Author: kannadanewsnow05

ಹಾವೇರಿ : ಹಾವೇರಿಯಲ್ಲಿ ತಡರಾತ್ರಿ ಭೀಕರವಾದ ಅಪಘಾತವಾಗಿದ್ದು, ನಿಲ್ಲಿಸಿದ್ದ ಎತ್ತಿನಗಾಡಿಗೆ ಬೈಕ್ ಡಿಕ್ಕಿ ಹೊಡೆದು ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹಿರೇಕೆರೂರು ತಾಲೂಕಿನ ಕೋಡ ಗ್ರಾಮದ ಬಳಿ ನಿನ್ನೆ ರಾತ್ರಿ ಸಂಭವಿಸಿದೆ. ಮೃತರನ್ನು ಕುಸುಮಾ (56) ಮತ್ತು ಕುಮಾರ (34) ಎಂದು ಗುರುತಿಸಲಾಗಿದೆ‌. ಮೃತರು ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕೆರೂಡಿ ಗ್ರಾಮದ ನಿವಾಸಿಗಳು. ಹಂಸಭಾವಿಯ ತಮ್ಮ ಸಂಬಂಧಿಕರ ಮನೆಗೆ ಹೊರಟಿದ್ದ ವೇಳೆ ದುರ್ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದ ಕುರಿತು ಹಿರೇಕೆರೂರು ತಾಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ನವದೆಹಲಿ : ಯುವ ಸಮುದಾಯ ರಾಜಕೀಯ ಕ್ಷೇತ್ರಕ್ಕೆ ಬರಬೇಕು ರಾಜಕಾರಣಕ್ಕೆ ಬರಲು ಮಹತ್ವಾಕಾಂಕ್ಷೆ ಅಲ್ಲ, ಒಂದು ವಿಷನ್ ಬೇಕು. ಉತ್ತಮ ವಿಷನ್ ನೊಂದಿಗೆ ರಾಜಕೀಯಕ್ಕೆ ಬನ್ನಿ ಎಂದು ಯುವ ಸಮುದಾಯಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕರೆ ನೀಡಿದ್ದಾರೆ. ಕನ್ನಡಿಗ ಉದ್ಯಮಿ ನಿಖಿಲ್ ಕಾಮತ್ ಅವರು ನಡೆಸಿದ ಸಂದರ್ಶನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾತನಾಡಿದ್ದು, ರಾಜಕೀಯ ಕ್ಷೇತ್ರದ ಬಗ್ಗೆ ಪ್ರಧಾನಿ ಮೋದಿಗೆ ನಿಖಿಲ್ ಕಾಮತ್ ಪ್ರಶ್ನೆ ಮಾಡಿದ್ದಾರೆ. ರಾಜಕೀಯ ಕ್ಷೇತ್ರಕ್ಕೆ ಹೋಗಬೇಡ ಕೆಟ್ಟದ್ದು ಎಂದು ಮನೆಯಲ್ಲಿ ಹೇಳಿದ್ದರು ಎಂದು ಕಾಮತ್ ರಾಜಕಾರಣದ ಬಗ್ಗೆ ಪ್ರಧಾನಿ ಮೋದಿಗೆ ಪ್ರಶ್ನಿಸಿದಾಗ ಹಾಗಿದ್ದರೆ ನೀವು ನನ್ನ ಮುಂದೆ ಮಾತನಾಡುತ್ತಿರಲಿಲ್ಲ.ನಾವು ರಾಜಕೀಯ ಕ್ಷೇತ್ರದಲ್ಲಿ ಇದ್ದೇವೆ ಹಾಗೇನಾದರೂ ಆಗಿದೆಯೇ? ಎಂದು ನಿಖಿಲ್ ಕಾಮತ್ ಪ್ರಶ್ನೆಗೆ ಪ್ರಧಾನಿ ಮೋದಿ ಉತ್ತರಿಸಿದ್ದಾರೆ. ಯುವ ಸಮುದಾಯ ರಾಜಕೀಯ ಕ್ಷೇತ್ರಕ್ಕೆ ಬರಬೇಕು.ರಾಜಕಾರಣಕ್ಕೆ ಬರಲು ಮಹತ್ವಾಕಾಂಕ್ಷೆ ಅಲ್ಲ, ವಿಷನ್ ಬೇಕು. ಉತ್ತಮ ವಿಷನ್ ನೊಂದಿಗೆ ರಾಜಕೀಯಕ್ಕೆ ಬನ್ನಿ ಎಂದು ಕರೆ ನೀಡಿದ್ದಾರೆ. ಹಲವು…

Read More

ಬೆಂಗಳೂರು : ಕೇವಲ ಮದುವೆಯಾಗಿ ಎರಡೇ ತಿಂಗಳು ಕಳಿಯುವಷ್ಟರಲ್ಲಿ ಕೌಟುಂಬಿಕ ಕಲಹದಿಂದ ಬೆಸತ್ತು, ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ವಿವೇಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಕಾನ್ಸ್ಟೇಬಲ್ ಅನ್ನು ಗೋವಿಂದ ಎಂದು ತಿಳಿದುಬಂದಿದ್ದು, ಕಳೆದ ಎರಡು ತಿಂಗಳ ಹಿಂದೆ ಅವರಿಗೆ ಮದುವೆಯಾಗಿತ್ತು ಕೌಟುಂಬಿಕ ಕಲಹದಿಂದ ಅವರು ಬೇಸತ್ತಿದ್ದರು ಎನ್ನಲಾಗಿದ್ದು, ನಗರದ ಕ್ವಾಟ್ರಸ್‍ನಲ್ಲಿರುವ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ.ಘಟನೆ ಸಂಬಂಧ ವಿವೇಕ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗ್ಲೇ ರೆಗ್ಯುಲರ್ ಬೇಲ್ ಪಡೆದು ಬಿಡುಗಡೆಯಾಗಿರುವ ನಟ ದರ್ಶನ್ ಹಾಗೂ ಕೊಲೆ ಪ್ರಕರಣದ A1 ಆರೋಪಿ ಪವಿತ್ರಾಗೌಡ ಸೇರಿದಂತೆ ಎಲ್ಲ ಆರೋಪಿಗಳು ಹಾಜರಾಗಲಿದ್ದಾರೆ. ಹೌದು ಕೊಲೆ ಪ್ರಕರಣಕ್ಕೆ ಸಂಬಂಧಸಿದಂತೆ ಇಂದು ಬೆಂಗಳೂರಿನ ಸೇಷನ್ಸ್ ಕೋರ್ಟ್ ಗೆ ನಟ ದರ್ಶನ್ ಹಾಜರಾಗಲಿದ್ದಾರೆ. ಅಲ್ಲದೇ A1 ಆರೋಪಿ ಪವಿತ್ರ ಗೌಡ A2 ದರ್ಶನ್ ಮುಖಾಮುಖಿ ವಿಚಾರಣೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಎಲ್ಲಾ ಆರೋಪಿಗಳನ್ನು ಕೂಡ ಪೊಲೀಸರು ಇಂದು ಕೋರ್ಟಿಗೆ ಹಾಜರುಪಡಿಸಲಿದ್ದಾರೆ. ಒಂದು ವೇಳೆ ಕೋರ್ಟಿಗೆ ಹಾಜರಾಗದಿದ್ದಲ್ಲಿ ವಿನಾಯಿತಿ ಕೋರಿ ಅರ್ಜಿ ಸಲ್ಲಿಸಬೇಕು. ಶೀಘ್ರದಲ್ಲಿ ಆರೋಪಿಗಳ ವಿರುದ್ಧ ದೋಷಾರೋಪ ನಿಗದಿಯಾಗಲಿದೆ. ಹಾಗಾಗಿ ಇಂದು ಅಕಸ್ಮಾತ್ ಕೋರ್ಟ್ ಗೆ ದರ್ಶನ್ ಹಾಜರಾದರೆ, ನಟ ದರ್ಶನ್ ಹಾಗೂ ಪವಿತ್ರ ಗೌಡ ಮುಖಾಮುಖಿ ವಿಚಾರಣೆ ಎದುರಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ

Read More

ಬೆಂಗಳೂರು : ಕಾಂಗ್ರೆಸ್ ನಾಯಕರ ಬೆನ್ನೆಲೆ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಪರಾಜಿತ ಬಿಜೆಪಿ ಅಭ್ಯರ್ಥಿಗಳ ಜೊತೆಗೆ ಭೋಜನಕೂಟ ಸಭೆ ನಡೆಸಲಿದ್ದು, ಅಲ್ಲದೆ ಮಾಜಿ ಸಚಿವರು, ಶಾಸಕರುಗಳು ಕೂಡ ಈ ಒಂದು ಭೋಜನಕೂಟ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಖಾಸಗಿ ಹೋಟೆಲಲ್ಲಿ ವಿಜಯೇಂದ್ರ ನೇತೃತ್ವದಲ್ಲಿ ಸಭೆ ನಡೆಯಲಿದೆ ಸಂವಿಧಾನ ಗೌರವ ಅಭಿಯಾನದ ವಿಚಾರವಾಗಿ ಈ ಒಂದು ಸಭೆ ನಡೆಯಲಿದ್ದು, ಸುಧೀರ್ಘ ಕಾಲದ ಬಳಿಕ ಪರಾಜೀತ ಅಭ್ಯರ್ಥಿಗಳ ಜೊತೆಗೆ ಈ ಒಂದು ಸಭೆ ನಡೆಯಲಿದೆ. ಸಭೆಯಲ್ಲಿ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಚುನಾವಣೆಗಳ ಬಗ್ಗೆಯೂ ಚರ್ಚೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನೊಂದು ಕಡೆ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ವರಿಷ್ಠರನ್ನು ಭೇಟಿಯಾಗಿ ಬಿ ವೈ ವಿಜಯೇಂದ್ರ ಅವರ ವಿರುದ್ಧ ದೂರು ನೀಡಿದ…

Read More

ಬೆಂಗಳೂರು : ಆಕೆಗೆ ಈಗಾಗಲೇ 7 ಮದುವೆಯಾಗಿತ್ತು. ಆದರೆ ತನಗೆ 7 ಮದುವೆ ಆಗಿದ್ದನ್ನು ಮುಚ್ಚಿಟ್ಟು, ವ್ಯಕ್ತಿಯ ಜೊತೆಗೆ ಎಂಟನೇ ಮದುವೆಯಾದ ಆಕೆ ಮದುವೆಯಾದ ಬಳಿಕ ಪತಿಗೆ ಪಿಎಫ್ ಹಣ ಹಾಗೂ ಚಿನ್ನಾಭರಣ ನೀಡುವಂತೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ಕಿರುಕುಳ ನೀಡಿದ್ದಾಳೆ. ಈ ಕುರಿತು ನೊಂದ ಪತಿ ತನ್ನ ಪತ್ನಿ ಸೇರಿದಂತೆ ನಾಲ್ವರ ವಿರುದ್ಧ ಬೆಂಗಳೂರಿನ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹೌದು ಏಳು ಮದುವೆಯಾಗಿರುವ ವಿಚಾರ ಮುಚ್ಚಿಟ್ಟ ಮಹಿಳೆ, ಎಂಟನೇ ಮದುವೆಯಾಗಿ ಪತಿಗೆ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಎಂಟನೆ ಮದುವೆಯಾಗಿದಲ್ಲದೇ ಮನೆಯಲ್ಲಿದ್ದ ಚಿನ್ನಾಭರಣ, ನಗದು ದೋಚಿ ಸುಳ್ಳು ಪ್ರಕರಣ ದಾಖಲಿಸಿ ಬೆದರಿಕೆ ಹಾಕಿ ಕಿರುಕುಳ ನೀಡುತ್ತಿರುವ ಆರೋಪದಡಿ ಮಹಿಳೆ ಸೇರಿ ನಾಲ್ವರ ವಿರುದ್ಧ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಾಗಣಪತಿ ನಗರ ನಿವಾಸಿ ರಾಮಕೃಷ್ಣ (62) ಎಂಬುವವರು ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದರು. ನ್ಯಾಯಾಲಯದ ಸೂಚನೆ ಮೇರೆಗೆ ಮಂಡ್ಯ ಜಿಲ್ಲೆ ಮದ್ದೂರು ಟೌನ್‌ನ ಎಚ್‌. ಎಂ.…

Read More

ಬೆಂಗಳೂರು: ಕಳೆದ 2022ರ ಜೂ.6ರಂದು ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿದ್ದ ಸುತ್ತೋಲೆ ಪ್ರಕಾರ ಖಾಸಗಿ ಶಾಲೆಗಳ ಮಾನ್ಯತೆ ನವೀಕರಣಕ್ಕಾಗಿ ಶಾಲಾ ಕಟ್ಟಡದ ಸುರಕ್ಷತೆ ಪ್ರಮಾಣ ಪತ್ರ ಮತ್ತು ನಕ್ಷೆ ಅನುಮೋದನೆ, ಅಗ್ನಿ ಸುರಕ್ಷತಾ ಪ್ರಮಾಣಪತ್ರಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕೆಂದು ಹೈಕೋರ್ಟ್‌ ಆದೇಶ ಹೊರಡಿಸಿದೆ. ಸರ್ಕಾರದ ಸುತ್ತೋಲೆಯನ್ನು ಪ್ರಶ್ನಿಸಿ ಅನುದಾನರಹಿತ ಮಾನ್ಯತೆ ಪಡೆದ ಶಾಲೆಗಳ ಸಂಸ್ಥೆಯ ಕಾರ್ಯದರ್ಶಿ ಪ್ರಭಾಕರ ಅರಸ್‌ ಸೇರಿ ಹಲವು ಶಾಲೆಗಳು ಸಲ್ಲಿಸಿದ್ದ ಅರ್ಜಿಗಳನ್ನು ಆಲಿಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ಏಕಸದಸ್ಯಪೀಠ ಈ ಆದೇಶವನ್ನು ನೀಡಿದೆ. ಅಲ್ಲದೆ, ಈ ನಿಯಮಗಳನ್ನು ಸರ್ಕಾರಿ ಶಾಲೆಗಳೂ ಸಹ ಪಾಲಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ. ಸುತ್ತೋಲೆಯಂತೆ ಶಾಲೆಗಳಿಗೆ ಅಂತಿಮ ಮಾನ್ಯತೆ ನೀಡುವ ಮುನ್ನವೇ ಎಲ್ಲ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದು ಕಡ್ಡಾಯವಾಗಿದೆ. ಅದರ ಉದ್ದೇಶ ಶಾಲಾ ಕಟ್ಟಡಗಳಲ್ಲಿ ಬಿಲ್ಡಿಂಗ್‌ ಬೈಲಾ ಮತ್ತು ಇತರ ನಿಯಮಗಳನ್ನು ಪಾಲನೆ ಮಾಡಬೇಕು ಎಂಬುದಾಗಿದೆ, ಇಲಾಖೆ ಹೊಸ ಷರತ್ತುಗಳೇನೂ ವಿಧಿಸಿಲ್ಲ, ಹಾಲಿ ನಿಯಮಗಳಲ್ಲಿರುವ ಅಂಶಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಸೂಚನೆ ನೀಡಿದೆ. ಹಾಗಾಗಿ…

Read More

ಬೆಂಗಳೂರು : ಇತ್ತೀಚಿಗೆ ಜನರು ಮಾನವೀಯತೆ ಅನ್ನುವುದನ್ನೇ ಮರೆತಿದ್ದಾರೆ. ಮನುಷ್ಯ-ಮನುಷ್ಯ ನಡುವೆ ಮಾನವೀಯತೆ ಇಲ್ಲ, ಇನ್ನು ಮನುಷ್ಯ ಪ್ರಾಣಿಗಳ ನಡುವೆ ಎಲ್ಲಿ ಮಾನವೀಯತೆ ಬರುತ್ತದೆ? ಇದೀಗ ಬೆಂಗಳೂರಿನಲ್ಲಿ ರಸ್ತೆಯ ಮೇಲೆ ತನ್ನ ಪಾಡಿಗೆ ತಾನು ಹಾಯಾಗಿ ಮಲಗಿದ್ದ ನಾಯಿಯ ಮೇಲೆ ಕೀಚಕನೊಬ್ಬ ಕಾರುಹರಿಸಿ ಕೊಲೆ ಮಾಡಿರುವ ಅಮಾನುಷ ಘಟನೆ ಬೆಂಗಳೂರಿನ ಜೆಪಿ ನಗರದಲ್ಲಿ ನಡೆದಿದೆ. ಈ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸದ್ಯ ಪೊಲೀಸರು ಚಾಲಕರನ್ನು ಅರೆಸ್ಟ್ ಮಾಡಿದ್ದಾರೆ. ಹೌದು ಜೆ.ಪಿ.ನಗರ 8ನೇ ಹಂತದ ರಘವನಪಾಳ್ಯ ನಿವಾಸಿ ಮಂಜುನಾಥ(35) ಬಂಧಿತ ಕಾರು ಚಾಲಕ. ಡಿ.31ರಂದು ಸಂಜೆ ಸುಮಾರು 4.30ಕ್ಕೆ ರಘವನಪಾಳ್ಯದ ಶೇಖರ್ ಲೇಔಟ್ 1ನೇ ಮುಖ್ಯ ರಸ್ತೆಯ 1ನೇ ಅಡ್ಡರಸ್ತೆಯಲ್ಲಿ ಸುಮಾರು 4 ತಿಂಗಳ ಬೀದಿ ನಾಯಿ ಮಲಗಿತ್ತು. ಈ ವೇಳೆ ಆರೋಪಿ ಮಂಜು ನಾಥ ತನ್ನ KA02 MS 2781 ನೋಂದಣಿ ಸಂಖ್ಯೆಯ ಕೆಂಪು ಬಣ್ಣದ ಮಹೀಂದ್ರ ಫಾರ್ ಕಾರನ್ನು ನಾಯಿ ಮೇಲೆ ಹತ್ತಿಸಿಕೊಂಡು ತೆರಳಿದ್ದ. ದೇಹದ…

Read More

ಬೆಂಗಳೂರು : ಮಹಿಳಾ ಉದ್ಯೋಗಿಗಳಿಗೆ ಸುರಕ್ಷಿತ ನಗರಗಳ ಸಾಲಿನಲ್ಲಿ ಬೆಂಗಳೂರು ಮೊದಲ ಸ್ಥಾನವನ್ನು ಪಡೆದಕೊಂಡಿದೆ. ಮಹಿಳೆಯರ ಕೌಶಲ್ಯಾಭಿವೃದ್ಧಿ, ಉದ್ಯೋಗಾವಕಾಶ, ಮೂಲಸೌಕರ್ಯ ಕ್ಷೇತ್ರಗಳಲ್ಲಿ ದೇಶದಲ್ಲಿಯೇ ಉತ್ತಮ ವ್ಯವಸ್ಥೆಯನ್ನು ಬೆಂಗಳೂರು ಹೊಂದಿದೆ ಎಂದು ಅವತಾ‌ರ್ ಗ್ರೂಪ್ ಸಿದ್ಧಪಡಿಸಿರುವ ವರದಿ ಹೇಳಿದೆ. ಹೌದು ಅವತಾರ್ ಗ್ರೂಪ್‌ ತಯಾರಿಸಿರುವ ಟಾಪ್‌ ಸಿಟೀಸ್‌ ಫಾ‌ರ್ ವುಮೆನ್‌ಇನ್ ಇಂಡಿಯಾದ ಮೂರನೇ ಆವೃತ್ತಿಯಲ್ಲಿ ಬೆಂಗಳೂರಿಗೆ ಅಗ್ರಪಟ್ಟ ದೊರೆತಿದೆ. ಇದರ ನಂತರದಲ್ಲಿ ಚೆನ್ನೈ, ಮುಂಬೈ, ಹೈದರಾಬಾದ್, ಪುಣೆ, ಕೋಲ್ಕತಾ ಮತ್ತು ಅಹಮದಾಬಾದ್ ಸ್ಥಾನ ಪಡೆ ದುಕೊಂಡಿವೆ. ಆದರೆ ಉತ್ತರಭಾರತದ ನಗರಗಳು ಮಹಿಳೆಯರ ಸುರಕ್ಷತೆಯಲ್ಲಿ ಹಿಂದೆ ಉಳಿದಿವೆ ಎಂದು ವರದಿ ಹೇಳಿದೆ. ಕಳೆದ ವರ್ಷ ಫೆಬ್ರವರಿಯಿಂದ ನವೆಂಬರ್‌ವರೆಗೆ ನಡೆಸಿದ ಅಧ್ಯಯ ನದಲ್ಲಿ ಸಾಮಾಜಿಕ ಸೇರ್ಪಡೆ, ಕೈಗಾರಿಕಾ ಸೇರ್ಪಡೆ ಮತ್ತು ಜನರ ಅನುಭವ ಎಂಬ ಮೂರು ಅಂಶಗಳ ಆಧಾರದ ಮೇಲೆ ಮೌಲ್ಯಮಾಪನ ನಡೆಸಲಾಗಿದೆ. ಇದರಲ್ಲಿ ಬೆಂಗಳೂರು ನಗರವು ಮೂಲ ಭೂತ ಸೌಕರ್ಯ, ಕೌಶಲ್ಯಾಭಿವೃದ್ಧಿ, ಸಾರಿಗೆ ಮತ್ತು ಮಹಿಳಾ ಉದ್ಯೋಗಾ ವಕಾಶಗಳಲ್ಲಿ ಮುಂದಿದೆ. ದಕ್ಷಿಣದ ಬಹುತೇಕ ನಗರಗಳು…

Read More

ಬೆಂಗಳೂರು : ಕಳೆದ ವರ್ಷ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಒಂದು ದಾಖಲೆ ನಿರ್ಮಾಣ ಮಾಡಿದ್ದು, ಏನಪ್ಪಾ ಅದು ದಾಖಲೆ ಅಂದರೆ ಕಳೆದ ಒಂದೇ ವರ್ಷದಲ್ಲಿ ಸುಮಾರು 4.07 ಕೋಟಿ ಜನರು ಪ್ರಯಾಣಿಸಿದ್ದಾರೆ ಎನ್ನಲಾಗಿದೆ. 2023ಕ್ಕೆ ಹೋಲಿಸಿದರೆ ಶೇ.9ರಷ್ಟು ಬೆಳವಣಿಗೆಯಾಗಿದೆ ಎಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತ ತಿಳಿಸಿದೆ. ಹೌದು ದೇಶದ ಮೂರನೇ ದೊಡ್ಡ ವಿಮಾನ ನಿಲ್ದಾಣವಾಗಿರುವ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಒಂದೇ ವರ್ಷದಲ್ಲಿ 4 ಕೋಟಿ ಜನ ಮೈಲುಗಲ್ಲು ಸಾಧಿಸಿದ ಕಾರಣ ಬೆಂಗಳೂರು ವಿಮಾನ ನಿಲ್ದಾಣವು ಅಂ ತಾರಾಷ್ಟ್ರೀಯ ವಿಮಾನ ನಿಲ್ದಾಣಗಳ ಮಂಡಳಿ (ಎಸಿಐ) ಅನ್ವಯ ‘ದೊಡ್ಡ ವಿಮಾನ ನಿಲ್ದಾಣ’ ಸ್ಥಾನವನ್ನು ಪಡೆದುಕೊಂಡಿದೆ. ಕಳೆದ 2024 ಅಕ್ಟೊಬರ್ 5 ರಂದು ಒಂದೇ ದಿನ 1,26,532 ಜನರು ಪ್ರಯಾಣಿಸಿರುವುದು ಒಂದೇ ದಿನದ ದಾಖಲೆ. ಅ.17ರಂದು ಗರಿಷ್ಠ 782 ವಿಮಾನಗಳು ಸಂಚರಿಸಿವೆ. ಡಿ.31ರವರೆಗೆ ಬೆಂಗಳೂರು 75 ದೇಶೀಯ ಮತ್ತು 30 ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳ ಜೊತೆ ನೇರ…

Read More