Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ದೊಡ್ಡಬಳ್ಳಾಪುರದಲ್ಲಿ ಘೋರ ಘಟನೆ ನಡೆದಿದ್ದು, ಒಣಗಲು ಹಾಕಲಾಗಿದ್ದ ಬಟ್ಟೆಯನ್ನ ತೆಗೆಯಲು ಹೋದ ತಾಯಿ ಹಾಗೂ ತಾಯಿಯನ್ನ ಉಳಿಸಲು ಹೋದ ಮಗನಿಗೂ ವಿದ್ಯುತ್ ಸ್ವರ್ಶಿಸಿ ಮೃತಪಟ್ಟಿದ್ದಾರೆ. ಮತ್ತೊಂದು ಕಡೆ ತಾಯಿ ಮತ್ತು ಅಣ್ಣನನ್ನ ರಕ್ಷಿಸಲು ಮುಂದಾಗ ತಂಗಿಗೂ ವಿದ್ಯುತ್ ತಗುಲಿದೆ. ವಿದ್ಯುತ್ ಅವಘಡದಲ್ಲಿ ತಾಯಿ – ಮಗ ದುರಂತ ಸಾವನ್ನಪ್ಪಿದ್ದು, ಗಾಯಗೊಂಡ ಮಗಳನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕಾರನಾಳ ಗ್ರಾಮದಲ್ಲಿ ಇಂದು ರಾತ್ರಿ ಘಟನೆ ನಡೆದಿದ್ದು, ವಿದ್ಯುತ್ ಅವಘಡದಲ್ಲಿ ತಾಯಿ ಲಲಿತಮ್ಮ (55), ಮಗ ಸಂಜಯ್ (35) ಸಾವನ್ನಪ್ಪಿದ್ದಾರೆ. ವಿದ್ಯುತ್ ಸ್ವರ್ಶದಿಂದ ಸುಟ್ಟಗಾಯಕ್ಕೆ ತುತ್ತಾಗಿರುವ ಮಗಳು ಲಕ್ಷ್ಮೀದೇವಿ(32)ಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಧರ್ಮಸ್ಥಳ ವಿರುದ್ಧ ತನಿಖೆಗೆ ಸರ್ಕಾರಕ್ಕೆ ಒತ್ತಡ ಹೇರುವಂತೆ, ಪ್ರಸಿದ್ಧ ಸ್ವಾಮೀಜಿ ಮೊರೆ ಹೋಗಿದ್ದ ‘ಬುರುಡೆ’ ಗ್ಯಾಂಗ್!
ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ನೂರಾರು ಶವ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಸ್ಕ್ ಮ್ಯಾನ್ ಚೆನ್ನಯ್ಯನನ್ನು ಎಸ್ಐಟಿ ಅಧಿಕಾರಿಗಳು ಅರೆಸ್ಟ್ ಮಾಡಿ ತೀವ್ರ ವಿಚಾರಣೆ ಒಳಪಡಿಸಿದ್ದು ಸ್ಫೋಟಕವಾದ ಮಾಹಿತಿ ಬಾಯಿ ಬಿಟ್ಟಿದ್ದಾನೆ. ಬುರುಡೆ ಗ್ಯಾಂಗ್ ಧರ್ಮಸ್ಥಳದ ವಿರುದ್ಧ ತನಿಖೆ ನಡೆಸಲು ಸರ್ಕಾರಕ್ಕೆ ಒತ್ತಡ ಇರುವಂತೆ ಸ್ವಾಮೀಜಿಗಳ ಮೊರೆ ಹೋಗಲಾಗಿತ್ತು ಎಂದು ಹೇಳಿಕೆ ನೀಡಿದ್ದಾನೆ. ಹೌದು ಬುರುಡೆ ಕೇಸ್ನ ಆರೋಪಿ ಚಿನ್ನಯ್ಯ, ಇದೀಗ ಮತ್ತೊಂದು ಸ್ಫೋಟಕ ಮಾಹಿತಿಯನ್ನು ಎಸ್ಐಟಿ ಮುಂದೆ ಬಾಯ್ಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ. ಬುರುಡೆ ಗ್ಯಾಂಗ್ ಸ್ವಾಮೀಜಿಯೊಬ್ಬರನ್ನು ಭೇಟಿ ಮಾಡಿತ್ತು ಎನ್ನುವ ಸ್ಫೋಟಕ ಮಾಹಿತಿಯನ್ನು ಚಿನ್ನಯ್ಯ ಬಾಯ್ಬಿಟ್ಟಿದ್ದಾನೆ ಎಂದು ಹೇಳಲಾಗಿದೆ. ಇದೊಂದು ಹಿಂದೂ ವಿರೋಧಿ ಹೋರಾಟ ಎಂದು ಗುರುತಿಸಿಕೊಳ್ಳಬಾರದು ಎನ್ನುವ ಕಾರಣಕ್ಕೆ ಸ್ವಾಮೀಜಿಯನ್ನು ಭೇಟಿ ಮಾಡಿದ ತಂಡ, ಸರ್ಕಾರಕ್ಕೆ ಒತ್ತಡ ಹೇರಲು ಮುಂದಾಗಿತ್ತು. ಸ್ವಾಮೀಜಿ ಮೂಲಕ ಧರ್ಮಸ್ಥಳ ಪ್ರಕರಣದ ತನಿಖೆ ತಮ್ಮ ಯೋಜನೆಯಂತೆಯೇ ಮುಂದೆ ಸಾಗಲು ಪ್ಲ್ಯಾನ್ ಮಾಡಿತ್ತು. ಸ್ವಾಮೀಜಿ ಮೂಲಕ ಸರ್ಕಾರಕ್ಕೆ ಒತ್ತಡ ಹಾಕುವುದು, ಈ ಹೋರಾಟದಲ್ಲಿ ಇಡೀ ಹಿಂದೂ…
ಚಿತ್ರದುರ್ಗ : 97 ಲಕ್ಷ ರೂಪಾಯಿ ಸಮೇತ ಬಾಡಿಗೆ ಕಾರು ಚಾಲಕ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಸೀನಿಮಿಯ ರೀತಿಯಲ್ಲಿ ಆರೋಪಿ ಚಾಲಕರನ್ನು ಅರೆಸ್ಟ್ ಮಾಡಿದ್ದಾರೆ. ಚಳ್ಳಕೆರೆ ಠಾಣೆ ಸಿಪಿಐ ಕುಮಾರ್ ನೇತೃತ್ವದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿತ್ತು ಬೆಂಗಳೂರು ಮೂಲದ ನಿವೃತ್ತ ಎಸ್ಪಿ ಗುರುಪ್ರಸಾದ್ ಗೆ ವಂಚನೆ ಎಸಗಲಾಗಿತ್ತು. ನಿನ್ನೆ ಗುರುಪ್ರಸಾದ್ ಪತ್ನಿಯ ಸಮೇತ ಬಳ್ಳಾರಿಗೆ ತೆರಳಿದ್ದರು. ಬಳ್ಳಾರಿಯಲ್ಲಿದ್ದ ಜಮೀನನ್ನು ಗುರುಪ್ರಸಾದ್ ಮಾರಾಟ ಮಾಡಿದ್ದಾರೆ. ಜಾಮೀನು ಮಾರಾಟ ಮಾಡಿದ ಒಟ್ಟು 97 ಲಕ್ಷ ರೂಪಾಯಿ ಪಡೆದು ಕಾರಿನಲ್ಲಿ ಬೆಂಗಳೂರಿಗೆ ಹಿಂದಿರುಗುತ್ತಿದ್ದರು. ಈ ವೇಳೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದ ಬಳಿ ಊಟಕ್ಕಾಗಿ ಗುರುಪ್ರಸಾದ್ ಹೋಟೆಲಿಗೆ ತೆರಳಿದ್ದಾರೆ, ಈ ವೇಳೆ ಕಾರಿನಲ್ಲಿ ಇದ್ದಂತಹ ಹಣದ ಸಮೇತ ರಮೇಶ್ ಎಸ್ಕೇಪ್ ಆಗಿದ್ದ ಹಿಂದೂಪುರ ಮೂಲದ ರಮೇಶ್ ಆಂಧ್ರಕ್ಕೆ ಪ್ರಾರಾಗಲು ಯತ್ನಿಸಿದ್ದಾನೆ. ಸದ್ಯ ಚಳ್ಳಕೆರೆ ಪೊಲೀಸರು ಆರೋಪಿ ರಮೇಶನ್ನು ಅರೆಸ್ಟ್ ಮಾಡಿದ್ದಾರೆ ಅಲ್ಲದೆ…
ಬೆಂಗಳೂರು : ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಬೇಡ ಎಂಬ ಬಿಜೆಪಿ ನಾಯಕರ ವಿರೋಧದ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ ಪ್ರಾರ್ಥನೆ ಮಾಡಿಕೊಳ್ಳುತ್ತಾರೆ. ಇದು ಹಿಂದೂಗಳ ಆಸ್ತಿಯಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನ ವಿಧಾನಸೌಧದಲ್ಲಿ ನಿನ್ನೆ ಈ ವಿಚಾರವಾಗಿ ಪ್ರತಿಕ್ರಿಸಿದ ಅವರು, ನಾವುಗಳು ಮಸೀದಿ, ದರ್ಗಾಗಳಿಗೆ, ಜೈನರ ಬಸದಿಗಳಿಗೆ, ಚರ್ಚ್, ಗುರುದ್ವಾರಗಳಿಗೆ ಹೋಗುತ್ತೇವೆ. ನಾವು ಗುರುದ್ವಾರಕ್ಕೆ ಹೋಗೋದನ್ನ ಯಾರಾದರೂ ತಪ್ಪಿಸಿದ್ದಾರಾ? ಹಿಂದೂ ದೇವಸ್ಥಾನಗಳಿಗೆ ಅವರುಗಳು ಬರುವುದನ್ನು ನಾವು ವಿರೋಧಿಸಿದ್ದೇವೆಯೇ? ಯಾವುದೇ ಶ್ರದ್ದಾ ಕೇಂದ್ರಗಳಿಗೆ ಯಾರು ಬೇಕಾದರೂ ಹೋಗಿ ಬರಬಹುದು ಎಂದರು. ನಮ್ಮದು ಜಾತ್ಯತೀತ ರಾಷ್ಟ್ರ. ನಮ್ಮ ಸಂವಿಧಾನದ ಮೂಲಕ ಎಲ್ಲರಿಗೂ ಅವಕಾಶ, ಸ್ವಾತಂತ್ರ್ಯ ಕಲ್ಪಿಸಲಾಗಿದೆ. ಎಲ್ಲರಿಗೂ ಸಂವಿಧಾನದ ರಕ್ಷಣೆಯಿದೆ. ಎಲ್ಲರಿಗೂ ಅವರವರ ನಂಬಿಕೆ ಮೇಲೆ ವಿಶ್ವಾಸವಿದೆ. ಮುಸ್ಲಿಂ ಅಥವಾ ಕ್ರಿಶ್ಚಿಯನ್ ಹೆಣ್ಣು, ಹಿಂದೂ ಅಥವಾ ಇತರೇ ಧರ್ಮದ ಗಂಡಿಗೆ ಜನಿಸಿದ ಮಕ್ಕಳು…
ಬೆಂಗಳೂರು : ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಕಳೆಗಟ್ಟಿದ್ದು ಅದರಲ್ಲೂ ಚಿಕ್ಕ ಮಕ್ಕಳಿಗೆ ಗಣೇಶ ಹಬ್ಬ ಅಂದರೆ ಅಚ್ಚುಮೆಚ್ಚು. ಇದೀಗ ಬೆಂಗಳೂರಿನ ಕೆಆರ್ ಮಾರುಕಟ್ಟೆಯಲ್ಲಿ ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಹೂವು ಹಣ್ಣು ಹಾಗೂ ಪೂಜಾ ಸಾಮಗ್ರಿಗಳ ಖರೀದಿ ಭರಾಟೆಯು ಜೋರಾಗಿದೆ. ಕೆ.ಆರ್ ಮಾರುಕಟ್ಟೆಯಲ್ಲಿ ಕಾಲಿಡಲು ಆಗದೆ ಜನಜಂಗುಳಿಯಿಂದ ಕೂಡಿದೆ. ಹೌದು ಗೌರಿ ಗಣೇಶ ಹಬ್ಬ ಹಿನ್ನೆಲೆ ಬೆಳ್ಳಂ ಬೆಳಗ್ಗೆ ಖರೀದಿ ಭರಾಟೆ ಜೋರಾಗಿದೆ ಬೆಂಗಳೂರಿನ ಕೆ.ಆರ್ ಮಾರುಕಟ್ಟೆಯಲ್ಲಿ ಜನರು ಖರೀದಿ ಭರಾಟೆಯಲ್ಲಿ ತೊಡಗಿದ್ದಾರೆ. ಹೂವು ಹಣ್ಣು ಹಾಗು ಪೂಜಾ ಸಾಮಗ್ರಿಗಳನ್ನು ಜನರು ಮುಗಿಬಿದ್ದು ಖರೀದಿಸುತ್ತಿದ್ದಾರೆ. ಹಬ್ಬ ಹಿನ್ನೆಲೆಯಲ್ಲಿ ಹೂವು ಹಣ್ಣುಗಳ ಬೆಲೆ ಏರಿಕೆ ನಡುವೆಯೂ ಕೂಡ ಜನರ ಖರೀದಿ ಭರಾಟೆ ಜೋರಾಗಿದೆ.
ಕೊಪ್ಪಳ : ಗಂಗಾವತಿಯಿಂದ ಅಕ್ರಮವಾಗಿ ವಿದೇಶಕ್ಕೆ ಅಕ್ಕಿ ಮಾರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗಂಗಾವತಿ ನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ನಗರ ಠಾಣೆಯಲ್ಲಿ ರೈಸ್ ಮಿಲ್ ಮಾಲೀಕ ಸೇರಿದಂತೆ ಒಟ್ಟು ನಾಲ್ವರ ವಿರುದ್ಧ FIR ದಾಖಲಾಗಿದೆ. ಆದರೆ FIR ನಲ್ಲಿ ರೈಸ್ ಮೇಲ್ ಮಾಲೀಕನ ಹೆಸರನ್ನು ದೂರಿನಲ್ಲಿ ಅಧಿಕಾರಿಗಳು ಉಲ್ಲೇಖಿಸಿಲ್ಲ. ಉಮಾಶಂಕರ್ ರೈಸ್ ಮಿಲ್ ಮಾಲೀಕ ಉಮೇಶ ಸಿಂಗನಾಳ ಹೆಸರನ್ನು ಉಲ್ಲೇಖಿಸದೆ ದೂರಿನಲ್ಲಿ ಕೇವಲ ಉಮಾಶಂಕರ ರೈಸ್ ಮಿಲ್ ಮಾಲೀಕ ಎಂದು ಉಲ್ಲೇಖಿಸಲಾಗಿದೆ. ಗೋದಾಮು ಮ್ಯಾನೇಜರ್ ಸೋಮಶೇಖರ್ ರೈಸ್ ಮಿಲ್ ಮಾಲೀಕ, ಲಾರಿ ಚಾಲಕ ಹಾಗೂ ಕ್ಲಿನರ್ ವಿರುದ್ಧ ಇದೀಗ FIR ದಾಖಲಾಗಿದೆ ಇನ್ನು ಇದೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣದಲ್ಲಿ ಅಧಿಕಾರಿಗಳು ಭಾಗಿಯಾಗಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಿಗೆ ಹೇಳಿಕೆ ನೀಡಿದರು. ಅಕ್ರಮ ನಡೆದಿರುವುದು ನನ್ನ ಗಮನಕ್ಕೆ ಬಂದಿದೆ ಸರ್ಕಾರಿ ಗೋದಾಮಿನಲ್ಲಿ ತಪ್ಪು ಮಾಡಿರುವ ಮಾಹಿತಿ ಇದೆ…
ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರದಲ್ಲಿ ಘೋರ ಘಟನೆ ನಡೆದಿದ್ದು, ಒಣಗಲು ಹಾಕಲಾಗಿದ್ದ ಬಟ್ಟೆಯನ್ನ ತೆಗೆಯಲು ಹೋದ ತಾಯಿ ಹಾಗೂ ತಾಯಿಯನ್ನ ಉಳಿಸಲು ಹೋದ ಮಗನಿಗೂ ವಿದ್ಯುತ್ ಸ್ವರ್ಶಿಸಿ ಮೃತಪಟ್ಟಿದ್ದಾರೆ. ಮತ್ತೊಂದು ಕಡೆ ತಾಯಿ ಮತ್ತು ಅಣ್ಣನನ್ನ ರಕ್ಷಿಸಲು ಮುಂದಾಗ ತಂಗಿಗೂ ವಿದ್ಯುತ್ ತಗುಲಿದೆ. ವಿದ್ಯುತ್ ಅವಘಡದಲ್ಲಿ ತಾಯಿ – ಮಗ ದುರಂತ ಸಾವನ್ನಪ್ಪಿದ್ದು, ಗಾಯಗೊಂಡ ಮಗಳನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ದೊಡ್ಡಬಳ್ಳಾಪುರ ತಾಲೂಕಿನ ಕಾರನಾಳ ಗ್ರಾಮದಲ್ಲಿ ಇಂದು ರಾತ್ರಿ ಘಟನೆ ನಡೆದಿದ್ದು, ವಿದ್ಯುತ್ ಅವಘಡದಲ್ಲಿ ತಾಯಿ ಲಲಿತಮ್ಮ (55), ಮಗ ಸಂಜಯ್ (35) ಸಾವನ್ನಪ್ಪಿದ್ದಾರೆ. ವಿದ್ಯುತ್ ಸ್ವರ್ಶದಿಂದ ಸುಟ್ಟಗಾಯಕ್ಕೆ ತುತ್ತಾಗಿರುವ ಮಗಳು ಲಕ್ಷ್ಮೀದೇವಿ(32)ಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಮನಗರ : ಕಳೆದ ಕೆಲವು ತಿಂಗಳ ಹಿಂದೆ ಮಂಡ್ಯ ಮೈಸೂರು ಭಾಗದಲ್ಲಿ ಸಾವಿರಾರು ಹೆಣ್ಣು ‘ಭ್ರೂಣ ಹತ್ಯೆ’ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ರಾಮನಗರ ಜಿಲ್ಲೆಯಲ್ಲಿ ಭ್ರೂಣ ಲಿಂಗ ಪತ್ತೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಯಲ್ಲಿನ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೆಂಟರ್ ಅನ್ನು ಸೀಜ್ ಮಾಡಲಾಗಿದೆ. ಹೌದು ಬೆಂಗಳೂರು ತಾತಗುಣಿ ಮೂಲದ ಪೋಷಕರಿಗೆ ಎರಡು ಹೆಣ್ಣು ಮಕ್ಕಳಿದ್ದು, ಮೂರನೇಯದು ಹೆಣ್ಣಾಗುತ್ತಿದೆ. ಆ ಮಗು ನಮಗೆ ಬೇಡ ಎಂದು ಪೋಷಕರು ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಮಾಡಿಸಿದ್ದಾರೆ ಎಂದು ತಿಳಿದು ಬಂದಿದೆ. ಇದರ ಬೆನ್ನಲ್ಲೆ ಬೆಂಗಳೂರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆ ಉಪನಿರ್ದೇಶಕ ಡಾ.ವಿವೇಕ್ ದೊರೈ ಅವರು ಸ್ಕ್ಯಾನಿಂಗ್ ಕೇಂದ್ರವನ್ನು ಸೋಮವಾರ ಸಂಜೆ ಸೀಜ್ ಮಾಡಿದ್ದಾರೆ. ಈ ಘಟನೆಯಿಂದಾಗಿ ಭ್ರೂಣ ಪತ್ತೆ ಹಾಗೂ ಹತ್ಯೆ ಜಾಲ ರಾಮನಗರದಲ್ಲಿಯೂ ಸಕ್ರಿಯವಾಗಿರುವ ಅನುಮಾನಗಳು ದಟ್ಟವಾಗಿದೆ.
ಬೆಂಗಳೂರು : ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಿದೆ. ಇವುಗಳಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದ್ದು, ಈ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು ಪ್ರತಿ ಮನೆ ಯಜಮಾನಿ ಬ್ಯಾಂಕ್ ಖಾತೆಗೆ 2,000 ರೂಪಾಯಿ ಹಾಕಲಾಗುತ್ತಿದೆ. ಈಗಾಗಲೇ ಗೃಹಲಕ್ಷ್ಮೀಯರ ಖಾತೆಗೆ 21ನೇ ಕಂತಿನ ಹಣ ಬಿಡುಗಡೆ ಮಾಡಲಾಗಿದೆ. ಇನ್ನು 22ನೇ ಕಂತಿನ ಹಣವನ್ನು ನಾಳೆ ಆಗಸ್ಟ್ 27ರ ಗಣೇಶ ಹಬ್ಬದಂದು ಬಿಡುಗಡೆ ಮಾಡುವ ಸಾಧ್ಯತೆಯಿದೆ. ಯಾಕಂದ್ರೆ 21ನೇ ಕಂತಿನ ಹಣವನ್ನು ವರಮಹಾಲಕ್ಷ್ಮೀ ಹಬ್ಬದಂದೇ ಹಾಕಲಾಗಿತ್ತು. ಇನ್ನು 23 ಹಾಗೂ 24ನೇ ಕಂತಿನ ಹಣ ಬಿಡುಗಡೆ ಯಾವಾಗ ಎನ್ನುವ ಪ್ರಶ್ನೆ ಬಹುತೇಕ ಮಂದಿಯ ಪ್ರಶ್ನೆಯಾಗಿದೆ. ಇದಕ್ಕೂ ಮುಂಚೆ ಯಾರಿಗೆಲ್ಲಾ ಎಷ್ಟು ಕಂತಿನ ಹಣ ಬಂದಿದೆ ಎನ್ನುವ ಮಹತ್ವದ ಮಾಹಿತಿಯನ್ನು ತಿಳಿಯುವುದೇಗೆ ಎಂದು ಇಲ್ಲಿ ನೀಡಲಾಗಿದೆ. ಪ್ರಸ್ತುತ ಈ ಯೋಜನೆ ಅಡಿಯಲ್ಲ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣವನ್ನು ಜಮಾ ಮಾಡಲಾಗುತ್ತಿದೆ. ಅರ್ಹರ ಫಲಾನುಭವಿಗಳ ಖಾತೆಗೆ ಆಗಸ್ಟ್ 14ರಿಂದ 20ರ…
ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ರಾಜ್ಯ ಸರ್ಕಾರ ಕೊನೆಗೂ ಅಧ್ಯಕ್ಷ ಉಪಾಧ್ಯಕ್ಷರ ನೇಮಕ ಮಾಡಿದೆ. ರಾಜ್ಯ ಸರ್ಕಾರ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಪದನಿಮಿತ್ತ ಸದಸ್ಯರನ್ನು ಇದೀಗ ನೇಮಕ ಮಾಡಿದೆ. ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಾಧ್ಯಕ್ಷರಾಗಿ ಡಿಸಿಎಂ ಡಿಕೆ ಶಿವಕುಮಾರ್ ನೇಮಕ ಮಾಡಲಾಗಿದೆ. ಕೇಂದ್ರದಲ್ಲಿನ ಬೆಂಗಳೂರಿನ ಸಚಿವರು, ರಾಜ್ಯ ಸರ್ಕಾರದ ಬೆಂಗಳೂರು ಸಚಿವರು, ಬೆಂಗಳೂರಿನ ಸಂಸದರು, ಶಾಸಕರು, ಎಂಎಲ್ಸಿಗಳು ಪದನಿಮಿತ್ತ ಸದಸ್ಯರಾಗಿ ನೇಮಕ ಮಾಡಲಾಗಿದೆ. ಸದಸ್ಯರಾಗಿ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ ನೀಡಲಾಗಿದೆ. ಜಿಬಿಎ ಮುಖ್ಯ ಆಯುಕ್ತರು ಪದ ನಿಮಿತ್ತ ಸದಸ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಜಿಬಿಎ ವ್ಯಾಪ್ತಿಯ 5 ಪಾಲಿಕೆಗಳ ಮೇಯರ್, ಆಯುಕ್ತರು, ಪದನಿಮಿತ್ತ ಸದಸ್ಯರು, ಅಧ್ಯಕ್ಷ, ಉಪಾಧ್ಯಕ್ಷ ಹಾಗು ಪದನಿಮಿತ್ತ ಸದಸ್ಯರು ಸೇರಿದಂತೆ ಒಟ್ಟು 75 ಜನರನ್ನು ಸರ್ಕಾರ ನೇಮಕ ಮಾಡಿದೆ.