Author: kannadanewsnow05

ಹುಬ್ಬಳ್ಳಿ : ಮುಸ್ಲಿಂ ಯುವಕನನ್ನು ಮದುವೆಯಾಗಿದ್ದ ಹಿಂದೂ ಯುವತಿಗೆ ಪತಿ ಇಸ್ಲಾಂ ಧರ್ಮಕ್ಕೆ ಮತಾಂತರ ಆಗುವಂತೆ ಕಿರುಕುಳ ನೀಡಿದ್ದಾನೆ ಈ ವಿಚಾರವಾಗಿ ಪತ್ನಿ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪತಿಯ ವಿರುದ್ಧ ಇದೀಗ ದೂರು ದಾಖಲಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಪತಿ ಶಫಿ‌ ಅಹ್ಮದ್ ಕರ್ನೂಲ್ ವಿರುದ್ಧ ಪತ್ನಿ ಲಕ್ಷ್ಮೀ ಕಿರುಕುಳ ಆರೋಪ ಮಾಡಿದ್ದಾರೆ. ಈ ಕುರಿತು ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪತಿ ವಿರುದ್ಧ ದೂರನ್ನು ಸಹ ದಾಖಲಿಸಿದ್ದಾರೆ.ಇವರು ಕಳೆದ 2014-15ರಲ್ಲಿ ಪ್ರೀತಿಸಿ ರಿಜಿಸ್ಟರ್ ಮದುವೆಯಾಗಿದ್ದರು. 2017ರಲ್ಲಿ ಅಧಿಕೃತವಾಗಿ ಮದುವೆಯಾಗಿದ್ದರು. ಬಳಿಕ ಶಫಿ ಮತ್ತು ಲಕ್ಷ್ಮೀ ದಂಪತಿ ಹುಬ್ಬಳ್ಳಿಯ ಮಂಟೂರು ರಸ್ತೆ ವಾಸವಾಗಿದ್ದರು. ಅನಿಲ್ ಎಂಬ ಹೆಸರು ಹೇಳಿ ಶಫಿ ಅಹ್ಮದ್ ಮದುವೆಯಾಗಿದ್ದ. ಶಫಿ ಸುಳ್ಳು ಹೇಳಿ ಮದುವೆಯಾಗಿದ್ದಾನೆಂದು, ಮದುವೆ ಬಳಿಕ‌ ಇಸ್ಲಾಂಗೆ ಮತಾಂತರವಾಗುವಂತೆ ಕಿರುಕುಳ ನೀಡುತ್ತಿರುವುದಾಗಿ ಲಕ್ಷ್ಮೀ ಆರೋಪಿಸಿದ್ದಾರೆ. ಸದ್ಯ ಈ ವಿಚಾರವಾಗಿ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಗೆ ಲಕ್ಷ್ಮೀ ದೂರು ನೀಡಿದ್ದಾರೆ.

Read More

ಕಲಬುರ್ಗಿ : ಬೀದರ್ ನಲ್ಲಿ ರೈಗೆ ತಲೆಕೊಟ್ಟು ಯುವ ಗುತ್ತಿಗೆದಾರ ಸಚಿನ್ ಪಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಪ್ರಕರಣದ ಪ್ರಮುಖ ಆರೋಪಿಯಾಗಿರುವ ರಾಜು ಕಪನೂರು ನಿವಾಸದ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಹೌದು ಆರೋಪಿ ರಾಜು ಕಪನೂರು ಮನೆಯ ಮೇಲೆ ಸಿಐಡಿ ದಾಳಿ ಮಾಡಿದೆ. ಇದೆ ವೇಳೆ ರಾಜು ಕಪನೂರ್ ಸೇರಿ ನಾಲ್ವರು ಆರೋಪಿಗಳ ಮೇಲೆ ಮನೆಯ ಮೇಲೆ ಸಿಐಡಿ ದಾಳಿ ಮಾಡಿದೆ ಎಂದು ತಿಳಿದುಬಂದಿದೆ. ಈಗಾಗಲೇ ಬಂಧಿತ ಎಲ್ಲಾ ಆರೋಪಿಗಳನ್ನು 14 ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ನೀಡಿದೆ. ಕಲಬುರ್ಗಿಯ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ರಾಜು ಕಪನೂರ್ ನಿವಾಸದ ಮೇಲೆ ದಾಳಿ ಮಾಡಿದ್ದು ಅವರಲ್ಲದೆ ಉಳಿದ ಆರೋಪಿಗಳಾದ ಗೊರಖ್ ನಾಥ್, ರಾಮನಗೌಡ, ನಂದಕುಮಾರ್ ನಾಲ್ವರು ಆರೋಪಗಳ ಮನೆಯಲ್ಲಿ ಸಿಐಡಿ ಇದೀಗ ಶೋಧ ಕಾರ್ಯ ನಡೆಸಿದ್ದಾರೆ ಇಬ್ಬರು ಡಿವೈಎಸ್ಪಿ ಇನ್ಸ್ಪೆಕ್ಟರ್ 40 ಸಿಬ್ಬಂದಿಗಳಿಂದ ಇದೀಗ ತನಿಖೆ ಚುರುಕು ಗೊಳಿಸಿದ್ದಾರೆ.

Read More

ಬೆಂಗಳೂರು : ನಟಿ ರಾಗಿಣಿ ದ್ವಿವೇದಿ ಹೆಸರು ಡ್ರಗ್ಸ್ ಕೇಸ್​ನಲ್ಲಿ ತಳುಕು ಹಾಕಿಕೊಂಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ 2020ರ ಸೆಪ್ಟೆಂಬರ್​ನಲ್ಲಿ ರಾಗಿಣಿ ಅವರನ್ನು ಬಂಧಿಸಲಾಗಿತ್ತು. ಅವರು ಹಲವು ದಿನ ಜೈಲಿನಲ್ಲೂ ಕೂಡ ಇದ್ದರು. ನಾಲ್ಕು ವರ್ಷಗಳ ಬಳಿಕ ಡ್ರಗ್ಸ್​ ಕೇಸ್​ನಲ್ಲಿ ರಾಗಿಣಿ ನಿರಪರಾಧಿ ಎಂಬುದು ಸಾಬೀತಾಗಿದೆ. ನಟಿಯ ವಿರುದ್ಧ ಯಾವುದೇ ಸಾಕ್ಷ್ಯ ಸಿಗದ ಕಾರಣ ಕೇಸ್ ಖುಲಾಸೆ ಮಾಡಿ ಹೈಕೋರ್ಟ್​ ಆದೇಶ ನೀಡಿದೆ. ಇದರಿಂದ ರಾಗಿಣಿ ಅವರು ರಿಲೀಫ್ ಆಗಿದ್ದಾರೆ. ಹೌದು ರಾಗಿಣಿ ವಿರುದ್ಧ ಪಾರ್ಟಿ ಆಯೋಜಿಸಿ ಡ್ರಗ್ಸ್ ಬಳಕೆಗೆ ಅವಕಾಶ ನೀಡಲಾಗಿತ್ತು ಎನ್ನುವ ಆರೋಪವಿತ್ತು, ಆದರೆ ಆರೋಪದ ಯಾವುದೇ ಸಾಕ್ಷ್ಯಾಧಾರಗಳನ್ನು ಹಾಜರುಪಡಿಸಿಲ್ಲ. ಕೇವಲ ಸಹ ಆರೋಪಿಗಳ ಹೇಳಿಕೆ ಆಧರಿಸಿ ಕೇಸ್ ದಾಖಲಿಸಲಾಗಿದೆ ಎಂದು ರಾಗಿಣಿ ಪರ ವಕೀಲ ಎ. ಮೊಹಮ್ಮದ್ ತಾಹಿರ್ ವಾದ ಮಂಡಿಸಿದ್ದರು.ಪ್ರಕರಣದ ವಾದ ಆಲಿಸಿದ ಹೈಕೋರ್ಟ್ ಏಕಸದಸ್ಯ ಪೀಠದನ್ಯಾಯಮೂರ್ತಿ ಹೇಮಂತ್ ಚಂದನ ಗೌಡರ್ ಪ್ರಕರಣ ರದ್ದುಪಡಿಸಿ ಆದೇಶ ಹೊರಡಿಸಿದ್ದಾರೆ. ಎ. ನಾಲ್ಕು ಆರೋಪಿ ಪ್ರಶಾಂತ್ ರಂಕಾ ವಿರುದ್ಧದ…

Read More

ಬೆಳಗಾವಿ : ರಸ್ತೆ ಮೇಲೆ ನಾಯಿ ಅಡ್ಡ ಬಂದಿದ್ದಕ್ಕೆ ಅದನ್ನು ತಪ್ಪಿಸಲು ಹೋಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಾರು ಅಪಘಾತವಾಗಿದ್ದು, ಈ ಒಂದು ಅಪಘಾತದಲ್ಲಿ ಅವರ ಸಹೋದರ ಚೆನ್ನರಾಜ ಹಟ್ಟಿಹೊಳಿ ಪ್ರಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಬೆಳಗಾವಿಯ ವಿಜಯ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಈ ಕುರಿತು ಆಸ್ಪತ್ರೆಯ ವೈದ್ಯ ರವಿ ಪಾಟೀಲ್ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬೆನ್ನುಮೂಳೆ ಮುರಿದಿದೆ ಎಂದು ಹೇಳಿಕೆ ನೀಡಿದ್ದಾರೆ. ಬೆಳಗಾವಿಯ ಹಿರಿಯ ಆಸ್ಪತ್ರೆಯ ವೈದ್ಯರದಂತಹ ಡಾ. ರವಿ ಪಾಟೀಲ್ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಎರಡು ದಿನಗಳ ಬಳಿಕ ಸಚಿವೆ ಹೆಬ್ಬಾಳ್ಕರ್ ಅವರ ಆರೋಗ್ಯದ ಸ್ಥಿತಿ ಪರಿಗಣಿಸಿ ಡಿಸ್ಚಾರ್ಜ್ ಮಾಡಲಾಗುತ್ತದೆ. ಸಚಿವೆ ಹೆಬ್ಬಾಳ್ಕರ್ ಅವರಿಗೆ ಒಂದು ತಿಂಗಳು ಬೆಡ್ ರೆಸ್ಟ್ ಬೇಕಾಗುತ್ತದೆ ಚನ್ನರಾಜಟಿಹೊಳಿ ತಲೆಗೆ ಪೆಟ್ಟಾಗಿದ್ದು ಹೆಚ್ಚಿನ ಗಾಯಗಳಾಗಿಲ್ಲ ಎಂದು ಬೆಳಗಾವಿಯ ವಿಜಯ ರವಿ ಪಾಟೀಲ್ ಕುರಿತು ಹೇಳಿಕೆ ನೀಡಿದರು. ಹೆಬ್ಬಾಳ್ಕರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು…

Read More

ಬೆಂಗಳೂರು : ಕನ್ನಡದ ರಿಯಾಲಿಟಿ ಶೋಗಳಲ್ಲಿ ಅತ್ಯಂತ ಜನಪ್ರಿಯವಾದ ರಿಯಾಲಿಟಿ ಶೋ ಸದ್ಯಕ್ಕೆ ಬಿಗ್ ಬಾಸ್ ಸೀಸನ್ 11. ಈಗಾಗಲೇ ಬಿಗ್ ಬಾಸ್ ಸ್ಪರ್ಧಿ ಹಾಗೂ ಕನ್ನಡ ನಾಡಿನ ಎಲ್ಲ ಜನತೆಗೆ ಮೆಚ್ಚುಗೆಗೆ ಪಾತ್ರವಾದಂತಹ ಹನುಮಂತು ಟಿಕೆಟ್ ಟು ಫಿನಾಲೆ ಟಾಸ್ಕ್‌ ಗೆದ್ದು‌ ಫಿನಾಲೆಗೆ ಹೋಗಿದ್ದಾರೆ. ಇದರ ಬೆನ್ನಲ್ಲೇ ನಿನ್ನೆ ಚೈತ್ರಾ ಕುಂದಾಪುರ ಬಿಗ್ ಬಾಸ್ ಮನೆಯಿಂದ ಆಚೆ ಹೋಗಿದ್ದಾರೆ. ಇದೆಲ್ಲದರ ಮಧ್ಯ ಮತ್ತೊಂದು ವಿಷಯ ಹರಿದಾಡುತ್ತಿದ್ದು, ಫಿನಾಲೆ ಇನ್ನು ಕೆಲವೇ ದಿನಗಳಿಷ್ಟೇ ಇವೆ. ಈ ನಡುವೆ ವಿಕಿಪಿಡಿಯಾ ಬಿಗ್‌ ಬಾಸ್‌ ಸೀಸನ್‌ -11ರ ವಿನ್ನರ್‌ ಯಾರೆಂದು ಫಿನಾಲೆಗೂ ಮೊದಲೇ ಹೆಸರು ರಿವೀಲ್‌ ಮಾಡಿ ಇಕ್ಕಟ್ಟಿಗೆ ಸಿಲುಕಿದೆ. ವಿಕಿಪಿಡಿಯಾದಲ್ಲಿ ಹನುಮಂತು ವಿನ್ನರ್‌, ತ್ರಿವಿಕ್ರಮ್‌ ರನ್ನರ್‌ ಅಪ್ ಎಂದು ವಿಕಿಪಿಡಿಯಾದಲ್ಲಿ ಹಾಕಲಾಗಿದೆ. ಫಿನಾಲೆಗೂ ಮುನ್ನ ಈ ರೀತಿ ಹಾಕಿರುವುದು ವಿವಾದಕ್ಕೆ ಕಾರಣವಾಗಿದೆ. ಇದನ್ನು ನೋಡಿ ಕೆಲ ವೀಕ್ಷಕರು ಖುಷ್‌ ಆಗಿದ್ದು, ಇನ್ನು ಕೆಲವರು ಪ್ರಶ್ನೆ ಮಾಡಿದ್ದಾರೆ. ಚೈತ್ರಾ ಆಚೆ ಹೋದ ಬಳಿಕ ಬಿಗ್‌…

Read More

ಹಾಸನ : ಹಾಸನದಲ್ಲಿ ಚಲಿಸುತ್ತಿದ್ದಂತಹ ಕೆಎಸ್ಆರ್ಟಿಸಿ ಬಸ್ಸಿನ ಚಕ್ರಗಳು ಏಕಾಏಕಿ ಕತ್ತರಿಸಿ ಕಳಚಿ ಬಿದ್ದಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬ್ಯಾದನೆ ಗ್ರಾಮದಲ್ಲಿ ಈ ಒಂದು ಅನಾಹುತ ನಡೆದಿದೆ ಆದರೆ ಚಾಲಕನ ಸಮಯ ಪ್ರಜ್ಞೆಯಿಂದ ಬಸ್ ನಲ್ಲಿ ಇದ್ದಂತಹ ಪ್ರಯಾಣಿಕರು ಎಲ್ಲರೂ ಪ್ರಾಣಪಾಯದಿಂದ ಪಾರಾಗಿದ್ದಾರೆ. ಹೌದು ಸಕಲೇಶಪುರ ತಾಲೂಕಿನ ಬ್ಯಾದನೆ ಬಳಿ ಭಾರಿ ಅನಾಹುತ ಒಂದು ತಪ್ಪಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬ್ಯಾದನೆ ಗ್ರಾಮದಲ್ಲಿ ಚಲಿಸುತ್ತಿದ್ದ ಬಸ್ನ ಚಕ್ರಗಳು ಏಕಾಏಕಿ ಕತ್ತರಿಸಿ ಬಿದ್ದಿವೆ. ಸಕಲೇಶಪುರದಿಂದ ಕೆಎಸ್ಆರ್ಟಿಸಿ ಬಸ್ ಬೇಲೂರಿಗೆ ತೆರುಳುತ್ತಿತ್ತು. ಚಕ್ರಗಳು ಕಳಚಿ ಬೀಳುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಅಡ್ಡಾದಿಡ್ಡಿ ಚಲಿಸಿದೆ. ಕೂಡಲೇ ಚಾಲಕ ಬಸ್ ಅನ್ನು ನಿಲ್ಲಿಸಿ ಪ್ರಯಾಣಿಕರನ್ನು ಪ್ರಾಣಪಾಯದಿಂದ ಪಾರು ಮಾಡಿದ್ದಾನೆ. ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಈ ಒಂದು ಭಾರಿ ದುರಂತ ಇದೀಗ ತಪ್ಪಿದೆ. ಘಟನೆ ಕುರಿತಂತೆ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಚಿಕ್ಕಮಗಳೂರು : ನಿನ್ನೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ರಾಕ್ಷಸನೊಬ್ಬ ರಸ್ತೆಯ ಮೇಲೆ ಮಲಗಿದ್ದ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿದ್ದ. ಇಂದು ಪೊಲೀಸರು ಆತನನ್ನು ಅರೆಸ್ಟ್ ಮಾಡಿದ್ದಾರೆ. ಈ ಒಂದು ಘಟನೆ ಮಾಸುವ ಮುನವೇ ಚಿಕ್ಕಮಂಗಳೂರಿನಲ್ಲಿ ಸ್ವೀಟ್ ಮಾರಾಟ ಮಾಡುವ ನೆಪದಲ್ಲಿ ಗೋಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ಸ್ವೀಟ್ ಮಾರಾಟ ಮಾಡುವ ನೆಪದಲ್ಲಿ ಇಬ್ಬರು ಆರೋಪಿಗಳು ಗೋಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ಚಿಕ್ಕಮಂಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದಲ್ಲಿ ಒಂದು ಘಟನೆ ಬೆಳಕಿಗೆ ಬಂದಿದೆ. ಅಸ್ಸಾಮಿನಿಂದ ಬಂದು ಸಂತೆಯಲ್ಲಿ ಸ್ವೀಟ್ ಜೊತೆಗೆ ಗೋಮಾಂಸ ಮಾರಾಟ ಮಾಡಲಾಗುತ್ತಿತ್ತು. ಅಕ್ರಮ ಬಾಂಗ್ಲಾದೇಶ ನಿವಾಸಿಗಳು ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ಸ್ವೀಟ್ ಡಬ್ಬದ ಪಕ್ಕದಲ್ಲಿನ ಬ್ಲಾಕ್ ಬ್ಯಾಗ್ ನಲ್ಲಿ ಗೋಮಾಂಸ ಪತ್ತೆಯಾಗಿದೆ. ಗೋಮಾಂಸದ ಸಮೇತ ಪೊಲೀಸರು ಮಾರಾಟಗಾರರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಾಫಿ ತೋಟದ ಕೆಲಸಕ್ಕೆ ಬಂದಿದ್ದವರಿಂದ ಗೋಮಾಂಸ ಮಾರಾಟ ಮಾಡಲಾಗುತ್ತಿದೆ. ಬಣಕಲ್…

Read More

ಬಾಗಲಕೋಟೆ : ಸೈಬರ್ ವಂಚಕರು ಜನಸಾಮಾನ್ಯರನ್ನು ಗುರಿಯಾಗಿಸಿ ಕೊಂಡು ಡಿಜಿಟಲ್ ಮತ್ತು ಒನ್ಲೈನ್ ವಂಚನೆಯ ಮೂಲಕ ಅವರ ಖಾತೆಯಲ್ಲಿದ್ದಂತಹ ಲಕ್ಷಾಂತರ ಹಣವನ್ನು ದೋಚಿರುವ ಪ್ರಕರಣಗಳನ್ನು ನಾವು ಕೇಳಿದ್ದೇವೆ. ಆದರೆ ಇದೀಗ ಒಂದು ಹೆಜ್ಜೆ ಮುಂದೆ ಹೋಗಿ ಸಿಎಂ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಕೂಡ ಇದೀಗ ವಂಚನೆ ಎಸಗಿರುವುದು ಬೆಳಗೆ ಬಂದಿದೆ. ಹೌದು ಬಾಗಲಕೋಟೆಯಲ್ಲಿ ಇಂತಹ ಘಟನೆ ಬೆಳಕಿಗೆ ಬಂದಿದ್ದು, ಮೊಬೈಲ್ನಲ್ಲಿ ಒಂದು ಲಿಂಕ್ ಬರುತ್ತದೆ. ಈ ಒಂದು ಲಿಂಕ್ ಓಪನ್ ಮಾಡಿದ್ ತಕ್ಷಣ ಸಿಎಂ ಸಿದ್ದರಾಮಯ್ಯ ಅವರ ಭಾವಚಿತ್ರ ಕಾಣಿಸಿಕೊಳ್ಳುತ್ತದೆ. ಲಿಂಕ್ ಓಪನ್ ಮಾಡಿದ ತಕ್ಷಣ ನಿಮ್ಮ ಖಾತೆಯಲ್ಲಿನ ಹಣ ಫೋನ್ ಪೇ ಮೂಲಕ 749 ವಂಚಕರ ಖಾತೆಗೆ ವರ್ಗಾವಣೆಯಾಗುತ್ತದೆ. ಮೊಬೈಲ್ ರಿಚಾರ್ಜ್ ಹೆಸರಿನಲ್ಲಿ ವಂಚಕರು ಈ ಒಂದು ಲಿಂಕ್ ಕ್ರಿಯೇಟ್ ಮಾಡಿದ್ದಾರೆ ಎನ್ನಲಾಗಿದೆ. ಇದನ್ನ ಮೊಬೈಲ್ ಇಂದ ಮೊಬೈಲ್ ಗೆ ಫೇಕ್ ಲಿಂಕ್ ಪಾಸ್ ಆಗುತ್ತಿದ್ದು, ಮತ್ತೊಂದೆಡೆ ಫೇಕ್ ಲಿಂಕ್ ಓಪನ್ ಮಾಡಿದ್ರೆ ಸಿಎಂ ಸಿದ್ದರಾಮಯ್ಯ ಪೋಟೋ ಓಪನ್ ಆಗುತ್ತೆ.…

Read More

ಬೆಂಗಳೂರು : ನಿನ್ನೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ದುಷ್ಕರ್ಮಿ ಒಬ್ಬ ಹಸುಗಳ ಕೆಚ್ಚಲು ಕೊಯ್ದಿದ್ದ ಘಟನೆ ನಡೆದಿತ್ತು. ಘಟನೆ ಸಂಭಂದ ಎಂದು ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ ಈ ಒಂದು ಘಟನೆ ವಾಸುವ ಮುನ್ನವೇ ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅರಿಶಿನಕುಂಟೆಯ ಬಳಿ ಹಾಡು ಹಗಲೇ ಮೇಯುತ್ತಿದ್ದ ಲಕ್ಷಾಂತರ ಮೌಲ್ಯದ ಎರಡು ಹಸುಗಳನ್ನು ಕಳ್ಳತನ ಮಾಡಲಾಗಿದೆ. ಹೌದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಅರಿಶಿಣ ಕುಂಟೆಯ ಬಳಿ ಹಾಡು ಹಗಲೇ ಮೇಯುತಿದ್ದ ಎರಡು ಹಸುಗಳನ್ನು ಕಳ್ಳತನ ಮಾಡಲಾಗಿದೆ. ಒಂದುವರೆ ಲಕ್ಷ ಮೌಲ್ಯದ ಜರ್ಸಿ ಹಸು ಹಾಗೂ ಮಲೆನಾಡಿನ ಗಿಡ್ಡ ತಳಿಯ ಹಸು ಕಳ್ಳತನ ಮಾಡಲಾಗಿದೆ.ಎರಡು ಹಸು ಕಳೆದುಕೊಂಡು ಸದ್ಯ ರೈತರ ರಾಮಕೃಷ್ಣ ಕಂಗಾಲಾಗಿದ್ದಾರೆ. ಈ ಕುರಿತು ನೆಲಮಂಗಲದ ಟೌನ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More

ಬೆಳಗಾವಿ : ಖಾಸಗಿ ಆಸ್ಪತ್ರೆಯಲ್ಲಿ ನೌಕರ ಒಬ್ಬ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ಪಟ್ಟಣದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನ ಆಜರಿ ಸರ್ಜಿಕಲ್ ಹಾಸ್ಪಿಟಲ್ ನಲ್ಲಿ ಈ ಒಂದು ಘಟನೆ ನಡೆದಿದೆ. ಸುಭಾಷ್ (32) ಆತ್ಮಹತ್ಯೆ ಮಾಡಿಕೊಂಡಂತಹ ವ್ಯಕ್ತಿ ಎಂದು ತಿಳಿದುಬಂದಿದೆ.ಭಾನುವಾರ ರಜೆ ಇದ್ದರೂ ಕೂಡ ಸುಭಾಷ್ ಆಸ್ಪತ್ರೆಯಲ್ಲೇ ಉಳಿದಿದ್ದ. ಆಸ್ಪತ್ರೆಯಲ್ಲಿ ಯಾರು ಇಲ್ಲದ ವೇಳೆ ಸುಭಾಷ್ ನೇಣಿಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಇದುವರೆಗೂ ನಿಖರವಾದಂತ ಕಾರಣ ತಿಳಿದು ಬಂದಿಲ್ಲ. ಘಟನೆ ಕುರಿತು ಗೋಕಾಕ್ ಶಹರ ಪೊಲೀಸ್ ಠಾಣೆಯಲ್ಲಿ ಈ ಒಂದು ಪ್ರಕರಣ ದಾಖಲಾಗಿದೆ.

Read More