Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಹುಬ್ಬಳ್ಳಿ : ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕಲಘಟಗಿ ತಾಲೂಕಿನ ಹುಣಸಿಕಟ್ಟಿ ಗ್ರಾಮದಲ್ಲಿ ನಡೆದಿದೆ. ವಿಠ್ಠಲ ಕರಾಡೆ(29) ಕೊಲೆಯಾದ ಯುವಕ. ಕೊಲೆ ಮಾಡಿದ ಆರೋಪಿಗಳನ್ನು ಘಟನೆ ನಡೆದ ಅರ್ಧ ಗಂಟೆಯಲ್ಲೇ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಲೆಯಾದ ಯುವಕನನ್ನು ಮೂಲತಃ ಹುಬ್ಬಳ್ಳಿ ತಾಲೂಕಿನ ರಾಮನಕೊಪ್ಪ ಗ್ರಾಮದ ನಿವಾಸಿಯಾದ ವಿಠ್ಠಲನನ್ನು, ಹುಣಸಿಕಟ್ಟಿ ಗ್ರಾಮಕ್ಕೆ ಪತ್ನಿ ಮನೆಗೆ ಬಂದಿದ್ದಾಗ ಆರೋಪಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಬಿಸಾಕಿದ್ದರು. ಕೊಲೆಗೀಡಾದ ವಿಠ್ಠಲ್ ಹುಬ್ಬಳ್ಳಿಯ ವಿದ್ಯಾನಗರ, ನವನಗರ, ಹುಬ್ಬಳ್ಳಿ ಗ್ರಾಮೀಣ, ತಡಸ ಸೇರಿದಂತೆ ವಿವಿಧ ಕಡೆಗಳಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ. ಅಲ್ಲದೇ ಅವುಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡಿ ಆ ದುಡ್ಡಿನಲ್ಲಿ ಮೋಜು ಮಸ್ತಿ ಮಾಡುತ್ತಿದ್ದ. ಹುಬ್ಬಳ್ಳಿ, ಕಲಘಟಗಿ, ತಡಸ ಸೇರಿದಂತೆ ಧಾರವಾಡ ಸುತ್ತಮುತ್ತಲು ಬೈಕ್ ಕಳ್ಳತನದಲ್ಲಿ ಕುಖ್ಯಾತಿ ಪಡೆದಿದ್ದ ವಿಠ್ಠಲನನ್ನು ಆತನ ಸಂಬಂಧಿಕರೇ ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಭೀಕರವಾಗಿ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದರು. ಕೊಲೆಯಾದ ಅರ್ಧ ಗಂಟೆಯಲ್ಲೇ ಆರೋಪಿಗಳನ್ನು ಬಂಧಿಸುವಲ್ಲಿ ಕಲಘಟಗಿ ಠಾಣಾ…
ಚಿಕ್ಕಮಗಳೂರು : ನಿಯಂತ್ರಣ ತಪ್ಪಿ ಗದ್ದೆಗೆ ಕಾರು ಬಿದ್ದಿದೆ. ಪರಿಣಾಮ ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಚಿಕ್ಕಮಂಗಳೂರು ತಾಲೂಕಿನ ಮುಕ್ತಿ ಹಳ್ಳಿ ಸಮೀಪ ಈ ಒಂದು ಅಪಘಾತ ಸಂಭವಿಸಿದೆ.ಖಾಸಗಿ ಕಾಲೇಜು ವಿದ್ಯಾರ್ಥಿಯಾದ ಮೋಹಿನ್ (19) ಸ್ಥಳದಲ್ಲೆ ಸಾವನಪ್ಪಿದ್ದಾನೆ. ಅತೀ ವೇಗದ ಚಾಲನೆಯಿಂದ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಘಟನೆಯಲ್ಲೂ ಆರು ವಿದ್ಯಾರ್ಥಿಗಳಿಗೆ ಗಂಭೀರವಾದ ಗಾಯಗಳಾಗಿವೆ ತಕ್ಷಣ ಗಾಯಗೊಂಡ ವಿದ್ಯಾರ್ಥಿಗಳನ್ನು ನೀಡಲಾಗುತ್ತಿದೆ ಸ್ನೇಹಿತರ ಜೊತೆ ಕಾರಿನಲ್ಲಿ ಮೋಹಿನ್ ಕೊಟ್ಟಿಗೆಹಾರಕ್ಕೆ ತೆರಳಿದ್ದ. ಈ ವೇಳೆ ನಿಯಂತ್ರಣ ಕಳೆದುಕೊಂಡು ಕಾರು ಗದ್ದೆಗೆ ಬಿದ್ದಿದೆ. ಪರಿಣಾಮ ಸ್ಥಳದಲ್ಲಿ ಮೋಹಿನ್ ಸಾವನಪ್ಪಿದ್ದಾನೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉತ್ತರಕನ್ನಡ : ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಪೊಲೀಸ್ ಇಲಾಖೆಗೆ ಮುಜುಗರ ತಂದಿದ್ದ ಡ್ರಿಂಕ್ ಆ್ಯಂಡ್ ಡ್ರೈವ್ ಹಾಗೂ ಹಣ ವಸೂಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಭಟ್ಕಳ ಗ್ರಾಮೀಣ ಠಾಣೆಯ ಸಿಪಿಐ ಸೇರಿದಂತೆ ಇಬ್ಬರನ್ನು ಅಮಾನತುಗೊಳಿಸಿ ಉತ್ತರಕನ್ನಡ ಎಸ್ಪಿ ದೀಪನ್ ಆದೇಶ ಹೊರಡಿಸಿದ್ದಾರೆ. ಭಟ್ಕಳ ಗ್ರಾಮೀಣ ಠಾಣೆಯ ಸಿಪಿಐ ಮಂಜುನಾಥ್ ಲಿಂಗಾರೆಡ್ಡಿ ಮತ್ತು ಹೆಡ್ ಕಾನ್ಸ್ಟೆಬಲ್ ಅಶೋಕ ನಾಯ್ಕ್ ಅವರನ್ನು ಅಮಾನತುಗೊಳಿಸಲಾಗಿದೆ. ಡ್ರಿಂಕ್ ಆ್ಯಂಡ್ ಡ್ರೈವ್, ಹಣ ವಸೂಲಿ, ಮತ್ತು ದೂರುದಾರರಿಗೆ ಬೆದರಿಕೆ ಹಾಕಿದ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಉತ್ತರಕನ್ನಡ ಎಸ್ಪಿ ಈ ಕ್ರಮ ಕೈಗೊಂಡಿದ್ದಾರೆ. ಸಿಪಿಐ ಮಂಜುನಾಥ್ ವಿರುದ್ಧ ಕೇವಲ ಕುಡಿದು ವಾಹನ ಚಲಾಯಿಸಿದ ಆರೋಪವಷ್ಟೇ ಅಲ್ಲದೆ, ವ್ಯಾಪಕ ಭ್ರಷ್ಟಾಚಾರದ ದೂರುಗಳು ಕೇಳಿಬಂದಿದ್ದವು. ಸಾರ್ವಜನಿಕರಿಂದ ಹಣ ವಸೂಲಿ ಮಾಡುವುದು ಹಾಗೂ ಅಕ್ರಮ ದನ ಸಾಗಾಟಗಾರರಿಗೆ ಸಾಥ್ ನೀಡುತ್ತಿದ್ದ ಆರೋಪಗಳು ಇವರ ಮೇಲಿತ್ತು. ಹಲವು ಬಾರಿ ಎಚ್ಚರಿಕೆ ನೀಡಿದರೂ ವರ್ತನೆಯಲ್ಲಿ ಬದಲಾವಣೆ ಕಾಣದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಕೆಲವು ದಿನಗಳ ಹಿಂದೆ ಭಟ್ಕಳ…
ನವದೆಹಲಿ : ದೇಶದಲ್ಲಿ ಬೆಚ್ಚಿ ಬೀಳಿಸಿದಂತ ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್ನ ರಾಹುಲ್ ಗಾಂಧಿ ಅವರನ್ನು ಭೇಟಿಯಾದರು. ಜರ್ಮನಿಯಿಂದ ವಾಪಸ್ ಆದ ರಾಹುಲ್ ಗಾಂಧಿ ಅವರನ್ನು ಅತ್ಯಾಚಾರ ಸಂತ್ರಸ್ತೆ ಕುಟುಂಬಸ್ಥರು ಭೇಟಿಯಾಗಿದ್ದಾರೆ. ಇದೇ ರೀತಿ, ಪ್ರಧಾನಿ ಮೋದಿ ಅವರನ್ನು ಭೇಟಿಯಾಗಬೇಕೆಂಬ ಆಕಾಂಕ್ಷೆಯನ್ನು ಸಂತ್ರಸ್ತೆ ವ್ಯಕ್ತಪಡಿಸಿದ್ದಾರೆ.ಪ್ರಕರಣದ ಆರೋಪಿ ಸೆಂಗಾರ್ಗೆ ಜಾಮೀನು ನೀಡಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಇಂಡಿಯಾ ಗೇಟ್ ಬಳಿಕ ಸಂತ್ರಸ್ತೆ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದರು. ಕೇಂದ್ರ ಅರೆಸೈನಿಕ ಪಡೆಗಳು ಪ್ರತಿಭಟನಾಕಾರರನ್ನು ನಿಯಂತ್ರಿಸಿದ್ದರು. ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದ ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿದ್ದನ್ನು ವಿರೋಧಿಸಿ ಸಂತ್ರಸ್ತೆ ಮತ್ತು ಆಕೆಯ ತಾಯಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಹವಾ ಹೊರಟುಹೋಗಿದೆ. ಇನ್ನು ಮುಂದೆ ಕಾಂಗ್ರೆಸ್ ರಾಜ್ಯದಲ್ಲಿ ತಲೆ ಎತ್ತುವ ಪರಿಸ್ಥಿತಿಯಲ್ಲಿ ಇಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಹೇಳಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪಟ್ಟಣ ಪಂಚಾಯಿತಿ ಚುನಾವಣಾ ಫಲಿತಾಂಶದಿಂದ ಕಾಂಗ್ರೆಸ್ ಹವಾ ಹೊರಟುಹೋಗಿರುವುದು ಸ್ಪಷ್ಟವಾಗಿದೆ ಎಂದರು. ದಕ್ಷಿಣ ಕನ್ನಡದ ಬಜಪೆ, ಕಿನ್ನಿಗೋಳಿ ಪಟ್ಟಣ ಪಂಚಾಯಿತಿ, ಉತ್ತರ ಕನ್ನಡದ ಮಂಕಿ ಪಟ್ಟಣ ಪಂಚಾಯಿತಿ, ಬೆಂಗಳೂರು ಗ್ರಾಮಾಂತರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಸಾರ್ವತ್ರಿಕ ಚುನಾವಣೆ ನಡೆದಿದೆ. ಈ ನಾಲ್ಕರಲ್ಲೂ ಬಿಜೆಪಿ ಮೇಲುಗೈ ಸಾಧಿಸಿದೆ ಹಾಗೂ ಬಹುಮತ ಗಳಿಸಿ ಅಧಿಕಾರಕ್ಕೆ ಬಂದಿದೆ ಎಂದು ಸಂತಸ ಸೂಚಿಸಿದರು. ದೊಡ್ಡಬಳ್ಳಾಪುರ ನಗರಸಭೆಯ ಒಂದು ತೆರವಾದ ಸ್ಥಾನಕ್ಕೆ ಚುನಾವಣೆ ನಡೆದಿದೆ. ರಾಯಚೂರಿನ ತುರ್ವಿಹಾಳ ಪಟ್ಟಣ ಪಂಚಾಯಿತಿಯ ಒಂದು ತೆರವಾದ ಸ್ಥಾನಕ್ಕೆ ಚುನಾವಣೆ ನಡೆದಿದೆ. ಎರಡೂ ಕಡೆ ಬಿಜೆಪಿ ಗೆಲುವು ಸಾಧಿಸಿದೆ ಎಂದು ತಿಳಿಸಿದರು. ಶಿಥಿಲಾವಸ್ಥೆಯಲ್ಲಿದೆ ಕಾಂಗ್ರೆಸ್ ಪಕ್ಷ ಕಾಂಗ್ರೆಸ್ ಪಕ್ಷ ಅವಸಾನದ ಅಂಚಿಗೆ ತಲುಪಿದೆ. ಇದೊಂದು ಹಳೆಯ…
ಬಳ್ಳಾರಿ : ಇತ್ತೀಚಿಗೆ ಕೇರಳದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ 4.5 ಕೆಜಿ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಎಸ್ಐಟಿ (SIT) ಟೀಂ ಬಳ್ಳಾರಿಯ ರೊದ್ದಂ ಜ್ಯುವೆಲ್ಸ್ ಅಂಗಡಿಗೆ ದಾಳಿ ನಡೆಸಿ ಶೋಧ ನಡೆಸಿದೆ. ಈಗಾಗಲೇ ಚಿನ್ನ ಕಳ್ಳತನ ಪ್ರಕರಣದಲ್ಲಿ ರೊದ್ದಂ ಜ್ಯುವೆಲ್ಸ್ ಶಾಪ್ ಮಾಲೀಕ ಗೋವರ್ಧನ್ ಅವರನ್ನ ಬಂಧಿಸಲಾಗಿದೆ. ಈ ಹಿಂದೆಯೂ ಅಕ್ಟೋಬರ್ 24ರಂದು ರೊದ್ದಂ ಜ್ಯುವೆಲ್ಸ್ ಶಾಪ್ ಮೇಲೆ ಕೇರಳ ಎಸ್ಐಟಿ ಟೀಂ ದಾಳಿ ಮಾಡಿತ್ತು. ಇದೀಗ ಮತ್ತೆ ದಾಳಿ ಮಾಡಿದ ಎಸ್ಐಟಿ ಅಧಿಕಾರಿಗಳು, ಜ್ಯುವೆಲ್ಲರಿ ಶಾಪ್ ಡೋರ್ ಕ್ಲೋಸ್ ಮಾಡಿಕೊಂಡು ತಪಾಸಣೆ ನಡೆಸಿದ್ದಾರೆ.
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆ.ವಿ. ಚಂದ್ರಾಲೇಔಟ್ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 26.12.2025 (ಶುಕ್ರವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಆರ್.ಪಿ.ಸಿ.ಲೇಔಟ್, ರೆಮ್ಕೋ ಲೇಔಟ್, ಕಲ್ಯಾಣ್ ಲೇಔಟ್, ಸುಬ್ಬಣ್ಣ ಗಾರ್ಡನ್, ವಿಡಿಯಾ ಲೇಔಟ್, ಎಂ.ಆರ್.ಸಿ.ಆರ್. ಲೇಔಟ್, ಚಂದ್ರಾ ಲೇಔಟ್, ಬಾಪೂಜಿ ಲೇಔಟ್, ವಿನಾಯಕ ಲೇಔಟ್, ಮೂಡಲಪಾಳ್ಯ, ಸ್ಕೆöÊ ಲೈನ್ ಅಪಾರ್ಟ್ಮೆಂಟ್, ಕೆನರಾ ಬ್ಯಾಂಕ್ ಕಾಲೋನಿ, ವಿದ್ಯಾಗಿರಿ ಲೇಔಟ್, ಗಂಗೊAಡನಹಳ್ಳಿ, ಸುವರ್ಣ ಲೇಔಟ್, ಬಿಡಿಎ 13ನೇ ಮತ್ತು 14ನೇ ಬ್ಲಾಕ್, ಕೆಂಗುAಟೆ, ಭೈರವೇಶ್ವರನಗರ, ನಾಗರಬಾವಿ ಕೊಕನಟ್ ಗಾರ್ಡನ್, ಕಾವೇರಿ ಲೇಔಟ್, ಎಸ್.ವಿ.ಜಿ.ಗಾರ್ಡನ್, ಸಂಜೀವಿನಿನಗರ, ಎನ್.ಜಿ.ಇ.ಎಫ್ ಲೇಔಟ್, ಕಲ್ಯಾಣನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳು. 66/11 ಕೆ.ವಿ ಕಟ್ಟಿಗೇನಹಳ್ಳಿ ವಿದ್ಯುತ್ ಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ: 26.12.2025 (ಶುಕ್ರವಾರ) ರಂದು ಬೆಳಗ್ಗೆ 11:00 ಗಂಟೆಯಿಂದ ಮಧ್ಯಾಹ್ನ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. “ಉತ್ತರ ಗೇಟ್ 1, 2,3, ರಾಯಭಾರ…
ಬೆಂಗಳೂರು, ಡಿಸೆಂಬರ್ 24: ಬೆಂಗಳೂರು- ಮೈಸೂರು ಇನ್ಫಾಸ್ಟ್ರಕ್ಚರ್ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನಲ್ಲಿ ರಿಟ್ ಅರ್ಜಿ ಒಂದು ಸಲ್ಲಿಕೆಯಾಗಿದ್ದು, ಅದರಲ್ಲಿ ನನ್ನನ್ನು ಕೂಡ ಪಾರ್ಟಿ ಮಾಡಿದ್ದಾರೆ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ತಿಳಿಸಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು; ಈ ಅರ್ಜಿಯಲ್ಲಿ ರಾಜ್ಯ ಸರ್ಕಾರ, ಕೆಲವು ರೈತರು ಹಾಗೂ ನನ್ನನ್ನೂ ಸೇರಿಸಿ ಪಾರ್ಟಿ ಮಾಡಲಾಗಿದೆ ಎಂದರು. ನಾನು ಈ ರಾಜ್ಯದಲ್ಲಿ ಮುಖ್ಯಮಂತ್ರಿ ಆಗಿದ್ದಾಗ ಸಿದ್ದರಾಮಯ್ಯ ಅವರು ಹಣಕಾಸು ಸಚಿವರಾಗಿದ್ದರು. ಬಿಎಂಐಸಿ ಯೋಜನೆಗೆ ಹಣಕಾಸು ಇಲಾಖೆಯ ಸಹಮತಿಯೂ ಇತ್ತು. ಆಗ ಯೋಜನೆಗೆ ಒಪ್ಪಂದ (ಎಂಓಯು) ಮಾಡಿಕೊಳ್ಳಲಾಗಿತ್ತು. ಆ ಒಪ್ಪಂದದ ಎಲ್ಲಾ ಮಾಹಿತಿಯೂ ಅವರಿಗೆ ಕೂಡ ಇದೆ ಎಂದು ಮಾಜಿ ಪ್ರಧಾನಿಗಳು ಹೇಳಿದರು. ಈ ಯೋಜನೆಯು ಬೆಂಗಳೂರು ನಗರ, ಮಂಡ್ಯ, ಮೈಸೂರು ಸೇರಿದಂತೆ ನಾಲ್ಕು ಜಿಲ್ಲೆಗಳಿಗೆ ಸಂಬಂಧಿಸಿದ್ದಾಗಿತ್ತು. ಐದು ಟೌನ್ಶಿಪ್ ಗಳು, ಕಾಂಕ್ರಿಟ್ ರಸ್ತೆ ನಿರ್ಮಾಣ ಮಾಡುವ ಬಗ್ಗೆ ಒಪ್ಪಂದವಾಗಿತ್ತು. ಈ ಇಳಿವಯಸ್ಸಿನಲ್ಲೂ ನಾನು ವಕೀಲರಿಗೆ ಶುಲ್ಕ…
ಮಂಗನ ಕಾಯಿಲೆ ತಡೆ ಮತ್ತು ಮುನ್ನೆಚ್ಚರಿಕೆ ಕುರಿತು ವಿಕಾಸಸೌಧದಲ್ಲಿ ಆರೋಗ್ಯ ಇಲಾಖೆ ಆಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ಈಗ ಶಿವಮೊಗ್ಗದಲ್ಲಿ ಒಂದು ಲ್ಯಾಬ್ ಕೆಲಸ ಮಾಡುತ್ತಿದ್ದು, ಒತ್ತಡ ಹೆಚ್ಚಾಗಿರುವುದರಿಂದ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನೂತನ ಲ್ಯಾಬ್ ಪ್ರಾರಂಭಕ್ಕೆ ಎಲ್ಲ ಉಪಕರಣ ಖರೀದಿಸಲಾಗಿದ್ದು ಶೀಘ್ರದಲ್ಲಿ ಕಾರ್ಯಾರಂಭಮಾಡಲಿದೆ. ಇದರಿಂದ ಸಿರಸಿ, ಸಿದ್ದಾಪುರ ಭಾಗದ ಜನರಿಗೆ ಹೆಚ್ಚು ಉಪಯೋಗ ಆಗಲಿದೆ. ಬೇಗ ರೋಗವನ್ನು ಗುರುತಿಸಲು ಮತ್ತು ಸಾವಿನ ಪ್ರಮಾಣವನ್ನು ಶೂನ್ಯಕ್ಕೆ ಇಳಿಸಲು ಇದು ಸಹಕಾರಿ ಆಗಲಿದೆ. ಮಂಗನ ಕಾಯಲೆ ಎಂದು ಕರೆಸಿಕೊಳ್ಳುವ ಈ ಕಾಯಿಲೆ ಪ್ರತಿ ವರ್ಷ ಅಕ್ಟೊಬರ್ ನಿಂದ ಜೂನ್ ವರೆಗೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು, ಉಡುಪಿ ಜಿಲ್ಲೆಗಳಲ್ಲಿ ಕಂಡುಬರುವ ಈ ಕಾಯಿಲೆ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಸನ್ನಧ್ದವಾಗಿದೆ. ಸರಿಯಾದ ರೀತಿಯ ತಪಾಸಣೆಯನ್ನು ನಿಯಮಿತವಾಗಿ ಮಾಡಲಾಗುತ್ತಿದೆ. ಈವರೆಗೆ ಶಿವಮೊಗ್ಗ -1163, ಚಿಕ್ಕಮಗಳೂರು- 124, ಉತ್ತರ ಕನ್ನಡ- 368, ಉಡುಪಿ- 12 ಜನರನ್ನು ಮುನ್ನೆಚ್ಚರಿಕೆ ಕ್ರಮವಾಗಿ…
ಬೆಂಗಳೂರು : ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ವಿಚ್ಛೇದನ ನೋಟಿಸ್ ನೀಡಿದ್ದಕ್ಕೆ ಆಕ್ರೋಶಗೊಂಡು ಪತ್ನಿ ಭುವನೇಶ್ವರಿ ಅವರನ್ನು ಪತಿ ಬಾಲ ಮುರುಗನ್ ಗುಂಡಿಕ್ಕಿ ಕೊಂದ ಪ್ರಕರಣ ಬೆಂಗಳೂರಲ್ಲಿ ನಡೆದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಭುವನೇಶ್ವರಿ ಅವರು ಪತಿಗೆ ವಿಚ್ಛೇದನ ನೀಡಲು ನಿರ್ಧರಿಸಿ ಕೋರ್ಟ್ ಮೂಲಕ ನೋಟಿಸ್ ಕಳುಹಿಸಿದ್ದರು. ಇದರಿಂದ ತೀವ್ರ ಆಕ್ರೋಶಗೊಂಡಿದ್ದ ಬಾಲ ಮುರುಗನ್, ಪತ್ನಿಯನ್ನೇ ಮುಗಿಸಲು ಸಂಚು ರೂಪಿಸಿದ್ದನು. ಕಳೆದ ದಿನ ಭುವನೇಶ್ವರಿ ಅವರ ಮೇಲೆ ಪಿಸ್ತೂಲ್ನಿಂದ ಗುಂಡು ಹಾರಿಸಿ ಬರ್ಬರವಾಗಿ ಹತ್ಯೆ ಮಾಡಿದ್ದನು. ಪ್ರಕರಣ ದಾಖಲಿಸಿಕೊಂಡಿರುವ ಮಾಗಡಿ ರಸ್ತೆ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಕಳೆದ ರಾತ್ರಿಯಿಂದಲೂ ಬಾಲ ಮುರುಗನ್ನನ್ನು ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಸುದೀರ್ಘವಾಗಿ ವಿಚಾರಣೆಗೊಳಪಡಿಸಲಾಗಿದೆ. ಕೊಲೆಯ ಸಂಚು ರೂಪಿಸಿದ ದಿನದಿಂದ ಹಿಡಿದು, ಆಯುಧ ಪೂರೈಸಿದವರ ವರೆಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಆರೋಪಿಯು ಬಳಸಿದ ಆಯುಧ ಅಕ್ರಮ ಎಂದು ಸಾಬೀತಾದಲ್ಲಿ, ಆಯುಧ ಕಾಯ್ದೆಯಡಿ (Arms Act) ಮತ್ತಷ್ಟು ಕಠಿಣ ಸೆಕ್ಷನ್ಗಳನ್ನು…














