Subscribe to Updates
Get the latest creative news from FooBar about art, design and business.
Author: kannadanewsnow05
ಮಂಗಳೂರು : ಓಲಾ, ಊಬರ್ ಆ್ಯಪ್ ಬಳಸಿ ಟ್ಯಾಕ್ಸಿ ಹಾಗೂ ಆಟೋ ಬುಕ್ ಮಾಡುವಂತೆ ಇನ್ನು ಮುಂದೆ ರಾಜ್ಯದಲ್ಲಿ ಆ್ಯಂಬುಲೆನ್ಸ್ಗಳನ್ನು ಕೂಡ ಕರೆಸಬಹುದು. ಈಗಾಗಲೇ ಗುರು ಗ್ರಾಮದಲ್ಲಿ ಖಾಸಗಿ ಕಂಪನಿ ಯೊಂದು ಇಂತಹ ಸೇವೆ ಆರಂಭಿಸಿದ್ದು, ಅದೇ ಮಾದರಿ ಯಲ್ಲಿ ರಾಜ್ಯ ಸರ್ಕಾರ ಕೂಡ ಆ್ಯಂಬುಲೆನ್ಸ್ ಸೇವೆ ಕಲ್ಪಿಸಲು ಮುಂದಾಗಿದೆ. ಈ ಆ್ಯಂಬುಲೆನ್ಸ್ ಗಳಿಗೆ ಸರ್ಕಾರವೇ ದರ ನಿಗದಿ ಮಾಡಲಿದೆ. ಕಾರವಾರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ದಿನೇಶ್ ಗುಂಡುರಾವ್, ಅಗತ್ಯ ಇರುವವರು ಮೊಬೈಲ್ ಆ್ಯಪ್ ಬಳಸಿ ಸೇವೆ ಪಡೆಯಬಹುದಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಇದಕ್ಕಾಗಿ ರಾಜ್ಯದಲ್ಲಿನ ವೈದ್ಯಕೀಯ ಆ್ಯಂಬು ಲೆನ್ಸ್ ಸೇವೆಯನ್ನು ಇನ್ನು ಮುಂದೆ ಕರ್ನಾಟಕ ಖಾಸಗಿ ವೈದ್ಯ ಸಂಸ್ಥೆ (ಕೆಪಿಎಂಇ) ಕಾನೂನಿನ ಅಡಿ ಯಲ್ಲಿ ತರಲು ನಿರ್ಧರಿಸಿದ್ದು, ಈ ಕುರಿತಂತೆ ಬರುವವಿಧಾನಸಭೆಯ ಅಧಿವೇಶನದಲ್ಲಿ ಕಾಯಿದೆ ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ. ಬುಧವಾರಪತ್ರಿಕಾಗೋಷ್ಠಿಯಲ್ಲಿಮಾತನಾಡಿದ ಅವರು, ರಾಜ್ಯದಲ್ಲಿಪ್ರಸ್ತುತ ಇರುವ ಆ್ಯಂಬುಲೆನ್ಸ್ ಒದಗಿಸುತ್ತಿರುವ ಸೇವೆಗಳು ಮತ್ತು ಗುಣಮಟ್ಟದ ಬಗ್ಗೆ…
ಉತ್ತರಕನ್ನಡ : ಉತ್ತರಕನ್ನಡದಲ್ಲಿ ಘೋರ ಘಟನೆ ನಡೆದಿದ್ದು, ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ನಾಲ್ವರು ನಾಪತ್ತೆಯಾಗಿದ್ದು, ಇಬ್ಬರನ್ನು ರಕ್ಷಣೆ ಮಾಡಲಾಗಿದೆ. ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಂಡಿ ಬಳಿ ಈ ಒಂದು ಘಟನೆ ನಡೆದಿದೆ. ಆರು ಜನರು ಮೀನುಗಾರಿಕೆಗಾಗಿ ತೆರಳಿದ್ದಾಗ ಬೋಟ್ ಮಗುಚಿ ಬಿದ್ದಿದೆ ಈ ವೇಳೆ ಸ್ಥಳೀಯ ನಿವಾಸಿಗಳು ಕೂಡಲೇ ಇಬ್ಬರೂ ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ. ಆದರೆ ಉಳಿದ ನಾಲ್ವರು ನಾಪತ್ತೆಯಾಗಿದ್ದು, ನಾಲ್ವರಿಗಾಗಿ ಕರಾವಳಿ ಕಾವಲು ಪಡೆ ಇದೀಗ ಹುಡುಕಾಟ ನಡೆಸುತ್ತಿದೆ. ಘಟನೆ ಕುರಿತಂತೆ ಭಟ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಗಲಕೋಟೆ : ಬಾಗಲಕೋಟೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷನ ಕೊಲೆಗೆ ಸುಪಾರಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕುಮಾರ್ ಡಾಕಣ್ಣನವರ ಕೊಲೆಗೆ ಸುಪಾರಿ ಪಡೆದ ಆರೋಪದ ಅಡಿ ಇದೀಗ ಸುಪಾರಿ ಕೊಟ್ಟವ ಮತ್ತು ಸುಪಾರಿ ಪಡೆದ ಮೂವರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಸಾಂಗ್ಲಿ ಮೂಲದ ಅತುಲ್ ಜಾದವ್, ವಿನಾಯಕ್ ಪುಣೆಕರ್ ಹಾಗೂ ಜಹಾಂಗೀರ್ ಶೇಕ್ ನನ್ನು ಜಮಖಂಡಿ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕುಮಾರ್ ಡಾಕಣ್ಣನವರ್ ಕೊಲೆಗೆ 10 ಲಕ್ಷ ರೂಪಾಯಿ ಸುಪಾರಿ ನೀಡಿರುವ ಆರೋಪ ಕೇಳಿ ಬಂದಿದ್ದು, ಜಹಾಂಗೀರ್ ಶೇಕ್ ನಿಂದ ಕೊಲೆಗೆ ಸುಪಾರಿ ನೀಡಿರುವ ಆರೋಪ ಕೇಳಿ ಬಂದಿದೆ. ಹಾಗಾಗಿ ಮೂವರು ಆರೋಪಿಗಳನ್ನು ಸದ್ಯ ಪೋಲೀಸರು ಅರೆಸ್ಟ್ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ. ಯಾವ ಕಾರಣಕ್ಕಾಗಿ ಕೊಲೆ ಸುಪಾರಿ ಕೊಟ್ಟರು ಎಂಬುವುದರ ಕುರಿತು ತನಿಖೆ ನಡೆಯುತ್ತಿದೆ.
ದಕ್ಷಿಣಕನ್ನಡ : ಧರ್ಮಸ್ಥಳ ಗ್ರಾಮದಲ್ಲಿ ಅನೇಕ ಶವಗಳನ್ನು ಹೂತುಹಾಕಿರುವ ಬಗ್ಗೆ ಅನಾಮಿಕ ವ್ಯಕ್ತಿ ದೂರುಕೊಟ್ಟ ಬಳಿಕ, ಎಸ್ಐಟಿ ತಂಡ ತನಿಖೆ ನಡೆಸುತ್ತಿದ್ದು, ಮಂಗಳವಾರ ದೂರುದಾರ ತೋರಿಸಿದ ಜಾಗದಲ್ಲಿ ಅಗೆಯಲು ಆರಂಭ ಮಾಡಿತ್ತು. ಆದರೆ ಮೊದಲ ದಿನ ಆತ ತೋರಿಸಿದ ಜಾಗದಲ್ಲಿ ಯಾವುದೇ ಕುರುಹು ಸಿಕ್ಕಿಲ್ಲ. ಇಂದು ಸಹ ಶೋಧ ಕಾರ್ಯ ಮುಂದುವರೆದಿದ್ದು ಯಾವುದೇ ಅಸ್ತಿಪಂಜರ ದೊರೆತಿಲ್ಲ. ಆದರೆ ಇದೀಗ ಸೈಟ್ ನಂಬರ್ ಒಂದರಲ್ಲಿ ಎಸ್ಐಟಿ ಅಧಿಕಾರಿಗಳಿಗೆ 2.5 ಅಡಿ ಆಳದಲ್ಲಿ ಮಹಿಳೆಯ ಕೆಂಪು ರವಿಕೆ ಸಿಕ್ಕಿದೆ. ಅಲ್ಲದೆ ಪಾನ್ ಕಾರ್ಡ್ ಎಟಿಎಂ ಕಾರ್ಡ್ ಆಗಿದೆ. ಇಷ್ಟೆಲ್ಲ ವಸ್ತುಗಳು ಪತ್ತೆ ಆಗಿರುವುದನ್ನು ಎಸ್ಐಟಿ ದೃಢಪಡಿಸಿದೆ. ಎಟಿಎಂ ಕಾರ್ಡ್ ನಲ್ಲಿ ಪುರುಷನ ಹೆಸರು ನಮಗಾಗಿದ್ದು ಲಕ್ಷ್ಮಿ ಎಂಬ ಹೆಸರಿನ ಮಹಿಳೆಯ ಪಾನ್ ಕಾರ್ಡ್ ಪತ್ತೆಯಾಗಿದೆ ಒಂದು ಬ್ಯಾಗ್ ಕೂಡ ಪತ್ತೆ ಆಗಿರುವ ಬಗ್ಗೆ ಎಸ್ಐಟಿ ಮಾಹಿತಿ ನೀಡಿದೆ. ಇಂದು ಎರಡನೇ ಜಾಗದಲ್ಲಿ ಕಾರ್ಯಾಚರಣೆ ಆರಂಭ ಆಗಿದ್ದು,. ಇಂದು ಏಕಕಾಲದಲ್ಲಿ 3 ಕಡೆ ಅಗೆಯಲಾಗಿದೆ. ಈಗಾಗಲೇ…
ಬೆಂಗಳೂರು : ಬೆಂಗಳೂರಿನಲ್ಲಿ ಸಚಿವ ಕೆಜೆ ಜಾರ್ಜ್ ಅಪ್ಪರಿಗೆ ಐಟಿಐ ಅಧಿಕಾರಿಗಳು ಶಾಕ್ ನೀಡಿದ್ದು, ಕಳೆದ ಮೂರು ದಿನದ ಗಳಿಂದ ಕೆಜೆ ಜಾರ್ಜ್ ಇಬ್ಬರು ಆಪ್ತರ ಕಚೇರಿ ಮತ್ತು ನಿವಾಸದ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಹೌದು ಬೆಂಗಳೂರಿನಲ್ಲಿ ಸಚಿವ ಕೆಜೆ ಜಾರ್ಜ್ ಆಪ್ತರ ಕಚೇರಿಗಳ ಮೇಲೆ ಐಟಿ ದಾಳಿ ನಡೆಸಿದೆ. ಆಪ್ತರಾದ ಜಿತು ಹಾಗೂ ಕೋಠಾರಿ ಎನ್ನುವವರ ಕಚೇರಿಗಳಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ಮಾಡಿದ್ದಾರೆ. ಎಲೆಕ್ಟ್ರಿಕ್ ಗುತ್ತಿಗೆದಾರರಾಗಿರುವ ಜಿತು ಮತ್ತು ಕೋಠಾರಿ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕಳೆದ ಮೂರು ದಿನಗಳಿಂದ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಮೈಸೂರು : ಮೈಸೂರು ಜಿಲ್ಲೆಯ ನಂಜನಗೂಡು ನಗರಸಭೆ ಅಧ್ಯಕ್ಷ ಸ್ಥಾನದ ಚುನಾವಣೆ ಸಂದರ್ಭದಲ್ಲಿ ಪಕ್ಷದ ವಿಪ್ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ನಾಲ್ವರು ಬಿಜೆಪಿ ನಗರಸಭಾ ಸದಸ್ಯರ ಸದಸ್ಯತ್ವ ರದ್ದುಗೊಳಿಸಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಆದೇಶಿಸಿದ್ದಾರೆ. ನಂಜನಗೂಡು ನಗರದ ವಾರ್ಡ್ ನಂಬರ್ 1ನೇ ಸದಸ್ಯ ಟಿ.ಎಂ.ಗಿರೀಶ್ ಕುಮಾರ್, ವಾರ್ಡ್ ಸಂಖ್ಯೆ 12 ಸದಸ್ಯೆ ಗಾಯತ್ರಿ, ವಾರ್ಡ್ ನಂಬರ್ 22 ಸದಸ್ಯೆ ಮೀನಾಕ್ಷಿ ನಾಗರಾಜು, ವಾರ್ಡ್ ಸಂಖ್ಯೆ 27ರ ಸದಸ್ಯೆ ವಿಜಯಲಕ್ಷ್ಮೀ ಎಂಬವರನ್ನು ವಿಪ್ ಉಲ್ಲಂಘಿಸಿರುವುದರಿಂದ ಕರ್ನಾಟಕ ಸ್ಥಳೀಯ ಪ್ರಾಧಿಕಾರಗಳ ಪಕ್ಷಾಂತರ ನಿಷೇಧ ಅಧಿನಿಯಮ 1987 ಸೆಕ್ಷನ್ 3(1)(b) ಆಧಾರದಲ್ಲಿ ಕ್ರಮ ಕೈಗೊಳ್ಳಲಾಗಿದೆ. ನಂಜನಗೂಡು ನಗರಸಭೆಯಲ್ಲಿ ಬಿಜೆಪಿ ಹಾಗೂ ಜಾತ್ಯತೀತ ಜನತಾದಳ ಬಹುಮತ ಪಡೆದಿದ್ದು, ಈ ಸಂದರ್ಭದಲ್ಲಿ ಅಧ್ಯಕ್ಷ ಸ್ಥಾನದ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಸದಸ್ಯರಾದ ಟಿ.ಎಂ.ಗಿರೀಶ್ ಕುಮಾರ್, ಗಾಯಿತ್ರಿ, ಮೀನಾಕ್ಷಿ ಹಾಗೂ ವಿಜಯಲಕ್ಷ್ಮಿ ತಮ್ಮ ಪಕ್ಷ ನೀಡಿದ ವಿಪ್ ಉಲ್ಲಂಘಿಸಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಶ್ರೀಕಂಠ ಗೆಲುವು ಸಾಧಿಸಿದ್ದರು. ಈ…
ಶಿವಮೊಗ್ಗ : ಜಿಲ್ಲೆಯ ಭದ್ರಾವತಿ ತಾಲೂಕಿನ ಮೈದೊಳಲು ಗ್ರಾಮದಲ್ಲಿ ಪ್ರತೀ ವರ್ಷ ಶ್ರಾವಣ ಮಾಸದ ನಾಗರ ಪಂಚಮಿಯಂದು ಹನುಮಂತ ದೇವರ ಕಾರ್ಣಿಕೋತ್ಸವ ನಡೆಯುತ್ತದೆ. ಮಂಗಳವಾರ ಸಂಜೆ ಗೋಧೂಳಿ ಲಗ್ನದಲ್ಲಿ ಗಂಗೆ ಪೂಜೆ ನೆರವೇರಿಸಿದ ನಂತರ ಹನುಮಂತ ದೇವರನ್ನು ಮೈಮೇಲೆ ಆಹ್ವಾನೆ ಮಾಡಿಕೊಂಡ ಗಣಮಗ ಪಿಳ್ಳೆಮಟ್ಟಿ ಗುಡ್ಡದಲ್ಲಿ ಎತ್ತರ ಕಂಬವೇರಿ ಕಾರ್ಣಿಕ ನುಡಿಯುತ್ತಾರೆ. ಈ ಬಾರಿ ಶಿವನ ತುರುಬಿಗೆ ಪಂಜರದ ಗಿಳಿ ಹಾರಿತ್ತು ಎಚ್ಚರ ಎಂದು ಉಕ್ತಿ ಹೇಳಿದ್ದಾರೆ. ಹೌದು ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ, ಎಚ್ಚರ” ಎಂಬುದು ಈ ಬಾರಿಯ ಮೈದೊಳಲು ಗ್ರಾಮದ ಹನುಮಂತ ದೇವರ ಕಾರ್ಣಿಕ. ಹನುಮಂತ ದೇವರ ಕಾರ್ಣಿಕವನ್ನು ಆಧರಿಸಿ ಈ ಭಾಗದ ರೈತಾಪಿ ಜನರು ಇಡೀ ವರ್ಷದ ಮಳೆ, ಬೆಳೆ ಸೇರಿದಂತೆ ಕೃಷಿ ಚಟುವಟಿಕೆಗಳು, ರಾಜಕೀಯ ವಿದ್ಯಮಾನಗಳು, ಪ್ರಕೃತಿ ವೈಪರೀತ್ಯ ಸೇರಿದಂತೆ ರೈತಾಪಿ ಬದುಕಿನ ಭವಿಷ್ಯದ ಕುರಿತು ಕಾರ್ಣಿಕ ನುಡಿಯಲಾಗಿದೆ. ಕೊನೆಯಲ್ಲಿ ಎಚ್ಚರ ಎಂದಿರುವುದರಿಂದ ಈ ಬಾರಿ ರೈತಾಪಿಗಳಿಗೆ ಸ್ವಲ್ಪ ಹಿನ್ನಡೆಯಾಗುತ್ತದೆ ಎನ್ನಬಹುದು. ದೇಶದೆಲ್ಲೆಡೆ…
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಪ್ರೀತಿಯ ವಿಚಾರವಾಗಿ ಯುವತಿಯ ಚಿಕ್ಕಪ್ಪ ಯುವಕನಿಗೆ ಚಾಕು ಇರಿದಿರುವ ಘಟನೆ ವರದಿಯಾಗಿದೆ. ಚಾಕು ಇರಿತಕ್ಕೋಳಗಾದ ಯುವಕನನ್ನು ಗೌಸ್ ಮೂಹಿನಿದ್ದಿನ್ ಎಂದು ತಿಳಿದುಬಂದಿದೆ. ಹುಬ್ಬಳ್ಳಿಯ ಸದರಸೋಪಾ ಓಣಿಯಲ್ಲಿ ನಿನ್ನೆ ರಾತ್ರಿ ಈ ಒಂದು ಘಟನೆ ನಡೆದಿದ್ದು, ಗೌಸ್ ಮೋಹಿದ್ದಿನ್ ಯುವತಿಯೊಬ್ಬಳನ್ನು ಪ್ರೀತಿಸಿತ್ತಿದ್ದ. ನಿನ್ನೆ ಕರೆ ಮಾಡಿ ಯುವಕನನ್ನು ಯುವತಿ ಕರೆಸಿಕೊಂಡಿದ್ದಾಳೆ. ಜ್ ವೇಳೆ ಚಿಕ್ಕಪ್ಪ ವಸೀಂ ಎಂಬತಾನಿಂದ ಚಾಕು ಇರಿಯಲಾಗಿದೆ. ತಮ್ಮ ಮನೆಯ ಯುವತಿಯನ್ನು ಪ್ರೀತಿಸಿದಕ್ಕೆ ಯುವತಿ ಚಿಕ್ಕಪ್ಪ ವಸೀಂ ಯುವಕನಿಗೆ ಚಾಕು ಇರಿದಿದ್ದಾರೆ. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ಯುವತಿಯನ್ನ ವಶಕ್ಕೆ ಪಡೆದಿದ್ದಾರೆ. ಈ ಕುರಿತು ಕಸಬಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಕ್ಷಿಣಕನ್ನಡ : ಧರ್ಮಸ್ಥಳ ಗ್ರಾಮದಲ್ಲಿ ಅನೇಕ ಶವಗಳನ್ನು ಹೂತುಹಾಕಿರುವ ಬಗ್ಗೆ ಅನಾಮಿಕ ವ್ಯಕ್ತಿ ದೂರುಕೊಟ್ಟ ಬಳಿಕ, ಎಸ್ಐಟಿ ತಂಡ ತನಿಖೆ ನಡೆಸುತ್ತಿದ್ದು, ಮಂಗಳವಾರ ದೂರುದಾರ ತೋರಿಸಿದ ಜಾಗದಲ್ಲಿ ಅಗೆಯಲು ಆರಂಭ ಮಾಡಿತ್ತು. ಆದರೆ ಮೊದಲ ದಿನ ಆತ ತೋರಿಸಿದ ಜಾಗದಲ್ಲಿ ಯಾವುದೇ ಕುರುಹು ಸಿಕ್ಕಿಲ್ಲ. ಇಂದು ಸಹ ಶೋಧ ಕಾರ್ಯ ಮುಂದುವರೆದಿದ್ದು ಯಾವುದೇ ಅಸ್ತಿಪಂಜರ ದೊರೆತಿಲ್ಲ. ಇಂದು ಎರಡನೇ ಜಾಗದಲ್ಲಿ ಕಾರ್ಯಾಚರಣೆ ಆರಂಭ ಆಗಲಿದೆ. ಇಂದು ಏಕಕಾಲದಲ್ಲಿ 3 ಕಡೆ ಅಗೆಯುವ ತೀರ್ಮಾನ ಮಾಡಲಾಗಿದೆ ಎನ್ನಲಾಗಿದೆ. ಈಗಾಗಲೇ ನೇತ್ರಾವತಿ ಸ್ನಾನಘಟ್ಟದ ಪ್ರದೇಶಕ್ಕೆ ಮುಸುಕುದಾರಿಯಾಗಿರುವ ದೂರುದಾರ ಪೊಲೀಸ್ ಭದ್ರತೆಯಲ್ಲಿ ಆಗಮಿಸಿದ್ದಾನೆ. ಎಸ್ಐಟಿ ತಂಡದ ಅಧಿಕಾರಿಗಳೂ ಸ್ಥಳಕ್ಕೆ ಬಂದಿದ್ದಾರೆ. ಜೊತೆಗೆ ಆತ ತೋರಿಸಿದ ಜಾಗದಲ್ಲಿ ಗುಂಡಿ ಅಗೆಯಲು ಬೇಕಾದ ಸಲಕರೆಗಳು , ಮಿನಿ ಹಿಟಾಚಿಯು ಬಂದಿದ್ದು, ಆದರೆ ಇಂದು ಕೂಡ ಯಾವುದೇ ಅಸ್ತಿಪಂಜರ ದೊರೆತಿಲ್ಲ. ಮೊದಲ ಹಂತದಲ್ಲಿ ಸ್ಥಳೀಯ 12 ಪೌರ ಕಾರ್ಮಿಕರ ಸಹಕಾರದಲ್ಲಿ ಅಗೆಯುವ ಕಾರ್ಯ ಆರಂಭ ವಾಯಿತು. ಸುಮಾರು 3 ಗಂಟೆ…
ಬೆಂಗಳೂರು : ಹೊಳೆನರಸೀಪುರದ ಫಾರ್ಮ್ ಹೌಸ್ ನಲ್ಲಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಅರ್ಜಿ ಸಲ್ಲಿಸಿದರು ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು ಪ್ರಕರಣದ ಕುರಿತು ಕೆಲವು ಸ್ಪಷ್ಟೀಕರಣ ಇಲ್ಲದ ಹಿನ್ನೆಲೆಯಲ್ಲಿ ಇಂದು ತೀರ್ಪು ಪ್ರಕಟಿಸಲ್ಲ ಎಂದು ತಿಳಿಸಿ ಆ.1ಕ್ಕೆ ತೀರ್ಪು ಮುಂದೂಡಿದರು. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದು, ಈ ವೇಳೆ ಕೋರ್ಟ್ ಎರಡು ಕಡೆಯ ವಕೀಲದಿಂದ ಕೆಲವು ಸ್ಪಷ್ಟೀಕರಣ ಕೇಳಿತು. ಗೂಗಲ್ ಮ್ಯಾಪ್ ಅನ್ನು ಸಾಕ್ಷಿಯಾಗಿ ಪರಿಗಣಿಸಬಹುದೇ? ಸ್ಯಾಮ್ಸಂಗ್ ಜೆ ಫೋರ್ ಮೊಬೈಲ್ ಸೀಜ್ ಮಾಡಿರುವ ಬಗ್ಗೆ ಕೋರ್ಟ್ ವಕೀಲರಿಗೆ ವಿವರಣೆ ಕೇಳಿತು. ವಿವರಣೆ ನೀಡುವಂತೆ ಸೂಚಿಸಿ ವಿಚಾರಣೆಯನ್ನು ಕೆಲಕಾಲ ಮುಂದೂಡಿತು.ಇದೆ ವೇಳೆ ಕೋರ್ಟ್ ಮುಂದೆ ಪ್ರಜ್ವಲ್ ರೇವಣ್ಣ ಹಾಜರಾಗಿದ್ದರು. ಪದೇ ಪದೇ ಕಣ್ಣು ಮುಚ್ಚಿ ಪ್ರಜ್ವಲ್ ರೇವಣ್ಣ ಮಂತ್ರ ಪಠಿಸುತ್ತಿದ್ದರು.…