Subscribe to Updates
Get the latest creative news from FooBar about art, design and business.
Author: kannadanewsnow05
BREAKING : ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್ ಗೆ ಬಿಗ್ ಟ್ವಿಸ್ಟ್ : 6ನೇ ಪಾಯಿಂಟ್ ನಲ್ಲಿ ಕೊನೆಗೂ 2 ಮೂಳೆ ಪತ್ತೆ!
ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊನೆಗೂ ಇದೀಗ ಎರಡು ಎಲಬುಗಳು ಸಿಕ್ಕಿವೆ. ಇಂದು ಅಧಿಕಾರಿಗಳು ದೂರುದಾರ ತೋರಿಸಿದ ಜಾಗದಲ್ಲಿ 6ನೇ ಪಾಯಿಂಟ್ ನಲ್ಲಿ ಎರಡು ಎಲುಬುಗಳು ಸಿಕ್ಕಿವೆ ಎಂದು ಮಾಹಿತಿ ತಿಳಿದು ಬಂದಿದೆ. ಹೌದು 6ನೇ ಪಾಯಿಂಟ್ ನಲ್ಲಿ ಅಸ್ತಿಪಂಜರದ ಮೂಳೆಗಳು ಪತ್ತೆಯಾಗಿವೆ. ಮೂಳೆಗಳು ಎಸ್ಐಟಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 6ನೇ ಪಾಯಿಂಟ್ ನಲ್ಲಿ ಎರಡು ಎಲುಬುಗಳು ಸಿಕ್ಕ ಮಾಹಿತಿಯನ್ನು ಎಸ್ಐಟಿ ಹಂಚಿಕೊಂಡಿದೆ. ಸಂಪೂರ್ಣವಾದ ಅಸ್ಥಿಪಂಜರ ಇನ್ನು ಸಿಕ್ಕಿಲ್ಲ ಆದರೆ ಎರಡು ಮೂಳೆಗಳು ಮಾತ್ರ ಸಿಕ್ಕಿವೆ. ಇದೀಗ ಈ ಒಂದು ಪ್ರಕರಣ ಮತ್ತಷ್ಟು ಕುತೂಹಲಕ್ಕೆ ತೆಗೆದುಕೊಂಡು ಹೋಗುತ್ತದೆ. ಮೂಳೆ ಸಿಕ್ಕ ಬಗ್ಗೆ ಅಧಿಕಾರಿಗಳು ಲ್ಯಾಪ್ಟಾಪ್ ನಲ್ಲಿ ದಾಖಲು ಮಾಡಿಕೊಂಡಿದ್ದಾರೆ ಮೂಳೆ ಸಿಕ್ಕ ಕುರಿತು ಅಧಿಕಾರಿಗಳು ಈ ಒಂದು ಮಾಹಿತಿಯನ್ನು ಲ್ಯಾಪ್ಟಾಪ್ ನಲ್ಲಿ ದಾಖಲು ಮಾಡಿಕೊಂಡಿದ್ದಾರೆ. ಜಿಪಿಎಸ್ ಆನ್ ಮಾಡಿಕೊಂಡು ರಿಪೋರ್ಟ್ ದಾಖಲು ಮಾಡಿದ್ದಾರೆ ಎಲ್ಲ ಮಾಹಿತಿಯನ್ನು ನಿಖರವಾಗಿ ಲ್ಯಾಪ್ಟಾಪ್ ನಲ್ಲಿ ಅಧಿಕಾರಿಗಳು ದಾಖಲಿಸಿದ್ದಾರೆ.
ಬೆಂಗಳೂರು : ಈಗಾಗಲೇ ಕೆಎಸ್ಆರ್ಟಿಸಿ ಬಸ್ ಹಾಗು ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿ ಬೆಂಗಳೂರಿಗೆ ಸರ್ಕಾರ ದರ ಏರಿಕೆ ಶಾಕ್ ನೀಡಿದ್ದು ಇದರ ಬೆನ್ನಲ್ಲೆ ಇದೀಗ ಆಟೋ ಮೀಟರ್ ದರ ಏರಿಕೆ ಮಾಡಿದ್ದು ನಾಳೆಯಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ. ಆಟೋ ಮೀಟರ್ ದರ ಪರಿಷ್ಕರಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ನಾಳೆಯಿಂದ ಜಾರಿಯಾಗಲಿದೆ. ಬೆಂಗಳೂರು ನಗರ ಜಿಲ್ಲೆಯ ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಆಟೋರಿಕ್ಷಾ ಮೀಟರ್ ದರಪರಿಷ್ಕರಣೆ ಕುರಿತು ಕೂಲಂಕುಷವಾಗಿ ಪರಿಶೀಲಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಟೋರಿಕ್ಷಾ ದರಗಳನ್ನು ಈ ಕೆಳಕಂಡಂತೆ ಪರಿಷ್ಕರಣೆ ಮಾಡಿ ದಿನಾಂಕ: 01-08-2025 ರಿಂದ ಜಾರಿಗೆ ಬರುವಂತೆ ಆದೇಶಿಸಿದೆ. 1) ಕನಿಷ್ಠ ದರ ಮೊದಲ 2.00 ಕಿ.ಮೀ.ಗೆ ದರ : ರೂ.36/- (ರೂ.ಮುವತ್ತಾರು ಮಾತ್ರ ಮೂರು ಜನ ಪ್ರಯಾಣಿಕರು 2) ನಂತರದ ಪ್ರತಿ ಕಿಲೋಮೀಟರ್ ದರ : ರೂ.18/- (ರೂ.ಹದಿನೆಂಟು ಮಾತ್ರ ಮೂರು ಜನ ಪ್ರಯಾಣಿಕರು 3) ಕಾಯುವಿಕೆ ದರ ಅ) ಮೊದಲ…
ಬೆಂಗಳೂರು : ದರ್ಶನ್ ಅಭಿಮಾನಿಗಳು ಹಳ್ಳೆ ಯತ್ನಿಸಿ ಕೊಲೆಗೆ ಬೆದರಿಕೆ ಹಾಕಿದ್ದಾರೆ ಎಂದು ಇತ್ತೀಚಿಗೆ ನಟ ಪ್ರಥಮ್ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಪೊಲೀಸರು ನಟ ಪ್ರಥಮ್ ಹಾಗೂ ರಕ್ಷಕ್ ಬುಲೆಟ್ ಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದಾರೆ. ದೊಡ್ಡಬಳ್ಳಾಪುರ ಪೊಲೀಸರು ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು, ಸಾಕ್ಷಗಳ ಹೆಚ್ಚಿನ ಮಾಹಿತಿ ಕಲೆಹಾಕಲು ಇಬ್ಬರನ್ನು ಠಾಣೆಗೆ ಬರುವಂತೆ ಸೂಚಿಸಿದ್ದಾರೆ. ಅಲ್ಲದೆ ಜಮೀನು ಮಾಲೀಕರಾದಂತಹ ಮಹೇಶ್ ಗೋ ಪೊಲೀಸರು ನೋಟಿಸ್ ನೀಡಿದ್ದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಮೂವರನ್ನು ಪೊಲೀಸರು ಪ್ರತ್ಯೇಕ ವಿಚಾರಣೆಗೆ ಒಳಪಡಿಸಲಿದ್ದಾರೆ. ಜುಲೈ 22 ರಂದು ಮಹೇಶ್ ಎಂಬ ಸಿನಿಮಾ ಪ್ರೊಮೋಟರ್ ನನಗೆ ದೊಡ್ಡಬಳ್ಳಾಪುರದ ಯಲ್ಲಮ್ಮ ದೇವಸ್ಥಾನದ ಪೂಜೆಗೆ ಕರೆದಿದ್ದರು. ಪೂಜೆ ಮುಗಿಸಿ ನಾನು ವಾಪಸ್ ಬರುವ ವೇಳೆ ಯಶಸ್ವಿನಿ ಮತ್ತು ಬೇಕರಿ ರಘು ಹಾಗೂ ಒಂದಷ್ಟು ಜನ ನನ್ನ ಕಾರನ್ನು ಸುತ್ತುವರೆದು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದರು. ದರ್ಶನ್…
ಬೆಂಗಳೂರು : ಧರ್ಮಸ್ಥಳದಲ್ಲಿ ನೂರಕ್ಕೂ ಹೆಚ್ಚು ಶವಗಳನ್ನು ಹೂತು ಹಾಕಿದ್ದೇನೆ ಎಂದು ಅನಾಮಿಕ ವ್ಯಕ್ತಿ ಹೇಳಿಕೆ ನೀಡಿದ್ದು, ಈ ಹಿನ್ನೆಲೆಯನ್ನು ಕಳೆದ ಮೂರು ದಿನಗಳಿಂದ ಧರ್ಮಸ್ಥಳದಲ್ಲಿ ಎಸ್ಐಟಿ ತಂಡ ನೆಲ ಅಗೆದಿದ್ದು, ಇದುವರೆಗೂ ಯಾವುದೇ ರೀತಿಯ ಮನುಷ್ಯನ ದೇಹದ ಅಸ್ತಿಪಂಜರಗಳು ದೊರೆತಿಲ್ಲ. ಇದರ ಮಧ್ಯ ಎಸ್ಐಟಿ ಮುಖ್ಯಸ್ಥರಾಗಿರುವ ಪ್ರಣಬ್ ಮೋಹಂತಿ ಧರ್ಮಸ್ಥಳದಲ್ಲಿಯೇ ವಾಸ್ತವ ಹೂಡಿದ್ದು ಅವರು ಕೇಂದ್ರಕ್ಕೆ ಹೋಗುತ್ತಾರೆ ಎನ್ನುವ ವಿಚಾರ ತಿಳಿದು ಬಂದಿದೆ. ಇದೇ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, SIT ಮುಖ್ಯಸ್ಥರ ಬದಲಾವಣೆ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ಪ್ರಣಬ್ ಮೋಹಂತಿ ಕೇಂದ್ರ ಸರ್ಕಾರಕ್ಕೆ ಹೋದರೆ ಬದಲಾವಣೆ ಮಾಡಲಾಗುತ್ತದೆ. ಕೇಂದ್ರಕ್ಕೆ ಹೋದರೆ ಮಾತ್ರ ಬದಲಾವಣೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು. ಇನ್ನು ಡಿಜಿ ಹಾಗು ಐಜೆಪಿ ಎಂ ಎ ಸಲೀಂ ಅವರು ಎಸ್ಐಟಿ ತಂಡಕ್ಕೆ ಮತ್ತೆ ಒಂಬತ್ತು ಪೊಲೀಸರನ್ನು ನೇಮಕ ಮಾಡಿ ಆದೇಶಿಸಿದ್ದಾರೆ ಈಗಾಗಲೇ ಪ್ರಕರಣದ ತನಿಖೆಗೆ 20 ಅಧಿಕ…
ಬೆಂಗಳೂರು : ಅಗಸ್ಟ್ ಅಂತ್ಯಕ್ಕೆ ರಾಜ್ಯದಲ್ಲಿ ಮತ್ತೆ ಟೋಯಿಂಗ್ ಆರಂಭ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಅವರು ಮಾತನಾಡಿ ಬೆಂಗಳೂರಿನಲ್ಲಿ ಟೋಯಿಂಗ್ ಗೆ ಗುತ್ತಿಗೆ ಕೊಡಲ್ಲ ಈ ಬಾರಿ ಇಲಾಖೆಯಿಂದಲೇ ಟೋಯಿಂಗ್ ನಡೆಸಲಾಗುತ್ತದೆ ಎಂದು ತಿಳಿಸಿದರು. ರಸ್ತೆಯಲ್ಲಿ ನಿಲ್ಲಿಸುವ ವಾಹನಗಳ ಟೋಯಿಂಗ್ ಮಾಡಲಾಗುವುದು ಸಾರ್ವಜನಿಕರ ಜೊತೆಗೆ ಪೊಲೀಸರು ಮಾನವೀಯತೆಯಿಂದ ಹಾಗೂ ಶಾಂತ ರೀತಿಯಿಂದ ವರ್ತಿಸುವಂತೆ ಸೂಚಿಸಿದ್ದೇವೆ ಎಂದರು. ಇನ್ನು ಧರ್ಮಸ್ಥಳ ಕೇಸ್ ಕುರಿತು ಮಾತನಾಡಿ, ವರದಿ ಪೂರ್ಣ ಆಗುವವರೆಗೂ ಧರ್ಮಸ್ಥಳದ ತನಿಖೆಯ ಬಗ್ಗೆ ಮಾತನಾಡಲ್ಲ ಸದ್ಯಕ್ಕೆ ನಾವು ಚರ್ಚೆ ಮಾಡುವುದಿಲ್ಲ ತನಿಖೆ ಸಂಪೂರ್ಣ ಆಗಲಿ ಅದರಲ್ಲಿ ನಮಗೇನು ಆಸಕ್ತಿ ಇಲ್ಲ ಸತ್ಯ ಹೊರಗಡೆ ಬರೋದು ಅಷ್ಟೇ ಮುಖ್ಯವಾಗಿದೆ ಎಂದು ಗ್ರಹದ ಪರಮೇಶ್ವರ ತಿಳಿಸಿದರು.
ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ನೂರಾರು ಶವ ಹೂತಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿಗೆ ಮತ್ತಷ್ಟು ಪೊಲೀಸ್ ನೀಡಲಾಗಿದ್ದು, ಮತ್ತೆ ಒಂಬತ್ತು ಪೊಲೀಸರನ್ನು SIT ಗೆ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಡಿಜಿ ಮತ್ತು ಐಜಿಪಿ ಡಾ. ಎಂ.ಎ ಸಲೀಂ ಅವರು 9 ಪೊಲೀಸರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಪ್ರಕರಣದ ತನಿಖೆಗೆ ಈಗಾಗಲೇ 20 ಮಂದಿ ಅಧಿಕಾರಿಗಳನ್ನು ನೇಮಕ ಮಾಡಲಾಗಿತ್ತು.ಇದೀಗ ಮತ್ತೆ ಒಂಬತ್ತು ಮಂದಿ ಪೊಲೀಸರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯ ಎಎಸ್ಐ ಲಾರೆನ್ಸ್, ವಿಟ್ಲ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಮನೋಜ್, ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಸಂದೀಪ್, ಉಡುಪಿ ಸಿ ಎಸ್ ಪಿ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಲೋಕೇಶ್, ಹೊನ್ನಾವರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಸತೀಶ್ ನಾಯಕ್, ಮಂಗಳೂರು ಹೆಡ್ ಕಾನ್ಸ್ಟೇಬಲ್ ಜಯರಾಮಗೌಡ, ಎಚ್.ಸಿ ಬಾಲಕೃಷ್ಣ ಗೌಡ ನೇಮಕ ಮಾಡಿ ಡಾ. ಎಂ.ಎ ಸಲೀಂ ಆದೇಶ ಹೊರಡಿಸಿದ್ದಾರೆ. ಮುಂದಿನ ಆದೇಶದ ವರೆಗೆ…
ಕೊಪ್ಪಳ : ಯೂರಿಯಾ ಗೊಬ್ಬರ ಬಳಕೆಯಿಂದ ಕ್ಯಾನ್ಸರ್ ಬರುತ್ತೆ. ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಯೂರಿಯಾ ಗೊಬ್ಬರ ಬಳಕೆಯಿಂದ ಕ್ಯಾನ್ಸರ್ ಕಾಯಿಲೆ ಹೆಚ್ಚಾಗಿದೆ ಎಂದು ಕೊಪ್ಪಳದ ಕೃಷಿ ಇಲಾಖೆ ಜಂಟಿ ನಿರ್ದೇಶಕರು ಮಾಹಿತಿ ಕೊಟ್ಟಿದ್ದಾರೆ. ಅತಿ ಹೆಚ್ಚಾಗಿ ಯೂರಿಯಾ ಗೊಬ್ಬರ ಬಳಸುವುದರಿಂದ ಮನುಷ್ಯನ ಆರೋಗ್ಯದ ಮೇಲೆ ಅತಿಯಾದ ದುಷ್ಪರಿಣಾಮ ಬೀರುತ್ತದೆ ಎಂದು ಕೊಪ್ಪಳ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಾಕಿಂಗ್ ಮಾಹಿತಿ ನೀಡಿದ್ದಾರೆ. ಕೊಪ್ಪಳ ಜಿಲ್ಲೆಯ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ರುದ್ರಪ್ಪ ಈ ವಿಚಾರ ತಿಳಿಸಿದ್ದು ಭೂಮಿಗೆ ಯೂರಿಯಾ ಗೊಬ್ಬರ, ಕೆಮಿಕಲ್ ಗಳನ್ನು ಅತಿಯಾಗಿ ಬಳಸುವುದರಿಂದ ಇಂತಹ ಕೆಮಿಕಲ್ ಯುಕ್ತ ಆಹಾರವನ್ನು ತಿನ್ನುವುದರಿಂದ ಕ್ಯಾನ್ಸರ್ ಕಾಯಿಲೆ ಬರುವ ಸಾಧ್ಯತೆ ಇದೆ. ಹಾಗಾಗಿ ಬೆಳೆಗಳಿಗೆ ಅತಿಯಾದ ಯುವರಿಯಾಗ ಬರಾಕೋಕ್ಕೆಮಿಕಲ್ ಗಳನ್ನು ಬಳಸುವುದನ್ನು ಕಡಿಮೆ ಮಾಡಬೇಕು ಎಂದು ಅವರು ತಿಳಿಸಿದರು. ಹೊಸಪೇಟೆ, ಬಳ್ಳಾರಿ, ರಾಯಚೂರು, ವಿಜಯನಗರ ಜಿಲ್ಲೆಯಲ್ಲಿ ರಸಗೊಬ್ಬರ ಹೆಚ್ಚು ಬಳಸುವುದರಿಂದ ಕ್ಯಾನ್ಸರ್ ಬರುತ್ತೆ ವೈದ್ಯಕೀಯ ವರದಿಯಲ್ಲಿ ತಿಳಿದು ಬಂದಿದೆ. ನಮ್ಮ ಇಲಾಖೆಯಲ್ಲಿ ಒಬ್ಬ…
ಬಳ್ಳಾರಿ : ಬಳ್ಳಾರಿ ನಗರದಲ್ಲಿ ತಡರಾತ್ರಿ ಎಸ್ಬಿಐ ಎಟಿಎಂ ಕಳ್ಳತನಕ್ಕೆ ಯತ್ನಿಸಲಾಗಿದ್ದು, ಖದೀಮರು ತಡರಾತ್ರಿ ಕಳ್ಳತನಕ್ಕೆ ಯತ್ನಿಸಿದ್ದಾರೆ. ಬಳ್ಳಾರಿ ನಗರದ ತಾಳೂರು ರಸ್ತೆ 14ನೇ ಕ್ರಾಸ್ ಬಳಿ ಒಂದು ಘಟನೆ ನಡೆದಿದೆ. ATM ಕೊಠಡಿಯ ಗ್ಲಾಸ್ ಒಡೆದು ಕಳ್ಳತನಕ್ಕೆ ಯತ್ನಿಸಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರು ಹಾಗೂ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಕಳೆದ ಕೆಲವು ದಿನಗಳ ಹಿಂದೆ ವಿಜಯಪುರ ಜಿಲ್ಲೆಯಲ್ಲಿ ಬ್ಯಾಂಕ್ ಮ್ಯಾನೇಜರ್ ಕೋಟ್ಯಂತರ ರೂಪಾಯಿ ಕಳ್ಳತನ ನಡೆಸಿದ್ದ ಪ್ರಕರಣ ನಡೆದಿತ್ತು.
ಹಾವೇರಿ : ಪತಿಗೆ ಸಾಲಗಾರರ ಕಿರುಕುಳದಿಂದ ಬೇಸತ್ತು ಪತ್ನಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಕೋಟಿಹಳ ಗ್ರಾಮದಲ್ಲಿ ನಡೆದಿದೆ. ಪತಿಗೆ ಸಾಲಗಾರರ ಕಿರುಕುಳದಿಂದ ಬೇಸತ್ತು ಕೋಟಿಹಾಳ ಗ್ರಾಮದ ಬಳಿ ತುಂಗಭದ್ರಾ ನದಿಗೆ ಹಾರಿ ಪತ್ನಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತುಂಗಭದ್ರಾ ನದಿಯ ನಡು ನೀರಲ್ಲಿ ಸಿಲುಕಿದ್ದ ರೂಪ ಆಮ್ಲೆರ್ (40) ಮಾಡಲಾಗಿದೆ. ಗಂಡನಿಗೆ ಸಾಲಗಾರರು ಕಿರುಕುಳ ಕೊಡುತ್ತಿದ್ದರು. ನಿನ್ನೆ ರಾತ್ರಿ ತುಂಗಭದ್ರ ನದಿಗೆ ರೂಪ ಹಾರಿದ್ದಾರೆ. ಹಾವೇರಿ ಜಿಲ್ಲೆಯ ಹರಟ್ಟಿಹಳ್ಳಿ ಮೂಲದ ರೂಪ ಅಂಬ್ಲೆರ್ ರಕ್ಷಣೆ ಮಾಡಲಾಗಿದೆ. ಇಂದು ಬೆಳಿಗ್ಗೆ ಗ್ರಾಮದ ಬಳಿ ಜಮೀನಿನ ಕಡೆಗೆ ರೈತನೊಬ್ಬ ತೆರಳುತ್ತಿದ್ದ ಈ ವೇಳೆ ರಕ್ಷಣೆಗೆ ಕೋರಿ ಕೂಗಿದ್ದಾರೆ. ಬಳಿಕ ರೈತ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಸ್ಥಳಕ್ಕೆ ಆಗಮಿಸಿ ಪೊಲೀಸರು ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ.
ಚಿಕ್ಕಮಗಳೂರು : ಬೈಕ್ ನಲ್ಲಿ ತೇಳುವಾಗ ಏಕಾಯಕಿ ಚಿರತೆ ದಾಳಿ ಮಾಡಿದೆ ತಕ್ಷಣ ಗ್ರಾಮಸ್ಥರು ಕಲ್ಲಿನಿಂದ ಚಿರತೆಯನ್ನು ಹೊಡೆದು ಓಡಿಸಿ ಇಬ್ಬರು ಬೈಕ್ ಸವಾರರ ಜೀವ ಉಳಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಿದ್ಧರಹಳ್ಳಿ ಬಳಿ ಬೈಕಿನಲ್ಲಿ ತೆರಳುತ್ತಿದ್ದ ಸವಾರರ ಮೇಲೆ ಚಿರತೆ ದಾಳಿ ಮಾಡಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಿದ್ದರಹಳ್ಳಿ ಬಳಿ ಈ ಒಂದು ಘಟನೆ ನಡೆದಿದ್ದು, ಕಲ್ಲಿನಿಂದ ಹೊಡೆದು ಗ್ರಾಮಸ್ಥರು ಬೈಕ್ ಸವಾರರ ಜೀವ ಉಳಿಸಿದ್ದಾರೆ. ಚಿರತೆ ದಳಯಿಂದ ಮಂಜುನಾಥ್ ಮತ್ತು ಮೂರ್ತಿಗೆ ಗಂಭೀರವಾದ ಗಾಯಗಳಾಗಿವೆ . ಮೊಮ್ಮಗನನ್ನು ಶಾಲೆಗೆ ಬಿಡಲು ಕಡೂರಿಗೆ ತೆರಳುತ್ತಿದ್ದಾಗ ಏಕಾಏಕಿ ದಾಳಿ ಮಾಡಿದೆ. ಮಂಜುನಾಥ್ ಹಾಗೂ ಮೂರ್ತಿ ಮೇಲೆ ಚಿರತೆ ದಾಳಿ ಮಾಡಿದೆ. ತಕ್ಷಣ ಗ್ರಾಮಸ್ಥರು ಕಲ್ಲಿನಿಂದ ಹೊಡೆದು ಸ್ಥಳದಿಂದ ಚಿರತೆಯನ್ನು ಓಡಿಸಿದ್ದಾರೆ. ಸಿದ್ದರಹಳ್ಳಿ ಮದಗದ ಕೆರೆ ಹೆಮ್ಮೆ ದೊಡ್ಡಿ ಭಾಗದಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ ಕಡೂರು ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಒಂದು ಘಟನೆ ನಡೆದಿದೆ. ಗಾಯಾಳುಗಳಿಗೆ ಚಿಕ್ಕಮಗಳೂರು ಜಿಲ್ಲಾ…