Author: kannadanewsnow05

ಬೆಳಗಾವಿ : ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ಪತಿಯೊಬ್ಬ ತನ್ನ ಪತ್ನಿಗೆ ಚಾಕು ಇರಿದು ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಳಗಾವಿಯಲ್ಲಿ ನಡೆದ ಈ ಘಟನೆ ಅತ್ಯಂತ ದುರದೃಷ್ಟಕರ ಮತ್ತು ಆಘಾತಕಾರಿಯಾಗಿದೆ. ವೈಯಕ್ತಿಕ ಕಲಹಗಳು ಇಂತಹ ತೀವ್ರ ಸ್ವರೂಪದ ಹಿಂಸಾಚಾರಕ್ಕೆ ತಿರುಗುವುದು ಸಮಾಜಕ್ಕೆ ಕಳವಳಕಾರಿ ಸಂಗತಿ. ರಾಮದುರ್ಗ ಪಟ್ಟಣದ ನಿವಾಸಿ ಉಮೇಶ ಬಡಿಗೇರ (34) ಮೃತ ದುರ್ದೈವಿ. ಕ್ಷುಲ್ಲಕ ಕಾರಣಕ್ಕೆ ಪತ್ನಿ ಜೊತೆ ಉಮೇಶ ಸಾರಾಯಿ ಕುಡಿದು ಬಂದು ಜಗಳ ಮಾಡುತ್ತಿದ್ದ. ಮೊನ್ನೆ ಮತ್ತೆ ಜಗಳ ಆಗಿದೆ. ಈ ವೇಳೆ ಜಗಳ ವಿಕೋಪಕ್ಕೆ ಹೋಗಿದ್ದು, ಪತ್ನಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾನೆ. ಬಳಿಕ ತಾನು ಕೂಡ ಬಾವಿಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಸ್ಥಳೀಯರು ಹೇಳಿದ್ದಾರೆ. ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ಉಮೇಶನ ಪತ್ನಿಯನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಘಟನೆಯ ಪ್ರಮುಖ ಮುಖ್ಯಾಂಶಗಳು ಇಲ್ಲಿವೆ: * ಘಟನೆ: ಬೆಳಗಾವಿ ಜಿಲ್ಲೆಯಲ್ಲಿ ಕೌಟುಂಬಿಕ…

Read More

ದಾವಣಗೆರೆ : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು ಗ್ರಾಮದಲ್ಲಿ 15 ವರ್ಷದ ಬಾಲಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಗೋಗುದ್ದು ಗ್ರಾಮದ ಚಮನ್‌ಸಾಬ್ ಮತ್ತು ಫಾತಿಮಾ ದಂಪತಿಯ ಪುತ್ರ ಮುಜಾಮಿಲ್ (15) ಮೃತ ಬಾಲಕ. ಆತ ರಾಜೀವ್ ಗಾಂಧಿ ವಸತಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಶಾಲೆಗೆ ರಜೆ ಹಿನ್ನೆಲೆ ಮನೆಗೆ ಬಂದಿದ್ದ ಮುಜಾಮಿಲ್ ಇಂದು ಮುಂಜಾನೆ ಬಹಿರ್ದೆಸೆಗೆ ತೆರಳಿದ್ದ ವೇಳೆ ಅಸ್ವಸ್ಥನಾಗಿ ಕುಸಿದುಬಿದ್ದಿದ್ದಾನೆ. ವಿಷಯ ತಿಳಿದ ಕುಟುಂಬಸ್ಥರು ತಕ್ಷಣವೇ ಸಮೀಪದ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಿದರೂ, ಮಾರ್ಗ ಮಧ್ಯೆಯೇ ಬಾಲಕ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಪ್ರಾಥಮಿಕ ಮಾಹಿತಿಯಂತೆ, ಹೃದಯಾಘಾತವೇ ಸಾವಿಗೆ ಕಾರಣ ಎನ್ನಲಾಗಿದೆ.

Read More

ಬೆಂಗಳೂರು : ಸಚಿವ ಸಂಪುಟ ಪುನಾರಚನಿಗೆ 31 ಶಾಸಕರು ಕಾಂಗ್ರೆಸ್ ಹೈಕಮಾಂಡ್ಗೆ ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದು, ಎಲ್ಲ ಶಾಸಕರಿಗೂ ಮಂತ್ರಿ ಆಗುವ ಆಸೆ ಇರುತ್ತೆ ಅಲ್ವಾ. ಶಾಸಕರು ಪತ್ರ ಬರೆದು ಕೇಳಿರುವುದರಲ್ಲಿ ತಪ್ಪೇನಿದೆ? ಎಂದು ತಿಳಿಸಿದರು. ಪತ್ರಿಕೆಯಲ್ಲಿ ಈ ವಿಚಾರ ನೋಡಿದ್ದೇನೆ ಅಷ್ಟೇ, ನನಗೆ ಇನ್ನು ಪತ್ರ ತಲುಪಿಲ್ಲ. ಎಲ್ಲ ಶಾಸಕರಿಗೂ ಮಂತ್ರಿ ಆಗಬೇಕು ಎಂಬ ಆಸೆ ಇರುತ್ತೆ ಮೋದಿ ಶಾಸಕರಾಗಿ ಆಯ್ಕೆ ಆಗದೆ ಸಿಎಂ ಆಗೋದ್ರು ಅಲ್ವಾ. ಅದಕ್ಕಾಗಿ ಎಲ್ಲರಿಗೂ ಸಚಿವರಾಗಬೇಕು ಎಂಬ ಆಸೆ ಇರುತ್ತದೆ. ಮುಖ್ಯಮಂತ್ರಿ ಆಗದಿದ್ದರೂ ಕೆಲವರು ಮಂತ್ರಿ ಆಗಿದ್ದವರು ಇದ್ದಾರೆ ಶಾಸಕರು ಆಗದೆ ಇದ್ದರೂ ಸಚಿವರಾದವರು ಇದ್ದಾರೆ. ಅದಕ್ಕೆ ಶಾಸಕರು ಸಂಪುಟ ಪುನಾರ ರಚನೆಗೆ ಬೇಡಿಕೆ ಇಟ್ಟಿದ್ದಾರೆ. ಪಕ್ಷದ ಶಾಸಕರು ಪತ್ರ ಬರೆದು ಕೇಳಿರುವುದು ತಪ್ಪೇನಿದೆ? ಹೊಸ ಪೀಳಿಗೆ ಬೆಳೆಯಬೇಕು ಅಲ್ವಾ? ನಾನು ಮೊದಲ ಬಾರಿ ಮಂತ್ರಿಯಾಗಿ 36 ವರ್ಷಗಳು ಆಯ್ತು ಹೊಸ ಜನರೇಷನ್ ಬರಬೇಕು…

Read More

ನವದೆಹಲಿ : ದೆಹಲಿಯಲ್ಲಿ ಘೋರವಾದ ದುರಂತ ವೊಂದು ಸಂಭವಿಸಿದ್ದು ಉತ್ತಮ ನಗರದಲ್ಲಿ ಇರುವ ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಿನ್ನತೆಯಿಂದ ಬಳಲುತ್ತಿದ್ದ ಮಹಾರಾಜ ಸಿಂಗ್ (45) ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಶರಣಾದ ಮಹಾರಾಜ ಸಿಂಗ್ ರಾಜಸ್ಥಾನದ ಕರೋಲಿ ಜಿಲ್ಲೆ ನಿವಾಸಿ ಎಂದು ತಿಳಿದುಬಂದಿದೆ. ಆರ್‌ಎಂಎಲ್ ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ಮಹಾರಾಜ ಸಿಂಗ್ ಬಂದಿದ್ದರು. ಈ ವೇಳೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಾರಾಜ ಸಿಂಗ್ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ದೆಹಲಿ ಮೆಟ್ರೋ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರು ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿಜಕ್ಕೂ ದುರದೃಷ್ಟಕರ ಮತ್ತು ನೋವಿನ ಸಂಗತಿ. ಇಂತಹ ಘಟನೆಗಳು ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಮೇಲೆ ಮಾತ್ರವಲ್ಲದೆ, ಪ್ರತ್ಯಕ್ಷದರ್ಶಿಗಳು ಮತ್ತು ಮೆಟ್ರೋ ಸಿಬ್ಬಂದಿಯ ಮೇಲೂ ಮಾನಸಿಕವಾಗಿ ಕೆಟ್ಟ ಪರಿಣಾಮ ಬೀರುತ್ತವೆ. ಸಾಮಾನ್ಯವಾಗಿ ಇಂತಹ ಘಟನೆಗಳು ನಡೆದಾಗ ದೆಹಲಿ ಮೆಟ್ರೋ ರೈಲ್ವೆ ಕಾರ್ಪೊರೇಷನ್…

Read More

ಚಿಕ್ಕಮಗಳೂರು : ಬನ್ನೇರುಘಟ್ಟ ಅಥವಾ ಮಾನವ-ವನ್ಯಜೀವಿ ಸಂಘರ್ಷ ನಡೆಯುತ್ತಿರುವ ಪ್ರದೇಶಗಳಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಅಧಿಕಾರಿಗಳಿಗೆ ಈ ಮಹತ್ವದ ಸೂಚನೆ ನೀಡಿದ್ದಾರೆ. ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ ಮತ್ತು ಕಾರ್ಮಿಕ ಸಂಘಟನೆ, ಸ್ಥಳೀಯ ಮುಖಂಡರಿಗೆ ಮಾಹಿತಿ ರವಾನಿಸಲು ಕ್ರಮ ವಹಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಚಿಕ್ಕಮಗಳೂರು ತಾಲೂಕು ಹುಣಸೆಹಳ್ಳಿ ಬಳಿಯ ತೋಟದಲ್ಲಿ ಕಳೆದ 7 ದಿನಗಳ ಅಂತರದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಉನ್ನತಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ತುರ್ತು ಸಭೆ ನಡೆಸಿದ ಸಚಿವರು, ವನ್ಯಜೀವಿ – ಮಾನವ ಸಂಘರ್ಷ ಇರುವ ಪ್ರದೇಶಗಳ ಸ್ಥಳೀಯ ಮುಖಂಡರ, ಗ್ರಾಮಗಳ ಜಮೀನು ಮಾಲೀಕರ ವಾಟ್ಸ್ ಅಪ್ ಗ್ರೂಪ್ ಮಾಡಿ ಮಾಹಿತಿ ಪ್ರಸಾರ ಮಾಡುವಂತೆ ಸೂಚಿಸಿದರು. ಮಾನವ ಜೀವ ಅತ್ಯಮೂಲ್ಯವಾದದ್ದು, ಒಂದು ಜೀವಹಾನಿ ಆದ ಬಳಿಕ ಮತ್ತೊಂದು…

Read More

ಶಿವಮೊಗ್ಗ : ಶಿವಮೊಗ್ಗದಲ್ಲಿ ಅನ್ಯಕೋಮಿನ ಅಪ್ರಾಪ್ತ ಬಾಲಕರು ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಸಾಂಕೇತ್ ನನ್ನು ಭೀಕರವಾಗಿ ಹಲ್ಲೆ ಮಾಡಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ರಾಜ್ಯ ಸರ್ಕಾರದಿಂದ 10 ಲಕ್ಷ ಹಾಗು ಶಿಕ್ಷಣ ಇಲಾಖೆಯಿಂದ 5 ಲಕ್ಷ ಪರಿಹಾರ ನೀಡಲಾಗುತ್ತೆ ಎಂದು ಶಿವಮೊಗ್ಗ ಡಿಸಿ ಪ್ರಭುಲಿಂಗ್ ಘೋಷಣೆ ಮಾಡಿದ್ದಾರೆ. ಹೌದು ನಿನ್ನೆ ರಾತ್ರಿ ಸಾಂಕೇತ ಸ್ನೇಹಿತನ ಜೊತೆಗೆ ಅನ್ಯಕೋಮಿನ ಅಪ್ರಾಪ್ತ ಬಾಲಕರು ಜಗಳ ಮಾಡುತ್ತಿದ್ದರು ಈ ವೇಳೆ ಮಧ್ಯ ಪ್ರವೇಶಿಸಿ ಸಂಕೇತನಿಗೆ ಆ ಅಪ್ರಪ್ತ ಬಾಲಕರು ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ಇದೀಗ ಘಟನೆ ಸಂಬಂಧ ಪೊಲೀಸರು ಐವರು ಅಪ್ರಾಪ್ತ ಬಾಲಕರನ್ನು ಅರೆಸ್ಟ್ ಮಾಡಿದ್ದಾರೆ. ಮೃತನ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 10 ಲಕ್ಷ ರೂಪಾಯಿ ಹಾಗೂ ಶಿಕ್ಷಣ ಇಲಾಖೆಯಿಂದ 5 ಲಕ್ಷ ರೂಪಾಯಿ ಪರಿಹಾರ ಸೇರಿ ಒಟ್ಟು 15 ಲಕ್ಷ ಪರಿಹಾರ ನೀಡಲಾಗಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಅವರು ಘೋಷಣೆ ಮಾಡಿದ್ದಾರೆ. ಘಟನೆಯ ಹಿನ್ನೆಲೆ…

Read More

ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ಭುಗಿಲೆದ್ದಿದ್ದು, ಸಾವಿರಾರು ವಿದ್ಯಾರ್ಥಿಗಳು ಮತ್ತು ಯುವಕರು ಉದ್ಯೋಗ ನೀಡುವಂತೆ ಆಗ್ರಹಿಸಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಈ ಬೆನ್ನಲ್ಲೇ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಟು ಶಬ್ದಗಳಿಂದ ವಾಗ್ದಾಳಿ ನಡೆಸಿದ್ದಾರೆ. ಅಧಿಕಾರದ ಕಚ್ಚಾಟದಲ್ಲಿ ಯುವಕರ ಭವಿಷ್ಯ ಬಲಿ : ಮಾಧ್ಯಮಗಳ ಜೊತೆಗೆ ಮಾತನಾಡಿದ ಮಾತನಾಡಿದ ಆರ್. ಅಶೋಕ್, ಕಳೆದ ಎರಡೂವರೆ ವರ್ಷಗಳಲ್ಲಿ ರಾಜ್ಯ ಸರ್ಕಾರ ಒಬ್ಬನೇ ಒಬ್ಬ ನಿರುದ್ಯೋಗಿಗೂ ಕೆಲಸ ನೀಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇವಲ ಅಧಿಕಾರದ ಕುರ್ಚಿಗಾಗಿ ಕಚ್ಚಾಟ ನಡೆಸುತ್ತಿದ್ದಾರೆ. ಇವರ ರಾಜಕೀಯ ಜಿದ್ದಾಜಿದ್ದಿಯಲ್ಲಿ ರಾಜ್ಯದ ಯುವಕರ ಭವಿಷ್ಯ ಬಲಿಯಾಗುತ್ತಿದೆ ಎಂದು ಕಿಡಿಕಾರಿದರು. ರಾಜ್ಯ ಸರ್ಕಾರ ದಿವಾಳಿಯಾಗಿದೆ: ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, “ರಾಜ್ಯ ಸರ್ಕಾರ ಸಂಪೂರ್ಣವಾಗಿ ದಿವಾಳಿಯಾಗಿದೆ. ಸರ್ಕಾರಿ ನೌಕರರಿಗೆ ಸಂಬಳ ನೀಡಲು ಸಹ ಖಜಾನೆಯಲ್ಲಿ ಹಣವಿಲ್ಲದಂತಾಗಿದೆ. ಇನ್ನು ಹೊಸ…

Read More

ಧಾರವಾಡ : ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಇಂದು ಧಾರವಾಡದಲ್ಲಿ ಉದ್ಯೋಗ ಆಕಾಂಕ್ಷಿಗಳು ವಿದ್ಯಾರ್ಥಿಗಳು ಬೃಹತ್ ಸಂಖ್ಯೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು ಇದೀಗ ಈ ಒಂದು ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೊಲೀಸರ ಮಧ್ಯ ತೀವ್ರ ವಾಗ್ವಾದ ನಡೆಯಿತು. ಈ ವೇಳೆ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕಾಂತಕುಮಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶ್ರೀನಗರದಿಂದ ವಿದ್ಯಾರ್ಥಿಗಳು ಓಡೋಡಿ ಬಂದಿದ್ದಾರೆ. ಸರ್ವಮಂಗಳ ಸರ್ಕಲ್ ನಲ್ಲಿ ವಿದ್ಯಾರ್ಥಿಗಳು ಜಮಾವಾಣಿಯಾಗಿದ್ದಾರೆ. ಪ್ರತಿಭಟನೆಯಲ್ಲಿ ಸ್ಥಳೀಯ ಬಿಜೆಪಿ ನಾಯಕರು ಸಹ ಭಾಗಿಯಾಗಿದ್ದಾರೆ. ಪೊಲೀಸರು ಪ್ರತಿಭಟನೆ ನಿಯಂತ್ರಿಸಲು ಹರಸಾಹಸ ಪಡುತ್ತಿದ್ದು, ವಿದ್ಯಾರ್ಥಿಗಳು ಜುಬ್ಳಿ ಸರ್ಕಲ್ ವರೆಗೆ ಹೋಗಲು ಪಟ್ಟು ಹಿಡಿದಿದ್ದಾರೆ.ಜಯನಗರ ಸರ್ಕಲ್ ನಲ್ಲಿ ವಿದ್ಯಾರ್ಥಿಗಳು ಬಿಗಿಪಟ್ಟು ಹಿಡಿದಿದ್ದಾರೆ ಸ್ವಲ್ಪ ತಡೆದು ಹೋಗೋಣ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಆದರೆ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಜಗ್ಗದೆ ಕೂಡಲೇ ಹೋಗಬೇಕು ಎಂದು ಬಿಗಿ ಪಟ್ಟು ಹಿಡಿದಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರತಿಭಟನ ನಿರತ ವಿದ್ಯಾರ್ಥಿಗಳು ನಮಗೆ…

Read More

ಧಾರವಾಡ : ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಆ ಗ್ರಹಿಸಿ ಇಂದು ಧಾರವಾಡದಲ್ಲಿ ಉದ್ಯೋಗ ಆಕಾಂಕ್ಷಿಗಳು ವಿದ್ಯಾರ್ಥಿಗಳು ಬೃಹತ್ ಸಂಖ್ಯೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು ಇದೀಗ ಈ ಒಂದು ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೊಲೀಸರ ಮಧ್ಯ ತೀವ್ರ ವಾಗ್ವಾದ ನಡೆಯಿತು ಈ ವೇಳೆ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕಾಂತಕುಮಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಶ್ರೀನಗರದಿಂದ ವಿದ್ಯಾರ್ಥಿಗಳು ಓಡೋಡಿ ಬಂದಿದ್ದಾರೆ ಸರ್ವಮಂಗಳ ಸರ್ಕಲ್ ನಲ್ಲಿ ವಿದ್ಯಾರ್ಥಿಗಳು ಜಮಾವಾಣಿಯಾಗಿದ್ದಾರೆ. ಪ್ರತಿಭಟನೆಯಲ್ಲಿ ಸ್ಥಳೀಯ ಬಿಜೆಪಿ ನಾಯಕರು ಸಹ ಭಾಗಿಯಾಗಿದ್ದಾರೆ. ಪೊಲೀಸರು ಪ್ರತಿಭಟನೆ ನಿಯಂತ್ರಿಸಲು ಹರಸಾಹಸ ಪಡುತ್ತಿದ್ದು, ವಿದ್ಯಾರ್ಥಿಗಳು ಜುಬ್ಳಿ ಸರ್ಕಲ್ ವರೆಗೆ ಹೋಗಲು ಪಟ್ಟು ಹಿಡಿದಿದ್ದಾರೆ.ಜಯನಗರ ಸರ್ಕಲ್ ನಲ್ಲಿ ವಿದ್ಯಾರ್ಥಿಗಳು ಬಿಗಿಪಟ್ಟು ಹಿಡಿದಿದ್ದಾರೆ ಸ್ವಲ್ಪ ತಡೆದು ಹೋಗೋಣ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಆದರೆ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಜಗ್ಗದೆ ಕೂಡಲೇ ಹೋಗಬೇಕು ಎಂದು ಬಿಗಿ ಪಟ್ಟು ಹಿಡಿದಿದ್ದಾರೆ.

Read More

ಬೆಂಗಳೂರು : ಶಿವಮೊಗ್ಗದಲ್ಲಿ 10ನೇ ತರಗತಿ ವಿದ್ಯಾರ್ಥಿ ನನ್ನು ಅನ್ಯಕೋಮಿನ ಅಪ್ರಾಪ್ತ ಬಾಲಕರು ಭೀಕರವಾಗಿ ಹೊಡೆದು ಕೊಲೆ ಮಾಡಿದ್ದಾರೆ. ಈ ಒಂದು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 16 ರಿಂದ 17 ವಯೋಮಿತಿ ಹುಡುಗರು ಹೊಡೆದಾಡಿಕೊಂಡಿದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು. ಶಿವಮೊಗ್ಗ: ನಗರದಲ್ಲಿ 10ನೇ ತರಗತಿ ವಿದ್ಯಾರ್ಥಿ ಸಂಕೇತ್ ಕೊಲೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಈ ಬೆನ್ನಲ್ಲೇ ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಜಿ. ಪರಮೇಶ್ವರ್, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಘಟನೆಯ ಹಿನ್ನೆಲೆ ಏನು? ಶಿವಮೊಗ್ಗದಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ ವಿಕೋಪಕ್ಕೆ ಹೋಗಿ, ವಿದ್ಯಾರ್ಥಿ ಸಂಕೇತ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ಈ ಘಟನೆಯು ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಕಾನೂನು ಸುವ್ಯವಸ್ಥೆಯ ಬಗ್ಗೆ ಪ್ರಶ್ನೆಗಳು ಎದ್ದಿದ್ದವು. ಗೃಹ ಸಚಿವರು ಹೇಳಿದ್ದೇನು? (ಪ್ರಮುಖ ಅಂಶಗಳು): ಪೊಲೀಸ್ ವರದಿಯನ್ನು ಆಧರಿಸಿ ಗೃಹ ಸಚಿವರು ಈ ಕೆಳಗಿನ ಪ್ರಮುಖ ಅಂಶಗಳನ್ನು…

Read More