Subscribe to Updates
Get the latest creative news from FooBar about art, design and business.
Author: kannadanewsnow05
ದಾವಣಗೆರೆ : ಪತಿ ಕೊಲೆಗೈದು ಪ್ರಿಯಕರನ ಜೊತೆ ಸಂಸಾರ ಮಾಡುತ್ತಿದ್ದ ಪತ್ನಿಯನ್ನು ಅರೆಸ್ಟ್ ಮಾಡಲಾಗಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್ರಿಂದ ಪತ್ನಿ ಸೇರಿ ಮೂವರನ್ನು ಬಂಧಿಸಲಾಗಿದೆ. ಕೇರಳದಲ್ಲಿ ಮೂವರು ಆರೋಪಿಗಳನ್ನು ಚನ್ನಗಿರಿ ಠಾಣೆ ಪೋಲಿಸರು ಇದೀಗ ಬಂಧಿಸಿದ್ದಾರೆ.ಪತಿ ಕೊಲೆಗೈದು, 18 ತಿಂಗಳು ಬಳಿಕ ನಿಂಗಪ್ಪ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪತ್ನಿ ಲಕ್ಷ್ಮಿ (38) ಪ್ರಿಯಕರ ತಿಪ್ಪೇಶ ನಾಯಕ (42) ಮತ್ತು ಕೊಲೆಗೆ ಸಹಾಯ ಮಾಡಿದ ಸಂತೋಷ (38) ಎನ್ನುವ ಆರೋಪಿಗಳನ್ನು ಇದೀಗ ಚನ್ನಗಿರಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಚೆನ್ನಗಿರಿ ತಾಲೂಕಿನ ಅಣಾಪುರ ಗ್ರಾಮದ ನಿವಾಸಿಯಾದ ಆರೋಪಿ ಲಕ್ಷ್ಮಿ, ಗ್ರಾಮದ ನಿಂಗಪ್ಪನ ಜೊತೆಗೆ ಕಳೆದ 9 ವರ್ಷಗಳ ಹಿಂದೆ ಮದುವೆಯಾಗಿತ್ತು. ನಿಂಗಪ್ಪನ ಜೊತೆಗೆ ವಿವಾಹವಾದ ಬಳಿಕ ಲಕ್ಷ್ಮಿಗೆ ಮಕ್ಕಳಾಗಿರಲಿಲ್ಲ. ಶೃಂಗಾರ ಬಾಗ ತಂಡ ನಿವಾಸಿ ತಿಪ್ಪೇಶ ಜೊತೆಗೆ ಲಕ್ಷ್ಮಿ ಅನೈತಿಕ ಸಂಬಂಧ ಹೊಂದಿದ್ದಳು. ಪತ್ನಿ ಗರ್ಭಿಣಿಯಾಗಿದ್ದಕ್ಕೆ ಪತಿ ನಿಂಗಪ್ಪ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿದ್ದ. ಈ ಕಾರಣಕ್ಕೆ ನಿಂಗಪ್ಪ ಪತ್ನಿ ಲಕ್ಷ್ಮಿ…
ಬೆಂಗಳೂರು : ಬೆಂಗಳೂರಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಇದರ ಮಧ್ಯ ಬಿಬಿಎಂಪಿ ಅವುಗಳಿಗೆ ಚಿಕನ್ ಬಿರಿಯಾನಿ ನೀಡಲು ಮುಂದಾಗಿದೆ. ಇದಕ್ಕೆ ಸಾರ್ವಜನಿಕರು ಆಕ್ರೋಶ ಹೊರಹಕಿದ್ದಾರೆ. ನಿನ್ನೆ ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜುಲೈ 28 ರಂದು ಬೀದಿ ನಾಯಿಗಳು ಕಚ್ಚಿ ವೃದ್ಧ ಸೀತಪ್ಪ ಎಂಬುವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಬೀದಿ ನಾಯಿ ದಾಳಿ ದುರ್ಘಟನೆಯನ್ನ ಗಂಭೀರವಾಗಿ ಪರಿಗಣಿಸಿರುವ ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್ ಅವರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜೊತೆಗೆ ಎಸ್ಪಿ ವಂಶಿಕೃಷ್ಣ ಕೋನಾ ನೇತೃತ್ವದ ತಂಡವು ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖಾ ವರದಿಯನ್ನ ನಾಲ್ಕು ದಿನದೊಳಗೆ ನೀಡುವಂತೆ ಲೋಕಾಯುಕ್ತರು ನಿರ್ದೇಶಿಸಿದ್ದಾರೆ. ದುರ್ಘಟನೆ ಸಂಬಂಧ ಬಿಬಿಎಂಪಿ ಯಲಹಂಕ ವಲಯದ ಜಂಟಿ ಆಯುಕ್ತ, ಪಶುಸಂಗೋಪನೆ ವಿಭಾಗದ ಜಂಟಿ ನಿರ್ದೇಶಕರು ಹಾಗೂ ಆರೋಗ್ಯಾಧಿಕಾರಿ ಒಳಗೊಂಡಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಲೋಕಾಯುಕ್ತರು ವಿಚಾರಣೆಗೆ ಬರುವಂತೆ ನೋಟಿಸ್ ಜಾರಿ ಮಾಡಿದ್ದರು. ಇದರಂತೆ ಎಲ್ಲಾ ಅಧಿಕಾರಿಗಳು ಬುಧವಾರ ವಿಚಾರಣೆ ಹಾಜರಾಗಿ ಘಟನೆ ಬಗ್ಗೆ ಹಾಗೂ…
ದಾವಣಗೆರೆ : ದಾವಣಗೆರೆಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಮೂವರು ಮಕ್ಕಳು ಸೇರಿ ಒಟ್ಟು 5 ಜನರ ಮೇಲೆ ಬೀದಿ ನಾಯಿಯೊಂದು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಚನ್ನಗಿರಿ ತಾಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಸ್ನೇಹಾ (8), ಮದನ್ ಬೈರವ್ (2), ಚಂದ್ರಿಕಾ (3), ಸುಮಾ(30) ಮತ್ತು ರುದ್ರಮ್ಮ (65) ಬೀದಿ ನಾಯಿ ದಾಳಿಯಿಂದ ಗಾಯಗೊಂಡವರು. ಬುಧವಾರ ಸಂಜೆ ಘಟನೆ ನಡೆದಿದೆ. ಮನೆ ಅಂಗಳದಲ್ಲಿ ಆಟ ಆಡುತ್ತಿದ್ದ ಮೂವರು ಮಕ್ಕಳ ಮಕ್ಕಳ ಮೇಲೆ ಬೀದಿ ನಾಯಿ ದಾಳಿ ನಡೆಸಿದೆ. ಬಳಿಕ ಮನೆ ಬಳಿ ಕೆಲಸ ಮಾಡುತ್ತಿದ್ದ ಇಬ್ಬರು ಮಹಿಳೆಯರನ್ನು ಕಚ್ಚಿ ಗಾಯಗೊಳಿಸಿದೆ. ಗಾಯಾಳುಗಳಿಗೆ ಬಸವಾಪಟ್ಟಣ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ದಾವಣಗೆರೆ ಜಿಲ್ಲಾ ಸಿಜೆ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ಓರ್ವ ಬಾಲಕಿಗೆ ಹೆಚ್ಚು ಗಾಯಗಳಾಗಿವೆ. ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ.
ಬೆಂಗಳೂರು : ಮನೆಯ ಶೌಚ ಗುಂಡಿ ಸ್ವಚ್ಛಗೊಳಿಸಲು ಪೌರಕಾರ್ಮಿಕರನ್ನು ಬಳಕೆ ಮಾಡಿದ್ದಾರೆ ಈ ಹಿನ್ನೆಲೆಯಲ್ಲಿ ಮನೆಯ ಮಾಲೀಕ ಶ್ರೀನಿವಾಸ ಸೇರಿ ಐವರ ವಿರುದ್ಧ ಇದೀಗ FIR ದಾಖಲು ಮಾಡಲಾಗಿದೆ. ಮಾಗಡಿ ತಾಲೂಕಿನ ಬೀಚನಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಬಿಜಿನ ಹಳ್ಳಿಯಲ್ಲಿ ಪೌರಕಾರ್ಮಿಕರನ್ನು ಮನೆಯ ಶೌಚ ಗುಂಡಿ ಸ್ವಚ್ಛಗೊಳಿಸಲು ಪೌರ ಕಾರ್ಮಿಕರನ್ನು ಬಳಸಿಕೊಂಡಿದ್ದಾರೆ. ಕುದೂರು ಠಾಣೆಯಲ್ಲಿ ಮನೆಯ ಮಾಲೀಕ ಶ್ರೀನಿವಾಸ್, ಪತ್ನಿ ವಿಜಯಲಕ್ಷ್ಮಿ, ಪುತ್ರರಾದ ಪ್ರದೀಪ್, ಕೃಷ್ಣಮೂರ್ತಿ, ಹಾಗೂ ವಿಜಯ್ ಕುಮಾರ್ ವಿರುದ್ಧ ಕೇಸ್ ದಾಖಲಾಗಿದೆ. ಯಂತ್ರದ ಬದಲು ಪೌರಕಾರ್ಮಿಕರಿಂದ ಶೌಚ ಗೊಂಡಿ ಸ್ವಚ್ಛಗೊಳಿಸಿದ್ದಾರೆ ಯೋಗೇಶ್ ಪ್ರವೀಣ್ ಮತ್ತು ನರಸಿಂಹಮೂರ್ತಿ ಎಂಬ ಪೌರಕಾರ್ಮಿಕರ ರನ್ನು ಬಳಕೆ ಮಾಡಿದ್ದಾರೆ ಹಾಗಾಗಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ದೂರು ಆಧರಿಸಿ FIR ದಾಖಲಿಸಲಾಗಿದೆ.
ಕೂದಲು ಬೆಳವಣಿಗೆ ಪ್ಯಾಕ್ ನಿಮ್ಮ ದೇಹದಲ್ಲಿ ಸಾಕಷ್ಟು ಕಬ್ಬಿಣ ಇಲ್ಲದಿದ್ದರೂ, ನಿಮ್ಮ ಕೂದಲು ಬೇರುಗಳಲ್ಲಿ ಉದುರುತ್ತದೆ. ನೀವು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹೋಗಿ ತಲೆ ಸ್ನಾನ ಮಾಡಲು ಬೇರೆ ಬೇರೆ ನೀರನ್ನು ಬಳಸಿದರೂ, ಬೇರುಗಳಲ್ಲಿ ಕೂದಲು ಉದುರುವ ಸಾಧ್ಯತೆಗಳಿವೆ. ಕೂದಲು ಉದುರುವಿಕೆಗೆ ಇನ್ನೂ ಹಲವು ಕಾರಣಗಳಿರಬಹುದು. ನಿಮ್ಮ ಕೂದಲಿನೊಳಗೆ ನಿಮ್ಮ ಬೆರಳುಗಳನ್ನು ಸೇರಿಸಿ ಮತ್ತು ಅದನ್ನು ಎಳೆಯಿರಿ, ಬೇರುಗಳಲ್ಲಿ ಬಹಳಷ್ಟು ಕೂದಲು ಹೊರಬಂದರೆ, ನೀವು ಗಂಭೀರ ಹಂತದಲ್ಲಿದ್ದೀರಿ ಮತ್ತು ನಿಮಗೆ ತಕ್ಷಣದ ಚಿಕಿತ್ಸೆಯ ಅಗತ್ಯವಿದೆ ಎಂದರ್ಥ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ…
ಬೆಂಗಳೂರು : ದರ್ಶನ್ ಫ್ಯಾನ್ಸ್ ಗಳಿಂದ ನಟ ಪ್ರಥಮ್ ಗೆ ಕೊಲೆ ಬೆದರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೂರುದಾರ ನಟ ಪ್ರಥಮ್ ಮತ್ತು ತೋಟದ ಮಾಲೀಕ ಮಹೇಶ್ ಗೆ ಇದೀಗ ಪೊಲೀಸರು ನೋಟಿಸ್ ನೀಡಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಂತರ ಪೊಲೀಸ್ ಠಾಣೆ ಪೊಲೀಸರು ಇಬ್ಬರಿಗೂ ನೋಟಿಸ್ ನೀಡಿದ್ದು, ಇಂದು ವಿಚಾರಣೆಗೆ ಹಾಜರಾಗುವಂತೆ ಪ್ರಥಮ್ ಮತ್ತು ಮಹೇಶ್ ಗೆ ನೋಟಿಸ್ ನೀಡಲಾಗಿದೆ. ಪ್ರಕರಣ ಸಂಬಂಧ ಸಾಕ್ಷಿಗಳಿಂದ ಮಾಹಿತಿ ಪಡೆಯಲು ಪೊಲೀಸರು ಪ್ರಥಮ್ ಹಾಗೂ ಮಹೇಶ್ ಗೆ ನೋಟಿಸ್ ನೀಡಿದ್ದಾರೆ ಈ ಪ್ರಕರಣದ ಕುರಿತು ಇನ್ಸ್ಪೆಕ್ಟರ್ ಸಾಧಿಕ್ ಪಾಷಾ ಇಬ್ಬರನ್ನು ಕರೆಸಿ ವಿಚಾರಣೆ ನಡೆಸಲಿದ್ದಾರೆ ಇಬ್ಬರನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಲಿದ್ದಾರೆ. ಜುಲೈ 22ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರೇಣುಕಾ ಎಲ್ಲಮ್ಮ ದೇವಸ್ಥಾನದ ಬಳಿ ನಟ ಪ್ರಥಮ್ ಗೆ ಬೇಕರಿ ರಘು ಹಲ್ಲೆಗೆ ಯತ್ನಿಸಿ ಕೊಲೆ ಬೆದರಿಕೆ ಹಾಕಿದ್ದ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.
ಕಲಬುರ್ಗಿ : ಕಳೆದ ಕೆಲವು ದಿನಗಳ ಹಿಂದೆ ಕೊಪ್ಪಳದಲ್ಲಿ ಗೊಬ್ಬರ ಸಿಗದೇ ರೈತನೊಬ್ಬ ಮಣ್ಣು ತಿಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದ ಈ ಘಟನೆ ಬಳಿಕ ರೈತನ ಮನೆಗೆ ಬಿಜೆಪಿ ನಡಿತು ಆದರೂ ಸಹ ರಾಜ್ಯದಲ್ಲಿ ಗೊಬ್ಬರ ಮಾರಾಟದಲ್ಲಿ ವಸೂಲಿ ದಂಧೆ ಮುಂದುವರೆದಿದ್ದು, ಇದೀಗ ಎಂಆರ್ಪಿ ದರಕ್ಕಿಂತಲೂ ಹೆಚ್ಚಿನ ಬೆಲೆಗೆ ಡಿಎಪಿ ಗೊಬ್ಬರ ಮಾರಾಟ ಮಾಡಲಾಗುತ್ತಿದೆ. ಕಲ್ಬುರ್ಗಿಯಲ್ಲಿ ಕೃತಕ ಭಾವ ಸೃಷ್ಟಿಸಿ ಹೆಚ್ಚಿನ ದರಕ್ಕೆ ಗೊಬ್ಬರ ಮಾರಾಟ ಮಾಡಲಾಗುತ್ತಿದೆ. ದರ ಕಡಿಮೆ ಮಾಡಿ ಅಂದರೆ ಮಾಲೀಕ ಡಿಎಪಿ ಗೊಬ್ಬರ ಸ್ಟಾಕ್ ಇಲ್ಲ ಅಂತ ಹೇಳುತ್ತಿದ್ದಾರೆ. ಜೇವರ್ಗಿ ಪಟ್ಟಣದಲ್ಲಿ ದುಪ್ಪಟ್ಟು ಬೆಲೆಗೆ ಡಿಎಪಿ ಗೊಬ್ಬರ ಮಾರಾಟ ಮಾಡಲಾಗುತ್ತಿದೆ. ರೈತರಿಂದ ಹೆಚ್ಚಿನ ಹಣವನ್ನು ಗೊಬ್ಬರ ಕೇಂದ್ರಗಳು ವಸೂಲಿ ಮಾಡುತ್ತಿವೆ. 1,250 ಮೂಲದ ಡಿಎಪಿ ಗೊಬ್ಬರವನ್ನು 1500 ಕ್ಕೆ ಮಾರಾಟ ಮಾಡುತ್ತಿದ್ದಾರೆ. ಜಿಲ್ಲಾಡಳಿತ ಖಡಕ್ ಸೂಚನೆ ಕೊಟ್ಟರು ಸಹ ವಸೂಲಿತಿದ್ದೆ ನಿಲ್ಲುತ್ತಿಲ್ಲ ರೈತರ ಬಳಿ ಸುಲಿಗೆ ಮಾಡುತ್ತಿರುವ ರಸಗೊಬ್ಬರ ಅಂಗಡಿ ಮಾಲೀಕರು ಎಂ…
ಬೆಂಗಳೂರು : ನನ್ನ ಮದ್ವೆ ಆಗದಿದ್ರೆ ಫೋಟೋ ವೈರಲ್ ಮಾಡ್ತೇನೆ ಎಂದು ಯುವಕನ ಬ್ಲ್ಯಾಕ್ ಮೇಲ್ ಗೆ ಬೇಸತ್ತು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಈ ಒಂದು ಘಟನೆ ನಡೆದಿದೆ. ಚಿಕ್ಕಮ್ಮನ ಮನೆಯಲ್ಲಿ ನೇಣು ಬಿಗಿದುಕೊಂಡು ಭಾವನ (22) ಆತ್ಮಹತ್ಯೆಗೆ ಶರಣಾಗಿರುವ ಯುವತಿ ಎಂದು ತಿಳಿದುಬಂದಿದೆ. ಯುವಕ ನವೀನ್ ಎಂಬಾತನ ಕಿರುಕುಳಕ್ಕೆ ಬೇಸತ್ತು ಭಾವನ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಹೇಳಲಾಗುತ್ತಿದೆ. ಈಗಾಗಲೇ ನವೀನ್ ಗೆ ಮದುವೆ ಆಗಿದ್ದರು ಕೂಡ ಭಾವನಾಗೆ ಆತ ಕಿರುಕುಳ ನೀಡುತ್ತಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ. ಆತ್ಮಹತ್ಯೆಗೆ ಶರಣಾದ ಭಾವನ ಮೂಲತಃ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಗ್ಯಾರಹಳ್ಳಿ ನಿವಾಸಿಯಾಗಿದ್ದಾಳೆ. ಮೈಸೂರಲ್ಲಿ ನರ್ಸಿಂಗ್ ಮಾಡುತ್ತಿದ್ದಾಗ ಭಾವನಾ ತಂದೇ ಹಣ ಕಳುಹಿಸುತ್ತಿದ್ದರು. ನವೀನ್ ಗೆ ಮಗಳ ಮೊಬೈಲ್ ನಂಬರ್ ನೀಡಿ ಅವರ ತಂದೆ ಹಣ ಹಾಕಿಸುತ್ತಿದ್ದರು. ಗೂಗಲ್ ಪೇ ಫೋನ್ ಪೇ ಮೂಲಕ ಭಾವನಾತಂದೆ ನವೀನ್ ಮೂಲಕ ಹಣ ಹಾಕಿಸುತ್ತಿದ್ದರು. ನಂತರ ಭಾವನಾ…
ಕೊಪ್ಪಳ : ಕಳೆದ ಎರಡು ದಿನಗಳ ಹಿಂದೆ ಅಷ್ಟೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭ್ರಷ್ಟ ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ರೀಡ್ ಮಾಡಿದ್ದು ಇದೀಗ ಕೊಪ್ಪಳದಲ್ಲಿರುವ KRIDL ಮಾಜಿ ಹೊರಗುತ್ತಿಗೆ ನೌಕರನ ಮನೆಯ ಮೇಲೆ ಲೋಕಾಯುಕ್ತ ರೇಡ್ ಮಾಡಿದೆ. ಕೊಪ್ಪಳದ ಪ್ರಗತಿನಗರದಲ್ಲಿರುವ ಕಳಕಪ್ಪ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಕೊಪ್ಪಳ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ನಡೆಸಿ ಇದೀಗ ಪರಿಶೀಲನೆ ನಡೆಸಲಾಗುತ್ತಿದೆ. ಕಳೆದ ವಾರ ಕಳೆ ಕಪ್ಪ ವಿರುದ್ಧ ಅಧಿಕಾರಿಗಳು ಲೋಕಾಯುಕ್ತಕ್ಕೆ ದೂರು ಕೊಟ್ಟಿದ್ದರು 72 ಕೋಟಿ ಅಕ್ರಮಣಿಯಲ್ಲಿ ZM ಚಿಂಚೋಳಿಕರ ಹಾಗೂ ಹೊರಗುತ್ತಿಗೆ ನೌಕರ ಕಳಕಪ್ಪ ವಿರುದ್ಧ ಲೋಕಾಯುಕ್ತಕ್ಕೆ ದೂರು ಕೊಟ್ಟಿದ್ದರು. ಈ ಹಿನ್ನಲೆಯಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ಮಾಡುತ್ತಿದ್ದಾರೆ.
ಚಿಕ್ಕಮಗಳೂರು : ಹೆತ್ತ ತಾಯಿಯನ್ನೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಆಲ್ದುರು ಠಾಣೆಯ ಪೊಲೀಸರು ಹಂತಕ ಪವನ್ (25) ನನ್ನು ಬಂಧಿಸಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಹಕ್ಕಿಮಕ್ಕಿ ಗ್ರಾಮದಲ್ಲಿ ಈ ಒಂದು ಭೀಕರ ಕೊಲೆ ನಡೆದಿತ್ತು. ಗ್ರಾಮದ ನಿರ್ಜನ ಪ್ರದೇಶದ ಒಂಟಿಮನೆಯಲ್ಲಿ ಹೆತ್ತ ತಾಯಿಯನ್ನೇ ಪವನ್ ಕೊಲೆ ಮಾಡಿದ. ಮದ್ಯ ಸೇವಿಸಲು ಹಣ ನೀಡದಿದ್ದಕ್ಕೆ ತಾಯಿಯನ್ನು ಪವನ್ ಕೊಂದಿದ್ದ ಕೊಡಲಿಂದ ಕೊಚ್ಚಿ ಭವಾನಿ (55) ಕೊಲೆ ಮಾಡಿದ್ದ. ಹಣಕ್ಕಾಗಿ ನಿನ್ನೆ ತಾಯಿಯ ಜೊತೆ ಪುತ್ರ ಪವನ್ ಜಗಳ ಮಾಡಿದ್ದಾನೆ. ಈ ವೇಳೆ ಕೊಡಲಿಯಿಂದ ಕೊಚ್ಚಿ ತಾಯಿ ಭವಾನಿಯನ್ನು ಕೊಲೆ ಮಾಡಿದ್ದಾನೆ.ತಾಯಿ ಭವಾನಿ ಹತ್ಯೆಯ ಮಾಡಿದ ನಂತರ ಪವನ್ ಶವದ ಪಕ್ಕದಲ್ಲಿಯೇ ಮಲಗಿದ್ದ ಎನ್ನಲಾಗಿದೆ. ಈ ವೇಳೆ ಪವನ್ ತಾಯಿಯ ಶವ ಸುಟ್ಟು ಹಾಕಲು ನೋಡಿದ್ದಾನೆ. ಅರ್ಧಂಬರ್ಧ ಸುಟ್ಟ ಶವದ ಪಕ್ಕವೇ ಆರೋಪಿ ಪವನ್ ಮಲಗಿದ್ದ ಆರೋಪಿ ಪವನ್ ಬೆಂಗಳೂರಿನಲ್ಲಿ ಬಾರ್ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಕಳೆದ ಎರಡು ತಿಂಗಳ…