿಕಾರಿಗಳು ಬೀಗ ಜಡಿದಿದ್ದಾರೆ.
ದಕ್ಷಿಣಕನ್ನಡ : ಹಿಂದೂ ಕ್ರೈಸ್ತರ ನಡುವೆ ದ್ವೇಷ ಹುಟ್ಟುವಂತಹ ಹೇಳಿಕೆ ಆರೋಪದ ಹಿನ್ನೆಲೆಯಲ್ಲಿ ವಸಂತ ಗಡಿಯಾರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ FIR ದಾಖಲಾಗಿದೆ. BNS ಸೆಕ್ಷನ್ 196(1),(a), 353(2)ರಡಿ ಪ್ರಕರಣ ದಾಖಲಾಗಿದೆ. ಶೇಖರ ಲಾಯಿಲ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕರಾಗಿದ್ದಾರೆ. ಧರ್ಮ ಸಂರಕ್ಷಣಾ ಸಮಾವೇಶದಲ್ಲಿ ವಸಂತ ಗಿಳಿಯಾರ್ ಈ ಒಂದು ಹೇಳಿಕೆ ನೀಡಿದ್ದು ಆಗಸ್ಟ್ 24ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಮಾವೇಶ ನಡೆದಿತ್ತು. ಧರ್ಮಸ್ಥಳ ಬೆಳ್ತಂಗಡಿ ಭಾಗದಲ್ಲಿ ಕ್ರೈಸ್ತ ಮಿಷಿನರಿಗಳ ಪ್ರಭಾವದಿಂದ ಹಿಂದೂಗಳ ಕಟ್ಟೆಯನ್ನು ಒಡೆಸಿ ಶಿಲುಬೆಯನ್ನು ನೀಡಲಾಗಿತ್ತು. ತುಳಸಿ ಕಟ್ಟೆಗಳು ಮತ್ತೆ ಮನೆ ಅಂಗಳದಲ್ಲಿ ಎದ್ದು ನಿಲ್ಲುವಂತೆ ಮಾಡಿದ್ದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಎಂದು ವಸಂತ್ ಗಿಳಿಯಾರ್ ಹೇಳಿಕೆ ನೀಡಿದ್ದರು. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಶೇಖರ್ ಲಾಯಿಲ ದೂರು ಬೆಳ್ತಂಗಡಿ ಠಾಣಿಗೆ ದೂರು ನೀಡಿದ್ದಾರೆ. ಅವರ ದೂರಿನ ಅನ್ವಯ ಇದೀಗ ವಸಂತ್ ಗಿಳಿಯಾರ್ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು : ಬಾನು ಮುಷ್ತಾಕ್ ದಸರಾ ಉದ್ಘಾಟನೆಯ ವಿಚಾರವಾಗಿ ಬಿಜೆಪಿಯವರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನೆಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚಾಮುಂಡೇಶ್ವರಿ ಬೆಟ್ಟ ಏನು ಕೇವಲ ಹಿಂದೂ ಧರ್ಮದ ಆಸ್ತಿಯಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು ಡಿಕೆಶಿ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ನಲ್ಲಿ ಸ್ಪಷ್ಟನೆ ನೀಡಿದ್ದು, ನಮ್ಮ ನಾಡ ಹಬ್ಬ – ದಸರಾ ನಮ್ಮ ನಾಡ ದೇವತೆ – ಚಾಮುಂಡೇಶ್ವರಿ. ಚಾಮುಂಡೇಶ್ವರಿ ತಾಯಿ ನಮ್ಮ ನಾಡಿನ ಅಧಿದೇವತೆ. ಈ ತಾಯಿಯನ್ನು ಆರಾಧಿಸುವವರು, ನಂಬುವವರು, ಗೌರವಿಸುವವರು ಎಲ್ಲ ಜಾತಿ, ಧರ್ಮಗಳಲ್ಲೂ ಇದ್ದಾರೆ. ಆಕೆಯ ದರ್ಶನ ಎಲ್ಲರ ಹಕ್ಕು. ತಾಯಿ ಎಲ್ಲ ಭಕ್ತರ, ನಾಡಿನ ಎಲ್ಲ ಮಕ್ಕಳ ಆಸ್ತಿ, ಯಾರೊಬ್ಬರಿಗೂ ಸೀಮಿತ ಅಲ್ಲ. ತಾಯಿಯನ್ನು ಪೂಜಿಸಿದರೆ ಯಾರೂ ಬೇಡ ಅನ್ನಲು ಆಗುವುದಿಲ್ಲ. ಇದೇ ನನ್ನ ಮಾತಿನ ಸತ್ವ. ವಿವಾದ ಮಾಡೋದು ಬಿಜೆಪಿ ತತ್ವ! ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮ, ಸಮಾಜದವರಿಗೂ ಪ್ರವೇಶವಿದೆ. ಎಲ್ಲರೂ ಬೆಟ್ಟಕ್ಕೆ ಹೋಗುತ್ತಾರೆ. ದೇವಿಯ…
ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ಮಹಿಳೆಯ ತಲೆ ಬುರುಡೆ ತಂದು ಇದು ಹೆಣ್ಣು ಮಗಳ ತಲೆ ಬುರುಡೆ ಎಂದು ಹೇಳಿಕೆ ನೀಡಿದ್ದ ಮಾಸ್ಕ್ ಮ್ಯಾನ್ ಚಿನ್ನಯನನ್ನು ಎಸ್ಐಟಿ ವಶಕ್ರ್ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದೆ. ಅಲ್ಲದೆ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲೂ ಕೂಡ ನಿನ್ನೆಯಿಂದ SIT ಅಧಿಕಾರಿಗಳು ತೀವ್ರ ಶೋಧ ನೆಡೆಸಿದ್ದಾರೆ. ಇದೀಗ ಬುರುಡೆ ಷಡ್ಯಂತ್ರದ ಹಿಂದೆ ಯಾರ್ಯಾರಿದ್ದಾರೆ ಇದರ ಸೂತ್ರಧಾರಿಗಳು ಯಾರು ಎನ್ನುವುದು ಎಸ್ಐಟಿ ಪತ್ತೆ ಹಚ್ಚುತ್ತಿದ್ದು, ನಿನ್ನೆ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಶೋಧ ನಡೆಸುವ ವೇಳೆ ಚಿನ್ನಯ್ಯನ ಮೊಬೈಲ್ ಪತ್ತೆಯಾಗಿದ್ದು, ಅದರಲ್ಲಿ ಹಲವು ಆಡಿಯೋ ಮತ್ತು ವಿಡಿಯೋಗಳು ಸಹ ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಬುರುಡೆ ಷಡ್ಯಂತರದ ಸೂತ್ರಧಾರಿಗಳಿಗೆ ಎಸ್ಐಟಿ ನೋಟಿಸ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದ್ದು, ಪ್ರಕರಣ ಮತ್ತಷ್ಟು ತಿರುವು ಪಡೆದುಕೊಳ್ಳುವ ಸಾಧ್ಯತೆ ಇದೆ.
ಬೆಂಗಳೂರು : ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನಾ ವಿಚಾರವಾಗಿ ಜೆಡಿಎಸ್, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಕಾಲೆಳೆದಿದೆ.ಚಾಮುಂಡಿ ಬೆಟ್ಟ ಏನು ಹಿಂದುಗಳ ಆಸ್ತಿಯಲ್ಲ ಎಂದು ನಿನ್ನೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದೀಗ ಈ ಇಂದು ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದು ಜೆಡಿಎಸ್ ತನ್ನ ಟ್ವೀಟ್ ಖಾತೆಯಲ್ಲಿ, ಚಾಮುಂಡಿ ಬೆಟ್ಟ ಹಿಂದೂ ಧರ್ಮದ ಆಸ್ತಿಯಲ್ಲ ಎಂಬ ಡಿಕೆ ಶಿವಕುಮಾರ್ ಹೇಳೀಕೆಗೆ ಆಪ್ತಮಿತ್ರ ಚಿತ್ರದಲ್ಲಿ ಗಂಗಾ ನಾಗವಲ್ಲಿಯಾಗಿ ಹಂತ ಹಂತವಾಗಿ ಬದಲಾಗುತ್ತಾಳೆ. ಆದರೆ ಡಿಕೆ ಶಿವಕುಮಾರ್ ನಾಗವಲ್ಲಿಗಿಂತಲೂ ಬಹುಬೇಗ ಬದಲಾಗುತ್ತಿದ್ದಾರೆ ಎಂದು ವ್ಯಂಗ್ಯವಾಡಿದೆ. https://twitter.com/JanataDal_S/status/1960541540029497850?t=FbXJsJEvM2-O2aKyoR3N3A&s=19
ನವದೆಹಲಿ : ಮಾಜಿ ಸಚಿವ ಮುರುಗೇಶ್ ನಿರಾಣಿಯವರ ಪುತ್ರ ವಿಜಯ್ ನಿರಾಣಿ ವಿರುದ್ಧ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. 2018ರಲ್ಲಿ ಮುಧೋಳದ ಕುಳಲಿ ಗ್ರಾಮದಲ್ಲಿರುವ ನಿರಾಣಿ ಶುಗರ್ಸ್ ನಲ್ಲಿನ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಸ್ಫೋಟ ಸಂಭವಿಸಿ ಆರು ಜನ ಕಾರ್ಮಿಕರು ಸಾವಿಗೀಡಾಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ಹೌದು 2018ರಲ್ಲಿ ಮುಧೋಳದ ಕುಳಲಿ ಗ್ರಾಮದಲ್ಲಿರುವ ನಿರಾಣಿ ಶುಗರ್ಸ್ ನಲ್ಲಿನ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಸ್ಫೋಟ ಸಂಭವಿಸಿ ಆರು ಜನ ಕಾರ್ಮಿಕರು ಸಾವಿಗೀಡಾಗಿದ್ದರು. ಆ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ 2023ರಲ್ಲಿ ಬ್ರೇಕ್ ಹಾಕಿತ್ತು. ಆದರೆ, ಈ ಆದೇಶದ ವಿರುದ್ಧ ರಾಜ್ಯ ಸರ್ಕಾರ, ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಸುಪ್ರಿಂಕೋರ್ಟ್, ಹೈಕೋರ್ಟ್ ಆದೇಶವನ್ನು ರದ್ದುಪಡಿಸಿ ತನಿಖೆಗೆ ಆದೇಶಿಸಿದೆ. ಪ್ರಕರಣ ಹಿನ್ನೆಲೆ? ವಿಜಯ್ ನಿರಾಣಿ ನಿರಾಣಿ ಶುಗರ್ಸ್ ಲಿಮಿಟೆಡ್ ಕಂಪನಿಯ ನಿರ್ದೇಶಕರಾಗಿದ್ದಾರೆ. ಮುಧೋಳದ ಕುಳಲಿ ಗ್ರಾಮದಲ್ಲಿರುವ ನಿರಾಣಿ ಶುಗರ್ಸ್ನ ಡಿಸ್ಟಿಲರಿ ಫ್ಯಾಕ್ಟರಿಯಲ್ಲಿ ತ್ಯಾಜ್ಯ ನಿರ್ವಹಣಾ ಘಟಕವೊಂದನ್ನು ಸ್ಥಾಪಿಸಿದ್ದರು. ಆ ಘಟಕಕ್ಕೆ…
ಬೆಂಗಳೂರು : ಧರ್ಮಸ್ಥಳ ಪ್ರಕರಣ ದಿನದಿಂದ ದಿನಕ್ಕೆ ವಿವಿಧ ಸ್ವರೂಪ ಪಡೆಯುತ್ತಿದ್ದು, ಇದೀಗ ಧರ್ಮಸ್ಥಳ ದೇವಸ್ಥಾನದ ವಿರುದ್ಧ ಷ್ಯಡಂತ್ರದ ಆರೋಪ ಹೊತ್ತಿರುವ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆಯಾಗಿದೆ. ಹೌದು ಹುಬ್ಬಳ್ಳಿ ಮೂಲದ ರೌಡಿಶೀಟರ್ ಮದನ್ ಬುಗಾಡಿ ಎಂಬಾಂತನನ್ನ ಮಾನವಹಕ್ಕುಗಳ ಆಯೋಗದವರೆಂದು ಧರ್ಮಸ್ಥಳ ಪೊಲೀಸರಿಗೆ ಪರಿಚಯಿಸಿದ್ದಾರೆ ಎಂದು ಹಿಂದೂ ಮುಖಂಡ ಸುರೇಶ್ ಗೌಡ ದೂರು ದಾಖಲಿಸಿದ್ದಾರೆ. ಸುಳ್ಳು ಹೇಳಿ ಮಾನವ ಹಕ್ಕುಗಳ ಆಯೋಗವನ್ನ ಬಳಕೆ ಮಾಡಿಕೊಂಡಿದ್ದಾರೆ. ಇದು ಸರಿ ಅಲ್ಲ. ಅಧಿಕಾರಿಗಳು ಕೂಡ ಶೀಘ್ರ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಅಲ್ಲದೇ ಪೊಲೀಸ್ ಠಾಣೆಗೂ ಈ ಸಂಬಂಧ ಶೀಘ್ರ ದೂರು ನೀಡುತ್ತೇವೆ. ಗಿರೀಶ್ ಮಟ್ಟಣ್ಣನವರ್ ಇಲಾಖೆಯ ಹೆಸರನ್ನು ಸುಳ್ಳು ಹೇಳಲು ಬಳಸಿಕೊಂಡಿದ್ದಾರೆಂದು ಆರೋಪಿಸಿ ಕ್ರಮಕ್ಕೆ ಒತ್ತಾಯ ಮಾಡಿದ್ದಾರೆ. ದೂರು ಪಡೆದಿರುವ ಅಧಿಕಾರಿಗಳು ಈ ಬಗ್ಗೆ ಸಮಗ್ರ ಪರಿಶೀಲನೆ ಮಾಡಿ, ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಸುರೇಶ್ ಗೌಡ ತಿಳಿಸಿದರು.
ಹಾಸನ : ಹಾಸನದಲ್ಲಿ ಭೀಕರವಾದ ಕೊಲೆ ನಡೆದಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ಆಟೋ ಚಾಲಕನನ್ನು ಬರ್ಬರವಾಗಿ ಹತ್ಯೆಗೈಯ್ಯಲಾಗಿದೆ. ಹಾಸನದ ದೊಡ್ಡ ಮಂಡಿಗನಹಳ್ಳಿ ನಿವಾಸಿ ಅಂಕಿತ್ (26) ಎನ್ನುವ ಆಟೋ ಚಾಲಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿದೆ. ನಿನ್ನೆ ರಾತ್ರಿ ಅಂಕಿತ್ ಬೈಕ್ನಲ್ಲಿ ರಾಗಿ ಮುದ್ದನಹಳ್ಳಿ ಕಡೆಗೆ ಹೋಗುತ್ತಿದ್ದ ಈ ವೇಳೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ. ಘಟನೆ ಕುರಿತಂತೆ ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಣಪತಿ ಅಥರ್ವಶೀರ್ಷ ಮಂತ್ರವನ್ನು ಪಠಿಸಿ ಅದೃಷ್ಟವು ಒಲಿಯುದು ಇಷ್ಟಾರ್ಥ ಕಾರ್ಯ ಪೂರ್ಣ ಸಿದ್ದಿಯಾಗಲಿದೆ..! ಬುಧವಾರ ಗಣೇಶನನ್ನು ಅಥವಾ ಗಣಪತಿ ದೇವರನ್ನು ಸಂಪೂರ್ಣ ವಿಧಿ – ವಿಧಾನಗಳ ಮೂಲಕ ಪೂಜಿಸಲಾಗುತ್ತದೆ. ಶುಕ್ರವಾರ ಈ ಮಂತ್ರಗಳನ್ನು ಜಪಿಸುವುದರಿಂದ ವ್ಯಕ್ತಿಯು ತನ್ನ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ಪಡೆಯುತ್ತಾನೆ ಮತ್ತು ಅವನ ಎಲ್ಲಾ ದುಃಖಗಳನ್ನು ತೆಗೆದುಹಾಕಲಾಗುತ್ತದೆ. ಆ 3 ಮಂತ್ರಗಳು ಯಾವುವು..? ಬುಧವಾರ ಈ 3 ಗಣಪತಿ ಮಂತ್ರ ಪಠಿಸಿದರೆ ಗಣಪತಿ ಒಲಿಯುವನು..! ಮಂತ್ರಗಳಾವುವು..? ಗಣೇಶನನ್ನು ಯಾರು ಸಂತೋಷಗೊಳಿಸುತ್ತಾರೋ ಅವರ ನೋವುಗಳನ್ನು ಗಣೇಶನು ದೂರಾಗಿಸುತ್ತಾನೆ ಮತ್ತು ಅವರ ಆಸೆಗಳು ಪರಿಪೂರ್ಣಗೊಳ್ಳುವಂತೆ ಮಾಡುತ್ತಾನೆ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ…
ಬೆಂಗಳೂರು : ಈತ ಸಾಮಾನ್ಯ ಕಳನಲ್ಲ ಎಲ್ಲಿ ಮದುವೆ ನಡೆಯುತ್ತವೆಯೋ ಆ ಒಂದು ಕಲ್ಯಾಣ ಮಂಟಪಕ್ಕೆ ಅಥಿತಿಯಂತೆ ತೆರಳಿ ವಧು-ವರರ ಒಡವೆ ಕೊಠಡಿಗಳಿಗೆ ನುಗ್ಗಿ ಚೆನ್ನಾಭರಣ ದೋಚಿ ಅದೇ ಹಣದಿಂದ ಮೂರು ಸೈಟ್ ಮತ್ತು ಒಂದು ಮನೆ ಕಟ್ಟಿದ್ದ. ಮದುವೆ ನಡೆಯುವಾಗ ಕಲ್ಯಾಣ ಮಂಟಪಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ಮಾಗಡಿ ರೋಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೌದು ತುಮಕೂರು ಜಿಲ್ಲೆ ಗುಬ್ಬಿಯ ಪರಮೇಶ್ ಬಂಧಿತ ಆರೋಪಿ. ಈತನಿಂದ 400 ಗ್ರಾಂ ಚಿನ್ನಾಭರಣ, 91,000 ರೂ. ನಗದು ಸೇರಿ 36.91 ಲಕ್ಷ ರೂ.ಮೌಲ್ಯದ ವಸ್ತು ಜಪ್ತಿ ಮಾಡಲಾಗಿದೆ. ಅತಿಥಿ ಸೋಗಿನಲ್ಲಿ ಮದುವೆ ಸಮಾರಂಭ ನಡೆಯುತ್ತಿದ್ದ ಕಲ್ಯಾಣ ಮಂಟಪಗಳಿಗೆ ಹೋಗುತ್ತಿದ್ದ ಎನ್ನಲಾಗಿದೆ. ಆರೋಪಿ ಮಾಂಗಲ್ಯ ಧಾರಣೆ ಸಂದರ್ಭದಲ್ಲಿ ವಧು, ವರನ ಕಡೆಯವರ ರೂಂ ಗೆ ಹೋಗಿ ನಗದು, ಚಿನ್ನಾಭರಣ ದೋಚಿ ಪರಾರಿ ಆಗುತ್ತಿದ್ದ. ಕದ್ದ ಆಭರಣಗಳನ್ನು ಮಾರಾಟ ಮಾಡುತ್ತಿದ್ದ. ಕಾಮಾಕ್ಷಿಪಾಳ್ಯ, ಕೆಂಗೇರಿ, ಬಸವನಗುಡಿ, ಮಾಗಡಿ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳವು ಮಾಡಿದ್ದ…