Subscribe to Updates
Get the latest creative news from FooBar about art, design and business.
Author: kannadanewsnow05
ಮಂಗಳೂರು : ಇತ್ತೀಚಿಗೆ ಮಂಗಳೂರಲ್ಲಿ ರೌಡಿ ಶೀಟರ್ ಹಾಗು ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಭೀಕರ ಕೊಲೆಯಾಗಿತ್ತು. ಘಟನೆ ಮಾಸುವ ಮುನ್ನವೇ ಮಂಗಳೂರಲ್ಲಿ ಮತ್ತೊಂದು ಕೊಲೆಯಾಗಿದೆ. ಮದುವೆಯಾದ ಆರೇ ತಿಂಗಳಲ್ಲಿ ಪತ್ನಿ ತನ್ನನ್ನು ತೊರೆದು ತವರು ಮನೆ ಸೇರಿದ್ದಾಳೆ ಎಂಬ ಸಿಟ್ಟಿಗೆ ಪತಿಯು ಮದುವೆ ಮಾಡಿಸಿದ್ದ ದಲ್ಲಾಳಿಯನ್ನೇ ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ. ಕೊಲೆಯಾದ ವ್ಯಕ್ತಿಯನ್ನು ವಾಮಂಜೂರಿನ ಸುಲೇಮಾನ್ (50) ಎಂದು ತಿಳಿದುಬಂದಿದೆ. ಘಟನೆಯಲ್ಲಿ ಸುಲೇಮಾನ್ ಅವರ ಇಬ್ಬರು ಪುತ್ರರಾದ ರಿಯಾಬ್ ಮತ್ತು ಸಿಯಾಬ್ ಗಾಯಗೊಂಡಿದ್ದಾರೆ. ಸುಲೇಮಾನ್ ಅವರ ಸಂಬಂಧಿ ವಳಚ್ಚಿಲ್ ನಿವಾಸಿ ಮುಸ್ತಾಫಾ (30) ಕೊಲೆ ಆರೋಪಿಯಾಗಿದ್ದು, ಆತನನ್ನು ಬಂಧಿಸಲಾಗಿದೆ, ಪ್ರಕರಣದ ತನಿಖೆ ಮುಂದುವರಿದಿದೆ ಎಂದು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿರುವ ಮಾಹಿತಿ ಪ್ರಕಾರ, ಮೃತ ಸುಲೇಮಾನ್, ವಿವಾಹ ದಲ್ಲಾಳಿಯಾಗಿ ಕೆಲಸ ಮಾಡುತ್ತಿದ್ದರು. ಇವರು ಆರೋಪಿ ಮುಸ್ತಫಾ ಎಂಬಾತನಿಗೆ ಮಹಿಳೆಯೊಂದಿಗೆ ಸುಮಾರು 8 ತಿಂಗಳ ಹಿಂದೆ ವಿವಾಹ ಮಾಡಿಸಿದ್ದರು. ಆದರೆ, ವೈವಾಹಿಕ…
ಬೆಂಗಳೂರು : ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಇದೀಗ ಪತ್ರ ಬರೆದಿದ್ದಾರೆ. ಕನ್ನಡದ ಖ್ಯಾತ ಸಂಗೀತ ನಿರ್ದೇಶಕರಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪತ್ರ ಬರೆದಿದ್ದು, ಸಂಗೀತ ನಿರ್ದೇಶಕರಾದ ಹಂಸಲೇಖ, ಸಾಧುಕೋಕಿಲ ಹಾಗೂ ಅರ್ಜುನ್ ಜನ್ಯಾಗೆ ಪತ್ರ ಬರೆದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮನವಿ ಮಾಡಿಕೊಂಡಿದ್ದಾರೆ. ಕಾವೇರಿಯ ಮೆರಗನ್ನು ಹೆಚ್ಚಿಸಲು ಕಾವೇರಿ ಮಾತೆ ಹಾಗೂ ಕಾವೇರಿ ಆರತಿಗೆ ಸಂಬಂಧಿಸಿದಂತೆ ಗೀತ ರಚನೆಗೆ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ. ಕಾವೇರಿ ಆರತಿಯ ವೇಳೆ ಆಯ್ಕೆಯಾದ ಹಾಡು ಪ್ರಸಾರ ಮಾಡಲು ಕನ್ನಡದ ಖ್ಯಾತ ಸಂಗೀತ ನಿರ್ದೇಶಕರಿಗೆ ಡಿಕೆ ಶಿವಕುಮಾರ್ ಪತ್ರ ಬರೆದಿದ್ದಾರೆ. ಬೆಂಗಳೂರು ಜಲ ಮಂಡಳಿ ಮತ್ತು ಕಾವೇರಿ ಆರತಿ ಸಮಿತಿ ಅಧ್ಯಕ್ಷರಾಗಿರುವ ಡಿಕೆ ಶಿವಕುಮಾರ್ ಪತ್ರ ಬರೆದಿದ್ದಾರೆ.
ಬೆಂಗಳೂರು : ತನ್ನ ಸಹ ಕಲಾವಿದಯ ಮೇಲೆ ಅತ್ಯಾಚಾರ ಆಗಿರುವ ಆರೋಪದ ಅಡಿ ಇದೀಗ ಕಾಮಿಡಿ ಕಿಲಾಡಿಗಳು ಖ್ಯಾತಿಯ ಹಾಗೂ ಕಿರುತೆರೆ ನಟ ಮಡೆನೂರು ಮನುವನ್ನು ನಿನ್ನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದರು. ಅಲ್ಲದೆ ಇಂದು ಮ್ಯಾಜಿಸ್ಟ್ರೇಟ್ ಕೋರ್ಟಿಗೆ ಹಾಜರುಪಡಿಸಿ 2 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಇದೀಗ ಮಡೆನೂರು ಮನು ಮತ್ತೊಂದು ಸ್ಫೋಟಕವಾದ ಆಡಿಯೋ ಬಿಡುಗಡೆ ಮಾಡಿದ್ದಾನೆ. ಹೌದು ಕಿರುತೆರೆ ನಟ ಒಡೆನೂರು ಮನು ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮಡೆನೂರು ಮನು ಸ್ಫೋಟಕವಾದ ಆಡಿಯೋ ಒಂದನ್ನು ಬಿಡುಗಡೆ ಮಾಡಿದ್ದಾರೆ. ಆಡಿಯೋ ದಲ್ಲಿ ಇಬ್ಬರು ಚೆನ್ನಾಗಿದ್ದೇವೆ. ಸ್ವಲ್ಪ ದಿನ ಆಕೆಗೆ ನಾನು ಟೈಮ್ ಕೊಡಲು ಆಗಿಲ್ಲ. ಆಕೆ ಮೇಲೆ ಅತ್ಯಾಚಾರ ನಡೆಸಿಲ್ಲ ಎಂದಿದ್ದಾರೆ. ಅಲ್ಲದೇ ಆಕೆಯ ಜೊತೆಗೆ ನಾನು ಸಂಸಾರ ಮಾಡಿದ್ದೇನೆ. ನನ್ನ ಮೇಲೆ ಅವಳು ಅತ್ಯಾಚಾರ ದೂರು ಕೊಡಲು ಸಾಧ್ಯವೇ ಇಲ್ಲ. ನಾನು ಮಿಂಚುಗೆ ತಾಳಿ ಕಟ್ಟಿದ್ದೇನೆ ಅವಳೇ ನನ್ನ ಹೆಂಡತಿ.…
ಬೆಂಗಳೂರು : ಬೆಂಗಳೂರಿನ ಮೆಟ್ರೋದಲ್ಲಿ ಪ್ರಯಾಣಿಸುವ ಯುವತಿಯರು ಹಾಗೂ ಮಹಿಳೆಯರ ಖಾಸಗಿ ಫೋಟೋ ಹಾಗೂ ವಿಡಿಯೋಗಳನ್ನು ರಹಸ್ಯವಾಗಿ ರೆಕಾರ್ಡ್ ಮಾಡಿ, ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿರುವ ಆತಂಕಕಾರಿ ವಿಚಾರ ನಿನ್ನೆ ಬೆಳಕಿಗೆ ಬಂದಿತ್ತು.ಇದೀಗ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. ಹೌದು ನಮ್ಮ ಮೆಟ್ರೋದಲ್ಲಿ ಹುಡುಗಿಯರ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ಆರೋಪಿಯನ್ನು ಇದೀಗ ಅರೆಸ್ಟ್ ಮಾಡಲಾಗಿದೆ. ಮೆಟ್ರೋ ರೈಲಿನಲ್ಲಿ ಹುಡುಗಿಯರ ಆಕ್ಷೇಪಾರ್ಹ ವಿಡಿಯೋ ರೆಕಾರ್ಡ್ ಮಾಡಿ ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡುತ್ತಿದ್ದ. ಆರೋಪಿ ಇದುವರೆಗೂ 13ಕ್ಕೂ ಹೆಚ್ಚು ವಿಡಿಯೋ ಅಪ್ಲೋಡ್ ಮಾಡಿದ್ದ. ಈ ಕುರಿತು ಬನಶಂಕರಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿತ್ತು. ಈಗ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪ್ರಕರಣ ಹಿನ್ನೆಲೆ? ಸಿಲಿಕಾನ್ ಸಿಟಿ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಮಹಿಳೆಯರ ಗೌರವವನ್ನು ಹಣೆಯುವ ಘಟನೆ ಬೆಳಕಿಗೆ ಬಂದಿದೆ. ಕೆಲ ಕಿಡಿಗೇಡಿಗಳು ಮೆಟ್ರೋಯಾತ್ರಿಕ ಮಹಿಳೆಯರ ಗುಪ್ತವಾಗಿ ವಿಡಿಯೋ ಹಿಡಿದು, ಅದನ್ನು ಇನ್ಸ್ಟಾಗ್ರಾಮ್ನಲ್ಲಿ ಮೆಟ್ರೋ ಚಿಕ್ಸ್ ಎಂಬ ಹೆಸರಿನಲ್ಲಿ ಅಪ್ಲೋಡ್ ಮಾಡಿರುವ ದುಷ್ಕೃತ್ಯ ಬೆಳಕಿಗೆ ಬಂದಿದೆ.…
ಬೆಂಗಳೂರು : ಬೆಂಗಳೂರಿನಲ್ಲಿ ಟಿಡಿಆರ್ ಹಗರಣ ಸಂಬಂಧಪಟ್ಟ ED ಅಧಿಕಾರಿಗಳು ಇದೀಗ ದಾಳಿ ಮಾಡಿದ್ದಾರೆ. ಅಕ್ರಮ ಹಣ ವರ್ಗಾವಣೆ ಕಾಯಿದೆ 2002ರ ನಿಬಂಧನೆ ಅಡಿ ಇದೀಗ ಜಾರಿ ನಿರ್ದೇಶನಲಯ ಅಧಿಕಾರಿಗಳು(ED) ದಾಳಿ ಮಾಡಿದ್ದಾರೆ. ಮೆಸರ್ಸ್ ವಾಲ್ಮಾರ್ಕ್ ರಿಯಾಲ್ಟಿ ಹೋಲ್ಡಿಂಗ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಮೇಲೆ ದಾಳಿ ಮಾಡಿದ್ದಾರೆ. ಬೆಂಗಳೂರಿನ ರಿಚ್ಮಂಡ್ ರಸ್ತೆಯಲ್ಲಿರುವ ಕಚೇರಿಯ ಮೇಲೆ ದಾಳಿ ನಡೆಸಲಾಗಿದೆ. ಕಂಪನಿ ನಿರ್ದೇಶಕರ ಮನೆ ಸೇರಿದಂತೆ 9 ಕಡೆ ಇಡಿ ದಾಳಿ ನಡೆಸಿ ಇದೀಗ ಶೋಧ ನಡೆಸುತ್ತಿದೆ. ದಾಳಿಯ ವೇಳೆ ಹಲವು ದಾಖಲೆಯನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಟಿಡಿಆರ್ ಹಗರಣದ ಬಗ್ಗೆ ಜೆಸಿಬಿ ತನಿಖೆ ನಡೆಸಿ ಚಾರ್ಜ್ ಶೀಟ್ ಸಲ್ಲಿಸಿತ್ತು. ಇದೀಗ ಇಡಿ ಅಧಿಕಾರಿಗಳು ಮತ್ತೆ ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. https://twitter.com/dir_ed/status/1925854190850486566?t=JcWfGnrCORyvy3fAFKUAlQ&s=19
ಮೈಸೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ನಾಗರಾಭಿವೃದ್ಧಿ ಪ್ರಧಿಕಾರ (ಮುಡಾ) ಹಗರಣವು ರಾಜ್ಯಾದ್ಯಂತ ಭಾರಿ ಸದ್ದು ಮಾಡಿತ್ತು. ಇದೀಗ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹೆಸರು ರದ್ದು ಮಾಡಿ ಅದಕ್ಕೆ ಮರು ನಾಮಕರಣ ಮಾಡಲಾಗಿದೆ. ಈ ಕುರಿತು ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಹೌದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹೆಸರು ರದ್ದು ಮಾಡಲಾಗಿದ್ದು, ಮುಡಾ ಹೆಸರು ತೆಗೆದು ‘ಎಂಡಿಎ’ ಎಂದು ಇದೀಗ ಮರುನಾಮಕರಣ ಮಾಡಲಾಗಿದೆ. ಇಂದಿನಿಂದಲೇ ಎಂಡಿಎ ಮೈಸೂರು ಅಭಿವೃದ್ಧಿ ಪ್ರಾಧಿಕಾರ ಎಂದು ಹೆಸರು ಜಾರಿಯಾಗಿದೆ. ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಲತಾ ಅವರಿಂದ ಈ ಕುರಿತು ಆದೇಶ ಹೊರಡಿಸಲಾಗಿದೆ.
ಬೆಂಗಳೂರು : ಸಹಕಲಾವಿದೆಯ ಮೇಲೆ ಅತ್ಯಾಚಾರ ನಡೆಸಿದ್ದು, ಅಲ್ಲದೆ ಎರಡು ಬಾರಿ ಗರ್ಭಪಾತ ಮಾಡಿಸಿದ ಆರೋಪದ ಮೇರೆಗೆ ಇದೀಗ ಕಾಮಿಡಿ ಕಿಲಾಡಿ ಖ್ಯಾತಿಯ ಕಿರುತೆರೆ ನಟ ಮಡೆನೂರು ಮನುವನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶಿಸಿದೆ. ಹೌದು ತನ್ನ ಸಹಕಲಾವಿದೆಯ ಮೇಲೆ ಮಡೆನೂರು ಮನು ಅನೇಕ ಬಾರಿ ಅತ್ಯಾಚಾರ ಎಸಗಿದ್ದಾನೆ. ಅಲ್ಲದೆ ಎರಡು ಬಾರಿ ಗರ್ಭಪಾತ ಕೂಡ ಮಾಡಿಸಿದ್ದಾನೆ ಎಂದು ಅತ್ಯಾಚಾರ ಸಂತ್ರಸ್ತೇ ಆರೋಪಿಸಿದ್ದರು. ಹಾಗಾಗಿ ನಿನ್ನೆ ಹಾಸನ ಜಿಲ್ಲೆಯಲ್ಲಿ ಬೆಂಗಳೂರಿನ ಅನ್ನಪೂರ್ಣೇಶ್ವರಿ ಠಾಣೆ ಪೋಲಿಸರು ಮಡೇನೂರು ಮನು ಅರೆಸ್ಟ್ ಮಾಡಿ ಕರೆತಂದಿದ್ದರು. ಇದೀಗ ಇಂದು ಜಡ್ಜ್ ಮುಂದೆ ಹಾಜರುಪಡಿಸಿದ ನಂತರ ವಿಚಾರಣೆಯ ಬಳಿಕ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ಅನ್ನಪೂರ್ಣೇಶ್ವರಿ ನಗರ ಠಾಣೆ ಪೋಲೀಸರು ಇದೀಗ ಮನುವನ್ನು ಎರಡು ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದಾರೆ. ಅತ್ಯಾಚಾರ ಆರೋಪದ ಅಡಿ ಮಡೇನೂರು ಮನುವನ್ನು ಬಂಧಿಸಲಾಗಿತ್ತು. ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಪೊಲೀಸರು…
ಉತ್ತರಕನ್ನಡ : ರಾಜ್ಯದಲ್ಲಿ ಈಗಾಗಲೇ ಬೆಂಗಳೂರು ಮಹಾನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿದೆ. ಈಗಾಗಲೇ ರಣಚಂಡಿ ಮಳೆಗೆ ಹಲವರು ಬಲಿಯಾಗಿದ್ದಾರೆ. ಇದೀಗ ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ ಭಾರಿ ಮಳೆಯಿಂದಾಗಿ ರಸ್ತೆಗಳು ಸಂಪೂರ್ಣವಾಗಿ ಬಂದ್ ಆಗಿವೆ. ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯನ್ನು ರಸ್ತೆಯಲ್ಲಿ ಸಾಗಿಸಲಾಗದೆ ಬಿದಿರಿಗೆ ಕಟ್ಟಿ ಆಸ್ಪತ್ರೆಗೆ ರವಾನಿಸಲಾಗಿದೆ. ಹೌದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಈ ಒಂದು ಘಟನೆ ಬೆಳಕಿಗೆ ಬಂದಿದ್ದು, ವೃದ್ಧೆಯೊಬ್ಬರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಆದರೆ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ ಈ ಹಿನ್ನೆಲೆಯಲ್ಲಿ ರಸ್ತೆಗಳು ಸಂಪೂರ್ಣವಾಗಿ ಮಳೆ ನೀರಿನಿಂದ ಕೂಡಿದ್ದು ಸಂಪೂರ್ಣವಾಗಿ ಕೆಸರುಮಯವಾಗಿದೆ. ಹಾಗಾಗಿ ವೃದ್ಧಿಯನ್ನು ಬಿದಿರಿನ ಕಟ್ಟಿಗೆಗೆ ಕಟ್ಟಿ ಕುಟುಂಬಸ್ಥರು ಆಸ್ಪತ್ರೆಗೆ ಹೊತ್ತೊಯ್ದಿರುವ ಘಟನೆ ನಡೆದಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಅಬಕಾರಿ ಇಲಾಖೆಯ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಗಾಂಜಾ ಮಾರಾಟ ಮಾಡುತ್ತಿದ್ದ ಒಡಿಶಾ ಮೂಲದ ನಾಲ್ವರು ಆರೋಪಿಗಳನ್ನು ಇದೀಗ ಅರೆಸ್ಟ್ ಮಾಡಿದ್ದಾರೆ. ಯುವತಿ ಸೇರಿದಂತೆ ಅಬಕಾರಿ ಅಧಿಕಾರಿಗಳು ನಾಲ್ವರನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರಿಂದ ಸುಮಾರು 30 ಲಕ್ಷ ರೂಪಾಯಿ ಮೌಲ್ಯದ ಗಾಂಜಾವನ್ನು ಜಪ್ತಿ ಮಾಡಲಾಗಿದೆ. ಒಡಿಶಾ ಮೂಲದ ಸಂಪತ್ ಪ್ರಧಾನ (23) ತಪಸ್ ಪ್ರಧಾನ್ (22) ಜಗನ್ ಪತಂಜಲಿ (24) ಹಾಗೂ ದೀಪಾಂಜಲಿ (22) ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ರಾಜಾಜಿನಗರದ ಮೆಟ್ರೋ ಸ್ಟೇಷನ್ ಮಾರುತಿದ್ದರು. ದಾಳಿ ಮಾಡಿ ನಾಲ್ವರನ್ನು ಇದೀಗ ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ NDPS ಆಕ್ಟ್ 1985 ಅಡಿ ಪ್ರಕರಣ ದಾಖಲಾಗಿದೆ.
ಆಂಧ್ರಪ್ರದೇಶ : ಹಿಂದೂಗಳ ಪವಿತ್ರ ದೇವಸ್ಥಾನವಾದ ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ಇದೀಗ ಏಕಾಏಕಿ ಮುಸ್ಲಿಂ ಸಮುದಾಯದ ವ್ಯಕ್ತಿ ಒಬ್ಬ ಬಂದು ನಮಾಜ್ ಸಮಯದ ವೇಳೆ 10 ನಿಮಿಷಗಳ ಕಾಲ ನಮಾಜ್ ಮಾಡಿ ತೆರಳಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೌದು ನೇರವಾಗಿ ತಿರುಪತಿ ತಿರುಮಲ ಕಲ್ಯಾಣ ಮಂಟಪದಲ್ಲಿ ಹಝರತ್ ಕ್ಯಾಪ್ ಧರಿಸಿಕೊಂಡೇ ನಮಾಜ್ ಮಾಡುತ್ತಾನೆ. ಸುಮಾರು 10 ನಿಮಿಷ ಆತ ನಮಾಜ್ ಮಾಡುತ್ತಾನೆ. ಬಳಿಕ ಸದ್ದಿಲ್ಲದೇ ಅಲ್ಲಿಂದ ತೆರಳುತ್ತಾನೆ. ಐಷಾರಾಮಿ ಕಾರಿನಲ್ಲಿ ಬಂದ ವ್ಯಕ್ತಿ ತಿರುಪತಿ ಸನ್ನಿಧಿಯಲ್ಲೇ ನಮಾಜ್ ಮಾಡಿದ್ದಾನೆ. ಇದರ ಬಗ್ಗೆ ಇದೀಗ ತಿರುಮಲ ಆಡಳಿತ ಮಂಡಳಿ ತನಿಖೆಗೆ ಮುಂದಾಗಿದೆ. ಆತ ಯಾರು, ಎಲ್ಲಿಂದ ಬಂದಿದ್ದಾನೆ ಎಂದು ತನಿಖೆಯಾಗುತ್ತಿದೆ. ಆತನ ಕಾರು ನಂಬರ್ ಕೂಡಾ ನೋಟ್ ಮಾಡಿಕೊಳ್ಳಲಾಗಿದ್ದು ಅದರ ಜಾಡು ಹಿಡಿದು ತನಿಖೆ ನಡೆಸಲಾಗುತ್ತಿದೆ. https://twitter.com/BattaKashmiri/status/1925547094573482282?t=CwpLLjxoQtyEjjp6SwPwJw&s=19













