Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಅಧಿಕಾರ ವಹಿಸಿಕೊಂಡು ಆರು ತಿಂಗಳು ಕಳೆದರೂ ರಾಜ್ಯ ಕಾಂಗ್ರೆಸ್ ಸರ್ಕಾರ ನನಗೆ ಕಾರು ನೀಡಿಲ್ಲ ಎಂದು ಕೇಂದ್ರ ಸಚಿವ HD ಕುಮಾರಸ್ವಾಮಿ ಗಂಭೀರವಾಗಿ ಆರೋಪಿಸಿದ್ದರು. ಇದೀಗ ಈ ಆರೋಪಗಳಿಗೆ ಸ್ಪಷ್ಟನೆ ನೀಡಿರುವ ಕಾಂಗ್ರೆಸ್ ಕುಮಾರಸ್ವಾಮಿ ಅವರಿಗೆ ಕಾರು ಹಂಚಿಕೆ ಮಾಡಿರುವುದಾಗಿ ಹೇಳಿದೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿದ ಕಾಂಗ್ರೆಸ್ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷರಾದ ರಮೇಶ್ ಬಾಬು, ರಾಜ್ಯ ಸರ್ಕಾರದ ವತಿಯಿಂದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಅವರ ಅಪೇಕ್ಷೆಯಂತೆ ಹೊಸ ಟೊಯೋಟಾ ಇನ್ನೋವಾ ಹೈಕ್ರಾಸ್ ವಾಹನ ಹಂಚಿಕೆ ಆಗಿರುತ್ತದೆ. ಮಂಡ್ಯ ಜಿಲ್ಲಾಧಿಕಾರಿಗಳು ಹೊಸ ಕಾರನ್ನು ಪಡೆಯಲು ಕೇಂದ್ರ ಸಚಿವರನ್ನು ಕೋರಿದ್ದು, ಧನುರ್ ಮಾಸದ ಕಾರಣ ನೀಡಿ ಸಂಕ್ರಾಂತಿಯ ನಂತರ ಹೊಸ ಕಾರು ಪಡೆಯುವುದಾಗಿ ತಿಳಿಸಿರುತ್ತಾರೆ ಎಂದು ತಿಳಿದುಬಂದಿದೆ. ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ 04-11-2024ರಲ್ಲಿ ಹೆಚ್.ಡಿ.ಕುಮಾರಸ್ವಾಮಿರವರ ಹೊಸ ವಾಹನದ ಪ್ರಸ್ತಾಪಕ್ಕೆ ಅನುಗುಣವಾಗಿ ಆರ್ಥಿಕ ಇಲಾಖೆಗೆ ಪತ್ರ ಬರೆದಿತ್ತು. ಕರ್ನಾಟಕದ ಸುಮಾರು 6…
ಬೆಂಗಳೂರು : ಸಿ ಎ ಫೌಂಡೇಶನ್ ಪರೀಕ್ಷೆಗೆ ಅಡ್ಡಿ ಎಂದು ಬಿಕಾಂ ಪರೀಕ್ಷೆ ಮುಂದೂಡಲು ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಬೆಂಗಳೂರು ವಿಶ್ವವಿದ್ಯಾಲಯ ಮೇಲ್ಮನವಿ ಸಲ್ಲಿಸಿದ್ದು, ಇದೀಗ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಇಂದು ತುರ್ತು ವಿಚಾರಣೆ ನಡೆದಿದ್ದು, ಬಿಕಾಂ ಪರೀಕ್ಷೆಗಳಿಗೆ ಹೈ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ ಪರೀಕ್ಷೆ ಮುಂದೂಡಿಕೆ ಆದೇಶಕ್ಕೆ ತಡೆಯಾಜ್ಞೆ ನೀಡಿದೆ. ನ್ಯಾ. ಅನು ಶಿವರಾಮನ್ನ, ನ್ಯಾ. ಎಂ.ಐ ಅರುಣ್ ಅವರ ಪೀಠದಲ್ಲಿ ಈ ಒಂದು ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಯಿತು. ಸಿ ಎ ಫೌಂಡೇಶನ್ ಪರೀಕ್ಷೆಗೆ ಅಡ್ಡಿ ಎಂದು ಪರೀಕ್ಷೆ ಮುಂದೂಡಲು ಹೈಕೋರ್ಟ್ ಆದೇಶಿಸಿತ್ತು. ನಾಳೆಯಿಂದ ಆರಂಭವಾಗುವ 1,3 ಹಾಗೂ 5ನೇ ಸೆಮಿಸ್ಟರ್ ಬಿಕಾಂ ಪರೀಕ್ಷೆ ಮುಂದೂಡಗೆ ಮಾಡಲಾಗಿತ್ತು. ಮುಂದೂಡಿಕೆಯಿಂದ 40 ರಿಂದ 50 ಸಾವಿರ ಬಿ.ಕಾಮ್ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ.ಹೀಗಾಗಿ ಏಕದಸ್ಯ ಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡಲು ಮನವಿ ಸಲ್ಲಿಸಿತ್ತು. ಬೆಂಗಳೂರು ವಿಶ್ವವಿದ್ಯಾಲಯದಿಂದ ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಇದೀಗ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್…
ಕೊಪ್ಪಳ : ಕೊಪ್ಪಳ ನಗರದಲ್ಲಿ ಭೀಕರವಾದಂತಹ ಕೊಲೆ ನಡೆದಿದ್ದು, ಚಾಕುನಿಂದ ಇರಿದು ಪತಿಯಿಂದಲೇ ಪತ್ನಿಯ ಬರ್ಬರ ಕೊಲೆಯಾಗಿದೆ. ತುಮಕೂರು ಜಿಲ್ಲೆಯ ತುರುವೇಕೆರೆ ಮೂಲದ ಗೀತಾ (25) ಸಾವನ್ನಪ್ಪಿರುವ ಮಹಿಳೆ ಎಂದು ತಿಳಿದುಬಂದಿದ್ದು, ಪತ್ನಿಯ ಮೇಲೆ ಅನುಮಾನ ವ್ಯಕ್ತಪಡಿಸಿ ಪತಿ ರಾಜೇಶ್ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದೆ. ಕೊಪ್ಪಳಸದ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಇಬ್ಬರೂ ಸ್ಟೀಲ್ ಪಾತ್ರೆ ಮಾಡಲು ಬಂದಿದ್ದರು. ನಾಲ್ಕು ದಿನಗಳ ಹಿಂದೆ ಇಬ್ಬರೂ ಜಗಳವಾಡಿ ಪೊಲೀಸ್ ಠಾಣೆಗೆ ಹೋಗಿದ್ದರು.ಆದರೆ ಮತ್ತೆ ಜಗಳವಾಡಿ ರಾಜೇಶ್ ಪತ್ನಿ ಗೀತಾ ವನ್ನು ಚಾಕುವಿನಿಂದ ಇರಿದು ಕೊಲೆಗೈದಿದ್ದಾನೆ.ಆರೋಪಿ ರಾಜೇಶ್ ನನ್ನು ಸದ್ಯ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯಪುರ : ವಿಜಯಪುರದಲ್ಲಿ ಭೀಕರವಾದಂತಹ ಅಪಘಾತ ಸಂಭವಿಸಿದ್ದು, ಸರ್ಕಾರಿ ಬಸ್ ಒಂದು ತಿಳಿಸುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ಇದ್ದಂತಹ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದಲ್ಲಿ ನಡೆದಿದೆ ಹೌದು ಸರ್ಕಾರಿ ಬಸ್ ಡಿಕ್ಕಿಯಾಗಿ ಬೈಕ್ ಸವಾರರು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದ ಬಳಿ ನಡೆದಿದೆ. ಸರ್ಕಾರಿ ಬೈಸ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸವಾರರು ಸಾವನಪ್ಪಿದ್ದಾರೆ. ಸಾಗರ್ ಬೈಜಿನಾಳ್ (21) ಹಾಗೂ ಸುದೀಪ ಗುದ್ದಿ (21) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಘಟನೆ ಕುರಿತು ಬಸವನಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಅಮಾನವೀಯ ಘಟನೆ ನಡೆದಿದ್ದು ರಸ್ತೆ ಮೇಲೆ ಮಲಗಿದ್ದ ಮೂರು ಹಸುಗಳ ಕೆಚ್ಚಲುಗಳನ್ನು ಕಿಡಿಗೇಡಿಗಳು ಕೊಯ್ದಿರುವ ಪ್ರಕರಣ ನಡೆದಿದೆ.ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿರೋಧ ಪಕ್ಷದ ನಾಯಕ ಆರ್ ಅಶೋಕ ಬೆಂಗಳೂರಿನ ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾಕೆ ಭೇಟಿ ನೀಡಿ ಸರ್ಕಾರ ಕೂಡಲೇ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಕರಾಳ ಸಂಕ್ರಾಂತಿಯನ್ನು ಆಚರಿಸುವುದಾಗಿ ಎಚ್ಚರಿಕೆ ನೀಡಿದರು. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಸ್ಥಳೀಯ ನಿವಾಸಿಗಳಿಂದ ಮಾಹಿತಿ ಪಡೆದ ಆ ಅಶೋಕ್ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಇದೊಂದು ಅಮಾನವೀಯ ಘಟನೆ ಈ ಕೃತ್ಯವನ್ನು ಖಂಡಿಸುತ್ತೇನೆ. ಕ್ರೌರ್ಯ ಮೆರೆದ ದುಷ್ಕರ್ಮಿಗಳ ವಿರುದ್ಧ ಸರ್ಕಾರ ಕೂಡಲೇ ಕರಿಲವಾದಂತಹ ಕ್ರಮ ಕೈಗೊಳ್ಳಬೇಕು ಇಲ್ಲವಾದರೆ ಈ ಬರಿಯ ಸಂಕ್ರಾಂತಿಯನ್ನು ಕರಾಳ ಸಂಕ್ರಾಂತಿಯಾಗಿ ಆಚರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಸಿಸಿ ಕ್ಯಾಮೆರಾ ಅಳವಡಿಸಿದ್ದು ಅದನ್ನು ಒಡೆದು ಹಾಕಿದ್ದಾರೆ. ಪಶು ಆಸ್ಪತ್ರೆ ಉಳಿವಿಗಾಗಿ ಹೋರಾಡಿದವರಿಗೆ ಇದೀಗ ಭಯ ಶುರುವಾಗಿದೆ.ಈ ಸರ್ಕಾರಕ್ಕೆ ಮಾನ ಮರ್ಯಾದೆ ಇಲ್ಲ. ಇಷ್ಟೆಲ್ಲಾ…
ದಾವಣಗೆರೆ : ಒಂದು ಕಡೆ ಡಿಸಿಎಂ ಡಿಕೆ ಶಿವಕುಮಾರ್ ಅವರು ನನಗೆ ಯಾರ ಬೆಂಬಲವೂ ಬೇಡ ಯಾವ ಘೋಷಣೆಗಳು ಬೇಡ, ನನಗೆ ಪಕ್ಷ ಮುಖ್ಯ ಎಂದು ಹೇಳುತ್ತಿದ್ದರೆ, ಇನ್ನೊಂದು ಕಡೆ ಅವರ ಬೆಂಬಲಿಗರು ಹಾಗೂ ಕಾರ್ಯಕರ್ತರು ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಂದು ಹೇಳಿಕೆ ನೀಡುತ್ತಿದ್ದಾರೆ ಇದೀಗ ದಾವಣಗೆರೆ ಜಿಲ್ಲೆಯ ಚೆನ್ನಗಿರಿ ಕಾಂಗ್ರೆಸ್ ಶಾಸಕ ಬಸವರಾಜ್ ಶಿವಾಗಂಗಾ ಕೂಡ ಡಿಕೆ ಶಿವಕುಮಾರ್ ಅವರ ಪರವಾಗಿ ಬ್ಯಾಟಿಂಗ್ ಬೀಸಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಸಿಎಂ ಆಗೇ ಆಗುತ್ತಾರೆ. ಈ ಹಿಂದೆಯೂ ಹೇಳಿದ್ದೆ ಈಗಲೂ ಹೇಳುತ್ತಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಒಳ್ಳೆಯ ಆಡಳಿತ ನೀಡುತ್ತಿದ್ದಾರೆ. ಡಿಕೆ ಶಿವಕುಮಾರ್ ಅವರು ಐದು ವರ್ಷ ಸಿಎಂ ಆಗಬೇಕಿತ್ತು ಆದರೆ ಕೆಲ ಬೆಳವಣಿಗೆಯಿಂದ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ ಕುರ್ಚಿ ಖಾಲಿಯಾದ ತಕ್ಷಣ ಕ್ಲೈಮ್ ಮಾಡುತ್ತೇನೆ ಎಂದರು ಡಿಕೆ ಶಿವಕುಮಾರ್ ಪಕ್ಷ ಸಂಘಟನೆ ಮಾಡಿ ಎಲ್ಲರನ್ನೂ ಒಗ್ಗೂಡಿಸಿದ್ದಾರೆ. ಉಳಿದವರಿಗೆ ಯಾರನ್ನು ಕರೆಯುತ್ತಿರಲು ಸಾಧ್ಯವಾಗುವುದಿಲ್ಲ.ಈ ರೀತಿ…
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳು ಹೈಕೋರ್ಟಿನಿಂದ ರೆಗ್ಯುಲರ್ ಬೇಲ್ ಪಡೆದು ಬಿಡುಗಡೆಯಾಗಿದ್ದಾರೆ. ಆದರೆ ನಟ ದರ್ಶನ್ ಗೆ ಜೈಲಿನಿಂದ ಸಂಕಷ್ಟಗಳು ತಪ್ಪುತಿಲ್ಲ. ಈಗಾಗಲೇ ಹೈ ಕೋರ್ಟ್ ಆದೇಶವನ್ನು ಪ್ರಶ್ನೆಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಈಗ ಪೊಲೀಸರು ನಟ ದರ್ಶನ್ ಬಳಿ ಇರುವ ಗನ್ ಲೈಸೆನ್ಸ್ ಕುರಿತು ಸ್ಪಷ್ಟನೆ ನೀಡುವಂತೆ ನೋಟಿಸ್ ನೀಡಿದ್ದಾರೆ. ಹೌದು ದರ್ಶನ್ ಬಳಿಯಿರುವ ಗನ್ ಲೈಸೆನ್ಸ್ ರದ್ದು ಮಾಡಲು ಪೊಲೀಸ್ ಇಲಾಖೆ ಮುಂದಾಗಿದೆ. ತಮ್ಮ ಬಳಿಯಿರುವ ಗನ್ ಲೈಸೆನ್ಸ್ ಬಗ್ಗೆ 1 ವಾರದಲ್ಲಿ ಸ್ಪಷ್ಟನೆ ನೀಡುವಂತೆ ಡಿಸಿಪಿ ಪದ್ಮಿನಿ ಸಾಹು ನೋಟಿಸ್ ನೀಡಿದ್ದಾರೆ. ಅಲ್ಲದೆ ಕೋರ್ಟ್ ಸಹ ನಟ ದರ್ಶನ್ ಅವರಿಗೆ ಬೆಂಗಳೂರಿನಿಂದ ಮೈಸೂರಿಗೆ ತೆರಳಲು ಅನುಮತಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಅವರು ಬೆಂಗಳೂರಿನಿಂದ ಮೈಸೂರಿಗೆ ತೆರಳಿದ್ದಾರೆ ಎನ್ನಲಾಗಿದೆ. ನೀವು ಕೊಲೆ ಪ್ರಕರಣದ ಆರೋಪಿಯಾಗಿದ್ದೀರಿ. ಜಾಮೀನಿನ ಮೇಲೆ ಹೊರಗಿರುವುದರಿಂದ ಸಾಕ್ಷಿಗಳ ಮೇಲೆ ಪ್ರಭಾವ…
BREAKING : ಬೆಂಗಳೂರಲ್ಲಿ ಹಸುಗಳ ಕೆಚ್ಚಲು ಕೊಯ್ದ ಕೇಸ್ : ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ : ಜಿ.ಪರಮೇಶ್ವರ್
ಬೆಂಗಳೂರು : ಬೆಂಗಳೂರಿನಲ್ಲಿ ಕಿಡಿಗೇಡಿಗಳಿಂದ ಪೈಶಾಚಿಕ ಕೃತ್ಯ ನಡೆದಿದ್ದು, ರಸ್ತೆಯ ಮೇಲೆ ಮಲಗಿದಂತಹ ಮೂರು ಹಸುಗಳ ಕೆಚ್ಚಲು ಕೊಯ್ದು ದುಷ್ಕರ್ಮಿಗಳು ವಿಕೃತಿ ಮೆರೆದಿದ್ದಾರೆ. ಇದೀಗ ಈ ವಿಚಾರವಾಗಿ ಗೃಹ ಸಚಿವ ಜಿ.ಪರಮೇಶ್ವರ ಅವರು ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸೂಚಿಸುತ್ತೇನೆ ಎಂದು ತಿಳಿಸಿದರು. ಹಸುಗಳ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದಿರುವ ಘಟನೆ ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದಲ್ಲಿ ನಡೆದಿದೆ. ಕಿಡಿಗೇಡಿಗಳು ರಸ್ತೆಯಲ್ಲಿ ಮಲಗಿದ್ದಂತಹ ಹಸುಗಳ ಕೆಚ್ಚಲು ಕೊಯ್ದಿದ್ದಾರೆ. ಈ ಕುರಿತು ಚಾಮರಾಜಪೇಟೆ ಠಾಣೆಯ ಪೊಲೀಸರ ಜೊತೆಗೆ ನಾನು ಮಾತನಾಡುತ್ತೇನೆ.ಕಿಡಿಗೇಡಿಗಳ ವಿರುದ್ಧ ಕಾನೂನು ಪ್ರಕಾರ ಕಠಿಣ ವಾದಂತಹ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸುತ್ತೇನೆ ಎಂದು ಬೆಂಗಳೂರಿನಲ್ಲಿ ಗ್ರಹ ಇಲಾಖೆಯ ಸಚಿವ ಡಾ.ಜಿ ಪರಮೇಶ್ವರ್ ಅವರು ತಿಳಿಸಿದರು. ಘಟನೆ ಹಿನ್ನೆಲೇ? ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ರಸ್ತೆಯಲ್ಲಿ ಮಲಗಿದ್ದಂತಹ ಮೂರು ಹಸುಗಳ ಕೆಚ್ಚಲುಗಳನ್ನು ಕಿಡಿಗೇಡಿಗಳು ಕೊಯ್ದಿರುವ ಹೀನ ಕೃತ್ಯ ಬೆಂಗಳೂರು ಜಿಲ್ಲೆಯ ಚಾಮರಾಜಪೇಟೆಯಲ್ಲಿ ನಡೆದಿದೆ. ಹೌದು ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಒಂದು ಘಟನೆ…
ಬೆಂಗಳೂರು : ನಾಳೆ ಸಂಜೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ CLP ಸಭೆ ಹಾಗೂ ಜನವರಿ 21ರಂದು ಬೆಳಗಾವಿಯಲ್ಲಿ ಗಾಂಧಿ ಸಮಾವೇಶದ ಕುರಿತು, ಸೇರಿದಂತೆ ಇನ್ನೂ ಅನೇಕ ವಿಷಯಗಳ ಕುರಿತಂತೆ ಚರ್ಚಿಸಲು ಇಂದು ಬೆಂಗಳೂರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ. ಇದೆ ವೇಳೆ ಎಸ್ ಸಿ, ಎಸ್ ಟಿ ಸಚಿವರಿಂದ ಸಭೆಯ ಕುರಿತು ಅಜೆಂಡ ಮನವರಿಕೆ ಮಾಡುವ ಸಾಧ್ಯತೆ ಇದ್ದು, ಸುರ್ಜೆವಾಲಾಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಲಾಗುತ್ತದೆ. ಇಂದು ರಾತ್ರಿ ರಣಧೀಪ್ ಸಿಂಗ್ ಸುರ್ಜೆವಾಲಾ ಬೆಂಗಳೂರಿಗೆ ಆಗಮಿಸಲಿದ್ದು, ಪಕ್ಷದ ಒಗ್ಗಟ್ಟು ಕಾಪಾಡಲು ಕೆಲವು ಮಹತ್ವದ ಸೂಚನೆ ನೀಡಲಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಎಲ್ಲ ನಾಯಕರಿಗೆ ಪಕ್ಷದ ಚೌಕಟ್ಟಿನಲ್ಲಿ ಕೆಲಸ ಮಾಡುವ ಬಗ್ಗೆ ಸೂಚನೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.ಅಲ್ಲದೇ ನಾಳೆ ಖಾಸಗಿ ಹೋಟೆಲ್ ಸಿ ಎಲ್ ಪಿ ಸಭೆ ನಡೆಯಲಿದ್ದು, ಜನವರಿ 21ರ ಬೆಳಗಾವಿಯಲ್ಲಿ ಗಾಂಧಿ ಸಮಾವೇಶ ಹಾಗೂ ಸಮಾವೇಶದ ಪೂರ್ವ…
ಕಲಬುರ್ಗಿ : ಆಕಸ್ಮಿಕವಾಗಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಆಟೋಮೊಬೈಲ್ ಅಂಗಡಿ ಒಂದಕ್ಕೆ ಬೆಂಕಿ ತಗುಲಿ ಬೆಂಕಿಯ ಕೆನ್ನಾಲಿಗೆ ಸಂಪೂರ್ಣವಾಗಿ ಅಂಗಡಿಯನ್ನು ಆವರಿಸಿದ ಪರಿಣಾಮ ಆಟೋಮೊಬೈಲ್ ಅಂಗಡಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಕಲ್ಬುರ್ಗಿ ಜಿಲ್ಲೆಯ ಶಹಾಬಾದ್ ನಗರದ ಕನಕದಾಸ ವೃತ್ತದ ಬಳಿ ನಡೆದಿದೆ. ಹೌದು ಕಳೆದ ಶುಕ್ರವಾರ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜೇವರ್ಗಿ ರಸ್ತೆಯಲ್ಲಿನ ಚಿನ್ನಾಜಿ ಕಾಂಪ್ಲೆಕ್ಸ್ ನಲ್ಲಿ ಇರುವ ಬಾಲಾಜಿ ಆಟೋಮೊಬೈಲ್ಸ್ ಅಂಗಡಿಯು ವಿದ್ಯುತ್ ಸ್ಪರ್ಶದಿಂದ ಸಂಪೂರ್ಣವಾಗಿ ಸುಟ್ಟು ಬಸ್ಮವಾಗಿರುವ ಘಟನೆ ಶುಕ್ರವಾರ ರಾತ್ರಿ 10 ಗಂಟೆಯ ಸುಮಾರಿಗೆ ಬೆಂಕಿ ಹತ್ತಿದ್ದು, ಸ್ಥಳದಲ್ಲಿ ಇದ್ದ ಸಾರ್ವಜನಿಕರು ಬೆಂಕಿ ನಂದಿಸಲು ಪ್ರಯತ್ನಿಸಿದ್ದರೂ ಯಶಸ್ವಿಯಾಗಲಿಲ್ಲ, ಹಾಗಾಗಿ ಬೆಂಕಿಯ ಕೆನ್ನಾಲಗೆಯಿಂದ ಅಂಗಡಿ ಸುಟ್ಟು ಕರಕಲಾಗಿತ್ತು. ಅಂಗಡಿಯಲ್ಲಿ ವಾಹನಕ್ಕೆ ಬಳಸುವ ಬೆಲೆಬಾಳುವ ಆಯಿಲ್ ಗಳು, ಯಂತ್ರೋಪಕರಣಗಳ ಬಿಡಿ ಭಾಗಗಳು, ಪ್ಲಾಸ್ಟಿಕ್ ಸಾಮಗ್ರಿಗಳು, ಇಂಜಿನ್ ಸಾಮಾನುಗಳು ಸಂಪೂರ್ಣವಾಗಿ ಬಸ್ಮವಾಗಿವೆ. ತಕ್ಷಣ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದವರು ಬಂದು ಬೆಂಕಿಯನ್ನು ನಂದಿಸುವ ಮೊದಲೇ ಸಂಪೂರ್ಣ…