Author: kannadanewsnow05

ಹಾವೇರಿ : ಸಾಮಾನ್ಯವಾಗಿ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದನ್ನು ಕೇಳಿದ್ದೇವೆ. ಆದರೆ ವಿದ್ಯೆ ಕಲಿಸುವ ಗುರು ಒಬ್ಬ ವಿದ್ಯಾರ್ಥಿಯ ಶಾಲಾ ಪ್ರವೇಶಕ್ಕೆ 10 ಸಾವಿರ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬೆಲೆಗೆ ಬಿದ್ದಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ಹೌದು ಹಾವೇರಿ ಜಿಲ್ಲೆಯ ಸವಣೂರಿನ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ವಿದ್ಯಾರ್ಥಿಯೊಬ್ಬರಿಗೆ ಪ್ರವೇಶ ನೀಡಲು 10 ಸಾವಿರ ರೂ. ಲಂಚ ಪಡೆದ ಆರೋಪದ ಮೇಲೆ ಮಂಜುನಾಥ ಕಲ್ಲಪ್ಪ ಕಾಟೇನಹಳ್ಳಿ ಎಂಬ ಮುಖ್ಯ ಶಿಕ್ಷಕನನ್ನು ಆತನ ಮನೆಯಲ್ಲೇ ಬಂಧಿಸಲಾಗಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ. ಪುತ್ರನ ಶಾಲಾ ಪ್ರವೇಶಕ್ಕೆ 50 ರೂ. ಸಾವಿರ ಲಂಚ ನೀಡುವಂತೆ ಸವಣೂರಿನ ಖಾದರಭಾಗ ಓಣಿಯ ನಿವಾಸಿ ಅಕ್ಬರ್ ಅವರಿಗೆ ಆರೋಪಿ ಮಂಜುನಾಥ ಬೇಡಿಕೆ ಇಟ್ಟಿದ್ದ. ಹಣ ಇಲ್ಲವೆಂದಾಗ, 10 ರೂ. ಸಾವಿರ ಕೊಡುವಂತೆ ಒತ್ತಾಯಿಸಿದ್ದ. ಮನೆಗೆ ಕರೆಸಿಕೊಂಡು 5 ಸಾವಿರ ರೂ. ಮುಂಗಡವಾಗಿ ಪಡೆದಿದ್ದ. ಈ ಬಗ್ಗೆ ಅಕ್ಬರ್ ಲೋಕಾಯುಕ್ತ…

Read More

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಂತ ಹಂತವಾಗಿ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಅದರಲ್ಲಿ ಮಹಿಳೆಯರಿಗೆ ಪ್ರಮುಖವಾಗಿ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ಮಾಡಿತು. ಈಗ ಡಿಸಿಎಂ ಡಿಕೆ ಶಿವಕುಮಾರ್ ಗೃಹಲಕ್ಷ್ಮಿ ಯೋಜನೆ ಪ್ರತಿ ತಿಂಗಳು ಹಾಕುತ್ತೇವೆ ಅಂತ ಹೇಳಿಲ್ಲ ಎಂದು ಹೇಳಿಕೆ ನೀಡಿದ್ದರು. ಇದೀಗ ತಮ್ಮ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದು, ನೀವು ಟ್ಯಾಕ್ಸ್ ಸರಿಯಾದ ಸಮಯಕ್ಕೆ ನೀಡಿದರೆ ನಾವು ಗೃಹಲಕ್ಷ್ಮಿ ಹಣ ಹಾಕ್ತೇವೆ ಸರಿಯಾಗಿ ನೀಡಿದರೆ ನಾವು ಗೃಹಲಕ್ಷ್ಮಿ ಹಣ ಸರಿಯಾಗಿ ಹಾಕ್ತೇವೆ ಎಂದು ಸಮರ್ಥಿಸಿಕೊಂಡಿದ್ದಾರೆ. ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಪ್ರತಿ ತಿಂಗಳು ಹಣ ಹಾಕಲ್ಲ ಎಂಬ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದರು. ನಾವು ಘೋಷಣೆ ಮಾಡಿದಂತೆ 2,000 ಹಣ ನೀಡುತ್ತಿದ್ದೇವೆ. ಆದರೆ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆ ಹಣ ಹಾಕುತ್ತೇವೆ ಎಂದು ಹೇಳಿಲ್ಲ. ನೀವು ಟ್ಯಾಕ್ಸ್ ಸರಿಯಾದ ಸಮಯಕ್ಕೆ ನೀಡಿ ಅದರಂತೆ ನಾವು ಹಾಕುತ್ತೇವೆ.…

Read More

ನವದೆಹಲಿ : ಕಳೆದ 2020ರಲ್ಲಿ ಇಡೀ ಜಗತ್ತನ್ನೇ ತಲ್ಲಣಗೊಳಿಸಿದ್ದ ಕೊರೋನ ಮಹಾಮಾರಿ ಸೋಂಕು ಇದೀಗ ಮತ್ತೆ ವಕ್ಕರಿಸಿದ್ದು ಈಗಾಗಲೇ ಸಿಂಗಾಪುರ್ ಹಾಂಕಾಂಗ್ ನಲ್ಲಿ ಕೋರೊನಾ ಸೋಂಕು ಮತ್ತೆ ಹೆಚ್ಚಾಗಿದೆ. ಅಲ್ಲದೇ ಭಾರತದಲ್ಲಿ ಕೊರೊನಾ ಸೋಂಕು ಮತ್ತೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹೌದು 2020 ರಿಂದ 22ರ ಅವಧಿಯಲ್ಲಿ ಇಡೀ ಜಗತ್ತಿನಾದ್ಯಂತ ಕೊರೋನ ಎಂಬ ಮಹಾ ಮಾರಿ ರೋಗ ಅಬ್ಬರಿಸಿತ್ತು. ಇದೀಗ ಮತ್ತೆ ಕೊರೋನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಈಗಾಗಲೇ ಸಿಂಗಾಪುರ ಮತ್ತು ಹಾಂಕಾಂಗ್ ದೇಶಗಳಲ್ಲಿ ಕೋರೋನ ಸೋಂಕು ಹೆಚ್ಚಾಗಿದೆ. ಹಾಗಾಗಿ ತಜ್ಞರ ಜೊತೆಗೆ ಕೇಂದ್ರ ಆರೋಗ್ಯ ಸಚಿವಾಲಯ ಮಹತ್ವದ ಸಭೆ ನಡೆಸಿದೆ. ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ, ತುರ್ತು ವೈದ್ಯಕೀಯ ಪರಿಹಾರ ವಿಭಾಗ, ವಿಪತ್ತು ನಿರ್ವಹಣಾ ಕೋಶ, ಸಂಶೋಧನಾ ಮಂಡಳಿ ಅಧಿಕಾರಿಗಳೊಂದಿಗೆ, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಅಧಿಕಾರಿಗಳು ಹಾಗು ಆರೋಗ್ಯ ಸೇವಾ ಮಹಾನಿರ್ದೇಶಕರ ನೇತೃತ್ವದಲ್ಲಿ ಸಭೆ ನಡೆದಿದೆ.

Read More

ಮಂಗಳೂರು : ಇತ್ತೀಚಿಗೆ ಮಂಗಳೂರಿನಲ್ಲಿ ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು ಪ್ರಕರಣ ಸಂಬಂಧ ಪೊಲೀಸರು ಹಲವು ಆರೋಪಿಗಳನ್ನು ಅರೆಸ್ಟ್ ಮಾಡಿದ್ದರು ಅದರಲ್ಲಿ ಪ್ರಮುಖ ಆರೋಪಿ ನೌಷಾದ್ ಸಹ ಒಬ್ಬ. ಇದೀಗ ಚೋಟ್ಟೆ ನೌಷಾದ್ ಮೇಲೆ ಹಲ್ಲೆ ನಡೆಸಲಾಗಿದೆ. ಹೌದು ಮಂಗಳೂರು ಸೆಂಟ್ರಲ್ ಜೈಲಿನ ಬಿ ಬ್ಯಾರಕ್ ನಲ್ಲಿರುವ ಸಹ ಕೈದಿಗಳು ನೌಷಾದ್ ಮೇಲೆ ಹಲ್ಲೆ ಮಾಡಿದ್ದಾರೆ. ಕಲ್ಲು ಮತ್ತು ಸಿಕ್ಕಸಿಕ್ಕ ವಸ್ತುಗಳಿಂದ ಸಹ ಕೈದಿಗಳು ದಾಳಿ ನಡೆಸಿದ್ದಾರೆ. ಹಲವು ಸಹ ಕೈದಿಗಳಿಂದ ಹಲ್ಲೆ ನಡೆಸಿದ್ದು ಅದೃಷ್ಟವಶಾತ್ ನೌಷಾದ್ ಪಾರಾಗಿದ್ದಾನೆ. ಹಿಂದೂ ಕಾರ್ಯಕರ್ತ ಸುಹಾಸ್ ಕೊಲೆ ಪ್ರಕರಣದ ಆರೋಪಿ ಚೊಟ್ಟೆ ನೌಷಾದ್ ಪೊಲೀಸ್ ಕಸ್ಟಡಿ ಅವಧಿ ಇಂದು ಅಂತ್ಯವಾಗಿತ್ತು. ಈ ವೇಳೆ ಪೊಲೀಸರು ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಬಳಿಕ ಆರೋಪಿಯನ್ನು ಮೈಸೂರು ಜಲಿಗೆ ಶಿಫ್ಟ್ ಮಾಡಲು ಸಿದ್ಧತೆ ಮಾಡಿಕೊಟ್ಟಿದ್ದಾರೆ ಈ ವೇಳೆಯಲ್ಲಿ ಯಾರನ್ನು ನೋಡಬೇಕು ಅಂತ ಹೇಳಿದ್ದಾನೆ ಜೈಲಿನಲ್ಲಿ ಮತ್ತೋರ್ವ ಕೈದಿ ಭೇಟಿಯಾಗಿ ಪೊಲೀಸರು…

Read More

ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ಮುಂಗಾರು ಹಂಗಾಮಿನ ಮಳೆ ಶುರುವಾಗಿದ್ದು, ಕಳೆದ ಕೆಲವು ದಿನಗಳಿಂದ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿದೆ. ಇದೀಗ ಬೆಂಗಳೂರಲ್ಲಿ ಕಳೆದ 24 ಗಂಟೆಗಳಲ್ಲಿ 103 ಮಿ.ಮೀ ದಾಖಲೆಯ ಮಳೆಯಾಗಿದೆ. ಮಳೆಯ ರೌದ್ರಾವತಾರದಿಂದ ಬರೊಬ್ಬರಿ 10 ಕಿ.ಮೀ ವರೆಗೂ ಟ್ರಾಫಿಕ್ ಜಾಮ್ ಉಂಟಾಗಿರುವ ಘಟನೆ ನಡೆದಿದೆ. ಹೌದು ಬೆಂಗಳೂರಿನಲ್ಲಿ ಧಾರಾಕಾರ ಮಳೆ ಆಗುತ್ತಿರುವ ಕುರಿತು ಸಾಮಾಜಿಕ ಜಾಲತಾಣ ಟ್ವೀಟರ್ ನಲ್ಲಿ, @karnataka portfolio ಎಂಬ ಖಾತೆ ವಿಡಿಯೋ ಒಂದನ್ನು ಹಂಚಿಕೊಂಡಿದ್ದು ಬೆಂಗಳೂರು ನಗರದಲ್ಲಿ ಭಾರಿ ಮಳೆ ಸುರಿಯುತ್ತಿರುವುದು ಈ ವಿಡಿಯೋದಲ್ಲಿ ಸೆರೆಯಾಗಿದೆ.ಈ ಕುರಿತು ಮಾಹಿತಿ ನೀಡಿರುವ ಹವಾಮಾನ ಇಲಾಖೆ ಬೆಂಗಳೂರಿನಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲೆಯ 103 ಮಿಮೀ ಮಳೆಯಾಗಿದೆ. ಮುಂಬರುವ ದಿನಗಳಲ್ಲಿ ನಗರದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಬೆಂಗಳೂರಿನಲ್ಲಿ ಸುರಿದ ದಾಖಲೆಯ ಮಳೆಯಿಂದಾಗಿ ಬೆಂಗಳೂರಿನಲ್ಲಿ ಭಾರಿ ಉದ್ದದ ಟ್ರಾಫಿಕ್ ಜಾಮ್ ಉಂಟಾಗಿತ್ತು. ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್…

Read More

ಬೆಂಗಳೂರು : ಬೆಂಗಳೂರಿನಲ್ಲಿ ಮಳೆಯಿಂದ ಭಾರಿ ಅವಾಂತರಗಳು ಸೃಷ್ಟಿಯಾಗಿದ್ದು, ಹಲವಾರು ಪ್ರದೇಶಗಳಲ್ಲಿ ರಸ್ತೆಗಳು ಸಂಪೂರ್ಣವಾಗಿ ನದಿಯಂತೆ ಆಗಿವೆ. ಈ ವಿಚಾರವಾಗಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ ಟ್ವೀಟ್ ಮಾಡಿದ್ದಾರೆ. ಈ ಸಂಬಂಧ ಡಿಕೆ ಶಿವಕುಮಾರ್ ಅವರು ಎಚ್ ಡಿ ಕುಮಾರಸ್ವಾಮಿ ಹಾಗೂ ಆರ್ ಅಶೋಕ್ ಸೇರಿದಂತೆ ಯಾರಾದರೂ ಬೆಂಗಳೂರು ಮಳೆ ಅವಾಂತರ ಕುರಿತಂತೆ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದ್ದಾರೆ. ಬಿಬಿಎಂಪಿ ಕೇಂದ್ರ ಕಚೇರಿಗೆ ಭೇಟಿ ನೀಡಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಳೆ ಕುರಿತು ಎಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿರುವ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದು, ಎಚ್ ಡಿ ಕುಮಾರಸ್ವಾಮಿ ಅವರು ಹತಾಶರಾಗಿದ್ದಾರೆ. ಕುಮಾರಸ್ವಾಮಿ ಸೇರಿ ಬಿಜೆಪಿಗರು ಕೂಡ ನಮ್ಮನ್ನು ಹಾಗೂ ನಮ್ಮ ಸರ್ಕಾರ ನೋಡಿ ಹತಾಶರಾಗಿದ್ದಾರೆ ಎಂದರು. ನಮ್ಮ ಸಾಧನೆ ನೋಡಿ, ಅವಕಾಶ ಸಿಕ್ಕಿಲ್ಲ ಅಂತ ಎಚ್ ಡಿ ಕುಮಾರಸ್ವಾಮಿ ಅವರಿಗೆ ಹತಾಶೆ ಆಗಿದ್ದಾರೆ. ವಿಪಕ್ಷ ನಾಯಕ…

Read More

ಮೈಸೂರು : ಇತ್ತೀಚಿನ ದಿನಗಳಲ್ಲಿ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಶುರುವಾಗಿ ಕೊಲೆಯಲ್ಲಿ ಅಂತ್ಯವಾಗುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ ಇದೀಗ ಕೇವಲ ಮಾವಿನ ಕಾಯಿ ಕುಯ್ಯುವ ವಿಚಾರಕ್ಕೆ ಶುರುವಾದ ಗಲಾಟೆ ಓರ್ವ ವ್ಯಕ್ತಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಶಂಕಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮಲ್ಲೇಶ್ ಎಂದು ತಿಳಿದುಬಂದಿದೆ. ಇನ್ನು ಮಲ್ಲೇಶ್ ನನ್ನು ಚಾಕುವಿನಿಂದ ಇರಿದು ಹತ್ಯೆಗೈದ ಆರೋಪಿಯನ್ನು ಮಲ್ಲೇಶ್ ತಮ್ಮನ ಮಗ ಚೇತನ್ ಎಂದು ತಿಳಿದುಬಂದಿದೆ. ಶಂಕಹಳ್ಳಿಯಲ್ಲಿರುವ ಜಮೀನಿನಲ್ಲಿ ಮಲ್ಲೇಶ್ ವ್ಯವಸಾಯ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಜಮೀನು ವಿಚಾರದಲ್ಲಿ ವಿವಾದ ಶುರುವಾಗಿ ನ್ಯಾಯಾಲಯದ ಮೆಟ್ಟಿಲೇರಿತ್ತು. ಈ ವೇಳೆ ಮಲ್ಲೇಶ್ ಜಮೀನಿನಲ್ಲಿದ್ದ ಮಾವಿನ ಮರದಿಂದ ಕಾಯಿಗಳನ್ನ ಕೀಳಿಸುವಾಗ ಚೇತನ್ ಕಿರೀಕ್ ತೆಗೆದಿದ್ದಾನೆ. ಈ ವೇಳೆ ಮಾತಿಗೆ ಮಾತು ಬೆಳೆದಿದೆ. ಚೇತನ್ ಜೊತೆ ಸರಿತಾ, ಪ್ರವೀಣ, ಪವನ್, ಮಂಜುಳ, ಕರಿಗೌಡ ಸಹ ಸೇರಿ ಗಲಾಟೆ ಮಾಡಿದ್ದಾರೆ. ಈ ವೇಳೆ ಚೇತನ್ ತನ್ನ ಬಳಿ ಇದ್ದ ಚಾಕುವಿನಿಂದ ಮಲ್ಲೇಶ್ ಗೆ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದ್ದು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಬೇಕಿತ್ತು, ಆದರೆ ಇಂದು ಕೂಡ ಭಾರಿ ಮಳೆಯಿಂದಾಗಿ ಸಿಟಿ ರೌಂಡ್ ರದ್ದುಗೊಳಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿರುವ ಕಂಟ್ರೋಲ್ ರೂಮ್ಗೆ ತೆರಳಿದರು. ಬಳಿಕ ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಅಧಿಕಾರಿಗಳಿಂದ ಮಳೆ ಹಾನಿ ಪ್ರದೇಶಗಳ ಕುರಿತಂತೆ ಮಾಹಿತಿ ಪಡೆದುಕೊಂಡರು. ಬಳಿಕ ಸುದ್ದಿಗೋಷ್ಠಿ ನಡೆಸಿದ ಸಿಎಂ ಸಿದ್ದರಾಮಯ್ಯ, ಟ್ರಾಫಿಕ್ ಜಾಮ್ ಆಗುತ್ತದೆ ಎಂದು ಇಂದಿನ ಸಿಟಿ ರೌಂಡ್ಸ್ ರದ್ದು ಮಾಡಿದ್ದೇವೆ. ಬೆಂಗಳೂರಿನಲ್ಲಿ ತಗ್ಗು ಪ್ರದೇಶಗಳನ್ನು ಗುರುತಿಸಿದ್ದೇವೆ, ರಾಜಕಾಲುವೆ ಕೆಲಸ ಪ್ರಗತಿಯಲ್ಲಿದೆ. 166 ಸೂಕ್ಷ್ಮ ಅತೀ ಸೂಕ್ಷ್ಮ ಪ್ರದೇಶಗಳಲ್ಲಿ ಕೆಲಸ ನಡೆದಿದೆ. ನಾಡಿದ್ದು ಇಡೀ ದಿನ ಬೆಂಗಳೂರು ನಗರ ಪ್ರದಕ್ಷಿಣೆ ಮಾಡುತ್ತೇವೆ. ಎಲ್ಲೆಲ್ಲಿ ಅನಾಹುತ ಆಗಿದೆ ಅಲ್ಲೆಲ್ಲ ನಾವು ಭೇಟಿ ನೀಡುತ್ತೇವೆ. ಜನರಿಂದ ಸಮಸ್ಯೆ ಆಲಿಸಿ ಅಧಿಕಾರಿಗಳಿಗೆ…

Read More

ನವದೆಹಲಿ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಂಎಲ್ಸಿ ಸಿಟಿ ರವಿ ಅವರು ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಇದೀಗ ಸುಪ್ರೀಂಕೋರ್ಟ್ ಸಿಟಿ ರವಿ ಪ್ರಕರಣಕ್ಕೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ ಈ ಮೂಲಕ ಸಿ ಟಿ ರವಿ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಹೌದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ್​ಗೆ ಅವಾಚ್ಯ ಪದದಿಂದ ನಿಂದನೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿಗೆ ಸುಪ್ರೀಂಕೋರ್ಟ್​ ಬಿಗ್ ರಿಲೀಫ್ ನೀಡಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​ಗೆ​ ಅವಾಚ್ಯ ಪದದಿಂದ ನಿಂದನೆ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ವಿರುದ್ಧ ಪ್ರಕರಣಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಬಿಜೆಪಿ ಶಾಸಕ ಸಿ.ಟಿ. ರವಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್​​ ನಿರಾಕರಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸಿಟಿ…

Read More

ಬೆಂಗಳೂರು : ಬೆಂಗಳೂರಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆ ಆಗುತ್ತಿದ್ದು ಬೆಂಗಳೂರಿನ ಪ್ರಮುಖ ರಸ್ತೆಗಳೆಲ್ಲವೂ ಸಂಪೂರ್ಣವಾಗಿ ಮಳೆ ನೀರಿನಿಂದ ತುಂಬಿಕೊಂಡು ನದಿಯಂತೆ ಆಗಿವೆ. ಇನ್ನು ಭಾರಿ ಮಳೆಯಿಂದಾಗಿ ಗೋಡೆ ಕೊಸಿದು ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎನ್ನಲಾಗಿದ್ದು, ಹಿನ್ನೆಲೆ ಇದೀಗ ಸಿಎಂ ಸಿದ್ದರಾಮಯ್ಯರ ಬೆಂಗಳೂರು ನಗರ ಪ್ರದಕ್ಷಿಣೆ ರದ್ದಾಗಿದೆ. ಹೌದು ಮಳೆ ಹಾನಿ ಪ್ರದೇಶ ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ನಗರ ಪ್ರದಕ್ಷಣೆ ರದ್ದಾಗಿದೆ. ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಬೇಕಿತ್ತು. ಆದರೆ ಬೆಂಗಳೂರಿನಲ್ಲಿ ಭಾರಿ ಮಳೆ ಸುರಿಯುತ್ತಿರುವುದರಿಂದ ಸಿಟಿ ರೌಂಡ್ಸ್ ಗೆ ತೊಂದರೆ ಆಗುತ್ತಿರುವ ಹಿನ್ನೆಲೆಯಲ್ಲಿ ಸಿಟಿ ರೌಂಡ್ಸ್ ರದ್ದಾಗಿದೆ. ಬೆಂಗಳೂರಿನಲ್ಲಿ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ, ಇದೀಗ ಸಿಎಂ ಸಿದ್ದರಾಮಯ್ಯ ಸಿಟಿ ರೌಂಡ್ ಕ್ಯಾನ್ಸಲ್ ಮಾಡಿ ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿರುವ ಕಂಟ್ರೋಲ್ ರೂಮ್ಗೆ ತೆರಳಿದ್ದಾರೆ. ವಿಶೇಷ ಬಸ್ ನಲ್ಲಿ ಕಂಟ್ರೋಲ್ ರೂಂಗೆ ಸಿದ್ದರಾಮಯ್ಯ ತೆರಳಿದ್ದಾರೆ. ಮಳೆ…

Read More