Author: kannadanewsnow05

ಚಿಕ್ಕಮಗ : ಕರ್ನಾಟಕದಲ್ಲಿ ಇಂದು ಬಹು ದೊಡ್ಡ ಶರಣಾಗತಿ ನಡೆಯುತ್ತಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಈ ಒಂದು ಶರಣಾಗತಿ ನಡೆಯಲಿದೆ. ದಕ್ಷಿಣ ಭಾರತದ ಮೋಸ್ಟ್ ವಾಂಟೆಡ್ ಆರು ಜನ ನಕ್ಸಲರು ಇಂದು ಚಿಕ್ಕಮಂಗಳುರು ಜಿಲ್ಲಾ ಆಡಳಿತದ ಮುಂದೆ ಶರಣಾಗಬೇಕಿತ್ತು.ಆದರೆ ಸಿಎಂ ಸಿದ್ದರಾಮಯ್ಯ ಅವರ ಸೂಚನೆಯ ಮೇರೆಗೆ ಇದೀಗ ನಕ್ಸಲರು ಬೆಂಗಳೂರಿಗೆ ಆಗಮಿಸುತ್ತಿದ್ದು ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ ಪರಮೇಶ್ವರ್ ಅವರ ಎದುರು ಶರಣಾಗಲಿದ್ದಾರೆ ಎಂದು ತಿಳಿದು ಬಂದಿದೆ . ಹೌದು ಸಿಎಂ ಹಾಗೂ ಗೃಹ ಸಚಿವರ ಮುಂದೆ 6 ನಕ್ಸಲರು ಶರಣಾಗಲಿದ್ದಾರೆ. ಬಾಳೆಹೊನ್ನುರಿನಿಂದ ಈಗಾಗಲೇ ನಕ್ಸಲರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ನಕ್ಸಲರನ್ನು ಶಾಂತಿಗಾಗಿ ನಾಗರಿಕ ವೇದಿಕೆ ಸದಸ್ಯರು ಕರೆತರುತ್ತಿದ್ದಾರೆ. ಚಿಕ್ಕಮಂಗಳೂರು ಎಸ್ಪಿ ವಿಕ್ರಂ ಆಮ್ಟೆ, ISD ಎಸ್ ಪಿ ಹರಿರಾಮ ಶಂಕರ್, ಪಶ್ಚಿಮ ವಲಯದ ಐಜಿಪಿ ಅಮಿತ್ ಸಿಂಗ್ ನೇತೃತ್ವದಲ್ಲಿ ಶರಣಾಗತಿ ಅಗಲಿದ್ದಾರೆ.ಸಿಎಂ ಸಿದ್ದರಾಮಯ್ಯ ಅವರ ಸೂಚನೆಯ ಮೇರೆಗೆ 6 ನಕ್ಸಲರು ಇದೀಗ ಬೆಂಗಳೂರಿನ ಕಡೆಗೆ ಬರುತ್ತಿದ್ದಾರೆ. ಸಿಎಂ ಗೃಹ…

Read More

ಬೆಂಗಳೂರು : ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಯ ಕಚೇರಿ ಮೇಲೆ ನಿನ್ನೆ ED ಅಧಿಕಾರಿಗಳು ದಾಳಿ ನಡೆಸಿದ್ದರು. ಚೀಫ್ ಕಮಿಷನರ್ ಕಚೇರಿ ಮೇಲೆ ಬೆಳಗ್ಗೆ 11 ಗಂಟೆ ವೇಳೆ ED ಅಧಿಕಾರಿಗಳು ದಾಳಿ ನಡೆಸಿ, ತಡರಾತ್ರಿ ವಾಪಾಸ್ ಆಗಿದ್ದು ಇಂದು ಬೆಳಿಗ್ಗೆ ಮತ್ತೆ ಕಚೇರಿಯಲಿ ಪರಿಶೀಲನೆ ನಡೆಸುತ್ತಿದ್ದಾರೆ. ಹೌದು ಬಿಬಿಎಂಪಿ ಕಚೇರಿಯಲ್ಲಿ ಪರಿಶೀಲನೆ ಮುಂದುವರೆಸಿದ ED ಅಧಿಕಾರಿಗಳು ತಡರಾತ್ರಿ ಬಿಬಿಎಂಪಿ ಕಚೇರಿಯಿಂದ ತೆರಳಿದ್ದರು. ಇದೀಗ ಇಂದು ಬೆಳಿಗ್ಗೆ ಮತ್ತೆ ದಾಖಲೆ ಪರಿಶೀಲನೆ ಮುಂದುವರಿಸಿದ್ದಾರೆ.ಬಿಬಿಎಂಪಿ ಚೀಫ್ ಇಂಜಿನಿಯರ್ ಪ್ರಹ್ಲಾದ್ ಕಚೇರಿಯಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ನಿನ್ನೆ ED ಅಧಿಕಾರಿಗಳು ಕಚೇರಿಯಿಂದ ಸಾಕಷ್ಟು ದಾಖಲೆ ಮತ್ತು ಕಡತಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೂರು ವರ್ಷಗಳ ಅವಧಿಯಲ್ಲಿ ಸುಮಾರು 960 ಕೋಟಿ ಪಡೆಯಲಾಗಿತ್ತು ಈ ಬಿಲ್ಗೆ ಕಾಮಗಾರಿಯ ಗುಣಮಟ್ಟ ಸುಳಿ ಲೆಕ್ಕದ ಆರೋಪ ಕೂಡ ಕೇಳಿ ಬಂದಿತ್ತು ಹೀಗಾಗಿ ಚೀಫ್ ಇಂಜಿನಿಯರ್ ಕಚೇರಿಯ ಮೇಲೆ ಇಡಿ ಅಧಿಕಾರಿಗಳು ನಿನ್ನೆ ದಾಳಿ ಮಾಡಿದ್ದರು ಎಲ್ಲಾ ವಲಯದ ಇಂಜಿನಿಯರ್ಗಳನ್ನು ಕರೆಸಿ…

Read More

ಮೈಸೂರು : ಮೈಸೂರು ಕಾರಾಗೃಹದಲ್ಲಿ ಕೈದಿಗಳು ಎಸ್ಸೆನ್ಸ್ ಸೇವಿಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ರಮೇಶ್ ಎನ್ನುವ ಮೂರನೇ ಕೈದಿ ಕೂಡ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.ಅಸ್ವಸ್ಥಗೊಂಡಿದ್ದ ಮತ್ತೊಬ್ಬ ಕೈದಿ ರಮೇಶ್ ಕೂಡ ಇದೀಗ ಸಾವನ್ನಪ್ಪಿದ್ದಾನೆ. ಆ ಮೂಲಕ ಹೊಸ ವರ್ಷಚಾರಣೆ ವೇಳೆ ಎಸೆನ್ಸ್ ಸೇವಿಸಿದ್ದ ಮೂವರು ಕೈದಿಗಳು ಇದೀಗ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಹೊಸ ವರ್ಷದ ದಿನ ಕೇಕ್ ತಯಾರಿಸಲು ಎಸೆನ್ಸ್ ತರಿಸಲಾಗಿದ್ದು, ಜೈಲಿನ ಬೇಕರಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮೂವರು ಕೈದಿಗಳು ಕೇಕ್ ತಯಾರಿಸಲು ಇಟ್ಟಿದ್ದ ಎಸೆನ್ಸ್ ಕುಡಿದಿದ್ದರು. ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆ ಜೈಲಿನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಮೂರು ಕೈದಿಗಳನು, ಮೈಸೂರಿನ ಕೆ ಆರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಬಳಿಕ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ನಿನ್ನೆ ನಿನ್ನೆ ಮೈಸೂರಿನ ಸಾತಗಳ್ಳಿಯ ಮಾದೇಶ್ ಮೃತಪಟ್ಟಿದ್ದರು. ಇಂದು ಚಾಮರಾಜನಗರದ ಕೈದಿ ನಾಗರಾಜ್ ಕೆಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದ್ದಾರೆ.  ಇದೀಗ ಮತ್ತೊಬ್ಬ ಕೈದಿ…

Read More

ಬೆಂಗಳೂರು : ಇಂದು ಕರ್ನಾಟಕದಲ್ಲಿ ಬಹು ದೊಡ್ಡ ಶರಣಾಗತಿ ಆಗಲಿದ್ದು, ಚಿಕ್ಕಮಂಗಳೂರಿನಲ್ಲಿ ದಕ್ಷಿಣ ಭಾರತದ ಮೋಸ್ಟ್ ವಾಂಟೆಡ್ ಆರು ಜನ ನಕ್ಸಲರು ಜಿಲ್ಲಾಡಳಿತದ ಮುಂದೆ ಇನ್ನೇನು ಕೆಲವೇ ಕ್ಷಣಗಳಲ್ಲಿ ಶರಣಾಗಲಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿ ಶರಣಾಗುವ ನಕ್ಸಲರ ವಿರುದ್ಧ ಹಲವು ಪ್ರಕರಣಗಳಿದ್ದು ಆ ಕುರಿತು ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚಿಕ್ಕಮಗಳೂರಲ್ಲಿ ಇಂದು ನಕ್ಸಲರು ಶರಣಾಗತಿ ಆಗುತ್ತಿರುವ ವಿಚಾರವಾಗಿ, ಬಾಕಿ ಉಳಿದ ವಿಚಾರವಾಗಿ ನಾನು ಈಗ ಮಾತನಾಡುವುದಿಲ್ಲ. ಆದರೆ ವಿಕ್ರಂ ಎನ್ಕೌಂಟರ್ ವೇಳೆ ನಕ್ಸಲರಿಗೆ ಶರಣಾಗಲು ಕರೆ ನೀಡಲಾಗಿತ್ತು. ಕಾಡಿನಲ್ಲಿದ್ದು ಈ ರೀತಿ ಜೀವನ ಏಕೆ ಮಾಡುತ್ತಿದ್ದೀರಿ, ಸಮಾಜದ ಮುಖ್ಯ ವಾಹಿನಿಗೆ ಬನ್ನಿ ಅಂತ ಹೇಳಿದ್ದೇವೆ. ನಕ್ಸಲರ ವಿರುದ್ಧ ಹಲವು ಪ್ರಕರಣಗಳಿವೆ ನಿಜ, ಪ್ರಕರಣಗಳ ವಿಚಾರದಲ್ಲಿ ಕಾನೂನು ಪ್ರಕಾರ ಕ್ರಮ ಆಗಲಿದೆ ಎಂದು ತಿಳಿಸಿದರು.

Read More

ಬೆಂಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ಡಿನ್ನರ್ ಪಾರ್ಟಿ ಭಾರಿ ಸದ್ದು ಮಾಡುತ್ತಿದ್ದು, ಸಚಿವ ಸತೀಶ್ ಜಾರಕಿಹೊಳೆ ಡಿನ್ನರ್ ಪಾರ್ಟಿ ನೀಡಿದ್ದೇ ತಡ, ಇತ್ತ ಗೃಹ ಸಚಿವ ಡಾ.ಜಿ ಪರಮೇಶ್ವರ್ ವಿದೇಶದಿಂದ ಆಗಮಿಸಿದ ತಕ್ಷಣ ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಡಿನ್ನರ್ ಪಾರ್ಟಿ ಆಯೋಜನೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಹೈಕಮಾಂಡ್ ಖಡಕ್ ಸೂಚನೆ ಮೇರೆಗೆ ಇದೀಗ ಇಂದು ನಡೆಯಬೇಕಿದ್ದ ಡಿನ್ನರ್ ಪಾರ್ಟಿ ರದ್ದಾಗಿದೆ. ಈ ಕುರಿತು ಸಚಿವ ಜಿ ಪರಮೇಶ್ವರ ಡಿನ್ನರ್ ರದ್ದಾಗಿಲ್ಲ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂದು ನಡೆಯಬೇಕಿದ್ದ ಔತಣಕೂಟ ರದ್ದಾಗಿಲ್ಲ ಬದಲಾಗಿ ಡಿನ್ನರ್ ಪಾರ್ಟಿ ದಿನಾಂಕ ಮುಂದೂಡಲಾಗಿದೆ. ಹೈಕಮಾಂಡ್ ಡಿನ್ನರ್ ಪಾರ್ಟಿಗೆ ಯಾವುದೇ ವಿರೋಧ ವ್ಯಕ್ತಪಡಿಸಿಲ್ಲ ಎಂದು ಜಿ ಪರಮೇಶ್ವರ್ ಸ್ಪಷ್ಟನೆ ನೀಡಿದರು. ಡಿಕೆ ಶಿವಕುಮಾರ್ ಹೈಕಮಾಂಡ್ಗೆ ದೂರು ನೀಡಿರುವ ಬಗ್ಗೆ ನನಗೆ ಗೊತ್ತಿಲ್ಲ. ಈ ಸಭೆಗೆ ಡಿಸಿಎಂ ಡಿಕೆ ಅವರನ್ನು ಕರೆಯಬೇಕು ಅಂತ ಚರ್ಚೆಯಾಗಿತ್ತು. ರಾಜಕಾರಣ ಮಾಡುವುದಾದರೆ ಓಪನ್…

Read More

ಧಾರವಾಡ-ಹುಬ್ಬಳ್ಳಿ : ಕೇಂದ್ರ ಸಚಿವ ಅಮಿತ್ ಶಾ ಅವರು ಡಾ. ಬಿ ಆರ್ ಅಂಬೇಡ್ಕರ್ ಅವರ ಕುರಿತು ನೀಡಿರುವ ಹೇಳಿಕೆಗೆ ಇದೀಗ ತೀವ್ರ ಖಂಡನೆ ವ್ಯಕ್ತವಾಗಿದ್ದು. ಈ ಹಿನ್ನೆಲೆ ನಾಳೆ ಹುಬ್ಬಳ್ಳಿ ಧಾರವಾಡ ಬಂದ್ ಗೆ ದಲಿತ ಸಂಘಟನೆಗಳು ಕರೆ ನೀಡಿವೆ. ಇದಕ್ಕೆ ಕಾಂಗ್ರೆಸ್ ಶಾಸಕ ಪ್ರಸಾದ ಅಬ್ಬಯ್ಯ ಕೂಡ ಬೆಂಬಲ ಘೋಷಣೆ ಮಾಡಿದ್ದು, ಇದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿದ್ದರಿಂದ ಇದೀಗ ಈ ಒಂದು ಬಂದ್ ಕರೆ ರಾಜಕೀಯ ತಿರುವು ಪಡೆದುಕೊಂಡಿದೆ. ಹೌದು ನಾಳೆ ಹುಬ್ಬಳ್ಳಿ ಧಾರವಾಡ ಬಂದ್ ಗೆ ದಲಿತ ಸಂಘಟನೆಗಳು ಕರೆಗೆ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಬೆಂಬಲ ಘೋಷಣೆ ಮಾಡಿದ್ದು, ಇತ್ತ ಹುಬ್ಬಳ್ಳಿ ಧಾರವಾಡ ನಗರ ಬಂದ್ ಗೆ ಬಿಜೆಪಿ ವಿರೋಧಿಸುತ್ತಿದೆ. ಹಾಗಾಗಿ ನಾಳೆ ಹುಬ್ಬಳ್ಳಿ ಧಾರವಾಡ ಬಂದ್ ಕರೆ ರಾಜಕೀಯ ತಿರುವು ಪಡೆದುಕೊಂಡಿದೆ ಎನ್ನಲಾಗಿದೆ. ಹುಬ್ಬಳ್ಳಿ ಧಾರವಾಡ ಬಂದ್ ಮಾಡಿದರೆ ನಾವು ಬಂದ್ ಗೆ ಕರೆ ಕೊಡುತ್ತೇವೆ. ನಿಮಗೆ ಪ್ರತಿಯಾಗಿ ನಾವು ಕೂಡ ಬಂದ್ ಗೆ…

Read More

ಬಳ್ಳಾರಿ : ಇಂದು ರಾಜ್ಯಾದ್ಯಂತ ಬೆಳ್ಳಂ ಬೆಳಿಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದು, ವಿವಿಧಡೆ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಸರ್ಕಾರಿ ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಇದೀಗ ಬಳ್ಳಾರಿ ಜಿಲ್ಲೆಯಲ್ಲಿ ತಾಲೂಕು ಬಿಸಿಎಂ ಹಾಸ್ಟೆಲ್ ಅಧಿಕಾರಿ ಲೋಕೇಶ್ ಮನೆ ಮೇಲೆ ದಾಳಿ ಮಾಡಿದ್ದು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಹೌದು ಬಳ್ಳಾರಿ ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು ತಾಲೂಕು ಬಿಸಿಎಂ ಅಧಿಕಾರಿ ಲೋಕೇಶ್ ಮನೆಯ ಮೇಲೆ ದಾಳಿ ಮಾಡಿದ್ದಾರೆ. ಅಲ್ಲದೆ ಅಧಿಕಾರಿ ಲೋಕೇಶ್ ಸ್ನೇಹಿತರ ಮನೆಗಳ ಮೇಲು ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬಳ್ಳಾರಿಯ ರಾಮಾಂಜನೇಯ ನಗರದಲ್ಲಿರುವ ಲೋಕೇಶ್ ನಿವಾಸದ ಮೇಲೆ ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಈ ಹಿಂದೆ ವಾರ್ಡನ್ ಆಗಿದ್ದ ಲೋಕೇಶ್ ಇದೀಗ ತಾಲೂಕು ಬಿಸಿಎಂ ಹಾಸ್ಟೆಲ್ ಅಧಿಕಾರಿಯಾಗಿದ್ದಾನೆ. ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ಅಲ್ಲದೇ ಲೋಕೇಶ್…

Read More

ಚಿಕ್ಕಮಗಳೂರು : ಸಮಾಜದ ಮುಖ್ಯ ವಾಹಿನಿಗೆ ಬರಲು ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ 6 ಮೋಸ್ಟ್ ವಾಂಟೆಡ್ ನಕ್ಸಲರು ಇಂದು ಚಿಕ್ಕಮಂಗಳೂರು ಜಿಲ್ಲಾಡಳಿತದ ಮುಂದೆ ಶರಣಾಗಲಿದ್ದು, ಈಗಾಗಲೇ ಚಿಕ್ಕಮಂಗಳೂರು ಡಿಸಿ ಕಚೇರಿ ಮುಂದೆ ಬಿಗಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ. ನಿನ್ನೆ ಶಾಂತಿಗಾಗಿ ನಾಗರಿಕ ವೇದಿಕೆಯು ರಾಜ್ಯ ಸರ್ಕಾರದೊಂದಿಗೆ ನಡೆಸಿದ ಸುದೀರ್ಘ ಮಾತುಕತೆ ಫಲಪ್ರದವಾಗಿದ್ದು ಇಂದು ಆರು ಜನ ನಕ್ಸಲ್​ ಹೋರಾಟಗಾರರು ಮುಖ್ಯ ವಾಹಿನಿಗೆ ಬರಲಿದ್ದಾರೆ. ಪ್ರಮುಖವಾಗಿ ಮುಂಡಗಾರು ಲತಾ, ಸುಂದರಿ ಕುಟ್ಲೂರು, ವನಜಾಕ್ಷಿ ಬಾಳೆಹೊಳೆ, ಮಾರಪ್ಪ ಅರೋಲಿ, ಕೆ ವಸಂತ, ಟಿ ಎನ್ ಜೀಶ್ ಅವರು ಬುಧವಾರ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಮಾಜದ ಮುಖ್ಯವಾಹಿನಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಶಾಂತಿಗಾಗಿ ನಾಗರಿಕ ವೇದಿಕೆಯ ಪ್ರಮುಖ ಮುಖಂಡ ಕೆ.ಎಲ್. ಅಶೋಕ್ ಮಾಹಿತಿ ನೀಡಿದ್ದಾರೆ. ಪ್ರವಾಸಿ ಮಂದಿರದಿಂದ ಜಿಲ್ಲಾಧಿಕಾರಿ ಕಚೇರಿಗೆ ನಕ್ಸಲರು ತೆರಳಲಿದ್ದಾರೆ. ಬಳಿಕ 11 ಗಂಟೆಗೆ ಜಿಲ್ಲಾಡಳಿತದ ಮುಂದೆ 6 ಮಂದಿ ನಕಲರು ಶರಣಾಗತಿ ಆಗಲಿದ್ದಾರೆ. 24 ವರ್ಷದ ಬಳಿಕ ಶಸ್ತ್ರ ಹಾಗೂ…

Read More

ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನ ಜೆ.ಪಿ ನಗರದಲ್ಲಿ ಟ್ಯೂಷನ್‌ಗೆಂದು ಬರುತ್ತಿದ್ದ 16 ವರ್ಷದ ಬಾಲಕಿಯನ್ನು ಪ್ರೀತಿಸುವುದಾಗಿ ಪುಸಲಾಯಿಸಿ ಶಿಕ್ಷಕನೇ ಕರೆದೊಯ್ದಿರುವ ಪ್ರಕರಣ ನಡೆದಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೆಪಿ ನಗರ ಠಾಣೆಯ ಪೊಲೀಸರು ಶಿಕ್ಷಕನನ್ನು ಅರೆಸ್ಟ್ ಮಾಡಿದ್ದಾರೆ. ಹೌದು ಕಳೆದ ಜನೆವರಿ 4 ರಂದು ಕನಕಪುರ ಮೂಲದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಪಾಲಕರು ನೀಡಿದ ದೂರಿನ ಅನ್ವಯ ಶಿಕ್ಷಕ ಅಭಿಷೇಕ ವಿರುದ್ಧ ಜೆ.ಪಿ.ನಗರ ಪೊಲೀಸ್‌ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಾಗಿತ್ತು. ಇದೀಗ ಬಾಲಕಿಯ ಜೊತೆ ಪರಾರಿಯಾಗಿದ್ದ ಶಿಕ್ಷಕ ಅಭಿಷೇಕ ನಾನು ಜೆಪಿ ನಗರ ಠಾಣೆ ಪೊಲೀಸರು ಅರೆಸ್ಟ್ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣ ಹಿನ್ನೆಲೆ? ಅಭಿಷೇಕ್‌ ಖಾಸಗಿಯಾಗಿ ಟ್ಯೂಷನ್‌ ಕ್ಲಾಸ್‌ ನಡೆಸುತ್ತಿದ್ದ. ನಾಪತ್ತೆಯಾಗಿರುವ ವಿದ್ಯಾರ್ಥಿನಿಯೂ ಇಲ್ಲಿ ಟ್ಯೂಷನ್‌ ಪಡೆಯುತ್ತಿದ್ದಳು. ಈ ನಡುವೆ ಶಿಕ್ಷಕ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಕಳೆದ ನ.23 ರಂದು ಟ್ಯೂಷನ್‌ನಿಂದ ರಾತ್ರಿಯಾದರೂ ವಿದ್ಯಾರ್ಥಿನಿ ಮನೆಗೆ ಬಾರದಿದ್ದಾಗ ಆಕೆಯ ಪೋಷಕರು ಟ್ಯೂಷನ್‌…

Read More

ಕೋಲಾರ : ಇತ್ತೀಚಿನ ದಿನಗಳಲ್ಲಿ ಹೃದಯಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಸಿದ್ದನಹಳ್ಳಿಯಲ್ಲಿ ಬೆಸ್ಕಾಂ ಸಿಬ್ಬಂದಿ ಒಬ್ಬರು ಮನೆಯೊಂದಕ್ಕೆ ಕರೆಂಟ್ ಬಿಲ್ ನೀಡುವ ಸಂದರ್ಭದಲ್ಲಿ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ. ಹೌದು ಹೃದಯಾಘಾತದಿಂದ ಕರ್ತವ್ಯ ನಿರತ ಬೆಸ್ಕಾಂ ಸಿಬ್ಬಂದಿ ಸಾವನ್ನಾಪ್ಪಿದ್ದರೆ. ಸಿದ್ದನಹಳ್ಳಿ ಬೆಸ್ಕಾಂ ಸಿಬ್ಬಂದಿ ಪ್ರಕಾಶ್ ಕುಮಾರ್ ಎನ್ನುವವರು ಸಾವನ್ನಪ್ಪಿದ್ದಾರೆ.. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಸಿದ್ದನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಸಿದ್ದನನಹಳ್ಳಿಯಲ್ಲಿ ವಿದ್ಯುತ್ ಬಿಲ್ ಕೊಡುವಾಗ ಹೃದಯಾಘಾತವಾಗಿದೆ. ಮೃತನ ಕುಟುಂಬಕ್ಕೆ ಇದೀಗ ಸಿಬ್ಬಂದಿಗಳು ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸುತ್ತಿದ್ದಾರೆ. ಘಟನೆ ಕುರಿತು ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More