Author: kannadanewsnow05

ಹೊಸದಿಲ್ಲಿ: ಪಂಜಾಬ್ ವಿಭಾಗದ ಭಾರತೀಯ ಕಿಸಾನ್ ಯೂನಿಯನ್ ಮತ್ತು ಸಂಯುಕ್ತ ಕಿಸಾನ್ ಮೋರ್ಚಾದ ಹರ್ಮೀತ್ ಸಿಂಗ್ ಕಡಿಯನ್ ಫೆಬ್ರವರಿ 16ರಂದು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ್ದು, ಇದರೊಂದಿಗೆ ಫೆ. 15ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಟೋಲ್ ಪ್ಲಾಝಾಗಳ ಬಳಿ ಪ್ರತಿಭಟನೆ ನಡೆಸಲು ಯೋಜಿಸಲಾಗಿದೆ. ಈ ನಡುವೆ ಕೇಂದ್ರ ಸಚಿವರು ಹಾಗೂ ರೈತರು ಮೂರನೆ ಸುತ್ತಿನ ಮಾತುಕತೆಗೆ ಸಜ್ಜಾಗುತ್ತಿದ್ದು, ಇದಕ್ಕೂ ಮುನ್ನ ನಡೆದಿದ್ದ ಎರಡು ಸುತ್ತಿನ ಮಾತುಕತೆಗಳು ಯಾವುದೇ ಪರಿಹಾರ ಕಾಣದೆ ವಿಫಲಗೊಂಡಿದ್ದವು. ಸಾವಿರಾರು ರೈತರು ತಮ್ಮ ಪ್ರತಿಭಟನೆಯನ್ನು ಮುಂದುವರಿಸುವ ಪ್ರತಿಜ್ಞೆಯನ್ನು ಕೈಗೊಂಡಿರುವ ಬೆನ್ನಿಗೇ ನಡೆಯುತ್ತಿರುವ ಮೂರನೆ ಸುತ್ತಿನ ಮಾತುಕತೆಯಲ್ಲಿ ರೈತ ನಾಯಕರೊಂದಿಗೆ ಕೇಂದ್ರ ಸಚಿವರಾದ ಪಿಯೂಷ್ ಗೋಯಲ್‌, ಅರ್ಜುನ್ ಮುಂಡಾ ಹಾಗೂ ನಿತ್ಯಾನಂದ ರಾಯ್ ವಿಡಿಯೊ ಸಂವಾದದ ಮೂಲಕ ಪಾಲ್ಗೊಳ್ಳಲಿದ್ದಾರೆ. ಇದಕ್ಕೂ ಮುನ್ನ, ಹಿರಿಯ ಸಚಿವರಾದ ರಾಜನಾಥ್ ಸಿಂಗ್‌ ಹಾಗೂ ಅರ್ಜುನ್ ಮುಂಡಾ ಬುಧವಾರ ರೈತರ ಪ್ರತಿಭಟನೆ ಹಾಗೂ ಸಂಬಂಧಿಸಿದ ವಿಷಯಗಳ ಕುರಿತು ಚರ್ಚೆ ನಡೆಸಿದರು ಎಂದು…

Read More

ಬೆಂಗಳೂರು :ಅಂಗಡಿ-ಮುಂಗಟ್ಟುಗಳ ಮುಂದೆ ಸೂಚನಾ ಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದರು. ಅಧಿವೇಶನ ನಿಗದಿಯಾದ ಹಿನ್ನೆಲೆ ಸರ್ಕಾರಕ್ಕೆ ವಾಪಸ್ ಕಳಿಸಿದ್ದರು. ವಿಧೇಯಕ ಮಂಡಿಸಿ ಅನುಮೋದನೆ ಪಡೆಯುವಂತೆ ಸೂಚನೆ ನೀಡಿದ್ದರು. ಅದರಂತೆಯೇ ಈಗ ವಿಧಾನಸಭೆ ಕಲಾಪದಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಮಂಡಿಸಿ ಸರ್ಕಾರ ಅಂಗೀಕಾರ ಪಡೆದಿದೆ. ವಿಧಾನಮಂಡಲ ಬಜೆಟ್ ಅಧಿವೇಶನದ ಐದನೇ ದಿನವಾದ ಇಂದೂ ಹಲವು ವಿಚಾರಗಳ ಬಗ್ಗೆ ವಿಪಕ್ಷ ಹಾಗೂ ಪ್ರತಿಪಕ್ಷ ನಡುವೆ ಆರೋಪ ಪ್ರತ್ಯಾರೋಪಕ್ಕೆ ಸದನ ಸಾಕ್ಷಿಯಾಗಿದೆ. ಸದ್ಯ ವಿಧಾನಸಭೆ ಕಲಾಪದಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ ಅಂಗೀಕಾರವಾಗಿದೆ. ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ವಾಪಸಾತಿ ಮಾಡಿ ಸದನದಲ್ಲಿ ವಿಧೇಯಕ ಮಂಡಿಸುವಂತೆ ಸೂಚಿಸಿದ್ದ ಹಿನ್ನೆಲೆಯಲ್ಲಿ ವಿಧೇಯಕ ಮಂಡಿಸಿ ಸರ್ಕಾರ ಅಂಗೀಕಾರ ಪಡೆದಿದೆ. ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಬಳಕೆಯನ್ನು ಕಡ್ಡಾಯಗೊಳಿಸುವ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ’ವನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿತ್ತು. ವಿಧಾನಸಭೆ…

Read More

ಸೂರು: ಮೈಸೂರಲ್ಲಿ ವೇಶ್ಯಾವಾಟಿಕೆ ಜಾಲದ ಮೇಲೆ ವಿಜಯನಗರ ಪೊಲೀಸರು ಹಾಗೂ ಒಡನಾಡಿ ಸಂಸ್ಥೆ ದಾಳಿ ನಡೆಸಿದ್ದು, ಓರ್ವ ಬಾಲಕಿಯನ್ನು ರಕ್ಷಿಸಿದ್ದು, ಇಬ್ಬರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ನಗರದ ಕೂರ್ಗಳ್ಳಿಯಲ್ಲಿ ವಾಸಿಸುತ್ತಿದ್ದ ಲೋಹಿತ್ ಹಾಗೂ ಕಾಂತರಾಜು ಎಂಬವರ ವಿರುದ್ಧ ಪ್ರಕರಣ ದಾಖಲಾಗಿದ್ದು, ತುಮಕೂರು ಬಳಿಯ ಗ್ರಾಮವೊಂದರ 16 ವರ್ಷದ ಬಾಲಕಿಯನ್ನು ಪೊಲೀಸರು ರಕ್ಷಿಸಿದ್ದಾರೆ. ಅಪ್ರಾಪ್ತ ಬಾಲಕಿ ಹಾಗೂ ಬಾಂಗ್ಲಾ ದೇಶದ ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಒಡನಾಡಿ ಸಂಸ್ಥೆಯ ಸ್ಪ್ಯಾನ್ಸಿ ಹಾಗೂ ಪರಶು ಅವರಿಗೆ ಬಂದಿತ್ತು. ಕೂಡಲೇ ಅವರು ಎಸಿಪಿ ಗಜೇಂದ್ರಪ್ರಸಾದ್ ಹಾಗೂ ವಿಜಯನಗರ ಪೊಲೀಸ್ ಠಾಣೆ ಇನ್ಸಪೆಕ್ಟರ್ ಪ್ರದೀಪ್ ಹಾಗೂ ಎಸ್‌ಐ ವಿಶ್ವನಾಥ್ ಅವರಿಗೆ ಮಾಹಿತಿ ನೀಡಿದ್ದರು. ಆರೋಪಿಗಳು ಬಾಲಕಿಯನ್ನು ವ್ಯಕ್ತಿಯೊಬ್ಬರ ಜೊತೆಯಲ್ಲಿ ವಿಜಯನಗರದ ಬಳಿಯ ವರ್ತುಲ ರಸ್ತೆ ಸಮೀಪದ ವಸತಿಗೃಹಕ್ಕೆ ಕಳುಹಿಸಿಕೊಟ್ಟಿದ್ದರು. ಈ ಬಗ್ಗೆ ಮಾಹಿತಿ ಪಡೆದ ಒಡನಾಡಿ ಕಾರ್ಯಕರ್ತರು ಹಾಗೂ ಪೊಲೀಸರು ಮಂಗಳವಾರ ಸಂಜೆ 5 ಗಂಟೆ ವೇಳೆಗೆ ವಸತಿ ಗೃಹವನ್ನು ಗಮನಿಸುತ್ತಿದ್ದರು. ಇದಾದ ಕೆಲ…

Read More

ಬೆಂಗಳೂರು : ದೆಹಲಿಗೆ ಹೊರಟಿದ್ದ ನಮ್ಮ ರಾಜ್ಯ ರೈತರನ್ನು ವಶಕ್ಕೆ ಪಡೆಯಲಾಗಿದೆ ರಾಜ್ಯದ ರೈತರನ್ನು ವಶಕ್ಕೆ ಪಡೆದು ವಾರಣಾಸಿಗೆ ಸ್ಥಳಾಂತರಿಸುತ್ತಿದ್ದಾರೆ ರೈತರನ್ನು ಸ್ಥಳಾಂತರಿಸದೆ ಕೂಡಲೇ ಬಿಡುಗಡೆಗೊಳಿಸುವಂತೆ ಮಧ್ಯಪ್ರದೇಶದ ಸಿಎಂ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದು ಮನವಿ ಮಾಡಿದ್ದಾರೆ.ಮಧ್ಯಪ್ರದೇಶದ ಸಿಎಂ ಡಾ. ಮೋಹನ್ ಯಾದವ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದು ಮನವಿ ಮಾಡಿದ್ದಾರೆ ಎನ್ನಲಾಗಿದೆ. ಈಗಾಗಲೇ ರಾಜ್ಯದ ರೈತರನ್ನು ಮತ್ತೆ ಪ್ರದೇಶ ವಶಕ್ಕೆ ಪಡೆದು ನಾಲ್ಕು ದಿನಗಳಾಗಿವೆ. ನ್ಯಾಯಯುತವಾಗಿ ಪ್ರತಿಭಟನೆಗೆ ತೆರಳುತ್ತಿದ್ದರು. ಅದು ಸಂವಿಧಾನಿಕ ಹಕ್ಕಾಗಿದೆ ರಾಜ್ಯದ ರೈತರನ್ನು ಭೋಪಾಲ್ ಪೊಲೀಸರು ಬಂಡಿಸಿರುವುದು ದುರದಷ್ಟಕರವಾಗಿದೆ. ಮಧ್ಯಪ್ರದೇಶದ ಪೊಲೀಸರು ರೈತರ ಜೊತೆ ಕೆಟ್ಟದಾಗಿ ವರ್ತಿಸುತ್ತಿದ್ದಾರೆ ಎಂದಿದ್ದಾರೆ. ರೈತರನ್ನು ಸ್ಥಳಾಂತರಿಸದೆ ಬಿಡುಗಡೆಗೊಳಿಸುವಂತೆ ಪತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ರೈತ ಮುಖಂಡ ಕುರಬೂರು ಶಾಂತಕುಮಾರ್ ಜೊತೆ ಸಿಎಂ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದಾರೆ. ದೂರವಾಣಿ ಕರೆ ಮಾಡಿ ರೈತರ ಯೋಗ ಕ್ಷೇಮವನ್ನು ವಿಚಾರಿಸಿದ್ದಾರೆ ಎಂದು ತಿಳಿದುಬಂದಿದೆ. https://kannadanewsnow.com/kannada/psi-scam-probe-report-submitted-to-cm-siddaramaiah-likely-to-be-discussed-in-house-today/ https://kannadanewsnow.com/kannada/good-news-for-transport-employees-here-are-the-details-of-all-private-hospitals-recognized-by-the-state-government/ https://kannadanewsnow.com/kannada/congress-will-destroy-congress-dr-ashwath-narayans-explosive-statement/

Read More

ಬೆಂಗಳೂರು : ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಇಡೀ ದೇಶವೇ ಬೆಚ್ಚಿ ಬೀಳಿಸುವಂತಹ 545 ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸದನದಲ್ಲಿ ಈ ವಿಷಯದ ಕುರಿತಾಗಿ ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಕಳೆದ ಬಿಜೆಪಿ ಸರ್ಕಾರದಲ್ಲಿ ನಡೆದಿದ್ದ ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ವೀರಪ್ಪ ನೇತೃತ್ವದ ಸಮಿತಿ ತನಿಖೆ ನಡೆಸಿತ್ತು. ಈಗಾಗಲೇ ಸಮಿತಿಯು ಸಿಎಂ ಸಿದ್ದರಾಮಯ್ಯ ಗೆ ತನಿಖಾ ವರದಿಯನ್ನು ಸಲ್ಲಿಸಿದೆ.ಸದನದಲ್ಲಿ ತನಿಖಾ ವರದಿ ಮಂಡಿಸಲು ಸಂಪುಟ ಸಭೆಯಲ್ಲಿ ಅನುಮತಿ ನೀಡಲಾಗಿದ್ದು, ಈ ಬಗ್ಗೆ ಇಂದು ಸಂಜೆ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಚರ್ಚೆ ಎನ್ನಲಾಗುತ್ತಿದೆ. ತನಿಖಾ ವರದಿ ಸದನದಲ್ಲಿ ಮಂಡನೆಗೆ ಅನುಮತಿ ಪಡೆಯಲು ತೀರ್ಮಾನಿಸಲಾಗಿದೆ ಸಚಿವ ಸಂಪುಟ ಸಭೆಯಲ್ಲಿ ಅನುಮತಿ ಪಡೆಯಲು ತೀರ್ಮಾನಿಸಲಾಗಿದೆ. ಕಳೆದ ಬಿಜೆಪಿ ಸರ್ಕಾರದಲ್ಲಿ ನಡೆದಿದ್ದ ಪಿಎಸ್ಐ ನೇಮಕಾತಿ ಹಗರಣ ಸಂಬಂಧಿಸಿದಂತೆ ನ್ಯಾಯಮೂರ್ತಿ ವೀರಪ್ಪ ನೇತೃತ್ವದ ಸಮಿತಿ ತನಿಖೆ ಮಾಡಿತ್ತು. ಈಗಾಗಲೇ ಸಮಿತಿಯು ಸಿಎಂ ಸಿದ್ದರಾಮಯ್ಯಗೆ ತನಿಖಾ ವರದಿಯನ್ನು ಸಲ್ಲಿಸಿದೆ ಇದೀಗ…

Read More

ಮೈಸೂರು : ನಾಳೆ ನಡೆಯುವ ಬಜೆಟ್ ನಲ್ಲಿ ನಮಗೆ ಯಾವುದೇ ರೀತಿಯಾದ ನಿರೀಕ್ಷೆಗಳಿಲ್ಲ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಕಾಂಗ್ರೆಸ್ ನವರೇ ನಿರ್ನಾಮ ಮಾಡುತ್ತಾರೆ ಎಂದು ಮೈಸೂರಿನಲ್ಲಿ ಬಿಜೆಪಿಯ ಮಾಜಿ ಸಚಿವ ಡಾ. ಅಶ್ವತ್ ನಾರಾಯಣ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಾಳೆಯ ಬಜೆಟ್ ಮೇಲೆ ನಮಗೆ ಯಾವುದೇ ನಿರೀಕ್ಷೆ ಇಲ್ಲ. ಆಡಳಿತ ಪಕ್ಷದ ಶಾಸಕರಿಗೆ ತೃಪ್ತಿ ಇಲ್ಲ. ಒಬ್ಬರ ಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣ ಎಂಬಂತಾಗಿದೆ. ಇಂಥವರು ಮಂಡಿಸುವ ಬಜೆಟ್ ಮೇಲೆ ನಿರೀಕ್ಷೆಯಿಲ್ಲ. ಏನೇ ಘೋಷಣೆಯಾದರೂ ಕೇವಲ ಪೇಪರ್ ನಲ್ಲಿ ಇರುತ್ತದೆ ಎಂದು ಕಿಡಿ ಕಾರಿದರು. ಜಾತಿ ಧರ್ಮಗಳ ನಡುವೆ ಎತ್ತಿ ಕಟ್ಟುವುದರಲ್ಲಿ ನಿಸೀಮರು. ಕಂಡ ಕಂಡಲ್ಲಿ ಚೀಲವನ್ನು ಹಿಡಿದುಕೊಂಡು ನಿಂತಿದ್ದಾರೆ. ಕುಟುಂಬಸ್ಥರೇ ಏಜೆಂಟ್ ಬ್ರೋಕರ್ ಗಳಾಗಿದ್ದಾರೆ.ಇದು ಬಂಡಗೆಟ್ಟ ಸರ್ಕಾರ ಎಂದು ಕಾಂಗ್ರೆಸ್ ಪಕ್ಷದವರೇ ಕಾಂಗ್ರೆಸ್ ಅನ್ನು ನಿರ್ನಾಮ ಮಾಡುತ್ತಾರೆ ಎಂದು ಮೈಸೂರಿನಲ್ಲಿ ಅಶ್ವಥ್ ನಾರಾಯಣ್ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಇನ್ನೂ ಬಿಜೆಪಿಯ ಶಾಸಕರ ವಿರುದ್ಧ FIR…

Read More

ಬೆಂಗಳೂರು :ರಾಜ್ಯದ ಜನತೆಗೆ ಆಹಾರ ಇಲಾಖೆ ಸಿಹಿ ಸುದ್ದಿ ಒಂದನ್ನು ನೀಡಿದ್ದು ಹೊಸದಾಗಿ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ಅರ್ಜಿ ಸಲ್ಲಿಸಿರುವವರಿಗೆ ಮಾರ್ಚ್ 31 ರೊಳಗೆ ಪರಿಶೀಲನೆ ನಡೆಸಿ ಏಪ್ರಿಲ್ 1 ರಿಂದ ವಿತರಣೆ ಮಾಡುತ್ತೇವೆ ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದರು. ವಿಧಾನಸಭೆಯ ಪ್ರಶ್ನೋತ್ತರ ವೇಳೆ ಶಾಸಕಿ ನಯನಾ ಮೋಟಮ್ಮ ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಹಿಂದಿನ ಸರ್ಕಾರ 2.95 ಲಕ್ಷ ಕಾರ್ಡ್​ಗಳನ್ನು ವಿತರಿಸದೆ ಬಾಕಿ ಉಳಿಸಿಕೊಂಡಿತ್ತು. ಆದರೆ ನಾವು ಇಲ್ಲಿಯವರೆಗೆ 57 ಸಾವಿರ ಹೊಸ ಕಾರ್ಡ್ ವಿತರಿಸಿದ್ದೇವೆ. ಆರೋಗ್ಯ ಚಿಕಿತ್ಸೆಗಾಗಿ ಅರ್ಜಿ ಸಲ್ಲಿಸಿದವರಿಗೆ ತಕ್ಷಣ ಕಾರ್ಡ್ ವಿತರಿಸಲು ಸೂಚಿಸಿದ್ದೇವೆ. ಇನ್ನು 5 ಕೆಜಿ ಅಕ್ಕಿಯ ಹಣ ಬರದವರಿಗೆ ಅರಿಯರ್ಸ್ ಕೊಡುವ ಬಗ್ಗೆ ಸರ್ಕಾರ ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ಆದರೆ 100ಕ್ಕೆ 90ರಷ್ಟು ಪಡಿತರ ಕಾರ್ಡ್‌ದಾರರಿಗೆ ಐದು ಕೆಜಿ ಅಕ್ಕಿಯ ಹಣ ಕೊಟ್ಟಿದ್ದೇವೆ. ಶೇ 5 ರಷ್ಟು ಏರುಪೇರು ಇದರಲ್ಲಿ ಇದೆ, ಅದನ್ನೂ ಸರಿಪಡಿಸುತ್ತೇವೆ. ಹೊಸ ಕಾರ್ಡ್​ಗಳಿಗೆ ಅರ್ಜಿ ಬಂದರೆ…

Read More

ಬೆಂಗಳೂರು: ಕೊಪ್ಪಳ ಜಿಲ್ಲೆಯ ಹಾಲವರ್ತಿ ಗ್ರಾಮದಲ್ಲಿ ದಲಿತರಿಗೆ ಹೋಟೆಲ್‌ ಪ್ರವೇಶ ನಿಷೇಧ ಮಾಡಿದ್ದಾರೆ ಎನ್ನುವುದನ್ನು ಸಹಿಸಲು ಸಾಧ್ಯವಿಲ್ಲ. ಸಂಬಂಧಪಟ್ಟವರ ವಿರುದ್ಧ ಕೂಡಲೇ ಕ್ರಮ ಜರುಗಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರೂ ಆದ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಹಾಲವರ್ತಿ ಗ್ರಾಮದಲ್ಲಿನ ಘಟನೆ ನನ್ನ ಗಮನಕ್ಕೆ ಬಂದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಗ್ರಾಮಕ್ಕೆ ಭೇಟಿ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು. ನಾನು ಒಬ್ಬ ದಲಿತ ಮಂತ್ರಿಯಾಗಿದ್ದು, ಇದನ್ನು ಸಹಿಸಲು ಸಾಧ್ಯವಿಲ್ಲ. ಈ ಸಂಬಂಧ ಅಲ್ಲಿನ ಜನರಲ್ಲಿ ಜಾಗೃತಿ ಮೂಡಿಸಲಾಗುವುದು. ಜಾಗೃತಿ ಬಳಿಕವೂ ಅದೇ ರೀತಿ ಮುಂದುವರೆದರೆ ಅಂತಹವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಿದರು. ಕೂಡಲೇ ಗ್ರಾಮಸ್ಥರೊಂದಿಗೆ ಸಭೆ ನಡೆಸುವಂತೆ ಸೂಚನೆ ನೀಡಲಾಗಿದೆ. ಈಗಾಗಲೇ ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಜಿಲ್ಲೆಯಲ್ಲಿ ಇಂತಹ ಪ್ರಕರಣ ಮತ್ತೊಮ್ಮೆ ಮರುಕಳಿಸುವ ಪ್ರಶ್ನೆಯೇ ಇಲ್ಲ…

Read More

ಹಾಸನ : ಒಂದೇ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುವ ಇಬ್ಬರು ಸ್ನೇಹಿತರ ನಡುವೆ ಕೇವಲ 50 ರುಪಾಯಿಗೆ ಜಗಳ ನಡೆದಿದ್ದು, ವಿಕೋಪಕ್ಕೆ ತಿರುಗಿ ಸ್ನೇಹಿತನೊಬ್ಬ ತನ್ನ ಇನ್ನೊಬ್ಬ ಸ್ನೇಹಿತನನ್ನು ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಶ್ರವಣಬೆಳಗೊಳದ ಅರುವನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಇಬ್ಬರು ಒಂದೂ ಊರಿನ ಸ್ನೇಹಿತರು. ಇಬ್ಬರೂ ಒಂದೇ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುವವರಾಗಿದ್ದಾರೆ. ನಿನ್ನೆ ಕೂಡ ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ಮುಗಿಸಿ ರಾತ್ರಿ ಮದ್ಯಪಾನ ಮಾಡಲು ಬಂದಿದ್ದ ವೇಳೆ ಇಬ್ಬರ ನಡುವೆ 50 ರೂ. ವಿಚಾರಕ್ಕೆ ಜಗಳ ಆರಂಭವಾಗಿದೆ. ಹೀಗೆ ಆರಂಭವಾದ ಜಗಳ ಒಬ್ಬ ಸ್ನೇಹಿತನ ಕೊಲೆಯಲ್ಲಿ ಅಂತ್ಯವಾಗಿದೆ. ಮದ್ಯಪಾನ ಮಾಡುವ ವೇಳೆ ಐವತ್ತು ರೂಪಾಯಿಗೆ ಸ್ನೇಹಿತರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ರಾಮಚಂದ್ರ ಸಂಜೀವಪ್ಪನವರ (42) ಕೊಲೆಯಾದ ದುರ್ದೈವಿ ಎಂದು ಹೇಳಲಾಗುತ್ತಿದೆ. ರುದ್ರಯ್ಯ ಕೊಂಗವಾಡ ಕೊಲೆ ಆರೋಪಿಯಾಗಿದ್ದಾನೆ. ಎರಡು ವಾರಗಳ ಹಿಂದೆ ಇಟ್ಟಿಗೆ ಕಾರ್ಖಾನೆಗೆ ಕೂಲಿ…

Read More

ಬಳ್ಳಾರಿ : ಬಳ್ಳಾರಿಯ ತಾಳೂರು ರಸ್ತೆ ಪಕ್ಕದಲ್ಲಿರುವ ವಸತಿ ನಿಲಯದಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದಲ್ಲಿ ಅವ್ಯವಸ್ಥೆ ಕಂಡುಬಂದಿದ್ದು, ವಿದ್ಯಾರ್ಥಿಗಳಿಗೆ ಹುಳು ಮಿಶ್ರಿತ ಆಹಾರವನ್ನು ವಿತರಿಸಲಾಗುತ್ತಿದೆ ಎಂದು ಆರೋಪ ಕೇಳಿ ಬಂದಿದೆ. ಅರೇಬೆಂದ ಅನ್ನ ಹಾಗೂ ಊಟದಲ್ಲಿ ಹೊಳು ನೋಡಿ ವಿದ್ಯಾರ್ಥಿಗಳು ಆಕ್ರೋಶ ಹೊರ ಹಾಕಿದ್ದಾರೆ ಹಾಸ್ಟೆಲ್ ಅಡುಗೆ ಸಿಬ್ಬಂದಿ ಹಾಗೂ ಹಾಸ್ಟೆಲ್ ಸಿಬ್ಬಂದಿ ವಿರುದ್ಧ ಆಕ್ರೋಶರಾಗಿದ್ದು ಅವರನ್ನು ಬದಲಾಯಿಸಲು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ. ಇದೆ ವೇಳೆ ವಿದ್ಯಾರ್ಥಿ ಒಬ್ಬ ಮಾತನಾಡಿದ್ದು ಮೊಟ್ಟೆಗಳನ್ನೆಲ್ಲನು ಅರೆಬರೆ ಬೇಯಿಸಲಾಗುತ್ತದೆ ಅಲ್ಲದೆ ಅಡಿಗೆ ತಯಾರಿಕ ಮುಂಚೆ ಯಾವುದೇ ರೀತಿಯಾದ ಆಹಾರ ಪದಾರ್ಥಗಳನ್ನು ಸ್ವಚ್ಛಗೊಳಿಸುವುದಿಲ್ಲ ಹಾಗೆ ಹಾಕುವುದರಿಂದ ಊಟದಲ್ಲಿ ಹುಳು ಪತ್ತೆ ಆಗುತ್ತಿವೆ ಹೀಗಾದರೆ ನಮ್ಮ ಆರೋಗ್ಯಕ್ಕೆ ಹೊಣೆ ಯಾರು? ಆದರಿಂದ ತಕ್ಷಣ ಅಡುಗೆ ಸಿಬ್ಬಂದಿ ಹಾಗು ವಾರ್ಡಿನನ್ನು ಬದಲಾಯಿಸಬೇಕು ಎಂದು ಒತ್ತಾಯಿಸಿದರು. https://kannadanewsnow.com/kannada/congress-leader-slaps-doctor-over-car-parking-issue-in-belagavi/ https://kannadanewsnow.com/kannada/mangaluru-school-row-case-registered-against-six-persons-including-two-bjp-mlas/ https://kannadanewsnow.com/kannada/state-govt-launches-baby-ambulance-heres-whats-special-about-it/

Read More