Author: kannadanewsnow05

ಬೆಂಗಳೂರು : ಹಿಂದೂ ವಿವಾಹ ಕಾಯ್ದೆ, 1955 ರ ಅಡಿಯಲ್ಲಿ ರಾಜ್ಯ ಸರ್ಕಾರ ವಿವಾಹದ ಆನ್‌ಲೈನ್ ನೋಂದಣಿ ಸೌಲಭ್ಯವನ್ನು ಪ್ರಾರಂಭಿಸಲಾಗಿದೆ. ವಿಶೇಷ ವಿವಾಹ ಕಾಯ್ದೆಯಡಿ ವಿವಾಹಗಳನ್ನು ನೋಂದಾಯಿಸಲು ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಕೂಡ ಆನ್‌ಲೈನ್‌ ಮಾಡಲಾಗಿದೆ. ಮಲ್ಲೇಶ್ವರಂ ಸಬ್‌ ರಿಜಿಸ್ಟ್ರಾರ್‌ ಕಚೇರಿಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಪ್ರಾಯೋಗಿಕವಾಗಿ ಈ ಸೌಲಭ್ಯಕ್ಕೆ ಚಾಲನೆ ನೀಡಿದರು.ವಿಶೇಷ ವಿವಾಹ ಕಾಯ್ದೆಯಡಿ ವಿವಾಹಗಳನ್ನು ನೋಂದಾಯಿಸಲು ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆನ್‌ಲೈನ್‌ನಲ್ಲಿ ಮಾಡಲಾಗಿದೆ. ಎಲ್ಲಾ ಅಗತ್ಯ ದಾಖಲೆಗಳನ್ನು ಆನ್‌ಲೈನ್‌ನಲ್ಲಿ ಒದಗಿಸಿದ ನಂತರ, ಸಬ್‌ರಿಜಿಸ್ಟ್ರಾರ್ ಕಚೇರಿಗೆ ನೋಂದಣಿಗೆ ಭೇಟಿ ನೀಡಬೇಕಾಗುತ್ತದೆ. ಅಲ್ಲದೆ ಈ ಒಂದು ಆನ್ಲೈನ್ ನೋಂದಣಿ ಸೌಲಭ್ಯವನ್ನು ಅತ್ಯಂತ ಶೀಘ್ರದಲ್ಲಿ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿರುವ ಉಪ ನೊಂದಣಾಧಿಕಾರಿಗಳ ಕಚೇರಿಗಳಿಗೂ ವಿಸ್ತರಿಸಲಾಗುತ್ತದೆ.ಆಧಾರ್ ದೃಢೀಕರಣವನ್ನು ನೀಡಲು ಬಯಸುವವರು ಮನೆಯಿಂದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು. ಆದರೆ ಆಧಾರ್ ದೃಢೀಕರಣವನ್ನು ಮಾಡದಿರುವವರು ಸಬ್-ರಿಜಿಸ್ಟ್ರಾರ್ ಕಚೇರಿಗೆ ಭೇಟಿ ನೀಡುವ ಮೂಲಕ ತಮ್ಮ ವಿವಾಹವನ್ನು ನೋಂದಾಯಿಸಿಕೊಳ್ಳಬಹುದು. https://kannadanewsnow.com/kannada/breaking-dgci-summons-flights/ https://kannadanewsnow.com/kannada/chief-minister-siddaramaiah-welcomes-supreme-courts-decision-to-cancel-electoral-bonds/ https://kannadanewsnow.com/kannada/ksrtc-bags-tender-for-10000-machines-for-digital-payment-system/

Read More

ಬೆಂಗಳೂರು : ಚುನಾವಣಾ ಬಾಂಡ್‌ಗಳು ಅಸಾಂವಿಧಾನಿಕ ಎಂದು ನಿನ್ನೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ತೀರ್ಪನ್ನು ಸ್ವಾಗತಿಸಿದ್ದಾರೆ ಈ ಕುರಿತಂತೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಚುನಾವಣಾ ಬಾಂಡ್‌ಗಳು ಅಸಾಂವಿಧಾನಿಕ ಎಂದು ಐವರು ನ್ಯಾಯಮೂರ್ತಿಗಳ ಸುಪ್ರೀಂ ಕೋರ್ಟ್‌ ಪೀಠ ಇಂದು ನೀಡಿರುವ ತೀರ್ಪು ಪ್ರಜಾತಂತ್ರದಲ್ಲಿ ಪಾರದರ್ಶಕತೆಯನ್ನು ಮರುಸ್ಥಾಪಿಸುವ ನಿಟ್ಟಿನಿಂದ ಐತಿಹಾಸಿಕವಾಗಿದೆ.ಕ್ರೋನಿ ಬಂಡವಾಳಿಗರಿಂದ ಚುನಾವಣೆಗಾಗಿ ದೇಣಿಗೆ ಸಂಗ್ರಹಿಸುವ ದುರುದ್ದೇಶದಿಂದಲೇ ಪ್ರಧಾನಿ ನರೇಂದ್ರಮೋದಿ ಸರ್ಕಾರ ಜಾರಿಗೆ ತಂದಿದ್ದ ಈ ಚುನಾವಣಾ ಬಾಂಡ್ ಗಳು ಅಸಾಂವಿಧಾನಿಕವಾದುದು ಮಾತ್ರವಲ್ಲ ಇದರಿಂದ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಮಾಹಿತಿ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಅತ್ಯಂತ ಸ್ವಾಗತಾರ್ಹವಾದುದು. ಚುನಾವಣಾ ವ್ಯವಸ್ಥೆಯ ಸುಧಾರಣೆಯಲ್ಲಿ ಇದೊಂದು ದಿಟ್ಟ ಕ್ರಮವಾಗಿದೆ.ಕೇಂದ್ರದ ಬಿಜೆಪಿ ಸರ್ಕಾರ 2019ರ ಲೋಕಸಭಾ ಚುನಾವಣೆಯ ಪೂರ್ವದಲ್ಲಿ ಜಾರಿಗೆ ತಂದಿದ್ದ ಈ ಚುನಾವಣಾ ಬಾಂಡ್ ಗಳು ಲಂಚದ ಮತ್ತೊಂದು ರೂಪವಾಗಿತ್ತು. ವಿತ್ತೀಯ ಕಾಯಿದೆಯ ಸ್ವರೂಪದಲ್ಲಿ ಚುನಾವಣಾ ಬಾಂಡ್‌ಗಳನ್ನು ತಂದಿದ್ದು ಹಾಗೂ ಇದಕ್ಕಾಗಿ…

Read More

ಬೆಂಗಳೂರು: ಡಿಜಿಟಲ್‌ ಪಾವತಿ ಸಿಸ್ಟಂಗೆ ಕೆಎಸ್‌ಆರ್‌ಟಿಸಿ ಕೂಡಾ ತೆರೆದುಕೊಳ್ಳಲಿದೆ. ಇನ್ನು ನಾಲ್ಕು ತಿಂಗಳಲ್ಲಿ ಕ್ಯೂಆರ್‌ ಕೋಡ್‌ ಸ್ಕ್ಯಾನಿಂಗ್‌ ಮಾಡಿ ಟಿಕೆಟ್ ನೀಡುವ ಮಷಿನ್‌ಗಳು ನಿರ್ವಾಹಕರ ಕೈಯಲ್ಲಿ ಇರಲಿವೆ. ಬಿಎಂಟಿಸಿ ಬಸ್‌ಗಳಲ್ಲಿ ಎರಡು ವರ್ಷಗಳ ಹಿಂದೆ ಕ್ಯೂಆರ್‌ ಕೋಡ್‌ ಸ್ಕ್ಯಾನಿಂಗ್‌ ಪದ್ಧತಿಯನ್ನು ಜಾರಿಗೊಳಿಸಿದ್ದರೂ ಬಳಿಕ ಸ್ಥಗಿತಗೊಂಡಿತು. ಪಾಸ್‌ ಇರುವವರಿಗಷ್ಟೇ ಸೀಮಿತವಾಗಿದೆ. ವಾಯವ್ಯ ಸಾರಿಗೆ ನಿಗಮವು ಡಿಜಿಟಲ್‌ ಪಾವತಿ ಪದ್ಧತಿಯನ್ನು ಇತ್ತೀಚೆಗೆ ಅಳವಡಿಸಿಕೊಂಡಿತು. ಇದೀಗ ಕೆಎಸ್‌ಆರ್‌ಟಿಸಿ ಕೂಡಾ ಈ ಪದ್ಧತಿ ಅಳವಡಿಸಿಕೊಳ್ಳಲು ಮುಂದಾಗಿದೆ.ಎನ್‌ಡಬ್ಲ್ಯುಆರ್‌ಟಿಸಿ ಯಲ್ಲಿರುವಂತೆ ಕ್ಯೂ ಆರ್‌ ಕೋಡ್‌ ಅನ್ನು ನಿರ್ವಾಹಕ ಪ್ರತ್ಯೇಕವಾಗಿ ಕುತ್ತಿಗೆಗೆ ನೇತು ಹಾಕಿಕೊಳ್ಳುವ ಬದಲು ಸ್ಕ್ಯಾನಿಂಗ್‌ ಮತ್ತು ಟಿಕೆಟ್‌ ನೀಡುವ ಒಂದೇ ಮಷಿನ್‌ ಅನ್ನು ಕೆಎಸ್‌ಆರ್‌ಟಿಸಿ ಪರಿಚಯಿಸಲಿದೆ. ನಮ್ಮ ನಿಗಮದಲ್ಲಿ 83 ಘಟಕಗಳಿವೆ. ಸದ್ಯ ಎಲೆಕ್ಟ್ರಿಕ್‌ ಟಿಕೆಟ್‌ ಮಷಿನ್‌ಗಳನ್ನು (ಇಟಿಎಂ) ಬಳಸಲಾಗುತ್ತಿದೆ. ಡಿಜಿಟಲ್‌ ಪೇಮೆಂಟ್‌ ಎನೇಬಲ್‌ (ಡಿಪಿಇ) ಇರುವ ಇಟಿಎಂಗಳ ಪೂರೈಕೆಯಾಗಬೇಕಿದೆ. 10 ಸಾವಿರ ಮಷೀನ್‌ಗಳು ಬೇಕಾಗಿದ್ದು, ಅದಕ್ಕಾಗಿ ಟೆಂಡರ್ ಕರೆಯಲಾಗಿದೆ. ಬಿಡ್‌ ಮಾಡಲು ಫೆ.18 ಕೊನೇ ದಿನವಾಗಿದೆ. ಬಳಿಕ…

Read More

ಉಡುಪಿ : ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿ ಉಳಿದಿದ್ದು, ಈಗಾಗಲೇ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಆಯಾ ಪಕ್ಷಗಳು ಸಿದ್ಧಪಡಿಸಿಕೊಂಡಿದ್ದು, ಶೀಘ್ರದಲ್ಲಿ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನಾನು ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಹೇಳಿಕೆಯನ್ನು ನೀಡಿದ್ದಾರೆ.ಹಲವು ಕ್ಷೇತ್ರಗಳಿಂದ ನನ್ನ ಹೆಸರು ಕೇಳಿ ಬರುತ್ತಿದೆ. ಕನಿಷ್ಠ 5-6 ಕ್ಷೇತ್ರಗಳು ನನ್ನ ಹೆಸರನ್ನು ಹೇಳುತ್ತಿವೆ. ಆದರೆ ಉಡುಪಿ-ಚಿಕ್ಕಮಗಳೂರು ನನ್ನ ಕ್ಷೇತ್ರ. ಈ ಕ್ಷೇತ್ರದ ಜನರು ನನ್ನನ್ನು ಗೆಲ್ಲಿಸಿದ್ದರು. ನಾನು ಬೇರೆ ಕ್ಷೇತ್ರಗಳಿಗೆ ಹೋಗುವ ಪ್ರಶ್ನೆಯೇ ಇಲ್ಲ. ಆದರೆ ಪಕ್ಷ ಬದಲಾವಣೆ ಬಯಸಿದಲ್ಲಿ ಅದನ್ನು ಪಾಲಿಸಿ ಪಕ್ಷದ ತೀರ್ಮಾನಕ್ಕೆ ಬದ್ಧರಾಗಿರುತ್ತೇನೆ ಎಂದು ಹೇಳಿದ್ದಾರೆ. ಉಡುಪಿ ಹಾಗೂ ಚಿಕ್ಕಮಂಗಳೂರು ಕ್ಷೇತ್ರಗಳಲ್ಲಿ ಈಗಾಗಲೇ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ ಈ ಹಿನ್ನೆಲೆಯಲ್ಲಿ ಇದರ ಆಧಾರದ ಮೇಲೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದು ಮತ್ತೊಮ್ಮೆ ಉಡುಪಿ ಮತ್ತು ಚಿಕ್ಕಮಗಳೂರು ಜನರು ಆಶೀರ್ವಾದ ಮಾಡಿ ನನ್ನನ್ನು ಗೆಲ್ಲಿಸಲಿದ್ದಾರೆ ಎಂಬ ವಿಶ್ವಾಸ…

Read More

ಉತ್ತರಕನ್ನಡ : ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಮ್ಮವರಿಗೆ ಏಕವಚನದಲ್ಲಿ ಮಾತನಾಡಿದಲ್ಲಿ ನೋಡಿಕೊಂಡು ಸುಮ್ಮನಿರಲು ಸಾಧ್ಯವಿಲ್ಲ. ಅವರಿಗೆ ಮಗನೇ ಎನ್ನದೇ ಬೇರೆನು ಹೇಳಲು ಸಾಧ್ಯ? ಅಪ್ಪ ಅಂತಲೋ, ಅಜ್ಜ ಅಂತಲೋ, ಮಾಮಾ ಅಂತಲೋ ಕರಿಯಲು ಸಾಧ್ಯವೇ? ಎಂದು ಸಂಸದ ಅನಂತಕುಮಾರ ಹೆಗಡೆ ವ್ಯಂಗ್ಯವಾಡಿದರು. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯಲ್ಲಿ ನಡೆದ ಬಿಜೆಪಿಯ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಯುದ್ಧದ ಸಮಯದಲ್ಲಿ ಯಾವ ಭಾಷೆ ಬಳಸಬೇಕು ಅದನ್ನೇ ಬಳಸಬೇಕು ಅಲ್ಲಿ ಶಾಸ್ತ್ರೀಯ ಸಂಗೀತ ಬಳಸಲು ಸಾಧ್ಯವಿಲ್ಲ ಎಂದು ವ್ಯಂಗ್ಯವಾಡಿದರು. ಅಲ್ಲದೆ ದೇಶದಲ್ಲಿ ಇಸ್ಲಾಂ ಧರ್ಮ ಇರುವವರಿಗೂ ನಮಗೆ ನೆಮ್ಮದಿ ಇಲ್ಲ. ಹೇಳಿಕೆ ನೀಡುವುದರಿಂದ ನನಗೇನು ಹೆದರಿಕೆ ಇಲ್ಲ. ಈಗ ಮೊನ್ನೆ ತಾನೆ ಮುಸ್ಲಿಂ ಧರ್ಮದ ಕುರಿತಾಗಿ ಹೇಳಿಕೆಗೆ FIR ದಾಖಲಾಗಿದೆ. ಸಿದ್ದರಾಮಯ್ಯ ಬಗ್ಗೆ ಹೇಳಿದಾಗ ಎಲ್ಲಾ ಮಸೀದಿಗಳು ಅಂತ ಹೇಳಿದ್ನಲ್ಲ ಆ ಸಂಬಂಧ ಒಂದು ಕೇಸ್ ಹಾಕಿದ್ದಾರೆ ಎಂದರು. ಮಸೀದಿಯ ಬಗ್ಗೆ ಹೇಳಿದ್ದ ನನ್ನ ವಿರುದ್ಧ ಪ್ರಕರಣ ದಾಖಲಿಸಿದ್ದಕ್ಕೆ ಸಿದ್ಧರಾಮಯ್ಯ ಅವರಿಗೆ…

Read More

ಚಾಮರಾಜನಗರ : ಸದ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ನಟ ನಿರ್ದೇಶಕ ಉಪೇಂದ್ರ ಹಾಗೂ ನಟಿ ಪ್ರೇಮ ಅವರು ನಟಿಸಿರುವ ಉಪೇಂದ್ರ ಚಲನಚಿತ್ರದ ಕರಿಮಣಿ ಮಾಲೀಕ ನೀನಲ್ಲ ಎಂಬ ಹಾಡು ಸಖತ್ ಟ್ರೆಂಡಿಂಗ್ ನಲ್ಲಿದೆ. ಆದರೆ ಈ ಒಂದು ರೀಲ್ಸ್ ಗೆ ಮನನೊಂದು ವ್ಯಕ್ತಿ ಇದೀಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪಿಜಿ ಪಾಳ್ಯ ಗ್ರಾಮದ ಕುಮಾರ್ (33) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಕುಮಾರ್ ಪತ್ನಿ ರೂಪಾ ಗುಂಡಾಲ್ ಜಲಾಶಯಕ್ಕೆ ಹೋಗಿದ್ದ ವೇಳೆ ಸೋದರ ಮಾವ ಗೋವಿಂದ ಹಾಗೂ ಸಹೋದರಿ ದೀಪಾ ಜೊತೆಗೆ ಕರಿಮಣಿ ಮಾಲೀಕ ನೀನಲ್ಲ ಎಂಬ ಹಾಡಿಗೆ ರೀಲ್ಸ್ ಮಾಡಿದ್ದರು. ಈ ರೀಲ್ಸ್ ಗೂ ಮುನ್ನಾ ಪತಿ ಕುಮಾರ್ ಹಾಗೂ ಪತ್ನಿ ರೂಪಾ ನಡುವೆ ಹಲವು ಬಾರಿ ಕೌಟುಂಬಿಕ ಕಲಹ ನಡೆದಿತ್ತು. ರೀಲ್ಸ್ ಮಾಡದಂತೆ ಹಲವು ಸಲ ಎಚ್ಚರಿಕೆ ಕೂಡ ನೀಡಿದ್ದರು. ಆದರೆ ಇದನ್ನೂ ಲೆಕ್ಕಿಸದೆ ರೂಪಾ ರೀಲ್ಸ್ ಮಾಡಿದ್ದರು. ರೂಪಾ ರೀಲ್ಸ್ ನೋಡಿದ್ದ ಕುಮಾರ್ ಸ್ನೇಹಿತರು ರೇಗಿಸಿದ್ದರು.…

Read More

ಉತ್ತರಕನ್ನಡ : ಸದಾ ವಿವಾದದ ಹೇಳಿಕೆಗಳನ್ನು ನೀಡಿ ಸುದ್ದಿಯಲ್ಲಿರುವ ಸಂಸದ ಅನಂತ್ ಕುಮಾರ್ ಹೆಗಡೆ ಇದೀಗ ಮತ್ತೊಂದು ವಿವಾದದ ಹೇಳಿಕೆ ಹೇಳುವ ಮೂಲಕ ಕಿಡಿ ಹೊತ್ತಿಸುವ ಕೆಲಸ ಮಾಡಿದ್ದಾರೆ. ಎಲ್ಲಿಯತನಕ ಇಸ್ಲಾಂ ಧರ್ಮ ಇರುತ್ತೋ ಅಲ್ಲಿಯವರೆಗೆ ಜಗತ್ತಿಗೆ ನೆಮ್ಮದಿ ಇಲ್ಲ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನಲ್ಲಿ ಬಿಜೆಪಿಯ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ದೇಶದಲ್ಲಿ ಇಸ್ಲಾಂ ಧರ್ಮ ಇರುವವರಿಗೂ ನಮಗೆ ನೆಮ್ಮದಿ ಇಲ್ಲ. ಹೇಳಿಕೆ ನೀಡುವುದರಿಂದ ನನಗೇನು ಹೆದರಿಕೆ ಇಲ್ಲ. ಈಗ ಮೊನ್ನೆ ತಾನೆ ಮುಸ್ಲಿಂ ಧರ್ಮದ ಕುರಿತಾಗಿ ಹೇಳಿಕೆಗೆ FIR ದಾಖಲಾಗಿದೆ. ಸಿದ್ದರಾಮಯ್ಯ ಬಗ್ಗೆ ಹೇಳಿದಾಗ ಎಲ್ಲಾ ಮಸೀದಿಗಳು ಅಂತ ಹೇಳಿದ್ನಲ್ಲ ಆ ಸಂಬಂಧ ಒಂದು ಕೇಸ್ ಹಾಕಿದ್ದಾರೆ ಎಂದರು. ಈ ಸಿದ್ದರಾಮಯ್ಯಾನಿಗೆ ಒಂದು ಥ್ಯಾಂಕ್ಸ್ ಹೇಳಲು ಬಯಸುತ್ತೇನೆ ಏಕೆಂದರೆ ಕಳೆದ ಹಲವು ವರ್ಷಗಳಿಂದ ನನ್ನ ಮೇಲೆ ಯಾವುದೇ ಕೇಸ್ ಇರಲಿಲ್ಲ ಇದರಿಂದ ನನಗೆ ಮುಜುಗರ ಉಂಟಾಗಿತ್ತು ಇದೀಗ ಕೆಎಸ್‌ಗಳು ಆಗುತ್ತಿರುವುದರಿಂದ ಸಿದ್ದರಾಮಯ್ಯನಿಗೆ…

Read More

ಬೆಂಗಳೂರು: ಇಡೀ ದೇಶವೇ ತಲೆತಗ್ಗಿಸುವಂತಹ ಘಟನೆ ಇತ್ತೀಚಿಗೆ ಬೆಳಗಾವಿ ಜಿಲ್ಲೆಯ ವಂಟಮುರಿ ಗ್ರಾಮದರಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಯೋಜನೆಯಡಿ ಘೋಷಿಸಿದಂತೆ ಸಂತ್ರಸ್ತೆಗೆ ಜಮೀನು ಮಂಜೂರು ಮಾಡಿದ್ದು, ಅದರ ಕ್ರಯಪತ್ರವನ್ನೂ ಸಹ ಹಸ್ತಾಂತರಿಸಲಾಗಿದೆ ಎಂದು ಹೈಕೋರ್ಟ್‌ಗೆ ಸರ್ಕಾರ ತಿಳಿಸಿದೆ. ಪ್ರಕರಣ ಸಂಬಂಧ ಹೈಕೋರ್ಟ್‌ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಎಸ್‌.ದಿನೇಶ್‌ ಕುಮಾರ್‌ ಮತ್ತು ಟಿ.ಜಿ.ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠಕ್ಕೆ ಸರ್ಕಾರದ ಪರ ಹಾಜರಾಗಿದ್ದ ರಾಜ್ಯ ಅಡ್ವೋಕೇಟ್ ಜನರಲ್ ಕೆ.ಶಿಶಿಕಿರಣ್‌ ಶೆಟ್ಟಿ ಮಾಹಿತಿ ನೀಡಿದರು. ಅಲ್ಲದೆ, ಪರಿಹಾರ ಹಣ ಪಾವತಿಯ ಹೊರತಾಗಿಯೂ ಸರ್ಕಾರ ಈ ಹಿಂದೆ ಘೋಷಿಸಿದಂತೆ ಪ್ರಕರಣದ ಸಂತ್ರಸ್ತೆಗೆ ಎರಡು ಎಕರೆ ಜಮೀನು ಮಂಜೂರು ಮಾಡಲಾಗಿದೆ. ಜೊತೆಗೆ, ಜಮೀನಿನ ಕ್ರಯಪತ್ರ ಸಹ ಹಸ್ತಾಂತರಿಸಲಾಗಿದೆ ಎಂದು ಅಡ್ವೋಕೇಟ್‌ ಜನರಲ್‌ ತಿಳಿಸಿದರು. ಪ್ರಕರಣದ ಹಿನ್ನೆಲೆ: ಬೆಳಗಾವಿ ತಾಲೂಕಿನ ವಂಟಮುರಿ ಗ್ರಾಮದಲ್ಲಿ 24 ವರ್ಷದ ಯುವಕ ಮತ್ತು…

Read More

ಬೆಂಗಳೂರು : ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿತರಿಸಲು 71,000 ಮೌಲ್ಯದ ಸುಮಾರು ಏಳು ಸಾವಿರ ಲ್ಯಾಪ್ ಟಾಪ್ ಖರೀದಿಗೆ ಇ-ಟೆಂಡರ್‌ ಕರೆದು ಅರ್ಹ ಸಂಸ್ಥೆಯನ್ನು ಆಯ್ಕೆ ಮಾಡಿ 7 ಸಾವಿರ ಲ್ಯಾಪ್‌ಟಾಪ್‌ಗಳನ್ನು ಖರೀದಿಸಿದ್ದು, ಪ್ರತಿ ಲ್ಯಾಪ್‌ಟಾಪ್‌ಗೆ 71,093 ಸಾವಿರದಂತೆ ಖರ್ಚು ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌.ಲಾಡ್‌ ತಿಳಿಸಿದರು. ಪರಿಷತ್ ಸದಸ್ಯ ಸಾಬಣ್ಣ ತಳವಾರ್ ಕೇಳಿರುವ ಪ್ರಶ್ನೆಗೆ ಉತ್ತರಿಸಿದ ಸಂತೋಷ್ ಲಾಡ್ ಅವರು,ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ನಿಯಮಗಳ ಅನ್ವಯ ಮಂಡಳಿಯಲ್ಲಿ ಲ್ಯಾಪ್‌ಟಾಪ್‌ ಖರೀದಿಗಾಗಿ ಇ-ಟೆಂಡರ್‌ ಕರೆದು ಅರ್ಹ ಸಂಸ್ಥೆಯನ್ನು ಆಯ್ಕೆ ಮಾಡಿ ಲ್ಯಾಪ್‌ಟಾಪ್‌ಗಳನ್ನು ಪೂರೈಕೆ ಮಾಡಲಾಗಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಯಾವುದೇ ನಷ್ಟ ಉಂಟಾಗಿರುವುದಿಲ್ಲ. ಜೊತೆಗೆ ನೋಂದಾಯಿತ ಕಟ್ಟಡ ಕಾರ್ಮಿಕರ ಇಬ್ಬರು ಮಕ್ಕಳಿಗೆ ವಿದ್ಯಾಭ್ಯಾಸಕ್ಕಾಗಿ ಒಂದನೇ ತರಗತಿಯಿಂದ ಸ್ನಾತಕೋತ್ತರ ಪದವಿಯವರೆಗೆ ಕಲಿಗೆ ಭಾಗ್ಯದಡಿ ಶೈಕ್ಷಣಿಕ ಸಹಾಯಧನ ನೀಡಲಾಗುತ್ತಿದೆ ಎಂದರು. ಕಾರ್ಮಿಕ ಇಲಾಖೆಯಲ್ಲಿ ಪ್ರಾದೇಶಿಕವಾರು 1400 ಲ್ಯಾಪ್‌ಟಾಪ್‌ನಂತೆ ಒಟ್ಟು 5 ಪ್ರಾದೇಶಿಕದಲ್ಲಿ 7 ಸಾವಿರ ಲ್ಯಾಪ್‌ಟಾಪ್‌ಗಳನ್ನು 2022-23ನೇ ಸಾಲಿನ ವಿದ್ಯಾರ್ಥಿಗಳಿಗೆ…

Read More

ಬೆಂಗಳೂರು : ರಾಜ್ಯದ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ 337 ತಜ್ಞ ವೈದ್ಯರನ್ನು ಗುತ್ತಿಗೆ ಆಧಾರದಲ್ಲಿ ಬರ್ತಿ ಮಾಡಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಬೇಳೂರು ಗೋಪಾಲ ಕೃಷ್ಣ ಅವರ ಪ್ರಶ್ನೆಗೆ ಉತ್ತರಿಸಿದವರು ಇಲಾಖೆಯಲ್ಲಿ 337 ತಜ್ಞರ ಹುದ್ದೆ ಖಾಲಿ ಇದೆ ತಾತ್ಕಾಲಿಕವಾಗಿ ಈಗ ಗುತ್ತಿಗೆ ಆಧಾರದಲ್ಲಿ ಆ ಹುದ್ದೆಗಳನ್ನು ಬರ್ತಿ ಮಾಡಲು ತೀರ್ಮಾನನೇ ಮಾಡಲಾಗಿದೆ ಈ ಪೈಕಿ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಖಾಲಿ ಇರುವ ವೈದ್ಯ ಸ್ಥಾನ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಗೊಳ್ಳುವ ಪ್ರಕ್ರಿಯೆ ಚಲನೆಯಲ್ಲಿದೆ ಎಂದರು. ಇದೇ ವೇಳೆ ಕಾಂಗ್ರೆಸ್ ಸದಸ್ಯ ಸಿಎಸ್ ಬಾಲಕೃಷ್ಣ ಅವರು ಕೇಳಿದ ನಮ್ಮ ಕ್ಷೇತ್ರದ ಆಸ್ಪತ್ರೆಗಳಲ್ಲಿನ ಮೂಲಸೌಕರ್ಯ ಒದಗಿಸಬೇಕೆಂಬ ಪ್ರಶ್ನೆಗೆ ಉತ್ತರಿಸಿದ ಅವರು ಆಸ್ಪತ್ರೆಯ ನಿರ್ವಹಣಾ ಅನುದಾನ ಹೆಚ್ಚಳಕ್ಕೆ ಸಿಎಂ ಜೊತೆಗೆ ನಾನು ಮಾತನಾಡಿದ್ದೇನೆ. ರಾಜ್ಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿರುವ ಎಲ್ಲಾ…

Read More