Author: kannadanewsnow05

ರಾಯಚೂರು : ಮುಂದಿನ 2028 ರಲ್ಲಿ ಬರುವ ವಿಧಾನಸಭೆ ಚುನಾವಣೆಯಲ್ಲಿ ನಾನೇ ಮುಖ್ಯಮಂತ್ರಿ ಅಭ್ಯರ್ಥಿಯೆಂದು ಹೇಳಿದ್ದೇನೆ. ಆದರೆ ಸದ್ಯಕ್ಕೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿದ್ದು ಸಿಎಂ ಬದಲಾವಣೆ ವಿಚಾರ ಸದ್ಯಕ್ಕೆ ಇಲ್ಲ ಎಂದು ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ನಮ್ಮ ಸರ್ಕಾರ ಬಂದ ಬಳಿಕ ಅಭಿವೃದ್ಧಿ ಕೆಲಸಗಳು ನಡೆದಿವೆ. ರಾಜ್ಯದಲ್ಲಿ ಶೇ.60ರಷ್ಟು ಪರ್ಸೆಂಟೇಸ್ ಸರ್ಕಾರ ಎಂದು ಬಿಜೆಪಿಯವರು ಆರೋಪ ಮಾಡುತ್ತಾರೆ. ಬರೀ ಆರೋಪ ಮಾಡುವುದಲ್ಲ. ಅದನ್ನು ಸಾಬೀತು ಮಾಡಬೇಕು. ಸುಮ್ಮನೇ ಹೇಳುವುದು ಆಗುವುದಿಲ್ಲ ಎಂದರು. ಪತ್ರದಲ್ಲಿ ಪ್ರಿಯಾಂಕ ಖರ್ಗೆ ಆಪ್ತನ ಹೆಸರಿದೆ. ಈಶ್ವರಪ್ಪನದ್ದು ನೇರವಾಗಿ ಪತ್ರದಲ್ಲಿ ಹೆಸರು ಉಲ್ಲೇಖವಾಗಿತ್ತು. ಆಪ್ತರು, ಪಿಎಗಳ ಹೆಸರು ಇದ್ದರೆ ಸಚಿವರು ನೇರವಾಗಿ ಹೊಣೆಗಾರರು ಆಗಲ್ಲ. ತನಿಖೆ ನಡೆಯುತ್ತಿದೆ ನಡೆಯಲಿ ಎಂದರು.

Read More

ಪಶ್ಚಿಮ ಬಂಗಾಳ : ಚೀನಾದಲ್ಲಿ ಅಬ್ಬರಿಸುತ್ತಿರುವ ಮಾರಕ ಎಚ್ ಎಂ ಪಿ ವೈರಸ್ ಇದೀಗ ಭಾರತಕ್ಕೂ ಕಾಲಿಟ್ಟಿದೆ.ಇಂದು ಬೆಂಗಳೂರಿನ 8 ವರ್ಷದ ಹಾಗೂ 3 ವರ್ಷದ ಮಗುವಿನಲ್ಲಿ ಈ ಒಂದು ವೈರಸ್ ಪತ್ತೆಯಾಗಿತ್ತು. ಬಳಿಕ ಗುಜರಾತ್ ಈ ಒಂದು ವೈರಸ್ ಪಟ್ಟೆಯಾಗಿದ್ದು, ಇದೀಗ ಕೊಲ್ಕತ್ತಾದಲ್ಲಿ 5 ವರ್ಷದ ಮಗುವಿನಲ್ಲಿ ಈ ಒಂದು ವೈರಸ್ ಪತ್ತೆಯಾಗಿದೆ. ಹೌದು ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲೂ ಎಚ್ ಎಂ ಪಿ ವೈರಸ್ ಇದೀಗ ಪತ್ತೆಯಾಗಿದೆ. ಐದು ತಿಂಗಳ ಮಗುವಿನಲ್ಲಿ ಎಚ್ಎಂಪಿ ವೈರಸ್ ಪತ್ತೆಯಾಗಿದೆ. ನವೆಂಬರ್ 12ರಂದು ಐದು ತಿಂಗಳ ಮಗು ಖಾಸಗಿ ಆಸ್ಪತ್ರೆಗೆ ದಾಖಲಾಗಿತ್ತು. ಸದ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಮಗುವಿನಲ್ಲಿ ಎಚ್ ಎಂ ಪಿ ವೈರಸ್ ಪತ್ತೆಯಾಗಿದೆ. ಇದಕ್ಕೂ ಮುನ್ನ ಗುಜರಾತ್’ನ ಅಹಮದಾಬಾದ್ ನಲ್ಲಿ 2 ತಿಂಗಳ ಮಗುವಿಗೆ ಸೋಂಕು ತಗುಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನಲ್ಲಿ ಇಬ್ಬರು ಹಸುಗೂಸುಗಳು ಹಾಗೂ ಗುಜರಾತ್ ನಲ್ಲಿ ಓರ್ವ ಹಸುಗೂಸಿಗೆ ಸೋಂಕು ತಗುಲಿರುವುದು ಧೃಡವಾಗಿದೆ.

Read More

ದಾವಣಗೆರೆ : ಮನೆಯಲ್ಲಿ ನೀರು ತುಂಬುವ ವೇಳೆ ತಾಯಿ ಮೋಟರ್ ಆನ್ ಮಾಡಿದ್ದಾಳೆ, ಈ ವೇಳೆ ವಿದ್ಯುತ್ ಶಾಕ್ ತಗುಲಿ ಒಂದುವರೆ ವರ್ಷದ ಮಗು ದಾರುಣವಾಗಿ ಸಾವನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಸೊರಟೂರು ಗ್ರಾಮದಲ್ಲಿ ನಡೆದಿದೆ ಹೌದು ಹೊನ್ನಾಳಿ ತಾಲೂಕಿನ ಸೊರಟೂರು ಗ್ರಾಮದಲ್ಲಿ ಒಂದುವರೆ ವರ್ಷದ ಮಗು ಮಂಜು ಎನ್ನುವ ಬಾಲಕ ಮೃತಪಟ್ಟಿದ್ದಾನೆ. ಮನೆಯಲ್ಲಿ ಆಟವಾಡುತ್ತಾ ನೀರಿನ ಮೋಟಾರ್ ಹಿಡಿದು ಸಾವನ್ನಪ್ಪಿದ್ದಾನೆ. ತಾಯಿ ಮೋಟರ್ ಆನ್ ಮಾಡಿ ನೀರು ತುಂಬಿಸುವಾಗ ಈ ಒಂದು ಘೋರ ದುರಂತ ಸಂಭವಿಸಿದೆ. ಮಗು ಸಾವಿನಿಂದ ನಿಂದ ಇದೀಗ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

Read More

ಬೆಂಗಳೂರು : ಪೊಲೀಸ್ ಇಲಾಖೆಗೆ ನಕಲಿ ದಾಖಲೆ ಪ್ರಮಾಣ ಪತ್ರ ಸಲ್ಲಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಬ್ಯಾಡರಹಳ್ಳಿ ಠಾಣೆಯ ಪಿಎಸ್ಐ ಕಾಶಿಲಿಂಗೇಗೌಡ ಸಸ್ಪೆಂಡ್ ಮಾಡಿ ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ಅವರು ಆದೇಶ ಹೊರಡಿಸಿದ್ದಾರೆ. ನಕಲಿ ದಾಖಲೆ ನೀಡಿದ ಸಂಬಂಧ ವಿಧಾನಸೌಧ ಠಾಣೆಯಲ್ಲಿ PSI ಕಾಶಿಲಿಂಗೇಗೌಡನ ವಿರುದ್ಧ ಈ ಕುರಿತು ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಪಿಎಸ್ಐ ಜಾಮೀನು ಪಡೆದುಕೊಂಡಿದ್ದ ನಂತರ ಪೊಲೀಸ್ ಠಾಣೆಗೆ ಪಿಎಸ್ಐ ಕರ್ತವ್ಯಕ್ಕೆ ಹಾಜರಾಗಿದ್ದ, ಇದೀಗ ಪಿಎಸ್ಐ ಅಮಾನತು ಮಾಡಿ ಡಿಸಿಪಿ ಗಿರೀಶ್ ಆದೇಶ ಹೊರಡಿಸಿದ್ದಾರೆ.

Read More

ಬೆಂಗಳೂರು : ಈಗಾಗಲೇ ಸಾರಿಗೆ ಬಸ್ ಗಳಲ್ಲಿ ಟಿಕೆಟ್ ದರ ಶೇಕಡಾ 15 ರಷ್ಟು ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಇದರ ಬೆನ್ನಲ್ಲೇ ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಬಿಗ್ ಶಾಕ್ ನೀಡುತ್ತಿದ್ದೂ,, ಮೆಟ್ರೋ ಪ್ರಯಾಣದ ಟಿಕೆಟ್ ದರ ಶೇಕಡ 15 ರಿಂದ 20 ರಷ್ಟು ಹೆಚ್ಚಳ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಹೌದು ನಮ್ಮ ಮೆಟ್ರೋ ಟಿಕೆಟ್ ದರ ಹೆಚ್ಚಿಸಲು ಬಿಎಂಆರ್ ಸಿಲ್ ಸಿದ್ದತೆ ನಡೆಸಿದ್ದು, ಶೇ.15 ರಿಂದ 20 ರಷ್ಟು ಹೆಚ್ಚಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಜನವರಿ 17 ಕ್ಕೆ ದರ ಪರಿಷ್ಕರಣೆ ಸಮಿತಿ ಸಲ್ಲಿಸಲಿರುವ ಅಂತಿಮ ವರದಿ ಕುರಿತು ಸಮಾಲೋಚನೆ ನಡೆಯಲಿದೆ. ಜನೆವರಿ 17 ರ ಸಭೆಯಲ್ಲಿ ಟಿಕೆಟ್ ದರ ಫೈನಲ್ ಆಗಲಿದೆ ಎಂದು ತಿಳಿದುಬಂದಿದೆ. ನಮ್ಮ ಮೆಟ್ರೋ 2017ರಲ್ಲಿ ಕೊನೆಯ ಬಾರಿ ದರ ಪರಿಷ್ಕರಣೆ ಮಾಡಿತ್ತು. 10-15 ಪ್ರತಿಶತ ಟಿಕೆಟ್ ದರ ಏರಿಕೆ ಮಾಡಲಾಗಿತ್ತು. ಬಳಿಕ ಹಣದುಬ್ಬರ ಹೆಚ್ಚಳ, ಕಾರ್ಯಾಚರಣೆ ವೆಚ್ಚ ಹೆಚ್ಚಳ ನಮ್ಮ…

Read More

ಮೈಸೂರು : ಕೇಂದ್ರ ಸಚಿವ ಅಮಿತ್ ಷಾ ಬಿಆರ್ ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿ ಹೇಳಿಕೆಗೆ ಇದೀಗ ತೀವ್ರ ಖಂಡನೆ ವ್ಯಕ್ತವಾಗುತ್ತಿದ್ದು ಅಮಿತ್ ಶಾ ಹೇಳಿಕೆ ಖಂಡಿಸಿ ನಾಳೆ ಮೈಸೂರು ಜಿಲ್ಲೆ ಬಂದ್ ಮಾಡಿ ಹಲವು ಸಂಘಟನೆಗಳು ಕರೆ ನೀಡಿವೆ. ಹೌದು ನಾಳೆ ಮೈಸೂರು ಬಂದ್ ಗೆ ಕರ್ನಾಟಕ ರಾಜ್ಯ ರೈತ ಸಂಘಟನೆಗಳು, ದಲಿತ ಸಂಘಟನೆಗಳು,ಮುಸ್ಲಿಂ , ಹಿಂದುಳಿದ ಸಮುದಾಯಗಳ ವೇದಿಕೆ, ದೇವರಾಜ ಮಾರುಕಟ್ಟೆ ವರ್ತಕರ ಸಂಘ,ಮೈಸೂರು ಪಾಲಿಕೆ ಪೌರಕಾರ್ಮಿಕ ಹಾಗೂ ಪಳಚರಂಡಿ ಖಾಯಂ ಹಾಗೂ ಗುತ್ತಿಗೆ ಕಾರ್ಮಿಕ ಸಂಘಗಳು ಬೆಂಬಲ ವ್ಯಕ್ತಪಡಿಸಿದ್ದಾರೆ. ನಾಳೆ ಮುಂಜಾನೆ 7 ಗಂಟೆಯಿಂದಲೆ ಮೈಸೂರು ಬಂದ್ ಬಿಸಿ ತಟ್ಟಲಿದ್ದು ಪ್ರತಿಭಟನೆಗೆ ಹಲವು ಸಂಘಟನೆಗಳ 10 ತಂಡ ಮಾರ್ಪಾಡು ಮಾಡಿಕೊಳ್ಳಲಾಗಿದೆ. ಕೆಂದ್ರೀಯ ಬಸ್ ನಿಲ್ದಾಣದಲ್ಲಿ ಒಂದು ತಂಡ ,ನಗರ ಬಸ್ ನಿಲ್ದಾಣದಲ್ಲಿ ಒಂದು ತಂಡ ಹೀಗೆ ಮೈಸೂರು ನಗರಕ್ಕೆ ಬರುವ ಪ್ರಮುಖ ರಸ್ತೆ ತಡೆಗೆ ಯೋಚನೆ ಮಾಡಲಾಗಿದೆ.

Read More

ಚಿಕ್ಕಬಳ್ಳಾಪುರ : ರಸ್ತೆ ಬದಿಯಲ್ಲಿ ನಿಂತಂತಹ ಲಾರಿಗೆ ವೇಗವಾಗಿ ಬಂದಂತಹ ಕಾರನ್ನು ಡಿಕ್ಕಿ ಹೊಡೆದ ಪರಿಣಾಮ ಕಾಲಿನಲ್ಲಿ ಚಲಿಸುತ್ತಿದ್ದ ದಂಪತಿಗಳು ಸೇರಿದಂತೆ ಇಬ್ಬರು ಮಕ್ಕಳಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ತೊಂಡೆ ಬಾವಿ ಬಳಿ ನಡೆದಿದೆ. ಗಾಯಗೊಂಡವರನ್ನು ತುಮಕೂರು ಜಿಲ್ಲೆಯ ಪಾವಗಡದ ರೊಪ್ಪ ಗ್ರಾಮದ ಪವನ್ ಹಾಗೂ ಮಮತಾ ದಂಪತಿ ಸೇರಿದಂತೆ ಅವರ ಮಕ್ಕಳಾದ ವಿಶ್ವಾಸ್ ಹಾಗೂ ಶುಭ್ರತ್ ಎಂದು ತಿಳಿದುಬಂದಿದೆ. ಪಾಂಡಿಚೆರಿ ಪ್ರವಾಸಕ್ಕೆ ಹೋಗಿ ಬರುವಾಗ ಈ ಒಂದು ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಓರ್ವ ಮಗನ ಪರಿಸ್ಥಿತಿ ಗಂಭೀರವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಕುರಿತು ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ನವದೆಹಲಿ : ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕುಟುಂಬದ ಜೊತೆಗೆ ವಿದೇಶಕ್ಕೆ ತೆರಳಿದ್ದರು.ಇದೆ ಸಂದರ್ಭದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಮನೆಯಲ್ಲಿ ಔತಣಕೂಟ ಏರ್ಪಡಿಸಿಲಾಗಿತ್ತು. ಸೇರಿದಂತೆ 35 ಶಾಸಕರು ಹಲವು ಸಚಿವ ಭಾಗಿಯಾಗಿದ್ದರು. ಈ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಔತಣಕೂಟಕ್ಕೆ ಸೇರಿದರೆ ಅದಕ್ಕೆ ರಾಜಕೀಯ ಏಕೆ ಬೇರೆಸುತ್ತಿರಿ ಎಂದು ಸಿಡಿಮಿಡಿಗೊಂಡಿದ್ದಾರೆ. ಇಂದು ವಿದೇಶ ಪ್ರವಾಸ ಮಾಡಿಸಿಕೊಂಡು ಭಾರತಕ್ಕೆ ಆಗಮಿಸಿದ ಡಿಸಿಎಂ ಡಿಕೆ ಶಿವಕುಮಾರ್ ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಲ್ಕು ವರ್ಷದಿಂದ ಎಲ್ಲೂ ಹೊರಗೆ ಹೋಗಿರಲಿಲ್ಲ. ಹೀಗಾಗಿ ಕುಟುಂಬದ ಜೊತೆಗೆ ಹೊಸ ವರ್ಷಕ್ಕೆ ವಿದೇಶಕ್ಕೆ ತೆರಳಿದ್ದೆ. ಔತಣಕೂಟಕ್ಕೆ ಸೇರಿದ್ದನ್ನೂ ರಾಜಕೀಯ ಯಾಕೆ ಬೆರೆಸುತ್ತೀರಿ. ಎಲ್ಲರೂ ಊಟಕ್ಕೆ ಸೇರಿದರೆ ತಪ್ಪೇನು? ನಾನು ಕೆಲವು ಬಾರಿ ಊಟಕ್ಕೆ ಕರೆದಿದ್ದೇನೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಕ್ಯಾಬಿನೆಟ್ ಪುನರ್ ರಚನೆ ನಿಮ್ಮನ್ನು ಬ್ಯುಸಿಯಲ್ಲಿಡಲು ದಾರಿ ತಪ್ಪಿಸುತ್ತಿದ್ದಾರೆ ಎಂದರು. ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಮನೆಯಲ್ಲಿ ಔತಣಕೂಟ ಏರ್ಪಡಿಸಲಾಗಿತ್ತು. ಈ ಒಂದು ಕೂಟದಲ್ಲಿ…

Read More

ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಚಿಕ್ಕಮಗಳೂರು ಸುತ್ತ ಮುತ್ತ ಭಾಗದಲ್ಲಿ ನಕ್ಸಲರ ಚಟುವಟಿಕೆ ಪುನರಾರಂಭವಾಗಿತ್ತು. ಈ ಸಂದರ್ಭದಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡನನ್ನು ಎನ್ಕೌಂಟರ್ ಮಾಡಲಾಗಿತ್ತು. ಇದೀಗ ನಕ್ಸಲರಿಗೆ ಶರಣಾಗಲು ನಾನೇ ಕರೆ ಕೊಟ್ಟಿದ್ದೇನೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಕ್ಸಲ್ ಚಟುವಟಿಕೆ ಹಿನ್ನೆಲೆಯಲ್ಲಿ ANF ನಕ್ಸಲ್ ಕಾರ್ಯಚರಣೆ ನಡೆಸುತ್ತಿದ್ದು, ಇದೀಗ ಅವರಿಗೆ ಕಾರ್ಯಾಚರಣೆ ಸ್ಥಗಿತಗೊಳಿಸಲು ಸೂಚಿಸಲಾಗಿದೆ. ಅಲ್ಲದೆ ನಕ್ಸಲರಿಗೆ ಶರಣಾಗಲು ನಾನೇ ಕರೆಕೊಟ್ಟಿದ್ದೇನೆ. ನಕ್ಸಲರ ಮನ ಪರಿವರ್ತನೆ ಆಗಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಕ್ಸಲರ ಶರಣಾಗತಿಗೆ ಸರ್ಕಾರ ಸಮಿತಿ ಕಳೆದ ಕೆಲವು ದಿನಗಳ ಹಿಂದೆ ಚಿಕ್ಕಮಂಗಳೂರು ಭಾಗದಲ್ಲಿ ನಕ್ಷಲ್ ಚಟುವಟಿಕೆ ಹೆಚ್ಚಾಗಿದ್ದು ಈ ವೇಳೆ ವಿಕ್ರಂ ಗೌಡನನ್ನು ಎನ್ಕೌಂಟರ್ ಮಾಡಿದ ಬಳಿಕ ಇದೀಗ 6 ನಕ್ಸಲರು ಚಿಕ್ಕಮಂಗಳೂರು ಜಿಲ್ಲಾಡಳಿತದ ಮುಂದೆ ಶರಣಾಗತಿಗೆ ನಿರ್ಧರಿಸಿದ್ದು, ಮುಂದಿನ ಮೂರು ದಿನಗಳಲ್ಲಿ ಆರು ನಕ್ಸಲರು ಶರಣಾಗೋ ಸಾಧ್ಯತೆ ಇದೆ ಎನ್ನಲಾಗಿದೆ.…

Read More

ಬೆಂಗಳೂರು : HMPV ವೈರಸ್ ಭಾರತಕ್ಕೂ ಬಂದಿದ್ದು, ಈಗ ಇಂದು ಬೆಂಗಳೂರಿನಲ್ಲಿ 8 ತಿಂಗಳ ಮಗು ಹಾಗೂ 3 ತಿಂಗಳ ಮಕ್ಕಳಲ್ಲಿ ಈ ಒಂದು ವೈರಸ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಆರೋಗ್ಯ ಇಲಾಖೆಗೆ ಎಲ್ಲಾ ರೀತಿಯ ಮುಂಜಾಗೃತ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದು ಮೊದಲ ಪ್ರತಿಕ್ರಿಯೆ ನೀಡಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದು ಅದಕ್ಕೋಸ್ಕರ ಆರೋಗ್ಯ ಸಚಿವ ದಿನೇಶ್ ಗುಂಡೂರ ಸಭೆ ಕರೆದಿದ್ದಾರೆ. ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದು ಅಪಾಯಕಾರಿ ವೈರಸ್ ಅಲ್ಲ ಎಂದರು. ಇದೊಂದು ಚೀನಾ ವೈರಸ್ ಆಗಿದ್ದು, ಕರ್ನಾಟಕಕ್ಕೆ ಬಂದಿದೆ ಎಂದು ಮಾಹಿತಿ ಸಿಕ್ಕಿದೆ.ಅದಕ್ಕೆ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಇಲಾಖೆಗೆ ಸೂಚನೆ ನೀಡಿದ್ದೇನೆ. ಈಗಾಗಲೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಜೊತೆಗೆ ಮಾತನಾಡಿದ್ದು…

Read More