Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜ್ಯದಲ್ಲಿ ಇನ್ನು ಸಹ ಜೀತ ಪದ್ಧತಿ ಜೀವಂತವಾಗಿದ್ದು, ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆ ಗುಂಜೂರು ಬಳಿ 8 ಬಾಲಕರು ಸೇರಿದಂತೆ 35 ಕಾರ್ಮಿಕರನ್ನು ರಕ್ಷಿಸಲಾಗಿದೆ. ಅತ್ತಿಬೆಲೆ ಹೋಬಳಿಯ ಉಪ ತಹಸೀಲ್ದಾರ್ ನವೀನ್ ಕುಮಾರ್ ಹಾಗು ಕಾರ್ಮಿಕ ಇಲಾಖೆ ಅಧಿಕಾರಿಗಳು, ಪೊಲೀಸ್ NGO ಸಿಬ್ಬಂದಿ ದಾಳಿ ಮಾಡಿದ್ದಾರೆ. ಹೌದು ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆ ಗುಂಜೂರು ಬಳಿ 8 ಬಾಲಕರು ಸೇರಿದಂತೆ 35 ಕಾರ್ಮಿಕರನ್ನು ರಕ್ಷಿಸಲಾಗಿದೆ. ತೆಲಂಗಾಣದ ವನಪರ್ತಿ ಜಿಲ್ಲೆಯಿಂದ 36 ಕಾರ್ಮಿಕರನ್ನು ಕರೆತಂದಿದ್ರು. ಗುತ್ತಿಗೆದಾರ ಹಣ ನೀಡಿ ಕಾರ್ಮಿಕರನ್ನು ಖರೀದಿಸಿ ಜೀತಕ್ಕೆ ಕರೆತಂದಿದ್ದ. ಅತ್ತಿಬೆಲೆ, ಗುಂಜೂರು ಭಾಗದಲ್ಲಿ 2 ಗುಂಪುಗಳಾಗಿ ಇರಿ ಜೀತ ಪದ್ಧತಿ ನಡೆಸಲಾಗುತ್ತಿತ್ತು. ಅತ್ತಿಬೆಲೆ ಬಳಿ ಮೂವರು ಬಾಲಕರು ಸೇರಿದಂತೆ 11 ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ. ಇನ್ನು ಗುಂಜೂರು ಗ್ರಾಮದ ಬಳಿ 24 ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ. ರಾಮನಾಗಪ್ಪ ಶೆಟ್ಟಿ ಇನ್ಸ್ಪಾಸ್ಟೈಕ್ಚರ್ ಕಂಪನಿಯಲ್ಲಿ ಜೀತದಾಳಾಗಿ ಕೆಲಸ ಮಾಡುತ್ತಿದ್ದರು. ಯಾಕೂಬ್ ಎಂಬಾತ…
ಚಾಮರಾಜನಗರ : ಧರ್ಮಸ್ಥಳದಲ್ಲಿ ಶವ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್ ಆದಂತ ಚಿನ್ನಯ್ಯನ 2ನೇ ಹೆಂಡತಿ ಪ್ರತಿಕ್ರಿಯೆ ನೀಡಿದ್ದು, ನನ್ನ ಗಂಡ ಒಳ್ಳೆಯವರು, ಅವರ ಬಂಧನ ವಿಷಯ ಟಿವಿ ಮೂಲಕವೇ ತಿಳಿಯಿತು. ಚಿನ್ನಯ್ಯ ಒಳ್ಳೆಯವರು, ನಾವು ಕ್ರೈಸ್ತ ಧರ್ಮಕ್ಕೆ ಮತಾಂತರ ಆಗಿಲ್ಲ ಎಂದು ಧರ್ಮಸ್ಥಳ ಪ್ರಕರಣದಲ್ಲಿ ಬಂಧಿತನಾಗಿರುವ ಚಿನ್ನಯ್ಯನ ಎರಡನೇ ಪತ್ನಿ ಮಲ್ಲಿಕಾ ಹೇಳಿದರು. ತಮಿಳುನಾಡಿನ ಸತ್ಯಮಂಗಲಂ ತಾಲೂಕಿನ ಗ್ರಾಮವೊಂದರಲ್ಲಿ ಮಾತನಾಡಿದ ಅವರು, ಮೊದಲನೇ ಪತ್ನಿ ತೊರೆದು 6 ವರ್ಷದ ಬಳಿಕ ಅವರು ನನ್ನನ್ನು ವಿವಾಹವಾಗಿದ್ದರು. ವಿವಾಹದ ಸಂದರ್ಭದಲ್ಲಿ ಧರ್ಮಸ್ಥಳದ ಮ್ಯಾನೇಜರ್ ಒಬ್ಬರು ಚಿನ್ನಯ್ಯ ಒಳ್ಳೆಯವನು ಎಂದು ಲೆಟರ್ ಕೂಡ ಕೊಟ್ಟಿದ್ದರು. ನಾನೂ ಕೂಡ ಚಿನ್ನಯ್ಯನ ಜೊತೆ ಧರ್ಮಸ್ಥಳದಲ್ಲಿ ಸ್ವಚ್ಛ ಕಾರ್ಮಿಕಳಾಗಿ ಕೆಲಸ ನಿರ್ವಹಿಸುತ್ತಿದ್ದೆ ಎಂದರು. ಬಳಿಕ, ಧರ್ಮಸ್ಥಳದ ಕೆಲಸ ಬಿಟ್ಟು ತಮಿಳುನಾಡಿನಲ್ಲಿ 8 ವರ್ಷಗಳಿಂದ ವಾಸವಿದ್ದು ಕಳೆದ 2 ತಿಂಗಳಿನ ಹಿಂದೆ ಕೆಲಸಕ್ಕೆಂದು ಹೋದವರನ್ನು ಟಿವಿಯಲ್ಲೇ ನಾನು ನೋಡಿದ್ದು ಎಂದು ಕಣ್ಣೀರಿಟ್ಟರು. ನನ್ನ ಗಂಡ ಯಾವ ತಪ್ಪೂ ಮಾಡಿಲ್ಲ…
ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ಅಧಿಕಾರಿಗಳು ಚೆನ್ನಯ್ಯನನ್ನು ಅರೆಸ್ಟ್ ಮಾಡಿ ತೀವ್ರ ತನಿಖೆ ನಡೆಸಿದ್ದಾರೆ ಅಲ್ಲದೆ ಇಂದು ಮಹೇಶ ಶೆಟ್ಟಿ ಮನೆಯಲ್ಲಿ ಚಿನ್ನಯ್ಯನ ಮೊಬೈಲ್ ಪತ್ತೆ ಮಾಡಿದ್ದು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ ಇದೀಗ ಈ ಒಂದು ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಚಿನ್ನಯ ಇದು ಹೆಣ್ಣುಮಗಳ ತಲೆ ಬುರುಡೆ ಎಂದು ತಂದುಕೊಟ್ಟಿದ್ದ. ಇದೀಗ ಎಫ್ಎಸ್ಎಲ್ ವರದಿಯಲ್ಲಿ ಇದು ಪುರುಷರ ತಲೆ ಬುರುಡೆ ಎಂದು ಬೆಳಕಿಗೆ ಬಂದಿದೆ. ಹೌದು ಚಿನ್ನಯ್ಯ ತಂದ ಬುರುಡೆಯ ಎಫ್ ಎಸ್ ಎಲ್ ವರದಿ ಅಂಶ ಬಯಲಾಗಿದ್ದು FSL ಪರೀಕ್ಷೆಯಲ್ಲಿ ಸ್ಪೋಟಕವಾದ ಮಾಹಿತಿ ಬಯಲಾಗಿದೆ. ಅತ್ಯಾಚಾರ ಮಾಡಿ ಹೂತು ಹಾಕಿದ್ದೇನೆ ಅಂತ ಹೇಳಿದ್ದ ಅದು ಹೆಣ್ಣು ಮಗಳ ತಲೆ ಬುರುಡೆ ಅಂತ ಚಿನ್ನಯ ಹೇಳಿದ್ದ ಆದರೆ ಅದು ಪುರುಷನ ತಲೆ ಬುರುಡೆ ಎಂದು ತಿಳಿದುಬಂದಿದೆ. 25ರಿಂದ 30 ವರ್ಷದ ವ್ಯಕ್ತಿಯ ತಲೆ ಬುರುಡೆ ಎಂದು ವರದಿಯಲ್ಲಿ ತಿಳಿದು ಬಂದಿದೆ.
ಬೆಂಗಳೂರು : ಬೆಂಗಳೂರಲ್ಲಿ ಆಗಾಗ ನಮ್ಮ ಮೆಟ್ರೋ ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿ ಕೊಳ್ಳುವವರ ಪ್ರಕರಣಗಳು ನಡೆದಿದೆ ಇದೀಗ ಮೆಟ್ರೋ ನಿಲ್ದಾಣದಲ್ಲಿ ಸಿಬ್ಬಂದಿ ಒಬ್ಬರು ಆಯತಪ್ಪಿ ಹಳಿಗೆ ಬಿದ್ದಿರುವ ಘಟನೆ ಬೆಂಗಳೂರಿನ ರಾಗಿಗುಡ್ಡ ಮೆಟ್ರೋದಲ್ಲಿ ನಡೆದಿದೆ. ಹೌದು ರಾಗಿ ಗುಡ್ಡ ಮೆಟ್ರೋ ಸ್ಟೇಷನ್ ನಲ್ಲಿ ಮೆಟ್ರೋ ಸಿಬ್ಬಂದಿ ಒಬ್ಬರು ಹಾಗೆ ಹಳಿಯ ಸಮೀಪ ನಡೆದುಕೊಂಡು ಹೋಗುವಾಗ ಆಯತಪ್ಪಿ ಮೆಟ್ರೋ ಹಳಿಯ ಮೇಲೆ ಬೀಳುತ್ತಾರೆ ಇದನ್ನು ನೋಡಿದ ತಕ್ಷಣ ಅಲ್ಲಿಯೇ ಇದ್ದ ಪ್ರಯಾಣಿಕನೊಬ್ಬ ಸಿಬ್ಬಂದಿಯನ್ನು ಕೈಹಿಡಿದು ಮೇಲಕ್ಕೆ ಎತ್ತುತ್ತಾನೆ. ಅದೃಷ್ಟಶಾತ್ ಈ ವೇಳೆ ಮೆಟ್ರೋ ರೈಲು ಸಂಚರಿಸಿಲ್ಲ. ಸಿಬ್ಬಂದಿ ಬಿದ್ದಾಗ ಮೆಟ್ರೋ ರೈಲ್ವೆ ಏನಾದ್ರು ಬಂದಿದ್ದರೆ ಸಿಬ್ಬಂದಿ ಜೀವಕ್ಕೆ ಅಪಾಯವಿತ್ತು. ಇದೀಗ ಈ ಒಂದು ವಿಡಿಯೋ ವೈರಲಾಗಿದೆ. https://twitter.com/DarshanDevaiahB/status/1960033278666457400?t=pox86QbO9Ym7p9z24EuFdA&s=19
ಬೆಂಗಳೂರು : ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಿರುವ ವಿಚಾರವಾಗಿ ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಪ್ರತಿಕ್ರಿಯೆ ನೀಡಿದ್ದು ಬಾನು ಮುಷ್ತಾಕ್ ಅಂತವರು ದಸರಾ ಉದ್ಘಾಟನೆ ಮಾಡಿದರೆ ಸ್ವಾಗತ ಪ್ರಗತಿಪರ ಚಿಂತಕರು ಮತ್ತು ಹೋರಾಟಗಾರ್ತಿಯಾಗಿದ್ದಾರೆ. ವಿರೋಧ ಮಾಡುವ ಬಿಜೆಪಿಯವರ ಮನಸ್ಥಿತಿ ಗೊತ್ತಾಗುತ್ತದೆ ಮಹಿಳೆಯರನ್ನು ಬಿಜೆಪಿ ಅವರು ಯಾವತ್ತೂ ಒಪ್ಪುವುದಿಲ್ಲ ಪಾನಕ ಕೋಸಂಬರಿ ತಿಂದುಕೊಂಡಿರುವುದೇ ಒಳ್ಳೆಯದು ಎಂದು ಬಿಕೆ ಹರಿಪ್ರಸಾದ್ ಕಿಡಿ ಕಾರಿದ್ದಾರೆ. ಆರ್ ಎಸ್ ಎಸ್ ಗೀತೆ ಹಾಡಿದ್ದಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕ್ಷಮೆ ಕೇಳಿದ ವಿಚಾರವಾಗಿ ಡಿಸಿಎಂ ಆಗಿ ಗೀತೆ ಹೇಳಿದರೆ ತಪ್ಪಿಲ್ಲ ಪಕ್ಷದ ಅಧ್ಯಕ್ಷರಾಗಿ ಹೇಳಿದ್ದು ಗೀತೆ ಹೇಳಿದ್ದು ತಪ್ಪು ಡಿಕೆ ಶಿವಕುಮಾರ್ ನಾನು ಕಾಂಗ್ರೆಸ್ ಪಕ್ಷವನ್ನು ಕಟ್ಟಿದ್ದಲ್ಲ ಸುಮಾರು ದಶಕಗಳ ಹಿಂದೆ ಯಾರೂ ಕಟ್ಟಿದ ಪಕ್ಷ ಇದು. ತ್ರಿವರ್ಣ ಧ್ವಜದ ವಿರುದ್ಧ ವಿರುವವರು ಬಿಜೆಪಿ ಅವರು ಎಂದು ಆಕ್ರೋಶ ಹೊರಹಾಕಿದರು. ನಾನು ಕಾಂಗ್ರೆಸ್ ಕಾರ್ಯಕರ್ತನಾಗಿ ಆ ರೀತಿ ಹೇಳಬಾರದು. ಕೆ ಎನ್ ರಾಜಣ್ಣ…
ಬೆಂಗಳೂರು : ವಿಧಾನಸಭೆಯಲ್ಲಿ ಆರ್ಎಸ್ಎಸ್ ಗೀತೆ ಹಾಡಿದ ವಿಚಾರವಾಗಿ ಕಾಂಗ್ರೆಸ್ನ ಅನೇಕ ನಾಯಕರು ಡಿಕೆ ಶಿವಕುಮಾರ್ ವಿರುದ್ಧ ಪರೋಕ್ಷವಾಗಿ ಟೀಕೆ ಮಾಡಿದ್ದರು. ರೀ ವಿಚಾರವಾಗಿ ಇಂದು ಪತ್ರಿಕಾಗೋಷ್ಠಿ ನಡೆಸಿದ ಡಿಸಿಎಂ ಡಿಕೆ ಶಿವಕುಮಾರ್ ಆರ್ ಎಸ್ ಎಸ್ ಗೀತೆ ಹಾಡಿದ್ದಕ್ಕೆ ಕ್ಷಮೆಯಾಚಿಸಿದ್ದಾರೆ. ನಾನು ಹುಟ್ಟಿದ್ದೇ ಕಾಂಗ್ರೆಸ್ಸಿಗನಾಗಿ. ನಾನು ಸಾಯುವುದೂ ಕಾಂಗ್ರೆಸ್ಸಿಗನಾಗಿಯೇ. ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು. ವಿಧಾನಸಭೆಯಲ್ಲಿ ಆಚಾರ ವಿಚಾರಗಳನ್ನು ಪಾಲನೆ ಮಾಡಿಕೊಂಡು ಬಂದಿದ್ದೇನೆ. ವಿದ್ಯಾರ್ಥಿ ಸಂಘಟನೆಯಲ್ಲಿಂದಲೇ ಗುರುತಿಸಿಕೊಂಡು ಬಂದಿದ್ದೇನೆ. ಹೊಸದಾಗಿ ಕಾಂಗ್ರೆಸ್ ಸೇರಿಲ್ಲ, ಯಾರ ಪಾಠವೂ ಅಗತ್ಯವಿಲ್ಲ. ನನಗೂ ಗಾಂಧಿ ಕುಟುಂಬಕ್ಕೂ ಭಕ್ತ ಭಗವಂತನ ನಡುವಿರುವ ಸಂಬಂಧ. ನಾನು ಎಂಎ ಪೊಲೀಟಿಕಲ್ ವಿದ್ಯಾರ್ಥಿ ಎಂದರು. ರಾಜಕಾರಣಕ್ಕೆ ಬರೋದಕ್ಕಿಂತಲೂ ಮುನ್ನ ಎಲ್ಲಾ ಪಕ್ಷಗಳ ಅಧ್ಯಯನ ಮಾಡಿದ್ದೇನೆ. ಕಮ್ಯೂನಿಸಂ, ಬಿಜೆಪಿ, ಆರ್ಎಸ್ಎಸ್, ದಳ ಎಲ್ಲ ಪಕ್ಷಗಳ ಬಗ್ಗೆ ತಿಳಿದಿದ್ದೇನೆ. ಮುಸ್ಲಿಂ ಲೀಗ್ ಸಮಾವೇಶದಲ್ಲೂ ಭಾಗಿಯಾಗಿದ್ದೆ. ಅವರ ಶಿಸ್ತಿಗೆ ಬೆರೆಗಾಗಿದ್ದೆ ಎಂದು ಡಿಕೆ ಶಿವಕುಮಾರ್ ಹೇಳಿದರು. ಅಲ್ಲದೆ, ಬೇಕಾದರೆ ಕ್ಷಮೆ ಕೇಳೋಣ. ಬಿಕೆ…
ಮಂಡ್ಯ : ಇತ್ತೀಚಿಗೆ ರಾಜ್ಯದಲ್ಲಿ ಹೃದಯಾಘಾತದಿಂದ ಮೃತಪಡುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಹೃದಯಾಘಾತಕ್ಕೆ ಮತ್ತೋರ್ವ ಬಾಲಕ ಸಾವನ್ನಪ್ಪಿದ್ದಾನೆ. ಹೌದು ಹಬ್ಬದ ಸಂಭ್ರಮದಲ್ಲಿದ್ದ 17 ವರ್ಷದ ಬಾಲಕನಿಗೆ ಹೃದಯಾಘಾತವಾಗಿ ದಾರುಣವಾಗಿ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಡಿ.ಮಲ್ಲಿಗೇರೆ ಗ್ರಾಮದಲ್ಲಿ ನಡೆದಿದೆ. ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ 17 ವರ್ಷದ ವಿದ್ಯಾರ್ಥಿ ಚಿರಾಗ್, ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ನಿನ್ನೆ ಸಂಜೆ, ಹಬ್ಬದ ಸಿದ್ಧತೆಗಾಗಿ ಚಿರಾಗ್ ತನ್ನ ತಂದೆ-ತಾಯಿಯೊಂದಿಗೆ ಬಟ್ಟೆ ಖರೀದಿಗೆ ತೆರಳಿದ್ದ. ಈ ವೇಳೆ ಏಕಾಏಕಿ ಅವನಿಗೆ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾನೆ. ಕೂಡಲೇ ಕುಟುಂಬಸ್ಥರು ಆತನನ್ನು ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಿದರಾದರೂ, ಆಸ್ಪತ್ರೆಗೆ ತಲುಪುವ ಮುನ್ನವೇ ಚಿರಾಗ್ ಕೊನೆಯುಸಿರೆಳೆದಿದ್ದಾನೆ. ಈ ಘಟನೆ ಕುಟುಂಬದವರಿಗೆ ಮತ್ತು ಗ್ರಾಮಸ್ಥರಿಗೆ ಆಘಾತವನ್ನುಂಟುಮಾಡಿದೆ. ಚಿರಾಗ್ನ ಆಕಸ್ಮಿಕ ಸಾವಿನಿಂದ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ವೈದ್ಯಕೀಯ ತಪಾಸಣೆಯಲ್ಲಿ ಸಾವಿಗೆ ಹೃದಯಾಘಾತವೇ ಕಾರಣ ಎಂದು ದೃಢಪಟ್ಟಿದೆ. ಯುವ ವಯಸ್ಸಿನಲ್ಲೇ ಇಂತಹ ದುರಂತ ಸಂಭವಿಸಿದ್ದು, ಆರೋಗ್ಯದ ಕಡೆಗೆ…
ಬೆಂಗಳೂರು : ಭಾರತೀನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವನ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಜಗದೀಶ್ನನ್ನು ಕೊನೆಗೂ ಬಂಧಿಸಲಾಗಿದೆ. ದುಬೈನಿಂದ ದೆಹಲಿಗೆ ಬಂದಿಳಿದ ಜಗದೀಶ್ನನ್ನು ಬಂಧಿಸಿದ್ದು, ಬೆಂಗಳೂರಿಗೆ ಕರೆತರಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಈಗಾಗಲೇ 16 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಆದರೆ ಪ್ರಮುಖ ಆರೋಪಿ ಜಗದೀಶ್ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕಾರಣ ಬಂಧನ ಸಾಧ್ಯವಾಗಿರಲಿಲ್ಲ. ದೇಶದ ಹಲವೆಡೆ ಆತನ ಪತ್ತೆಗೆ ತೀವ್ರ ಶೋಧ ನಡೆಸಿದ್ದ ಬೆಂಗಳೂರು ಪೂರ್ವ ವಿಭಾಗದ ಪೊಲೀಸರು, ಆತನ ಇರುವಿಕೆ ಬಗ್ಗೆ ಮಾಹಿತಿ ಪಡೆಯುವ ಸಲುವಾಗಿ ಲುಕ್ ಔಟ್ ಸಕ್ಯೂರ್ಲರ್ (ಎಲ್ಓಸಿ) ಜಾರಿಗೊಳಿಸಿದ್ದರು. ಬಳಿಕ ಪ್ರಕರಣದ ತನಿಖೆಯನ್ನು ಸಿಐಡಿಯ ವಿಶೇಷ ತನಿಖಾ ತಂಡ (ಎಸ್ಐಟಿ)ದ ಹೆಗಲಿಗೆ ವಹಿಸಲಾಗಿತ್ತು. ಪ್ರಕರಣದ ಹಿನ್ನೆಲೆ ಜುಲೈ 15ರಂದು ರಾತ್ರಿ ಹಲಸೂರಿನ ಮನೆಯ ಬಳಿಯೇ ಮಾರಕಾಸ್ತ್ರಗಳಿಂದ ಹೊಡೆದು ಶಿವಪ್ರಕಾಶ್ನನ್ನು ಹತ್ಯೆಗೈಯ್ಯಲಾಗಿತ್ತು. ಕಿತ್ತಕನೂರು ಬಳಿ ಖರೀದಿಸಿದ್ದ ನಿವೇಶನವೊಂದರ ಸಂಬಂಧಿಸಿದಂತೆ ಆರೋಪಿಗಳು ಬಿಕ್ಲು ಶಿವನಿಗೆ ಪ್ರಾಣ…
ಬೆಂಗಳೂರು : ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಗುರುವಾರ ಆರ್ ಎಸ್ ಎಸ್ (RSS) ಗೀತೆಯನ್ನು ಹಾಡಿದ್ದು, ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.ಇದೆ ವಿಚಾರವಾಗಿ ವಿರೋಧ ವ್ಯಕ್ತವಾದ ಹಿನ್ನೆಲೆ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಕ್ಷಮೆಯಾಚಿಸಿದ್ದಾರೆ. ಹೌದು ಕಳೆದ ಗುರುವಾರ ವಿಧಾನಸಭೆಯಲ್ಲಿ ನಿಂತು ಸದನವನ್ನು ಉದ್ದೇಶಿಸಿ ಮಾತನಾಡುತ್ತಾ ‘ನಮಸ್ತೆ ಸದಾ ವತ್ಸಲೇ ಮಾತೃಭೂಮಿ’ ಗೀತೆ ಪಠಿಸಿದ್ದಾರೆ. ಬಿಜೆಪಿ ಶಾಸಕ ಆರ್. ಅಶೋಕ್ ಈ ಅವಘಡದ ಬಗ್ಗೆ ಕಾಂಗ್ರೆಸ್ ಸರ್ಕಾರವನ್ನು ಗುರಿಯಾಗಿಸಿಕೊಂಡು ಶಿವಕುಮಾರ್ ಅವರ ಪಾತ್ರವನ್ನು ನೇರವಾಗಿ ಪ್ರಶ್ನಿಸಿದ್ದಾರೆ ಇದಕ್ಕೆ ಪ್ರತಿಕ್ರಿಯೆಯಾಗಿ, ಉಪಮುಖ್ಯಮಂತ್ರಿ ಅವರು ವಿಧಾನಸಭೆಯಲ್ಲಿ ಆರ್ಎಸ್ಎಸ್ ಗೀತೆಯನ್ನು ಪಠಿಸುವ ಮೊದಲು ವಿರೋಧ ಪಕ್ಷವು ಹಳೆಯ ವಾದಗಳನ್ನು ಪುನರಾವರ್ತಿಸುತ್ತಿದೆ ಎಂದು ಆರೋಪಿಸಿದರು. ಈ ಘಟನೆಯ 73 ಸೆಕೆಂಡುಗಳ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಬಿಜೆಪಿ ಸದಸ್ಯರ ಸ್ಪಷ್ಟ ಪ್ರತಿಕ್ರಿಯೆಗಳ ನಡುವೆ ಶಿವಕುಮಾರ್ ಅವರ ವಾಚನವನ್ನು ತೋರಿಸುತ್ತದೆ. ಇನ್ನು ಇದೆ ವಿಚಾರವಾಗಿ ನಿನ್ನೆ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ MLC ಬಿಕೆ ಹರಿಪ್ರಸಾದ್,…
ಬೆಂಗಳೂರು : ಕೇಸರಿ ಶಾಲು ಹಾಕಿದ್ದಕ್ಕೆ ಹಲ್ಲೆ ಮಾಡಿದ್ದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಕಲಾಸಿಪಾಳ್ಯ ಪೊಲೀಸ್ರಿಂದ ಮೂವರು ಆರೋಪಿಗಳನ್ನ ಇದೀಗ ಅರೆಸ್ಟ್ ಮಾಡಲಾಗಿದೆ. ಆರೋಪಿಗಳಾದ ತಬ್ರಾಜ್, ಇಮ್ರಾನ್ ಖಾನ್ ಹಾಗೂ ಅಜೀಜ್ ಖಾನ್ ಎಂಬ ಮೂವರು ಆರೋಪಿಗಳನ್ನು ಕಲಾಸಿಪಾಳ್ಯ ಠಾಣೆ ಪಡಿಸಲು ಅರೆಸ್ಟ್ ಮಾಡಿದ್ದಾರೆ. ಮೂವರನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಆಗಸ್ಟ್ 24ರಂದು ಸುರೇಂದ್ರ ಕುಮಾರ್ ಮೇಲೆ ಮೂವರು ಆರೋಪಗಳು ಹಲ್ಲೆ ಮಾಡಿದ್ದಾರೆ ಕೇಸರಿ ಶಾಲು ಹಾಕಿದ್ದಕ್ಕೆ ಆರೋಪಿಗಳು ಹಲ್ಲೆ ನಡೆಸಿದ್ದರು. ಆಗಸ್ಟ್ 24ರ ರಾತ್ರಿ 9:30ರ ಸುಮಾರಿಗೆ ಸುರೇಂದ್ರ ಕುಮಾರ್ ಅವರ ಮೇಲೆ ಹಲ್ಲೆ ಮಾಡಿದ್ದಾರೆ. ಆ.24 ರ ರಾತ್ರಿ 9:30ರ ಸುಮಾರಿಗೆ ರಾಯಲ್ ಟ್ರಾವೆಲ್ಸ್ ಕಂಪನಿಯಲ್ಲಿ ಹಲ್ಲೆಗೊಳಗಾದ ಸ್ಲಿಂದರ್ ಕುಮಾರ್ ಮತ್ತು ಹರಿಕೃಷ್ಣ ಕೆಲಸ ಮಾಡುತ್ತಿದ್ದರು. ಈ ವೇಳೆ ಆರೋಪಿಗಳು ಇವರ ಬಳಿಗೆ ಬಂದು, ಸ್ವಿಂದರ್ ಕುಮಾರ್ ಅವರನ್ನು ನಿಲ್ಲಿಸಿಕೊಂಡು “ನೀನು ಯಾಕೆ ಕೇಸರಿ ಟಾವೆಲ್ ಹಾಕಿದ್ದೀಯಾ ಎಂದು ಅವಾಚ್ಯ ಶಬ್ದಗಳಿಂದ ಬೈದು ತಳ್ಳಿದ್ದಾರೆ. ಇದನ್ನು,…