Author: kannadanewsnow05

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ದೀಪಾವಳಿ ಹಬ್ಬದಂದೆ ಘೋರವಾದ ದುರಂತ ನಡೆದಿದ್ದು, ಹಬ್ಬಕ್ಕಾಗಿ ರೆಸ್ಟೋರೆಂಟ್ ಮುಂಭಾಗದಲ್ಲಿ ತಳಿರುತೋರಣ ಕಟ್ಟಲು ಹೋದ ಯುವಕನಿಗೆ ವಿದ್ಯುತ್ ಸ್ವರ್ಶಿಸಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿದೆ. ಚಿಕ್ಕಬಳ್ಳಾಪುರ ತಾಲೂಕಿನ ಹೊನ್ನೇನಹಳ್ಳಿಯ ಡಿ.ಕೆ ಫ್ಯಾಮಿಲಿ ರೆಸ್ಟೋರೆಂಟ್​ನಲ್ಲಿ ಶನಿವಾರ ಬೆಳಗ್ಗೆ 11.30ರ ಸಮಯದಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ ನೇಪಾಳ ಮೂಲದ ಪದಮ್ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿ ಡಿ.ಕೆ.ಫ್ಯಾಮಿಲಿ ರೆಸ್ಟೋರೆಂಟ್​ನಲ್ಲಿ ಆಡುಗೆ ಕೆಲಸಗಾರನಾಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ರೆಸ್ಟೋರೆಂಟ್​ನಲ್ಲಿ ದೀಪಾವಳಿ ಹಬ್ಬವನ್ನು ಆಚರಣೆ ಮಾಡಲಾಗುತ್ತಿತ್ತು. ಹಬ್ಬಕ್ಕೆ ಪದಮ್ ರೆಸ್ಟೋರೆಂಟ್ ಮುಂಭಾಗದಲ್ಲಿ ಮಾವಿನ ತಳಿರುತೋರಣ ಕಟ್ಟಲು ಮುಂದಾಗಿದ್ದಾನೆ. ಮುಂಭಾಗದಲ್ಲಿದ್ದ ಪಾನ್ ಶಾಪ್ ಮೇಲೆ ಹತ್ತಿದ ಆತನಿಗೆ ತಲೆ ಮೇಲೆ ಹಾದು ಹೋಗಿದ್ದ ವಿದ್ಯುತ್ ಲೈನ್ ತಗುಲಿದೆ. ವಿದ್ಯುತ್ ಸ್ವರ್ಶದಿಂದ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅವಘಡದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

Read More

ಬೆಂಗಳೂರು : ರಾಜ್ಯದ ಯಜಮಾನರಿಗೆ ಇದೀಗ ರಾಜ್ಯ ಸರ್ಕಾರ ಮತ್ತೊಂದು ಸಿಹಿ ಸುದ್ದಿ ಒಂದನ್ನು ನೀಡಿದ್ದು, ಐದು ಗ್ಯಾರಂಟಿ ಯೋಜನೆಗಲ್ಲಿ ಪ್ರಮುಖ ಗ್ಯಾರಂಟಿ ಯೋಜನೆಯದ ಗ್ರಹಲಕ್ಷ್ಮಿ ಯೋಜನೆ ಅಡಿಯಲ್ಲಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಹೌದು ಷೇರು ಸಂಗ್ರಹಣೆಗೆ ಮಹಾಲಕ್ಷ್ಮಿ ಯೋಜನೆ ಅಡಿಯಲ್ಲಿ ಸಹಕಾರ ಸಂಘ ಸ್ಥಾಪನೆಗೆ ಸಹಕಾರ ಇಲಾಖೆ ಇದೀಗ ಅನುಮತಿ ನೀಡಿದೆ. ಸಹಕಾರ ಸಂಘ ಸ್ಥಾಪನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಮೂಲಕ ರಾಜ್ಯದ ಮಹಿಳೆಯರಿಗೆ ಈ ಒಂದು ಸಹಕಾರ ಸಂಘ ಸ್ಥಾಪನೆ ಮಾಡುವುದರಿಂದ ಮತ್ತಷ್ಟು ಹೆಚ್ಚಿನ ಅನುಕೂಲತೆಗಳು ಆಗಲಿವೆ ಎಂದು ಹೇಳಲಾಗುತ್ತಿದೆ. ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಸಹಕಾರ ಸಂಘ ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಶೀಘ್ರದಲ್ಲಿ ಜಾರಿಗೆ ಬರುವ ಸಾಧ್ಯತೆ ಇದೆ

Read More

ಬೆಂಗಳೂರು : ಕಲ್ಬುರ್ಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನಕ್ಕೆ ನಿರಾಕರಣೆ ವಿಚಾರವಾಗಿ ವಿಪಕ್ಷ ನಾಯಕ ಆರ್ ಅಶೋಕ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ನಾಯಕರು ಮಕ್ಕಳು ಆರ್ ಎಸ್ ಎಸ್ ಕಚೇರಿಗೆ ಹೋಗುತ್ತಾರೆ ಸಿಟಿ ರವಿ ಮಕ್ಕಳು ಹೋಗಿದ್ದರು ನನ್ನ ಮಕ್ಕಳು ಹೋಗಿದ್ದರು ಮುಂದಿನ 2020 ರಲ್ಲಿ ರಾಜ್ಯದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರುತ್ತದೆ ಆಗ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಬ್ಯಾನ್ ಮಾಡುತ್ತೇವೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರ ಮಕ್ಕಳು ಆರ್ ಎಸ್ ಎಸ್ ಕಚೇರಿಗೆ ಹೋಗುತ್ತಾರೆ. ಸಿಟಿ ರವಿ ಮಕ್ಕಳು ಹೋಗಿದ್ದರು ನನ್ನ ಮಕ್ಕಳು ಹೋಗಿದ್ದರು. ನೀವು ರಸ್ತೆ ಚಳುವಳಿ ಮಾಡಿದ್ರಾ? ನಿಮ್ಮವರು ಮಾಡಿದ್ರಾ? ಹನುಮಧ್ವಜ ಹೋರಾಟದಲ್ಲಿ ನನ್ನ ಮಗ ಭಾಗಿಯಾಗಿದ್ದ. ನಿಮ್ಮ ಮಕ್ಕಳು ದಲಿತ ಸಂಘಟನೆ ಪರವಾಗಿ ಭಾಗವಹಿಸಿದ್ದಾರ? 2028ಕ್ಕೆ ನಮ್ಮ ಸರ್ಕಾರವೇ ಬರುತ್ತದೆ ಶಾಸಕ ಕೆ.ಎನ್ ರಾಜಣ್ಣ ನಮಾಜ್ ಬಗ್ಗೆಯೂ ಮಾತನಾಡಿದ್ದಾರೆ. ಸಂತೋಷ ಹೆಗಡೆ ಆರ್ಎಸ್ಎಸ್ ಬ್ಯಾನ್ ತಪ್ಪು…

Read More

ದೀಪಾವಳಿ ಕೇವಲ ಆಚರಣೆಯಲ್ಲ; ಅದು ಬೆಳಕಿನ ವಿಜಯ! ಇದು ನಮ್ಮ ಜೀವನದ ಕತ್ತಲೆಯನ್ನು ಹೋಗಲಾಡಿಸುವ ಮತ್ತು ಬುದ್ಧಿವಂತಿಕೆ, ಸಂಪತ್ತು ಮತ್ತು ಬೆಳಕನ್ನು ಹೆಚ್ಚಿಸುವ ಅದ್ಭುತ ಹಬ್ಬ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ…

Read More

ಬೆಂಗಳೂರು : ಅಕ್ರಮ ಸಂಬಂಧ ಹೊಂದಿರುವುದಾಗಿ ಶಂಕಿಸಿ ಪತ್ನಿ ಮೇಲೆ ಹಲ್ಲೆ ಮಾಡಿ ಕುತ್ತಿಗೆ ಹಿಸುಕಿ ಕೊಲೆ ಮಾಡಿದ ಬಳಿಕ ಕೃತ್ಯ ಮರೆ ಮಾಚಲು ವಾಟರ್ ಹೀಟರ್​ನಿಂದ ಕರೆಂಟ್ ಹೊಡೆದು ಮೃತಪಟ್ಟಿರುವುದಾಗಿ ಕಥೆ ಕಟ್ಟಿದ ಪತಿಯನ್ನು ಹೆಬ್ಬಗೋಡಿ ಠಾಣೆ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಹತ್ಯೆಗೊಳಗಾದ ರೇಷ್ಮಾ (32). ಹತ್ಯೆ ಮಾಡಿದ ಆರೋಪದಡಿ ಪತಿ ಪ್ರಶಾಂತ್ ಕಮ್ಮಾರ್ (25) ಎಂಬಾತನನ್ನು ಬಂಧಿಸಲಾಗಿದೆ. ರೇಷ್ಮಾ ಸಹೋದರಿ ರೇಣುಕಾ ಎಂಬುವರು ನೀಡಿದ ದೂರಿನ ಮೇರೆಗೆ ಹತ್ಯೆ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸರು ಹೇಳಿದ್ಧಾರೆ. 5 ವರ್ಷಗಳ ಹಿಂದೆ ಅನಾರೋಗ್ಯ ಕಾರಣಕ್ಕೆ ಪತಿ ಮೃತಪಟ್ಟ ಬಳಿಕ ಕಲುಬರಗಿ ಜಿಲ್ಲೆಯ ರೇಷ್ಮಾ, ತನ್ನ ಮಗಳ ಜತೆ ನಗರಕ್ಕೆ ಬಂದು ನೆಲೆಸಿದ್ದಳು. ಹೆಬ್ಬಗೋಡಿ ಸಮೀಪದ ಮರಗೊಂಡನಹಳ್ಳಿ ವ್ಯಾಪ್ತಿಯಲ್ಲಿ ಮೂರ್ನಾಲ್ಕು ಮನೆಯಲ್ಲಿ ಕೆಲಸ ಮಾಡಿಕೊಂಡು ಆಕೆ ಜೀವನ ಸಾಗಿಸುತ್ತಿದ್ದಳು. ಹೀಗಿರುವಾಗ ಎರಡು ವರ್ಷಗಳ ಹಿಂದೆ ಆಕೆಗೆ ಇನ್‌ಸ್ಟಾಗ್ರಾಂ ಮೂಲಕ ವಿಜಯನಗರ ಜಿಲ್ಲೆ ಹೂವಿಡಗಲಿ ತಾಲೂಕಿನ ಎಲೆಕ್ಟ್ರಿಶಿಯನ್ ಪ್ರಶಾಂತ್ ಪರಿಚಯವಾಗಿದೆ.…

Read More

ಕಲಬುರ್ಗಿ : ಕಲ್ಬುರ್ಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಪಥ ಸಂಚಲನಕ್ಕೆ ಅನುಮತಿ ನಿರಾಕರಣೆ ಹಿನ್ನೆಲೆಯಲ್ಲಿ ಇದೀಗ ಜಿಲ್ಲಾಧಿಕಾರಿ ಕ್ರಮ ಪ್ರಶ್ನಿಸಿ ಕಲಬುರ್ಗಿ ಹೈಕೋರ್ಟ್ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ನ್ಯಾಯಮೂರ್ತಿ ಎಂಜಿಎಸ್ ಕಮಲ್ ಅವರ ಪೀಠದಲ್ಲಿ ತುರ್ತು ವಿಚಾರಣೆ ನಡೆಯಿತು. ಇಂತಹ ವಿಚಾರಗಳಿಗೆ ಸ್ಪಷ್ಟ ಕಾನೂನು ಇಲ್ಲ ಎಂದು ಅರ್ಜಿದಾರರ ಪರವಾಗಿ ವಾದಿರಾಜ್ ಕಡ್ಲೂರು ವಾದಿಸಿದರು. ವೇಳೆ ಹೈಕೋರ್ಟ್ ಭೀಮ್ ಆರ್ಮಿ ಮತ್ತು ಆರ್ ಎಸ್ ಎಸ್ ಪಥ ಸಂಚಲನಕ್ಕೆ ಪ್ರತ್ಯೇಕ ಸಮಯ ನೀಡಿ ಎಂದು ಸೂಚನೆ ನೀಡಿತು. ಈ ವೇಳೆ ಕಾನೂನಿನ ಪ್ರಕಾರ ಅನುಮತಿ ಕೊಡಬೇಕಾದವರು ಯಾರು? ಎಂದು ಜಡ್ಜ್ ಪ್ರಶ್ನೆ ಮಾಡಿದರು. ಪೊಲೀಸರಿಗೆ ಭದ್ರತೆ ನೀಡಲು ಮಾಹಿತಿ ನೀಡಿದ್ದೆವು. ಅಕ್ಟೋಬರ್ 13ರಂದು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದೆ ಅಕ್ಟೋಬರ್ 17ರಂದು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಗೆ ಅರ್ಜಿ ಸಲ್ಲಿಕೆ ಮಾಡಿದೆವು. ನಿನ್ನೆ ಪಥ ಸಂಚಲನಕ್ಕೆ ಅನುಮತಿಯನ್ನು ನಿರಾಕರಿಸಿದ್ದಾರೆ ಎಂದು ಮತ್ತೋರ್ವ ವಕೀಲ ಅರುಣ ಶ್ಯಾಮ್ ವಾದಿಸಿದರು.…

Read More

ಉತ್ತರಕನ್ನಡ : ರಾಜ್ಯ ಸರ್ಕಾರಿ ನೌಕರರಿಗೆ ಮುಂದಿನ 2 ವರ್ಷಗಳಲ್ಲಿ ಕೇಂದ್ರ ಸರ್ಕಾರದ ಮಾದರಿಯ ವೇತನ ನೀಡುವ ಕುರಿತಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಮಾತನಾಡಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು 2026-27ರ ಅಂತ್ಯದೊಳಗೆ ರಾಜ್ಯ ನೌಕರರಿಗೆ ಕೇಂದ್ರ ಸರ್ಕಾರದ ಮಾದರಿಯ ವೇತನವನ್ನು ಜಾರಿಗೆ ತರಲು ಬದ್ಧವಾಗಿದೆ ಎಂದು ತಿಳಿಸಿದರು. ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ಮಾತನಾಡಿದ ಅವರು, ರಾಜ್ಯದ ನೌಕರರು ನೆಮ್ಮದಿಯಿಂದ ಇರುವಂತೆ ಮಾಡುವುದು ಸಂಘದ ಕರ್ತವ್ಯವಾಗಿದೆ. ಈ ಕಾರಣದಿಂದ ನೌಕರರಿಗೆ ನೀಡುವ ಹಬ್ಬದ ಮುಂಗಡವನ್ನು ಪ್ರಸ್ತುತ ಇರುವ 25 ಸಾವಿರವನ್ನು 50 ಸಾವಿರಕ್ಕೆ ಹೆಚ್ಚಳ ಮಾಡಲು ಪ್ರಯತ್ನಿಸಲಾಗುತ್ತಿದೆ. ಎನ್‌ಪಿಎಸ್​ (NPS) ಬದಲಾಗಿ ಒಪಿಎಸ್ (OPS) ಜಾರಿಗೆ ತರುವ ಬಗ್ಗೆ ಸಂಘವು ಸತತ ಪ್ರಯತ್ನ ನಡೆಸಿದೆ ಎಂದರು. ಮಹಿಳಾ ನೌಕರರಿಗೆ ಋತುಚಕ್ರದ ಸಂದರ್ಭದಲ್ಲಿ ಪ್ರತಿ ತಿಂಗಳು 1ರಂತೆ ವರ್ಷಕ್ಕೆ 12 ವಿಶೇಷ ಸಾಂದರ್ಭಿಕ ರಜೆ ನೀಡುವಂತೆ ಸಂಘ ಮಾಡಿದ ಮನವಿಗೆ ಸರ್ಕಾರವು ಸ್ಪಂದಿಸಿದೆ. ಈ ಪ್ರಸ್ತಾವನೆಗೆ…

Read More

ಬೆಂಗಳೂರು : ನೌಕರರಿಗೆ ನಾನು ಕಾನೂನು ಬಾಹಿರವಾಗಿ ಏನೂ ಹೇಳಿಲ್ಲ. ಕಾನೂನು ಪಾಲನೆ ಮಾಡಿ ಎಂದು ಹೇಳುತ್ತಿದ್ದೇವೆ. ಗಣವೇಷ ಹಾಕಿದ್ದಕ್ಕೆ ಪಿಡಿಒ ಸಸ್ಪೆಂಡ್ ಮಾಡಲಾಗಿದೆ ಹೊರತು, ಯಾರದ್ದೋ ಪಿಎ ಅಂತ ಸಸ್ಪೆಂಡ್ ಮಾಡಿದ್ದಲ್ಲ, ನಿಯಮ ಉಲ್ಲಂಘಿಸಿದ್ದಕ್ಕೆ ಅಮಾನತು ಮಾಡಿದ್ದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. ರಾಯಚೂರು ಪಿಡಿಒ ಪ್ರವೀಣ್ ಕುಮಾರ್ ಅಮಾನತು ವಿಚಾರವಾಗಿ ಅವರು ಪ್ರತಿಕ್ರಿಯಿಸಿದ ಅವರು, ಸಿಎಂ – ಪಿಎ ಇರಲಿ, ಮತ್ತೊಬ್ಬರ ಪಿಎ ಇರಲಿ. ನಿಯಮ ಮೀರಿದರೆ ಅಮಾನತು ಮಾಡುತ್ತೇವೆ. ಗಣವೇಷ ಹಾಕಲು ಇವರಿಗೆ ಸರ್ಕಾರದ ಅನುಮತಿ ಇದೆಯಾ?. ನಿನ್ನೆ ಮುಖ್ಯ ಕಾರ್ಯದರ್ಶಿಗಳಿಗೆ ಖುದ್ದಾಗಿ ಪತ್ರ ಬರೆದಿದ್ದೇನೆ. ಇದು ಅಕ್ಷರಶಃ ಪಾಲನೆ ಆಗಬೇಕು ಅಂತ ಹೇಳಿದ್ದೇನೆ. ಸುಮ್ಮನೆ ಯಾರಿಗೋ ಹೋಗಿ ಬೆನ್ನಹಿಂದೆ ಬಿದ್ದು ಇದನ್ನು ಮಾಡಿದ್ದಲ್ಲ. ರಿಪೋರ್ಟ್, ಪುರಾವೆ ಇದ್ದರೆ ಅಮಾನತು ಮಾಡುತ್ತೇವೆ. ನಾನು ಕಾನೂನುಬಾಹಿರವಾಗಿ ಏನೂ ಹೇಳಿಲ್ಲ. ಕಾನೂನು ಪಾಲನೆ ಮಾಡಿ ಅಂತಿದ್ದೇವೆ. ಅದಕ್ಕೆ ಮೈಮೇಲೆ ಬಿದ್ದರೆ ಹೇಗೆ. ಗಣವೇಷ ಹಾಕಿದ್ದಕ್ಕೆ ಸಸ್ಪೆಂಡ್ ಮಾಡಲಾಗಿದೆ. ನೀವು…

Read More

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಘೋರವಾದ ದುರಂತ ನಡೆದಿದ್ದು, ವಿದ್ಯುತ್ ತಂತಿ ಹಿಡಿದುಕೊಂಡು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಹೊನ್ನೇನಹಳ್ಳಿ ಗೇಟಲ್ಲಿ ನಡೆದಿದೆ. ಪದಂ (25) ಎನ್ನುವ ಯುವಕ ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ತಿಳಿದುಬಂದಿದೆ. ಡಾಬಾದಲ್ಲಿ ಪದಂ ಅಡುಗೆ ಭಟ್ಟನಾಗಿ ಕೆಲಸ ಮಾಡುತ್ತಿದ್ದ. ಪೆಟ್ಟಿಗೆ ಅಂಗಡಿಯ ಮೇಲೆ ಹತ್ತಿ ವಿದ್ಯುತ್ ತಂತಿ ಹಿಡಿದು ಪದಂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆತ್ಮಹತ್ಯೆ ಮಾಡಿಕೊಂಡ ದೃಶ್ಯ ಇದೀಗ ವೈರಲ್ ಆಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ಕೊಟ್ಟಿದ್ದಾರೆ.

Read More

ಕೋಲ್ಹಪುರ : ವಿಜಯಪುರ ಜಿಲ್ಲೆಗೆ ಬರದಂತೆ ಕೊಲ್ಹಾಪುರದ ಕನ್ನೇರಿ ಮಠದ ಶ್ರೀ ಕಾಡಸಿದ್ದೇಶ್ವರ ಸ್ವಾಮೀಜಿಗೆ ನಿರ್ಬಂಧ ಹೇರಿತ್ತು. ಜಿಲ್ಲಾಡಳಿತ ಕ್ರಮ ಪ್ರಶ್ನೆಸಿ ಕಾಡಸಿದ್ದೇಶ್ವರ ಸ್ವಾಮಿಗಳು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದರು. ಆದರೆ ಹೈಕೋರ್ಟ್ ಸ್ವಾಮೀಜಿ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿತು. ಈ ವಿಚಾರವಾಗಿ ಸ್ವಾಮೀಜಿಗಳು ಕರ್ನಾಟಕದಿಂದಲೇ ನನ್ನನ್ನು ನಿರ್ಬಂಧ ಹೇರುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅದರಿಂದ ಏನು ಸಾಧಿಸಲಿಕ್ಕೆ ಹೊರಟಿದ್ದಾರೋ ಗೊತ್ತಿಲ್ಲ. ನನಗಿಂತ ಬಿರುಸಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಷ್ಟ್ರಪತಿಯವರ ಕುರಿತು ಏಕವಚನದಲ್ಲಿ ಮಾತನಾಡಿದರು ಆಗ ಪತ್ರಕರ್ತರು ನೀವು ಕ್ಷಮೆ ಕೇಳಬೇಕು ಎಂದಾಗ ಆಗ ಸಿದ್ದರಾಮಯ್ಯ ನಮ್ಮ ಭಾಗದ ಭಾಷೆ ಇರೋದೇ ಹಾಗೆ. ಹಾಗಾಗಿ ಮಾತಾಡಿದ್ದೇನೆ ಎಂದು ಹೇಳಿದ್ದರು. ಆದರೆ ನನ್ನ ಬಗ್ಗೆ ಯಾಕೆ ಈ ಭಯ ಹುಟ್ಟಿಕೊಂಡಿದೆ ಗೊತ್ತಿಲ್ಲ ಎಂದು ತಿಳಿಸಿದರು. ಸರ್ಕಾರದ ಮುಖ್ಯ ಕಾರ್ಯದರ್ಶಿಯಿಂದ ನನ್ನನ್ನು ಕರ್ನಾಟಕದಿಂದಲೇ ನಿರ್ಬಂಧ ಹೇರುವ ಪ್ರಯತ್ನ ನಡೆದಿದೆ ಎನ್ನುವುದು ನನ್ನ ಕಿವಿಗೆ ಬಿದ್ದಿದೆ. ತೆರೆಮರೆಯಲ್ಲಿ ನನ್ನನ್ನು ರಾಜದಿಂದಲೇ ನಿರ್ಮಿಸುವ ಪ್ರಯತ್ನ…

Read More