Author: kannadanewsnow05

ಕೊಪ್ಪಳ : ಮನೆಯ ಮುಂದೆ ಆಟವಾಡುತ್ತಿದ್ದ ಒಂದುವರೆ ವರ್ಷದ ಹೆಣ್ಣು ಮಗುವೊಂದು ತೆರೆದಿದ್ದ ಚರಂಡಿಗೆ ಬಿದ್ದು ಸಾವನನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿಯ ಎಪಿಎಂಸಿ ಹಮಾಲರ ಕಾಲೋನಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. https://kannadanewsnow.com/kannada/breaking-aap-announces-list-of-candidates-for-delhi-and-haryana-lok-sabha-seats/ ಹಮಲರ ಕಾಲೋನಿಯ ಪಂಪಾವತಿ ಹಾಗೂ ಅಕ್ಕಮ್ಮ ದಂಪತಿ ಪುತ್ರಿ ಪವಿತ್ರ ಎಂದು ಹೇಳಲಾಗುತ್ತಿದ್ದು. ಬೆಳಿಗ್ಗೆ ಆಟ ಆಡುತ್ತಿದ್ದ ಸಂದರ್ಭದಲ್ಲಿ ಮನೆಯ ಮುಂದಿನ ಚರಂಡಿಗೆ ಮಗು ಪವಿತ್ರ ಬಿದ್ದಿದೆ. ಈ ವೇಳೆ ಪೋಷಕರು ಮಗು ಎಲ್ಲಿ ಹೋಗಿದೆ ಎಂದು ಗಾಬರಿಯಿಂದ ಹುಡುಕಾಟ ನಡೆಸಿದ್ದಾರೆ. https://kannadanewsnow.com/kannada/interesting-facts-shouldnt-people-with-thyroid-eat-rice-what-do-the-experts-say/ ಆದರೆ ಇಂದು ಮಧ್ಯಾಹ್ನ ಚರಂಡಿಯಲ್ಲಿ ಮಗುವಿನ ಮೃತದೇಹ ಪತ್ತೆಯಾಗಿದೆ.ಚರಂಡಿ ಮುಚ್ಚದೆ ನಗರಸಭೆ ಅಧಿಕಾರಿಗಳು ಹಾಗೆ ಬಿಟ್ಟಿದ್ದರು. ನಗರಸಭೆ ಕಚೇರಿ ಬಳಿ ಮಗುವಿನ ಶವ ಬಿಟ್ಟು ಸ್ಥಳೀಯರು ಇದೀಗ ಆಕ್ರೋಶ ಹೊರಹಾಕುತ್ತಿದ್ದಾರೆ. ಗಂಗಾವತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/beauty-tips-the-easiest-home-remedy-for-facial-posture-art-is-as-follows/

Read More

ಬೆಂಗಳೂರು : ರಾಜ್ಯಸಭಾ ನಾಲ್ಕು ಸ್ಥಾನಗಳಿಗೆ ಇಂದು ನಡೆದ ಚುನಾವಣೆಯಲ್ಲಿ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಅಡ್ಡ ಮತದಾನದ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಅಜಯ್ ಮಕೇನ್ ಗೆ ಮತ ಹಾಕಿದ್ದು ಹಾಗೂ ಮತದಾನಕ್ಕೆ ಬಾರದೆ ಇರುವ ಎಲ್ಲಾಪುರ ಕ್ಷೇತ್ರದ ಶಾಸಕ ಶಿವರಾಂ ಹೆಬ್ಬಾರ್ ವಿರುದ್ಧ ನಾಳೆ ಬಿಜೆಪಿ ವಿಧಾನಸಭೆ ಸ್ಪೀಕರ್ಗೆ ದೂರು ಸಲ್ಲಿಸಲಿದೆ ಎಂದು ತಿಳಿದು ಬಂದಿದೆ. https://kannadanewsnow.com/kannada/interesting-facts-shouldnt-people-with-thyroid-eat-rice-what-do-the-experts-say/ ನಾಳೆ ವಿಧಾನಸಭೆ ಸ್ಪೀಕರ್ ಗೆ ಬಿಜೆಪಿ ದೂರು ನೀಡಲಿದೆ.ಶಾಸಕ ಸ್ಥಾನದಿಂದ ಸೋಮಶೇಖರ್ ಅನರ್ಹತೆಗೆ ಕೋರಿ ದೂರು ನೀಡಲಿದೆ. ಬಿಜೆಪಿಗೆ ದೂರು ನೀಡಲು ಹದಿನೈದು ದಿನಗಳ ಕಾಲಾವಕಾಶ ಇದೆ. ಬಿಜೆಪಿ ದೂರು ನೀಡಿದ ಬಳಿಕ ಯಾವುದೇ ಕ್ರಮ ವಾಗದಿದ್ದರೆ, ಕೋರ್ಟ್ ಮೊರೆ ಹೋಗಲು ಬಿಜೆಪಿ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. https://kannadanewsnow.com/kannada/beauty-tips-the-easiest-home-remedy-for-facial-posture-art-is-as-follows/ ಪಕ್ಷ ವಿರೋಧಿಯಾಗಿ ಶಾಸಕ ಎಸ್ ಟಿ ಸೋಮಶೇಖರ್ ಅಡ್ಡ ಮತದಾನದ ಮೂಲಕ ರಾಜ್ಯಸಭೆಯ ಕಾಂಗ್ರೆಸ್ ಅಭ್ಯರ್ಥಿ ಅಜಯ್ ಮಾಕೇನಿದೆ ಇಂದು ಮತದಾನ ಚಲಾಯಿಸಿದರು. ಯಲ್ಲಾಪುರ ಕ್ಷೇತ್ರದ…

Read More

ವಿಜಯಪುರ : ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಘಾಳಪೂಜಿ ಗ್ರಾಮದಲ್ಲಿರುವ ಪರಿಶಿಷ್ಟ ಜಾತಿಯ ಮೊರಾರ್ಜಿ ವಸತಿ ಶಾಲೆಯಲ್ಲಿ ಶಾರ್ಟ್ ಸರ್ಕ್ಯೂಟ್ ಇಂದ ಅಗ್ನಿ ಅವಘಡ ಸಂಭವಿಸಿ ಮೂರು ವಿದ್ಯಾರ್ಥಿಗಳಿಗೆ ಗಂಭೀರವಾದಂತಹ ಗಾಯಗಳಾದಂತ ಘಟನೆ ನಡೆದಿದೆ. https://kannadanewsnow.com/kannada/somashekhar-suicide-politically-on-cross-voting-r-ashoka/ ಘಟನೆಯಲ್ಲಿ 6ನೇ ತರಗತಿಯ ಓರ್ವ ವಿದ್ಯಾರ್ಥಿಗೆ ಕೈಕಾಲು ಸುಟ್ಟು ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ವಿಜಯಪುರದ ಬಿಎಲ್ಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಅಲ್ಲದೆ ಸಾಗರ್, ಸಮರ್ಥ, ಮಲ್ಲಿಕಾರ್ಜುನ ವಿದ್ಯಾರ್ಥಿಗಳಿಗೆ ಸುಟ್ಟು ಗಾಯಗಳಾಗಿವೆ. ಇನ್ನು ಘಟನೆ ನಡೆದ ಕೊಠಡಿಯಲ್ಲಿ 18 ವಿದ್ಯಾರ್ಥಿಗಳು ರಾತ್ರಿ ಮಲಗಿದ್ದಾಗ ಏಕಾಏಕಿ ಬೆಂಕಿ ವ್ಯಾಪಿಸಿ ಈ ಅವಘಡ ಸಂಭವಿಸಿದೆ. ವಾರ್ಡನ್ ಮತ್ತು 10ನೇ ತರಗತಿ ವಿದ್ಯಾರ್ಥಿಗಳು ಧಾವಿಸಿ ಬೆಂಕಿ ನಂದಿಸಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ. https://kannadanewsnow.com/kannada/note-dont-consume-apple-seeds-for-this-reason/ ವಸತಿ ಶಾಲೆ ಉದ್ಘಾಟನೆಯಾಗಿ ಕೇವಲ 6 ತಿಂಗಳಾಗಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಅಗ್ನಿ ಅವಘಡ ಸಂಭವಿಸಿದೆ. ಶಾಲೆ ಉದ್ಘಾಟನೆಗೊಂಡ ಆರು ತಿಂಗಳಲ್ಲಿಯೇ ಘಟನೆ ನಡೆದಿದೆ. ಅಗ್ನಿ ಅವಘಡದಿಂದಾಗಿ ಕೋಣೆಯ ಗೋಡೆಗೆ ಆವರಿಸಿರುವ ಹೊಗೆಯನ್ನು ಸ್ವಚ್ಛ ಮಾಡುವ ಕಾರ್ಯ ನಡೆದಿದ್ದು,…

Read More

ಬೆಂಗಳೂರು : ಇಂದು ನಡೆದ ರಾಜ ಸಭಾ ಚುನಾವಣೆಯಲ್ಲಿ ಬಿಜೆಪಿಯ ಯಶವಂತಪುರ ಕ್ಷೇತ್ರದ ಶಾಸಕ ಎಸ್ ಟಿ ಸೋಮಶೇಖರ್ ಅಡ್ಡ ಮತದಾನ ಮಾಡುವ ಮೂಲಕ ಕಾಂಗ್ರೆಸ್ ಅಭ್ಯರ್ಥಿಗೆ ಮತ ಚಲಾಯಿಸಿದ್ದಾರೆ ಇದಕ್ಕೆ ವಿಪಕ್ಷ ನಾಯಕ ಆರ್ ಅಶೋಕ ಕಿಡಿ ಕಾರಿಂದು ಎಸ್ ಟಿ ಸೋಮಶೇಖರ್ ರಾಜಕೀಯವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು. https://kannadanewsnow.com/kannada/kpsc-and-bmtc-invites-applications-for-2884-vacancies-heres-the-complete-information/ ಇಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಸೋಮಶೇಖರ್ ಬಿಜೆಪಿ ಅಥವಾ ಮೈತ್ರಿ ಅಭ್ಯರ್ಥಿಗೆ ಮತ ಹಾಕುವ ಬದಲು ಕಾಂಗ್ರೆಸ್‌ನ ಮೂರನೇ ಅಭ್ಯರ್ಥಿಗೆ ಮತ ಹಾಕಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಮಕ್ಕೆ ಬಿಜೆಪಿ ಮುಂದಾಗಿದ್ದು, ಈ ಬಗ್ಗೆ ಹೈಕೋರ್ಟ್​ ಹಿರಿಯ ವಕೀಲರ ಜೊತೆ ಚರ್ಚೆ ನಡೆಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ವಕೀಲ ವಿವೇಕ್ ರೆಡ್ಡಿ ಅವರ ಜೊತೆ ಚರ್ಚೆ ಮಾಡಿದ್ದೇನೆ. ಅವರು ಏನೆಲ್ಲಾ ಮಾಡಬಹುದು ಎಂದು ತಿಳಿಸಿದ್ದಾರೆ ಎಂದು ಹೇಳಿದರು. https://kannadanewsnow.com/kannada/over-20-injured-in-head-on-collision-between-lorry-and-private-bus-near-sringeri/ ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್‌ಗೂ ವಿಪ್ ಕಳಿಸಿದ್ದೆವು. ಕೊನೆಯ…

Read More

ಚಿತ್ರದುರ್ಗ : ಫೋಕ್ಸೋ ಪ್ರಕರಣದಡಿ ಆರೋಪಿಯಾಗಿರುವ ಮುರುಘಾ ಶ್ರೀ ಕೈಗೆ ಮಠದ ಆಡಳಿತ ನೀಡಿದ್ದನ್ನು ಪ್ರಶ್ನಿಸಿ ಮಾಜಿ ಸಚಿವ ಎಚ್.ಏಕಾಂತಯ್ಯ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಅದರಂತೆ ಇಂದು ಮಧ್ಯಂತ ಆದೇಶ ನೀಡಿದ ಸುಪ್ರೀಂಕೋರ್ಟ್, ಮುರುಘಾಶ್ರೀ ಆಡಳಿತಕ್ಕೆ ನಿರ್ಬಂಧ ವಿಧಿಸಿದೆ. ಅಲ್ಲದೆ, ಮುರುಘಾಮಠ ಹಾಗೂ ಎಸ್​ಜೆಎಂ ವಿದ್ಯಾಪೀಠ ಆಡಳಿತಕ್ಕೆ ಮೂರು ದಿನದಲ್ಲಿ ಸಮಿತಿ ರಚಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ. https://kannadanewsnow.com/kannada/breaking-big-relief-for-former-ips-officer-annamalai-sc-stays-criminal-case/ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣ ಸಂಬಂಧ ಮುರುಘಾ ಮಠದ ಪೀಠಾಧ್ಯಕ್ಷ ಮುರುಘಾ ಶ್ರೀಯನ್ನು ಬಂಧಿಸಲಾಗಿತ್ತು. ಬಳಿಕ ಹೈಕೋರ್ಟ್ ಮುರುಘಾ ಶ್ರೀಗೆ ಷರತ್ತು ಬದ್ಧ ಜಾಮೀನು ನೀಡಿತ್ತು. ಜೈಲಿನಿಂದ ಬಿಡುಗಡೆಯಾದ ನಂತರ ಮುರುಘಾ ಶ್ರೀಗಳು ಮುರುಘಾಮಠ, ಎಸ್​ಜೆಎಂ ವಿದ್ಯಾಪೀಠದ ಅಧ್ಯಕ್ಷರಾಗಿ ಆಡಳಿತ ನಡೆಸುತ್ತಿದ್ದರು. ಎರಡು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ. ಮಠದ ಆಡಳಿತಕ್ಕೆ ಸಮಿತಿ ರಚಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಹೈಕೋರ್ಟ್ ಆದೇಶದಂತೆ ಸಮಿತಿ ರಚಿಸದೇ ಇದ್ದಲ್ಲಿ…

Read More

ನವದೆಹಲಿ : ತಮಿಳುನಾಡಿನ ಬಿಜೆಪಿ ನಾಯಕ ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಸಂದರ್ಶನ ಒಂದರಲ್ಲಿ ದ್ವೇಷ ಭಾಷಣ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು ಸುಪ್ರೀಂಕೋರ್ಟ್ ಅವರ ವಿರುದ್ಧ ದಾಖಲಾದ ಪ್ರಕರಣಕ್ಕೆ ತಡೆ ನೀಡಿದೆ ಎಂದು ತಿಳಿದುಬಂದಿದೆ. https://kannadanewsnow.com/kannada/breaking-govt-is-sitting-with-its-eyes-closed-sc-pulls-up-centre-over-patanjali-fake-advertisement-case/ ದೀಪಾವಳಿ ಸಮಯದಲ್ಲಿ ಪಟಾಕಿ ನಿಷೇಧಿಸುವಂತೆ ಕೋರಿ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಲಾಗಿರುವ ಅರ್ಜಿಯ ಹಿಂದೆ ಕ್ರಿಶ್ಚಿಯನ್ ಮಿಷನರಿಗಳಿಗೆ ಸೇರಿದ ಎನ್‌ಜಿಒಗಳ ಕೈವಾಡ ಇದೆ ಎಂದು ತಮಿಳುನಾಡಿನ ಬಿಜೆಪಿ ನಾಯಕ ಅಣ್ಣಾಮಲೈ ಸಂದರ್ಶನವೊಂದರಲ್ಲಿ ಆರೋಪಿಸಿದ್ದರು. https://kannadanewsnow.com/kannada/if-your-mobile-slips-into-the-water-do-this-immediately/ ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು. ಇದೀಗ ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಕ್ರಿಮಿನಲ್ ಪ್ರಕರಣಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ.ಸೇಲಂ ಮೂಲದ ಸಾಮಾಜಿಕ ಕಾರ್ಯಕರ್ತ ವಿ. ಪಿಯೂಷ್ ಅವರು ಅಣ್ಣಾಮಲೈ ವಿರುದ್ಧ ಈ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣವನ್ನು ವಜಾ ಮಾಡುವಂತೆ ಮದ್ರಾಸ್ ಹೈಕೋರ್ಟ್‌ಗೆ ಅಣ್ಣಾಮಲೈ ಮೇಲ್ಮನವಿ ಸಲ್ಲಿಸಿದ್ದರು. https://kannadanewsnow.com/kannada/bengaluru-4-accused-including-an-international-drug-peddler-arrested-in-bengaluru/ ಆದರೆ ಮದ್ರಾಸ್ ಹೈಕೋರ್ಟ್ ಈ ಅರ್ಜಿಯನ್ನು ತಿರಸ್ಕರಿಸಿತ್ತು. ಈ ಹಿನ್ನೆಲೆಯಲ್ಲಿ ಅಣ್ಣಾಮಲೈ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿಯಾದಂತಹ ಕಾರ್ಯಾಚರಣೆ ನಡೆಸಿದ್ದು ಅಂತರಾಷ್ಟ್ರೀಯ ಡ್ರಗ್ ಪೆಡ್ಲರ್ ಸೇರಿದಂತೆ ಒಟ್ಟು ನಾಲ್ಕು ಆರೋಪಿಗಳನ್ನು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. https://kannadanewsnow.com/kannada/breaking-delhi-ed-summons-arvind-kejriwal-in-delhi-liquor-policy-case/ ಪ್ರತ್ಯೇಕ ಪ್ರಕರಣಗಳಲ್ಲಿ ಬರೋಬ್ಬರಿ 2.35 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಸಿಸಿಬಿ ವಶಕ್ಕೆ ಪಡೆದಿದೆ. ಪ್ರತ್ಯೇಕ ಮೂರು ಪ್ರಕರಣಗಳ ಸಂಬಂಧ ಸಿಸಿಬಿ ಕಾರ್ಯಾಚರಣೆ‌ ನಡೆಸಿ ಅನೇಕರ ಹೆಡೆಮುರಿ ಕಟ್ಟಿದೆ. ವಿದೇಶದಿಂದ ಬಂದು ಡ್ರಗ್ ದಂಧೆಯಲ್ಲೇ ಭಾಗಿಯಾಗಿದ್ದ ಡ್ರಗ್ ಪೆಡ್ಲರ್ ಮತ್ತು ನೈಜಿರಿಯಾ ಹಾಗೂ ಘಾನದಿಂದ ಬಂದು ಪ್ರತ್ಯೇಕ ಎರಡು ತಂಡಗಳಿಂದ ನಡೆಯುತ್ತಿದ್ದ ಡ್ರಗ್ ದಂಧೆಯ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. https://kannadanewsnow.com/kannada/revered-father-his-son-failed-to-convince-st-somashekar-yatnal-on-bsy-byv/ ಸೊಲದೇವನಹಳ್ಳಿಯ ಕಾರ್ಯಾಚರಣೆಯಲ್ಲಿ ಇಬ್ಬರು ಡ್ರಗ್ ಪೆಡ್ಲರ್​ಗಳನ್ನು ಬಂಧಿಸಲಾಗಿದೆ. ಈ ಹಿಂದೆ ಇದೆ ಪ್ರಕರಣದಲ್ಲಿ ಜೈಲು ಸೇರಿದ್ದ ವ್ಯಕ್ತಿ ಜೈಲಿನಿಂದ ಬಿಡುಗಡೆಯಾಗಿ ಮತ್ತೋರ್ವ ವಿದೇಶಿ ವ್ಯಕ್ತಿಯ ಜೊತೆ ಸೇರಿಕೊಂಡು ಬೆಂಗಳೂರಿನಲ್ಲಿ ದಂಧೆ ನಡೆಸುತ್ತಿದ್ದ. ಸದ್ಯ ಈಗ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತರಿಂದ 51 ಲಕ್ಷ ಮೌಲ್ಯದ 500…

Read More

ಬೆಂಗಳೂರು : ನಮ್ಮಲ್ಲಿ ಬರಿ ಹೊಂದಾಣಿಕೆಯ ರಾಜಕಾರಣ ಆಗಿ ಹೋಗಿದೆ. ಎಸ್ ಟಿ ಸೋಮಶೇಖರ್ ಈ ರೀತಿ ಮಾಡಬಾರದಾಗಿತ್ತು. ಯಾವ ಆತ್ಮ ಸಾಕ್ಷಿಯ ಮತಗಳು ಕೂಡ ಇಲ್ಲ ಎಸ್ ಟಿ ಸೋಮಶೇಖರ್ ಮನವೊಲಿಸಲು ಪೂಜ್ಯ ತಂದೆಯವರು ವಿಫಲರಾಗಿದ್ದಾರೆ ಪರೋಕ್ಷವಾಗಿ ಬಿಎಸ್ ವೈ ಹಾಗೂ ಬಿವೈ ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. https://kannadanewsnow.com/kannada/those-with-these-symptoms-should-read-this-before-consuming-turmeric/ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಆತ್ಮಸಾಕ್ಷಿ ಎನ್ನುವುದು ಪಕ್ಷವು ಮಾಡಿರಬಾರದು, ಪಕ್ಷನೇ ಹೇಳಿರಬೇಕು ನಿಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ಮತದಾನ ಮಾಡಿ ಎಂದು ಹೇಳಬೇಕು. ಆಗ ನಾವು ಮತ ಚಲಾಯಿಸುತ್ತೇವೆ. ನಮ್ಮ ಪಕ್ಷಕ್ಕೆ ಮತ ಹಾಕುವುದು ನಮ್ಮ ಕರ್ತವ್ಯ. https://kannadanewsnow.com/kannada/ananth-ambanis-pre-wedding-menu-2500-dishes-vegetarian-smacks/ ಯತ್ನಾಳ ಅವರು ಬಹಳಷ್ಟು ಪಕ್ಷಕ್ಕೆ ಡ್ಯಾಮೇಜ್ ಮಾಡಿದರೆ ಎಂದು ಸೋಮಶೇಖರ್ ಅವರು ಹೇಳಿದ್ದರು. ಪಕ್ಷವನ್ನು ಸದೃಢವನ್ನು ಮಾಡುವ ಕೆಲಸ ಮಾಡಿದ್ದೇನೆ ಆದರೆ ಡ್ಯಾಮೇಜ್ ಮಾಡುವುದು ಮಾಡಿಲ್ಲ. ಪೂಜ್ಯ ತಂದೆಯವರು ಎಸ್ ಟಿ ಸೋಮಶೇಖರ್ ಮನವೊಲಿಸಲು ವಿಫಲರಾಗಿದ್ದಾರೆ. ವಿ ಸೋಮಣ್ಣ ಅವರನ್ನು ಸೋಲಿಸಲು ನಮ್ಮವರದೇ ದೊಡ್ಡ…

Read More

ಬೆಂಗಳೂರು : 2024ನೇ ಸಾಲಿನ ಸಿಗರೇಟುಗಳ ಮತ್ತು ಇತರ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ, ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ವಿನಿಯಮ) ವಿಧೇಯಕ ಅಂಗೀಕಾರ ಆಗಿದೆ.ಆದ್ರೆ ಇದೀಗ ಬೆಂಗಳೂರಿನಲ್ಲಿ ತೆರೆದಿದ್ದ ಹುಕ್ಕಾ ಬಾರ್ ಗಳ ಮೇಲೆ CCB ಅಧಿಕಾರಿಗಳು ದಾಳಿ ನಡೆಸಿ 7 ಜನರನ್ನು ಬಂಧಿಸಿದ್ದಾರೆ. https://kannadanewsnow.com/kannada/st-somashekar-cross-voting-bjp-yuva-morcha-to-gherao-mlas-house/ ಕರ್ನಾಟಕದಲ್ಲಿ ಹುಕ್ಕಾ ಬಾರ್​ಗಳನ್ನು ನಿಷೇಧಿಸಲಾಗಿದೆ. ನಿಷೇಧದ ನಡುವೆಯೂ ಕೆಲವು ಕಡೆ ಹುಕ್ಕಾ ಬಾರ್​ಗಳನ್ನು ನಡೆಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ 7 ಜನರನ್ನು ಬಂಧಿಸಿದ್ದಾರೆ. ಹಾಗೂ 12.5 ಲಕ್ಷ ಮೌಲ್ಯದ ಹುಕ್ಕಾ ಫ್ಲೇವರ್ ಹಾಗೂ ಇತರೇ ವಸ್ತುಗಳನ್ನು ಸೀಜ್ ಮಾಡಿದ್ದಾರೆ. https://kannadanewsnow.com/kannada/all-three-congress-candidates-will-win-rajya-sabha-polls-siddaramaiah/ ಮಹಾಲಕ್ಷ್ಮೀ ಲೇಔಟ್, ಹೆಚ್​ಎಎಲ್ ಹಾಗೂ ಕೆ.ಆರ್. ಪುರಂ ಠಾಣಾ ವ್ಯಾಪ್ತಿಯಲ್ಲಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಹುಕ್ಕಾ ಬಾರ್​ಗಳ ಮೇಲೆ ನಿಷೇಧ ಹೇರಿತ್ತು. ಆದರೂ ಕೆಲವು ಕಡೆಗಳಲ್ಲಿ ಅನಧಿಕೃತವಾಗಿ ಹುಕ್ಕಾ ಬಾರ್​ಗಳನ್ನು ನಡೆಸಲಾಗುತ್ತಿತ್ತು. ಈ ಬಗ್ಗೆ…

Read More

ಬೆಂಗಳೂರು : ಇಂದು ರಾಜ್ಯಸಭೆಯ ಚುನಾವಣೆಯ ನಾಲ್ಕು ಸ್ಥಾನಗಳಿಗೆ ವಿಧಾನಸೌಧದಲ್ಲಿ ಮತದಾನ ನಡೆಯುತ್ತಿದ್ದು ಬಿಜೆಪಿಯ ಯಶವಂತಪುರ ಕ್ಷೇತ್ರದ ಶಾಸಕ ಎಸ್ ಟಿ ಸೋಮಶೇಖರ್ ಅಡ್ಡ ಮತದಾನ ಮಾಡುವ ಮೂಲಕ ಕಾಂಗ್ರೆಸ್ ಗೆ ಮತ ಹಾಕಿದ್ದಾರೆ, https://kannadanewsnow.com/kannada/all-three-congress-candidates-will-win-rajya-sabha-polls-siddaramaiah/ ಇದಕ್ಕೆ ಬಿಜೆಪಿ ನಾಯಕರು ಸೇರಿದಂತೆ, ಕಾರ್ಯಕರ್ತರು ಕೂಡ ಕುಪಿತಗೊಂಡಿದ್ದು, ಶಾಸಕ ಎಸ್ ಟಿ ಸೋಮಶೇಖರ್ ಅವರ ಮನೆಯ ಮುಂದೆ ಪ್ರತಿಭಟನೆಗೆ ಸಿದ್ಧತೆ ಮಾಡಿಕೊಂಡಿದೆ. ಅಲ್ಲದೆ ಅವರ ಮನೆಗೆ ಮುತ್ತಿಗೆ ಹಾಕಲು ಕೂಡ ಸಿದ್ದತೆ ಮಾಡಿಕೊಂಡಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. https://kannadanewsnow.com/kannada/st-somashekar-shivaram-hebbar-resign-as-mlas-ahead-of-lok-sabha-polls/ ಎಸ್ ಟಿ ಸೋಮಶೇಖರ್ ಅಡ್ಡ ಮತದಾನ ಮಾಡಿದ್ದಕ್ಕೆ ಬಿಜೆಪಿ ಗರಂ ಆಗಿದ್ದು, ಬಿಜೆಪಿಯ ಯುವ ಮೋರ್ಚಾದಿಂದ ಪ್ರತಿಭಟನೆ ಸಾಧ್ಯತೆ ಹಿನ್ನೆಲೆಯಲ್ಲಿ ಮೈಕೋ ಲೇಔಟ್ ಪೋಲಿಸರಿಂದ ಎಸ್ಟಿ ಸೋಮಶೇಖರ್ ಮನೆಗೆ ಭದ್ರತೆಯನ್ನು ಒದಗಿಸಲಾಗಿದೆ ಎಂದು ತಿಳಿದುಬಂದಿದೆ. https://kannadanewsnow.com/kannada/rrb-rpf-notification-for-si-constable-posts-fake-pib-fact-check-clarification/

Read More