Subscribe to Updates
Get the latest creative news from FooBar about art, design and business.
Author: kannadanewsnow05
ಕೊಡಗು : ರಾಜ್ಯದಲ್ಲಿ ಇದೀಗ ಒಂದು ಕಡೆ ವರುಣ ಅಬ್ಬರಿಸುತ್ತಿದ್ದು ಭಾರಿ ಮಳೆ ಆಗುತ್ತಿರುವುದರಿಂದ ಬೆಂಗಳೂರು ಮಹಾನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅವಾಂತರ ಸೃಷ್ಟಿಯಾಗಿವೆ. ಇದೀಗ ಕೊಡಗು ಜಿಲ್ಲೆಯಲ್ಲಿ ಬಿರುಗಾಳಿ ಮತ್ತು ಭಾರಿ ಮಳೆಗೆ ಬೃಹತ್ ಗಾತ್ರದ ಮರ ಉರುಳಿ ಬಿದ್ದು ಕೂಲಿ ಕಾರ್ಮಿಕ ಮಹಿಳೆಯೊಬ್ಬರು ಸಾವನಪ್ಪಿದ್ದಾರೆ. ಹೌದು ಬಿರುಗಾಳಿ ಸಹಿತ ಮಳೆಗೆ ಮರ ಬಿದ್ದು ಕೂಲಿ ಕಾರ್ಮಿಕ ಮಹಿಳೆ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅರ್ಜಿ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಮನೆಯ ಹಿಂಭಾಗ ಪಾತ್ರ ತೊಳೆಯುತ್ತಿದ್ದ ವೇಳೆ ಗೌರಿ (60) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಮರ ಬಿದ್ದಿದ್ದರಿಂದ ಗಾಯಗೊಂಡಿದ್ದ ಗೌರಿ ಸ್ಥಳದಲ್ಲೇ ಸಾವನಪ್ಪಿದ್ದಾರೆ.
ಬೆಂಗಳೂರು : ಕೊರೋನಾ ಮಹಾಮಾರಿ ಇದೀಗ ಮತ್ತೆ ಭಾರತಕ್ಕೆ ಎಂಟ್ರಿ ಕೊಟ್ಟಿದ್ದು ಇದೀಗ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಮೊದಲ ಬಲಿಯಾಗಿದ್ದು, ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬರು ಇದೀಗ ಕೊರೋನಾ ಸೋಂಕಿಗೆ ಸಾವನ್ನಪ್ಪಿದ್ದಾರೆ. ಹೌದು ರಾಜ್ಯದಲ್ಲಿ ಇದೀಗ ಕೋವಿಡ್ ಆಕ್ಟಿವ್ ಪ್ರಕರಣಗಳ ಸಂಖ್ಯೆ 38ಕ್ಕೆ ಏರಿಕೆಯಾಗಿದ್ದು ಬೆಂಗಳೂರಿನಲ್ಲಿ ಒಂದೇ ಕಡೆ ಕೋವಿಡ್ ಆಕ್ಟಿವ್ ಪ್ರಕರಣಗಳ ಸಂಖ್ಯೆ 32 ಇವೆ ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತ್ತೊಂದು ಹೊಸ ಕೇಸ್ ಪತ್ತೆಯಾಗಿದೆ. ರಾಜ್ಯದಲ್ಲಿ ಇಂದು ಐವರಿಗೆ ಕೊರೋನಾ ಸೋಂಕು ದೃಢವಾಗಿದೆ. ಕೊರೋನಾ ಸೋಂಕಿಗೆ ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ.
ನಾಗ್ಪುರ : ಮಹಿಳೆಯರ ಮೇಲೆ ಯುವತಿಯರ ಮೇಲೆ ಹಾಗೂ ಪುಟ್ಟ ಪುಟ್ಟ ಮಕ್ಕಳ ಮೇಲೆ ಅತ್ಯಾಚಾರ ಲೈಂಗಿಕ ದೌರ್ಜನ್ಯ ಎಸುಗುತ್ತಿದ್ದ ಕಾಮಾಂಧರು ಇದೀಗ ಪ್ರಾಣಿಗಳನ್ನು ಸಹ ಬಿಡುತ್ತಿಲ್ಲ. ಹೌದು ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕುದುರೆ ಸವಾರಿ ಅಕಾಡೆಮಿಯಲ್ಲಿ ಕುದುರೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಕಳೆದ ಮೇ 17ರಂದು ನಾಗ್ಪುರದ ಗಿಟ್ಟಿಖಾದನ್ ಪ್ರದೇಶದ ಕುದುರೆ ಸವಾರಿ ಅಕಾಡೆಮಿಯಲ್ಲಿ ಈ ಘಟನೆ ನಡೆದಿದೆ.ರಾತ್ರಿ ವೇಳೆ ಅಕ್ರಮವಾಗಿ ಅಕಾಡೆಮಿ ಪ್ರವೇಶಿಸಿದ ಆರೋಪಿ ಕುದುರೆಯೊಂದರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ದೃಢಪಟ್ಟಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆ ಸಂಬಂಧ ಕುದುರೆ ಅಕಾಡೆಮಿಯ ಮಾಲೀಕರು ದೂರು ನೀಡಿದ್ದರು. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿ ಚೋಟ್ಯಾ ಸುಂದರ್ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆ ಸಂಬಂಧ ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ…
ಬೆಂಗಳೂರು : ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ ಅವರ ಆಯ್ಕೆಯನ್ನ ಒಂದು ಕಡೆ ಕನ್ನಡ ಪರ ಸಂಘಟನೆಗಳು ಕನ್ನಡಪಟ ಹೋರಾಟಗಾರರು ವಿರೋಧಿಸುತ್ತಿದ್ದರೆ ಇನ್ನೊಂದು ಕಡೆ ಸಚಿವ ಪ್ರಿಯಾಂಕ್ ಖರ್ಗೆ ಸಮರ್ಥಿಸಿಕೊಂಡಿದ್ದಾರೆ.ಹಾಕಿರೋ ಬಂಡವಾಳ ಬರ್ಬೇಕು, ಉದ್ಯೋ ಸೃಷ್ಟಿಯಾಗಬೇಕು ಅದಕ್ಕೆ ಯಾರಾದರೇನು? ಎಂದು ಸಮರ್ಥನೆ ಮಾಡಿದ್ದಾರೆ. ಇಂದು ಬೆಂಗಳೂರಲ್ಲಿ ಮಾತನಾಡಿದ ಸಚಿವರು ಮೈಸೂರು ಸ್ಯಾಂಡಲ್ ಸೋಪ್ ಕಾರ್ಖಾನೆಯಲ್ಲಿ ನಾವು 437 ಕೋಟಿ ಲಾಭ ಮಾಡಿದ್ದೇವೆ. ಅದನ್ನ ಸಾವಿರ ಕೋಟಿ ಮಾಡಬೇಕು. ಅದಕ್ಕೆ ಎಲ್ಲರ ಸಹಕಾರ ಮುಖ್ಯ. ನಮ್ಮ ಮಾರ್ಕೆಟಿಂಗ್ ಹೆಚ್ಚಾಗುತ್ತಲ್ಲ, ಹಾಕಿರುವ ಬಂಡವಾಳವೂ ಬರಬೇಕು, ಉದ್ಯೋಗ ಸೃಷ್ಟಿಯೂ ಆಗಬೇಕು. ಅಕ್ಕೆ ಯಾರಾದರೇನು? ಇನ್ವೆಸ್ಟ್ ಕರ್ನಾಟಕದಲ್ಲಿ 15.20 ಸಾವಿರ ಕೋಟಿ ರಾಜ್ಯಕ್ಕೆ ಬಂತಲ್ಲ, ಬಂಡವಾಳ ಹರಿದು ಬಂದಿದೆಯಲ್ಲ ಅಂತ ಸಮರ್ಥನೆ ನೀಡಿದರು. ಇನ್ನು ಇದೇ ವಿಚಾರವಾಗಿ ಸ್ಯಾಂಡಲ್ವುಡ್ ಕ್ವೀನ್ ಮೋಹಕ ತಾರೆ ನಟಿ ರಮ್ಯಾ ಅವರು ಕೂಡ ವಿರೋಧ ವ್ಯಕ್ತಪಡಿಸಿದ್ದು, ಬೇರೆಯವರಿಗೆ ದುಡ್ಡು ಹಾಕಿ ಟ್ಯಾಕ್ಸ್ ವ್ಯರ್ಥ ಮಾಡುತ್ತಿದ್ದೀರಿ ಎಂದು ಬೇಸರ…
ಕಲಬುರ್ಗಿ : ಕಲ್ಬುರ್ಗಿಯಲ್ಲಿ ಘೋರವಾದಂತಹ ದುರಂತ ಒಂದು ಸಂಭವಿಸಿದ್ದು, ಪರಸ್ಪರ ಎರಡು ಬೈಕುಗಳು ಡಿಕ್ಕಿಯಾಗಿ ಹೊತ್ತಿ ಉರಿದಿವೆ ಈ ವೇಳೆ ಮೈ ಮೇಲೆ ಪೆಟ್ರೋಲ್ ಬಿದ್ದು ಬೆಂಕಿ ತೆಗೆದುವಾಗಿ ದಹನಗೊಂಡಿರುವ ಘಟನೆ ಕಲ್ಬುರ್ಗಿ ಜಿಲ್ಲೆಯ ಕಾಳಗಿ ಪಟ್ಟಣದ ಕೊಡದೂರಿನಲ್ಲಿ ನಡೆದಿದೆ. ಕಲ್ಬುರ್ಗಿ ಜಿಲ್ಲೆಯ ಕಾಳಗಿ ಪಟ್ಟಣದ ಕೊಡದೂರಿನಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಅವಘಡದಲ್ಲಿ ಬೈಕ್ ಸವಾರ ದಶರತ್ ಮಡಿವಾಳ (28) ಸಜೀವ ದಹನ ಹೊಂದಿದ್ದಾರೆ. ಪರಸ್ಪರ ಬೈಕ್ ಗಳು ಡಿಕ್ಕಿ ಆದ ಪರಿಣಾಮ ಮೈ ಮೇಲೆ ಪೆಟ್ರೋಲ್ ಬಿದ್ದು ದಶರಥ ಸಾವನ್ನಪ್ಪಿದ್ದಾರೆ.ಇನ್ನು ಘಟನೆಯಲ್ಲಿ ಓರ್ವನಿಗೆ ಗಂಭೀರವಾದ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರು : ಇನ್ನು ಮುಂದೆ ಬೆಂಗಳೂರಿನಲ್ಲಿ ಫುಟ್ಪಾತ್ ನಲ್ಲಿ ಶಾಪಿಂಗ್ ಮಾಡುವಂತಿಲ್ಲ. ಅದಕ್ಕೆ ಆದಂತಹ ಕೆಲವು ನಿರ್ದಿಷ್ಟ ಸ್ಥಳಗಳಲ್ಲಿ ತಳ್ಳುವ ಗಾಡಿಯ ಮೂಲಕ ವ್ಯಾಪಾರ ನಡೆಸಬೇಕು. ಹಾಗಾಗಿ ಫುಟ್ಪಾತ್ ನಲ್ಲಿ ಶಾಪಿಂಗ್ ನಿಲ್ಲಿಸಲು ನಿರ್ಧರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಫುಟ್ಪಾತ್ ನಲ್ಲಿ ಶಾಪಿಂಗ್ ನಿಲ್ಲಿಸಬೇಕು ಎಂದು ತೀರ್ಮಾನಿಸಿದ್ದೇವೆ. ತಳ್ಳುವ ಗಾಡಿ ಕೊಡೋಕೆ ಸಿದ್ದರಿದ್ದೇವೆ. ನಿರ್ದಿಷ್ಟವಾದ ಜಾಗದಲ್ಲಿ ಮಾತ್ರ ಮಾರಾಟ ಮಾಡಬೇಕು. ನಾಲ್ಕು ರೀತಿಯ ಗಾಡಿ ಡಿಸೈನ್ ಮಾಡಿದ್ದೇವೆ. 3000ಕ್ಕೂ ಹೆಚ್ಚು ಜನ ಗಾಡಿ ಕೊಡುವಂತೆ ಮನವಿ ಮಾಡಿದ್ದಾರೆ. ಈಗಲೂ ಕೂಡ ಎಚ್ಚರಿಕೆ ನೀಡುತ್ತೇನೆ. ನಾಳೆ ಯಾರು ಒತ್ತಡ ತರದಂತೆ ಶಾಸಕರಿಗೆ ತಿಳಿಸಿದ್ದೇನೆ ಎಂದು ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು.
ಬೆಂಗಳೂರು : ಬೆಂಗಳೂರಿನಲ್ಲಿ ಅಕ್ರಮವಾಗಿ ಪಿಸ್ತೂಲ್ ಮಾರಾಟಕ್ಕೆ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಕ್ರಮವಾಗಿ ನಾಡಪಿಸ್ತೂಲ್ ತಂದು ಮಾರಾಟ ಮಾಡುತ್ತಿದ್ದ ರೌಡಿ ಶೀಟರ್ ಸಮೀರ್ ನನ್ನು ಇದೀಗ ಬೆಂಗಳೂರಿನ ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಸಮೀರ್ ಕೆ ಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಎಂದು ತಿಳಿದುಬಂದಿದೆ. ದೆಹಲಿಯಲ್ಲಿ ಕಡಿಮೆ ಬೆಲೆಗೆ ಖರೀದಿಸುತ್ತಿದ್ದ. ಬೆಂಗಳೂರಿನಲ್ಲಿ ಹೆಚ್ಚು ಹಣಕ್ಕೆ ಗನ್ ಮಾರಾಟ ಮಾಡುತ್ತಿದ್ದ. ರೌಡಿಶೀಟರ್ ಗಳಿಗೆ ಗನ್ ಮಾರಾಟ ಮಾಡುತ್ತಿದ್ದ ಆರೋಪಿ ಸಮೇತ ಆರೋಪಿಯನ್ನು ಬಂಧಿಸಿ ಎರಡು ನಾಡಪಿಸ್ತುಲ್ ಸಿಸಿಬಿ ಪೊಲೀಸ್ ವಶಕ್ಕೆ ಪಡೆದುಕೊಂಡಿದೆ.
ಚಿಕ್ಕಬಳ್ಳಾಪುರ : ತಾನು ಪ್ರೀತಿಸುತ್ತಿದ್ದ ಸೋದರ ಮಾವನ ಮಗಳ ಜೊತೆ ಮದುವೆಗೆ ನಿರಾಕರಿಸಿದ ಹಿನ್ನೆಲೆಯಲ್ಲಿ ಸಂಬಂಧಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು ಮಂಜುನಾಥ್(27) ಎಂದು ತಿಳಿದುಬಂದಿದೆ. ಮಾವನ ಮಗಳಿಗೆ ಇನ್ನೂ ಮದುವೆ ವಯಸ್ಸು ಆಗಿಲ್ಲ. ಮತ್ತೊಂದೆಡೆ ಮಂಜುನಾಥ್ ಗೆ ಮದುವೆ ಮಾಡುವ ವಯಸ್ಸು. ಹೀಗಾಗಿ ಬೇರೆ ಹುಡುಗಿಯನ್ನು ನೋಡಿ ಮದುವೆ ಮಾಡುತ್ತೇವೆಂದು ಮಾವನ ಮನೆ ಕಡೆಯವರು ಹೇಳಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಮೃತ ಮಂಜುನಾಥ್, ಅಪ್ರಾಪ್ತೆಯಾಗಿದ್ದ ಸೋದರ ಮಾವನ ಮಗಳನ್ನು ಪ್ರೀತಿಸುತ್ತಿದ್ದ. ಅಷ್ಟೇ ಅಲ್ಲ ಆಕೆಯನ್ನು ಮದುವೆಯಾಗಬೇಕೆಂದು ಕನಸು ಕಂಡಿದ್ದ. ಆದ್ರೆ, ಇದಕ್ಕೆ ಹುಡುಗಿ ತಂದೆ (ಅಂದರೆ ಮಂಜುನಾಥ್ ಸೋದರಮಾವ) ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮನನೊಂದು ಮಂಜುನಾಥ್ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಸಂಬಂಧ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಬೆಂಗಳೂರು : ಈಗಾಗಲೇ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಈ ಹಿನ್ನೆಲೆಯಲ್ಲಿ ಭಾರಿ ಮಳೆಯಿಂದಾಗಿ ಹಲವು ಕಡೆಗೆ ಅವಾಂತರ ಸೃಷ್ಟಿಯಾಗಿದ್ದು, ಇದುವರೆಗೂ, ವರುಣ ಆರ್ಭಟಕ್ಕೆ ಹಲವು ಜನರು ಸಾವನಪ್ಪಿದ್ದಾರೆ. ಇದೀಗ ಅರಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೌದು ರಾಜ್ಯದ 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮೇ 24 ರಿಂದ 27 ರ ವರೆಗೂ ರಾಜ್ಯದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆಯ ತಜ್ಞ ಸಿ.ಎಸ್ ಪಾಟೀಲ್ ಈ ಕುರಿತು ಹೇಳಿಕೆ ನೀಡಿದ್ದಾರೆ. ಉತ್ತರಕನ್ನಡ, ದಕ್ಷಿಣಕನ್ನಡ, ಉಡುಪಿ, ಶಿವಮೊಗ್ಗ ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಇದೀಗ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದ ಆರು ಜಿಲ್ಲೆಗಳಲ್ಲಿ ಇದೀಗ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಮೈಸೂರು : ಹಿರಿಯ ಮಗಳು ಯುವಕನೊಬ್ಬನ ಪ್ರೀತಿಸಿ ಮನೆ ಬಿಟ್ಟು ಹೋಗಿದ್ದಕ್ಕೆ ಮನನೊಂದು ದಂಪತಿಗಳು ಹಾಗೂ ತಮ್ಮ ಇನ್ನೋರ್ವ ಪುತ್ರಿಯೊಂದಿಗೆ ಹಗ್ಗ ಕಟ್ಟಿಕೊಂಡು ಕೆರೆಯಲ್ಲಿ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಬೂದನಕೆರೆಯಲ್ಲಿ ಇಂದು ನಡೆದಿತ್ತು. ಇದೀಗ ಆತ್ಮಹತ್ಯೆ ಮಾಡಿಕೊಂಡ ಮೂವರ ಮೃತದೇಹಗಳು ಪತ್ತೆಯಾಗಿವೆ. ಹೌದು ಮಗಳು ಮನೆ ಬಿಟ್ಟು ಹೋಗಿದ್ದಕ್ಕೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೀಗ ಮೃತ ಮೂವರ ಮೃತದೇಹಗಳು ಬೂದನೂರು ಕೆರೆಯಲ್ಲಿ ಪತ್ತೆಯಾಗಿವೆ. ಮೈಸೂರು ಜಿಲ್ಲೆಯ ಹೆಚ್ಡಿ ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ಈ ಒಂದು ದುರ್ಘಟನೆ ನಡೆದಿದೆ. ಮಹದೇವಸ್ವಾಮಿ ಪತ್ನಿ ಮಂಜುಳಾ ಮತ್ತು ಪುತ್ರಿ ಹರ್ಷಿತಾ ಮೃತದೇಹಗಳನ್ನು, ಇದೀಗ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.













