Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಹಿರಿಯ IPS ಅಧಿಕಾರಿ ಚಂದ್ರಶೇಖರ್ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ ಪ್ರಕರಣಕ್ಕೆ ಸಂಭಂದಿಸಿದಂತೆ ಎಚ್ ಡಿ ಕುಮಾರಸ್ವಾಮಿ ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ಇಂದು ಹೈಕೋರ್ಟ್ ನಲ್ಲಿ ವಿಚಾರಣೆ ನಡೆಸಿದ ಬಳಿಕ, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಜನೆವರಿ 30 ರವರೆಗೆ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ಹೋರಡಿಸಿತು. ಹೌದು ಕೇಂದ್ರ ಸಚಿವ ಕುಮಾರಸ್ವಾಮಿಗೆ ಮಧ್ಯಂತರ ರಿಲೀಫ್ ವಿಸ್ತರಿಸಿದ ಹೈಕೋರ್ಟ್, ಜನವರಿ 30 ರವರೆಗೆ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ ಹೊರಡಿಸಿದೆ. ಎಚ್ ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಹಾಗೂ ಸುರೇಶ್ ಬಾಬು ಅರ್ಜಿ ಸಲ್ಲಿಸಿದ್ದರು. ಎಫ್ಐಆರ್ ಆಧರಿಸಿ ಹಳೆಯ ನಿರೀಕ್ಷಣಾ ಜಾಮೀನು, ರದ್ದು ಪಡಿಸುವಂತಿಲ್ಲ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಏಕ ಸದಸ್ಯ ಪೀಠ ಇದೀಗ ನಿರ್ಬಂಧ ವಿಸ್ತರಣೆ ಮಾಡಿದೆ ಬಲವಂತದ ಕ್ರಮ ಕೈಗೊಳ್ಳುವುದಿಲ್ಲವೆಂಬ ಎಸ್ ಪಿ ಪಿ ಹೇಳಿಕೆಯನ್ನು…
BREAKING : ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ : ಜಾಮೀನು ರದ್ದತಿಗೆ ಸುಪ್ರೀಂಕೋರ್ಟಿಗೆ 7 ಪ್ರಮುಖ ಕಾರಣ ನೀಡಿದ ಸರ್ಕಾರ
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇತ್ತೀಚಿಗೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟಿಗೆ ನಟ ದರ್ಶನ್ ಸೇರಿ 7 ಆರೋಪಿಗಳ ಜಾಮೀನು ರದ್ಧತಿ ಮಾಡುವಂತೆ ಮೇಲ್ಮನವಿ ಸಲ್ಲಿಸಿತ್ತು. ರಾಜ್ಯ ಸರ್ಕಾರ ನಟ ದರ್ಶನ್ ಅವರಿಗೆ ಜಾಮೀನು ರದ್ದತಿ ಮಾಡುವಂತೆ 7 ಪ್ರಮುಖ ಕಾರಣಗಳನ್ನು ನೀಡಿದೆ. ಹೌದು ಜಾಮೀನು ರದ್ದತಿಗೆ ರಾಜ್ಯ ಸರ್ಕಾರ 7 ಕಾರಣ ನೀಡಿದೆ. ಸುಪ್ರೀಂ ಕೋರ್ಟ್ ಗೆ ಸಲ್ಲಿಸಿರುವ ಮೇಲ್ಮನವಿಯಲ್ಲಿ ಉಲ್ಲೇಖಿಸಿದೆ. ಪವಿತ್ರಗೌಡ, ನಟ ದರ್ಶನ್, ಜಗದೀಶ್, ಅನು ಕುಮಾರ್, ನಾಗರಾಜ್, ಲಕ್ಷ್ಮಣ್ ಹಾಗೂ ಪ್ರದೋಶ್ ಜಾಮೀನು ರದ್ಧತಿಗೆ ಮನವಿ ಸಲ್ಲಿಸಲಾಗಿದೆ. ರಾಜ್ಯದ ಒಳಗೆ ಮತ್ತು ಹೊರಗೆ ನಟ ದರ್ಶನ್ ಅವರು ಅಭಿಮಾನಿಗಳನ್ನು ಅಪಾರ ಹೊಂದಿದ್ದಾರೆ. ಸೆಲೆಬ್ರಿಟಿ ಆಗಿರುವುದರಿಂದ ಸಾಕ್ಷಿ ತಿರುಚುವ ಸಾಧ್ಯತೆ ಇದೆ. ಹೈಕೋರ್ಟ್ ಇದನ್ನು ಪರಿಗಣಿಸಿಲ್ಲ ಆರೋಪ ಪಟ್ಟಿಯಲ್ಲಿ 262 ಸಾಕ್ಷಿಗಳನ್ನು ಉಲ್ಲೇಖಿಸಲಾಗಿದೆ. ವಿಚಾರಣೆ ವಿಳಂಬ ಆಗಿದ್ದಕ್ಕೆ ಜಾಮೀನು ಮಂಜೂರು ಮಾಡಲಾಗಿದೆ ಎಂದು ಹೈಕೋರ್ಟ್ ಹೇಳಿದೆ. ಹೈಕೋರ್ಟ್ ನ ಈ ಅಭಿಪ್ರಾಯವೂ ಕೂಡ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಅಜೆಂಡ ಏನಿದೆ ಎಂಬುದು ಗೊತ್ತಿಲ್ಲ. ಪಕ್ಷದಲ್ಲಿ ಯಾವ ಗೊಂದಲವೂ ಇಲ್ಲ. ಎಸ್ಸಿ, ಎಸ್ಟಿ ಸಮಾವೇಶದ ಕುರಿತು ಕರೆದಿದ್ದ ಸಭೆ ಮುಂದೂಡಲು ಅನೇಕ ಕಾರಣಗಳಿವೆ. ಎಐಸಿಸಿ ವರಿಷ್ಟರು ಭಾಗವಹಿಸುವುದಾಗಿ ತಿಳಿಸಿದ್ದರಿಂದ ಮುಂದೂಡಲಾಗಿದೆ. ಎಐಸಿಸಿ ನಮ್ಮ ಮೇಲೆ ನಂಬಿಕೆ ಇಟ್ಟಿಲ್ಲ ಎಂಬ ಪ್ರಶ್ನೆ ಈಗ ಬರುವುದಿಲ್ಲ. ನೀವೆ ಬೆಳಗ್ಗೆ ಒಂದು, ಸಂಜೆ ಒಂದು ನಂಬಿಕೆಯ ಪ್ರಶ್ನೆ ಹುಟ್ಟು ಹಾಕುತ್ತಿದ್ದೀರಿ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನ ಕಾರ್ಯದರ್ಶಿಗಳಾದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲಾ ಅವರು ನನ್ನ ಹತ್ತಿರ ಮಾತನಾಡಿದ್ದಾರೆ. ಗೌಪ್ಯ ಸಭೆ ಏನು ಇಲ್ಲ. ನಮ್ಮ ಸಮಸ್ಯೆಗಳನ್ನು ಚರ್ಚಿಸಬೇಕು ಅಂತ ಸಭೆ ಸೇರುತ್ತಿದ್ದೇವೆ. ಅದಕ್ಕೆ ನೀವೆ ಬನ್ನಿ ಎಂದು ಕರೆದಿದ್ದೇನೆ. ಅವರು ದಿನಾಂಕ ಸೂಚಿಸುವುದಾಗಿ ತಿಳಿಸಿದ್ದಾರೆ. ನಂತರ ಸಭೆ ಮಾಡುತ್ತೇವೆ ಎಂದರು. ಸ್ಪಷ್ಟವಾದ ಸಭೆಯ ಬಗ್ಗೆ ಕೆಲವರು ಆತಂಕಕ್ಕೆ ಒಳಗಾಗಿದ್ದಾರೆ ಎಂದು ಮಾಧ್ಯಮದವರ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು,…
ಬೆಂಗಳೂರು : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಅವಾಚ್ಯ ಪದ ಬಳಕೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ಎಂಎಲ್ ಸಿ ಸಿ.ಟಿ. ರವಿಗೆ ಸಿಐಡಿ ನೋಟಿಸ್ ನೀಡಿದೆ. ನೋಟಿಸ್ ಗುರುತು ಪ್ರತಿಕ್ರಿಯೆಸಿದ ಅವರು ಸಿಐಡಿನ ನನಗೆ ನೋಟಿಸ್ ಬಂದಿದ್ದು ವಿಚಾರಣೆಗೆ ಹಾಜರಾಗಿ ಸತ್ಯ ಏನಿದೆಯೋ ಅದನ್ನು ಹೇಳುತ್ತೇನೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಐಡಿ ಇಂದ ನನಗೆ ನೋಟಿಸ್ ಬಂದಿದ್ದು ವಿಚಾರಣೆಗೆ ಹಾಜರಾಗಿ ಸತ್ಯ ಏನು ಇದೆಯೋ ಅದನ್ನು ಹೇಳುತ್ತೇನೆ ಎಂದು ಬೆಂಗಳೂರಿನಲ್ಲಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿಟಿ ರವಿ ಹೇಳಿಕೆ ನೀಡಿದರು ಸಭಾಪತಿಗಳು ತನಿಖೆ ನಡೆಸಬೇಕು ಎಂದು ಪೊಲೀಸರಿಗೆ ಸೂಚಿಸಿದ್ದರು ಅರುಣ್ ಕಿಶೋರ್ ಕುಮಾರ್ ಕೊಟ್ಟಿದ್ದ ದೂರು ಸಂಬಂಧ ನೋಟಿಸ್ ನೀಡಲಾಗಿತ್ತು. ನಾನು ಊರಿನಲ್ಲಿ ಇಲ್ಲದೆ ಇದ್ದಾಗ ಮೊದಲ ನೋಟೀಸ್ ಬಂದಿತ್ತು ಎಂದರು. ಇನ್ನು ನಿನ್ನೆ ದಕ್ಷಿಣ ಭಾರತದ ಮೋಸ್ಟ್ ವಾಂಟೆಡ್ 6 ಜನ ನಕ್ಸಲರು ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾಗತಿಯಾದ…
ಬೆಂಗಳೂರು : ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಇದೀಗ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.ಕಾರಣ ಏನೆಂದರೆ ಅತ್ಯಾಚಾರ ಆರೋಪ ನಿಗದಿ ಪಡಿಸಲು ಟ್ರಯಲ್ ನಡೆಸ ಬೇಕಾಗಿತ್ತು. ಆದರೆ ಇದೀಗ ಹೈಕೋರ್ಟ್ ಆರೋಪ ನಿಗದಿ ಮಾಡದಂತೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ ಹೌದು ತಮ್ಮ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಒಂದು ಅರ್ಜಿ ವಿಚಾರಣೆ ಮಾಡಿದ ಹೈಕೋರ್ಟ್, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಆರೋಪ ನಿಗದಿ ಮಾಡದಂತೆ ತಡೆ ನೀಡಿ ಆದೇಶ ಹೊರಡಿಸಿದೆ.ಇದೇ ಜನವರಿ 13 ರಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಆರೋಪ ನಿಗದಿ ಪ್ರಕ್ರಿಯೆ ಆರಂಭಿಸಲು ದಿನಾಂಕ ನಿಗದಿಯಾಗಿತ್ತು. ಆದರೆ, ಇದೀಗ ಹೈಕೋರ್ಟ್ನೊಂದ ಪ್ರಜ್ವಲ್ ರೇವಣ್ಣ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಜನವರಿ 13ರಂದು ಆರಂಭವಾಗಬೇಕಿದ್ದ ಆರೋಪ ನಿಗದಿ ಪ್ರಕ್ರಿಯೆ ಸದ್ಯ ತಾತ್ಕಾಲಿಕ…
ಚಾಮರಾಜನಗರ : ಅಭಿವೃದ್ಧಿ ಕಾಣದ ಹಾಗೂ ಹಿಂದುಳಿದ ಜಿಲ್ಲೆ, ಅದರಲ್ಲೂ ಈ ಒಂದು ಜಿಲ್ಲೆಗೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎನ್ನುವ ಹಣೆಪಟ್ಟಿ ಹೊಂದಿದ್ದ ಚಾಮರಾಜನಗರದಲ್ಲಿ ಇದೀಗ ಸಂಪುಟ ಸಭೆ ನಡೆಸಲು ಮುಹೂರ್ತ ಫಿಕ್ಸ್ ಆಗಿದೆ. ಹೌದು ಚಾಮರಾಜನಗರಕ್ಕೆ ಭೇಟಿ ನೀಡಿದ ರಾಜಕೀಯ ನಾಯಕರು ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಹಣೆಪಟ್ಟಿಯನ್ನು ಜಿಲ್ಲೆ ಹೊಂದಿತ್ತು. ಆದರೆ ಇದೀಗ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇದೆ ಚಾಮರಾಜನಗರದ ಮಲೆ ಮಾದೇಶ್ವರ ಬೆಟ್ಟದಲ್ಲಿ ಫೆಬ್ರವರಿ 15ರಂದು ಸಂಪುಟ ಸಭೆ ನಡೆಸಲು ನಿರ್ಧರಿಸಿದ್ದಾರೆ ಎಂದು ಸಚಿವ ಕೆ ವೆಂಕಟೇಶ್ ಮಾಹಿತಿ ನೀಡಿದರು. ಸಚಿವ ಸಂಪುಟ ಸಭೆ ಸಂಬಂಧ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಜಿಲ್ಲೆಗೆ ಅಗತ್ಯವಿರುವ ಮೂಲ ಸೌಕರ್ಯ ನಿವಾರಣೆ ಬಗ್ಗೆ ಪ್ರಸ್ತಾವನೆ ಸಲ್ಲಿಸಲು ತಿಳಿಸಲಾಗಿದೆ. ನಗರ ಮತ್ತು ಪಟ್ಟಣ ಪ್ರದೇಶಗಳಿಗೆ ಸಂಪೂರ್ಣ ಒಳಚರಂಡಿ ವ್ಯವಸ್ಥೆ, ಪರಿಸರ ಪ್ರವಾಸೋದ್ಯಮ ಉತ್ತೇಜಿಸಲು ಯೋಜನೆಗಳನ್ನು ಸರ್ಕಾರದ ಗಮನಕ್ಕೆ ತರಲಾಗುತ್ತದೆ. ಗ್ರಾಮಾಂತರ ಮತ್ತು ನಗರ, ಪಟ್ಟಣ ಪ್ರದೇಶಗಳಿಗೆ ಪರಿಪೂರ್ಣ ಮೂಲ ಸೌಕರ್ಯ,…
ಉಡುಪಿ : ಸಾಲ ನೀಡಿದ್ದ ಬ್ಯಾಂಕ್ ಅಧಿಕಾರಿಗಳು ಮನೆಗೆ ಬಂದು ಸಾಲ ವಾಪಸ್ ನೀಡುವಂತೆ ಕಿರುಕುಳ ನೀಡುತ್ತಿದ್ದರು. ಇದರಿಂದ ಮನನೊಂದ ಯುವಕನೊಬ್ಬ ಮನೆಯಲ್ಲಿ ಫ್ಯಾನ್ ಗೆ ನೇಣು ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಪಡುಬಿದ್ರೆಯಲ್ಲಿ ನಡೆದಿದೆ. ಮೃತ ಯುವಕನನ್ನು ನಸ್ರುಲ್ಲಾ(29) ಎಂದು ತಿಳಿದುಬಂದಿದ್ದು, ಈತ ವಿದೇಶದಲ್ಲಿ ಉದ್ಯೋಗದಲ್ಲಿ ತೊಡಗಿಕೊಂಡಿದ್ದ. ಕಳೆದ ಮೂರು ತಿಂಗಳ ಹಿಂದೆ ಅವರು ಊರಿಗೆ ವಾಪಸ್ ಆಗಿದ್ದರು ಈ ವೇಳೆ, ಸಾಲ ನೀಡಿದ ಬ್ಯಾಂಕ್ ಅಧಿಕಾರಿಗಳು ಮನೆಗೆ ಭೇಟಿ ನೀಡುತ್ತಿದ್ದರು. ಇದರಿಂದ ಮಾನಸಿಕವಾಗಿ ನೊಂದಿದ್ದ ನಸ್ರುಲ್ಲಾ ನಿನ್ನೆ ಮನೆಯ ಬೆಡ್ ರೂಂನಲ್ಲಿ ಫ್ಯಾನಿಗೆ ವೇಲ್ ನಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಕುರಿತು ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ತಿರುಪತಿಯಲ್ಲಿರುವ ವೈಕುಂಠ ದ್ವಾರ ದರ್ಶನ ಟಿಕೆಟ್ ಖರೀದಿಸುವ ಕೇಂದ್ರಗಳ ಬಳಿ ಕಾಲ್ತುಳಿತ ಸಂಭವಿಸಿ 6 ಜನರು ಸಾವನ್ನಪ್ಪಿದ್ದು, 40 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ವಿಚಾರವಾಗಿ ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ಅವರು ತಿರುಪತಿಯಲ್ಲಿ ರಾಜ್ಯದ ಭಕ್ತರಿಗೆ ಯಾವುದೇ ರೀತಿಯಾದ ತೊಂದರೆ ಆಗಿಲ್ಲ ಎಂದು ಸ್ಪಷ್ಟನೆ ನೀಡಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ತಿರುಪತಿಯಲ್ಲಿ ರಾಜ್ಯದ ಯಾವ ಭಕ್ತರಿಗೂ ತೊಂದರೆಯಾಗಿಲ್ಲ. ರಾಜ್ಯದ ಎಂಡೋಮೆಂಟ್ ಅಧಿಕಾರಿಯ ಜೊತೆ ನಾನು ಸಂಪರ್ಕದಲ್ಲಿ ಇದ್ದೇನೆ. ತಿರುಪತಿಯಲ್ಲಿ ಕರ್ನಾಟಕ ಭವನದ ಕ್ಷೇತ್ರದಲ್ಲಿ ಭಕ್ತಾದಿಗಳಿಗೆ ಸ್ನಾನ, ತಿಂಡಿ ಹಾಗೂ ಊಟದ ವ್ಯವಸ್ಥೆ ಮಾಡಲಾಗಿದೆ.ಅಲ್ಲಿ ತಕ್ಷಣಕ್ಕೆ ಬೇಕಾಗುವ ಅಗತ್ಯ ಕ್ರಮಕ್ಕೆ ಸ್ಪಂದಿಸಲು ಸೂಚಿಸಿದ್ದೇನೆ ಎಂದು ತಿಳಿಸಿದರು. ಬಳ್ಳಾರಿ ಮೂಲದ ಮಹಿಳೆಯ ಸಾವಾಗಿಲ್ಲ, ಡಿಸಿ ಸ್ಪಷ್ಟನೆ ತಿರುಪತಿಯಲ್ಲಿರುವ ವೈಕುಂಠ ದ್ವಾರ ದರ್ಶನ ಟಿಕೆಟ್ ಖರೀದಿಸುವ ಕೇಂದ್ರಗಳ ಬಳಿ ಕಾಲ್ತುಳಿತ ಸಂಭವಿಸಿ 6 ಜನರು ಸಾವನ್ನಪ್ಪಿದ್ದು, 40 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ವೇಳೆ ಬಳ್ಳಾರಿ ಮೂಲದ ಮಹಿಳೆಯೊಬ್ಬರು…
ಯಾದಗಿರಿ : ಕಳೆದ ವರ್ಷ ರಾಜ್ಯದ ಬಳ್ಳಾರಿ ಬೆಳಗಾವಿ ಹಾಗೂ ರಾಯಚೂರಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಇಡೀ ರಾಜ್ಯವನ್ನು ಬೆಚ್ಚಿ ಬೆಳಿಸಿತ್ತು. ಇದೀಗ ಯಾದಗಿರಿಯಲ್ಲಿ ನವಜಾತ ಶಿಶುಗಳ ಸರಣಿ ಸಾವು ಆಗುತ್ತಿದ್ದು, ಇಂದು ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲೂಕಿನಲ್ಲಿ ಮತ್ತೊಂದು ನವಜಾತ ಶಿಶುವಿನ ಸಾವಾಗಿದೆ. ಎರಡು ವಾರದ ಅಂತರಲ್ಲೇ ಮೂರು ನವಜಾತ ಶಿಶುಗಳ ಸಾವಾಗಿದೆ. ಹೌದು ಯಾದಗಿರಿಯಲ್ಲಿ ನವಜಾತ ಶಿಶುಗಳ ಸರಣಿ ಸಾವು ಮುಂದುವರೆದಿದ್ದು, ಎರಡು ವಾರದ ಅಂತರದಲ್ಲೇ ಮೂರು ನವಜಾತ ಶಿಶುಗಳ ಮರಣ ಹೊಂದಿವೆ ಎಂದು ವರದಿಯಾಗಿದೆ. ಹೆರಿಗೆಯಾದ ಬಳಿಕ ನವಜಾತ ಶಿಶು ಸವಾಗಿದೆ ಎಂದು ತಿಳಿದುಬಂದಿದೆ. ತಾಲ್ಲೂಕಿನ ಅನಪುರ ಗ್ರಾಮದ ಗಾಯತ್ರಿ ನವೀನ ದಾಸರಿ ಅವರು ಹೆರಿಗೆಗೆಂದು ಮಂಗಳವಾರ ಪಟ್ಟಣದ ಸಿಎಚ್ಸಿಗೆ ಬಂದಿದ್ದರು. ಆದರೆ, ಕೆಲವು ಪರೀಕ್ಷೆಗಳಿಗೆ ವೈದ್ಯರು ಶಿಫಾರಸು ಮಾಡಿದ್ದಾರೆ. ಪರೀಕ್ಷೆ ಮಾಡಿಸಲು ಯಾದಗಿರಿ ನಗರಕ್ಕೆ ತೆರಳಬೇಕಿದ್ದರಿಂದ ಮಂಗಳವಾರ ರಾತ್ರಿ ಪಟ್ಟಣದಲ್ಲಿರುವ ಸಂಬಂಧಿಕರ ಮನೆಯಲ್ಲಿ ತಂಗಿದ್ದಾರೆ.ನಿನ್ನೆ ಮಧ್ಯಾಹ್ನ 2 ಗಂಟೆಗೆ ಹೆರಿಗೆ ನೋವು ಕಾಣಿಸಿಕೊಂಡ ಕಾರಣ…
ವಿಜಯನಗರ : ಕೆಲಸದ ಒತ್ತಡದಿಂದ ಬೇಸತ್ತ ನಗರ ಸಭೆಯ ಬಿಲ್ ಕಲೆಕ್ಟರ್ ಒಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ. ಮೃತರನ್ನು ಮಂಜುನಾಥ್ ಎಂದು ತಿಳಿದುಬಂದಿದೆ. ಮಂಜುನಾಥ್ ಅವರು ಹೊಸ ವರ್ಷದ ಆರಂಭದ ದಿನವೇ ತಮಗೆ ಕೆಲಸದ ಒತ್ತಡದ ಇದೆ ಎಂದು ಹೇಳಿ ಪ್ಲಂಬಿಂಗ್ಗೆ ಬಳಸುವ ಗಮ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಆದ ಬಳಿಕ ಅವರು ಇಂದು ಮತ್ತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದುಕ್ಕೂ ಮೊದಲು ಆತ್ಮಹತ್ಯೆಗೆ ಯತ್ನಿಸಿದ್ದ ಮಂಜುನಾಥ್ ಮೊಬೈಲ್ ನಲ್ಲಿ ಡೆತ್ ನೋಟ್ ಕುರಿತು ಉಲ್ಲೇಖಿಸಿದ್ದರು. ನನ್ನ ಸಾವಿಗೆ ನಗರಸಭೆಯ ಆಯುಕ್ತ ಚಂದ್ರಪ್ಪ ಮತ್ತು ಕಂದಾಯ ಅಧಿಕಾರಿ ನಾಗರಾಜ್ ಕಾರಣ.ಕೆಲಸದಿಂದ ಬೇರೆಡೆ ನಿಯೋಜಿಸಲು ಒಂದು ತಿಂಗಳಿಂದ ಹೇಳುತ್ತಿದ್ದರೂ ತೆಗೆಯುತ್ತಿಲ್ಲ. ರಾತ್ರಿ ನಿದ್ದೆ ಬರುತ್ತಿಲ್ಲ, ಅಧಿಕ ಒತ್ತಡ ಇರುವುದರಿಂದ ನಾನು ಸಾವಿಗೆ ಶರಣಾಗಿದ್ದೀನಿ’ ಎಂಬ ಸಂದೇಶವನ್ನು ತಮ್ಮ ಮೊಬೈಲ್ ಫೋನ್ನಲ್ಲಿ ಕಳುಹಿಸಿ ಮಂಜುನಾಥ…