Subscribe to Updates
Get the latest creative news from FooBar about art, design and business.
Author: kannadanewsnow05
ವಿಜಯನಗರ : ವಿಜಯನಗರದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಸಮೀಪದ ತುಂಗಭದ್ರಾ ಜಲಾಶಯದ ಹಿನ್ನೀರಿನಲ್ಲಿ ಇಬ್ಬರು ಸಹೋದರರು ಮುಳುಗಿ ಸಾವನ್ನಪ್ಪಿದ ಘಟನೆ ಸೋಮವಾರ ರಾತ್ರಿ ನಡೆದಿದೆ. ಪಟ್ಟಣ ಸಮೀಪದ ಹಂಪಿನಕಟ್ಟೆ ಗ್ರಾಮದ ಕೂಲಿಕಾರ್ಮಿಕ ರಾಜಾಭಕ್ಷಿ (30) ಮತ್ತು ಅವರ ತಮ್ಮ ಬೀದರ್ ಜಿಲ್ಲೆ ಹುಮನಬಾದ್ನಲ್ಲಿ ಗ್ರಾಮ ಲೆಕ್ಕಿಗನಾಗಿ ಕೆಲಸ ಮಾಡುತ್ತಿದ್ದ ಬಾರಿ ಇಮಾಂ(26) ಮೃತರು. ಇಬ್ಬರೂ ಅವಿವಾಹಿತರು ಎನ್ನಲಾಗಿದ್ದು, ಭಾನುವಾರ ಮನೆಯಲ್ಲಿ ಗ್ಯಾರ್ವಿ ಹಬ್ಬ ಆಚರಿಸಿಕೊಂಡಿದ್ದರು. ಸೋಮವಾರ ಸಂಜೆ ಕುಟುಂಬದ ಇತರೆ ಏಳು ಜನ ಸದಸ್ಯರೊಂದಿಗೆ ಸಮೀಪದ ಎಂಎಸ್ಪಿಎಲ್ ಕ್ರಾಸ್ ಬಳಿಯ ತುಂಗಭದ್ರಾ ಜಲಾಶಯದ ಹಿನ್ನೀರ ಪ್ರದೇಶಕ್ಕೆ ವನಭೋಜನಕ್ಕೆ ತೆರಳಿದ್ದರು. ಈಜು ಬಾರದ ಇಬ್ಬರು ನದಿಗೆ ಇಳಿದಿದ್ದಾಗ ಕಾಲು ಜಾರಿ ಬಿದ್ದು ಮುಳುಗಿದ್ದಾರೆ. ನಂತರ ಅಗ್ನಿಶಾಮಕ ಮತ್ತು ತುರ್ತು ಸೇವೆಯ ಸಿಬ್ಬಂದಿ ಬಂದು ಮೃತದೇಹಗಳನ್ನು ಹೊರತೆಗೆದರು ಎಂದು ತಿಳಿದುಬಂದಿದೆ.
ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಯುತ್ತಿದ್ದು ಈ ಹಿನ್ನಲೆಯಲ್ಲಿ ಸಮೀಕ್ಷೆಯನ್ನು ಪೂರ್ಣಗೊಳ್ಳದ ಕಾರಣದಿಂದ ಸಮೀಕ್ಷೆಯನ್ನು ಅಕ್ಟೋಬರ್ 12 ರವರೆಗೆ ವಿಸ್ತರಣೆ ಮಾಡಲಾಗಿದ್ದು ಅಲ್ಲದೆ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ದಸರಾ ಹಬ್ಬ ರಜೆಯನ್ನು ಅಕ್ಬರ್ 18 ರವರೆಗೆ ವಿಸ್ತರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಇನ್ನೊಂದು ಕಡೆಗೆ ದ್ವಿತೀಯ ಪಿಯುಸಿ ಮಧ್ಯಂತರ ಪರೀಕ್ಷೆ ನಡೆಯುತ್ತಿದ್ದು ಪರೀಕ್ಷೆಯಲ್ಲಿ ತೊಡಗಿಸಿಕೊಂಡವರು ಸರ್ವೆಗೆ ಬರುವಂತಿಲ್ಲ. ಬೆಂಗಳೂರಿನಲ್ಲಿ 6700 ಜನ ಟೀಚರ್ಸ್ ಸರ್ವೆಯಲ್ಲಿ ಭಾಗಿಯಾಗಿದ್ದು, ಒಟ್ಟು ಬೆಂಗಳೂರಿನಲ್ಲಿ 27 ಸಾವಿರ ಗಣಿತದಾರರು ಇದ್ದಾರೆ. ಬೆಂಗಳೂರಿನಲ್ಲಿ 46 ಲಕ್ಷ ಮನೆಗಳು ಇವೆ. ಹಾಗಾಗಿ ಪರೀಕ್ಷೆಯಲ್ಲಿ ತೊಡಗಿಸಿಕೊಂಡವರು ಸರ್ವೇಗೆ ಬರುವಂತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಸಮೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಅಕ್ಟೋಬರ್ 18 ರವರೆಗೆ ರಜೆ ವಿಸ್ತರಿಸಲಾಗಿದೆ. ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದ್ದು, ಖಾಸಗಿ ಶಾಲೆಗಳಿಗೆ ರಜೆ ವಿಸ್ತರಣೆ ಅನ್ವಯ…
ದಕ್ಷಿಣಕನ್ನಡ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅದರಲ್ಲೂ ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಜಾತಾ ಭಟ್ ಇದೀಗ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ. ಬುರುಡೆ ಜೊತೆ ಸೇರಿಕೊಂಡು ತಪ್ಪು ಮಾಡಿದೆ. ಆ ಪಶ್ಚಾತಾಪ ನನಗೆ ಈಗಲೂ ಕೂಡ ಕಾಡುತ್ತಿದೆ. ಹಾಗಾಗಿ ಧರ್ಮಸ್ಥಳಕ್ಕೆ ಹೋಗಿ ಕ್ಷಮೆ ಯಾಚಿಸುತ್ತೇನೆ ಎಂದು ಸುಜಾತಾ ಭಟ್ ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವೀರೇಂದ್ರ ಹೆಗಡೆ ಅವರನ್ನು ಭೇಟಿಯಾಗಿ ನಾನು ಕ್ಷಮೆ ಕೇಳುತ್ತೇನೆ. ನನ್ನಿಂದ ತಪ್ಪಾಗಿದೆ ಎಂದು ಅವರಲ್ಲಿ ಕ್ಷಮೆ ಕೇಳುತ್ತೇನೆ 60 ವರ್ಷದ ಜೀವನದಲ್ಲಿ ಇದೊಂದು ಕಪ್ಪು ಚುಕ್ಕೆಯಾಗಿದೆ. ಹಿಂದೆ ನನ್ನ ಪಾಡಿಗೆ ನಾನು ಇದ್ದೆ, ನನ್ನ ಜೀವನ ತುಂಬಾ ಚೆನ್ನಾಗಿತ್ತು. ಅದಾದ ಮೇಲೆ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ನನ್ನ ಜೀವನ ಸಂಪೂರ್ಣ ಆಯೋಮಯವಾಗಿದ್ದು ಜೀವನ ನಡೆಸುವುದು ಕಷ್ಟವಾಗುತ್ತಿದೆ. ಇಂದಿನ ಜೀವನ ಹೇಗೆ ಎನ್ನುವುದು ಕೊರಗುತ್ತಿದ್ದೇನೆ ನಾನು ಧರ್ಮಸ್ಥಳಕ್ಕೆ ಹೋಗುತ್ತೇನೆ. ನನ್ನಿಂದ ಧರ್ಮಸ್ಥಳಕ್ಕೆ ಕಲ್ಲು ಹೊಡೆಯುತ್ತೇನೆ ಅಂತ ಹೇಳಿದ್ದೇನೆ ಒಂದು ಯೂಟ್ಯೂಬ್ ಚಾನೆಲ್ನಲ್ಲಿ ಆ…
ಮೈಸೂರು : ಮೈಸೂರಿನಲ್ಲಿ ಹಾಡ ಹಗಲೇ ಯುವಕನ ಬರ್ಬರ ಹತ್ಯೆಯಾಗಿದೆ. ಮೈಸೂರು ನಗರದ ವಸ್ತು ಪ್ರದರ್ಶನದ ಮುಂಭಾಗದ ಬಳಿ ಈ ಒಂದು ಘಟನೆ ನಡೆದಿದ್ದು, ಕ್ಯಾತಮಾರನಹಳ್ಳಿ ನಿವಾಸಿ ಗಿಲ್ಕಿ ವೆಂಕಟೇಶ್ ನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಕಣ್ಣಿಗೆ ಕಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ವೆಂಕಟೇಶ್ ನನ್ನ ಭೀಕರವಾಗಿ ಕೊಲೆ ಮಾಡಲಾಗಿದೆ. ಕಾರಿನಲ್ಲಿ ಬಂದಿದ್ದ ಸುಮಾರು ಐದರಿಂದ ಆರು ಜನರು ದುಷ್ಕರ್ಮಿಗಳು ಈ ಒಂದು ಕೃತ್ಯ ಎಸಗಿದ್ದಾರೆ.ರೌಡಿಶೀಟರ್ ಕಾರ್ತಿಕ್ ಜೊತೆಗೆ ಈಗ ಕೊಲೆಯಾಗಿರುವ ವೆಂಕಟೇಶ ಗುರುತಿಸಿಕೊಂಡಿದ್ದ. ಕಳೆದ 5 ತಿಂಗಳ ಹಿಂದೆ ರೌಡಿಶೀಟರ್ ಕಾರ್ತಿಕ್ ಕೊಲೆಯಾಗಿದ್ದ. ಕಾರ್ತಿಕ್ ಮತ್ತು ವೆಂಕಟೇಶ ನಡುವೆ ಹಣಕಾಸಿನ ವ್ಯವಹಾರ ಇತ್ತು. ಘಟನಾ ಸ್ಥಳಕ್ಕೆ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ
ಬೆಂಗಳೂರು : ಆನ್ಲೈನ್ ನಲ್ಲಿ ಹೂಡಿಕೆ ಮಾಡಿಸಿಕೊಂಡು ವಂಚಿಸುತ್ತಿದ್ದ ಜಾಲ ಕೊನೆಗೂ ಪತ್ತೆಯಾಗಿದೆ. ಬೆಂಗಳೂರಿನ ಕೆಂಗೇರಿ ಠಾಣೆ ಪೊಲೀಸರು ಇದೀಗ 8 ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಹೂಡಿಕೆ ಮಾಡುವಂತೆ ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚಾರ ಮಾಡುತ್ತಿದ್ದರು. ದೇಶ ವಿದೇಶದ ಸಾರ್ವಜನಿಕರಿಗೆ ಹಣ ಹೂಡಿಕೆ ಮಾಡಲು ಆಮಿಷ ಒಡ್ದುತ್ತಿದ್ದರು. ಹೆಚ್ಚು ಲಾಭ ನೀಡುವುದು ಜನರಿಂದ ಹಣ ಸಂಗ್ರಹಿಸಿ ವಂಚನೆ ಮಾಡುತ್ತಿದ್ದ ಆರೋಪಿಗಳು. ನಿನ್ನೆ ಏಳು ಕಡೆ ದಾಳಿ ನಡೆಸಿ 8 ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರಿಂದ 19 ಲ್ಯಾಪ್ಟಾಪ್ 40 ಮೊಬೈಲ್, 11 ಪೆನ್ ಡ್ರೈವ್, 42 ಸಿಮ್ ಕಾರ್ಡ್, 4 ಐಪ್ಯಾಡ್, 2 ಹಾರ್ಡ್ ಡಿಸ್ಕ್ 5 ಸಿಪಿಯು, 13 ಸೀಲ್ ಗಳು, 10 ಮೆಮೊರಿ ಕಾರ್ಡ್ ಹಾಗೂ ವಿದೇಶಿ ಕರೆನ್ಸಿ, ಕರೆನ್ಸಿ ಕೌಟಿಂಗ್ ಮಷೀನ್ ಸೇರಿ 6 ಕೋಟಿ ಬೆಲೆಬಾಳುವ ಸ್ಥಿರಾಸ್ತಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಚಿತ್ರದುರ್ಗ : ರಾಜ್ಯದಲ್ಲಿ ಅಮಾನವೀಯ ಘಟನೆ ಒಂದು ನಡೆದಿದ್ದು, ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ನವಜಾತ ಶಿಶು ಪತ್ತೆಯಾಗಿದೆ. ಜಿಲ್ಲಾಸ್ಪತ್ರೆಯ ಆವರಣದಲ್ಲಿನ ಪೊದೆಯಲ್ಲಿದ್ದ ಹೆಣ್ಣು ಶಿಶುವನ್ನು ಪಾಪಿಗಳು ಎಸೆದು ಹೋಗಿದ್ದಾರೆ. ಪುಟ್ಟ ಕಂದನ ಅಳುವಿನ ದನಿ ಕೇಳಿ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಜಿಲ್ಲಾ ಆಸ್ಪತ್ರೆ ಸಿಬ್ಬಂದಿಯಿಂದ ಚಿಕಿತ್ಸೆ ನೀಡಲಾಗುತ್ತಿದೆ. ಹೊರಗಿನಿಂದ ಶಿಶು ತಂದು ಪೊದೆಯಲ್ಲಿ ಪಾಪಿಗಳು ಬಿಸಾಡಿ ಹೋಗಿದ್ದಾರೆ. ಸಿಸಿಟಿವಿಯಲ್ಲಿ ಇಬ್ಬರು ಮಹಿಳೆಯರು ಹೊರ ಹೋಗುತ್ತಿರುವ ದೃಶ್ಯ ಸರೆಯಾಗಿದೆ. ವಾಂತಿ ಭೇದಿ ವಾರ್ಡ್ ಕಡೆಯಿಂದ ಹೊರ ಹೋಗಿರುವ ದೃಶ್ಯ ಸೆರೆಯಾಗಿದೆ. ರಾತ್ರಿ 9:56 ಕ್ಕೆ ಇಬ್ಬರು ಬಂದು ಮಗುವನ್ನು ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ ಮಹಿಳೆಯರ ವಿರುದ್ಧ ಜನರು ಆಕ್ರೋಶ ಹೊರ ಹಾಕುತ್ತಿದ್ದಾರೆ ಮುದ್ದಾದ ಹೆಣ್ಣುಮಗುವಿನ ಆಕರಂದನ ಕಂಡು ಜನ ಮೊಮ್ಮಲಮರು ಇದ್ದಾರೆ ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಬೆಂಗಳೂರು : ಸಾಮಾನ್ಯವಾಗಿ ರೈಲ್ವೆ ಟ್ರ್ಯಾಕ್ ದಾಟುವಾಗ ಆದಷ್ಟು ಎಚ್ಚರದಿಂದ ಇರಬೇಕು. ಇದೀಗ ಬೆಂಗಳೂರಿನಲ್ಲಿ ರೈಲ್ವೆ ಟ್ರ್ಯಾಕ್ ದಾಟುವ ವೇಳೆ ವಿದ್ಯಾರ್ಥಿ ಒಬ್ಬ ಮ್ಯೂಸಿಕ್ ಹಾಕಿಕೊಂಡು ದಾಟುತ್ತಿದ್ದಗ ಗೂಡ್ಸ್ ಟ್ರೈನ್ ಬಂದಿದ್ದು ಆತನಿಗೆ ಗೊತ್ತಾಗಿಲ್ಲ. ಈ ವೇಳೆ ಗೂಡ್ಸ್ ಟ್ರೈನ್ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಹೌದು ಬೆಂಗಳೂರಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಗೂಡ್ಸ್ ಟ್ರೈನ್ ಡಿಕ್ಕಿಯಾಗಿ ಸ್ಥಳದಲ್ಲೇ ವಿದ್ಯಾರ್ಥಿ ಒಬ್ಬ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನಾಗೇನಹಳ್ಳಿ ರೈಲ್ವೆ ಟ್ರ್ಯಾಕ್ ಬಳಿ ಒಂದು ಘಟನೆ ಸಂಭವಿಸಿದೆ. ಮ್ಯೂಸಿಕ್ ಕೇಳಿಕೊಂಡು ರೈಲ್ವೆ ಹಳಿ ದಾಟುತ್ತಿದ್ದಾಗ ಈ ಒಂದು ಅಪಘಾತ ಸಂಭವಿಸಿದೆ. ಖಾಸಗಿ ಕಾಲೇಜಿನ ವಿದ್ಯಾರ್ಥಿ ಶಶಿಕುಮಾರ್ ಸ್ಥಳದಲ್ಲೇ ಸಾವನಪ್ಪಿದ್ದಾನೆ.ನಾಗೇನಹಳ್ಳಿ ಇಂದ ಪಾಳ್ಯ ಬಸ್ ನಿಲ್ದಾಣಕ್ಕೆ ಹೋಗುತ್ತಿದ್ದ. ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತು ಪ್ರಕರಣ ದಾಖಲಾಗಿದೆ
ಹಾಸನದಲ್ಲಿ : ಹಾಸನದಲ್ಲಿ ಜಾತಿಗಣತಿ ನಡೆಸುವ ಸಿಬ್ಬಂದಿಗಳಿಗೆ ಸಂಕಷ್ಟ ತಪ್ಪಿಲ್ಲ. ಜಾತಿ ಗಣತಿ ತೆರಳುತ್ತಿದ್ದ ಶಿಕ್ಷಕಿಯ ಮೇಲೆ ಇದೀಗ ಮತ್ತೆ ಬೀದಿ ನಾಯಿ ದಾಳಿ ಮಾಡಿದೆ. ಮೊನ್ನೆ ತಾನೇ ಏಳು ಜನರು ಹಾಗು ಓರ್ವ ಶಿಕ್ಷಕಿಯ ಮೇಲೆ ಬೀದಿನಾಯಿ ದಾಳಿ ಮಾಡಿದ್ದ ಘಟನೆ ನಡೆದಿತ್ತು. ಇದೀಗ ಸ್ಕೂಟಿಯಲ್ಲಿ ತೇರಳುತ್ತಿದ್ದ ವೇಳೆ ಶಿಕ್ಷಕಿ ಮೇಲೆ ನಾಯಿ ಏಕಾಏಕಿ ದಾಳಿ ಮಾಡಿದೆ. ಈ ವೇಳೆ ಸ್ಕೂಟಿಯಿಂದ ಕೆಳಗೆ ಬಿದ್ದ ಶಿಕ್ಷಕಿಗೆ ಎಡಗೈ ಮುರಿದು ಹೋಗಿದೆ. ಬೇಲೂರು ಹಳೇಗೆಂಡಿಹಳ್ಳಿ ಎಂಬ ಗ್ರಾಮದಲ್ಲಿ ಒಂದು ಘಟನೆ ನಡೆದಿದೆ. ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯ ಲುಕ್ನ ಎನ್ನುವ ಶಿಕ್ಷಕಿಗೆ ಗಂಭೀರವಾದ ಗಾಯಗಳಾಗಿವೆ . ಸ್ಕೂಟಿ ನಿಲ್ಲಿಸುತ್ತಿದ್ದ ವೇಳೆ ಬೀದಿ ನಾಯಿ ದಾಳಿ ಮಾಡಿದೆ. ಸದ್ಯ ತಾಲೂಕು ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದ್ದು, ಗ್ಯಾಸ್ ಲೀಕ್ ಆಗಿ ಅಗ್ನಿ ಅವಘಡ ಸಂಭವಿಸಿ 7 ಜನ ಕಾರ್ಮಿಕರಿಗೆ ಗಂಭೀರವಾಗಿ ಗಾಯಗಳಾಗಿವೆ . ಕಾಡುಮನೆ ಸರ್ಕಲ್ ಬಳಿ ಇರುವ ಬಿಡದೆ ಕೈಗಾರಿಕಾ ಪ್ರದೇಶದಲ್ಲಿ ಈ ಒಂದು ಅಗ್ನಿ ದುರಂತ ಸಂಭವಿಸಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಕಾಡುಮನೆ ವೃತ್ತದ ಬಳಿ ಒಂದೇ ಶೆಡ್ ನಲ್ಲಿ 7 ಜನ ಕಟ್ಟಡ ಕಾರ್ಮಿಕರ ವಾಸವಾಗಿದ್ದರು. ಗ್ಯಾಸ್ ಸೋರಿಕೆಯಾಗಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ 7 ಕಟ್ಟಡ ಕಾರ್ಮಿಕರಿಗೆ ಗಂಭೀರವಾದ ಗಾಯಗಳಾಗಿವೆ. ತಕ್ಷಣ ಗಾಯಾಳುಗಳನ್ನು ತಕ್ಷಣ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಎಸ್ ಪಿ ಶ್ರೀನಿವಾಸ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಕುರಿತಂತೆ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ನವೆಂಬರ್ ನಲ್ಲಿ ಕ್ರಾಂತಿ ಅಗಲಿದೆ ಎಂದು ವಿಪಕ್ಷ ನಾಯಕರು ಹೇಳುತ್ತಿದ್ದರೆ, ಇನ್ನೊಂದು ಕಡೆ ಕಾಂಗ್ರೆಸ್ ಹಲವು ಸಚಿವರು ಸಂಪುಟ ಪುನರ್ ರಚನೆ ಆಗಲಿದೆ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಪುಷ್ಟಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಮುಂದಿನ ದಿನಗಳಲ್ಲಿ ಸಂಪುಟ ಪುನರ್ ರಚನೆ ಆಗಲಿದ್ದು ಎಸ್ ಟಿ ಸಮುದಾಯದವರಿಗೆ ಸಚಿವ ಸ್ಥಾನ ನೀಡುವ ಕುರಿತು ಚರ್ಚಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಎಸ್ ಟಿ ಸಮುದಾಯದ ನಾಯಕರಿಗೆ ಸಚಿವ ಸ್ಥಾನ ನೀಡುವ ವಿಚಾರವಾಗಿ ಮುಂದಿನ ದಿನಗಳಲ್ಲಿ ಸಂಪುಟ ಪುನರ್ ರಚನೆ ಆಗುತ್ತದೆ. ಸಂಪುಟ ಪುನರ್ ರಚನೆಯ ವೇಳೆ ಸಚಿವ ಸ್ಥಾನ ನೀಡುವ ಕುರಿತು ನೋಡೋಣ ಎಂದು ತಿಳಿಸಿದರು. ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಎಂದು ಕೊನೆಯ ದಿನವಾಗಿದ್ದು, ಸಮೀಕ್ಷೆಗೆ ಕೊನೆಯ ದಿನದಲ್ಲಿ ಮೀಟಿಂಗ್ ಕರೆದಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇನ್ನು ಸುಪ್ರೀಂಕೋರ್ಟ್ ಸಿಜೆಐ ಬಿ.ಆರ್ ಗವಾಯಿ ಅವರ ಮೇಲೆ ಹಿರಿಯವಕೀಲ ಶೂ ಎಸೆದಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ…














