Subscribe to Updates
Get the latest creative news from FooBar about art, design and business.
Author: kannadanewsnow05
ಕಲಬುರ್ಗಿ : ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿ ಒಂದು ಕೋಟಿಗೂ ಹೆಚ್ಚು ಲೂಟಿ ಹೊಡೆಯಲಾಗಿದೆ. ಗುಲ್ಬರ್ಗ ವಿಶ್ವವಿದ್ಯಾಲಯದ ಮತ್ತೊಂದು ಕರ್ಮಕಾಂಡ ಬಯಲಾಗಿದ್ದು, ಹಣಕಾಸು ವಿಭಾಗದ ಅಕೌಂಟೆಂಟ್ ನಿಂದ ಹಣ ಲೂಟಿಯಾಗಿದೆ. ತುರ್ತು ಭತ್ಯೆ ಹೆಸರಲ್ಲಿ ಸರ್ಕಾರದ ಬೊಕ್ಕಸಕ್ಕೆ ವಂಚನೆ ಎಸಗಿದ್ದಾನೆ. ವಿಶ್ವವಿದ್ಯಾಲಯದ ಅಕೌಂಟೆಂಟ್ ಶರಣು ಹೂಗಾರ ವಿರುದ್ಧ ಈ ಒಂದು ಆರೋಪ ಕೇಳಿ ಬಂದಿದೆ. ಸಿಬ್ಬಂದಿಗೆ ಸಂಬಳದ ಜೊತೆಗೆ ಹೆಚ್ಚುವರಿ ತುರ್ತು ಭತ್ಯೆ ಹಾಕುತ್ತಿದ್ದ ತಪ್ಪಾಗಿ ಬಂದಿದೆ ಅಂತ ತನ್ನ ಖಾತೆಗೆ ವಾಪಸ್ ಹಾಕಿಸಿಕೊಳ್ಳುತ್ತಿದ್ದ. ಈ ರೀತಿ ಪ್ಲಾನ್ ಮಾಡಿ ಸರ್ಕಾರದ ಬೊಕ್ಕಸಕ್ಕೆ ಒಂದು ಕೋಟಿಗೂ ಹೆಚ್ಚು ಹಣ ಲೂಟಿ ಮಾಡಿ ವಂಚನೆ ಎಸಗಿದ್ದಾನೆ. ಹೊರಗುತ್ತಿಗೆ ಆಧಾರದಲ್ಲಿ ಟೆಕ್ನಿಷಿಯನ್ ಆಗಿ ಈತ ಕೆಲಸಕ್ಕೆ ಸೇರಿದ್ದ.10 ವರ್ಷಗಳಿಂದ ಹಣಕಾಸು ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಹಣ ಲೂಟಿ ಬೆಳಕಿಗೆ ಬರಿತ್ತೀದ್ದ ಹಾಗೆ ವಿಶ್ವವಿದ್ಯಾಲಯದಿಂದ ಈತನನ್ನು ಕಿಕ್ ಔಟ್ ಮಾಡಲಾಗಿದೆ. ವಿಶ್ವವಿದ್ಯಾಲಯ ಆಡಳಿತ ಮಂಡಳಿ ಹೊರಹಾಕಿದೆ.
ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಕೃತ್ಯ ನಡೆದಿದ್ದು, ಬೆಂಗಳೂರಲ್ಲಿ ಅಪಾರ್ಟ್ಮೆಂಟ್ ನಲ್ಲಿ 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ವರದಿಯಾಗಿದೆ. ಬೆಂಗಳೂರು ನಗರದ ಹೊರವಲಯದಲ್ಲಿರುವ ಅಪಾರ್ಟ್ಮೆಂಟಲ್ಲಿ ಈ ಒಂದು ಕೃತ್ಯ ನಡೆದಿದ್ದು, ಬಾಲಕೀಯ ಅಂಗಾಂಗ ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಅಪಾರ್ಟ್ಮೆಂಟ್ ನಿವಾಸಿ ಪರಿಚಿತನಿಂದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ. ತನ್ನ ಮೇಲೆ ನಡೆದ ಲೈಂಗಿಕ ದೋಷದಿಂದ ಬಗ್ಗೆ ಬಾಲಕಿ ತಾಯಿಗೆ ಮಾಹಿತಿ ನೀಡಿದ್ದಾಳೆ. ಈ ವೇಳೆ ಅಪಾರ್ಟ್ಮೆಂಟ್ ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ. ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. ಪೊಲೀಸರು ಆರೋಪಿಯನ್ನು ಕೋರ್ಟಿಗೆ ಹಾಜರುಪಡಿಸಿ ಜೈಲಿಗೆ ಅಟ್ಟಿದ್ದಾರೆ.
ಬೆಂಗಳೂರು : ಬೆಂಗಳೂರಲ್ಲಿ ಕಿಲ್ಲರ್ ಬಿಎಂಟಿಸಿಗೆ ಇಂದು ವಿದ್ಯಾರ್ಥಿನಿಯೊಬ್ಬಳು ಬಲಿಯಾಗಿದ್ದಾಳೆ. 9 ವರ್ಷದ ಭಾವನಾ ಎಂಬ ವಿದ್ಯಾರ್ಥಿನೀ ಮೇಲೆ ಬಿಎಂಟಿಸಿ ಬಸ್ ಹರಿದು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ರಾಜಾಜಿನಗರದಲ್ಲಿ ನಡೆದಿದೆ. ಇದರ ಬೆನ್ನಲ್ಲೆ ಇದೀಗ ಬಿಎಂಟಿಸಿ ಚಾಲಕ ಮತ್ತೊಂದು ಯಡವಟ್ಟು ಮಾಡಿರುವ ಘಟನೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದಿದೆ. ಹೌದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸರಣಿ ಅಪಘಾತ ಸಂಭವಿಸಿ ಏಕಾಏಕಿ ಬಂದು 9 ವಾಹನಗಳಿಗೆ ಬಸ್ ಚಾಲಕ ಡಿಕ್ಕಿ ಹೊಡೆದಿದ್ದಾನೆ. ಚಿನ್ನಸ್ವಾಮಿ ಕ್ರೀಡಾಂಗಣದ 9ನೇ ಈ ಒಂದು ಸರಣಿ ಅಪಘಾತ ಸಂಭವಿಸಿದ್ದು, ಬಿಎಂಟಿಸಿ ಬಸ್ ಚಾಲಕನಿಗೆ ಪಿಡ್ಸ್ ಬಂದಿದ್ದರಿಂದ ಈ ಒಂದು ಅಪಘಾತ ಸಂಭವಿಸಿದೆ. ಘಟನೆಯಲ್ಲಿ 3 ಆಟೋ 3 ಕಾರು ಹಾಗೂ ಬೈಕ್ಗಳಿಗೆ ಬಸ್ ಡಿಕ್ಕಿ ಹೊಡೆದಿದೆ. ಒಂದು ಆಟೋ ಸಂಪೂರ್ಣ ಸ್ಥಿತಿ ಗಂಭೀರವಾಗಿದೆ. ಬಿಎಂಟಿಸಿ ಬಸ್ ಚಾಲಕನನ್ನು ಕೂಡ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಘಟಕಕ್ಕೆ ಕಬ್ಬನ್ ಪಾರ್ಕ್ ಅಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಂಗಳೂರು : ಮಂಗಳೂರಿನಲ್ಲಿ ಕೇರಳ ಚಲನಚಿತ್ರ ನಟ ಜಯಕೃಷ್ಣನನ್ನು ಇದೀಗ ಅರೆಸ್ಟ್ ಮಾಡಲಾಗಿದೆ. ಉರ್ವ ಠಾಣೆ ಪೊಲೀಸರು ನಟ ಜಯಕೃಷ್ಣನನನ್ನು ಅರೆಸ್ಟ್ ಮಾಡಿದ್ದಾರೆ. ನಟ ಜಯಕೃಷ್ಣನ ಸರಿ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಕ್ಯಾಬ್ ಚಾಲಕನನ್ನು ಟೆರರಿಸ್ಟ್ ಎಂದು ಬೈದಿದಕ್ಕೆ ಎಫ್ ಐ ಆರ್ ದಾಖಲಾಗಿತ್ತು. ನಟ ಜಯಕೃಷ್ಣನ ಸೇರಿ ಮೂವರ ವ್ರಿಗೆವಿರುದ್ಧ ಕೇಸ್ ದಾಖಲು ಮಾಡಲಾಗಿತ್ತು. ಮಂಗಳೂರು ಸೆಪ್ಟೆಂಬರ್ 9 ರಂದು ಆಪ್ ಮೂಲಕ ಕ್ಯಾಬ್ ಮಾಡಿದ್ದಾನೆ. ನಟ ಜಯ ಕೃಷ್ಣನ್ ಸಂತೋಷ್ ಮತ್ತು ಅಬ್ರಹಾಂ ಅಪಹಾಸ್ಯ ಮಾಡಿರುವ ಆರೋಪ ಕೇಳಿ ಬಂದಿದೆ. ಹಿಂದಿ ಮಲಯಾಳಂ ಭಾಷೆಯಲ್ಲಿ ಆವಾಜಿ ಶಬ್ದಗಳಿಂದ ನಿಂದನೆ ಮಾಡಿದ್ದಾರೆ. ಬಿಎನ್ಎಸ್ 352 353 (2)ರ ಅಡಿ ಪ್ರಕರಣ ದಾಖಲಾಗಿತ್ತು.
ಬೆಂಗಳೂರು : ಬೆಂಗಳೂರಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದೆ. ವಿದ್ಯಾರ್ಥಿನಿಯ ಮೇಲೆ ಬಿಎಂಟಿಸಿ ಬಸ್ ಹರಿದು ಸ್ಥಳದಲ್ಲೇ ವಿದ್ಯಾರ್ಥಿನೀ ಸಾವನ್ನಪ್ಪಿರುವ ಘಟನೆ ರಾಜಾಜಿನಗರದ ಒಂದನೇ ಬ್ಲಾಕ್ ನಲ್ಲಿ ನಡೆದಿದೆ. Bmtc ಬಸ್ ಹರಿದು 9 ವರ್ಷದ ವಿದ್ಯಾರ್ಥಿನಿ ರಸ್ತೆಯಲ್ಲಿ ತೆರಳುತ್ತಿದ್ದಾಗ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಈ ವೇಳೆ ಸ್ಥಳೀಯರು ತಕ್ಷಣ ಬದುಕಿಸುವ ಪ್ರಯತ್ನ ಮಾಡಿದರು ಕೂಡ ಯಾವುದೇ ಪ್ರಯತ್ನ ಸಫಲವಾಗಲಿಲ್ಲ. ಸ್ಥಳದಲ್ಲಿ ವಿದ್ಯಾರ್ಥಿನಿ ಸಾವನಪ್ಪಿದ್ದಾಳೆ.
ಬಳ್ಳಾರಿ : ರಾಜ್ಯದಲ್ಲಿ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭವಾಗಿದ್ದು, ಈಗಾಗಲೇ ಸಮೀಕ್ಷೆ ಮುಗಿಯದ ಹಿನ್ನೆಲೆಯಲ್ಲಿ ಅಕ್ಟೋಬರ್ 13 ರವರೆಗೆ ಸಮೀಕ್ಷೆ ಅವಧಿಯನ್ನು ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿತ್ತು.ಇದೀಗ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಗೈರು ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಮಂಗಳೂರು : ರಾಜ್ಯದಲ್ಲಿ ಪಿಎಫ್ಐಯನ್ನು ನಿಷೇಧ ಗೊಳಿಸಲಾಗಿದ್ದು, ಇದೀಗ ನಿಷೇಧಿತ ಪಿ ಎಫ್ ಐ ಸಂಘಟನೆಯನ್ನು ಆಕ್ಟಿವ್ ಮಾಡಿದ ಧರ್ಮ ಗುರುವನ್ನು ಅರೆಸ್ಟ್ ಮಾಡಲಾಗಿದೆ. ಸೈಯದ್ ಇಬ್ರಾಹಿಂ ಅನ್ನು ಮಂಗಳೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನಿಷೇಧಿತ ಪಿ ಎಫ್ ಐ ಪರವಾಗಿ ಇಬ್ರಾಹಿಂ ಪ್ರಚಾರ ಮಾಡುತ್ತಿದ್ದ ಎನ್ನುವ ಆರೋಪ ಕೇಳಿ ಬಂದಿದ್ದು, ಪಿ ಎಫ್ ಐ ಸಂಘಟನೆ ಸದಸ್ಯರನ್ನು ಇಬ್ರಾಹಿಂ ಸಂಪರ್ಕ ಮಾಡಿದ್ದ. ದಕ್ಷಿಣ ಕನ್ನಡದಲ್ಲಿ ಇಬ್ರಾಹಿಂ ಸಲ್ಮಾನ್ ಸಲ್ಮ ಎಂಬ ವಾಟ್ಸಪ್ ಗ್ರೂಪ್ ರಚಿಸಿ ಪಿಎಫ್ಐ ಪ್ರಚಾರ ಮಾಡುತ್ತಿದ್ದ. ಮತ್ತೆ ಚಟುವಟಿಕೆ ಆರಂಭಿಸಲು ಸಯ್ಯದ್ ಇಬ್ರಾಹಿಂ ಪ್ರಚೋದನೆ ನೀಡುತ್ತಿದ್ದ. ನಗರದ ಉರ್ವ ಸ್ಟೋರ್ ಬಳಿ ಸೈಯದ್ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ ಅಡಿ ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಪಿ ಎಫ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಅಕ್ಟೋಬರ್ 24ರ ವರೆಗೆ ನ್ಯಾಯಾಂಗ ಬಂಧನಕೆ ನೀಡಿ ಕೋರ್ಟ್ ಆದೇಶ ಹೊರಡಿಸಿತು.
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಇದೀಗ ನಟ ದರ್ಶನ್ ಜೈಲಿನಲ್ಲಿ ಸಾಮಾನ್ಯ ಕೈದಿಗಳಂತೆ ಜೀವನ ನಡೆಸುತ್ತಿದ್ದಾರೆ. ಎಲ್ಲ ಖೈದಿಗಳಂತೆ ದರ್ಶನ್ ಗೂ ಸಾಮಾನ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ಇನ್ನು ದರ್ಶನ್ ಭೇಟಿಗೆ ಬಂದಿದ್ದ ಪತ್ನಿ ವಿಜಯ್ ಲಕ್ಷ್ಮಿಗೆ ಎರಡುವರೆ ಗಂಟೆ ಕಾದು ದರ್ಶನ್ ಭೇಟಿ ಮಾಡಿದ್ದಾರೆ. ಮೊದಲು ಸಿಬ್ಬಂದಿಗಳು ಜೈಲರ್ ಚೇಂಬರ್ ನಲ್ಲಿ ಕೂರಿಸಿ ನೇರವಾಗಿ ಭೇಟಿ ಮಾಡಿಸುತ್ತಿದ್ದರು. ಆದರೆ ಇದೀಗ ಟೋಕನ್ ತೆಗೆದುಕೊಂಡು ವಿಜಯಲಕ್ಷ್ಮಿ ಕ್ಯೂ ನಲ್ಲಿ ನಿಂತಿದ್ದಾರೆ. ನಂತರ ದರ್ಶನವರನ್ನು ವಿಜಯಲಕ್ಷ್ಮಿ ಗ್ಯಾಲರಿಯಲ್ಲಿ ಭೇಟಿ ಮಾಡಿದ್ದಾರೆ ಸಾಮಾನ್ಯ ಕೈದಿಗಳನ್ನ ಯಾವ ರೀತಿ ಭೇಟಿ ಮಾಡುತ್ತಾರೆ ಅದೇ ರೀತಿ ವಿಜಯಲಕ್ಷ್ಮಿ ದರ್ಶನ ಅವರನ್ನು ಭೇಟಿ ಮಾಡಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಘೋರ ದುರಂತ ಒಂದು ನಡೆದಿದ್ದು, ಸಜ್ಜಾ ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಪಶ್ಚಿಮ ಬಂಗಾಳದ ಮೂಲದ ಇಬ್ಬರು ಕೂಲಿಕಾರ್ಮಿಕರು ಸಾವನಪ್ಪಿದ್ದಾರೆ. ಬೆಂಗಳೂರಿನ ಬೆಳ್ಳಂದೂರಿನಲ್ಲಿ ಈ ಒಂದು ಘಟನೆ ನಡೆದಿದ್ದು ಅಮೀರ್ ಹುಸೇನ್ (33) ಹಾಗೂ ಮಮ್ತಾಜ್ ಅಲಿ (28)ಸಾವನಪ್ಪಿದ್ದಾರೆ. ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸದ ವೇಳೆ ಏಕಾಏಕಿಯಾಗಿ ಸಜ್ಜ ಕುಸಿದು ಬಿದ್ದಿದೆ. 13ನೇ ಫ್ಲೋರ್ ನಿಂದ ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ , ಇಂಪಿರಿಯಲ್ ಬಿಲ್ಡ್ ಟೆಕ್ ಪಾರ್ಕ್ ಪ್ರೈವೇಟ್ ಲಿಮಿಟೆಡ್ ವಿರುದ್ಧ ಈ ಕುರಿತು ಕೇಸ್ ಸಹ ದಾಖಲಾಗಿದ್ದು, ಪೊಲೀಸರು ಪ್ರಕರಣ ಘಟನೆಗೆ ಸಂಬಂಧಿಸಿದಂತೆ 6 ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಕೇಸ್ ಕೂಡ ದಾಖಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಪ್ರಿಯತಮೆಗಾಗಿ ಮನೆಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ಹೆಬ್ಬಗೋಡಿ ಠಾಣೆ ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಹೆಬ್ಬಗೋಡಿ ಠಾಣೆ ಪೊಲೀಸರು ಆರೋಪಿ ಶ್ರೇಯಸ್ ನನ್ನು ಅರೆಸ್ಟ್ ಮಾಡಿದ್ದಾರೆ. ಈತ ತನ್ನ ಪ್ರೇಯಸಿ ಚಿನ್ನದ ಓಲೆ ಮಾಡಿಸಿ ಕೊಡುವಂತೆ ಕೇಳಿದ್ದರಿಂದ ಕಳ್ಳತನ ಮಾಡಿದ್ದಾನೆ. ಹರೀಶ್ ಎಂಬುವವರ ಮನೆಯಲ್ಲಿ ಶ್ರೇಯಸ್ ಚಿನ್ನಾಭರಣ ಕಳ್ಳತನ ಮಾಡಿದ್ದು, ಸದ್ಯ 415ಗ್ರಾಂ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














