Author: kannadanewsnow05

ಬೆಂಗಳೂರು : ವಿಪಕ್ಷ ನಾಯಕ ಆರ್ ಅಶೋಕ್ ಅವರ ವಿರುದ್ಧ ಬಗರ್ ಹುಕುಂ ಭೂಮಿ ಹಂಚಿಕೆಯಲ್ಲಿ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಪಕ್ಷ ನಾಯಕ ಆರ್ ಅಶೋಕ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಒಂದು ವಾರಗಳ ಕಾಲ ಮುಂದೂಡಿದೆ. ತಮ್ಮ ವಿರುದ್ಧ ತನಿಖೆಗೆ ತಡೆ ಕೋರಿ ಆರ್ ಅಶೋಕ್ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ 1 ವಾರಗಳ ಕಾಲ ಅರ್ಜಿ ವಿಚಾರಣೆ ಮುಂದೂಡಿದೆ. ಪ್ರಕರಣದ ತನಿಖೆಗೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿತ್ತು . ಹಾಗಾಗಿ ವಿಪಕ್ಷ ನಾಯಕ ಆರ್ ಅಶೋಕ್ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಇದೀಗ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿಯ ಕುರಿತು ವಿಚಾರಣೆ ನಡೆಸಿ 1 ವಾರದ ವರೆಗೆ ವಿಚಾರಣೆಯನ್ನು ಮುಂದೂಡಿ ಆದೇಶ ಹೊರಡಿಸಿತು.

Read More

ಬೆಳಗಾವಿ : ಈಗಾಗಲೇ ನಿನ್ನೆಯಿಂದ ರಾಜ್ಯಾದ್ಯಂತ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಆರಂಭವಾಗಿದ್ದು, ಸಮೀಕ್ಷೆಗೆ ಸರ್ಕಾರ ಈಗಾಗಲೇ ಸರ್ಕಾರಿ ಶಿಕ್ಷಕರನ್ನು ನೇಮಕ ಮಾಡಿದೆ ಆದರೆ ಬೆಳಗಾವಿಯಲ್ಲಿ ಶಿಕ್ಷಣ ಇಲಾಖೆ ಎಡವಟ್ಟು ಮಾಡಿಕೊಂಡಿದ್ದು, ಈಗಾಗಲೇ ತೀರಿಹೋಗಿರುವ ಶಿಕ್ಷಕರ ಹೆಸರನ್ನು ನೇಮಕ ಮಾಡಿ ಎಡವಟ್ಟು ಮಾಡಿದೆ. ಹೌದು ಬೆಳಗಾವಿಯಲ್ಲಿ ಶಿಕ್ಷಣ ಇಲಾಖೆಯಿಂದ ಮಹಾ ಎಡವಟ್ಟು ಆಗಿದ್ದು, ಸತ್ತ ಶಿಕ್ಷಕರ ಹೆಸರನ್ನು ಗಣಿತಿ ಕಾರ್ಯಕ್ಕೆ ಆಯ್ಕೆ ಮಾಡಿದ್ದಾರೆ. ನಿವೃತ್ತಿ ಹೊಂದುತ್ತಿರುವ ಶಿಕ್ಷಕರು ಆಯ್ಕೆಯಾಗಿದ್ದು, 7 ತಿಂಗಳ ಗರ್ಭಿಣಿ, ವಿಶೇಷ ಚೇತನರನ್ನು ಕೂಡ ನೇಮಕ ಮಾಡಿದೆ. ಹಾಗಾಗಿ ಗೊಂದಲ ಸರಿ ಪಡಿಸುವಂತೆ ಶಿಕ್ಷಕರು ಇದೀಗ ಪ್ರತಿಭಟನೆ ನಡೆಸುತ್ತಿದ್ದಾರೆ. ಸಮಸ್ಯೆಗೆ ಸ್ಪಂದಿಸದಿದ್ದರೆ ಗಣತಿಗೆ ಬಹಿಷ್ಕಾರ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.

Read More

ಬೆಂಗಳೂರು : ನಿನ್ನೆಯಿಂದ ರಾಜ್ಯಾದ್ಯಂತ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಆರಂಭವಾಗಿದ್ದು, ಆದರೆ ಸರ್ವರ್ ಸಮಸ್ಯೆ ಹಾಗೂ ಮೊಬೈಲ್ನಲ್ಲಿ ತಾಂತ್ರಿಕ ಸಮಸ್ಯೆಯಲ್ಲಿ ಇದುವರೆಗೂ ಕೇವಲ ರಾಜ್ಯಾದ್ಯಂತ 10642 ಕುಟುಂಬಗಳ ದತ್ತಾಂಶ ಸಂಗ್ರಹಿಸಲಾಗಿದೆ ಎಂದು ತಿಳಿದುಬಂದಿದೆ. ಇದೆ ವಿಚಾರವಾಗಿ ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿಎದ್ದ್ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಗೆ ಸರ್ವರ್ ಡೌನ್ ವಿಚಾರವಾಗಿ, ಇಂದು ಮಧ್ಯಾಹ್ನ ಹೈಕೋರ್ಟ್ ನಲ್ಲಿ ಈ ಕುರಿತು ವಿಚಾರಣೆ ನಡೆಯಲಿದೆ ನಂತರ ನೋಡೋಣ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ರಾಜ್ಯಾದ್ಯಂತ ನಿನ್ನೆಯಿಂದ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಆರಂಭವಾಗಿದ್ದು, ನಿನ್ನೆ ಒಂದೇ ದಿನ ಕೇವಲ 10,642 ಕುಟುಂಬಗಳ ದತ್ತಾಂಶ ಸಂಗ್ರಹವಾಗಿದೆ ವಿಭಧ ಜಿಲ್ಲೆಗಳಲ್ಲಿ ದತ್ತಾಂಶ ಸಂಗ್ರಹ ಮಾಡುತ್ತಿರುವ ಸಮೀಕ್ಷೆಗಾರರು ಮೊದಲ ದಿನ ಬೆರಳಣಿಕೆ ಎಷ್ಟು ಮಾತ್ರ ದತ್ತಾಂಶ ಸಂಗ್ರಹಿಸಲಾಗಿದೆ 15 ಜಿಲ್ಲೆಗಳಲ್ಲಿ ಹತ್ತಕ್ಕಿಂತ ಕಡಿಮೆ ಮನೆಗಳಲ್ಲಿ ದತ್ತಾಂಶ ಸಂಗ್ರಹಿಸಲಾಗಿದೆ. ಜಿಲ್ಲಾವಾರು ಸಮೀಕ್ಷೆ ನೋಡುವುದಾದರೆ ಹಾವೇರಿಯಲ್ಲಿ 680 ಕುಟುಂಬಗಳ ದತ್ತಾಂಶ ಸಂಗ್ರಹವಾಗಿದೆ. ವಿಜಯಪುರದಲ್ಲಿ ಕೇವಲ 7,…

Read More

ಹಾಸನ : ಹಾಸನದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡರು ಕೃಷಿ ಇಲಾಖೆಯ ಅಧಿಕಾರಿಯೊಬ್ಬರಿಗೆ ತೀವ್ರ ತರಾಟೆ ತೆಗೆದುಕೊಂಡಿದ್ದು, ಅವರ ಆಳವಾದ ಕೃಷಿ ಜ್ಞಾನ ಮತ್ತು ಕಾರ್ಯಕ್ಷಮತೆಯ ಮೇಲಿನ ಬದ್ಧತೆ ಮತ್ತೊಮ್ಮೆ ಸಾಬೀತಾಗಿದೆ. ಕೇವಲ ಲೆಕ್ಕಾಚಾರಗಳು ಮತ್ತು ಅಂಕಿ-ಅಂಶಗಳ ವರದಿಯನ್ನು ಮಂಡಿಸಿದ ಅಧಿಕಾರಿಯ ವಿರುದ್ಧ, ‘ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ’ ವರದಿ ಕೊಟ್ಟರೆ ಯಾವುದೇ ಪ್ರಯೋಜನವಿಲ್ಲ ಎಂದು ಸಚಿವರು ಗುಡುಗಿದರು. ಅವರ ಈ ನೇರ ಮತ್ತು ಆಕ್ರಮಣಕಾರಿ ಶೈಲಿಯು ಸಭೆಯಲ್ಲಿ ಗಮನ ಸೆಳೆಯಿತು. ಬಿಳಿ ಸುಳಿ ರೋಗದ ನಿಜವಾದ ಸವಾಲು: ೫೬೫೫ ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆದು ನಿಂತಿದೆ. ಆದರೆ ಬಿಳಿ ಸುಳಿ ರೋಗ (white whorl disease) ರೈತರ ಬದುಕನ್ನೇ ಬೆಂಕಿ ಹಚ್ಚಿದಂತೆ ಹರಡುತ್ತಿದೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಬದಲು, ಕೃಷಿ ಅಧಿಕಾರಿ ಕೇವಲ ರೋಗ ಹರಡಿರುವ ವಿಸ್ತೀರ್ಣದ ಬಗ್ಗೆ ಮಾಹಿತಿ ನೀಡಿ ಕೈತೊಳೆದುಕೊಂಡರು. ಇದಕ್ಕೆ ಸಚಿವ ಬೈರೇಗೌಡರ ಪ್ರತಿಕ್ರಿಯೆ ತೀಕ್ಷ್ಣವಾಗಿತ್ತು. “ಇಷ್ಟು ಕೃಷಿ ವಿಶ್ವವಿದ್ಯಾಲಯಗಳು,…

Read More

ಬೆಂಗಳೂರು : ನಿನ್ನೆಯಿಂದ ರಾಜ್ಯಾದ್ಯಂತ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಆರಂಭವಾಗಿದ್ದು, ಆದರೆ ಸರ್ವ ಸಮಸ್ಯೆ ಹಾಗೂ ಮೊಬೈಲ್ನಲ್ಲಿ ತಾಂತ್ರಿಕ ಸಮಸ್ಯೆಯಲ್ಲಿ ಇದುವರೆಗೂ ಕೇವಲ ರಾಜ್ಯಾದ್ಯಂತ 10642 ಕುಟುಂಬಗಳ ದತ್ತಾಂಶ ಸಂಗ್ರಹಿಸಲಾಗಿದೆ ಎಂದು ತಿಳಿದುಬಂದಿದೆ. ಹೌದು ರಾಜ್ಯಾದ್ಯಂತ ನಿನ್ನೆಯಿಂದ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಆರಂಭವಾಗಿದ್ದು, ನಿನ್ನೆ ಒಂದೇ ದಿನ ಕೇವಲ 10,642 ಕುಟುಂಬಗಳ ದತ್ತಾಂಶ ಸಂಗ್ರಹವಾಗಿದೆ ವಿಭಧ ಜಿಲ್ಲೆಗಳಲ್ಲಿ ದತ್ತಾಂಶ ಸಂಗ್ರಹ ಮಾಡುತ್ತಿರುವ ಸಮೀಕ್ಷೆಗಾರರು ಮೊದಲ ದಿನ ಬೆರಳಣಿಕೆ ಎಷ್ಟು ಮಾತ್ರ ದತ್ತಾಂಶ ಸಂಗ್ರಹಿಸಲಾಗಿದೆ 15 ಜಿಲ್ಲೆಗಳಲ್ಲಿ ಹತ್ತಕ್ಕಿಂತ ಕಡಿಮೆ ಮನೆಗಳಲ್ಲಿ ದತ್ತಾಂಶ ಸಂಗ್ರಹಿಸಲಾಗಿದೆ. ಜಿಲ್ಲಾವಾರು ಸಮೀಕ್ಷೆ ನೋಡುವುದಾದರೆ ಹಾವೇರಿಯಲ್ಲಿ 680 ಕುಟುಂಬಗಳ ದತ್ತಾಂಶ ಸಂಗ್ರಹವಾಗಿದೆ. ವಿಜಯಪುರದಲ್ಲಿ ಕೇವಲ 7, ಕುಟುಂಬಗಳ ದತ್ತಾಂಶ ಸಂಗ್ರಹವಾಗಿದೆ. ಉತ್ತರ ಕನ್ನಡದಲ್ಲಿ ಕೂಡ 7 ಕುಟುಂಬಗಳ ದತ್ತಾಂಶ ಸಂಗ್ರಹಿಸಲಾಗಿದೆ. ದಾವಣಗೆರೆಯಲ್ಲಿ 7 ಕುಟುಂಬಗಳ ದತ್ತಾಂಶ ಸಂಗ್ರಹವಾಗಿದ್ದು, ಕೊಪ್ಪಳದಲ್ಲಿ 6 ಕುಟುಂಬಗಳ ದತ್ತಾಂಶಸಂಗ್ರಹವಾಗಿದೆ. ಉಡುಪಿಯಲ್ಲಿ ಸಹ 7 ಕುಟುಂಬಗಳ ದತ್ತಾಂಶ ಸಂಗ್ರಹವಾಗಿದೆ.

Read More

ಬೆಂಗಳೂರು : ರಾಜ್ಯದಲ್ಲಿ ನಿನ್ನೆಯಿಂದ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಆರಂಭವಾಗಿದ್ದು ಕೆಲವು ತಾಂತ್ರಿಕ ದೋಷಗಳಿಂದ ಕೇವಲ ಇದುವರೆಗೂ 10,000 ಜನರ ಸಮೀಕ್ಷೆ ಮಾತ್ರ ಮಾಡಲಾಗಿದೆ ಎಂದು ತಿಳಿದುಬಂದಿದೆ. ಈ ವಿಚಾರವಾಗಿ ಕಾಂಗ್ರೆಸ್ ಎಂಎಲ್ಸಿ ಬಿಕೆ ಹರಿಪ್ರಸಾದ್ ಪ್ರತಿಕ್ರಿಯೆ ನೀಡಿದ್ದು, ಇದು ಜಾತಿಗಣತಿ ಅಲ್ಲ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಷ್ಟೇ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಸಮೀಕ್ಷೆ ವೇಳೆ ಎಲ್ಲರೂ ಅವರವರ ಜಾತಿಗಳ ಹೆಸರು ಬರೆಸಲಿ. ಯಾರೂ ಕೂಡ ಅವರ ಜಾತಿಗಳ ಹೆಸರು ಬರಿಸಲು ಅಡ್ಡಿಪಡಿಸುತ್ತಿಲ್ಲ. ಕಳೆದ 75 ವರ್ಷಗಳಿಂದ ಕೆಲವರು ಮಾತ್ರ ಬೆಣ್ಣೆ ತುಪ್ಪ ತಿನ್ನುತ್ತಿದ್ದಾರೆ. ಅದು ಎಲ್ಲಿ ತಪ್ಪಿ ಹೋಗುತ್ತೋ ಅಂತ ಕೆಲವರು ವಿರೋಧಿಸುತ್ತಿದ್ದಾರೆ. ವಿರೋಧ ಮಾಡುತ್ತಿರುವ ಅವರ ಹೆಸರನ್ನು ಸಿಎಂ ಸಿದ್ದರಾಮಯ್ಯ ಬಹಿರಂಗಪಡಿಸಲಿ. ಜಾತಿ ಹೆಸರಿನಲ್ಲಿ ಕೆಲವರು ಸಾಮ್ರಾಜ್ಯ ಕಟ್ಟಿಕೊಂಡಿದ್ದಾರೆ. ಅದಕ್ಕೆ ತೊಂದರೆ ಆಗುತ್ತದೆ ಎಂದು ರಾಜಕೀಯ ಮಾಡುತ್ತಿದ್ದಾರೆ. ಆರ್ಥಿಕ ಶೈಕ್ಷಣಿಕ ಸಮೀಕ್ಷೆ ಮಾಡುತ್ತೇವೆ ಎಂದು ನಾವು ಹೇಳಿದ್ವಿ. ನಮ್ಮ…

Read More

ಬೆಂಗಳೂರು : ನಿನ್ನೆ ಬೆಂಗಳೂರಿನಲ್ಲಿ 11 ಬಾರಿ ಚಾಕು ಇರಿದು ವಿವಾಹಿತ ಮಹಿಳೆ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಹಂತಕ ಲೋಹಿತಾಶ್ವ ಅಲಿಯಾಸ್ ಲೊಕೇಶನನ್ನು ಅರೆಸ್ಟ್ ಮಾಡಿದ್ದಾರೆ. ನಿನ್ನೆ ಬೆಂಗಳೂರಿನ ಸುಂಕದಕಟ್ಟೆಯಲ್ಲಿ ವಿವಾಹಿತ ಮಹಿಳೆ ರೇಖಾಳನ್ನು ಆರೋಪಿ ಲೋಹಿತಾಶ್ವ 11 ಬಾರಿ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ್ದ. ತುಮಕೂರು ಜಿಲ್ಲೆಯ ಶಿರಾ ಮೂಲದ ರೇಖಾ (35) ಎನ್ನುವ ವಿವಾಹಿತ ಮಹಿಳೆಯನ್ನು ಲೋಹಿತಾಶ್ವ ಕೊಲೆ ಮಾಡಿದ್ದಾನೆ. ಕೊಲೆಯಾದ ರೇಖಾಳಿಗೆ 12 ವರ್ಷದ ಮಗಳು ಇದ್ದಾಳೆ. ಇನ್ನೂ ಲೋಹಿತಾಶ್ವನಿಗೂ ಕೂಡ ಮದುವೆಯಾಗಿ ಪತ್ನಿಯಿಂದ ಆತ ವಿಚ್ಛೇದನ ಪಡೆದುಕೊಂಡಿದ್ದ. ಬಳಿಕ ರೇಖಾ ಜತೆಗೆ ಆರೋಪಿ ಲೋಹಿತಾಶ್ವ ಮದುವೆಯಾಗಿದ್ದ. ಪೊಲೀಸರ ವಿಚಾರಣೆ ವೇಳೆ ಆಕೆಯ ಮೇಲೆ ಅನುಮಾನಪಟ್ಟು ಕೊಲೆಗೈದಿದ್ದಾಗಿ ಮಾಹಿತಿ ನೀಡಿದ್ದಾನೆ. ರೇಖಾ ಮದುವೆ ಬಳಿಕ ಶಿರಾದಿಂದ ಬೆಂಗಳೂರಿಗೆ ಕರೆಸಿಕೊಂಡಿದ್ದರು. ಆಕೆ ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿಯೇ ಲೋಹಿತಾಶ್ವನಿಗೆ ಡ್ರೈವರ್ ಕೆಲಸ ಕೊಡಿಸಿದ್ದಳು. ಎರಡನೇ ಮದುವೆ ಆಗಿದ್ದರು ಕೂಡ ಇಬ್ಬರು ಒಂದೇ ಮನೆಯಲ್ಲಿ…

Read More

ಬೆಂಗಳೂರು : ಮಲ್ಟಿಪ್ಲೆಕ್ಸ್‌ ಸೇರಿ ರಾಜ್ಯ ಎಲ್ಲಾ ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆಯ ಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತುಪಡಿಸಿ ಗರಿಷ್ಠ 200 ರೂ.ಗಳ ಏಕರೂಪ ದರ ನಿಗದಿಪಡಿಸಿದ ರಾಜ್ಯ ಸರ್ಕಾರ ಹೊರಡಿಸಿದ ಆದೇಶಕ್ಕೆ ಮಧ್ಯಂತರ ತಡೆ ನೀಡುವ ಕುರಿತಂತೆ ಮನವಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್​ ಏಕ ಸದಸ್ಯ ಪೀಠ ಇಂದು ಈ ಕುರಿತು ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಮಲ್ಟಿಪ್ಲೆಕ್ಸ್ ಗಳಲ್ಲಿ ರಾಜ್ಯ ಸರ್ಕಾರ 200 ರೂಪಾಯಿ ಟಿಕೆಟ್ ದರ ನಿಗದಿ ಮಾಡಿತ್ತು. ಇದೀಗ ರಾಜ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಮಲ್ಟಿಪ್ಲೆಕ್ಸ್​ ಅಸೋಸಿಯೇಷನ್‌ ಆಫ್‌ ಇಂಡಿಯಾ, ಹೊಂಬಾಳೆ ಫಿಲಂನ ವಿಜಯ್‌ ಕಿರಗಂದೂರು, ಪಿವಿಆರ್‌ ಐನಾಕ್‌ಸ್‌ ಲಿಮಿಟೆಡ್‌, ವಿಕೆ ಫಿಲಂಸ್‌, ಕೀ ಸ್ಟೋನ್‌ ಎಂಟರ್‌ಟೇನ್ಮೆಂಟ್‌ ಪ್ರವೈಟ್‌ ಲಿಮಿಟೆಡ್‌ ಮತ್ತಿತರರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ.

Read More

ಬೆಳಗಾವಿ : ಐನಾಪುರ ಮಾರ್ಗವಾಗಿ ಹೈದರಾಬಾದ್ ಕಡೆಗೆ ನಾಲ್ಕು ಬೃಹತ್ ಲಾರಿಗಳಲ್ಲಿ ಗೋಮಾಂಸ ಸಾಗಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕೆಲವು ಸಂಘಟನೆಗಳ ಕಾರ್ಯಕರ್ತರು ವಾಹನಗಳನ್ನು ತಡೆದು ಒಂದು ವಾಹನಕ್ಕೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿರುವ ಘಟನೆ ತಡರಾತ್ರಿ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ತಡರಾತ್ರಿ ಈ ಘಟನೆ ಸಂಭವಿಸಿದೆ. ಕೆಲವು ಸಂಘಟನೆಗಳ ಕಾರ್ಯಕರ್ತರು ಜೊತೆಯಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಬೃಹತ್ ಲಾರಿಗಳನ್ನು ತಡೆದು ಅವುಗಳನ್ನು ಪರಿಶೀಲನೆ ಮಾಡಿ ಲಾರಿಯಲ್ಲಿರುವ ಚಾಲಕ ಮತ್ತು ನಿರ್ವಾಹಕನನ್ನು ತೀವ್ರ ತರಾಟೆ ತೆಗೆದುಕೊಂಡು ತಮ್ಮ ಆಕ್ರೋಶ ಹೊರ ಹಾಕಿದ್ದಾರೆ. ಕುಡಚಿ ಪಟ್ಟಣದಿಂದ ಗೋಮಾಂಸ ತುಂಬಿಕೊಂಡು 4 ಲಾರಿಗಳು ಐನಾಪುರ ಮಾರ್ಗವಾಗಿ ಹೈದರಾಬಾದ್ ಕಡೆಗೆ ತೆರಳುತ್ತಿದ್ದವು. ಈ ನಾಲ್ಕು ಲಾರಿಗಳಲ್ಲಿ ಗೋಮಾಂಸ ಸಾಗಾಟ ಮಾಡಲಾಗುತ್ತಿದೆ ಎನ್ನುವ ಮಾಹಿತಿ ಆಧರಿಸಿ ಕಾರ್ಯಕರ್ತರು ಒಂದು ಲಾರಿಯನ್ನು ತಡೆದು ಪರಿಶೀಲಿಸಿದಾಗ ಗೋಮಾಂಸ ಸಾಗಾಟ ಬಯಲಾಗಿದೆ. KA 71 2045 ಸಂಖ್ಯೆಯ ಲಾರಿಯಲ್ಲಿ ಗೋಮಾಂಸ ಸಾಗಾಟ ಮಾಡಲಾಗುತ್ತಿತ್ತು. ಇದನ್ನು…

Read More

ಬೆಂಗಳೂರು : ರಾಜ್ಯದಲ್ಲೊಂದು ಮನಕಲಕುವ ಘಟನೆಯೊಂದು ನಡೆದಿದ್ದು ಬೆಂಗಳೂರಲ್ಲಿ ದಂಪತಿಗಳ ನಿರ್ಲಕ್ಷಕ್ಕೆ ಮೂರು ನವಜಾತ ಶಿಶುಗಳು ಬಲಿಯಾಗಿವೆ. ಹೌದು ಬನ್ನೇರುಘಟ್ಟ ಗೊಲ್ಲಹಳ್ಳಿಯಲ್ಲಿ ಈ ಒಂದು ಮನಕಲಕುವ ಘಟನೆ ನಡೆದಿದೆ. ಸೂಕ್ತ ಸಪಾಸಣೆ ಮತ್ತು ಪೋಷಣೆ ಇಲ್ಲದೆ ಮೂವರು ನವಜಾತ ಶಿಶುಗಳು ಇದೀಗ ಸಾವನ್ನಪ್ಪಿವೆ. ಮಂಜುಳಾ ಮತ್ತು ಆನಂದ ದಂಪತಿಗಳ ಮೂವರು ನವಜಾತಶಿಗಳು ಇದೀಗ ಬಲಿಯಾಗಿವೆ. ಮೊದಲು ಹೊಟ್ಟೆ ನೋವು ಕಾಣಿಸಿಕೊಂಡಾಗ ಇವರು ಜಿಗಣಿ ಆಸ್ಪತ್ರೆಗೆ ದಾಖಲಾಗಿದ್ದರು. ಅದಾದ ನಂತರ ಜಿಗಣಿ ಬಳಿಕ ಆನೇಕಲ್ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಟ್ಟೆಯಲ್ಲಿ ಎರಡು ಶಿಶುಗಳು ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಎರಡು ಶಿಶುಗಳನ್ನು ಹೊರ ತೆಗೆದು ವೈದ್ಯರು ಮಹಿಳೆಗೆ ಚಿಕಿತ್ಸೆ ನೀಡಿದ್ದಾರೆ. ಸದ್ಯ ತಾಯಿ ಮಂಜುಳಾ ಆರೋಗ್ಯವಾಗಿದ್ದಾರೆ. ಆನಂದ್ ಮತ್ತು ಮಂಜುಳಾ ದಂಪತಿ ಪ್ರೀತಿಸಿ ಮದುವೆಯಾಗಿದ್ದರು. ಏಪ್ರಿಲ್ ತಿಂಗಳಿನಲ್ಲಿ ದಂಪತಿಗಳು ತಾಯಿ ಕಾರ್ಡ್ ಮಾಡಿಸಿದ್ದಾರೆ. ಅಣ್ಣನ ಜೊತೆ ಗಲಾಟೆ ಮಾಡಿದ ಬಳಿಕ ಆನಂದ್ ದಂಪತಿ ಮನೆ ಬಿಟ್ಟಿದ್ದಾರೆ. ಇತ್ತ ಮಂಜುಳಾ ಪೋಷಕರಿಂದಲೂ ಕೂಡ ಇವರಿಬ್ಬರೂ ನಿರ್ಲಕ್ಷಕ್ಕೆ…

Read More