Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬಂಡೀಪುರ ಅರಣ್ಯದಲ್ಲಿ ರಾತ್ರಿ ವೇಳೆ ಕೇವಲ ಎರಡು ಬಸ್ ಹಾಗು ಆಂಬುಲೆನ್ಸ್ ಗೆ ಮಾತ್ರ ಸಂಚರಿಸಲು ಅವಕಾಶ ನೀಡಲಾಗಿದ್ದು, ರಾತ್ರಿ 9 ಗಂಟೆಯವರೆಗೆ ಮಾತ್ರ ವಾಹನ ಸಂಚಾರಕ್ಕೆ ಅನುಮತಿ ನೀಡಲಾಗುತ್ತದೆ. ಬಳಿಕ, ಕೇರಳದಿಂದ ಕರ್ನಾಟಕದ ಕಡೆ 2 ಬಸ್ಗಳಿಗೆ ಮತ್ತು 1 ಆ್ಯಂಬುಲೆನ್ಸ್ಗೆ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಅರಣ್ಯ ಇಲಾಖೆಯ ಸಚಿವ ಈಶ್ವರ್ ಖಂಡ್ರೆ ಸ್ಪಷ್ಟನೆ ನೀಡಿದ್ದಾರೆ. ಈ ವಿಚಾರವಾಗಿ ವಿಪಕ್ಷಗಳು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿವೆ. ಇದಕ್ಕೆ ಸಚಿವ ಈಶ್ವರ್ ಖಂಡ್ರೆ ತಿರುಗೇಟು ನೀಡಿದ್ದು, ಬಂಡೀಪುರ ಅರಣ್ಯದಲ್ಲಿ ರಾತ್ರಿ ವಾಹನ ಸಂಚಾರಕ್ಕೆ ನಮ್ಮ ಸರ್ಕಾರ ಯಾವುದೇ ಹೊಸ ಅನುಮತಿ ನೀಡಿಲ್ಲ. ಹೀಗಾಗಿ, ಬಂಡೀಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ವೇಳೆ ಎರಡು ಬಸ್ ಸೇವೆಗಳನ್ನು ಅನುಮತಿಸಿರುವ ಬಗ್ಗೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಅಪ್ರಮಾಣಿಕ ಆರೋಪಗಳನ್ನು ಮಾಡುತ್ತಿವೆ ಮತ್ತು ಜನರಿಗೆ ತಪ್ಪು ಮಾಹಿತಿ ಹರಡಲು ಪ್ರಯತ್ನಿಸುತ್ತಿವೆ. ಹಳೆ ನೀತಿ ಮುಂದುವರಿಯುತ್ತಿರುವುದನ್ನೇ ಸುಳ್ಳು ಆರೋಪ ಮಾಡಿ, ಕಾಂಗ್ರೆಸ್…
ಬಾಗಲಕೋಟೆ : ಬ್ಯಾಂಕ್ ನಲ್ಲಿ ಸಾಲ ಪಡೆದುಕೊಂಡಿದ್ದು ಆ ಸಾಲವನ್ನು ತೀರಿಸಲ್ಲವೆಂದು ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಬಿಜೆಪಿ ಮಾಜಿ ಶಾಸಕ ವೀರಣ್ಣ ಚರಂತಿ ಮಠ್ ವಿರುದ್ಧ ಈ ಒಂದು ಹಲ್ಲೆ ಆರೋಪ ಕೇಳಿಬಂದಿದೆ. ಹಲ್ಲೆಗೆ ಒಳಗಾದಂತಹ ಆನಂದ್ ಮುತ್ತಗಿ ಎನ್ನುವವರು ಬಾಗಲಕೋಟೆಯ ಶಹರ ಪೊಲೀಸ್ ಠಾಣೆಯಲ್ಲಿ ಚರಂತಿಮಠ ಸೇರಿ ನಾಲ್ವರ ವಿರುದ್ಧ ದೂರು ದಾಖಲಿಸಿದ್ದಾರೆ. ಚರಂತಿಮಠ ಬೀಳೂರು ಗುರುಬಸವ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿದ್ದಾರೆ. ಇದೇ ಸಹಕಾರ ಸಂಘದಿಂದ ಆನಂದ ಮುತ್ತಗಿ 35 ಲಕ್ಷ ರೂಪಾಯಿ ಸಾಲ ಪಡೆದಿದ್ದರು. 2018ರಿಂದ ಸಾಲ ಮರುಪಾವತಿ ಮಾಡದೆ ಬಾಕಿ ಉಳಿಸಿಕೊಂಡಿದ್ದರು. ಇದೀಗ ಸಾಲದ ಹಣ ಕಟ್ಟದಿದ್ದಕ್ಕೆ ವೀರಣ್ಣ ಚರಂತಿಮಠ ಹಲ್ಲೆ ಮಾಡಿದ್ದಾರೆಂದು ಆರೋಪ ಮಾಡಿದ್ದಾರೆ. ಈ ಕುರಿತು ಹಲ್ಲೆಗೆ ಒಳಗಾದ ಆನಂದ್ ಮುತ್ತಗಿ ಅವರು ಮಾತನಾಡಿ, ಬ್ಯಾಂಕ್ ನಲ್ಲಿ ಪಡೆದ 35 ಲಕ್ಷ ಪಾವತಿ ಸೇರಲು ಆಗಿರಲಿಲ್ಲ ಜಮೀನು ಮಾರಿ ಹಣ ಪಾವತಿಸಲು ನಿರ್ಧರಿಸಿದೆ. ಸಹಕಾರ ಸಂಘದ…
ಮಹಾರಾಷ್ಟ್ರ : ಪ್ರೀತಿ ನಿರಾಕರಿಸಿದಳೆಂದು ಸಹೋದ್ಯೋಗಿ ಯುವತಿಯನ್ನೇ ಹಾಡು ಹಗಲೇ ನೂರಾರು ಜನರ ಮುಂದೆ ಯುವಕನೊಬ್ಬ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಯರವಾಡ ಎಂಬಲ್ಲಿ ಒಂದು ಘಟನೆ ನಡೆದಿದೆ. ಹೌದು ಕೊಲೆಯಾದ ಯುವತಿ ಹಾಗೂ ಪಾಪಿ ಯುವಕ ಇಬ್ಬರೂ ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಹುಡುಗನ ಪ್ರೀತಿ ನಿವೇದನೆಯನ್ನು ಹುಡುಗಿ ನಿರಾಕರಿಸಿದ್ದಕ್ಕೆ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಇನ್ನೂ ಕೆಲವು ಕಡೆ ಆರ್ಥಿಕ ವಿಚಾರವಾಗಿ ಕೊಲೆ ನಡೆದಿದೆ ಎಂದು ವರದಿಯಾಗಿದೆ. ಪ್ರೀತಿಸೋದಕ್ಕೆ ನಿರಾಕರಿಸಿದ್ದಕ್ಕೆ ಹಾಡು ಹಗಲಿನಲ್ಲಿ ನೂರಾರು ಜನ ನೋಡುತ್ತಿರುವಂತೆಯೇ ಕಂಪನಿಯ ಪಾರ್ಕಿಂಗ್ ಲಾಟ್ನಲ್ಲಿಯೇ ಭೀಕರವಾಗಿ ಕೊಲೆ ಮಾಡಿದ್ದಾನೆ.ಎಷ್ಟೋ ಜನ ಘಟನೆಯನ್ನ ನೋಡುತ್ತಾ ನಿಂತರೆ ಹೊರತು ಯಾರು ಕೂಡ ಕೊಲೆಯನ್ನು ತಡೆಯುವ ಕನಿಷ್ಟ ಪ್ರಯತ್ನ ಕೂಡ ಮಾಡಲಿಲ್ಲ. ಸದ್ಯ ಆರೋಪಿಯನ್ನ ಬಂಧಿಸಿ ಪೊಲೀಸರು ಜೈಲಿಗಟ್ಟಿದ್ದಾರೆ.
ಬೆಂಗಳೂರು : ಸಮಾಜದ ಮುಖ್ಯ ವಾಹಿನಿಗೆ ಬರಲು ನಿರ್ಧರಿಸಿ ನಿನ್ನೆ ಬೆಂಗಳೂರಿನ ಗ್ರಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾಗಿದ್ದ 6 ಜನ ನಕ್ಸಲರನ್ನು ಪೊಲೀಸರು ಇಂದು ಬೆಂಗಳೂರಿನ ಎನ್ಐಎ ವಿಶೇಷ ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಧೀಶರು ಜನೆವರಿ 30 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಹೌದು ನಿನ್ನೆ ಸರ್ಕಾರದ ಮುಂದೆ ಶರಣಾಗಿದ್ದ 6 ಜನ ನಕ್ಸಲರಿಹೆ ಇದೀಗ ನ್ಯಾಯಾಂಗ ಬಂಧನ ವಿಧಿಸಿ NIA ವಿಶೇಷ ಕೋಟ್ ಆದೇಶ ಹೊರಡಿಸಿದೆ. ನಿನ್ನೆ ಬೆಂಗಳೂರಿನ ಗ್ರಾಹಕಚೇರಿ ಕೃಷ್ಣಾದಲ್ಲಿ ಆರು ಜನ ನಕ್ಷತ್ರರು ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಸಚಿವ ಜಿ ಪರಮೇಶ್ವರ್ ಅವರ ಸಮ್ಮುಖದಲ್ಲಿ ಸರ್ಕಾರಕ್ಕೆ ಶರಣಾಗಿದ್ದರು. ನಕ್ಸಲರು ಶರಣಾದ ಬಳಿಕ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದರು. ಇಂದು ಬೆಂಗಳೂರಿನ ಎನ್ಐಎ ವಿಶೇಷ ಕೋರ್ಟಿಗೆ ಹಾಜರುಪಡಿಸೋಕು ಮುನ್ನ ವೈದ್ಯಕೀಯ ಪರೀಕ್ಷೆಗೆ ಅವರನ್ನು ಒಳಪಡಿಸಲಾಗಿತ್ತು. ಬಳಿಕ ಎನ್ಐಎ ವಿಶೇಷ ಕೋರ್ಟಿಗೆ ಹಾಜರುಪಡಿಸಿದ ಪೊಲೀಸರು ಇದೀಗ ಕೋರ್ಟ್ ಆರು ಜನ…
ಬೆಂಗಳೂರು : ಸಮಾಜದ ಮುಖ್ಯ ವಾಹಿನಿಗೆ ಬರಲು ನಿರ್ಧರಿಸಿ ನಿನ್ನೆ ಮೋಸ್ಟ್ ವಾಂಟೆಡ್ 6 ಜನ ನಕ್ಸಸಲರು ಬೆಂಗಳೂರಿನ ಗೃಹಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾದರು.ಬಳಿಕ ಅವರನ್ನ ವಶಕ್ಕೆ ಪಡೆದ ಪೊಲೀಸರು ಇಂದು ಅವರನ್ನು ಬೆಂಗಳೂರಿನ ಎನ್ಐಎ ವಿಶೇಷ ಕೋರ್ಟಿಗೆ ಹಾಜರುಪಡಿಸಿದ್ದಾರೆ. ಹೌದು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಸಂಕಿರಣದ ಎನ್ಐಐ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ನಕ್ಸಲರನ್ನು ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಪೊಲೀಸರು ಇದೀಗ ಹಾಜರುಪಡಿಸಿದ್ದಾರೆ. ಇದಕ್ಕೂ ಮೊದಲು 6 ಜನರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಬಳಿಕ ಎನ್ಐಎ ವಿಶೇಷ ಕೋರ್ಟ್ ಮುಂದೆ ಇದೀಗ ಹಾಜರುಪಡಿಸಿದ್ದಾರೆ.
ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಜೈಲಿಗೆ ಹೋಗ್ತಾರೆ ಅಂತ ಹೇಳಿದ್ದರು. 25 ವರ್ಷಗಳ ಹಿಂದೆ ದ್ವಾರಕಾನಾಥ್ ಗುರೂಜಿ ಹೇಳಿದ್ದರು. ನಿಮ್ ಬಾಸ್, ನಿಮ್ಮ ಗುರು ಜೈಲಿಗೆ ಹೋಗ್ತಾರೆ ಅಂತ ಹೇಳಿದ್ರು.ಜೈಲಿಗೆ ಹೋಗಿ ಬಂದ ಮೇಲೆ ಡಿಕೆ ಸಿಎಂ ಆಗ್ತಾರೆ ಎಂದಿದ್ದರು ಎಂದು ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಹೇಳಿಕೆ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಅವರು, ಡಿಕೆ ಹಣೆಬರದಲ್ಲಿ ಬರೆದಿದ್ದರೆ ಮುಖ್ಯಮಂತ್ರಿ ಆಗುತ್ತಾರೆ. ಡಿಕೆ ಶಿವಕುಮಾರ್ ಡಿಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರೇ ಲಾಸ್ಟ್ ಅಂತ ಬರೆದಿದ್ದರೆ ಅದೇ ಕೊನೆ. ಡಿಕೆ ಶಿವಕುಮಾರ್ ಸಿಎಂ ಆಗುವ ಕುರಿತು ಅವರ ಹೈಕಮಾಂಡ್ ಮತ್ತು ಶಾಸಕರು ತೀರ್ಮಾನ ಮಾಡುತ್ತಾರೆ ಯಾರು ಸಿಎಂ ಆಗಬೇಕು ಅಂತ ತೀರ್ಮಾನ ಮಾಡುತ್ತಾರೆ ಎಂದರು. ಡಿಕೆ ಶಿವಕುಮಾರ್ ಎಲ್ಲರನ್ನು ವಿಶ್ವಾಸ ತೆಗೆದುಕೊಂಡು ತಾಳ್ಮೆಯಿಂದ ಮುಂದೆ ಹೋಗುತ್ತಿರುವುದನ್ನು ಇತ್ತೀಚಿಗೆ ಅವರನ್ನು ನೋಡುತ್ತಿದ್ದೇವೆ. ಅವರು ಎಂಟು ಬಾರಿ ಶಾಸಕರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದಾರೆ…
ಮಂಡ್ಯ : ಮಂಡ್ಯದಲ್ಲಿ ಜಿಸಿಬಿ ಒಂದನ್ನು ಒವರ್ ಟೆಕ್ ಮಾಡುವ ಭರದಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಚಲಿಸುತ್ತಿದ್ದ ಬೈಕ್ ಸವಾರರು ಜೆಸಿಬಿ ಚಕ್ರದ ಅಡಿ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಗ್ರಾಮದಲ್ಲಿ ನಡೆದಿದೆ.ಈ ವೇಳೆ ಓರ್ವ ಸವಾರನ ಸ್ಥಿತಿ ಗಂಭೀರವಾಗಿದೆ. ಹೌದು ಮಂಡ್ಯದಲ್ಲಿ ಚಲಿಸುತ್ತಿದ್ದ ಜೆಸಿಬಿ ಕೆಳಗೆ ಸವಾರರು ಬಿದ್ದಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.ಬೈಕ್ ಸವಾರ ತಿಮ್ಮೇಗೌಡ ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಜೆಸಿಬಿ ಹಿಂದಿಕ್ಕುವ ಜಿದ್ದಾ ಜಿದ್ದಿಗೆ ಬಿದ್ದು ಭೀಕರವಾದ ಅಪಘಾತ ಸಂಭವಿಸಿದೆ. ಭೀಕರ ಅಪಘಾತ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ತಕ್ಷಣ ಸವಾರ ತಿಮ್ಮೇಗೌಡನನ್ನು ಸ್ಥಳೀಯರು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಹಾವೇರಿ : ಅತಿಯಾದ ವೇಗದ ಚಾಲನೆ ಜೀವಕ್ಕೆ ಅಪಾಯಕಾರಿ ಎಂಬಂತೆ ಮಗನೋಬ್ಬ ಬೈಕಿನಲ್ಲಿ ತನ್ನ ತಾಯಿಯನ್ನು ಕೂಡಿಸಿಕೊಂಡು ತೆರಳುತ್ತಿದ್ದ ವೇಳೆ ಟೋಲ್ ಗೇಟ್ ಬಳಿ ತಡೆಗಂಬ ಬಡಿದು ತಾಯಿ ಸ್ಥಳದಲ್ಲಿ ಸಾವನ್ನಪ್ಪಿರುವ ದಾರುಣ ಘಟನೆ ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನಲ್ಲಿ ನಡೆದಿದೆ. ಹೌದು ಬೈಕ್ ಸವಾರನ ನಿರ್ಲಕ್ಷಕ್ಕೆ ಆತನ ತಾಯಿ ಬಲಿಯಾಗಿದ್ದಾಳೆ. ಟೋಲ್ ಗೇಟ್ ಹಾಕಿದರೂ ಕೂಡ ಸವಾರ ನಿರ್ಲಕ್ಷದಿಂದ ಬೈಕ್ ಚಾಲನೆ ಮಾಡಿದ್ದಾನೆ. ಇ ವೇಳೆ ಹಿಂದೆ ಕುಳಿತಿದ್ದ ಸವಾರನ ತಾಯಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಣೇಬೆನ್ನೂರು ತಾಲೂಕಿನ ಚಳಗೇರಿಯಲ್ಲಿ ಈ ಒಂದು ಘಟನೆ ನಡೆದಿದೆ ಟೋಲ್ ಗೇಟ್ ತಡೆಗಂಬ ಬಡಿದು ಮಹಿಳೆ ಸಾವನ್ನಪ್ಪಿದ್ದಾರೆ. ಘಟನೆ ಕುರಿತಂತೆ ರಾಣೆಬೆನ್ನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ರಾಜ ಸರ್ಕಾರದ ವಿರುದ್ಧ ಎಚ್ ಡಿ ಕುಮಾರಸ್ವಾಮಿ 60% ಕಮಿಷನ್ ಆರೋಪ ಮಾಡಿರುವ ವಿಚಾರವಾಗಿ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಎಚ್ ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಉಪಚುನಾವಣೆಗೆ ಪುತ್ರನನ್ನು ನಿಲ್ಲಿಸಿದಾಗ 100 ಕೋಟಿ ಖರ್ಚು ಮಾಡಿದರು. 100 ಕೋಟಿ ಹಣವನ್ನು ಆಲುಗಡ್ಡೆ ಬೆಳೆದು ಸಂಪಾದನೆ ಮಾಡಿದ್ರಾ? ಎಂದು ಬೆಂಗಳೂರಿನಲ್ಲಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಎಸ್ಟಿ ಸೋಮಶೇಖರ್ ವಾಗ್ದಾಳಿ ನಡೆಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ನೀವು ನಿಂತಾಗ ಕೋಟ್ಯಾಂತರ ರೂಪಾಯಿ ಹಣ ಖರ್ಚು ಮಾಡಿದ್ರಿ. ರಾಮನಗರದಲ್ಲೂ ಕೂಡ ಸ್ಪರ್ಧಿಸಿದಾಗ ಕೋಟ್ಯಾಂತರ ಹಣ ಖರ್ಚು ಮಾಡಿದ್ರಿ. ಎಲ್ಲಿಂದ ಬಂತು ಅಷ್ಟು ಹಣ? ಮೊದಲು ಅದನ್ನು ಹೇಳಿ ಎಂದು ಸೋಮಶೇಖರ್ HD ಕುಮಾರಸ್ವಾಮಿಗೆ ಸವಾಲು ಹಾಕಿದರು. ಕೇಂದ್ರ ಸರ್ಕಾರದ ಯೋಜನೆಗಳನ್ನು ರಾಜ್ಯಕ್ಕೆ ತೆಗೆದುಕೊಂಡು ಬನ್ನಿ. ವಾರಕ್ಕೆ ಒಂದು ದಿನ ಇಲ್ಲಿಗೆ ಬಂದು ಸುದ್ದಿಗೋಷ್ಠಿ ನಡೆಸಿ ಹೋಗುವುದಲ್ಲ. ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸುಮ್ಮನೆ…
ಹಾಸನ : 50 ಸಾವಿರ ರೂಪಾಯಿ ಲಂಚ ಸ್ವೀಕರಿಸುವ ಸಂದರ್ಭದಲ್ಲಿ ನಗರಸಭೆಯ ಆಯುಕ್ತ ಹಾಗೂ ಎಇಇ ಅಧಿಕಾರಿಯು ಒಬ್ಬ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಹಾಸನದಲ್ಲಿ ನಡೆದಿದೆ. ಹೌದು 50 ಸಾವಿರ ಲಂಚ ಸ್ವೀಕರಿಸುವ ವೇಳೆ ಹಾಸನ ನಗರಸಭೆ ಆಯುಕ್ತ ಹಾಗೂ ಎಇಇ ಬಲೆಗೆ ಬಿದ್ದಿದ್ದಾರೆ. 50 ಸಾವಿರ ಸ್ವೀಕರಿಸುತ್ತಿರುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬೆಲೆಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.ಆಯುಕ್ತ ನರಸಿಹಮೂರ್ತಿ, ಎಇಇ ವೆಂಕಟೇಶ್ ಕೆ ಆರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಂತಹ ಅಧಿಕಾರಿಗಳ ರಕ್ಷಣೆಗೆ ಕೌನ್ಸಿಲರ್ ಗಳು ನಿಂತಿದ್ದಾರೆ. ವೆಂಕಟೇಶ್ವರ ನಗರಸಭೆಯ ಸದಸ್ಯರು ವಕಾಲತ್ತು ವಹಿಸಿದರು. 50,000 ಲಂಚ ಪಡೆದಿದ್ದರಲ್ಲಿ ಎಇಇ ವೆಂಕಟೇಶ್ ಪಾತ್ರ ಏನು ಇಲ್ಲ ನಗರಸಭೆ ಆಯುಕ್ತರ ಸೂಚನೆ, ಮೇರೆಗೆ ಲಂಚ ಪಡೆದಿದ್ದಾರೆ ಎಂದು ಸದಸ್ಯರು ಹೇಳಿದರು. ಈ ವೇಳೆ ಲೋಕಾಯುಕ್ತ ಪಿಐ ಬಾಲು ನಗರಸಭೆ ಸದಸ್ಯರಿಗೆ ಎಚ್ಚರಿಕೆ ನೀಡಿದರು. ನಾವು ಅಮಾಯಕರ ಮೇಲೆ ದಾಳಿ ಮಾಡಿಲ್ಲ. ಲಂಚ…