Author: kannadanewsnow05

ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ಅಸ್ತಿಪಂಜರಿಗಳಿಗಾಗಿ ಇಂದು ಶೋಧ ಕಾರ್ಯ ಮುಂದುವರೆಯಲಿದೆ. ನೇತ್ರಾವತಿ ನದಿ ತೀರದಲ್ಲಿ ಎಸ್ಐಟಿ ತಂಡ ಶೋಧ ಕಾರ್ಯಕ್ರಮ ನಡೆಸಲಿದೆ. ಇದುವರೆಗೂ ಐದು ಕಡೆ ಶೋಧ ಕಾರ್ಯ ಮುಗಿಸಿರುವ SIT ತಂಡ, ಮೊದಲ ದಿನ ಒಂದು ಕಡೆ ಅಸ್ತಿಪಜರಕ್ಕಾಗಿ ಶೋಧ ನಡೆಸಿತ್ತು. ಬಳಿಕ ನಿನ್ನೆ ಎರಡು ಮೂರು ನಾಲ್ಕು ಹಾಗೂ ಐದನೇ ಪಾಯಿಂಟ್ ನಲ್ಲಿ ಶೋಧ ನೆಡಿಸಲಾಗಿತ್ತು ಇಂದು ಆರನೇ ಪಾಯಿಂಟ್ ನಲ್ಲಿ ಎಸ್ಐಟಿ ಶೋಧ ನಡೆಸಲಿದೆ ಬೆಳಿಗ್ಗೆ 10ಗಂಟೆ ಯಿಂದ ಈ ಒಂದು ಶೋಧ ಕಾರ್ಯ ನಡೆಯುವ ಸಾಧ್ಯತೆ ಇದೆ. ಈಗಾಗಲೇ ಎರಡು ದಿನಗಳ ಕಾಲ ಅಸ್ತಿಪಂಜರಿಗಳಿಗಾಗಿ ನೆಲ ಹಾಗೆ ಯುವ ಕಾರ್ಯ ನಡೆಸಿದ SIT ಇದುವರೆಗೂ ಯಾವುದೇ ರೀತಿಯಾದ ಅಸ್ತಿಪಂಜರಗಳು ಪತ್ತೆಯಾಗಿಲ್ಲ. ಇದೀಗ ಮೂರನೇ ದಿನವೂ ಅಸ್ತಿಪಂಜರಗಳಿಗಾಗಿ ಶೋಧ ಕಾರ್ಯಕ್ರಮ ಮುಂದುವರಿಸಲಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಡಿಕ್ಕಿ ಹೊಡೆದು ವೃದ್ಧೆ ಸಾವಿಗೀಡಾಗಿರುವ ಘಟನೆ ಸೆಂಟ್ರಲ್ ಸಿಲ್ಕ್ ಬೋರ್ಡ್ ಬಸ್ ನಿಲ್ದಾಣದ ಬಳಿ ನಡೆದಿದೆ.62 ವರ್ಷದ ವೃದ್ಧೆ ಎಲೆಕ್ಟ್ರಿಕ್ ಬಸ್ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಿವರ್ಸ್ ತೆಗೆಯುವಾಗ ಬಸ್ ಹಿಂಬದಿಯಿಂದ ರಸ್ತೆ ದಾಟುತಿದ್ದ ಮಾಡ್ತಿದ್ದ ವೃದ್ಧೆಗೆ ಡಿಕ್ಕಿಯಾಗಿದೆ. ಪರಿಣಾಮ ವೃದ್ಧೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದೀಗ ಒಂದೇ ತಿಂಗಳಲ್ಲಿ ಬಿಎಂಟಿಸಿ ಬಸ್‌ಗೆ ಮೂವರು ಬಲಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಬಿಎಂಟಿಸಿಯ ಹಿರಿಯ ಅಧಿಕಾರಿಗಳು ಹಾಗೂ ಟಾಟಾ ಸ್ಮಾರ್ಟ್ ಲಿಮಿಟೆಡ್ ಕಂಪನಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಮಡಿವಾಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತುಹಾಕಿದ್ದೇನೆ ಎಂದು ಅನಾಮಿಕ ವ್ಯಕ್ತಿಯೋರ್ವ ಕೋರ್ಟ್‌ಗೆ ತಲೆಬರುಡೆ ಹಿಡಿದು ಬಂದಿದ್ದು, ಅದೇ ದೂರು ಆಧರಿಸಿ ಫೀಲ್ಡ್‌ಗೆ ಇಳಿದಿರುವ ಎಸ್ಐಟಿ ಅಧಿಕಾರಿಗಳು ಆ ಅನಾಮಿಕ ವ್ಯಕ್ತಿ ತೋರಿಸಿದ ಸ್ಥಳಗಳ ಪೈಕಿ ಐದು ಸ್ಥಳದಲ್ಲಿ ಶೋಧ ನಡೆಸಿದ್ದಾರೆ. ಆದ್ರೆ, ಯಾವುದೇ ಕುರುಹುಗಳು ಪತ್ತೆಯಾಗಿಲ್ಲ. ಇದರ ನಡುವೆ ಇದೀಗ ಎಸ್​ಐಟಿ ಸಹಾಯವಾಣಿ ಆರಂಭಿಸಿದೆ. ಧರ್ಮಸ್ಥಳ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬಲವಂತವಾಗಿ ನೂರಾರು ಶವಗಳನ್ನ ಹೂತುಹಾಕಿದ್ದೇನೆ ಎಂದು ವ್ಯಕ್ತಿಯೊಬ್ಬ ದೂರು ನೀಡಿದ್ದು, ಈ ಸಬಂಧ ರಾಜ್ಯ ಸರ್ಕಾರ ಎಸ್​ಐಟಿ ತನಿಖೆಗೆ ಆದೇಶಿದೆ. ಅದರಂತೆ ಇದೀಗ ಎಸ್​ಐಟಿ ತನಿಖೆ ತೀವ್ರಗೊಳಿಸಿದೆ. ಜುಲೈ 28 ರಂದು ಧರ್ಮಸ್ಥಳ ಫೀಲ್ಡ್‌ಗೆ ಇಳಿದಿದ್ದ ಎಸ್‌ಐಟಿ ದೂರುದಾರನನ್ನ ಕರೆದೊಯ್ದು 13 ಸ್ಥಳ ಗುರುತು ಮಾಡಿದ್ದು, ಇದೀಗ ಭೂಮಿ ಅಗೆಯುವ ಕೆಲಸ ಶುರುವಾಗಿದೆ. ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಳಿಸಿರುವ ಎಸ್‌ಐಟಿ ತಂಡ ದೂರುದಾರ ಗುರುತಿಸಿದ 13 ಸ್ಥಳಗಳಲ್ಲಿ ಒಂದೊಂದೆ ಜಾಗಗಳನ್ನು ಅಗೆದು ಶೋಧ ನಡೆಸುತ್ತಿದ್ದಾರೆ. ಸದ್ಯ, ದೂರುದಾರ ಸೂಚಿಸಿದ…

Read More

ಮೈಸೂರು : ಕಳೆದ ಎರಡು ದಿನಗಳ ಹಿಂದೆ ಮೈಸೂರಲ್ಲಿ ಡ್ರಗ್ಸ್ ತಯಾರಿಕಾ ಘಟಕದ ಮೇಲೆ ಪೊಲೀಸರು ದಾಳಿ ನಡೆಸಿ ಬಹುದೊಡ್ಡ ಡ್ರಗ್ಸ್ ಜಾಲವನ್ನು ಭೇದಿಸಿದ್ದರು ಇದೀಗ ನೆನ್ನೆ ರಾತ್ರಿ ಕಮಿಷನರ್ ನೇತೃತ್ವದಲ್ಲಿ ನಗರದ ಹಲವೆಡೆ ದಾಳಿ ನಡೆಸಲಾಗಿದೆ. ಹೌದು ಮೈಸೂರು ನಗರದಲ್ಲಿ ಡ್ರೆಸ್ ತಯಾರಿಕಾ ಘಟಕ ಹಿನ್ನೆಲೆಯಲ್ಲಿ ಅಲರ್ಟ್ ಆಗಿದ್ದು ಮೈಸೂರು ನಗರ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಮೈಸೂರು ನಗರದಾದ್ಯಂತ ಪೊಲೀಸರಿಂದ ಕಾರ್ಯಾಚರಣೆ ಮುಂದುವರೆದಿದ್ದು, ನಿನ್ನೆ ರಾತ್ರಿ ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ನೇತೃತ್ವದಲ್ಲಿ ರೇಡ್ ನಡೆಸಲಾಗಿದೆ. ಮೈಸೂರು ನಗರದ ಮಂಡಿ ಮೊಹಲ್ಲ, ಉದಯಗಿರಿ, ಎನ್ ಆರ್ ಮೊಹಲ್ಲಾ, ನಜರ್ ಬಾದ್, ಕೆ ಆರ್ ಮೊಹಲ್ಲಾ ಸೇರಿದಂತೆ ಹಲವು ಕಡೆ ಏಕಕಾಲದಲ್ಲಿ ದಾಳಿ ಮಾಡಿದ್ದಾರೆ. ಡಿಸಿಪಿಗಳು ಎಸಿಪಿಗಳು ಇನ್ಸ್ಪೆಕ್ಟರ್ಗಳ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.ಗಾಂಜಾ ಡ್ರಗ್ಸ್ ಮಾರಾಟ ಮಾಡುವವರನ್ನು ಗಡಿ ಪಾಡುವ ಮಾಡುವುದಾಗಿ ಕಮಿಷನರ್ ಸೀಮಾ ಲಾಟ್ಕರ್ ಎಚ್ಚರಿಕೆ ನೀಡಿದ್ದಾರೆ.

Read More

ನವದೆಹಲಿ : ಯುಪಿಐ ಬಳಕೆಯು ಇನ್ನೂ ಸರಳವಾಗುವ ನಿರೀಕ್ಷೆಯಿದೆ. ಸಾಮಾನ್ಯವಾಗಿ ಯುಪಿಐ ಮುಖಾಂತರ ಪಾವತಿ ಮಾಡುವಾಗ ಪಿನ್ ನಮೂದಿಸುವ ಬದಲಿಗೆ ಫೇಸ್ ರೆಕಗ್ನಿಷನ್ ಮತ್ತು ಫಿಂಗರ್ ಪ್ರಿಂಟ್ ಅವಕಾಶ ಕೊಡಲು ಭಾರತದ ರಾಷ್ಟ್ರೀಯ ಪಾವತಿ ನಿಗಮ (ಎನ್‌ಪಿಸಿಐ) ಚಿಂತನೆ ನಡೆಸಿದೆ ಎನ್ನಲಾಗಿದೆ. ಹೌದು ಈ ಕುರಿತು ಚಿಂತನೆ ನಡೆಸಲಾಗುತ್ತಿದ್ದು, ಹಾಗಂತ ಫೇಸ್ ರಿಕಗ್ನಿಷನ್ ಕಡ್ಡಾಯವಲ್ಲ. ಪಿನ್ ಆಯ್ಕೆಯನ್ನೂ ಇಟ್ಟುಕೊಳ್ಳಬಹುದು. 2ರಲ್ಲಿ ಒಂದು ಆಯ್ಕೆ ಬಳಸಿಕೊಳ್ಳಬಹುದು ಎಂದು ಮೂಲಗಳು ಹೇಳಿವೆ.ಪ್ರಸ್ತುತ ಯುಪಿಐ ಮುಖಾಂತರ ಪಾವತಿ ಮಾಡುವ ಮೊದಲು ಹಣದ ಮೊತ್ತವನ್ನು ನಮೂದಿಸಿ, 4 ಅಥವಾ 6 ಅಂಕಿಯ ಪಿನ್ ನಂಬರ್ ಬಳಸಬೇಕಾಗುತ್ತದೆ. ಇದು ಸರಿಹೋದಲ್ಲಿ ಮಾತ್ರ ಪಾವತಿಯಾಗುತ್ತದೆ. ಚಿಂತನೆಯಲ್ಲಿರುವ ಹೊಸ ಬದಲಾವಣೆಯಲ್ಲಿ ಬಳಕೆ ದಾರರು ತಮ್ಮ ಫಿಂಗರ್‌ಪ್ರಿಂಟ್ ಸೆನ್ಸರ್ ಮೂಲಕ ಬೆರಳಿನ ಮುದ್ರೆ ಮತ್ತು ಎದುರಿನ ಕ್ಯಾಮೆರಾ ಮೂಲಕ ಮುಖಚಹರೆಯನ್ನು ಯುಪಿಐನಲ್ಲಿ ದಾಖಲಿಸಬೇಕಾಗುತ್ತದೆ. ಪಾವತಿ ವೇಳೆ ಮೊತ್ತವನ್ನು ನಮೂದಿಸಿ ಪಿನ್ ಸಂಖ್ಯೆ ಒತ್ತುವ ಜಾಗದಲ್ಲಿ ಫಿಂಗರ್‌ಪ್ರಿಂಟ್ ಬಳಸಿದರೆ ಸೆನ್ಸರ್ ಮೂಲಕ ಕೈ ಬೆರಳಿನ…

Read More

ಬೆಂಗಳೂರು : ತಮ್ಮ ಮೇಲೆ ಹನಿಟ್ರ್ಯಾಪ್ ಯತ್ನ ನಡೆದಿದೆ ಎಂಬ ರಾಜ್ಯ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ಆರೋಪ ನಿರಾಧಾರವಾಗಿದೆ. ಸಚಿವರ ಆಪಾದನೆಗೆ ಯಾವುದೇ ಪುರಾವೆ ಇಲ್ಲ ಎಂದು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿ ವಿಚಾರಣೆಯನ್ನು ಅಪರಾಧ ತನಿಖಾ ಇಲಾಖೆ (ಸಿಐಡಿ) ಪೂರ್ಣಗೊಳಿಸಿದೆ. ಈ ಮೂಲಕ ಏಳು ತಿಂಗಳ ಹಿಂದೆ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಹನಿಟ್ರ್ಯಾಪ್ ಯತ್ನ ವಿವಾದವು ತಾರ್ಕಿಕ ಅಂತ್ಯ ಕಂಡಿದೆ. ಈ ಪ್ರಕರಣದ ಕುರಿತು ಸುದೀರ್ಘವಾಗಿ ವಿಚಾರಣೆ ನಡೆಸಿದ ಸಿಐಡಿ ಅಧಿಕಾರಿಗಳು, ಕೊನೆಗೆ ಆರೋಪದಲ್ಲಿ ಹುರುಳಿಲ್ಲವೆಂದು ಷರಾ ಬರೆದು ಸರ್ಕಾರಕ್ಕೆ ವಿಚಾರಣಾ ವರದಿಯನ್ನು ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ವಿಧಾನಸಭಾ ಅಧಿವೇಶನದ ವೇಳೆ ತಮ್ಮ ಮೇಲೆ ಮೂರು ಬಾರಿ ಹನಿಟ್ರ್ಯಾಪ್ ಯತ್ನ ನಡೆದಿತ್ತು ಎಂದು ಸಚಿವ ರಾಜಣ್ಣಗಂಭೀರ ಸ್ವರೂಪದ ಆರೋಪ ಮಾಡಿದ್ದರು. ಹನಿಟ್ರ್ಯಾಪ್ ಯತ್ನ ಪ್ರಕರಣ ಸಂಬಂಧ ಬೆಂಗಳೂರಿನಲ್ಲಿರುವ ಸಚಿವರ ಮನೆ, ಗೃಹ ಕಚೇರಿ ಹಾಗೂ ಮಧುಗಿರಿ ಮನೆಯಲ್ಲಿ ಸಿಐಡಿ ತಂಡ ಪರಿಶೀಲನೆ ನಡೆಸಿತ್ತು.…

Read More

ಚಿಕ್ಕಮಗಳೂರು : ಚಿಕ್ಕಮಂಗಳೂರಲ್ಲಿ ಬೆಚ್ಚಿ ಬೆಳಿಸುವ ಘಟನೆ ನಡೆದಿದ್ದು ಮಗನೊಬ್ಬ ಹೆತ್ತ ತಾಯಿಯನ್ನೇ ಕೊಲೆ ಮಾಡಿದ್ದು ಅಲ್ಲದೆ ಶವವನ್ನು ಸುಟ್ಟು ಹಾಕಿದ್ದಾನೆ. ಈ ವೇಳೆ ಶವ ಪೂರ್ತಿ ಸುಡದೆ ಅರ್ಧಂಬರ್ಧ ಸುಟ್ಟಿದೆ. ಅರ್ಧಂಬರ್ಧ ಸುಟ್ಟ ಶವದ ಪಕ್ಕದಲ್ಲಿ ಮಲಗಿದ್ದಾನೆ. ಈ ಒಂದು ಘಟನೆ ಚಿಕ್ಕಮಗಳೂರು ತಾಲೂಕಿನ ಹಕ್ಕಿಮಕ್ಕಿ ಗ್ರಾಮದಲ್ಲಿ ನಡೆದಿದೆ. ತಾಯಿ ಭವಾನಿ (55) ಹತ್ಯೆಗೈದ ಪಾಪಿ ಪುತ್ರ ಪವನ್, ನಿರ್ಜನ ಪ್ರದೇಶದಲ್ಲಿ ಇರುವಂತಹ ಒಂಟಿಮನೆಯಲ್ಲಿ ಈ ಒಂದು ಭೀಕರ ಕೊಲೆ ನಡೆದಿದೆ. ಯಾವ ಕಾರಣಕ್ಕಾಗಿ ತಾಯಿಯನ್ನು ಕೊಲೆ ಮಾಡಿ ಶವ ಸುಟ್ಟು ಹಾಕಿದ್ದಾನೆ? ಅಥವಾ ಈತ ಏನಾದರೂ ಮಾನಸಿಕ ಅಸ್ವಸ್ಥನಾಗಿದ್ದಾನ? ಎಂದು ತನಿಖೆಯ ಬಳಿಕವಷ್ಟೇ ತಿಳಿದು ಬರಬೇಕಿದೆ. ಗ್ರಾಮಕ್ಕೆ ಭೇಟಿ ನೀಡಿದ ಪವನ್ ಬಂಧಿಸಿದ ಪೊಲೀಸರು ಆಲೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೆಂಗಳೂರಲ್ಲಿ ಘೋರವಾದ ದುರಂತ ನಡೆದಿದ್ದು, ತಾಯಿಯೊಬ್ಬಳು ಮಗುವಿಗೆ ವಿಷ ಕುಡಿಸಿ ತಾನು ಸಹ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಘಟನೆಯಲ್ಲಿ ಒಂದು ವರ್ಷ ಎಂಟು ತಿಂಗಳ ಮಗು ಚಾರ್ವಿ ಸಾವನ್ನಪ್ಪಿದು, ತಾಯಿ ಚಂದ್ರಿಕಾ (26) ಆಸ್ಪತ್ರೆಗೆ ದಾಖಲಾಗಿದ್ದಾಳೆ. ಬೆಂಗಳೂರಿನ ಬ್ಯಾಡರಹಳ್ಳಿ ಠಾಣ ವ್ಯಾಪ್ತಿಯಲ್ಲಿ ತಿಗಳರಪಾಳ್ಯದಲ್ಲಿ ಒಂದು ಘಟನೆ ನಡೆದಿದೆ ಗಂಡ ಯೋಗೇಶ್ ಜೊತೆಗೆ ಗಲಾಟೆ ಹಿನ್ನೆಲೆಯಲ್ಲಿ ತಾಯಿ ಸಾಸಾಯುವ ಯೋ ನಿರ್ಧಾರ ತೆಗೆದುಕೊಂಡಿದ್ದಾಳೆ. ಹಾಗಾಗಿ ಟೀ ಗೆ ಇಲಿ ಪಾಷಾನ ಬೆರೆಸಿ ಮಗುವಿಗೆ ಕುಡಿಸಿ ತಾಯಿ ತಾನು ಕುಡಿದಿದ್ದಾಳೆ. ಗಂಡ ಗಾರ್ಮೆಂಟ್ಸ್ ಕೆಲಸಕ್ಕೆ ಹೋಗಿದ್ದಾಗ ಚಂದ್ರಿಕಾ ಮಗು ಜೊತೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ನಂತರ ಚಂದ್ರಿಕಾ ವಿಷ ಸೇವಿಸಿರುವುದಾಗಿ ತನ್ನ ಗಂಡನಿಗೆ ಕರೆ ಮಾಡಿ ತಿಳಿಸಿದ್ದಾಳೆ. ಕೂಡಲೇ ಮನೆಗೆ ಬಂದು ಮಗು ಮತ್ತು ಪತ್ನಿಯನ್ನು ಪತಿ ಯೋಗೇಶ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮಗು ಚಾರ್ವಿ ಸಾವನ್ನಪ್ಪಿದೆ. ಇನ್ನು ಚಂದ್ರಿಕಾಳಿಗೆ ಚಿಕಿತ್ಸೆ ಮುಂದುವರೆದಿದೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ…

Read More

ಬೆಂಗಳೂರು : ಕಳೆದ ಒಂದು ತಿಂಗಳಿನಿಂದ ರಾಜ್ಯದಲ್ಲಿ ಭಾರಿ ಮಳೆ ಆಗುತ್ತಿದ್ದು ಇನ್ನೂ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುತ್ತಿದೆ.ಮುಂದಿನ ದಿನಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇಂದು ದಕ್ಷಿಣ ಒಳನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಳಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಹವಾಮಾನ ಇಲಾಖೆ ತಿಳಿಸಿದೆ. ಅದೇ ರೀತಿಯಾಗಿ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗಗಳಲ್ಲಿ ಭಾರಿ ಮಳೆ ನಿರೀಕ್ಷೆಯಿದ್ದು, ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮತ್ತು ಸಾಧಾರಣ ಮಳೆ ನಿರೀಕ್ಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಗಾಳಿಯ ವೇಗ ಗಂಟೆಗೆ 50-60 ಕಿಮೀ ತಲುಪಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Read More

ಬೆಂಗಳೂರು : ಬೆಂಗಳೂರು ಅಪಾರ್ಟ್‌ಮೆಂಟ್ ಗೋಡೆ ಮೇಲೆ ಬಾಂಬ್ ಬ್ಲಾಸ್ಟ್ ಮಾಡೋದಾಗಿ ಬೆದರಿಕೆ ಹಾಕಲಾಗಿದ್ದು ಪೊಲೀಸರು ತನಿಖೆ ನಡೆಸಿದಾಗ 13 ವರ್ಷದ ಮೂವರು ಬಾಲಕಿಯರು ಗೋಡೆಯ ಮೇಲೆ ಈ ಒಂದು ಬರಹ ಬರೆದಿದ್ದಾರೆ ಎಂದು ತಿಳಿದು ಬಂದಿದೆ. ಹೌದು ಕಳೆದ ಕೆಲವು ದಿನಗಳಿಂದ ಬೆಂಗಳೂರು ಖಾಸಗಿ ಶಾಲೆಗಳಿಗೆ ಬೆದರಿಕೆಯ ಇ-ಮೇಲ್ ಸಂದೇಶಗಳು ಬರುತ್ತಿದ್ದವು ಆದರೆ ಇದೀಗ ನಗರದ ಕೊಡಿಗೇಹಳ್ಳಿಯ ಅಲ್ಫೈನ್ ಪಿರಮಿಡ್ ಅಪಾರ್ಟ್ಮೆಂಟ್‌ನಲ್ಲಿ ಗೋಡೆಯ ಮೇಲೆ ಬಾಂಬ್ ಸ್ಫೋಟ ಮಾಡುವುದಾಗಿ ಬೆದರಿಕೆ ಹಾಕಿರುವ ದುಷ್ಕರ್ಮಿಯ ಬರಹ ಪತ್ತೆಯಾಗಿದ್ದು, ನಿವಾಸಿಗಳು ಆತಂಕಗೊಂಡಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದು, ಮೂವರು ಅಪ್ರಾಪ್ತ ಬಾಲಕಿಯರು ಈ ಬರಹ ಬರೆದಿರುವುದು ಬೆಳಕಿಗೆ ಬಂದಿದೆ. ಸುಮಾರು 200 ರಿಂದ 300 ಮನೆಗಳನ್ನೊಳಗೊಂಡಿರುವ ಈ ಅಪಾರ್ಟ್ಮೆಂಟ್‌ನಲ್ಲಿ, ಗೋಡೆಯ ಮೇಲಿನ ಬರಹದಲ್ಲಿ ‘I am going to blast India from Pakistan’ ನಾನು ಪಾಕಿಸ್ತಾನದಿಂದಲೇ ಇಡೀ ಭಾರತವನ್ನು ಬ್ಲಾಸ್ಟ್ ಮಾಡುತ್ತೇನೆ’ ಎಂದು ಬರೆದು ಬೆದರಿಕೆ ಹಾಕಿರುವುದು ನಿವಾಸಿಗಳಲ್ಲಿ ಭಯ ಹುಟ್ಟಿಸಿದೆ. ಇನ್ನು…

Read More