Author: kannadanewsnow05

ಯಾದಗಿರಿ : ಪತ್ನಿಗೆ ಬೇರೊಬ್ಬನ ಜೊತೆಗೆ ಅಕ್ರಮ ಸಂಬಂಧವಿದೆ ಎಂದು ಶೀಲವನ್ನು ಶಂಕಿಸಿ ಪತ್ನಿಯ ಕುತ್ತಿಗೆಯನ್ನು ಬಿಗಿಯಿದು ಭೀಕರವಾಗಿ ಕೊಲೆಗೈದಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಗ್ರಾಮದಲ್ಲಿ ನಡೆದಿದೆ. https://kannadanewsnow.com/kannada/lok-sabha-elections-2024-no-one-from-our-family-will-contest-says-satish-jarkiholi/ ಮಾಲಾಶ್ರೀ ಕೊಲೆಗಿಡಾಗಿರುವ ಮಹಿಳೆ ಎಂದು ಹೇಳಲಾಗುತ್ತಿದೆ. ಕಳೆದ ಎಂಟು ವರ್ಷಗಳ ಹಿಂದೆ ತಿಂಥಣಿ ಗ್ರಾಮದ ಹಣಮಂತನಿಗೆ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನವರಾದ ಅಯ್ಯಪ್ಪ ಕಲ್ಲಪ್ಪ ಅವರು ತಮ್ಮ ಕಿರಿಯ ಮಗಳನ್ನು ವಿವಾಹ ಮಾಡಿಕೊಟ್ಟಿದ್ದರು. ಇವರಿಗೆ ಮೂವರು ಮಕ್ಕಳಿದ್ದಾರೆ. ಪರ ಪುರುಷನೊಂದಿಗೆ ಪತ್ನಿ ಅನೈತಿಕ ಸಂಬಂಧವಿದೆ ಎಂದು ಪತಿ ಹನುಮಂತ ಪತ್ನಿಗೆ ಮಾಲಾಶ್ರೀಗೆ ಕಿರುಕುಳ ನೀಡುತ್ತಿದ್ದನು. https://kannadanewsnow.com/kannada/prime-minister-modi-has-announced-plans-to-set-up-the-worlds-largest-grain-collection-scheme/ ಈ ವಿಚಾರವಾಗಿ ಹಿರಿಯ ಸಮ್ಮುಖದಲ್ಲಿ ರಾಜಿ-ಪಂಚಾಯಿತಿಗಳು ನಡೆದಿದ್ದವು. ಹನುಮಂತನ ವಿರುದ್ಧ ಸೂಕ್ತ ಕ್ರಮ ಕೊಳ್ಳಬೇಕು ಎಂದು ಮೃತಳ ತಂದೆ ಸುರಪುರ ಪೊಲೀಸ್ ಠಾಣೆಯಲ್ಲಿ ದೂರು ನೀರು ನೀಡಿದ್ದಾರೆ. ಮಹಿಳೆ ಕೊಲೆಯಾದ ಸ್ಥಳಕ್ಕೆ ಪಿಎಸ್‌ಐ ಆನಂದ ವಾಗ್ಮೋಡೆ ಭೇಟಿ ನೀಡಿ ಪರಿಶೀಲಿಸಿ ಕ್ರಮ ಕೈಗೊಂಡಿದ್ದಾರೆ. ಸುರಪುರ ತಾಲೂಕಿನ ತಿಂಥಣಿಯಲ್ಲಿ ಮಹಿಳೆ ಕೊಲೆಯಾದ…

Read More

ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನಾನಾಗಲಿ ಅಥವಾ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ನನ್ನ ಪುತ್ರಿ ಪ್ರಿಯಂಕಾ ಜಾರಕಿಹೊಳಿಯಾಗಲಿ ಸ್ಪರ್ಧೆ ಮಾಡುವುದಿಲ್ಲ. ನಾವು ಸಾಮಾನ್ಯ ಕಾರ್ಯಕರ್ತನನ್ನು ಕಣಕ್ಕಿಳಿಸಿ ಚುನಾವಣೆ ಎದುರಿಸುತ್ತೇವೆ. ಅಲ್ಲದೇ ನಮ್ಮ ಕ್ಷೇತ್ರದಲ್ಲಿ ಕುಟುಂಬ ಮುಖ್ಯ ಬರಲ್ಲ. ಇಲ್ಲಿ ಏನೆ ಇದ್ದರೂ ಗೆಲ್ಲುವುದೊಂದೆ ಮುಖ್ಯ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು. https://kannadanewsnow.com/kannada/prime-minister-modi-has-announced-plans-to-set-up-the-worlds-largest-grain-collection-scheme/ ಬೆಳಗಾವಿ ತಾಲೂಕಿನ ಕಣಕುಂಬಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನನ್ನನ್ನು ಕಣಕ್ಕಿಳಿಸಲು ಹೈಕಮಾಂಡ್​​ ಮಟ್ಟದಲ್ಲಿ ಚರ್ಚೆಗಳು ನಡೆದಿರುವುದು ನಿಜ. ಆದರೆ ನನಗೆ ಆಸಕ್ತಿಯಿಲ್ಲ. ಬೆಳಗಾವಿ ಮತ್ತು ಚಿಕ್ಕೋಡಿ ಎರಡು ಸ್ಥಾನಗಳಲ್ಲಿ ಹಲವಾರು ಆಕಾಂಕ್ಷಿಗಳಿದ್ದು, ಹೆಚ್ಚು ಜನಪ್ರಿಯತೆ ಗಳಿಸಿರುವ ಇಬ್ಬರು ಉತ್ತಮ ಅಭ್ಯರ್ಥಿಗಳನ್ನು ಪಕ್ಷದ ಸ್ಥಳೀಯ ಘಟಕ ಆಯ್ಕೆ ಮಾಡುತ್ತದೆ ಎಂದು ಹೇಳಿದರು. https://kannadanewsnow.com/kannada/are-you-truthful-you-put-your-father-in-jail-didnt-you-vishwanath-attacks-byv/ ಕಳೆದ ಬಾರಿ ಪ್ರಬಲ ಅಭ್ಯರ್ಥಿಗಳಿರಲಿಲ್ಲ. ಹಾಗಾಗಿ ನಾನೇ ಸ್ಪರ್ಧಿಸಬೇಕಾಯಿತು. ಆದರೆ, ಈ ಬಾರಿ ಪ್ರಬಲ ಅಭ್ಯರ್ಥಿಗಳಿದ್ದಾರೆ ಎಂದರು. ಲೋಕಸಭಾ ಚುನಾವಣೆ ಬಳಿಕ ರಾಜ್ಯ ಸರ್ಕಾರ ಬದಲಾಗದು. ಸಿಎಂ ಸಿದ್ದರಾಮಯ್ಯ…

Read More

ಮೈಸೂರು : ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರೋದ್ರಿಂದ ದೇಗುಲಗಳ ಹುಂಡಿ ಹಣಕ್ಕೂ ಸರ್ಕಾರ ಕೈ ಹಾಕಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ‌.ವೈ. ವಿಜಯೇಂದ್ರ ಹೇಳಿಕೆಗೆ ತಿರುಗೇಟು ನೀಡಿದ ವಿಧಾನ ಪರಿಷತ್‌ಸದಸ್ಯ ಎಚ್‌. ವಿಶ್ವನಾಥ್‌ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲೇನು ರಾಜ್ಯದ ಖಜಾನೆ ಭರ್ತಿಯಾಗಿತ್ತಾ. ನಿಮ್ಮಪ್ಪನನ್ನು ಜೈಲಿಗೆ ಹಾಕಿಸಿದ್ದೇ ನೀವು ಎಂದು ವಾಗ್ದಾಳಿ ನಡೆಸಿದ್ದಾರೆ. https://kannadanewsnow.com/kannada/emergency-maintenance-work-water-supply-will-be-completely-suspended-in-these-areas-of-bengaluru-on-february-27-28/ ಸಹಕಾರ ಕ್ಷೇತ್ರದಲ್ಲಿ ಮೀಸಲಾತಿ ಜಾರಿಯಾಗಬೇಕು. ನಾನು ಸಹಕಾರ ಸಚಿವನಾಗಿದ್ದಾಗ ಈ ಬಗ್ಗೆ ಪ್ರಯತ್ನ ಮಾಡಿದ್ದೆ. ಈಗ ಸಹಕಾರ ಕ್ಷೇತ್ರದಲ್ಲಿ ಮೀಸಲಾತಿ ಜಾರಿಗೆ ಸರ್ಕಾರ ಮುಂದಾಗಿದೆ. ಇದಕ್ಕೆ ಶಾಸಕ ಜಿ.ಟಿ. ದೇವೇಗೌಡ ವಿರೋಧಿಸುತ್ತಿರುವುದು ಸರಿಯಲ್ಲ. ಅವರ ಪತ್ನಿ ಲಲಿತಾ ರಾಜ್ಯ ಮಹಿಳಾ ಸಹಕಾರ ಬ್ಯಾಂಕ್ ಅಧ್ಯಕ್ಷೆ, ಮಗ ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ. ಮೀಸಲಾತಿ ಜಾರಿಗೆ ವಿರೋಧಿಸುತ್ತಿರುವ ಜಿ ಟಿ ದೇವೇಗೌಡರೇ ನೀವು ಕೇವಲ ಒಂದು ಸಮುದಾಯದ ಬೆಂಬಲದಿಂದ ಗೆದ್ದಿದ್ದೀರಾ ಎಂದು ಅವರು ಪ್ರಶ್ನಿಸಿದರು. https://kannadanewsnow.com/kannada/job-fair-state-level-mega-job-fair-in-bengaluru-from-tomorrow-do-this-to-participate/ ಬೇರೆ ಸಮುದಾಯಗಳ ಋಣದಲ್ಲಿ ನೀವು ಇಲ್ಲವೇ? 67 ಸಾವಿರ ಸಹಕಾರ ಬ್ಯಾಂಕ್…

Read More

ಬೆಂಗಳೂರು : ಬೆಂಗಳೂರಲ್ಲಿ ಬೇಸಿಗೆ ಮುನ್ನವೇ ನೀರಿಗಾಗಿ ಹಾಹಾಕಾರ ಎದ್ದಿದ್ದು, ಇಂತಹ ಸಂದರ್ಭದಲ್ಲಿ ಬೆಂಗಳೂರು ನೀರು ಸರಬರಾಜು ಹಾಗೂ ಒಳ ಚರಂಡಿ ಮಂಡಳಿಯು ತುರ್ತು ನಿರ್ವಹಣೆ ಕಾರ್ಯವಿರುವುದರಿಂದ ಬೆಂಗಳೂರಿನ ನಗರದ ಹಲವೆಡೆ ಇದೆ ಫೆಬ್ರುವರಿ 27 ಬೆಳಿಗ್ಗೆಯಿಂದ 28 ಬೆಳಿಗ್ಗೆವರೆಗೆ ನೀರಿನ ಪೂರೈಕೆ ಸಂಪೂರ್ಣವಾಗಿ ಸ್ಥಗಿತಗೊಳ್ಳಲ್ಲಿದೆ. https://kannadanewsnow.com/kannada/job-fair-state-level-mega-job-fair-in-bengaluru-from-tomorrow-do-this-to-participate/ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ನೀರಿನ ಬಲ್ಕ್ ಫ್ಲೋ ಮೀಟರ್‌ಗಳನ್ನು ಅಳವಡಿಸುವ ಕೆಲಸ ಕಾರ್ಯಗಳನ್ನು ಕೈಗೆತ್ತಿಕೊಳ್ಳಳಿದೆ. ಹೀಗಾಗಿ ಮಂಡಳಿಯು ಕಾಮಗಾರಿ ನಡೆಯುವ ಪ್ರದೇಶಗಳಲ್ಲಿ ನೀರಿನ ಪೂರೈಕೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಿದೆ. https://kannadanewsnow.com/kannada/written-exam-for-1137-constable-posts-today-it-is-mandatory-for-candidates-to-follow-these-rules/ ಯಾವೆಲ್ಲಾ ಪ್ರದೇಶಗಳಲ್ಲಿ ನೀರಿನ ವ್ಯತ್ಯಯ? ನಂದಿನಿ ಲೇಔಟ್, ಬಿಎಚ್‌ಇಎಲ್ ಲೇಔಟ್, ಮಲ್ಲತ್ತಹಳ್ಳಿ, ಎನ್‌ಜಿಇಎಫ್ ಲೇಔಟ್, ಮೈಸೂರು ರಸ್ತೆ, ಶಿರ್ಕೆ, ಶಿವಣ್ಣ ಲೇಔಟ್, ಪ್ರಶಾಂತನಗರ, ತಿಮ್ಮೇನಹಳ್ಳಿ, ಗೋವಿಂದರಾಜನಗರ, ಕೆಎಚ್‌ಬಿ ಕಾಲೋನಿ, ದಾಸರಹಳ್ಳಿ, ಜಿಕೆಡಬ್ಲ್ಯು ಲೇಔಟ್, ಬಸವೇಶ್ವರ ಲೇಔಟ್, ಬಸವೇಶ್ವರ ಲಾಯೌಟ್, ಲಾನಜರಸಯ್ಯಔಟ್, ಈ ಕೆಳಗಿನ ಪ್ರದೇಶಗಳಲ್ಲಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. https://kannadanewsnow.com/kannada/breaking-anti-demo-car-of-cm-yogis-convoy-overturns-nine-people-including-five-policemen-injured/ ಸಿಂಗಾಪುರ, ಎಂಎಸ್ ಪಾಳ್ಯ, ರಾಮಚಂದ್ರಾಪುರ, ಡಿಫೆನ್ಸ್ ಲೇಔಟ್,…

Read More

ಬೆಂಗಳೂರು : ಭಾರತದ ಸಂವಿಧಾನ ಜಾರಿಗೆ ಬಂದು 75 ವರ್ಷಗಳು ಕಳೆದ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದ ಕೃಷ್ಣ ವಿಹಾರ್‌ನಲ್ಲಿ ನಡೆದ ಸಂವಿಧಾನ ಜಾಗೃತಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜಾತಿ ವ್ಯವಸ್ಥೆಯಲ್ಲಿ ಆರ್ಥಿಕ ಅಸಮಾನತೆ, ಸಮಾಜಿಕ ಅಸಮಾನತೆ ಇದೆ. ಇವೆಲ್ಲ ಅಸಮಾನತೆ ತೊಲಗಬೇಕು. ಸಾಮಾಜಿಕ ಅಸಮಾನತೆಯನ್ನು ತೊಡೆದು ಹಾಕುವುದು ಪ್ರತಿ ಸರ್ಕಾರದ ಜವಾಬ್ದಾರಿಯಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. https://kannadanewsnow.com/kannada/gmail-shutting-down-%e0%b2%86%e0%b2%97%e0%b2%b8%e0%b3%8d%e0%b2%9f%e0%b3%8d-%e0%b2%a8%e0%b2%b2%e0%b3%8d%e0%b2%b2%e0%b2%bf-%e0%b2%9c%e0%b2%bf%e0%b2%ae%e0%b3%87%e0%b2%b2%e0%b3%8d-%e0%b2%b8%e0%b3%8d/ ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳ ಮೂಲಕ ಜನರಿಗೆ ಸಂವಿಧಾನದ ಬಗ್ಗೆ ಜಾಗೃತಿ, ಮತ್ತು ಸಂವಿಧಾನದ ಅಗತ್ಯತೆ ಹಾಗೂ ಅನಿವಾರ್ಯತೆ ತಿಳಿಸುವ ಕೆಲಸ ಮಾಡಿದ್ದೇವೆ. ಇಂದು ಮತ್ತು ನಾಳೆ (ಫೆ.24 ಮತ್ತು 25) ಎರಡು ದಿನ ರಾಷ್ಟ್ರಿಯ ಏಕತಾ ದಿನ ಸಮಾವೇಶ ಹಮ್ಮಿಕೊಂಡಿದ್ದೇವೆ. ಈ ಸಮಾವೇಶದಲ್ಲಿ ಅನೇಕ ವಿಚಾರ ತಿಳಿಸುವ ಕೆಲಸ ಆಗುತ್ತಿದೆ ಎಂದು ತಿಳಿಸಿದರು. https://kannadanewsnow.com/kannada/congress-agrees-to-3-seat-lok-sabha-deal-with-aap-in-delhi-bigger-share-in-haryana-gujarat/ ಸಂವಿಧಾನ ರಕ್ಷಣೆಯಾದರೆ ನಾವೆಲ್ಲ ಉಳಿಯುತ್ತೇವೆ. ಸಂವಿಧಾನಕ್ಕೆ ಧಕ್ಕೆಯಾದರೆ ನಾವು ಅಪಾಯಕ್ಕೆ ಸಿಲುಕುತ್ತೇವೆ ಸಂವಿಂಧಾನಕ್ಕೆ ಅಪಾಯ ಆಗುವ ಸಂದರ್ಭವನ್ನು ಯಾರೂ…

Read More

ಶಿವಮೊಗ್ಗ : ಗಂಡನ ಮನೆಯವರು ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ಮಹಿಳೆ ಒಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಸಿದ್ಲಿಪುರ ಎಂಬ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಮಗುವಿಗೂ ಕೂಡ ವಿಷ ನೀಡಿಲಾಗಿದೆ ಎಂದು ಮೃತ ಮಹಿಳೆಯ ಕುಟುಂಬಸ್ಥರು ಗಂಡನ ಮನೆಯವರ ವಿರುದ್ಧ ಆರೋಪಿಸುತ್ತಿದ್ದಾರೆ. https://kannadanewsnow.com/kannada/irctc-swiggy-tie-up-food-delivery-by-swiggy-at-four-railway-stations-including-bangalore/ ಗಂಡನ ಮನೆಯವರು ವರದಕ್ಷಿಣೆ ತೆಗೆದುಕೊಂಡು ಬಾ ಎಂದು ಪತ್ನಿ ಕಸ್ತೂರಿ ಗಂಡ ಮಂಜುನಾಥ್ ಅತ್ತೆ ಉಮಾ ಹಾಗೂ ಮೈದುನ  ಕಿರುಕುಳ ನೀಡುತ್ತಿದ್ದರು ಎಂದು ಮೃತ ಮಹಿಳೆಯ ಕುಟುಂಬಸ್ಥರು ಆರೋಪಿಸುತ್ತಿದ್ದಾರೆ. https://kannadanewsnow.com/kannada/para-badminton-world-championships-india-made-a-historic-achievement-by-winning-18-medals/ ಈ ವೇಳೆ ಪತ್ನಿ ಜೊತೆಗೆ ಮಗುವಿಗು ಕೂಡ ವಿಷ ಕುಡಿಸಿದ್ದಾರೆ ಎಂದು ಆರೋಪ ಕೇಳಿ ಬಂದಿದ್ದು ಕಸ್ತೂರಿ ಪತಿ ಮಂಜುನಾಥ್ ಹಾಗೂ ಅತ್ತೆ ಉಮಾ ಮೈದುನ ಮುತ್ತು ವಿರುದ್ಧ ಕಸ್ತೂರಿ ಕುಟುಂಬ ಭಕ್ತರು ಇದೀಗ ಕೊಲೆ ಆರೋಪ ಮಾಡುತ್ತಿದ್ದಾರೆ. ಪೊಲೀಸರು ಆರೋಪಿ ಮಂಜುನಾಥನ್ನು ವಶಕ್ಕೆ ಪಡೆದಿದ್ದಾರೆ. https://kannadanewsnow.com/kannada/big-news-lok-sabha-election-2024-ai-technology-to-be-used-in-elections-to-curb-malpractices/

Read More

ನವದೆಹಲಿ : ಈ ಬಾರಿ ಲೋಕಸಭಾ ಮಹಾ ಸಮರಕ್ಕೆ ಎಲ್ಲಾ ಪಕ್ಷಗಳು ಈಗಾಗಲೇ ಸಿದ್ಧತೆ ಮಾಡಿಕೊಂಡಿದ್ದು, ಚುನಾವಣೆಯ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗವು ಮಾರ್ಚ್ 13ರ ನಂತರ ಪ್ರಕಟಿಸುವ ಸಾಧ್ಯತೆಗಳಿವೆ ಎಂದು ಆಯೋಗದ ಮೂಲಗಳು ಹೇಳಿವೆ. https://kannadanewsnow.com/kannada/state-keen-to-boost-trade-ties-with-japan-minister-mb-patil/ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕೇಂದ್ರ ಚುನಾವಣಾ ಆಯೋಗವು ಹೊಸ ಪ್ರಯೋಗ ಒಂದನ್ನು ಮಾಡಿದ್ದು ಚುನಾವಣೆಯಲ್ಲಿ, ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಅನುಕೂಲವಾಗುವಂತೆ ಯಾವುದೇ ರೀತಿಯಾದಂತಹ ಅಕ್ರಮಗಳು ನಡೆಯದಂತೆ ತಡೆಯಲು ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನವನ್ನು ಬಳಸಲು ಆಯೋಗ ನಿರ್ಧರಿಸಿದೆ ಎಂದು ತಿಳಿದುಬಂದಿದೆ. https://kannadanewsnow.com/kannada/breaking-15-killed-in-tractor-trolley-fall-into-pit-in-up/ ಎಐ ತಂತ್ರಜ್ಞಾನ ಬಳಕೆ ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿಕೃತಕ ಬುದ್ಧಿಮತ್ತೆ ಬಳಸಲು ಆಯೋಗ ನಿರ್ಧರಿಸಿದ್ದು, ಈ ಸಂಬಂಧ ಪ್ರತ್ಯೇಕ ಘಟಕವನ್ನು ತೆರೆಯಲಿದೆ. ಇದು ಸಾಮಾಜಿಕ ಮಾಧ್ಯಮಗಳಲ್ಲಿಮತ್ತು ಡಿಜಿಟಲ್‌ ಪ್ಲಾಟ್‌ಫಾಮ್‌ರ್‍ಗಳಲ್ಲಿಹರಿದಾಡುವ ಸುಳ್ಳು ಸುದ್ದಿಗಳನ್ನು ಗುರುತಿಸಿ, ತೆಗೆದುಹಾಕುವುದರತ್ತ ಗಮನ ಹರಿಸಲಿದೆ. ಈ ಸಂಬಂಧ ‘ಇಂಟರ್‌ನ್ಯಾಶನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಡೆಮಾಕ್ರಸಿ ಮತ್ತು ಎಲೆಕ್ಷನ್‌ ಮ್ಯಾನೇಜ್‌ಮೆಂಟ್‌’ ಸಂಸ್ಥೆಯಲ್ಲಿಆಯೋಗದ ಅಧಿಕಾರಿಗಳಿಗೆ ತರಬೇತಿ ನೀಡಲಾಗಿದೆ ಎಂದು…

Read More

ಬೆಂಗಳೂರು : ಬೇಸಿಗೆ ಆರಂಭಕ್ಕೂ ಮುನ್ನ ಬೆಂಗಳೂರು ನಗರದಲ್ಲಿ ಜನರು ನೀರಿಗಾಗಿ ಪರದಾಟ ನಡೆಸುತ್ತಿದ್ದಾರೆ. ಈಗ ನೆಲೆಯಲ್ಲಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಬಗೆಹರಿಸುವುದಕ್ಕೆ ಕ್ರಮ ಕೈಗೊಂಡಿದ್ದು ನಾವು ಹಾಗೂ ಬಿ ಡಬ್ಲ್ಯೂ ಎಸ್ ಎಸ್ ಬಿ ಬೋರ್ವೆಲ್ ಗಳನ್ನು ಕೊಡಿಸುತ್ತೇವೆ. ಇದಕ್ಕಾಗಿ 131 ಕೋಟಿ ಮೀಸಲಿಟ್ಟಿದ್ದು, ಪ್ರತಿ ಕ್ಷೇತ್ರಕ್ಕೆ 10 ಕೋಟಿ ಹಣ ಬಿ ಡಬ್ಲ್ಯೂ ಎಸ್ ಎಸ್ ಬಿ ಗೆ ಕೊಡುತ್ತೇವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ ತಿಳಿಸಿದರು. https://kannadanewsnow.com/kannada/ban-on-bombay-mithai-in-the-state-too-govt-to-test-cotton-candy/ ಇಂದಿನ ಸಭೆಯಲ್ಲಿ ಮಾತನಾಡಿದ ಅವರು, ನೀರಿಗಾಗಿ ಒಟ್ಟು 131 ಕೋಟಿ ಹಣವನ್ನು ಮೀಸಲಿಟ್ಟಿದ್ದೇವೆ. 110 ಹಳ್ಳಿಗಳಿಗೆ 40 ಸಾವಿರ ಕನೆಕ್ಷನ್ ಕೊಟ್ಟಿದ್ದೇವೆ.ಕಾವೇರಿ 5ನೇ ಹಂತ ಬರುವವರೆಗೂ ವಲಯ ಆಯುಕ್ತರು ಹಾಗೂ BWSSB ಅಧಿಕಾರಿಗಳು ನಿರ್ವಹಣೆಯನ್ನು ಮಾಡುತ್ತಾರೆ.110 ಹಳ್ಳಿಗಳ ನೀರಿನ ಬಿಬಿಎಂಪಿ ಮಾಡುತ್ತದೆ. ನಗರ ವ್ಯಾಪ್ತಿಯಲ್ಲಿ BWSSB ಅಧಿಕಾರಿಗಳು ನಿರ್ವಹಿಸುತ್ತಾರೆ. ಹಣಕೊಟ್ಟು ಖಾಸಗಿ ಟ್ಯಾಂಕರ್ ಗಳನ್ನು ಕೂಡ ಖರೀದಿಸುತ್ತೇವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ…

Read More

ಉತ್ತರಕನ್ನಡ : ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಐದು ಗ್ಯಾರಂಟಿ ಯೋಜನೆಗಳಲ್ಲಿ ಮನೆಯ ಯಜಮಾನಿಯರಿಗೆ ಜಾರಿ ಮಾಡಿರುವಂತಹ ಮಹತ್ವದ ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆದುಕೊಳ್ಳಲು ಇನ್ನೂ ಹಲವಾರು ಮಹಿಳೆಯರು ನೊಂದಣಿ ಕೇಂದ್ರಗಳತ್ತ ಧಾವಿಸುತ್ತಿದ್ದಾರೆ.ಆದರೆ ಇದರ ತದ್ವಿರುದ್ಧವಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಯೋಜನೆಗೆ ಅರ್ಹರಿದ್ದ 900ಕ್ಕೂ ಹೆಚ್ಚು ಮಹಿಳೆಯರು ಈ ಯೋಜನೆಯನ್ನು ತಿರಸ್ಕರಿಸಿದ್ದಾರೆ ಎಂದು ತಿಳಿದುಬಂದಿದೆ. https://kannadanewsnow.com/kannada/breaking-aap-congress-seat-sharing-agreement-in-delhi-haryana-gujarat-chandigarh-goa/ ರಾಜ್ಯ ಸರ್ಕಾರವು ಯೋಜನೆಯಡಿ ಮನೆಯ ಯಜಮಾನಿಯ ಖಾತೆಗೆ ಪ್ರತಿ ತಿಂಗಳು ರೂ.2 ಸಾವಿರ ಜಮಾ ಮಾಡುತ್ತದೆ. ಜಿಲ್ಲೆಯಲ್ಲಿ 2023ರ ಆಗಸ್ಟ್‌ನಿಂದ ಈವರೆಗೆ 3,13,198 ಯಜಮಾನಿಯರು ಯೋಜನೆಯಡಿ ನೋಂದಣಿ ಆಗಿದ್ದಾರೆ. ಇನ್ನೂ ಕೆಲ ತೆರಿಗೆ ಪಾವತಿದಾರರು, ರೇಷನ್ ಕಾರ್ಡ್‍ಗೆ ಅರ್ಜಿ ಸಲ್ಲಿಸಿದವರೂ ಈ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ. ಕೆಲವು ಯಜಮಾನಿಯರು ಸಲ್ಲಿಸಿದ ದಾಖಲೆಗಳು ತಾಳೆಯಾಗುತ್ತಿಲ್ಲ. ಅವುಗಳ ಪರಿಶೀಲನೆ ನಡೆದಿದೆ. https://kannadanewsnow.com/kannada/conversion-case-attempt-to-forcibly-convert-in-kalaburagi/ ಇವೆಲ್ಲವುಗಳ ಹೊರತಾಗಿ ಯೋಜನೆಗೆ ಎಲ್ಲ ರೀತಿಯಲ್ಲೂ ಅರ್ಹರಿರುವ ಜಿಲ್ಲೆಯ ವಿವಿಧ ತಾಲ್ಲೂಕುಗಳ 992 ಯಜಮಾನಿಯರು ಸ್ವಯಂ ಪ್ರೇರಣೆಯಿಂದ ಈ ಯೋಜನೆಯ ಸೌಲಭ್ಯದಿಂದ ಹೊರಗುಳಿದಿದ್ದಾರೆ.…

Read More

ಕಲಬುರ್ಗಿ : ರಾಜ್ಯದಲ್ಲಿ ಮತ್ತೆ ಮತಾಂತರ ಪ್ರಕರಣ ಬೆಳಕಿಗೆ ಬಂದಿದ್ದು, ಕಾಳಗಿ ತಾಲೂಕಿನ ರಟಕಲ್‌ ಗ್ರಾಮದಲ್ಲಿರುವ ಸರ್ಕಾರಿ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕ್ವಾಟರ್ಸ್‌ನಲ್ಲಿ ಹಣದ ಆಮಿಷ ತೋರಿಸಿ, ಬಲವಂತವಾಗಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡಲಾಗುತ್ತಿದೆ ಎಂದು ಫೆಬ್ರವರಿ 22ರ ರಾತ್ರಿ ಹಿಂದು ಜಾಗೃತಿ ಸೇನೆ ಕಾರ್ಯಕರ್ತರು ದಾಳಿ ಮಾಡಿ ಕ್ವಾಟರ್ಸ್‌ನಲ್ಲಿದ್ದ ನರ್ಸ್‌ಗಳಿಗೆ ಪ್ರಶ್ನೆ ಮಾಡಿದ್ದರು. ಹೀಗಾಗಿ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್​ ದಾಖಲಾಗಿದೆ. https://kannadanewsnow.com/kannada/it-is-not-right-to-call-him-hallikar-wodeyar-hallikar-protectors-who-fought-legal-battle-against-varthur/ ಕಾಳಗಿ ತಾಲೂಕಿನ ರಟಕಲ್‌ ಗ್ರಾಮದಲ್ಲಿರುವ ಸರ್ಕಾರಿ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕ್ವಾಟರ್ಸ್‌ನಲ್ಲಿ ನರ್ಸ್​ಗಳಾದ ಅಶ್ವಿನಿ ಹಾಗೂ ರುಬಿಕಾ ಗುರುವಾರ (ಫೆ.22)ರ ರಾತ್ರಿ ಆಸ್ಪತ್ರೆಯ ಕ್ವಾಟರ್ಸ್‌ನಲ್ಲಿ ಕ್ರಿಶ್ಚಿಯನ್ ಧರ್ಮದ ಬಗ್ಗೆ ಭೋಧಿಸುತ್ತಿದ್ದರು. ಹಣದ ಆಮಿಷ ತೋರಿಸಿ, ಬಲವಂತವಾಗಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡಲಾಗುತ್ತಿದೆ ಎಂದು ಫೆಬ್ರವರಿ 22ರ ರಾತ್ರಿ ಹಿಂದು ಜಾಗೃತಿ ಸೇನೆ ಕಾರ್ಯಕರ್ತರು ದಾಳಿ ಮಾಡಿ ಕ್ವಾಟರ್ಸ್‌ನಲ್ಲಿದ್ದ ನರ್ಸ್‌ಗಳಿಗೆ ಪ್ರಶ್ನೆ ಮಾಡಿದ್ದರು.ಇದೀಗ ನರ್ಸ್ ಅಶ್ವಿನಿ ನೀಡಿದ ದೂರಿನನ್ವಯ ಹಿಂದೂ ಕಾರ್ಯಕರ್ತರ ವಿರುದ್ಧವೇ ಎಫ್‌ಐಆರ್…

Read More