Subscribe to Updates
Get the latest creative news from FooBar about art, design and business.
Author: kannadanewsnow05
ದಕ್ಷಿಣಕನ್ನಡ : ರಾಜಧಾನಿ ಬೆಂಗಳೂರು ಮಹಾನಗರ ಸೇರಿದಂತೆ ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ವರುಣಾರ್ಭಟದಿಂದ ಅನೇಕ ಕಡೆಗಳಲ್ಲಿ ಅವಾಂತರ ಸೃಷ್ಟಿಯಾಗಿದ್ದು ಹಲವು ಜನರು ಮಹಾಮಳೆಗೆ ಬಲಿಯಾಗಿದ್ದಾರೆ. ಈಗ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೌದು ಮಳೆಗೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮೀನುಗಾರರ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದ್ದಾರೆ. ಅಲ್ಲದೆ ಪ್ರವಾಸಿಗರು ಮತ್ತು ಸಮುದ್ರ ತೀರ ಮತ್ತು ಚಾರಣಕ್ಕೆ ಹೋಗದಂತೆ ನಿರ್ಬಂಧ ವಿಧಿಸಲಾಗಿದೆ.
ಕೊಪ್ಪಳ : ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಂತ ಹಂತವಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಅದರಲ್ಲಿ ಗೃಹಲಕ್ಷ್ಮಿ ಮತ್ತು ಶಕ್ತಿ ಯೋಜನೆ ಬಹಳ ಪ್ರಮುಖವಾಗಿರುವ ಗ್ಯಾರೆಂಟಿ ಯೋಜನೆಗಳಾಗಿವೆ. ಇದೀಗ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ ಅವರು ಜುಲೈನಿಂದ ಅನರ್ಹರಿಗೆ ಗ್ಯಾರಂಟಿ ಬಂದ್ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನಲ್ಲಿ ಮಾತನಾಡಿದ ಅವರು, ಗ್ಯಾರಂಟಿಗಳಲ್ಲಿ ಅನರ್ಹ ಫಲಾನುಭವಿಗಳಿಗೂ ಯೋಜನೆಯ ಲಾಭಹೋಗುತ್ತಿದೆ. ಈ ಕುರಿತು ರಾಜ್ಯಾದ್ಯಂತ ತನಿಖೆ ಮಾಡಿಸಿ ಜುಲೈನಿಂದ ಅನರ್ಹರಿಗೆ ಗ್ಯಾರಂಟಿ ಲಾಭ ತಲುಪದಂತೆ ಕಡಿವಾಣ ಹಾಕಲಾಗುವುದು ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ತಿಳಿಸಿದ್ದಾರೆ. ಒಂದು ವಿಧಾನಸಭಾ ಕ್ಷೇತ್ರಕ್ಕೆ ವರ್ಷಕ್ಕೆ ಗ್ಯಾರಂಟಿ ಯೋಜನೆಯಡಿ ಅಂದಾಜು 250 ಕೋಟಿ ಹಣ ನೀಡುತ್ತಿದ್ದು, ಯೋಜನೆಗಳು ಜನರ ಮನೆ ಬಾಗಿಲಿಗೆ ತಲುಪಿವೆ. ಆದರೆ, ಅರ್ಹ lಅಲ್ಲದವರಿಗೂ ಸಹ ಯೋಜನೆ ಲಾಭಸಿಗುತ್ತಿದೆ. ಈ ಬಗ್ಗೆ ರಾಜ್ಯಮಟ್ಟದಲ್ಲಿ ಅಧಿಕಾರಿಗಳ ತಂಡ ರಚಿಸಿ ತನಿಖೆ ಮಾಡಲು ಮುಖ್ಯಮಂತ್ರಿಗೆ ತಿಳಿಸಲಾಗುವುದು…
ಬೆಂಗಳೂರು : ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ಬಾಂಗ್ಲಾದೇಶ ಸೇರಿದಂತೆ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ಗಣತಿ ನಡೆಯಿಸಿ ಶೀಘ್ರದಲ್ಲಿ ವರದಿ ನೀಡುವಂತೆ ಗೃಹ ಸಚಿವ ಜಿ ಪರಮೇಶ್ವರ್ ಅವರು ಪೊಲೀಸ್ ಅಧಿಕಾರಿಗಳಿಗೆ ಇದೀಗ ಸೂಚನೆ ನೀಡಿದ್ದಾರೆ. ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದೇಶಿ ಪ್ರಜೆಗಳ ಕುರಿತು ಮಾಹಿತಿ ಸಂಗ್ರಹಿಸಿ ವರದಿ ಬಹಿರಂಗಪಡಿಸಲಾಗುತ್ತದೆ ಎಂದರು. ಹಾಸನ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕಾಫಿ ತೋಟಗಳಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಕಾರ್ಮಿಕರಾಗಿದ್ದಾರೆ ಎಂಬ ಮಾಹಿತಿ ಇದೆ. ಅದೇ ರೀತಿ ಬೆಂಗಳೂರಿನ ಆನೇಕಲ್ ಸೇರಿ ಕೆಲ ಪ್ರದೇಶಗಳಲ್ಲಿ ಬಾಂಗ್ಲಾ ಪ್ರಜೆಗಳು ನೆಲೆಸಿದ್ದಾರೆ. ಹಾಸನ, ಕೊಡಗು, ಚಿಕ್ಕಮಗಳೂರು ಕಾಫಿ ತೋಟದಲ್ಲಿ ಹೆಚ್ಚು ಅಕ್ರಮ ಬಾಂಗ್ಲಾ ವಲಸಿಗರು ಇದ್ದಾರೆ. ಬೆಂಗಳೂರು ಹಾಗೂ ಸುತ್ತಮುತ್ತ ಕೂಡ ಬಾಂಗ್ಲ ನ್ನರು ಸೇರಿ 3 ದೇಶಗಳ ವಲಸಿಗರು ಹೆಚ್ಚು.ಈ ಹಿಂದೆ 200 ವಿದೇಶಿ ಪ್ರಜೆಗಳು ಗಡೀಪಾರು, ಇನ್ನೂ ಹಲವರು ಇಲ್ಲೇ ಅಕ್ರಮವಾಗಿ…
ಬೆಂಗಳೂರು : ಬೆಂಗಳೂರು ಮಹಾನಗರದಲ್ಲಿ ಇತ್ತೀಚಿಗೆ ಡ್ರಗ್ಸ್ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತೀವೆ. ಈ ಹಿನ್ನೆಲೆಯಲ್ಲಿ ಡ್ರಗ್ಸ್ ತಡೆಗಟ್ಟಲು ಪೊಲೀಸರಿಗೆ ಕಠಿಣ ಕ್ರಮ ಕೈಗೊಳ್ಳುವಂತೆ ಈಗಾಗಲೇ ಸೂಚಿಸಿದ್ದೇನೆ ಎಂದು ಗೃಹ ಸಚಿವ ಶಿವ ಪರಮೇಶ್ವರ್ ಅವರು ತಿಳಿಸಿದರು. ಬೆಂಗಳೂರಿನಲ್ಲಿ ನಿನ್ನೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಗರದಲ್ಲಿ ನೆಲೆಸಿರುವ ವಿದೇಶಿಗರ ಕುರಿತು ಮಾಹಿತಿ ಸಂಗ್ರಹಿಸುವಂತೆ ಸೂಚಿಸಿದ್ದೇನೆ. ಅಕ್ರಮ ವಲಸಿಗರ ಮಾಹಿತಿಯೂ ಗೊತ್ತಾಗುತ್ತದೆ. ಡ್ರಗ್ಸ್ ದಂಧೆಯನ್ನು ಹತೋಟಿಗೆ ತಂದಿದ್ದೇವೆ. ನಗರದಲ್ಲಿ ಡ್ರಗ್ಸ್ ಸಿಗುತ್ತಿದೆ ಎಂಬ ಮಾತುಗಳು ಸಾರ್ವಜನಿಕರಿಂದ ಬರುತ್ತಿವೆ. ಡ್ರಗ್ಸ್ ಚಟುವಟಿಕೆಗಳನ್ನು ಮಟ್ಟ ಹಾಕಲು ಮತ್ತಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಇದನ್ನು ನಿರ್ಲಕ್ಷ್ಯಿಸುವ ಪೊಲೀಸ್ ಅಧಿಕಾರಿಗಳನ್ನೆ ಹೊಣೆಯನ್ನಾಗಿ ಮಾಡಲಾಗುವುದು. ಮಹಿಳೆಯರು ಮತ್ತು ಮಕ್ಕಳಾ ಸುರಕ್ಷತೆಗೆ ಸೂಕ್ತ ಕ್ರಮ ತೆಗದುಕೊಂಡಿದ್ದೇವೆ. ನಿರ್ಭಯಾ ಯೋಜನೆಯಡಿ 9 ಸಾವಿರ ಕ್ಯಾಮೆರಾಗಳನ್ನು ಅಳವಡಿಸಿದ್ದೇವೆ. ಸೇಫ್ಟಿ ಐಲ್ಯಾಂಡ್ಸ್ ಸ್ಥಾಪಿಸಲಾಗಿದೆ. ಬೆಂಗಳೂರು ಸೇಫ್ ಸಿಟಿ ಎಂದು ಸೇಫ್ ಸಿಟಿ ವರದಿ ಬಂದಿದೆ. ಬೆಂಗಳೂರು ನಗರ ಪೊಲೀಸ್ ಇಷ್ಟಕ್ಕೆ ಸಮಾದಾನ ಪಟ್ಟುಕೊಳ್ಳದೇ, ಮತ್ತಷ್ಟು…
ಬೆಂಗಳೂರು : ಈಗಾಗಲೇ ಕೆಎಸ್ಆರ್ಟಿಸಿ ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿ ರಾಜ್ಯ ಸರ್ಕಾರ ಜನರಿಗೆ ಶಾಕ್ ನೀಡಿದೆ. ಇದೀಗ ಬೆಂಗಳೂರಿನ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಇಂದಿನಿಂದಲೇ ಆಟೋ ಪ್ರಯಾಣದ ದರ 40 ರೂಪಾಯಿಗೆ ಏರಿಕೆ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಹೌದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ನೇತೃತ್ವದಲ್ಲಿ ಇಂದು ಸಭೆ ನಡೆಸಲಾಗುತ್ತಿದೆ. ಸಭೆಯಲ್ಲಿ ಪ್ರಮುಖ ಆಟೋ ಸಂಘಟನೆಗಳ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಆಟೋ ಪ್ರಯಾಣ ಮಿನಿಮಮ್ ದರ 30 ರು.ನಿಂದ 40 ರು. ಹಾಗೂ ನಂತರದ ಪ್ರತಿ ಕಿಮೀ 15 ರು.ನಿಂದ 20 ರು.ಗೆ ಹೆಚ್ಚಿಸುವಂತೆ ಆಟೋ ಸಂಘಟನೆಗಳ ಪ್ರಮುಖರು ಮನವಿ ಮಾಡುವ ಸಾಧ್ಯತೆಗಳಿವೆ. ಹಾಗಾಗಿ ನಗರದಲ್ಲಿ ಆಟೋ ಪ್ರಯಾಣ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ನೇತೃತ್ವದಲ್ಲಿ ಆಟೋ ಸಂಘಟನೆಗಳ ಪ್ರತಿನಿಧಿಗಳ ಸಭೆ ನಡೆಸಲಾಗುತ್ತಿದ್ದು, ಇಂದಿನಿಂದಲೇ ಆಟೋ ಪ್ರಯಾಣ ದರ ಹೆಚ್ಚಳದ ಆದೇಶ ಹೊರಬೀಳುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಅದರ ಜತೆಗೆ…
ಬೆಂಗಳೂರು : ರಾಜ್ಯದಲ್ಲಿ ಕೊರೋನಾ ( Corona ) ಪ್ರಕರಣಗಳ ಸಂಖ್ಯೆ ಶತಕ ತಲುಪಿದೆ. ಇಂದು 36 ಜನರಿಗೆ ಕೋವಿಡ್ ಪಾಸಿಟಿವ್ ( Covid19 Positive ) ಎಂಬುದಾಗಿ ದೃಢಪಡುವ ಮೂಲಕ ಸಕ್ರೀಯ ಪ್ರಕರಣಗಳ ಸಂಖ್ಯೆ 100ಕ್ಕೆ ಏರಿಕೆಯಾಗಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಯಿಂದ ಕೋವಿಡ್ ಬುಲೆಟಿನ್ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಇಂದು ಆರ್ ಟಿ ಪಿಸಿಆರ್ ಮೂಲಕ 361, ರಾಟ್ ಮೂಲಕ 20 ಜನರು ಸೇರಿದಂತೆ 381 ಮಂದಿಯನ್ನು ಕೋವಿಡ್ ಪರೀಕ್ಷೆಗೆ ( Covid Test ) ಒಳಪಡಿಸಲಾಯಿತು. ಇವರಲ್ಲಿ 36 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ 100ಕ್ಕೆ ಏರಿಕೆಯಾಗಿದೆ ಎಂಬುದಾಗಿ ಹೇಳಿದೆ. ಸದ್ಯ ರಾಜ್ಯದಲ್ಲಿ ನಾಲ್ವರು ಆಸ್ಪತ್ರೆಯ ಜನರಲ್ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನುಳಿದವರಿಗೆ ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬುದಾಗಿ ತಿಳಿಸಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳ ( Corona Case ) ಸಂಖ್ಯೆ…
ಬೆಂಗಳೂರು : ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಸುಮಾರು 15 ಸಾವಿರ ಹುದ್ದೆಗಳು ಖಾಲಿ ಇವೆ. ಅದನ್ನು ಭರ್ತಿ ಮಾಡಲಾಗುವುದು. ಈಗಾಗಲೇ 545 ಪಿಎಸ್ಐಗಳು ತರಬೇತಿ ಪಡೆಯುತ್ತಿದ್ದಾರೆ. 402 ಪಿಎಸ್ಐ ಫಲಿತಾಂಶ ಬಾಕಿ ಇದೆ. ಶೀಘ್ರವಾಗಿ ಬಿಡುಗಡೆ ಮಾಡಲಾಗುವುದು. ಇದರಲ್ಲಿ 219 ಪಿಎಸ್ಐಗಳನ್ನು ಬೆಂಗಳೂರು ನಗರಕ್ಕೆ ನೀಡಲಾಗುವುದು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದರು. ಡ್ರಗ್ಸ್ ದಂಧೆಯನ್ನು ಹತೋಟಿಗೆ ತಂದಿದ್ದೇವೆ. ನಗರದಲ್ಲಿ ಡ್ರಗ್ಸ್ ಸಿಗುತ್ತಿದೆ ಎಂಬ ಮಾತುಗಳು ಸಾರ್ವಜನಿಕರಿಂದ ಬರುತ್ತಿವೆ. ಡ್ರಗ್ಸ್ ಚಟುವಟಿಕೆಗಳನ್ನು ಮಟ್ಟ ಹಾಕಲು ಮತ್ತಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಇದನ್ನು ನಿರ್ಲಕ್ಷ್ಯಿಸುವ ಪೊಲೀಸ್ ಅಧಿಕಾರಿಗಳನ್ನೆ ಹೊಣೆಯನ್ನಾಗಿ ಮಾಡಲಾಗುವುದು. ಮಹಿಳೆಯರು ಮತ್ತು ಮಕ್ಕಳಾ ಸುರಕ್ಷತೆಗೆ ಸೂಕ್ತ ಕ್ರಮ ತೆಗದುಕೊಂಡಿದ್ದೇವೆ. ನಿರ್ಭಯಾ ಯೋಜನೆಯಡಿ 9 ಸಾವಿರ ಕ್ಯಾಮೆರಾಗಳನ್ನು ಅಳವಡಿಸಿದ್ದೇವೆ. ಸೇಫ್ಟಿ ಐಲ್ಯಾಂಡ್ಸ್ ಸ್ಥಾಪಿಸಲಾಗಿದೆ. ಬೆಂಗಳೂರು ಸೇಫ್ ಸಿಟಿ ಎಂದು ಸೇಫ್ ಸಿಟಿ ವರದಿ ಬಂದಿದೆ. ಬೆಂಗಳೂರು ನಗರ ಪೊಲೀಸ್ ಇಷ್ಟಕ್ಕೆ ಸಮಾದಾನ ಪಟ್ಟುಕೊಳ್ಳದೇ, ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಲಿದೆ ಎಂದು…
ಬೆಳಗಾವಿ : ರಾಜ್ಯದಲ್ಲಿ ಈಗಾಗಲೇ ಭಾರಿ ಮಳೆಯಿಂದಾಗಿ ಹಲವರು ಬಲಿಯಾಗಿದ್ದಾರೆ. ಇದೀಗ ಬೆಳಗಾವಿಯಲ್ಲಿ ದಾರುಣ ಘಟನೆ ಒಂದು ನಡೆದಿದ್ದು, ಹಳ್ಳದಲ್ಲಿ ಎತ್ತಿನಗಾಡಿ ಮಗುಚಿ ಬಿದ್ದು ಇಬ್ಬರು ಬಾಲಕರು ಸೇರಿ ಒಂದು ಎತ್ತು ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ನಾಗನೂರ ಪಿಎ ಗ್ರಾಮದಲ್ಲಿ ನಡೆದಿದೆ. ಅಥಣಿ ತಾಲ್ಲೂಕಿನ ಸಂಬರಗಿ ಗ್ರಾಮದಲ್ಲಿ ನಿನ್ನೆ ಮಳೆ ನೀರಿನಿಂದ ತುಂಬಿ ಹರಿಯುತ್ತಿದ್ದ ಅಗ್ರಾಣಿ ಹಳ್ಳವನ್ನು ಎತ್ತಿನ ಬಂಡಿಯಲ್ಲಿ ದಾಟುವಾಗ, ನಾಗನೂರ ಪಿಎ ಗ್ರಾಮದ ಸಹೋದರರಾದ ದೀಪಕ ಕಾಂಬಳೆ (9), ಗಣೇಶ ಕಾಂಬಳೆ (7) ಮತ್ತು ಒಂದು ಎತ್ತು ಸಾವನ್ನಪ್ಪಿದೆ. ನಿರಂತರ ಮಳೆಯಿಂದಾಗಿ ಹಳ್ಳ ಸಂಪೂರ್ಣವಾಗಿ ತುಂಬಿ ಹರಿಯುತ್ತಿತ್ತು. ಈ ವೇಳೆ ಎತ್ತಿನ ಬಂಡಿಯಲ್ಲಿ ಬರುತ್ತಿದ್ದ ಇಬ್ಬರು ಬಾಲಕರಿ ದಾರಿ ಕಾಣಿಸಿಲ್ಲ. ತಕ್ಷಣ ಎತ್ತಿನಬಂಡಿ ಮುಗುಚಿ ಬಿದ್ದಿದೆ.ಹಳ್ಳಕ್ಕೆ ಸೇತುವೆ ಇಲ್ಲದಿರುವುದರಿಂದ ಘಟನೆ ನಡೆದಿದೆ ಎಂದು ಆಕ್ರೋಶ ವ್ಯಕ್ತವಾಗಿದೆ. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ವಿರೋಧಿಸಿ ಮಂಗಳೂರು ಬಂದ್ ಗೆ ಕರೆ ನೀಡಿದ್ದ ವಿಶ್ವ ಹಿಂದೂ ಪರಿಷತ್ತು ಮುಖಂಡ ಶರಣ್ ಪಂಪ್ವೆಲ್ ಅವರನ್ನು ಇದೀಗ ಅರೆಸ್ಟ್ ಮಾಡಲಾಗಿತ್ತು. ಬಳಿಕ ಜಸ್ಟ್ ಮುಂದೆ ಹಾಜರುಪಡಿಸಿದ ನಂತರ ನ್ಯಾಯಾಲಯ ಶರಣ್ ಅವರಿಗೆ ಜಾಮೀನು ನೀಡಿದೆ. ಹೌದು ಮಂಗಳೂರಿನಲ್ಲಿ ನಡುರಸ್ತೆಯಲ್ಲಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಭೀಕರವಾಗಿ ಕೊಲೆ ಮಾಡಲಾಗಿತ್ತು. ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಮಂಗಳೂರು ಬಂದ್ ಗೆ ಕರೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಶರಣ್ ಪಂಪ್ ವೆಲ್ ರನ್ನು ಅರೆಸ್ಟ್ ಮಾಡಲಾಗಿತ್ತು. ನಿನ್ನೆ ರಾತ್ರಿ ನಗರದ ಬೋಂದೆಲ್ನಲ್ಲಿರುವ ನ್ಯಾಯಾಧೀಶರ ನಿವಾಸದಲ್ಲಿ ಶರಣ್ ಪಂಪ್ವೆಲ್ ಅವರನ್ನು ಹಾಜರುಪಡಿಸಿದರು. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿ ವಿಚಾರಣೆಯನ್ನು ಬುಧವಾರಕ್ಕೆ (ಮೇ 28)…
ಮಂಗಳೂರು : ಕಳೆದ ಕೆಲವು ದಿನಗಳ ಹಿಂದೆ ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ ಶೆಟ್ಟಿ ಭೀಕರ ಕೊಲೆ ನಡೆದಿತ್ತು. ಈ ಒಂದು ಘಟನೆ ಮಾಸುವ ಮುನ್ನವೇ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಯುವಕನೋರ್ವವನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹೌದು ಯುವಕನ ಹತ್ಯೆಯ ಬಳಿಕ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆದಂತೆ ಮುನ್ನೆಚ್ಚರಿಕ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೇ 27ರ ಸಂಜೆ 6 ಗಂಟೆಯಿಂದ ಮೇ 30ರ ಸಂಜೆ 6ರವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ. ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿ ಇಬ್ಬರು ಮುಸ್ಲಿಂ ಯುವಕರ ಮೇಲೆ ಮಂಗಳವಾರ (ಮೇ 27) ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದರು. ಪರಿಣಾಮ ಕೊಳತ್ತಮಜಲು ನಿವಾಸಿ ರಹೀಮ್ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಾಯಾಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ…













