Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಸರ್ಕಾರದ ಸಚಿವರುಗಳು ವಿಧಾನಸೌಧದಲ್ಲೇ 60% ಕಮಿಷನ್ ಪಡೆಯುತ್ತಿದ್ದಾರೆ ಎಂದು ಗಂಭೀರವಾದ ಆರೋಪ ಮಾಡಿದ್ದರು. ಇದೀಗ ಇವರ ಒಂದು ಆರೋಪಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ ಧ್ವನಿಗೂಡಿಸಿದ್ದು, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆಯನ್ನು ನಾನು ಸಮರ್ಥನೆ ಮಾಡಿಕೊಳ್ಳುತ್ತೇನೆ. 60% ಪಡೆಯುತ್ತಿರುವುದು ನಿಜ ಎಂದು ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರೋಪಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಮಿಷನ್ಗಾಗಿ ಕಾಂಗ್ರೆಸ್ ರಾಜ್ಯವನ್ನು ಲೂಟಿ ಮಾಡಿದೆ. ಸ್ವಲ್ಪ ಅಡ್ಜಸ್ಟ್ ಮಾಡಿಕೊಳ್ಳಿ ಅಂತ ಶಾಸಕ ಹಿಟ್ನಾಳ್ ಹೇಳಿದ್ದಾರೆ. ಓಟ್ ಹಾಕುವಾಗ ಅಡ್ಜಸ್ಟ್ ಮಾಡಿಕೊಳ್ಳಿ ಅಂತ ಹೇಳಬೇಕಿತ್ತು. ಕಾಂಗ್ರೆಸ್ ಶಾಸಕ ರಾಜು ಕಾಗೆ ಪ್ರತಿದಿನವೂ ಕೂಗುತ್ತಿದ್ದಾರೆ. ಅಭಿವೃದ್ಧಿ ಕುಂಠಿತ ಆಗಿದೆ ಎಂದು ಕಾಂಗ್ರೆಸ್ ಶಾಸಕರು ಹೇಳುತ್ತಿದ್ದಾರೆ. ಶೇಕಡ 5ರಷ್ಟು ಕಮಿಷನ್ ಜಾಸ್ತಿ ಮಾಡಲು ಕಾಂಗ್ರೆಸ್ ಹೊರಟಿದೆ. ಮುಂದಿನ…
ಬೆಂಗಳೂರು : ಅರಣ್ಯ ಅಪರಾಧ ತಡೆಗೆ ರಾಜ್ಯ ಸರ್ಕಾರ ಇದೀಗ ಮಹತ್ವದ ಕ್ರಮ ಕೈಗೊಂಡಿದ್ದು, ಅರಣ್ಯ ಅಪರಾಧ ತಡೆಗೆ ಆನ್ಲೈನ್ ಎಫ್ಐಆರ್ ವ್ಯವಸ್ಥೆಗೆ ಚಾಲನೆ ಅರಣ್ಯ ಇಲಾಖೆಯ ಸಚಿವ ಈಶ್ವರ ಖಂಡ್ರೆ ಅವರು ಇಂದು ಚಾಲನೆ ನೀಡಿದರು. ವಿಧಾನಸೌಧದಲ್ಲಿಂದು ಅರಣ್ಯ ಇಲಾಖೆ Wild Life Trust of India (WTI) ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿರುವ ಗರುಡಾಕ್ಷಿ ಆನ್ಲೈನ್ / ಡಿಜಿಟಲ್ FIR ವ್ಯವಸ್ಥೆಗೆ ಚಾಲನೆ ನೀಡಿ ಮಾತನಾಡಿದ ಅವರು, ಇಂದಿನ ಆಧುನಿಕ ಯುಗಮಾನದ ಅಗತ್ಯಕ್ಕೆ ಅನುಗುಣವಾಗಿ ಅರಣ್ಯ ಇಲಾಖೆ ಬದಲಾಗುತ್ತಿದ್ದು, ಅರಣ್ಯ ಒತ್ತುವರಿ, ಅಕ್ರಮ ಮರ ಕಡಿತಲೆ, ಕಳ್ಳಬೇಟೆ, ಅತಿಕ್ರಮ ಪ್ರವೇಶ ಇತ್ಯಾದಿ ಅರಣ್ಯ ಅಪರಾಧಗಳಿಗೆ ಇನ್ನು ಮುಂದೆ ಗರುಡಾಕ್ಷಿ ಅಸ್ತ್ರ ಪ್ರಯೋಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದರು. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಅರಣ್ಯ ಅಪರಾಧ ತಡೆಯಲು, ತಪ್ಪಿತಸ್ಥರಿಗೆ ಶಿಕ್ಷೆ ಆಗುವುದನ್ನು ಖಾತ್ರಿ ಪಡಿಸಲು ಹಾಗೂ ಆ ಮೂಲಕ ಅರಣ್ಯ ಮತ್ತು ವನ್ಯಜೀವಿ ಅಪರಾಧಗಳನ್ನು…
ತುಮಕೂರು : ಯುವಕನೋರ್ವ ಚಿರತೆ ಬಾಲ ಹಿಡಿದು ಬೋನಿಗೆ ಹಾಕಿದ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ರಂಗಾಪುರ ಗ್ರಾಮದಲ್ಲಿ ನಡೆದಿದೆ. ಯುವಕನ ಈ ಒಂದು ಸಾಹಸ ಹಾಗೂ ಧೈರ್ಯಕ್ಕೆ ಸ್ವತಃ ಅರಣ್ಯ ಸಂಬಂಧಿಗಳೇ ಶಾಕ್ ಗೆ ಒಳಗಾಗಿದ್ದಾರೆ. ಹೌದು ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ರಂಗಾಪುರ ಗ್ರಾಮದಲ್ಲಿ ಯುವಕನೋರ್ವ ಚಿರತೆ ಬಾಲ ಹಿಡಿದು ಬೋನಿಗೆ ಹಾಕಿದ ಘಟನೆ ಜರುಗಿದೆ.ಇಂದು ಪುರಲೇಹಳ್ಳಿ ರಸ್ತೆಯಲ್ಲಿರುವ ಕುಮಾರ್ ಎಂಬವರ ಮನೆ ಬಳಿ ಚಿರತೆ ಕಾಣಿಸಿಕೊಂಡಿದೆ.ಈ ಹಿನ್ನೆಲೆ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಲಾಗಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಬಲೆ ಬಿಟ್ಟು ಚಿರತೆ ಸೆರೆಹಿಡಿಯುವ ಸಲುವಾಗಿ ಸಕಲ ಸಲಕರಣೆಗಳೊಂದಿಗೆ ಬಂದಿದ್ದರು. ಆದರೆ ಚಿರತೆ ಸೆರೆಹಿಡಿಯಲಾಗದೇ ಕೈಚೆಲ್ಲಿ ಕುಳಿತರು. ಈ ವೇಳೆ ಗ್ರಾಮದ ಆನಂದ್ ಎಂಬವರು ಚಿರತೆ ಬಾಲ ಹಿಡಿದು ಬೋನಿಗೆ ಹಾಕಿದ್ದಾರೆ. 5 ವರ್ಷದ ಚಿರತೆಯನ್ನು ಯುವಕ ಸೆರೆಹಿಡಿದಿದ್ದನ್ನು ಕಂಡು ಅರಣ್ಯ ಇಲಾಖೆ ಸಿಬ್ಬಂದಿ ಶಾಕ್ ಆಗಿದ್ದಾರೆ.ಆನಂದ್ ಸಾಹಸಕ್ಕೆ ಇಡೀ ಸುತ್ತಮುತ್ತಲಿನ ಗ್ರಾಮಸ್ಥರೆಲ್ಲಾ ಖುಷಿಯಾಗಿದ್ದು, ಅವರ…
ಉತ್ತರಪ್ರದೇಶ : ಗಾಳಿಪಟ ಹಾರಿಸಲು ಗಾಜು ಮಿಶ್ರಿತ ದಾರ (ಮಾಂಜಾ) ವನ್ನು ಖರೀಸಿದ ಯುವಕರು, ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಯುವಕನ ಕುತ್ತಿಗೆಗೆ ತಾಗಿದೆ. ಈ ವೇಳೆ ದಾರದಿಂದ ಕತ್ತು ಸೀಳಿ ಯುವಕ ಸಾವನ್ನಪ್ಪಿರುವ ಘೋರ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ. ಮೃತನನ್ನು ಸುಹೇಲ್(22) ಎಂದು ಗುರುತಿಸಲಾಗಿದೆ. ಸುಹೇಲ್ ಮತ್ತು ಆತನ ಸ್ನೇಹಿತ ನವಾಜಿಶ್ ಶಾಪಿಂಗ್ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ಘಟನೆಯಲ್ಲಿ ನವಾಜಿಶ್ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ. ಇಬ್ಬರು ಗ್ಲಾಸ್ ಲೇಪಿತ ಗಾಳಿಪಟದ ತಂತಿಗಳನ್ನು ಖರೀದಿಸಿದ್ದರು, ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಚೈನೀಸ್ ಮಾಂಜಾ ಎಂನುಗ ಈ ಒಂದು ಗಾಜು ಮಿಶ್ರಿತ ದಾರವು ಭಾರತದಲ್ಲಿ ನಿಷೇಧವಿದ್ದರೂ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ. ಘಟನೆಯ ನಂತರ, ಮೀರತ್ ಪೊಲೀಸರು ಚೈನೀಸ್ ಮಾಂಜಾವನ್ನು ಮಾರಾಟ ಮಾಡುವ ಅಂಗಡಿಗಳ ಮೇಲೆ ದಾಳಿ ನಡೆಸಿ ಐವರು ವ್ಯಾಪಾರಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಚೈನೀಸ್ ಮಾಂಜಾವನ್ನು ತುಂಬಿದ ಮೂರು ಚೀಲಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.
ರಾಯಚೂರು : ಬಿಜೆಪಿಯ ಮಾಜಿ ಶಾಸಕ ಬಸವರಾಜ್ ದಡೆಸೂಗೂರು ವಿರುದ್ಧ ಇದೀಗ ಅಕ್ರಮ ಗಣಿಗಾರಿಕೆ ಆರೋಪ ಕೇಳಿ ಬಂದಿದ್ದು, ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಬೂದಿವಾಳ ಕ್ಯಾಂಪ್ ಬಳಿ ಅಕ್ರಮವಾಗಿ ಮರಮ್ ಗಣಿಗಾರಿಕೆ ನಡೆಸುತ್ತಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ. ಹೌದು ಬಸವರಾಜ್ ದಡೆಸುಗೂರು ವಿರುದ್ಧ ಈ ಒಂದು ಗಂಭೀರವಾದ ಆರೋಪ ಕೇಳಿ ಬಂದಿದ್ದು, ಅಕ್ರಮ ಅವ್ಯಾಹತ ಗಣಿಗಾರಿಕೆ ನಡೆಸುತ್ತಿದ್ದುರು ಸಹ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮೌನ ವಹಿಸಿದೆ. ಸರ್ವೇ ನಂಬರ್ 278/3 ರಲ್ಲಿ ಈ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ರಾಜಧನ & ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅನುಮತಿ ಕೂಡ ಇಲ್ಲ. ಬಸವರಾಜ ದಡೆಸುಗುರು ವಿರುದ್ಧ ಅಕ್ರಮ ಗಣಿಗಾರಿಕೆ ನಡೆಸುತ್ತಿರುವ ಆರೋಪ ಕೇಳಿ ಬಂದಿದ್ದು, ವಕೀಲ ಜಗದೀಶ್ ಎನ್ನುವವರು ಕಳೆದ ನಾಲ್ಕೈದು ತಿಂಗಳಿಂದ ಹೋರಾಟ ಮಾಡುತ್ತಿದ್ದಾರೆ.ಈ ಕುರಿತು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಿಂಧನೂರು ಇಲಾಖೆಗೆ ಹಾಗೆ ದೂರು ಕೊಟ್ಟಿದ್ದಾರೆ. ಆದರೆ ದೂರು…
ಬೆಂಗಳೂರು : ಆರ್ಥಿಕ ಸಹಾಯ ಮಾಡುವುದಾಗಿ ಕರೆದೊಯ್ದು ಬಲವಂತವಾಗಿ ಮದ್ಯ ಕುಡಿಸಿ 26 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆಸಿರುವ ಆರೋಪದ ಹಿನ್ನೆಲೆಯಲ್ಲಿ ಇದೀಗ ಬಿಜೆಪಿ ಮುಖಂಡ ಸೋಮಶೇಖರ್ ಜಯರಾಜ್ ವಿರುದ್ಧ ಸಂತ್ರಸ್ತ ಯುವತಿ ಬೆಂಗಳೂರಿನ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.ಈ ಸಂಬಂಧಪಟ್ಟ ಪೊಲೀಸರು ಬಿಜೆಪಿ ಮುಖಂಡನ ವಿರುದ್ಧ FIR ದಾಖಸಿಕೊಂಡಿದ್ದಾರೆ. ದೂರುದಾರ ಯುವತಿಗೆ ಆಕೆಯ ಸ್ನೇಹಿತ ಇಂದ ಸೋಮಶೇಖರ್ ಪರಿಚಯವಾಗಿತ್ತು ಕಳೆದ ವರ್ಷ ಯುವತಿಯ ಮದುವೆ ಹಿನ್ನೆಲೆಯಲ್ಲಿ ಸೋಮಶೇಖರ್ ಬಳಿ ಹಣದ ಸಹಾಯ ಕೇಳಿದ್ದಳು. ಹಾಗಾಗಿ ಸೋಮಶೇಖರ್ ಮಹಿಳೆ ಇರುವ ಪೀಜಿಗೆ ತೆರಳಿ, ಅಲ್ಲಿಂದ ಆಕೆಯನ್ನು ತನ್ನ ಫ್ಲಾಟ್ ಗೆ ಕರೆದುಕೊಂಡು ಹೋಗಿ ಬಲವಂತವಾಗಿ ಮದ್ಯ ಕುಡಿಸಿ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರ ಎಸಗಿದ ಬಳಿಕ ಯಾರಿಗಾದರೂ ಹೇಳಿದರೆ ಕೊಲೆ ಮಾಡುವ ಬೆದರಿಕೆ ಕೂಡ ಹಾಕಿದ್ದ ಎಂದು ಸಂತ್ರಸ್ತ ಯುವತಿ ದೂರಿನಲ್ಲಿ ತಿಳಿಸಿದ್ದಾರೆ. ಇದೀಗ ಯುವತಿಯ ದೂರಿನ ಅನ್ವಯ ಬಿಜೆಪಿ ಮುಖಂಡ ಸೋಮಶೇಖರ್ ಜಯರಾಜ್ ವಿರುದ್ಧ ಬೆಂಗಳೂರಿನ ಅಶೋಕ್…
ವಿಜಯಪುರ : ಒಂದು ಕಡೆ ಶಕ್ತಿ ಯೋಜನೆಯಿಂದ ಸಾರಿಗೆ ನೌಕರರಿಗೆ ವೇತನ ಸಿಗುತ್ತಿಲ್ಲ ಎಂದು ಬಿಜೆಪಿ ನಾಯಕರು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿ ಎಂದು ಹೇಳುತ್ತಿದ್ದರೆ, ಇನ್ನೊಂದು ಕಡೆ ಇದೇ ಒಂದು ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನರಿಗೆ ಉಪಯೋಗವಾಗಿದೆ. ಇದೀಗ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನಲ್ಲಿ ಮಹಿಳೆಯೊಬ್ಬರು 5 ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಿಂದ ಬಂದಂತಹ ಹಣದಿಂದ ಇಡೀ ಗ್ರಾಮಕ್ಕೆ ಹೋಳಿಗೆ ಊಟ ಆಗಿಸಿರುವ ಘಟನೆ ವರದಿಯಾಗಿದೆ. ಹೌದು ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ತಾಂಬಾ ಸಮೀಪದ ಗೂಗಿಹಾಳ ಗ್ರಾಮದ ಗೃಹಲಕ್ಷ್ಮಿ ಯೋಜನೆ ಫಲಾನುಭವಿ ಮಾಬೂಬಿ ಅಬ್ಬಾಸಲಿ ಚೌಧರಿ ಅವರು ಗೃಹಲಕ್ಷ್ಮಿ ಹಣ ಉಳಿಸಿ, ಸಿಂದಗಿ ಶಾಸಕ ಅಶೋಕ ಮನಗೂಳಿ ಮತ್ತು ಸಮಸ್ತ ಗ್ರಾಮಸ್ಥರಿಗೆ ಸೋಮವಾರ ಹೋಳಿಗೆ ಊಟ ಮಾಡಿಸಿದರು. ಇದೇ ಸಂದರ್ಭದಲ್ಲಿ ಶಾಸಕ ಅಶೋಕ್ ಮನಗೂಳಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಕೂಡಲೇ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿತು ಇದನ್ನು ಬಿಜೆಪಿಯವರು…
BREAKING : ಕಲಬುರ್ಗಿಯಲ್ಲಿ ಇನ್ಶೂರೆನ್ಸ್ ಹಣಕ್ಕಾಗಿ ಹೆತ್ತ ತಂದೆಯನ್ನೇ ಕೊಂದ ಪಾಪಿ ಮಗ : ಪುತ್ರ ಸೇರಿ ನಾಲ್ವರ ಬಂಧನ!
ಕಲಬುರ್ಗಿ : ತಾನು ಮಾಡಿದಂತಹ ಸಾಲವನ್ನು ತೀರಿಸಲಾಗದೆ ತಂದೆಯ ಹೆಸರಲ್ಲಿ ಇನ್ಶೂರೆನ್ಸ್ ಮಾಡಿಸಿ, ಬಳಿಕ ತಂದೆಯನ್ನು ಹತ್ಯೆಗೈದು ಇನ್ಸೂರೆನ್ಸ್ ಹಣದಿಂದ ಸಾಲ ತೀರಿಸಲು ಪುತ್ರನೊಬ್ಬ ಟ್ರಾಕ್ಟರ್ ನಿಂದ ಡಿಕ್ಕಿ ಹೊಡೆಸಿ ಕೊಲೆ ಮಾಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಬೆಣ್ಣೂರ್ (ಬಿ) ಗ್ರಾಮದಲ್ಲಿ ನಡೆದಿದೆ. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ತಾನು ಮಾಡಿದ್ದ ಸಾಲ ತೀರಿಸಲು ಐಡಿಯಾ ಮಾಡಿದ ಪುತ್ರನೊಬ್ಬ ತಂದೆ ಹೆಸರಿನಲ್ಲಿ ಇನ್ಸೂರೆನ್ಸ್ ಮಾಡಿಸಿ ಪುತ್ರನೇ ಹತ್ಯೆಗೈದಿರುವ ಘಟನೆ ನಡೆದಿದೆ. ಆಕ್ಸಿಡೆಂಟ್ ನಲ್ಲಿ ತಂದೆಯನ್ನು ಸಾಯಿಸಿದ ಪುತ್ರ. ಮೃತರನ್ನು ಕಾಳಿಂಗರಾವ್ ಎಂದು ಹೇಳಲಾಗುತ್ತಿದೆ. ಜುಲೈ 8 ಕ್ಕೆ ಕಾಳಿಂಗರಾವ್ ಸ್ಕೂಟಿಯಲ್ಲಿ ಬರುವಾಗ ಅಪಘಾತವಾಗಿತ್ತು. ಕಲ್ಬುರ್ಗಿ ಚಿತ್ತಾಪುರ ಬೆಣ್ಣೂರ್ (ಬಿ) ಕ್ರಾಸ್ ಬಳಿ ಒಂದು ಅಪಘಾತ ನಡೆದಿತ್ತು. ಕಳೆದ ವರ್ಷ ಜುಲೈ 8ರಂದು ಕಲ್ಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಬೆಣ್ಣೂರು (ಬಿ) ಗ್ರಾಮದಲ್ಲಿ ಸ್ಕೂಟಿಯಲ್ಲಿ ತೆರಳುತ್ತಿದ್ದ ಕಾಳಿಂಗರಾವ್ ಅವರಿಗೆ ಅವರ…
ಬೆಂಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ಡಿನ್ನರ್ ಪಾಲಿಟಿಕ್ಸ್ ಹೆಚ್ಚಾಗಿದ್ದು ಕಳೆದ ಕೆಲವು ದಿನಗಳ ಹಿಂದೆ ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ ಮನೆಯಲ್ಲಿ ಔತಣಕೂಟ ಏರ್ಪಡಿಸಲಾಗಿತ್ತು. ಡಿಸಿಎಂ ಡಿಕೆ ಶಿವಕುಮಾರ್ ಅವರು ವಿದೇಶ ಪ್ರವಾಸದಲ್ಲಿ ಇರುವಾಗಲೇ ಈ ಒಂದು ಔತಣಕೂಟ ಆಯೋಜನೆ ಮಾಡಿದ್ದು, ತೀವ್ರ ಕುತೂಹಲ ಮೂಡಿಸಿತು. ಇದರ ಬೆನ್ನಲ್ಲೇ ಇದೀಗ ಗೃಹ ಸಚಿವ ಜಿ ಪರಮೇಶ್ವರ್ ಅವರು ನಾಳೆ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಔತಣಕೂಟ ಆಯೋಜನೆ ಮಾಡಿದ್ದಾರೆ. ಹೌದು ನಾಳೆ ರಾತ್ರಿ ಖಾಸಗಿ ಹೋಟೆಲ್ ನಲ್ಲಿ ಜಿ ಪರಮೇಶ್ವರ್ ಅವರ ವತಿಯಿಂದ ಔತಣಕೂಟ ಏರ್ಪಡಿಸಲಾಗಿದೆ.ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಈ ಒಂದು ಔತಣಕೂಟ ನಡೆಯಲಿದೆ. ಸಚಿವರು ಹಾಗೂ ಶಾಸಕರಿಗೆ ಜಿ ಪರಮೇಶ್ವರ್ ಅವರು ಆಹ್ವಾನ ನೀಡಿರುವ ಮಾಹಿತಿ ತಿಳಿದು ಬಂದಿದೆ. ವಿದೇಶ ಪ್ರವಾಸದಿಂದ ವಾಪಸ್ ಆದ ಬಳಿಕ ಜಿ. ಪರಮೇಶ್ವರ್ ಡಿನ್ನರ್ ಆಯೋಜನೆ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಸೇರಿದಂತೆ ಅಹಿಂದ ಸಚಿವರು ಹಾಗೂ ಎಲ್ಲಾ ಶಾಸಕರು ಭಾಗಿಯಾಗುವ ಸಾಧ್ಯತೆ…
ಗುಜರಾತ್ : ಕಳೆದ ಕೆಲವು ದಿನಗಳ ಹಿಂದೆ ರಾಜಸ್ಥಾನದಲ್ಲಿ 150 ಅಡಿ ಬೋರ್ವೆಲ್ ಗೆ ಬಿದ್ದಂತಹ ಬಾಲಕಿಯನ್ನು ಜೀವಂತವಾಗಿ ರಕ್ಷಿಸಲಾಗಿತ್ತು.ರಕ್ಷಣೆ ಮಾಡಿದಾಗ ಆಕೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದಳು. ತಕ್ಷಣ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಆ ಒಂದು ಬಾಲಕಿ ಸಾವನ್ನಪ್ಪಿದ್ದಳು. ಇದೀಗ ಅಂತದ್ದೇ ಘಟನೆ ಗುಜರಾತ್ ನಲ್ಲಿ ನಡೆದಿದ್ದು ಸುಮಾರು 540 ಕ್ಕೂ ಹೆಚ್ಚು ಅಡಿ ಆಳವಿರುವ ಬೋರ್ವೆಲ್ ಗೆ 18 ವರ್ಷದ ಯುವತಿ ಬಿದ್ದಿರುವ ಘಟನೆ ಗುಜರಾತ್ನ ಕಛ್ ಜಿಲ್ಲೆಯಲ್ಲಿ ನಡೆದಿದೆ. ಹೌದು ಈ ಘಟನೆಯು ಗುಜರಾತ್ನ ಕಛ್ ಜಿಲ್ಲೆಯ ಭುಜ್ ತಾಲೂಕಿನ ಕಂಡೆರೈ ಗ್ರಾಮದಲ್ಲಿ ಬೆಳಗ್ಗೆ 6.30ರ ಸುಮಾರಿಗೆ ಈ ಘಟನೆ ನಡೆದಿದೆ.18 ವರ್ಷದ ಯುವತಿಯೊಬ್ಬಳು 540 ಅಡಿ ಆಳದ ಬೋರ್ವೆಲ್ಗೆ ಬಿದ್ದಿರುವ ಘಟನೆ ನಡೆದಿದೆ. 540 ಅಡಿ ಆಳದ ಕೊಳವೆಬಾವಿಯಲ್ಲಿ ಬಾಲಕಿ 490 ಅಡಿ ಆಳದಲ್ಲಿ ಸಿಲುಕಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಕೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಆಮ್ಲಜನಕ ಪೂರೈಸಲಾಗುತ್ತಿದೆ ಎಂದು ಬಲ್ಲ ಮೂಲಗಳಿಂದ ತಿಳಿದು…