Author: kannadanewsnow05

ಉಡುಪಿ : ಉಡುಪಿಯಲ್ಲಿ ಘೋರವಾದ ದುರಂತ ನಡೆದಿದ್ದು, ಯುವಪ್ರೇಮಿಗಳಿಬ್ಬರು ಯಾರು ಇಲ್ಲದ ವೇಳೆ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿಯಲ್ಲಿ ಗುರುವಾರ ಸಂಜೆ ನಡೆದಿದೆ. ಉಡುಪಿ ನಗರದ ಅಂಬಲಪಾಡಿ ಕಾಳಿಕಾಂಬನಗರದ ಲೇಬರ್ ಕಾಲೋನಿ ಎಂಬಲ್ಲಿ ಈ ಘಟನೆ ನಡೆದಿದೆ. ಲೇಬರ್ ಕಾಲೋನಿಯ ಬಾಲಕಿ ವಾಸವಾಗಿರುವ ಬಾಡಿಗೆ ಜೋಪಡಿಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ತನಿಖೆ ಪ್ರಗತಿಯಲ್ಲಿದೆ. ಮೃತ ಬಾಲಕಿ ವಲಸೆ ಕಾರ್ಮಿಕ ಕುಟುಂಬದ ಕಾಲೇಜು ವಿದ್ಯಾರ್ಥಿನಿ, ಯುವಕ ವಲಸೆ ಕಾರ್ಮಿಕ ಮಲ್ಲೇಶ (23) ಹಾಗು ಬಾಲಕಿ ಪವಿತ್ರಾ (17) ಎಂದು ತಿಳಿದುಬಂದಿದೆ. ನಗರ ಪೊಲೀಸ್​​ ಠಾಣೆಯ‌ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜ ಸೇವಕ ನಿತ್ಯಾನಂದ‌ ಒಳಕಾಡು ಎರಡು ಮೃತದೇಹಗಳನ್ನು ತೆರವುಗೊಳಿಸಿ ಆ್ಯಂಬುಲೆನ್ಸ್​ ವಾಹನದಲ್ಲಿ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಘಟಕಕ್ಕೆ ಸಾಗಿಸಲು ಪೊಲೀಸ್​​ ಇಲಾಖೆಗೆ ನೆರವು ನೀಡಿದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಕೊಡಗು : ಕೊಡಗು ಜಿಲ್ಲೆಯ ಭಾಗಮಂಡಲ ಸಮೀಪ ತಲಕಾವೇರಿಯ ತೀರ್ಥೋದ್ಭವ ಬ್ರಹ್ಮಕುಂಡಿಕೆಯಲ್ಲಿ ಐತಿಹಾಸಿಕ ತಲಕಾವೇರಿಯ ಕಾವೇರಿ ತೀರ್ಥರೂಪಿಣಿಯಾಗಿ ತೀರ್ಥೋದ್ಭವದ ಮೂಲಕ ಭಕ್ತರಿಗೆ ದರ್ಶನ ನೀಡಿದಳು. ತೀರ್ಥೋದ್ಭವ ಕಣ್ತುಂಬಿಕೊಳ್ಳಲು ನೂರಾರು ಸಂಖ್ಯೆಯಲ್ಲಿ ಭಕ್ತರು ಸೇರಿದ್ದಾರೆ. ಕೊಡಗಿನ ಮಹಿಳೆಯರು ಸಾಂಪ್ರದಾಯಿಕ ಉಡುಗೆಯಲ್ಲಿ ಆರತಿ ಹಿಡಿದು ಆಗಮಿಸಿದ್ದು, ಕಾವೇರಿ ಮಾತೆಗೆ ಆರತಿ ಬೆಳಗಿ ಸ್ವಾಗತಿಸಿದ್ದಾರೆ. ಸಾಂಪ್ರದಾಯಿಕ ಉಡುಪಿನಲ್ಲಿ ಮೂಲ‌ನಿವಾಸಿ‌ ಮಹಿಳೆಯರು ಆಗಮಿಸಿದ್ದು, ಹಾಡು ನೃತ್ಯದ ಮೂಲಕ ಕಾವೇರಿ ಸ್ವಾಗತಕ್ಕೆ ಆಗಮಿಸಿದ್ದಾರೆ. ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ದರ್ಶನ ನೀಡಿದಳು. ಇದೀಗ ಸೂರ್ಯ ಕನ್ಯಾರಾಶಿಯಿಂದ ತುಲಾರಾಶಿಗೆ ಪಥ ಬದಲಾಯಿಸಿದ್ದು, ಈ ವೇಳೆ ಮಕರ ಲಗ್ನದಲ್ಲಿ ಕಾವೇರಿ ಮಾತೆ ತೀರ್ಥ ರೂಪಿಣಿಯಾಗಿ ಉದ್ಭವಿಸಿದಳು. ಮಡಿಕೇರಿ ತಾಲ್ಲೂಕಿನ ತಲಕಾವೇರಿಯಲ್ಲಿರುವ ಬ್ರಹ್ಮ ಕುಂಡಿಕೆಯಲ್ಲಿ ಭಕ್ತರಿಗೆ ದರ್ಶನ ತಾಯಿ ಕಾವೇರಿ ದರ್ಶನ ನೀಡಿದಳು. ಈ ಒಂದು ತೀರ್ಥೋತ್ಸವ ಕಾರ್ಯಕ್ರಮದಲ್ಲಿ ಮೈಸೂರು ಮಹಾರಾಜ ಯದುವೀರ್ ಕೃಷ್ಣರಾಜ ದತ್ತ ಒಡೆಯರ್ ಅವರು ಸಹ ಭಾಗವಹಿಸಿದ್ದರು.

Read More

ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಕಮಿಷನ್ ಬಾಂಬ್ ನಡೆಸಿದ್ದು ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘವು ಇದೀಗ ಸಿಡಿದೆದ್ದಿದೆ. ಸರ್ಕಾರದಲ್ಲಿ ಇದೀಗ ಕಮಿಷನ್ ಜಾಸ್ತಿ ಆಗಿದೆ ಎಂದು ಸಂಘದ ಅಧ್ಯಕ್ಷ ಆರ್ ಮಂಜುನಾಥ್ ಗಂಭೀರವಾದ ಆರೋಪ ಮಾಡಿದ್ದಾರೆ 60% 80% ಅಂತ ಹೇಳಿಲ್ಲ ಒಟ್ನಲ್ಲಿ ಇದೀಗ ಸರ್ಕಾರದಲ್ಲಿ ಕಮಿಷನ್ ಹೆಚ್ಚಳ ಆಗಿದೆ. ಸರ್ಕಾರದಿಂದ ಗುತ್ತಿಗೆದಾರರಿಗೆ ಒಟ್ಟು 33,000 ಕೋಟಿ ಹಣ ಬರಬೇಕಿದೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ಆರೋಪ ಮಾಡಿದ್ದು ಸರ್ಕಾರದ ವಿರುದ್ಧ ಕಮಿಷನ್ ಬಾಂಬ್ ಸಿಡಿಸಿದ್ದಾರೆ. ಸರ್ಕಾರ ಬಂದ ಮೇಲೆ ಬಾಕಿ ಹಣ ಬಿಡುಗಡೆ ಮಾಡುತ್ತಿವೆ ಅಂತ ಹೇಳಿದರು. ಎಲ್ಲೋಸೆ ರಿಲೀಸ್ ಗೆ ಕಮಿಷನ್ ತಗೋತೀರಾ ಅಂತ ಹೇಳಿದ್ದೇವೆ ಹೊರತು 60% 80% ಕಮಿಷನ್ ತಗೋತಿದ್ದಾರೆ ಅಂತ ಹೇಳಿಲ್ಲ ಆತರ ಹೇಳಿಲ್ಲ ಎಂದು ಮಂಜುನಾಥ್ ಹೇಳಿದರು. ದೀಪಾವಳಿ ಹಬ್ಬದ ನಂತರ ನಾವು ಹೋರಾಟ ಶುರು ಮಾಡುತ್ತೇವೆ ಮುಷ್ಕರ ನಡೆಸಿ ದೊಡ್ಡದಾಗಿ ಹೋರಾಟ ಮಾಡುತ್ತೇವೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ…

Read More

ಮೈಸೂರು : ರಾಜ್ಯದಲ್ಲಿ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಈಗಾಗಲೇ ರಾಜ್ಯಾದ್ಯಂತ ಬಹುತೇಕ ಸಮೀಕ್ಷೆ ಕಾರ್ಯಾ ಪೂರ್ಣಗೊಂಡಿದೆ. ನಿನ್ನೆ ಸುಧಾಮೂರ್ತಿ ಜಾತಿಗಣತಿಯಲ್ಲಿ ಭಾಗವಹಿಸಲ್ಲ ಎಂದು ಹಿಂಬರಹ ತೆಗೆದುಕೊಂಡಿದ್ದರು. ಇದಕ್ಕೆ ಇದೀಗ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದವರು ಜಾತಿಗಣತಿ ಮಾಡುವಾಗ ಆಗ ಸುಧಾಮೂರ್ತಿಯವರು ಏನು ಹೇಳುತ್ತಾರೆ ಎಂದು ಪ್ರಶ್ನೆ ಮಾಡಿದ್ದಾರೆ. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯಲ್ಲಿ ಭಾಗಿಯಾಗಲ್ಲ ಎಂದು ಸುಧಾಮೂರ್ತಿ ಹಿಂಬರಹ ವಿಚಾರವಾಗಿ ಇದು ಕೇವಲ ಹಿಂದುಳಿದವರ ಸರ್ವೆ ಅಲ್ಲ ಎಲ್ಲರ ಸರ್ವೆ ಆಗಿದೆ. ಶಕ್ತಿ ಯೋಜನೆ ಮಾಡಿದ್ದೇವೆ ಮೇಲ್ಜಾತಿ ಅವರು ಬಸ್ ನಲ್ಲಿ ಹೋಗಲ್ವಾ? ಕೇಂದ್ರ ಜಾತಿಗಣತಿ ಮಾಡುವಾಗ ಸುಧಾ ಮೂರ್ತಿ ಆಗ ಏನು ಹೇಳುತ್ತಾರೆ ರಾಜ್ಯದ 7 ಕೋಟಿ ಜನರ ಸಾಮಾಜಿಕ ಆರ್ಥಿಕ ಶೈಕ್ಷಣಿಕ ಸಮೀಕ್ಷೆಯಾಗಿದೆ ಈ ಸಮೀಕ್ಷೆ ಒಂದು ಜಾತಿ, ಧರ್ಮದವರಿಗೆ ಸೀಮಿತವಲ್ಲ. ಇದು ಎಲ್ಲಾ ಜಾತಿ ಧರ್ಮದವರು ಒಳಗೊಂಡು ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಸಿಎಂ…

Read More

ಬೆಂಗಳೂರು : ತಲಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಭಕ್ತ ಪ್ರವಾಹವೇ ಹರಿದು ಬರುತ್ತಿದೆ. ಸಾಂಪ್ರದಾಯಿಕ ಉಡುಪಿನಲ್ಲಿ ಮೂಲ‌ನಿವಾಸಿ‌ ಮಹಿಳೆಯರು ಆಗಮಿಸುತ್ತಿದ್ದು, ಹಾಡು ನೃತ್ಯದ ಮೂಲಕ ಕಾವೇರಿ ಸ್ವಾಗತಕ್ಕೆ ಸಜ್ಜಾಗಿದ್ದಾರೆ. ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ದರ್ಶನ ನೀಡಲಿದ್ದಾಳೆ. ಇನ್ನು ಈ ಒಂದು ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಹ ತೆರಳಲಿದ್ದರು. ಆದರೆ ಭಾಗಮಂಡಲದಲ್ಲಿ ಪ್ರತಿಕೂಲ ಹವಾಮಾನ ಹಿನ್ನೆಲೆಯಲ್ಲಿ ತಲಕಾವೇರಿ ಭೇಟಿ ರದ್ದು ಮಾಡಿದ್ದಾರೆ. ಭಾಗಮಂಡಲ ವ್ಯಾಪ್ತಿಯಲ್ಲಿ ಮಂಜು, ಮೋಡಕವಿದ ವಾತಾವರಣವಿದ್ದು ಪ್ರತಿಕೂಲ ಹವಾಮಾನ ಹಿನ್ನೆಲೆಯಲ್ಲಿ ತಲಕಾವೇರಿ ಭೇಟಿ ರದ್ದುಗೊಳಿಸಿದ್ದಾರೆ ಎಂದು ತಿಳಿದುಬಂದಿದೆ. ಬಸ್ ವ್ಯವಸ್ಥೆ ಶ್ರೀ ಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು, ತೀರ್ಥೋದ್ಭವದ ವೀಕ್ಷಣೆಯ ವೇಳೆ ನೂಕು ನುಗ್ಗಲು ಉಂಟಾಗದಂತೆ ಎಲ್‌ಇಡಿ ಪರದೆಗಳ ವ್ಯವಸ್ಥೆ ಮಾಡಲಾಗಿದೆ. ಭಕ್ತರನ್ನು ಭಾಗಮಂಡಲದಿಂದ ತಲಕಾವೇರಿಗೆ ಕರೆದೊಯ್ಯಲು ಬಸ್​ ಗಳ ವ್ಯವಸ್ಥೆಯೂ ಇದೆ.

Read More

ಬೆಂಗಳೂರು : ದೀಪಾವಳಿ ಹಬ್ಬಕ್ಕೆ ಪಟಾಕಿ ವಿತರಿಸದಂತೆ ಶಾಸಕರ ಕಚೇರಿಗೆ ಬೀಗ ಹಾಕಲಾಗಿದೆ. ಆರ್ ಆರ್ ನಗರ ಶಾಸಕ ಮುನಿರತ್ನ ಕಚೇರಿಗೆ ಪೊಲೀಸರು ಬೀಗ ಹಾಕಿದ್ದಾರೆ. ಬೆಂಗಳೂರಿನ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಕಚೇರಿಗೆ ಬೀಗ ಹಾಕಲಾಗಿದೆ. ಆರ್ ಆರ್ ನಗರ ಕ್ಷೇತ್ರ ವ್ಯಾಪ್ತಿಯ ಲಕ್ಷ್ಮಿದೇವಿ ನಗರದಲ್ಲಿ ಶಾಸಕರ ಕಚೇರಿ ಇದ್ದು ಕಚೇರಿಯ ಮುಂದೆ ವೇದಿಕೆ ನಿರ್ಮಿಸಿ ಪಟಾಕಿ ವಿತರಣೆಗೆ ಸಿದ್ಧತೆ ನಡೆದಿದೆ ಸ್ಥಳಕ್ಕೆ ಶಾಸಕ ಮುನಿರತ ಆಗಮಿಸುವ ಮುನ್ನವೇ ಪೊಲೀಸ್ರು ಕಚೇರಿಗೆ ಬೀಗ ಹಾಕಿದ್ದಾರೆ ಪ್ರತಿವರ್ಷ ಶಾಸಕರು ಇದೇ ಸ್ಥಳದಲ್ಲಿ ಪಟಾಕಿ ವಿತರಿಸುತ್ತಿದ್ದರು.

Read More

ನವದೆಹಲಿ : ಎಡಿಜಿಪಿ ಚಂದ್ರಶೇಖರ್ ಅವರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿಗೆ ಇದೀಗ ಬಿಗ್ ರೆಲೀಫ್ ಸಿಕ್ಕಿದೆ , ರಾಜ್ಯ ಸರ್ಕಾರ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾ ಗೊಳಿಸಿದೆ. 2011ರಲ್ಲಿ ಅಕ್ರಮ ಗಣಿಗಾರಿಕೆ ಸಂಬಂಧಪಟ್ಟ ಎಡಿಜಿಪಿ ಚಂದ್ರಶೇಖರ್ ಅವರಿಗೆ ಹೆಚ್‍ಡಿ ಕುಮಾರಸ್ವಾಮಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪ ಕೇಳಿಬಂದಿದ್ದು, ಪ್ರಕರಣದ ತನಿಖೆ ನಡೆಸುತ್ತಿದ್ದ ಎಡಿಜಿಪಿ ಚಂದ್ರಶೇಖರ್ ಗೆ ಕುಮಾರಸ್ವಾಮಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿತ್ತು. ಈ ಕುರಿತು ಹೆಚ್‍ಡಿ ಕುಮಾರಸ್ವಾಮಿ ವಿರುದ್ಧ ಚಂದ್ರಶೇಖರ್ ಜೀವ ಬೆದರಿಕೆ ಪ್ರಕರಣ ದಾಖಲಿಸಿದ್ದರು. ಈ ವೇಳೆ ಹೈ ಕೋರ್ಟ್ ಎಚ್ ಡಿ ಕುಮಾರಸ್ವಾಮಿ ಮೇಲಿನ ಎಫ್ ಐ ಆರ್ ರದ್ದುಗೊಳಿಸಿ ಆದೇಶ ನೀಡಿತು. ಬಳಿಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಲಾಗಿತ್ತು. ರಾಜ್ಯ ಸರ್ಕಾರ ಸಲ್ಲಿಸಿದ ಅರ್ಜಿಯನ್ನು ಇದೀಗ ಸುಪ್ರೀಂಕೋರ್ಟ್ ವಜಗೊಳಿಸಿ ಆದೇಶ ಹೊರಡಿಸಿದೆ. ಈ ಹಿಂದೆ ಕೂಡ ಎಫ್ಐಆರ್ ಮೇಲಿನ ತನಿಖೆಗೆ ಸುಪ್ರೀಂ ಕೋರ್ಟ್ ತಡೆ…

Read More

ಕಲಬುರ್ಗಿ : ವಿಜಯಪುರ ಜಿಲ್ಲೆಗೆ ಕನ್ನೆರಿ ಶ್ರೀಗಳ ಪ್ರವೇಶಕ್ಕೆ ನಿರ್ಬಂಧ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರವೇಶ ನಿರ್ಬಂಧ ಪ್ರಶ್ನಿಸಿ ಕನ್ನೆರಿ ಶ್ರೀಗಳು ಸಲ್ಲಿಸಿದ ಅರ್ಜಿಯನ್ನು ಇದೀಗ ಕಲ್ಬುರ್ಗಿ ಹೈಕೋರ್ಟ್ ಪೀಠ ವಜಾಗೊಳಿಸಿದೆ ಸ್ವಾಮಿಜಿ ಸಲ್ಲಿಸಿದ ಅರ್ಜಿಯನ್ನು ಕಲಬುರ್ಗಿ ಹೈಕೋರ್ಟ್ ಪೀಠ ವಜಾಗೊಳಿಸಿ ಆದೇಶ ಹೊರಡಿಸಿದೆ. ಹೌದು ವಿಜಯಪುರ ಜಿಲ್ಲಾಡಳಿತ ಆದೇಶದ ಕೋರಿ ಕನ್ನೆರಿ ಮಠದ ಶ್ರೀಗಳು ಅರ್ಜಿ ಸಲ್ಲಿಸಿದರು ಶ್ರೀಗಳಿಗೆ ವಿಜಯಪುರ ಜಿಲ್ಲಾ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧಿಸಿದ್ದು ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೊರೆ ಹೋಗಿದ್ದರು ಇದೀಗ ಕಲ್ಬುರ್ಗಿ ಹೈಕೋರ್ಟ್ ಪೀಠ ಶ್ರೀಗಳು ಸಲ್ಲಿಸಿದ ಅರ್ಜಿಯನ್ನು ವಜಾ ಗೊಳಿಸಿದೆ.

Read More

ದಾವಣಗೆರೆ : ರಾಜ್ಯದಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ನಿಷೇಧ ಹೇರಬೇಕು ಎಂದು ಸಚಿವ ಪ್ರಿಯಾಂಕ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ಬಳಿಕ, ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ನಿರಂತರವಾಗಿ ಬೆದರಿಕೆ ಕರೆಗಳು ಬಂದಿವೆ. ಇದರ ಬೆನ್ನಲ್ಲೆ ಸಚಿವ ಪ್ರಿಯಾಂಕ ಖರ್ಗೆ ಬೆದರಿಕೆ ಹಾಕಿದ ಆರೋಪಿಯನ್ನು ಸೋಲಾಪುರದಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದೀಗ ಬಿಜೆಪಿ ಮಾಜಿ ಸಚಿವ ಎಂಪಿ ರೇಣುಕಾಚಾರ್ಯರಿಗೆ ಪ್ರಿಯಾಂಕ ಖರ್ಗೆ ಬೆಂಬಲಿಗ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ತಿಳಿದುಬಂದಿದೆ. ಹೌದು ಮಾಜಿ ಸಚಿವ ರೇಣುಕಾಚಾರ್ಯಗೆ ಕರೆ ಮಾಡಿ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಎಂಪಿ ರೇಣುಕಾಚಾರ್ಯ ಅವರು ಐಟಿಬಿಟಿ ಸಚಿವ ಪ್ರಿಯಾಂಕ ಖರ್ಗೆ ಬೆಂಬಲಿಗ ನನಗೆ ಬೆದರಿಕೆ ಹಾಕಿದ್ದಾನೆ ಎಂದು ರೇಣುಕಾಚಾರ್ಯ ಹೇಳಿಕೆ ನೀಡಿದ್ದಾರೆ. ನಿನ್ನೆ ಬೆಳಗಾವಿಯಿಂದ ನನಗೆ ವ್ಯಕ್ತಿಯೊಬ್ಬ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ. ನನ್ನ ತಾಯಿಯ ಮೇಲೆ ಪ್ರಮಾಣ ಮಾಡಿ ಹೇಳುತ್ತೇನೆ ಪ್ರಿಯಾಂಕ ಖರ್ಗೆ ವಿರುದ್ಧ ಮಾತನಾಡಿದರೆ ಹುಷಾರ್ ಎಂದಿದ್ದಾನೆ ಆದರೆ ಮೊಬೈಲ್ ನಂಬರ್…

Read More

ಮೈಸೂರು : ರಾಜ್ಯ ರಾಜಕಾರಣದಲ್ಲಿ ದಿನೊವೊಂದಕ್ಕೆ ಬದಲಾವಣೆ ಆಗಿತ್ತಿದ್ದೂ, ಇನ್ನೊಂದು ಕಡೆ ಸಚಿವ ಸಂಪುಟ ಪುನಾರಚನೆ ಆಗೋದು ಪಕ್ಕಾ ಎಂದು ಹೇಳಲಾಗುತ್ತಿದೆ. ಇದೀಗ ನವೆಂಬರ್ ಕ್ರಾಂತಿ ವಿಚಾರ ನನಗೆ ಗೊತ್ತಿಲ್ಲ. ಐದು ವರ್ಷ ನಮ್ಮ ತಂದೆ ಸಿದ್ದರಾಮಯ್ಯ ಸಿಎಂ ಆಗಿ ಇರಬೇಕು. ಆಗ ರಾಜ್ಯಕ್ಕೆ ಒಳ್ಳೆಯದಾಗುತ್ತದೆ ಎಂದು ವಿಧಾನ ಪರಿಷತ್‌ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್ ಕ್ರಾಂತಿ ವಿಚಾರ ನನಗೆ ಗೊತ್ತಿಲ್ಲ. ತಂದೆಯವರು ಕೊಟ್ಟಿರುವ ಮಾಹಿತಿ ಪ್ರಕಾರ ಹೈಕಮಾಂಡ್ ಆಗ್ಲಿ ಬೇರೆ ನಾಯಕರಾಗಲಿ ಯಾರು ಕೂಡ ನವೆಂಬರ್ ಆದ ಮೇಲೆ ಅಧಿಕಾರ ಬಿಡಿ ಎಂದು ಹೇಳಿಲ್ಲ. ಹೀಗಾಗಿ ಇವರೆಲ್ಲಾ ಯಾವ ಕ್ರಾಂತಿ ಬಗ್ಗೆ ಮಾತನಾಡುತ್ತಿದ್ದಾರೆ ನನಗೆ ಗೊತ್ತಿಲ್ಲ ಎಂದರು. ರಾಜಕೀಯದಲ್ಲಿ ಯಾವಾಗ ಏನು ಬೇಕಾದರೂ ಆಗಬಹುದು. ಈಗಿನ ಪರಿಸ್ಥಿತಿ ನೋಡಿದರೆ ನಮ್ಮ ತಂದೆ 5 ವರ್ಷ ಸಿಎಂ ಆಗಿ ಇರುತ್ತಾರೆ. ಸಿದ್ದರಾಮಯ್ಯ ಅವರಿಗೆ ಶಾಸಕರ ಬೆಂಬಲ ಇದೆ. ಇಲ್ಲ ಅಂದಿದ್ದರೆ ಶಾಸಕರು ಸುಮ್ಮನೆ…

Read More