Subscribe to Updates
Get the latest creative news from FooBar about art, design and business.
Author: kannadanewsnow05
ಹುಬ್ಬಳ್ಳಿ : ಎರಡು ಎಕರೆ ಜಮೀನು ಆಸ್ತಿ ಗಾಗಿ ತಂದೆ ಹಾಗೂ ಮಲತಾಯಿಯನ್ನು ರಾಡ್ ನಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿದ್ದ ಘಟನೆ ನಿನ್ನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಡೆದಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊಲೆ ಆರೋಪಿ ಗಂಗಾಧರಪ್ಪ ಎನ್ನುವವನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ಗಂಗಾಧರಪ್ಪನನ್ನು ಹುಬ್ಬಳ್ಳಿಯ ಗ್ರಾಮೀಣ ಪೊಲೀಸರು ಇದೀಗ ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಿನ್ನೆ ಈ ಒಂದು ಘಟನೆ ನಡೆದಿತ್ತು. ಎರಡು ಎಕೆರೆ ಜಮೀನಿನ ವಿಚಾರವಾಗಿ ಅಪ್ಪ-ಮಗನ ನಡುವೆ ಗಲಾಟೆ ನಡೆದಿತ್ತು. ಆಸ್ತಿ ಬರೆದುಕೊಡಲು ನಿರಾಕರಿಸಿದಕ್ಕೆ ಪಾಪಿ ಮಗ ರಾಡ್ ನಿಂದ ಹೊಡೆದು ಹತ್ಯೆ ಮಾಡಿದ್ದ. ತಂದೆ ಅಶೋಕಪ್ಪ ಹಾಗೂ ಮಲತಾಯಿ ಶಾರದಮ್ಮನನ್ನು ಆರೋಪಿ ಗಂಗಾಧರಪ್ಪ ಕೊಲೆ ಮಾಡಿದ್ದ. ಮನೆಯಲ್ಲಿ ಇಬ್ಬರನ್ನು ಕೊಲೆ ಮಾಡಿ ಗಂಗಾಧರಪ್ಪ ಪರಾರಿಯಾಗಿದ್ದ.ಇದೀಗ ಗಂಗಾಧರಪ್ಪನನ್ನು ಹುಬ್ಬಳ್ಳಿಯ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಮೈಸೂರು : ಮೈಸೂರಿನ ಕೆಆರ್ಎಸ್ ತೆರಳುವ ರಸ್ತೆಗೆ ಪ್ರಿನ್ಸಸ್ ರಸ್ತೆ ಎಂಬುದಕ್ಕೆ ಯಾವುದೇ ದಾಖಲೆ ಇಲ್ಲ ಇದಕ್ಕೆ ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂದು ಹೆಸರಿಡುವ ವಿಚಾರವಾಗಿ, ನಾನು ಯಾರಿಗೂ ರಸ್ತೆಗೆ ನನ್ನ ಹೆಸರಿಡಿ ಎಂದು ಹೇಳಿಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು 40 ವರ್ಷದಿಂದ ರಾಜಕಾರಣದಲ್ಲಿದ್ದೇನೆ. ಯಾರಿಗೂ ನನ್ನ ಹೆಸರಡಿ ಎಂದು ಹೇಳಿಲ್ಲ. ಮೈಸೂರು ವಿವಿಯಲ್ಲಿ ಗೌರವ ಡಾಕ್ಟರೇಟ್ ಕೊಟ್ಟಾಗಲೇ ನಾನು ಬೇಡ ಅಂದೇ. ಡಾಕ್ಟರೇಟ್ ತೆಗೆದುಕೊಳ್ಳುವಷ್ಟು ನನಗೆ ಯೋಗ್ಯತೆ ಇಲ್ಲ. ಆ ರಸ್ತೆಗೆ ಬೇರೆ ಹೆಸರಿದ್ದರೆ ಬದಲಾವಣೆ ಮಾಡುವುದು ಬೇಡ. ಹೆಸರಿಡುವ ವಿಚಾರವಾಗಿ ನಾನು ಯಾರ ಜೊತೆ ಚರ್ಚೆಯನ್ನ ಮಾಡಿಲ್ಲ ಎಂದು ಅವರು ಹೇಳಿದರು. ಕಾಂಗ್ರೆಸ್ ಮುಖಂಡರ ವಾದವೇನು? ಕೆಆರ್ಎಸ್ ರಸ್ತೆಗೆ ಪ್ರಿನ್ಸಸ್ ರಸ್ತೆ ದಾಖಲೆ ಇಲ್ಲ ಎಂದು ಕಾಂಗ್ರೆಸ್ ಮುಖಂಡರು ವಾದಿಸುತ್ತಿದ್ದಾರೆ. ಆದರೆ, ಪ್ರಿನ್ಸಸ್ ರಸ್ತೆ ಎಂದು ಹೆಸರಿರುವ ನಾಮಫಲಕ ಲಭ್ಯವಾಗಿದೆ. ಯಾದವಗಿರಿ ರೈಲ್ವೆ ಬಡಾವಣೆಯ ಮನೆಗೆ ನಾಮಫಲಕ ಅಳವಡಿಸಲಾಗಿದೆ. ಮನೆ…
ಬೆಂಗಳೂರು : ಮಾಜಿ ಸಂಸದ ಡಿಕೆ ಸುರೇಶ್ ಸಹೋದರಿ ಎಂದು ಹೇಳಿ ವಂಚನೆ ಎಸಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಆರೋಪಿ ಐಶ್ವರ್ಯ ಗೌಡ ವಂಚನೆ ಪ್ರಕರಣದ ಕುರಿತು ಶಾಸಕ ವಿನಯ್ ಕುಲಕರ್ಣಿ ಬಳಸುತ್ತಿದ್ದ ಕಾರನ್ನು ಸೀಜ್ ಮಾಡಲಾಗಿದೆ. ವಿನಯ್ ಕುಲಕರ್ಣಿ ಬಳಸುತ್ತಿದ್ದ ಕಾರನ್ನು ಇದೀಗ ಪೊಲೀಸರು ಸೀಜ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಹೌದು ಐಶ್ವರ್ಯ ಪತಿ ಹರೀಶ್ ಗೌಡ ಹೆಸರಲಿದ್ದ ಮತ್ತೊಂದು ಕಾರು ಇದೀಗ ಪೊಲೀಸರು ಜಪ್ತಿ ಮಾಡಿದ್ದಾರೆ. ಈ ದಿನ ಐಶ್ವರ್ಯ ಬಳಿ ಇದ್ದಂತಹ ಮೂರು ಕಾರುಗಳನ್ನು ಪೊಲೀಸರು ಸೀಜ್ ಮಾಡಿದ್ದು, ಈ ಹಿಂದೆ ಐಶ್ವರ್ಯ ಪತಿ ಹರೀಶ್ ಹೆಸರಿನಲ್ಲಿದ್ದ ಮೂರು ಐಷಾರಾಮಿ ಕಾರುಗಳನ್ನು ಸೀಸ್ ಮಾಡಿದ್ದರು. ಇದೀಗ ಶಾಸಕ ವಿನಯ್ ಕುಲಕರ್ಣಿ ಅವರು ಬಳಸುತ್ತಿದ್ದ ಕಾರನ್ನು ಕೂಡ ಪೊಲೀಸರು ಸೀಜ್ ಮಾಡಿದ್ದಾರೆ. ಆಡಿ, ಬಿಎಂಡಬ್ಲ್ಯೂ ಹಾಗೂ ಫಾರ್ಚುನರ್ ಕಾರನ್ನು ಸೀಜ್ ಮಾಡಿದ್ದರು. ಇದೀಗ ಮತ್ತೊಂದು ಕಾರನ್ನು ಪೊಲೀಸರು ಸೀಜ್ ಮಾಡಿದ್ದಾರೆ ಎಂದು ತಿಳಿದುಬಂದಿದೆ . ವಂಚನೆ ಮಾಡಿದ ಹಣದಿಂದ…
ಬೀದರ್ : ಬೀದರ್ ನ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸಚಿವ ಪ್ರಿಯಾಂಕ ಖರ್ಗೆ ಆಪ್ತ ಎನಲಾದ ರಾಜು ಕಪನೂರನನ್ನು 5 ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿ ಬೀದರ್ ನ ಜೆಎಂಎಫ್ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಹೌದು ಬೀದರ್ನ ಯುವ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದಲ್ಲಿ, ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಪನೂರ್ ಸೇರಿದಂತೆ ಐವರನ್ನು ಬೀದರ್ ಜೆಎಂಎಫ್ಸಿ ನ್ಯಾಯಾಲಯ 5 ದಿನಗಳ ಸಿಐಡಿ ಕಸ್ಟಡಿಗೆ ನೀಡಿದೆ.ಸಿಐಡಿ ತನಿಖೆ ಭರದಿಂದ ಸಾಗಿದ್ದು, ಡೆತ್ ನೋಟ್ನಲ್ಲಿ ಹೆಸರಿಸಲಾದ ಎಂಟು ಜನರ ಪೈಕಿ ಐವರನ್ನು ಬಂಧಿಸಲಾಗಿದೆ. ಉಳಿದ ಮೂವರನ್ನು ಪತ್ತೆ ಹಚ್ಚುವ ಪ್ರಯತ್ನ ನಡೆಯುತ್ತಿದೆ. 2024 ಡಿಸೆಂಬರ್ 26 ರಂದು ಬೀದರ್ ನಗರದ ಬಸವೇಶ್ವರ ವೃತ್ತದ ಬಳಿಯ ರೈಲು ಹಳಿಗೆ ತಲೆಕೊಟ್ಟು ಯುವ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಚಿನ್ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಸುಮಾರು ಏಳು ಪುಟಗಳ ಡೆತ್ನೋಟ್ ಬರೆದಿಟ್ಟಿದ್ದರು. ಡೆತ್ನೋಟ್ನಲ್ಲಿ ಗ್ರಾಮೀಣಾಭಿವೃದ್ಧಿ…
ಬೆಂಗಳೂರು : ಬೆಂಗಳೂರಿನಲ್ಲಿ ಬೆಚ್ಚಿಬಿಳಿಸುವಂತಹ ಘಟನೆ ನಡೆದಿದ್ದು, ಕೇರಳ ಮೂಲದ ಯುವಕನೊಬ್ಬ ಬೆಂಗಳೂರಿನ ಮಹದೇವಪುರದಲ್ಲಿ ಪಿಜಿ ಒಂದರಲ್ಲಿ ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಹೌದು ಕೇರಳ ಮೂಲದ ಜಿತಿನ್ ಎನ್ನುವ ಯುವಕನೊಬ್ಬ ಬೆಂಗಳೂರಿಗೆ ಕೆಲಸ ಅರಿಸಿಕೊಂಡು ಬಂದಿದ್ದ. ಈ ವೇಳೆ ಮನೆಯಲ್ಲಿ ಅವರ ತಂದೆಗೆ ಕ್ಯಾನ್ಸರ್ ಇತ್ತು.ಅಲ್ಲದೆ ಮನೆಯ ಇನ್ನು ಕೆಲವು ಸಮಸ್ಯೆಗಳಿಂದ ಯುವಕ ಬೇಸತ್ತು ಹೋಗಿದ್ದ. ಇದರ ನಡುವೆ ತನ್ನ ಪ್ರಿಯತಮೆ ಜೊತೆಗೆ ಜಗಳ ಮಾಡಿಕೊಂಡಿದ್ದ ಎನ್ನಲಾಗಿದೆ. ಈ ವೇಳೆ ಪ್ರಿಯತಮೆ ಜೊತೆಗೆ ಜಗಳ ಮಾಡಿಕೊಂಡು ರಾತ್ರಿ ಜಿತಿನ್ ಮದ್ಯ ಸೇವಿಸಿದ್ದಾನೆ. ಬಳಿಕ ನಶೆಯಲ್ಲಿ ಪ್ರಿಯತಮೆ ಜಜೊತೆ ಜಗಳವಡುತ್ತಲೇ, ಕೈ ಕುಯ್ದು ಕೊಂಡಿದ್ದಾನೆ. ಈ ವಿಚಾರ ಪ್ರಿಯತಮೆಗೆ ತಿಳಿದು ತಕ್ಷಣ ಹಾಗೆ ಮಹದೇವಪುರ ಪೊಲೀಸ್ ಠಾಣೆಗೆ ಕರೆ ಮಾಡಿದ್ದಾಳೆ. ಬಿಟ್ ನಲ್ಲಿ ಇರುವಂತಹ ಮಹದೇವಪುರ ಠಾಣೆಯ ಪಿಎಸ್ಐ ಪರಶುರಾಮ್ ಹಾಗೂ ಮಲ್ಲೇಶ್ ತಕ್ಷಣ ಪೀಜಿಗೆ ಧಾವಿಸಿ ಯುವಕನನ್ನು ರಕ್ಷಣೆ ಮಾಡಿದ್ದಾರೆ. ಘಟನೆ ಕುರಿತು…
ಕಲಬುರ್ಗಿ : ಕಲ್ಬುರ್ಗಿಯಲ್ಲಿ ಮತ್ತೆ ಪೊಲೀಸರ ಬಂದೂಕು ಸದ್ದು ಮಾಡಿದ್ದು, ಅಕ್ರಮವಾಗಿ ಡ್ರಗ್ಸ್ ಪೂರೈಸುತ್ತಿದ್ದ ಆರೋಪಿಯ ಮೇಲೆ ಫೈರಿಂಗ್ ನಡೆಸಲಾಗಿದೆ. ಕಲ್ಬುರ್ಗಿ ಹೊರವಲಯದ ತಾವರಗೇರಾ ಬಳಿ ಗುಂಡಿನ ದಾಳಿ ನಡೆಸಲಾಗಿದೆ. ಡ್ರಗ್ಸ್ ಸಾಗಿಸುತ್ತಿದ್ದ ಸುಪ್ರೀತ್ ನವಲೆ ಎಡಗಾಲಿಗೆ ಗುಂಡೇಟು ತಗುಲಿದೆ. ಈತ ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಕುರಿತು ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ. ಕಾರಿನ ತಪಾಸಣೆ ಮಾಡುವಾಗ ಪೊಲೀಸರ ಮೇಲೆ ಸುಪ್ರೀತ್ ನವಲೆ ದಾಳಿ ಮಾಡಿದ್ದಾನೆ. ಚಾಕುನಿಂದ ಇರಿದು ಸುಪ್ರೀತ್ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾನೆ. ಹೆಡ್ ಕಾನ್ಸ್ಟೇಬಲ್ ಗುರುಮೂರ್ತಿ ಮೇಲೆ ಆರೋಪಿ ಹಲ್ಲೆ ನಡೆಸಿದ್ದಾನೆ.ಈ ವೇಳೆ ಚೌಕ್ ಠಾಣೆ ಇನ್ಸ್ಪೆಕ್ಟರ್ ರಾಘವೇಂದ್ರ ಅವರಿಂದ ಫೈರಿಂಗ್ ಆಗಿದೆ. ಸದ್ಯ ಆರೋಪಿ ಸುಪ್ರೀತ್ ಗೆ ಕಲಬುರ್ಗಿಯ ಜಿಮ್ಸ್ ಆಸ್ಪತ್ರೆಯ ಟ್ರಾಮ ಸೆಂಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕಲಬುರ್ಗಿ : ಗ್ರಾಮ ಪಂಚಾಯಿತಿಯ ಇಬ್ಬರು ಸದಸ್ಯರಿಗೆ ಜೀವ ಬೆದರಿಕೆ ಹಾಕಿದ್ದು ಅಲ್ಲದೆ ಇಬ್ಬರನ್ನು ಅಪಹರಣ ಮಾಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ಕೂಡಲ ಹಂಗರಗ ಗ್ರಾಮದಲ್ಲಿ ನಡೆದಿದೆ ಈ ಕುರಿತು ಂದ್ ತಾಲೂಕಿನ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಪ್ರಕರಣದ ದಾಖಲಾಗಿದೆ. ಅಪಹರಣಕ್ಕೆ ಒಳಗಾದಂತಹ ಗ್ರಾಮ ಪಂಚಾಯಿತಿ ಸದಸ್ಯರನ್ನು, ರಾಜಶೇಖರ ಕಾಂದೆ ಮತ್ತು ಅನಂತ ರೆಡ್ಡಿ ಎಂದು ತಿಳಿದುಬಂದಿದೆ.ಹಾಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ವಿರುದ್ಧ ಸದಸ್ಯರು ಅವಿಶ್ವಾಸ ಮಂಡಿಸಲು ನಿರ್ಣಯಿಸಿದ್ದರು.ಹಾಗಾಗಿ ಎಲ್ಲ ಸದಸ್ಯರು ಶಹಾಬಾದ್ ಸಮೀಪದ ತರಿ ತಾಂಡಾಕ್ಕೆ ತೆರಳಿದ್ದರು ಎಂದರು. ತಾಂಡಾದ ಅನಿಲ್ ರಾಠೋಡ ಮನೆಯಲ್ಲಿ ಇದ್ದಾಗ ವಿಜಯ ಹಳ್ಳಿ, ರಾಜಕುಮಾರ ಸೇರಿ ಸುಮಾರು 40 ಜನರ ಗುಂಪಿನೊಂದಿಗೆ ಬಂದರು. ಹಲ್ಲೆ ಮಾಡಿ, ಚಾಕು ತೋರಿಸಿ, ಜೀವ ಬೆದರಿಕೆ ಹಾಕಿ ಇಬ್ಬರನ್ನು ಅಪಹರಣ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ ಎಂದು ತಿಳಿಸಿದ್ದಾರೆ.
ನವದೆಹಲಿ: ದೆಹಲಿಯ ಶಾಲೆಗಳಿಗೆ ಇತ್ತೀಚೆಗೆ ನಡೆದ ಸರಣಿ ಹುಸಿ ಇ ಮೆಲ್ ಮೂಲಕ ಕನಿಷ್ಠ 23 ಬಾಂಬ್ ಬೆದರಿಕೆಗಳನ್ನು ವಿದ್ಯಾರ್ಥಿಯೊಬ್ಬ ಕಳುಹಿಸಿದ್ದಾನೆ ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ದೆಹಲಿಯ ವಿವಿಧ ಶಾಲೆಗಳಿಗೆ 12 ನೇ ತರಗತಿಯ ವಿದ್ಯಾರ್ಥಿ ಇಮೇಲ್ಗಳನ್ನು ಕಳುಹಿಸಿದ್ದಾನೆ. ವಿಚಾರಣೆಯ ಸಮಯದಲ್ಲಿ, ನಾನು ಪರೀಕ್ಷೆಗಳಿಂದ ತಪ್ಪಿಸಿಕೊಳ್ಳಲು ಈ ರೀತಿ ಬೆದರಿಕೆ ಹಾಕಿದ್ದೇನೆ. ಈ ಹಿಂದೆಯೂ ಬೆದರಿಕೆ ಇಮೇಲ್ಗಳನ್ನು ಕಳುಹಿಸಿದ್ದಾಗಿ ವಿದ್ಯಾರ್ಥಿ ಒಪ್ಪಿಕೊಂಡಿದ್ದಾನೆ ಎಂದು ದೆಹಲಿ ಪೊಲೀಸ್ ದಕ್ಷಿಣ ಡಿಸಿಪಿ ಅಂಕಿತ್ ಚೌಹಾಣ್ ಸುದ್ದಿ ಸಂಸ್ಥೆ ಎಎನ್ಐಗೆ ತಿಳಿಸಿದ್ದಾರೆ. ಇತ್ತೀಚೆಗೆ ಕಳೆದ ಕೆಲವು ತಿಂಗಳಿನಿಂದ ದೆಹಲಿಯ ಹಲವು ಶಾಲೆಗಳಿಗೆ ಸಾಲು ಸಾಲು ಬಾಂಬ್ ಬೆದರಿಕೆ ಸಂದೇಶ ಬರುತ್ತಿತ್ತು. ಘಟನೆ ಪೊಲೀಸರಿಗೆ ದೊಡ್ಡ ತಲೆನೋವಾಗಿತ್ತು. ಪ್ರಕರಣದ ಮೂಲ ಪತ್ತೆ ಹಚ್ಚಿದ ಪೊಲೀಸರಿಗೆ ಇದೀಗ ಶಾಕ್ ಎದುರಾಗಿದ್ದು, ತಾನೇ ಬಾಂಬ್ ಬೆದರಿಕೆ ಹಾಕಿರುವುದಾಗಿ ಬಾಲಕ ಒಪ್ಪಿಕೊಂಡಿದ್ದಾನೆ.
ಹುಬ್ಬಳ್ಳಿ : ಇನ್ನೇನು ಕೆಲವೇ ದಿನಗಳಲ್ಲಿ ಸಂಕ್ರಾಂತಿ ಹಬ್ಬ ಸಮೀಪಸಿದ್ದು, ಹೀಗಾಗಿ ಬೇರೆ ಊರುಗಳಿಗೆ ತೆರಳಲು NWKSRTC ವಿಶೇಷ ಬಸ್ ಗಳ ವ್ಯವಸ್ಥೆ ಮಾಡಲಾಗಿದ್ದು, ಎರಡನೇ ಶನಿವಾರ, ಭಾನುವಾರ ಸೇರಿದಂತೆ ಸರಣಿ ರಜೆಗಳಿರುವ ಕಾರಣ ಸಂಕ್ರಾಂತಿ ಹಬ್ಬಕ್ಕೆ ಬೇರೆ ಬೇರೆ ಊರುಗಳಿಗೆ ತೆರಳುವ ಪ್ರಯಾಣಿಕರಿಗೆ ವಾಯವ್ಯ ಸಾರಿಗೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಸಾರ್ವಜನಿಕರು ತಮ್ಮೂರುಗಳಿಗೆ ತೆರಳುವುದರಿಂದ, ವಾ.ಕ.ರ.ಸಾ.ಸಂಸ್ಥೆ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಸುಮಾರು 114 ಹೆಚ್ಚುವರಿ ಬಸ್ಗಳ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ವಾಯುವ್ಯ ಸಾರಿಗೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರಿನಿಂದ ರಾಜ್ಯ/ಅಂತರ್ರಾಜ್ಯದ ವಿವಿಧ ಸ್ಥಳಗಳಿಗೆ ತೆರಳಲು ಶುಕ್ರವಾರ, 11 ಹಾಗೂ 13 ರಂದು ಹೆಚ್ಚುವರಿ ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ. ಹಬ್ಬ ಮುಗಿದ ಮೇಲೆ 14 ಹಾಗೂ 15 ರಂದು ಮತ್ತು ನಂತರದ ದಿನಗಳಂದು ಪ್ರಮುಖ ಸ್ಥಳಗಳಿಂದ ಜನದಟ್ಟಣೆಗೆ ಅನುಗುಣವಾಗಿ ಹೆಚ್ಚುವರಿ ಸಾರಿಗೆ…
ವಿಜಯಪುರ : ವಿಜಯಪುರ ಜಿಲ್ಲೆಯ ಕೊರ್ತಿ ಕೋಲಾರ ಎಂಬಲ್ಲಿ ಎದುರುಗಡೆ ಮನೆಯಲ್ಲಿದ್ದ ಯುವತಿಯನ್ನು ಪ್ರೀತಿಸಿದ್ದಕ್ಕಾಗಿ ಯುವಕನ ಮೇಲೆ ಸುಮಾರು 12 ಜನರು ಭೀಕರವಾಗಿ ಹಲ್ಲೆ ನಡೆಸಿದ್ದರು. ಬಳಿಕ ಯುವಕನನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಬೆಳಿಗ್ಗೆ ಚಿಕಿತ್ಸೆ ಫಲಿಸಿದೆ ಯುವಕ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿತ ಯುವಕ ಮೃತಾಪಟ್ಟಿದ್ದಾನೆ. ಜನವರಿ 7ರಿಂದ ವಿಜಯಪುರ ಜಿಲ್ಲೆಯ ಕೋಲಾರ ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿತ್ತು. ಎದುರು ಮನೆಯ ಯುವತಿಯನ್ನು ರಾಘವೇಂದ್ರ ಕಂಬಾರ ಎನ್ನುವತ ಪ್ರೀತಿಸುತ್ತಿದ್ದ. ರಾಘವೇಂದ್ರ ಪ್ರೀತಿಸುವ ವಿಚಾರ ಯುವತಿಯ ಮನೆಯವರಿಗೆ ಗೊತ್ತಾಗಿತ್ತು ಇದೇ ವಿಚಾರಕ್ಕೆ ಯುವಕ ಯುವತಿ ತಾಯಿಯ ನಡುವೆ ಜಗಳವಾಗಿತ್ತು. ರಾಘವೇಂದ್ರನನ್ನು ಮನೆ ಬಳಿಯ ದೇವಸ್ಥಾನಕ್ಕೆ ಕರೆಸಿ ಕೊಂಡು ಹಲ್ಲೆ ನಡೆಸಲಾಗಿದೆ.ರಾಘವೇಂದ್ರ ಕಂಬಾರ ಮೇಲೆ ಸುಮಾರು 12 ಜನರು ಭೀಕರವಾಗಿ ಹಲ್ಲೆ ಮಾಡಿದ್ದರು.ರಾಘವೇಂದ್ರನನ್ನು ಬಾಗಲಕೋಟೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ನಿನ್ನೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಬೆಳಿಗ್ಗೆ…