Author: kannadanewsnow05

ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ಬೆಂಕಿ ದುರಂತ ಪ್ರಕರಣಗಳು ಹೆಚ್ಚುತ್ತಿವೆ. ಆಕಸ್ಮಿಕ ಬೆಂಕಿ ಆಗಿರಬಹುದು ಶಾರ್ಟ್ ಸರ್ಕ್ಯೂಟ್ ಆಗಿರಬಹುದು ಅಥವಾ ಇನ್ಯಾವುದೋ ಕಾರಣಗಳಿಂದ ಬೆಂಕಿ ದುರಂತಗಳು ಸಂಭವಿಸಿ ಅನೇಕರು ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ. https://kannadanewsnow.com/kannada/poverty-in-india-reduced-to-less-than-5-of-population-niti-aayog-report/ ಇದೀಗ ಬೆಂಗಳೂರಿನ ಕೆಂಗೇರಿಯ ಉಪನಗರದ ಹೊಯ್ಸಳ ವೃತ್ತದಲ್ಲಿ ಆಕಸ್ಮಿಕ ಬೆಂಕಿಯಿಂದ ಬಟ್ಟೆ ಅಂಗಡಿಯವೊಂದು ಹತ್ತಿ ಉರಿದಿರುವ ಘಟನೆ ನಡೆದಿದೆ. ಕೆಂಗೇರಿ ಉಪನಗರ ಬಳಿ ಹೊಯ್ಸಳ ವೃತ್ತದಲ್ಲಿ ಈ ಅವಘಡ ಸಂಭವಿಸಿದೆ. https://kannadanewsnow.com/kannada/parents-beware-read-this-news-before-giving-a-bike-to-your-kids/ ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದೆ. ಘಟನೆಯಲ್ಲಿ ಬಟ್ಟೆ ಅಂಗಡಿ ಸಂಪೂರ್ಣವಾಗಿ ಸುಟ್ಟು ಹೋಗಿದ್ದು ಅದೃಷ್ಟವಶಾತ್ ಯಾವುದೇ ರೀತಿಯಾದಂತಹ ಪ್ರಾಣಾಪಾಯ ಸಂಭವಿಸಿಲ್ಲ. ಕೆಂಗೇರಿ ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/govt-relaxes-electricity-connections-new-connections-in-3-days-in-cities-15-days-in-villages/

Read More

ಬೆಂಗಳೂರು : ಪೋಷಕರು ತಮ್ಮ ಮಕ್ಕಳು ಖುಷಿಯಾಗಿರಲು ಏನೆಲ್ಲಾ ಮಾಡುತ್ತಾರೆ ಆದರೆ ಆ ಮಕ್ಕಳು ಅದನ್ನು ಅರ್ಥಮಾಡಿಕೊಳ್ಳದೆ ದುರುಪಯೋಗಪಡಿಸಿಕೊಂಡು ತಮ್ಮ ಪ್ರಾಣಕ್ಕೆ ತಾವೇ ಕುತ್ತು ತಂದುಕೊಳ್ಳುತ್ತಾರೆ. ಅದೇ ರೀತಿಯಾಗಿ ಪೋಷಕರು ತಮ್ಮ ಮಕ್ಕಳಿಗೆ ಅದರಲ್ಲೂ ಬೈಕ್ ಕೊಡಿಸುವ ವಿಷಯವಾಗಿ ಸ್ವಲ್ಪ ಗಂಭೀರವಾಗಿ ವಿಚಾರ ಮಾಡಲೇಬೇಕು. ಏಕೆಂದರೆ ಬೈಕ್ ವೀಲಿಂಗ್ ಹುಚ್ಚಾಟಕ್ಕೆ ಇದೀಗ ಓರ್ವ ಯುವಕ ಬಲಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. https://kannadanewsnow.com/kannada/govt-relaxes-electricity-connections-new-connections-in-3-days-in-cities-15-days-in-villages/ ಹೌದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಟೋಲ್ ಬಳಿ ಬೈಕ್​ ವ್ಹೀಲಿಂಗ್ ಹುಚ್ಚಾಟಕ್ಕೆ ಓರ್ವ ಯುವಕ ಬಲಿಯಾಗಿದ್ದಾನೆ. ವ್ಹೀಲಿಂಗ್ ವೇಳೆ ಎರಡು ಬೈಕ್​ಗಳ ನಡುವೆ ಡಿಕ್ಕಿ ಸಂಭವಿಸಿದ್ದು ಬೈಕ್ ಸವಾರ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಅಪಘಾತ ಸಂಭವಿಸಿದೆ. ದಾಸರಹಳ್ಳಿಯ ರಾಜೀಶ್(18) ಮೃತ ದುರ್ದೈವಿ ಎಂದು ಹೇಳಲಾಗುತ್ತಿದೆ. https://kannadanewsnow.com/kannada/breaking-3-killed-6-injured-as-tyre-bursts-and-bolero-vehicle-overturns-in-davangere/ ವ್ಹೀಲಿಂಗ್ ಬೈಕ್ ನಲ್ಲಿದ್ದ ಮತ್ತೊಬ್ಬ ಸೊಹೈಲ್ ಗೆ ಗಂಭೀರ ಗಾಯಗಳಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮತ್ತೊಂದು ಬೈಕ್​ನ ಕೆಂಪರಾಜು, ತರುಣ್​ಗೂ ಚಿಕಿತ್ಸೆ ನೀಡಲಾಗುತ್ತಿದೆ. ನೆಲಮಂಗಲ ಸಂಚಾರಿ…

Read More

ದಾವಣಗೆರೆ : ಟೈರ್ ಸ್ಫೋಟಗೊಂಡು ಬೋಲೆರೋ ವಾಹನ ಒಂದು ಪಲ್ಟಿಯಾಗಿ ಸ್ಥಳದಲ್ಲೇ ಮೂವರು ಸಾವನಪ್ಪಿದ್ದು 6 ಜನರಿಗೆ ಗಾಯವಾಗಿರುವ ದುರ್ಘಟನೆ ದಾವಣಗೆರೆ ನಗರದ ಹೊರವಲಯದಲ್ಲಿರುವ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. https://kannadanewsnow.com/kannada/paracetamol-may-cause-liver-risk-study-reveals-shocking-report/ ದಾವಣಗೆರೆ ನಗರದ ಹೊರವಲಯದಲ್ಲಿ ತಡರಾತ್ರಿ ಈ ಒಂದು ಅಪಘಾತ ನಡೆದಿದೆ. ಘಟನೆಯಲ್ಲಿ ಬುಲೆರೋ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಮೃತಪಟ್ಟವರೆಲ್ಲರೂ ಆಂಧ್ರ ಮೂಲದವರೆಂದು ಹೇಳಲಾಗುತ್ತಿದೆ.ಗಾಯಾಳುಗಳ ಪೈಕಿ  ಐದು ಜನರಿಗೆ ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು  ವ್ಯಕ್ತಿ ಗಂಭೀರ ಸ್ಥಿತಿಯಲ್ಲಿದ್ದು ಆತನನ್ನು ಹುಬ್ಬಳ್ಳಿಗೆ ರವಾನಿಸಲಾಗಿದೆ. https://kannadanewsnow.com/kannada/what-to-do-if-you-have-frequent-ulcers-in-the-mouth-here-are-the-tips/ ಅಪಘಾತದಲ್ಲಿ ಮೃತಪಟ್ಟವರು ಆಂಧ್ರ ಮೂಲದವರೆಂದು ಎಂದು ಹೇಳಲಾಗುತ್ತಿದೆ. ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನ ಸಿಂಗರಾಜನಹಳ್ಳಿ ನಿವಾಸಿಗಳು ಎಂದು ಹೇಳಲಾಗುತ್ತಿದೆ ಹಾವೇರಿ ಜಿಲ್ಲೆ ಬ್ಯಾಡಿಗೆಯಿಂದ ಮೆಣಸಿನಕಾಯಿ ಖರೀದಿಗೆ ಊರಿಗೆ ತೆರಳಿ ವಾಪಸ್ ಬರುವ ಸಂಪತ್ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ದಾವಣಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/pm-modi-to-inaugurate-2000-railway-projects-worth-rs-41000-crore-in-more-than-27-states/

Read More

ನವದೆಹಲಿ : ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಉಗ್ರ ಚಟುವಟಿಕೆಗಳಲ್ಲಿ ಶಾಮಿಲಾಗಿದ್ದ ಮೋಸ್ಟ್ ವಾಂಟೆಡ್ ಉಗ್ರಗಾಮಿ, ನಿಷೇಧಿತ ಸೆಮಿ ಸಂಘಟನೆಯ ಉಗ್ರ ಹನೀಫ್ ಶೇಖ್​ನನ್ನು ಕೊನೆಗೂ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ಹೆಸರು ಬದಲಾಯಿಸಿಕೊಂಡು ತಲೆಮರೆಸಿಕೊಂಡು ಓಡಾಡುತಿದ್ದ ಈತನನ್ನು ದೆಹಲಿ ಪೊಲೀಸ್ ವಿಶೇಷ ದಳ ಬಂಧಿಸಿದೆ. https://kannadanewsnow.com/kannada/life-style-add-a-coffee-face-pack-to-enhance-the-glow-of-your-face/ ಆರೋಪಿಯು ಮಹಾರಾಷ್ಟ್ರದ ಉರ್ದು ಶಾಲೆಯೊಂದರಲ್ಲಿ ಮಾರುವೇಷದಲ್ಲಿ ಪಾಠ ಮಾಡುತ್ತಿದ್ದ. 2001ರಲ್ಲಿ ನ್ಯೂ ಫ್ರೆಂಡ್ಸ್ ಕಾಲೋನಿ ಪೊಲೀಸ್ ಠಾಣೆಯಲ್ಲಿ ಕಾನೂನು ಸುವ್ಯವಸ್ಥೆ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣ ಮತ್ತು ದೇಶದ್ರೋಹ ಪ್ರಕರಣದಲ್ಲಿ ಈತ ಪೊಲೀಸರಿಗೆ ಬೇಕಾಗಿದ್ದ.ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಉಗ್ರ ಚಟುವಟಿಕೆಗಳಲ್ಲಿ ಶಾಮೀಲಾಗಿದ್ದ, ಹಲವು ಬಾರಿ ಸಭೆಗಳನ್ನು ನಡೆಸಿ ಕುಕೃತ್ಯಗಳಿಗೆ ಸಂಚು ಹೂಡಿದ್ದ ಎನ್ನಲಾಗಿದೆ. https://kannadanewsnow.com/kannada/allahabad-hc-to-pronounce-verdict-on-puja-at-varanasis-gyanvapi-mosque-today/ ಹನೀಫ್ ಸಿಮಿ ಸಂಘಟನೆಯ ನಿಯತಕಾಲಿಕೆ ಇಸ್ಲಾಮಿಕ್ ಮೂವ್​ಮೆಂಟ್ ಸಂಪಾದಕನಾಗಿದ್ದ. ಆರೋಪಿಯು ಕಳೆದ 25 ವರ್ಷಗಳ ಅವಧಿಯಲ್ಲಿ ಯುವಕರಿಗೆ ಮೂಲಭೂತವಾದದ ಬಗ್ಗೆ ಪ್ರಚೋದನೆ ನೀಡಿದ್ದ. ಮಹಾರಾಷ್ಟ್ರದಲ್ಲಿ ಹಲವು ಪ್ರಕರಣಗಳು ಆತನ ವಿರುದ್ಧ ದಾಖಲಾಗಿವೆ. ಅನೇಕ ದೇಶ ವಿರೋಧಿ ಚಟುವಟಿಕೆಗಳಲ್ಲಿ ಆತ…

Read More

ಉತ್ತರಪ್ರದೇಶ : ವಾರಣಾಸಿಯ ಜ್ಞಾನವಾಪಿ ಮಸೀದಿಯ ದಕ್ಷಿಣದ ನೆಲಮಾಳಿಗೆಯಲ್ಲಿ ಪೂಜೆಗೆ ಅವಕಾಶ ನೀಡಿ, ಜನವರಿ 31 ರಂದು ವಾರಣಾಸಿ ಜಿಲ್ಲಾ ನ್ಯಾಯಾಧೀಶರ ಆದೇಶವನ್ನು ಪ್ರಶ್ನಿಸಿ ಜ್ಞಾನವಾಪಿ ಮಸೀದಿ ಸಮಿತಿ ಮೇಲ್ಮನವಿ ಸಲ್ಲಿಸಿತ್ತು. ಈ ಪ್ರಕರಣದ ಕುರಿತಂತೆ ಇಂದು ಅಲಹಾಬಾದ್ ಉಚ್ಚ ನ್ಯಾಯಾಲಯವು ತೀರ್ಪು ನೀಡಲಿದೆ ಎಂದು ತಿಳಿದುಬಂದಿದೆ. https://kannadanewsnow.com/kannada/breaking-terrorists-attack-burkina-faso-church-over-15-dead/ ವ್ಯಾಸ್ ಜಿ ಕಾ ತೆಹ್ಖಾನಾದಲ್ಲಿ ಪೂಜೆಗೆ ಅವಕಾಶ ನೀಡುವ ಆದೇಶದ ವಿರುದ್ಧ ಮಸೀದಿ ಸಮಿತಿಯ ಮನವಿಯನ್ನು ತುರ್ತಾಗಿ ಆಲಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದ ಕೂಡಲೇ ಫೆಬ್ರವರಿ 1, 2024 ರಂದು ವಾರಣಾಸಿಯ ಜ್ಞಾನವಾಪಿ ಮಸೀದಿಯನ್ನು ನಿರ್ವಹಿಸುವ ಅಂಜುಮನ್ ಇಂತೇಜಾಮಿಯಾ ಮಸಾಜಿದ್ ಸಮಿತಿಯು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ. https://kannadanewsnow.com/kannada/fear-of-cross-voting-in-rajya-sabha-polls-congress-mlas-shifted-to-hotel-today/ ಮಸೀದಿ ಆವರಣದ ಒಂದು ಭಾಗವಾಗಿ ವ್ಯಾಸ್ ತೆಹಖಾನಾ ಅವರ ಸ್ವಾಧೀನದಲ್ಲಿತ್ತು ಮತ್ತು ತೆಹಖಾನಾದ ಒಳಗೆ ಪೂಜೆ ಮಾಡುವ ಯಾವುದೇ ಹಕ್ಕು ವ್ಯಾಸ್ ಕುಟುಂಬ ಅಥವಾ ಬೇರೆಯವರಿಗೆ ಇಲ್ಲ ಎಂಬುದು ಸಮಿತಿಯ ನಿಲುವಾಗಿದೆ. ಆದಾಗ್ಯೂ, 1993 ರವರೆಗೆ, ವ್ಯಾಸ ಕುಟುಂಬವು ನೆಲಮಾಳಿಗೆಯಲ್ಲಿ ಧಾರ್ಮಿಕ ಸಮಾರಂಭಗಳನ್ನು…

Read More

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನದ ಭೀತಿ ಇರುವುದರಿಂದ ಕಾಂಗ್ರೆಸ್‌ನ ಎಲ್ಲ ಶಾಸಕರನ್ನು ಸೋಮವಾರ ಮಧ್ಯಾಹ್ನ ಹೋಟೆಲ್‌ಗೆ ಕರೆದೊಯ್ಯಲಾಗುತ್ತಿದೆ. ಆಡಳಿತ ಪಕ್ಷದ ಶಾಸಕರು ಹೋಟೆಲ್‌ ನಿಂದಲೇ ಮಂಗಳವಾರ ಬೆಳಿಗ್ಗೆ ಮತದಾನಕ್ಕೆ ಬರಲಿದ್ದಾರೆ. https://kannadanewsnow.com/kannada/water-supply-bangaloreans-take-note-there-will-be-a-change-in-water-supply-in-these-parts-tomorrow/ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಾಳೆ ಮತದಾನ ನಡೆಯಲಿದೆ. ಕಾಂಗ್ರೆಸ್‌ನ ಮೂವರು ಮತ್ತು ಎನ್‌ಡಿಎ ಮೈತ್ರಿಕೂಟದ ಇಬ್ಬರು ಕಣದಲ್ಲಿದ್ದಾರೆ. ಮೂರು ಸ್ಥಾನ ಗೆಲ್ಲುವ ಅವಕಾಶ ಕಾಂಗ್ರೆಸ್‌ಗೆ ಇದ್ದರೂ ಎನ್‌ಡಿಎ ಮೈತ್ರಿಕೂಟವು ಮತಗಳ ಕೊರತೆಯ ಮಧ್ಯೆಯೂ ಡಿ.ಕುಪೇಂದ್ರ ರೆಡ್ಡಿ ಅವರನ್ನು ಎರಡನೇ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. ಇದರಿಂದಾಗಿ ಕಾಂಗ್ರೆಸ್‌ ತನ್ನ ಶಾಸಕರನ್ನು ಹಿಡಿದಿಟ್ಟುಕೊಳ್ಳಬೇಕಾಗಿದೆ. https://kannadanewsnow.com/kannada/life-style-the-benefits-of-eating-jaggery-after-a-meal-are-as-follows/ ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನರಾಗಿರುವುದರಿಂದ ವಿಧಾನಮಂಡಲದಲ್ಲಿ ಸೋಮವಾರ ಸಂತಾಪ ಸೂಚನೆ ನಡೆಯಲಿದೆ. ಕಾಂಗ್ರೆಸ್‌ನ ಎಲ್ಲ ಸದಸ್ಯರು, ಸಂತಾಪ ಸೂಚನೆಯಲ್ಲಿ ಭಾಗವಹಿಸಿದ ಬಳಿಕ ವಿಧಾನಸೌಧದಿಂದ ನೇರವಾಗಿ ಹೋಟೆಲ್‌ಗೆ ತೆರಳಲಿದ್ದಾರೆ. ಕೋರಮಂಗಲದ ಎಂಬೆಸಿ ಗಾಲ್ಫ್‌ ಲಿಂಕ್ಸ್‌ ಬ್ಯುಸಿನೆಸ್‌ ಪಾರ್ಕ್‌ನಲ್ಲಿರುವ ಹಿಲ್ಟನ್‌ ಹೋಟೆಲ್‌ನಲ್ಲಿ ಕಾಂಗ್ರೆಸ್‌ನ ಎಲ್ಲ ಶಾಸಕರ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.…

Read More

ಬೆಂಗಳೂರು : ನಾಳೆ ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಸಂಜೆ 6 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆ ನಡೆಯಲಿದೆ. ನಾಳೆ ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಾಸಕಾಂಗ ಪಕ್ಷದ ಸಭೆ ಆ ಯೋಜನೆ ಮಾಡಲಾಗಿದೆ. ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ನ ಹಿಲ್ಟನ್ ಹೋಟೆಲ್ ಅಲ್ಲಿ ಸಿಎಲ್ಪಿ ನಡೆಯಲಿದೆ. https://kannadanewsnow.com/kannada/good-news-for-puc-cet-neet-aspirants-applications-invited-for-free-training/ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಿಎಲ್ಪಿ ಸಭೆ ನಡೆಯಲಿದೆ. ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದಿಪ್ ಸಿಂಗ್ ಸುರ್ಜೆವಾಲ, ರಾಜ್ಯಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳಾದ ಅಜಯ್ ಮಕೇನ್ ಸೈಯದ್ ಹುಸೇನ್ ಜೆಸಿ ಚಂದ್ರಶೇಖರ್ ಸಿಎಲ್ಪಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ. https://kannadanewsnow.com/kannada/yuva-nidhi-scheme-beneficiaries-note-if-you-dont-do-this-by-february-29-you-wont-get-the-money/ ಅಲ್ಲದೆ ಈ ಒಂದು ಸಭೆಯಲ್ಲಿ ಭಾಗಿಯಾಗುವಂತೆ ಎಲ್ಲಾ ಶಾಸಕರಿಗೂ ಸೂಚನೆ ನೀಡಲಾಗಿದೆ. ಅಧಿವೇಶನ ನಂತರ ನೇರವಾಗಿ ಬರಲು ಸೂಚನೆ ನೀಡಲಾಗಿದೆ. ನಾಳೆ ಬೆಳಗ್ಗೆ ಹೋಟೆಲ್ ನಿಂದ ನೇರವಾಗಿ ವಿಧಾನಸೌಧಕ್ಕೆ ಪ್ರಯಾಣ ಬೆಳೆಸಲಾಗುತ್ತದೆ. ಮಾತದಾನಕ್ಕೆ ಕಾಂಗ್ರೆಸ್ ಶಾಸಕರನ್ನು ಒಟ್ಟಿಗೆ ಕರೆತರಲು ಹಾಕಿಕೊಂಡಿದೆ. https://kannadanewsnow.com/kannada/centre-instructs-states-to-fix-6-years-as-minimum-age-for-class-1-admission/

Read More

ಬೆಂಗಳೂರು : ಸಂಚಾರಿ ಪೇದೆಯೊಬ್ಬ ಮಹಿಳೆಯ ಹತ್ತಿರ ನಿಮ್ಮ ಮಗಳು ಪಾನಮತ್ತ ಚಾಲನೆ ಮಾಡಿರುವುದಾಗಿ ಬೆದರಿಸಿ 5 ಸಾವಿರ ವಸೂಲಿಗೆ ಮಾಡಿದ್ದಾರೆ ಎಂದು ಆರೋಪಿಸಿ ಜೀವನ್‌ ಭೀಮಾ ನಗರ ಸಂಚಾರ ಠಾಣೆ ಕಾನ್‌ಸ್ಟೇಬಲ್‌ವೊಬ್ಬರ ವಿರುದ್ಧ ನಗರ ಪೊಲೀಸ್ ಆಯುಕ್ತರಿಗೆ ವ್ಯಕ್ತಿಯೊಬ್ಬರು ದೂರು ನೀಡಿದ್ದಾರೆ. https://kannadanewsnow.com/kannada/centre-instructs-states-to-fix-6-years-as-minimum-age-for-class-1-admission/ ವಾರಾಂತ್ಯದಲ್ಲಿ ಡ್ರಿಂಕ್ ಆ್ಯಂಡ್‌ ಡ್ರೈವ್‌ ತಪಾಸಣೆಗೆ ಅಧಿಕಾರಿಗಳು ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಇಸ್ರೋ ಜಂಕ್ಷನ್‌ನಲ್ಲಿ ಶನಿವಾರ ರಾತ್ರಿ ಜೆ.ಬಿ.ನಗರ ಸಂಚಾರ ಠಾಣೆ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದರು. ಆ ವೇಳೆ ಮಣಿಪಾಲ್ ಆಸ್ಪತ್ರೆ ಕಡೆಯಿಂದ ಬಂದ ಮಹಿಳೆಯೊಬ್ಬರನ್ನು ಅಡ್ಡಗಟ್ಟಿದ ಜೆ.ಬಿ.ನಗರ ಸಂಚಾರ ಠಾಣೆ ಕಾನ್‌ಸ್ಟೇಬಲ್ ಹುಚ್ಚುಸಾಬ್‌, ಆ ಮಹಿಳೆಗೆ ಅಲ್ಕೋಮೀಟರ್‌ ಮೂಲಕ ಡ್ರಿಂಕ್ ಆ್ಯಂಡ್ ಡ್ರೈವ್ ತಪಾಸಣೆ ನಡೆಸಿದ್ದಾರೆ. https://kannadanewsnow.com/kannada/big-shock-to-primary-and-secondary-school-hindi-co-teachers-in-the-state-school-education-department-withdraws-promotions/ ಆದರೆ ಮಹಿಳೆ ಮದ್ಯ ಸೇವಿಸದೆ ಇದ್ದರೂ 15 ಸಾವಿರ ನೀಡುವಂತೆ ಕಾನ್‌ಸ್ಟೇಬಲ್ ಬೇಡಿಕೆ ಇಟ್ಟಿದ್ದಾರೆ. ಕೊನೆಗೆ ಗೂಗಲ್ ಪೇ ಮೂಲಕ ₹5 ಸಾವಿರ ಪಡೆದು ಅವರನ್ನು ಕಾನ್‌ಸ್ಟೇಬಲ್ ಕಳುಹಿಸಿದ್ದಾರೆ.ಜೆ.ಬಿ.ನಗರ ಕಾನ್‌ಸ್ಟೇಬಲ್ ಹುಚ್ಚುಸಾಬ್‌ ಕಡಿಮಣಿ ಮೇಲೆ…

Read More

ಗದಗ : ಸಂಸದ ಅನಂತಕುಮಾರ ಹೆಗಡೆ, ಮುಖ್ಯಮಂತ್ರಿಗೆ ಸಿದ್ರಾಮುಲ್ಲಾಖಾನ್ ಎಂಬ ಹೇಳಿಕೆ ವಿಚಾರಕ್ಕೆ ಆಕ್ರೋಶಗೊಂಡ ಯತೀಂದ್ರ ಸಿದ್ದರಾಮಯ್ಯ, ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವವರನ್ನು ಜನ ಎಂದಿಗೂ ಒಪ್ಪುವುದಿಲ್ಲ, ಯಾರು ಕೆಲಸ ಮಾಡಿದ್ದಾರೋ ಅವರಿಗೆ ಜನ ಮತ ಹಾಕುತ್ತಾರೆ ಎಂದು ಕಾಂಗ್ರೆಸ್ ಮುಖಂಡ ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದರು. ಸಂಸದ ಅನಂತಕುಮಾರ ಹೆಗಡೆ, ಮುಖ್ಯಮಂತ್ರಿಗೆ ಸಿದ್ರಾಮುಲ್ಲಾಖಾನ್ ಎಂಬ ಹೇಳಿಕೆ ವಿಚಾರಕ್ಕೆ ಆಕ್ರೋಶಗೊಂಡ ಅವರು, ಯಾರು ಎಲ್ಲ ಸಮುದಾಯಕೋಸ್ಕರ ಕೆಲಸ ಮಾಡುತ್ತಾರೆಯೋ ಅವರನ್ನು ಒಂದು ಸಮುದಾಯದ ಪರ ಎಂದು ಬಿಂಬಿಸುತ್ತಾರೆ. ಇದು ಬಿಜೆಪಿಗರ ಹಳೆಯ ಟ್ಯಾಕ್ಟಿಕ್ಸ್ ಎಂದರು.ಅನಂತಕುಮಾರ ಹೆಗಡೆ 5 ವರ್ಷ ಏನೂ ಕೆಲಸ ಮಾಡಿಲ್ಲ, ಅವರ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಆಗಿಲ್ಲ. 5 ವರ್ಷ ಜನರ ಮುಂದೆ ಬರಲಿಲ್ಲ, ಪಾರ್ಲಿಮೆಂಟ್‌ನಲ್ಲಿ ಒಂದೂ ಪ್ರಶ್ನೆ ಕೇಳಲಿಲ್ಲ, ಈಗ ಎಲೆಕ್ಷನ್ ಬಂದಿದೆ ಎಂದು ಹಿಂದೂ -ಮುಸ್ಲಿಂ ಮಧ್ಯೆ ಭಿನ್ನಾಭಿಪ್ರಾಯ ತರಲು ಯತ್ನಿಸುತ್ತಿದ್ದಾರೆ. 4 ಲಕ್ಷ ಕೋಟಿಯಷ್ಟು ತೆರಿಗೆ ಸಂಗ್ರಹಣವಾಗುತ್ತಿದೆ, ರುಪಾಯಿ ಕೊಟ್ಟರೆ 12…

Read More

ಹುಬ್ಬಳ್ಳಿ : ಮಹದಾಯಿ ವಿಚಾರದಲ್ಲಿ ದೊಡ್ಡ ಅಪರಾಧ ಮಾಡಿದ್ದು ಕಾಂಗ್ರೆಸ್. ನ್ಯಾಯಾಧಿಕರಣಕ್ಕೆ ತಾವೇ ಬರೆದುಕೊಟ್ಟಿದ್ದಾರೆ ಮಹದಾಯಿಯಿಂದ ಮತ್ತು ಮಲಪ್ರಭಾ ನಡುವೆ ಇಂಟರ್ ಲಿಂಕಿಂಗ್ ಕಾಲುವೆ ಮಾಡಿದ್ದೆವು. ನಾವು ಮಾಡಿದ್ದ ಇಂಟರ್ ಲಿಂಕಿಂಗ್ ಕಾಲುವೆಗೆ ಕಾಂಗ್ರೆಸ್‍ನವರು ಗೋಡೆ ಕಟ್ಟಿದರು. ಕಾಲುವೆಯಲ್ಲಿ ಗೋಡೆ ಕಟ್ಟಿದ ಅಪಖ್ಯಾತಿ ಕಾಂಗ್ರೆಸ್‍ದು ಎಂದು ಮಾಜಿ ಸಿಎಂ. ಬಸವರಾಜ್ ಬೊಮ್ಮಾಯಿ ಕಿಡಿಕಾರಿದ್ದಾರೆ. https://kannadanewsnow.com/kannada/free-travel-for-ii-puc-exam-students/ ಮಹದಾಯಿ ಯೋಜನೆ ಹಿನ್ನಡೆಗೆ ಕಾಂಗ್ರೆಸ್ ನೇರ ಕಾರಣ. ಈ ವಿಚಾರವಾಗಿ ನ್ಯಾಯಾಧಿಕರಣಕ್ಕೆ ಹೋಗುವ ಅವಶ್ಯಕತೆ ಇರಲಿಲ್ಲ, ಮನಮೋಹನ್ ಸಿಂಗ್ ಸರ್ಕಾರದ ಅವಧಿಯಲ್ಲಿ ಟ್ರಿಬ್ಯುನಲ್‍ಗೆ ಹೋಗಿದ್ದು ಕಾಂಗ್ರೆಸ್ ಸರ್ಕಾರ ಎಂದು ತಿಳಿಸಿದರು. https://kannadanewsnow.com/kannada/monthly-household-spending-has-doubled-in-the-last-10-years-in-the-country-nsso-survey/ ಪರಿಸರ ಇಲಾಖೆ ಅನುಮತಿ ಪಡೆಯದೇ ಟೆಂಡರ್ ಪ್ರಕ್ರಿಯೆ ಮಾಡುವ ಕೆಲಸ ಮಾಡಿದ್ದಾರೆ. ಗೋವಾದವರು ಈಗ ಕೋರ್ಟ್‍ಗೆ ಹೋಗಿದ್ದಾರೆ. ರಾಜ್ಯ ಸರ್ಕಾರ ಕೋರ್ಟ್‍ನಲ್ಲಿ ಸಮರ್ಥವಾದ ಮಾಡುತ್ತಿಲ್ಲ. ಕೃಷ್ಣ ಯೋಜನೆ, ಮೇಕೆದಾಟು ಸೇರಿ ಎಲ್ಲಾ ನೀರಾವರಿ ಯೋಜನೆ ವಿಚಾರದಲ್ಲೂ ಸರ್ಕಾರದಿಂದ ನಿರ್ಲಕ್ಷ್ಯವಾಗುತ್ತಿದೆ. ಈ ಸರ್ಕಾರ ಬಂದ ಮೇಲೆ ನಯಾ ಪೈಸೆ ಹಣ ಬಿಡುಗಡೆ ಮಾಡಿಲ್ಲ. ಗೋಡೆ…

Read More