Author: kannadanewsnow05

ಚಿಕ್ಕಮಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ಡಿನ್ನರ್ ಪಾಲಿಟಿಕ್ಸ್ ಭಾರಿ ಸದ್ದು ಮಾಡುತ್ತಿದ್ದು, ಒಂದು ಕಡೆಗೆ, ಎಸ್ಸಿ, ಎಸ್ ಟಿ ಸಮುದಾಯದ ಅನ್ಯಾಯ ಆಗುತ್ತಿರುವ ಕುರಿತು ಹಲವು ಕಾಂಗ್ರೆಸ್ ನಾಯಕರು ಸಭೆ ನಡೆಸುತ್ತಿದ್ದರೆ, ಇನ್ನೊಂದು ಕಡೆಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ದೇವರ ಮೊರೆ ಹೋಗಿದ್ದಾರೆ. ಇದೀಗ ರಾಜಕೀಯದಲ್ಲಿ ಯಾವುದೇ ತಿರುವಿಲ್ಲ ಐದು ವರ್ಷಗಳ ಕಾಲ ನಮ್ಮದೇ ಸರ್ಕಾರ ಇರುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಇಂದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಬಳಿಯ ಮೆಣಸೆ ಹೆಲಿಪ್ಯಾಡ್ ಬಳಿ ಡಿಸಿಎಂ ಡಿಕೆ ಶಿವಕುಮಾರ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ರಾಜಕೀಯದಲ್ಲಿ ಯಾವುದೇ ತಿರುವಿಲ್ಲ. ಜನರು ಅಧಿಕಾರ ನೀಡಿದ್ದಾರೆ. ಐದು ವರ್ಷ ನಮ್ಮ ಸರ್ಕಾರನೇ ಇರುತ್ತದೆ.ನಮ್ಮ ಸರ್ಕಾರ ಜನರ ಪರವಾಗಿ ಕೆಲಸ ಮಾಡುತ್ತದೆ. ಎಂದು ಡಿಕೆ ಶಿವಕುಮಾರ್ ತಿಳಿಸಿದರು. ಹೈಕಮಾಂಡ್ ಹೇಳಿದಂತೆ ನಾವೆಲ್ಲರೂ ಕೆಲಸ ಮಾಡುತ್ತೇವೆ ನನಗೆ ಯಾರ ಬೆಂಬಲ ಬೇಡ ಯಾರ ಘೋಷಣೆಯು ಬೇಡ. ಪಕ್ಷಕ್ಕಾಗಿ ನಾನು ಕೆಲಸ ಮಾಡುತ್ತೇನೆ. ಪ್ರತಿಫಲ ನೀಡುವುದು…

Read More

ಉತ್ತರಕನ್ನಡ : ಕಳೆದ ಮೂರು ದಿನಗಳ ಹಿಂದೆ ಉತ್ತರಕನ್ನಡ ಜಿಲ್ಲೆಯ ಮುಂಡಗೋಡದಲ್ಲಿ ಜಮೀರ್ ಅಹ್ಮದ್ ದರ್ಗಾವಾಲೆ ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಮಿಂಚಿನ ಕಾರ್ಯಚರಣೆ ನಡೆಸಿ ಸಿನಿಮಾ ಸ್ಟೈಲ್ ನಲ್ಲಿ ಒಟ್ಟು 10 ಆರೋಪಿಗಳನ್ನು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು ಜಮೀರ್ ಅಹಮದ್ ದರ್ಗಾ ವಲೆ ಕಿಡ್ನಾಪ್ ಕೇಸ್ ಗೆ ಸಂಬಂಧಪಟ್ಟಂತೆ ಸಿನಿಮಾ ಸ್ಟೈಲಲ್ಲಿ 10 ಆರೋಪಿಗಳನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರಿಂದ 18 ಲಕ್ಷ ರೂಪಾಯಿ ಹಣವನ್ನು ಪೊಲೀಸರು ಇದೆ ವೇಳೆ ಜಪ್ತಿ ಮಾಡಿಕೊಂಡಿದ್ದಾರೆ. ಶಿರಸಿ ಡಿವೈಎಸ್ಪಿ ಗಣೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಚಿಕ್ಕೋಡಿಯಲ್ಲಿ ನಿನ್ನೆ ಬೆಳಿಗ್ಗೆ 5 ಜನರನ್ನು ಅರೆಸ್ಟ್ ಮಾಡಲಾಗಿದ್ದು, ಇನ್ನು ನಿನ್ನೆ ರಾತ್ರಿ ಯಲ್ಲಾಪುರದ ಬಳಿ ಇನ್ನುಳಿದ ಐವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಜಮೀರ್ ಅಹ್ಮದ್ ದರ್ಗಾವಾಲೆ ಅಪಹರಣ ಪ್ರಕರಣದ ಪ್ರಮುಖ ಆರೋಪಿ ಹಾಗೂ ಹಣವಿದ್ದ ಕಾರು ಪ್ರತ್ಯೇಕವಾಗಿ ಪರಾರಿಯಾಗಿದ್ದರು. ಸಿಕ್ಕ ಆರೋಪಿಗಳ ಮೂಲಕ ಪ್ರಮುಖ ಆರೋಪಿ ಜಾಗ ಪತ್ತೆಯಾಗಿತ್ತು. ಪ್ರಮುಖ ಆರೋಪಿ…

Read More

ಬೆಂಗಳೂರು : ಭ್ರಷ್ಟ ಅಧಿಕಾರಿಗಳನ್ನು ಬಲೆ ಹಾಕುವಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ ಮುಂದುವರೆದಿದ್ದು, ಇದೀಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ದಾಸರಹಳ್ಳಿ ವಲಯ ಕಚೇರಿ ಮೇಲೆ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು ಯದುಕೃಷ್ಣ ಹೆಸರಿನ ಅಧಿಕಾರಿಯೊಬ್ಬರನ್ನು ಲಂಚದ ದುಡ್ಡು ಸಮೇತ ಬಲೆಗೆ ಕೆಡವಿದ್ದಾರೆ. ಹೌದು ಕಾಮಗಾರಿ ಟೆಂಡರ್ ವಿಭಾಗದಲ್ಲಿ ಎಕ್ಸಿಕ್ಯೂಟಿವ್ ಇಂಜಿನೀಯರ್ ಆಗಿ ಯದುಕೃಷ್ಣ ಕೆಲಸ ಮಾಡುತ್ತಿದ್ದರು. ಈ ವೇಳೆ ಕಚೇರಿಯ ಮೇಲೆ ದಾಳಿ ಮಾಡಿದ ಲೋಕಾಯುಕ್ತ ಪೊಲೀಸರು ಅವರಿಗೆ ಸೇರಿದಂತಹ ಕಾರಿನಿಂದ ದಾಖಲೆ ಇಲ್ಲದ ಸುಮಾರು 2.6 ಲಕ್ಷ ನಗದು ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದೆ ವೇಳೆ ಯದುಕೃಷ್ಣ ಅವರನ್ನು ವಶಕ್ಕೆ ಪಡೆದು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

Read More

ಚಿಕ್ಕಮಗಳೂರು : ಬೆಳಗಾವಿಯ ಸುವರ್ಣ ಸೌಧದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕುರಿತು ಅಶ್ಲೀಲ ಪದ ಬಳಸಿದ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರಿಗೆ ಇದೀಗ ಅನಾಮಧೆಯ ಪತ್ರ ಒಂದು ಬಂದಿದ್ದು, ಪತ್ರದಲ್ಲಿ 15 ದಿನದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಕ್ಷಮೆ ಕೇಳದೆ ಹೋದರೆ ನಿನ್ನ ಹತ್ಯೆ ಮಾಡಲಾಗುತ್ತದೆ ಎಂದು ಸಿಟಿ ರವಿಗೆ ಕೊಲೆ ಬೆದರಿಕೆ ಪತ್ರ ಬಂದಿದೆ ಎಂದು ತಿಳಿದು ಬಂದಿದೆ. ಹೌದು ಎಂಎಲ್ಸಿ ಸಿಟಿ ರವಿಗೆ ಕೊಲೆ ಬೆದರಿಕೆ ಪತ್ರ 15 ದಿನದೊಳಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಕ್ಷಮೆಯಾಚಿಸಿ ಕ್ಷಮೆ ಕೇಳದಿದ್ದರೆ ನಿಮ್ಮನ್ನು ಹತ್ಯೆ ಮಾಡುತ್ತೇವೆ ಎಂದು ಚಿಕ್ಕಮಗಳೂರಿನ ಬಸವನಹಳ್ಳಿಯ ಎಂಎಲ್ಸಿ ಸಿಟಿ ರವಿ ನಿವಾಸಕ್ಕೆ ಬೆದರಿಕೆ ಪತ್ರ ಬಂದಿದೆ. ಪತ್ರದ ಕುರಿತು ಇದೀಗ ಬಸವನಹಳ್ಳಿ ಪೊಲೀಸ್ ಠಾಣೆಗೆ ಎಂಎಲ್‌ಸಿ ಸಿಟಿ ರವಿ ಪಿಎ ಚೇತನ್ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಪತ್ರ ಎಲ್ಲಿಂದ ಬಂದಿದೆ ಎಂದು ತನಿಖೆ ಕೈಗೊಂಡಿದ್ದಾರೆ.

Read More

ಹುಬ್ಬಳ್ಳಿ : ಎರಡು ಎಕರೆ ಜಮೀನು ಆಸ್ತಿ ಗಾಗಿ ತಂದೆ ಹಾಗೂ ಮಲತಾಯಿಯನ್ನು ರಾಡ್ ನಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿದ್ದ ಘಟನೆ ನಿನ್ನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಡೆದಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊಲೆ ಆರೋಪಿ ಗಂಗಾಧರಪ್ಪ ಎನ್ನುವವನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ಗಂಗಾಧರಪ್ಪನನ್ನು ಹುಬ್ಬಳ್ಳಿಯ ಗ್ರಾಮೀಣ ಪೊಲೀಸರು ಇದೀಗ ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಿನ್ನೆ ಈ ಒಂದು ಘಟನೆ ನಡೆದಿತ್ತು. ಎರಡು ಎಕೆರೆ ಜಮೀನಿನ ವಿಚಾರವಾಗಿ ಅಪ್ಪ-ಮಗನ ನಡುವೆ ಗಲಾಟೆ ನಡೆದಿತ್ತು. ಆಸ್ತಿ ಬರೆದುಕೊಡಲು ನಿರಾಕರಿಸಿದಕ್ಕೆ ಪಾಪಿ ಮಗ ರಾಡ್ ನಿಂದ ಹೊಡೆದು ಹತ್ಯೆ ಮಾಡಿದ್ದ. ತಂದೆ ಅಶೋಕಪ್ಪ ಹಾಗೂ ಮಲತಾಯಿ ಶಾರದಮ್ಮನನ್ನು ಆರೋಪಿ ಗಂಗಾಧರಪ್ಪ ಕೊಲೆ ಮಾಡಿದ್ದ. ಮನೆಯಲ್ಲಿ ಇಬ್ಬರನ್ನು ಕೊಲೆ ಮಾಡಿ ಗಂಗಾಧರಪ್ಪ ಪರಾರಿಯಾಗಿದ್ದ.ಇದೀಗ ಗಂಗಾಧರಪ್ಪನನ್ನು ಹುಬ್ಬಳ್ಳಿಯ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

Read More

ಮೈಸೂರು : ಮೈಸೂರಿನ ಕೆಆರ್‌ಎಸ್‌ ತೆರಳುವ ರಸ್ತೆಗೆ ಪ್ರಿನ್ಸಸ್ ರಸ್ತೆ ಎಂಬುದಕ್ಕೆ ಯಾವುದೇ ದಾಖಲೆ ಇಲ್ಲ ಇದಕ್ಕೆ ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂದು ಹೆಸರಿಡುವ ವಿಚಾರವಾಗಿ, ನಾನು ಯಾರಿಗೂ ರಸ್ತೆಗೆ ನನ್ನ ಹೆಸರಿಡಿ ಎಂದು ಹೇಳಿಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು 40 ವರ್ಷದಿಂದ ರಾಜಕಾರಣದಲ್ಲಿದ್ದೇನೆ. ಯಾರಿಗೂ ನನ್ನ ಹೆಸರಡಿ ಎಂದು ಹೇಳಿಲ್ಲ. ಮೈಸೂರು ವಿವಿಯಲ್ಲಿ ಗೌರವ ಡಾಕ್ಟರೇಟ್ ಕೊಟ್ಟಾಗಲೇ ನಾನು ಬೇಡ ಅಂದೇ. ಡಾಕ್ಟರೇಟ್ ತೆಗೆದುಕೊಳ್ಳುವಷ್ಟು ನನಗೆ ಯೋಗ್ಯತೆ ಇಲ್ಲ. ಆ ರಸ್ತೆಗೆ ಬೇರೆ ಹೆಸರಿದ್ದರೆ ಬದಲಾವಣೆ ಮಾಡುವುದು ಬೇಡ‌. ಹೆಸರಿಡುವ ವಿಚಾರವಾಗಿ ನಾನು ಯಾರ ಜೊತೆ ಚರ್ಚೆಯನ್ನ ಮಾಡಿಲ್ಲ ಎಂದು ಅವರು ಹೇಳಿದರು. ಕಾಂಗ್ರೆಸ್ ಮುಖಂಡರ ವಾದವೇನು? ಕೆಆರ್​ಎಸ್​ ರಸ್ತೆಗೆ ಪ್ರಿನ್ಸಸ್ ರಸ್ತೆ ದಾಖಲೆ ಇಲ್ಲ ಎಂದು ಕಾಂಗ್ರೆಸ್ ಮುಖಂಡರು ವಾದಿಸುತ್ತಿದ್ದಾರೆ. ಆದರೆ, ಪ್ರಿನ್ಸಸ್ ರಸ್ತೆ ಎಂದು ಹೆಸರಿರುವ ನಾಮಫಲಕ ಲಭ್ಯವಾಗಿದೆ. ಯಾದವಗಿರಿ ರೈಲ್ವೆ ಬಡಾವಣೆಯ ಮನೆಗೆ ನಾಮಫಲಕ ಅಳವಡಿಸಲಾಗಿದೆ. ಮನೆ…

Read More

ಬೆಂಗಳೂರು : ಮಾಜಿ ಸಂಸದ ಡಿಕೆ ಸುರೇಶ್ ಸಹೋದರಿ ಎಂದು ಹೇಳಿ ವಂಚನೆ ಎಸಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಆರೋಪಿ ಐಶ್ವರ್ಯ ಗೌಡ ವಂಚನೆ ಪ್ರಕರಣದ ಕುರಿತು ಶಾಸಕ ವಿನಯ್ ಕುಲಕರ್ಣಿ ಬಳಸುತ್ತಿದ್ದ ಕಾರನ್ನು ಸೀಜ್ ಮಾಡಲಾಗಿದೆ. ವಿನಯ್ ಕುಲಕರ್ಣಿ ಬಳಸುತ್ತಿದ್ದ ಕಾರನ್ನು ಇದೀಗ ಪೊಲೀಸರು ಸೀಜ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಹೌದು ಐಶ್ವರ್ಯ ಪತಿ ಹರೀಶ್ ಗೌಡ ಹೆಸರಲಿದ್ದ ಮತ್ತೊಂದು ಕಾರು ಇದೀಗ ಪೊಲೀಸರು ಜಪ್ತಿ ಮಾಡಿದ್ದಾರೆ. ಈ ದಿನ ಐಶ್ವರ್ಯ ಬಳಿ ಇದ್ದಂತಹ ಮೂರು ಕಾರುಗಳನ್ನು ಪೊಲೀಸರು ಸೀಜ್ ಮಾಡಿದ್ದು, ಈ ಹಿಂದೆ ಐಶ್ವರ್ಯ ಪತಿ ಹರೀಶ್ ಹೆಸರಿನಲ್ಲಿದ್ದ ಮೂರು ಐಷಾರಾಮಿ ಕಾರುಗಳನ್ನು ಸೀಸ್ ಮಾಡಿದ್ದರು. ಇದೀಗ ಶಾಸಕ ವಿನಯ್ ಕುಲಕರ್ಣಿ ಅವರು ಬಳಸುತ್ತಿದ್ದ ಕಾರನ್ನು ಕೂಡ ಪೊಲೀಸರು ಸೀಜ್ ಮಾಡಿದ್ದಾರೆ. ಆಡಿ, ಬಿಎಂಡಬ್ಲ್ಯೂ ಹಾಗೂ ಫಾರ್ಚುನರ್ ಕಾರನ್ನು ಸೀಜ್ ಮಾಡಿದ್ದರು. ಇದೀಗ ಮತ್ತೊಂದು ಕಾರನ್ನು ಪೊಲೀಸರು ಸೀಜ್ ಮಾಡಿದ್ದಾರೆ ಎಂದು ತಿಳಿದುಬಂದಿದೆ . ವಂಚನೆ ಮಾಡಿದ ಹಣದಿಂದ…

Read More

ಬೀದರ್ : ಬೀದರ್ ನ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸಚಿವ ಪ್ರಿಯಾಂಕ ಖರ್ಗೆ ಆಪ್ತ ಎನಲಾದ ರಾಜು ಕಪನೂರನನ್ನು 5 ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿ ಬೀದರ್ ನ ಜೆಎಂಎಫ್‌ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಹೌದು ಬೀದರ್‌ನ ಯುವ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದಲ್ಲಿ, ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಪನೂರ್ ಸೇರಿದಂತೆ ಐವರನ್ನು ಬೀದರ್ ಜೆಎಂಎಫ್‌ಸಿ ನ್ಯಾಯಾಲಯ 5 ದಿನಗಳ ಸಿಐಡಿ ಕಸ್ಟಡಿಗೆ ನೀಡಿದೆ.ಸಿಐಡಿ ತನಿಖೆ ಭರದಿಂದ ಸಾಗಿದ್ದು, ಡೆತ್ ನೋಟ್‌ನಲ್ಲಿ ಹೆಸರಿಸಲಾದ ಎಂಟು ಜನರ ಪೈಕಿ ಐವರನ್ನು ಬಂಧಿಸಲಾಗಿದೆ. ಉಳಿದ ಮೂವರನ್ನು ಪತ್ತೆ ಹಚ್ಚುವ ಪ್ರಯತ್ನ ನಡೆಯುತ್ತಿದೆ. 2024 ಡಿಸೆಂಬರ್ 26 ರಂದು ಬೀದರ್ ನಗರದ ಬಸವೇಶ್ವರ ವೃತ್ತದ ಬಳಿಯ ರೈಲು ಹಳಿಗೆ ತಲೆಕೊಟ್ಟು ಯುವ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಚಿನ್ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಸುಮಾರು ಏಳು ಪುಟಗಳ ಡೆತ್​ನೋಟ್​ ಬರೆದಿಟ್ಟಿದ್ದರು. ಡೆತ್​ನೋಟ್​ನಲ್ಲಿ​ ಗ್ರಾಮೀಣಾಭಿವೃದ್ಧಿ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಬೆಚ್ಚಿಬಿಳಿಸುವಂತಹ ಘಟನೆ ನಡೆದಿದ್ದು, ಕೇರಳ ಮೂಲದ ಯುವಕನೊಬ್ಬ ಬೆಂಗಳೂರಿನ ಮಹದೇವಪುರದಲ್ಲಿ ಪಿಜಿ ಒಂದರಲ್ಲಿ ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಹೌದು ಕೇರಳ ಮೂಲದ ಜಿತಿನ್ ಎನ್ನುವ ಯುವಕನೊಬ್ಬ ಬೆಂಗಳೂರಿಗೆ ಕೆಲಸ ಅರಿಸಿಕೊಂಡು ಬಂದಿದ್ದ. ಈ ವೇಳೆ ಮನೆಯಲ್ಲಿ ಅವರ ತಂದೆಗೆ ಕ್ಯಾನ್ಸರ್ ಇತ್ತು.ಅಲ್ಲದೆ ಮನೆಯ ಇನ್ನು ಕೆಲವು ಸಮಸ್ಯೆಗಳಿಂದ ಯುವಕ ಬೇಸತ್ತು ಹೋಗಿದ್ದ. ಇದರ ನಡುವೆ ತನ್ನ ಪ್ರಿಯತಮೆ ಜೊತೆಗೆ ಜಗಳ ಮಾಡಿಕೊಂಡಿದ್ದ ಎನ್ನಲಾಗಿದೆ. ಈ ವೇಳೆ ಪ್ರಿಯತಮೆ ಜೊತೆಗೆ ಜಗಳ ಮಾಡಿಕೊಂಡು ರಾತ್ರಿ ಜಿತಿನ್ ಮದ್ಯ ಸೇವಿಸಿದ್ದಾನೆ. ಬಳಿಕ ನಶೆಯಲ್ಲಿ ಪ್ರಿಯತಮೆ ಜಜೊತೆ ಜಗಳವಡುತ್ತಲೇ, ಕೈ ಕುಯ್ದು ಕೊಂಡಿದ್ದಾನೆ. ಈ ವಿಚಾರ ಪ್ರಿಯತಮೆಗೆ ತಿಳಿದು ತಕ್ಷಣ ಹಾಗೆ ಮಹದೇವಪುರ ಪೊಲೀಸ್ ಠಾಣೆಗೆ ಕರೆ ಮಾಡಿದ್ದಾಳೆ. ಬಿಟ್ ನಲ್ಲಿ ಇರುವಂತಹ ಮಹದೇವಪುರ ಠಾಣೆಯ ಪಿಎಸ್ಐ ಪರಶುರಾಮ್ ಹಾಗೂ ಮಲ್ಲೇಶ್ ತಕ್ಷಣ ಪೀಜಿಗೆ ಧಾವಿಸಿ ಯುವಕನನ್ನು ರಕ್ಷಣೆ ಮಾಡಿದ್ದಾರೆ. ಘಟನೆ ಕುರಿತು…

Read More

ಕಲಬುರ್ಗಿ : ಕಲ್ಬುರ್ಗಿಯಲ್ಲಿ ಮತ್ತೆ ಪೊಲೀಸರ ಬಂದೂಕು ಸದ್ದು ಮಾಡಿದ್ದು, ಅಕ್ರಮವಾಗಿ ಡ್ರಗ್ಸ್ ಪೂರೈಸುತ್ತಿದ್ದ ಆರೋಪಿಯ ಮೇಲೆ ಫೈರಿಂಗ್ ನಡೆಸಲಾಗಿದೆ. ಕಲ್ಬುರ್ಗಿ ಹೊರವಲಯದ ತಾವರಗೇರಾ ಬಳಿ ಗುಂಡಿನ ದಾಳಿ ನಡೆಸಲಾಗಿದೆ. ಡ್ರಗ್ಸ್ ಸಾಗಿಸುತ್ತಿದ್ದ ಸುಪ್ರೀತ್ ನವಲೆ ಎಡಗಾಲಿಗೆ ಗುಂಡೇಟು ತಗುಲಿದೆ. ಈತ ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಕುರಿತು ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ. ಕಾರಿನ ತಪಾಸಣೆ ಮಾಡುವಾಗ ಪೊಲೀಸರ ಮೇಲೆ ಸುಪ್ರೀತ್ ನವಲೆ ದಾಳಿ ಮಾಡಿದ್ದಾನೆ. ಚಾಕುನಿಂದ ಇರಿದು ಸುಪ್ರೀತ್ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾನೆ. ಹೆಡ್ ಕಾನ್ಸ್ಟೇಬಲ್ ಗುರುಮೂರ್ತಿ ಮೇಲೆ ಆರೋಪಿ ಹಲ್ಲೆ ನಡೆಸಿದ್ದಾನೆ.ಈ ವೇಳೆ ಚೌಕ್ ಠಾಣೆ ಇನ್ಸ್ಪೆಕ್ಟರ್ ರಾಘವೇಂದ್ರ ಅವರಿಂದ ಫೈರಿಂಗ್ ಆಗಿದೆ. ಸದ್ಯ ಆರೋಪಿ ಸುಪ್ರೀತ್ ಗೆ ಕಲಬುರ್ಗಿಯ ಜಿಮ್ಸ್ ಆಸ್ಪತ್ರೆಯ ಟ್ರಾಮ ಸೆಂಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Read More