Subscribe to Updates
Get the latest creative news from FooBar about art, design and business.
Author: kannadanewsnow05
ತಿರುವನಂತಪುರ : ಪ್ರಪಂಚದಲ್ಲಿ ಮಕ್ಕಳು ಕೆಟ್ಟವರಾಗಿರುತ್ತಾರೆ ಹೊರತು ಯಾವುದೇ ತಂದೆ-ತಾಯಿ ಕೆಟ್ಟವರಾಗಿರುವುದಿಲ್ಲ. ಇದಿಗ ತಿರುವನಂತಪುರದಲ್ಲಿ ಘೋರವಾದ ಘಟನೆ ನಡೆದಿದ್ದು, ಮದ್ಯದ ಅಮಲಿನಲ್ಲಿದ್ದ ಮಗ, ತನ್ನ ತಾಯಿಯನ್ನು ತುಳಿದು ಕೊಂದಿದ್ದಾನೆ. ಈ ಘಟನೆ ತಿರುವನಂತಪುರದ ತೆಕ್ಕಡದಲ್ಲಿ ನಡೆದಿದೆ. ಮೃತರನ್ನು ತೆಕ್ಕಡ ಮೂಲದ 85 ವರ್ಷದ ಓಮನಾ ಎಂದು ಗುರುತಿಸಲಾಗಿದೆ. ಈಕೆ ಮಗ ಮಣಿಕಂದನ್ ನೆ ತಾಯಿಯನ್ನು ಕುಡಿದ ಅಮಲಿನಲ್ಲಿ ತುಳಿದು ಕೊಂದಿದ್ದಾನೆ. ನಿನ್ನೆ ರಾತ್ರಿ ರಂದು 10.30 ರ ಸುಮಾರಿಗೆ ಮಣಿಕಂದನ್ ಮದ್ಯದ ಅಮಲಿನಲ್ಲಿದ್ದನು. ಕುಡಿದ ಮತ್ತಿನಲ್ಲಿದ್ದ ಮಣಿಕಂದನ್ ತನ್ನ ತಾಯಿಯನ್ನು ಒದ್ದಿದ್ದಾನೆ. ಮಗನಿಂದ ಥಳಿತಕ್ಕೊಳಗಾದ ಓಮನಾಳನ್ನು ಸ್ಥಳೀಯರು ತಕ್ಷಣ ತಿರುವನಂತಪುರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ರಾತ್ರಿ 11 ಗಂಟೆ ಸುಮಾರಿಗೆ ಅವರು ಸಾವನ್ನಪ್ಪಿದರು. ಮಣಿಕಂದನ್ ಹೊಡೆದ ಪರಿಣಾಮ ಓಮನ ಮೂಳೆಗಳು ಮುರಿದಿವೆ ಎಂದು ವೈದ್ಯರು ತಿಳಿಸಿದ್ದಾರೆ.ಸದ್ಯ ವಟ್ಟಪ್ಪರ ಪೊಲೀಸರು ಈತನನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ.
ಗದಗ : ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನೇ ಪ್ರಿಯಕರನ ಜೊತೆಗೂಡಿ ಪತ್ನಿ ಕೊಲೆ ಮಾಡಿದ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಮುಗಳಿ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕೊಲೆಯಾದ ವ್ಯಕ್ತಿಯನ್ನು ಶಂಕ್ರಪ್ಪ ಅಲಿಯಾಸ್ ಮುತ್ತು ಕೊಳ್ಳಿ(30) ಎಂದು ಗುರುತಿಸಲಾಗಿದೆ. ರೋಣ ಪಟ್ಟಣದ ಹಕಾರಿ ಕಾಲೋನಿ ನಿವಾಸಿ ಶಂಕ್ರಪ್ಪ ವಿದ್ಯಾಳನ್ನು ಪ್ರೀತಿಸಿ ಮದುವೆಯಾಗಿದ್ದರು. ಆದರೆ, ಪತ್ನಿ ವಿದ್ಯಾ ಬೇರೊಬ್ಬನ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು. ಇತ್ತೀಚಿಗಷ್ಟೇ ಈ ವಿಚಾರ ಶಂಕರಪ್ಪ ಅವರ ಗಮನಕ್ಕೆ ಬಂದಿತ್ತು. ಶಂಕರಪ್ಪ ಮಲಗಿದ್ದಾಗ ಪ್ರಿಯಕರ ಶಿವಕುಮಾರ್ ನನ್ನು ಮನೆಗ ಕರೆಸಿಕೊಂಡಿದ್ದ ಪತ್ನಿ ವಿದ್ಯಾ, ಶಿವಕುಮಾರ್ ತಂದಿದ್ದ ರಾಡ್ ನಿಂದ, ಇಬ್ಬರೂ ಸೇರಿ ಹಲ್ಲೆ ಮಾಡಿ ಶಂಕರಪ್ಪರನ್ನು ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಮೃತದೇಹದ ಕೈಕಾಲು ಕಟ್ಟಿದ ಆರೋಪಿಗಳು ಮನೆಯಲ್ಲಿದ್ದ ನಾಲ್ಕೈದು ಹಾಸಿಗೆಯಲ್ಲಿ ಮೃತದೇಹವನ್ನು ಸುರುಳಿ ಸುತ್ತಿದ್ದಾರೆ. ಬಳಿಕ ಪ್ರಿಯಕರನಿಗೆ ಮೃತದೇಹವನ್ನು ಸಾಗಿಸುವಂತೆ ವಿದ್ಯಾ ಹೇಳಿದ್ದಾಳೆ. ಅದರಂತೆ ಮೃತದೇಹವನ್ನು ಸಾಗಿಸಿದ ಶಿವಕುಮಾರ್, ಅದನ್ನು ಊರಿನ ಹೊರಗಿನ ಪಾಳುಬಾವಿಯಲ್ಲಿ ಎಸೆದಿದ್ದಾನೆ. ಪೊಲೀಸ್…
ಬೆಂಗಳೂರು : ಸಾಮಾನ್ಯವಾಗಿ ಜೂನ್ ಮೊದಲ ವಾರದಲ್ಲಿ ಮಳೆ ಆರಂಭವಾಗುತ್ತದೆ. ಆದರೆ ಇದೀಗ ಮೇ 24ರವರೆಗೆ ಕೇರಳ ಕರ್ನಾಟಕ ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಆಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡದೆ. ಹೌದು ಮುಂಚಿತವಾಗಿ ಮೇ 24ರವರೆಗೆ ಕೇರಳ, ತಮಿಳುನಾಡು, ಕರ್ನಾಟಕ, ಪುದುಚೇರಿ, ಕಾರೈಕಲ್, ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ಬಿಹಾರ, ಜಾರ್ಖಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. ನೈಋತ್ಯ ಮಾನ್ಸೂನ್ (Monsoon 2025) ಮುಂದಿನ 4ರಿಂದ 5 ದಿನಗಳಲ್ಲಿ ಕೇರಳಕ್ಕೆ ಆಗಮಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಪ್ರತಿ ವರ್ಷ ಜೂನ್ ತಿಂಗಳ ಆರಂಭದಲ್ಲಿ ಕೇರಳಕ್ಕೆ ಮುಂಗಾರು ಪ್ರವೇಶವಾಗುತ್ತಿತ್ತು. ಆದರೆ, ಅದಕ್ಕೂ 2-3 ದಿನಗಳು ಮುಂಚಿತವಾಗಿಯೇ ಮಾನ್ಸೂನ್ ಆಗಮನವಾಗುವ ಸಾಧ್ಯತೆಯಿದೆ. ಮುಂಚಿತವಾಗಿ ಮಳೆಯಾಗುವುದರಿಂದ ಬಿಸಿಲಿನ ಬೇಗೆ ಕಡಿಮೆಯಾಗಲಿದೆ.
ಬೆಂಗಳೂರು : ಈಗಾಗಲೇ ಸಿಂಗಾಪುರ್ ಮತ್ತು ಹಾಂಕಾಂಗ್ ನಲ್ಲಿ ಕೊರೋನಾ ಹೊಸ ತಳಿ ಸೋಂಕು ಹೆಚ್ಚಾಗಿದ್ದು, ಈ ಒಂದು ಕೊರೋನಾ ಸೋಂಕು ಭಾರತಕ್ಕೂ ಕಾಲಿಟ್ಟಿದ್ದು, ಕರ್ನಾಟಕದಲ್ಲಿ ಇದೀಗ 8 ಪ್ರಕರಣಗಳು ಪತ್ತೆಯಾಗಿವೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಕೋವಿಡ್ ಹೊಸ ಅಲೆ ಶುರುವಾಗಿದ್ದು, ಕರ್ನಾಟದಲ್ಲಿ 8 ಪ್ರಕರಣ ಸೇರಿ ದೇಶಾದ್ಯಂತ 257 ಕೇಸ್ ಪತ್ತೆಯಾಗಿವೆ. ಇದುವರೆಗೂ ಭಾರತದಲ್ಲಿ 257 ಪ್ರಕರಣಗಳು ಹಾಗೂ ಕರ್ನಾಟಕದಲ್ಲಿ 8 ಕೇಸ್ ಪತ್ತೆಯಾಗಿದ್ದು, ಕೇರಳದಲ್ಲಿ 69, ಮಹಾರಾಷ್ಟ್ರ 44, ತಮಿಳುನಾಡು 34, ಗುಜರಾತ್, ದೆಹಲಿ, ಹರ್ಯಾಣ, ರಾಜಸ್ಥಾನ, ಸಿಕ್ಕಿಂನಲ್ಲೂ ಪಾಸಿಟಿವ್ ಕೇಸ್ಗಳಿವೆ. ಸದ್ಯ ಯಾವುದೇ ರೀತಿಯ ಗಂಭೀರವಾದ ಗುಣಲಕ್ಷಣಗಳು ಕಾಣಿಸಿಕೊಂಡಿಲ್ಲ. ಹೀಗಾಗಿ ಆತಂಕದ ಸ್ಥಿತಿ ನಿರ್ಮಾಣವಾಗಿಲ್ಲ. ಆದರೆ ನಿರ್ಲಕ್ಷ್ಯ ಬೇಡ ಎಂದು ಆರೋಗ್ಯ ಇಲಾಖೆ ತಿಳಿಸಿದ್ದು, ಎಲ್ಲ ಕಡೆ ಸಂದೇಶ ರವಾನಿಸಿದ್ದು, ಕಟ್ಟೆಚ್ಚರ ವಹಿಸಿದೆ. ಈಗಾಗಲೇ ಸಿಂಗಾಪುರ ಮತ್ತು ಹಾಂಗ್ಕಾಂಗ್ನಲ್ಲಿ ಅಲರ್ಟ್ ಘೋಷಿಸಲಾಗಿದೆ. ಸಿಂಗಾಪುರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಮೇ 03 ರಿಂದ ಮೆ…
ಉತ್ತರಕನ್ನಡ : ರಾಜ್ಯದಲ್ಲಿ ಭಾರಿ ಮಳೆ ಆಗುತ್ತಿದ್ದು ಅವಧಿಗೂ ಮುನ್ನವೇ ಮುಂಗಾರು ಪೂರ್ವ ಮಳೆಯಾಗುತ್ತಿದೆ. ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣ ಅಬ್ಬರಿಸುತ್ತಿದ್ದು ಈ ನೆಲೆಯಲ್ಲಿ ನಾಳೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಘೋಷಣೆ ಮಾಡಿದೆ ಹಾಗಾಗಿ ನಾಳೆ ಉತ್ತರಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ. ಹೌದು ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆಯಲ್ಲಿ ನಾಳೆ ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಾಳೆ ರಜೆ ಘೋಷಿಸಿ ಉತ್ತರ ಕನ್ನಡದ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಅವರು ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ನಾಳೆ ಮತ್ತು ನಾಡಿದ್ದು ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಹಲವು ಪ್ರದೇಶಗಳಲ್ಲಿ ಅವಾಂತರಗಳು ಸೃಷ್ಟಿಯಾಗುತ್ತಿವೆ. ನಿನ್ನೆ ಬೆಂಗಳೂರಿನಲ್ಲಿ ಮಹಾಮಳೆಗೆ ಒಂದೇ ದಿನ ಮೂವರು ಬಲಿಯಾಗಿದ್ದಾರೆ. ವೈಟ್ ಫೀಲ್ಡ್ ನಲ್ಲಿ ಗೋಡೆ ಕುಸಿದು ಓರ್ವ ಮಹಿಳೆ ಸಾವನ್ನಪ್ಪಿದ್ದರೆ, ಬಿಟಿಎಂ ಲೇಔಟ್ ನಲ್ಲಿ ಅಪಾರ್ಟ್ಮೆಂಟ್ ಬೇಸ್ಮೆಂಟ್ ನಲ್ಲಿದ್ದ ನೀರು ಹೊರ ಹಾಕುವಾಗ ವಿದ್ಯುತ್ ಶಾಕ್ ನಿಂದ ಓರ್ವ ಬಾಲಕ ಸೇರಿದಂತೆ ಇಬ್ಬರು ಸಾವನಪ್ಪಿದ್ದಾರೆ. ಹಾಗಾಗಿ ಇಂದು ಬಿಟಿಎಂ ಲೇಔಟ್ಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಭೇಟಿ ನೀಡಿದ್ದಾರೆ. ಮಧುವನ ಅಪಾರ್ಟ್ಮೆಂಟ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಾರ್ಟ್ಮೆಂಟ್ನ ಬೇಸ್ಮೆಂಟ್ ನಲ್ಲಿ ಮಳೆ ನೀರು ಸಂಗ್ರಹವಾಗಿತ್ತು. ನೀರು ಹೊರ ಹಾಕಲು ಯತ್ನಿಸುವಾಗ ವಿದ್ಯುತ್ ಶಾಕ್ ನಿಂದ ನಿನ್ನೆ ಇಬ್ಬರು ಸಾವನಪ್ಪಿದ್ದರು. ಮನಮೋಹನ್ ಕಾಮತ್ ಹಾಗೂ 9 ವರ್ಷದ ಬಾಲಕ ದಿನೇಶ್ ವಿದ್ಯುತ್ ಶಾಕ್ ನಿಂದ ಸಾವನ್ನಪ್ಪಿದ್ದರು. ಮೃತಪಟ್ಟ ಕುಟುಂಬಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಇದೀಗ ಸಾಂತ್ವನ ಹೇಳಿದ್ದಾರೆ. ಮನಮೋಹನ್ ಕಾಮತ್ ಕುಟುಂಬಕ್ಕೆ 5 ಲಕ್ಷ ರೂಪಾಯಿ…
ಬೆಂಗಳೂರು : ನಿನ್ನೆ ಬೆಂಗಳೂರಿನಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಯಾಗಿದ್ದರಿಂದ ಹಲವೆಡೆ ಅವಾಂತರ ಸೃಷ್ಟಿಯಾಗಿತ್ತು. ಅಲ್ಲದೇ ಬಿಟಿಎಂ ಲೇಔಟ್ ನಲ್ಲಿ , ಅಪಾರ್ಟ್ಮೆಂಟಿನ ಬೇಸ್ಮೆಂಟ್ ನಲ್ಲಿದ್ದ ನೀರನ್ನು ಮೋಟಾರ್ ಮೂಲಕ ಹೊರ ಹಾಕುವ ವೇಳೆ ಓರ್ವ ಬಾಲಕ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದರು. ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೃತ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದರು. ಬಳಿಕ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಬೆಂಗಳೂರಿನ ಹಲವಡೆ ಕೆರೆಯ ಅಕ್ಕಪಕ್ಕದಲ್ಲಿ ಮನೆ ಕಟ್ಟಿದ್ದಾರೆ.ಕೆರೆಯ ಅಕ್ಕ ಪಕ್ಕದಲ್ಲಿ ಮನೆ ನಿರ್ಮಿಸಿರುವುದರಿಂದ ಸಮಸ್ಯೆಯಾಗುತ್ತಿದೆ. ಮುಂದೆ ಇಂತಹ ಘಟನೆಗಳು ಆಗದಂತೆ ಹೊಸ ಕಾನೂನು ತರುತ್ತೇವೆ. ಇನ್ನು ಮುಂದೆ ಮನೆ ಕಟ್ಟಬೇಕಾದರೆ ಬೇಸ್ಮೆಂಟ್ ಮಾಡಬಾರದು ಎಂದರು. ಇನ್ಮುಂದೆ ಗ್ರೌಂಡ್ ಫ್ಲೋರ್ ನಲ್ಲಿ ಪಾರ್ಕಿಂಗ್ ಇರಬೇಕು. ಬೇಸ್ಮೆಂಟ್ ಬಗ್ಗೆ ಹೊಸ ಕಾನೂನು ತರುತ್ತೇವೆ. ಬೇಸ್ಮೆಂಟ್ ನಲ್ಲಿ ಪಾರ್ಕಿಂಗ್ ಮಾಡುವಂತಿಲ್ಲ ಕಟ್ಟುವಂತಿಲ್ಲ. ಇದರಿಂದ ಸಾಕಷ್ಟು ಅನಾಹುತವಾಗುತ್ತಿದೆ. ಬೇಸ್ಮೆಂಟ್ ಬಗ್ಗೆ ಪ್ರತ್ಯೇಕ ಕಾನೂನು ತರುತ್ತೇವೆ ಎಂದು ಉಪಮುಖ್ಯಮಂತ್ರಿಯ ಡಿಕೆ…
ಬೆಂಗಳೂರು : ಇತ್ತೀಚಿಗೆ ವೇದಿಕೆಯೊಂದರಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಕೋಮು ದ್ವೇಷದ ಭಾಷಣ ಮಾಡಿದ್ದರು. ಬಳಿಕ ಅವರ ವಿರುದ್ಧ FIR ಕೂಡ ದಾಖಲಾಗಿತ್ತು. ಇದೀಗ ಈ ಕೇಸ್ ಆರೋಪ ಸಂಬಂಧ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಹರೀಶ್ ಪೂಂಜಾ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿದೆ ಎಂಬುದಾಗಿ ರಾಜ್ಯ ಸರ್ಕಾರ ಹೈಕೋರ್ಟ್ಗೆ ತಿಳಿಸಿದ ಹಿನ್ನೆಲೆಯಲ್ಲಿ, ಅರ್ಜಿ ತಿದ್ದುಪಡಿ ಮಾಡುವಂತೆ ಅರ್ಜಿದಾರರ ಪರ ವಕೀಲರಿಗೆ ಹೈಕೋರ್ಟ್ ಅವಕಾಶ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ಮತ್ತು ಆ ನಂತರ ಕಾನೂನು ಪ್ರಕ್ರಿಯೆ ರದ್ದತಿ ಕೋರಿ ಪೂಂಜಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ರಾಚಯ್ಯ ರಜಾಕಾಲದ ನ್ಯಾಯಪೀಠ ಈ ಆದೇಶ ನೀಡಿದೆ. ರಾಜ್ಯ ಸರ್ಕಾರದ ಪರ ವಕೀಲರು, ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಇಂದು ಆರೋಪ ಪಟ್ಟಿಯನ್ನು ಸಕ್ಷಮ ನ್ಯಾಯಾಲಯಕ್ಕೆ ತನಿಖಾಧಿಕಾರಿ ಸಲ್ಲಿಸಿದ್ದಾರೆ ಎಂಬ ಮಾಹಿತಿಯನ್ನು ಒದಗಿಸಲಾಗಿದೆ.…
ಬೆಂಗಳೂರು : ಜನೌಷಧಿ ಕೇಂದ್ರಗಳ ಸ್ಥಾಪನೆ ವಿಚಾರದಲ್ಲಿ ಒಂದು ಮಳಿಗೆಯಿಂದ ಮತ್ತೊಂದು ಮಳಿಗೆಯ ವ್ಯವಹಾರಕ್ಕೆ ಅಡ್ಡಿಯಾಗಲಿದೆ ಎಂಬ ಕಾರಣಕ್ಕಾಗಿ ಮಧ್ಯಪ್ರವೇಶಿಸಲಾಗದು ಎಂದು ಹೈಕೋರ್ಟ್ ತಿಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಶೀಲಾ ಭಟ್ ಎಂಬುವರಿಗೆ ಜನೌಷಧಿ ಕೇಂದ್ರ ತೆರೆಯಲು ಅನುಮತಿಸಿರುವುದನ್ನು ಪ್ರಶ್ನಿಸಿ, ಅದೇ ಜಿಲ್ಲೆಯ ಪುತ್ತೂರು ತಾಲೂಕಿನ ಸವಿನಯ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಅರ್ಜಿದಾರರಾಗಿರುವ ಸವಿನಯ ಎಂಬುವರು ಶೀಲಾ ಭಟ್ ಎಂಬುವರಿಗೆ ಜನೌಷಧ ಕೇಂದ್ರ ತೆರೆಯಲು ಅನುಮತಿ ನೀಡಿರುವುದನ್ನು ಪ್ರಶ್ನಿಸಿದ್ದು, ಆದರೆ, ಸವಿನಯ ಅವರಿಗೆ ಜನೌಷಧಿ ಕೇಂದ್ರ ಸ್ಥಾಪಿಸಲು ತಾತ್ವಿಕ ಒಪ್ಪಿಗೆ ಮಾತ್ರ ನೀಡಲಾಗಿದೆ. ಹೀಗಾಗಿ ತನಗೆ ಮಂಜೂರಾಗಿರುವ ಕೇಂದ್ರಕ್ಕೂ ಶೀಲಾ ಭಟ್ಗೆ ಮಂಜೂರಾಗಿರುವ ಕೇಂದ್ರದ ನಡುವಿನ ಅಂತರ ಒಂದು ಕಿಲೋ ಮೀಟರ್ ಒಳಗಿದೆ ಎಂಬುದಾಗಿ ವಾದಿಸುವ ಹಕ್ಕು ಹೊಂದಿಲ್ಲ. ಹೀಗಾಗಿ, ಶೀಲಾ ಭಟ್ಗೆ ಜನೌಷಧಿ ಕೇಂದ್ರ ತೆರೆಯಲು ಅನುಮತಿಸಿರುವುದರಲ್ಲಿ ಯಾವುದೇ ದೋಷ ಹುಡುಕಲಾಗದು ಎಂದು ಪೀಠ…
ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನಗೆ ಬಿಗ್ ಶಾಕ್ ಎದುರಾಗಿದ್ದು, ಲಂಚ ಸ್ವೀಕಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಕೆಎಸ್ ದಾಖಲಾಗಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಕ್ಷಮ ಪ್ರಾಧಿಕಾರದಿಂದ ತನಿಖೆಗೆ ಗ್ರೀನ್ ಸಿಗ್ನಲ್ ನೀಡಿದೆ. ಹೌದು ಮುನಿರತ್ನ ವಿರುದ್ಧ ತನಿಖೆಗೆ ಇದೀಗ ಗ್ರೀನ್ ಸಿಗ್ನಲ್ ದೊರಕಿದೆ. ಮುನಿರತ್ನ ವಿರುದ್ಧದ ತನಿಖೆಗೆ ಪ್ರಾಧಿಕಾರ ಅನುಮತಿ ನೀಡಿದೆ. ಬೆಂಗಳೂರಿನ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಪ್ರಕರಣದ ತನಿಖೆಗೆ ಸಕ್ಷಮ ಪ್ರಾಧಿಕಾರದಿಂದ ಅನುಮತಿ ದೊರೆತಿದೆ. 36 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 20 ಲಕ್ಷ ಲಂಚ ಸ್ವೀಕಾರ ಮಾಡಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1998ರ ಅಡಿ ಪ್ರಕರಣ ದಾಖಲಾಗಿತ್ತು. ಪ್ರಾಥಮಿಕ ಹಂತದ ತನಿಖೆಯಲ್ಲಿ ಆರೋಪ ಸಹ ಸಾಬೀತು ಆಗಿತ್ತು. ಮುನಿರತ್ನ ಅಪರಾಧ ಎಸಗಿರುವುದು ಸಾಬೀತಾಗಿತ್ತು. ಸಿಐಡಿ ಡಿಜಿಪಿ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆದಿದ್ದರು. ಸಿಐಡಿ ಪೊಲೀಸ್ ಮಹಾನಿರ್ದೇಶಕರ ಕೋರಿಕೆಯ ಮೇರೆಗೆ ಇದೀಗ…