Subscribe to Updates
Get the latest creative news from FooBar about art, design and business.
Author: kannadanewsnow05
ಬಾಗಲಕೋಟೆ : ಬಾಗಲಕೋಟೆಯಲ್ಲಿ ಬೆಚ್ಚಿ ಬೆಳಿಸುವ ಘಟನೆ ಯೊಂದು ನಡೆದಿದ್ದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸೋದರ ಮಾವನ ಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಅಕ್ಕಿ ಮರಡಿ ಎಂಬ ಗ್ರಾಮದಲ್ಲಿ ತಡರಾತ್ರಿ ಒಂದು ಘಟನೆ ನಡೆದಿದೆ. ನಿತ್ಯ ಮದ್ಯ ಸೇವಿಸಿ ಬಂದು ಈರಪ್ಪ ನಡುವಿನಮನಿ ಜಗಳವಾಡುತ್ತಿದ್ದ ಅಷ್ಟೇ ಅಲ್ಲದೆ ಮಹಿಳೆಯರಿಗೆ ಈರಪ್ಪ ಶಬ್ದಗಳಿಂದ ನಿಂದಿಸುತ್ತಿದ್ದ ಸೋದರ ಮಾವ ಈರಪ್ಪನ ಕಾಟ ಸಹಿಸದೆ ಬೆಂಕಿ ಹಚ್ಚಿಸಲಾಗಿದೆ ಅಳಿಯಂದಿರಾದ ಸುನಿಲ್ ನಡುವಿನಮನಿ ಹಾಗೂ ಮರಿಯಪ್ಪನಿಂದ ಈ ಒಂದು ಕೃತ್ಯ ಎಸೆಗಲಾಗಿದ್ದು ವೀರಪ್ಪನ ಕೈಕಾಲು ಮತ್ತು ಮುಖದ ಬಹುತೇಕ ಭಾಗಗಳು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಮನೆಯ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಗಳದ ಸೋಲಿಲ್ಲ ಮತ್ತು ಮರೆಪ್ಪನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರು : ರಾಜಾಜಿನಗರದ ಬಿಜೆಪಿ ಶಾಸಕ ಸುರೇಶ್ ಕುಮಾರ್ ಗೆ ಮಾತೃಯೋಗವಾಗಿದ್ದು, ಇಂದು ಬೆಳಿಗ್ಗೆ ರಾಜಾಜಿನಗರದಲ್ಲಿರುವ ನಿವಾಸದಲ್ಲಿ ಶಾಸಕ ಸುರೇಶ್ ಕುಮಾರ್ ಅವರ ತಾಯಿ ಸುಶೀಲಮ್ಮ ನಿಧನರಾದರು. ಕಳೆದ ಹಲವು ದಿನಗಳಿಂದ ಸುಶೀಲಮ್ಮ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಕುರಿತು ಸ್ವತಃ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಸುರೇಶ್ ಕುಮಾರ್, ನನ್ನನ್ನು ಹೊತ್ತು, ಹೆತ್ತು ಸಾಕಿ, ತಿದ್ದಿ ತೀಡಿ ಬೆಳೆಸಿದ ನನ್ನಮ್ಮ, ಎಲ್ಲರ ಸುಶೀಲಮ್ಮ ಟೀಚರ್ ಇನ್ನಿಲ್ಲ. ಇಂದು ಬೆಳಗಿನ ಜಾವ ನನ್ನನ್ನು ಬಿಟ್ಟು ಹೊರಟು ಬಿಟ್ಟರು ಎಂದು ಬರೆದಿದ್ದಾರೆ. ಶಿಕ್ಷಕಿಯಾಗಿದ್ದ ಸುಶೀಲಮ್ಮ ಅವರು ನಿವೃತ್ತಿ ಬಳಿಕ ಬೆಂಗಳೂರಿನ ಲಕ್ಷ್ಮಿ ನಾರಾಯಣ ಕೋ ಆಪರೇಟಿವ್ ಬ್ಯಾಂಕ್ನ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಒಟ್ಟು 8 ಬಾರಿ ನಿರ್ದೇಶಕರಾಗಿ ಆಯ್ಕೆಯಾಗಿದ್ದರು. https://twitter.com/nimmasuresh/status/1970313881756278853?t=abOa-KMb5MgEwelI8DJRtQ&s=19
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯಕ್ಕೆ ನಟ ದರ್ಶನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೇಲಿನಲ್ಲಿ ಇದ್ದಾರೆ. ನಟ ದರ್ಶನ್ ಗೆ ಜೈಲಿನಲ್ಲಿ ಹಾಸಿಗೆ ದಿಂಬು ಸೇರಿದಂತೆ ಕನಿಷ್ಠ ಸೌಲಭ್ಯ ನೀಡುವಂತೆ ಅರ್ಜಿ ಸಲ್ಲಿಸಿದ್ದು, ಈ ಕುರಿತು ಇಂದು ಕೋರ್ಟ್ ನಲ್ಲಿ ನಟ ದರ್ಶನ್ ಭವಿಷ್ಯ ನಿರ್ಧಾರವಾಗಲಿದೆ. ಇಂದು ಬೆಂಗಳೂರಿನ 57ನೇ ಸೆಷನ್ಸ್ ಕೋರ್ಟ್ ನಲ್ಲಿ ನಟ ದರ್ಶನ್ ಪರ ವಕೀಲರಿಂದ ಕೋರ್ಟ್ ಆದೇಶ ಉಲ್ಲಂಘನೆ ಆರೋಪ ಕೇಳಿಬಂದಿದ್ದು, ಹಾಸಿಗೆ ದಿಂಬು ಸೇರಿದಂತೆ ಕನಿಷ್ಠ ಸೌಲಭ್ಯ ನೀಡದೆ, ಜೈಲಾಧಿಕಾರಿಗಳು ಕೋಟ್ ಆದೇಶವನ್ನು ಉಲ್ಲಂಘಿಸಿದ್ದಾರೆ ಎಂದು ದರ್ಶನ್ ಪರ ವಕೀಲರು ಈ ಹಿಂದಿನ ವಿಚಾರಣೆಯಲ್ಲಿ ವಾದಿಸಿದ್ದರು. ಇದೀಗ ದರ್ಶನ್ ಭವಿಷ್ಯ ಇಂದು ಕೋರ್ಟ್ ನಲ್ಲಿ ನಿರ್ಧಾರವಾಗಲಿದೆ ಹಾಸಿಗೆ ದಿಂಬು ಸೇರಿದಂತೆ ಕನಿಷ್ಠ ಸೌಲಭ್ಯ ಒದಗಿಸುತ್ತಾರೆ ಎಂದು ಕಾದು ನೋಡಬೇಕಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲು ಡೆಡ್ ಲೈನ್ ವಿಚಾರವಾಗಿ ಪ್ರತಿನಿತ್ಯ ಜಿಬಿಎ ನವರು ದಿನಕ್ಕೆ 1000 ಗುಂಡಿಗಳನ್ನು ಮುಚ್ಚುತ್ತಿದ್ದಾರೆ. ಮಳೆಗಾಲ ಹಿನ್ನೆಲೆಯಲ್ಲಿ ಗುಂಡಿ ಮುಚ್ಚುವ ಕಾರ್ಯವಿಧಾನ ಆಗುತ್ತಿದೆ. ಗ್ರೇಟರ್ ಬೆಂಗಳೂರು ಅಥಾರಿಟಿಯವರು ಗುಂಡಿ ಮುಚ್ಚುತ್ತಿದ್ದಾರೆ. ಕೇವಲ ಬೆಂಗಳೂರಿನಲ್ಲಿ ಮಾತ್ರ ರಸ್ತೆಗಳು ಗುಂಡಿಗಳಿವೆಯ? ಎಲ್ಲಾ ರಾಜ್ಯಗಳಲ್ಲೂ ರಸ್ತೆಗಳಲ್ಲಿ ಗುಂಡಿಗಳ ಸಮಸ್ಯೆ ಇದೆ. ದೆಹಲಿಯಲ್ಲಿ ಪ್ರಧಾನ ಮಂತ್ರಿ ನಿವಾಸದ ರಸ್ತೆ ನೋಡಿದ್ದೀರಾ? ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಸರಿಯಾಗಿ ರಸ್ತೆ ಮಾಡಿದ್ರಾ? ಚುನಾವಣೆ ಬರುತ್ತಿದೆ ಅಂತ ಹೇಗೆ ಮಾಡ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು
ಬೆಳಗಾವಿ : ಬೆಳಗಾವಿಯಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಕಬ್ಬಿನ ಗದ್ದೆಯಲ್ಲಿ ಅಕ್ರಮವಾಗಿ ಬೆಳೆದಿದ್ದ 441 ಕೆಜಿ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಬೆಳಗಾವಿಯ ಸೈಬರ್ ಮತ್ತು ರಾಯಭಾಗ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಸುಮಾರು 22 ಲಕ್ಷ ಮೌಲ್ಯದ 441 ಕೆಜಿ ಗಾಂಚಾ ಜತ್ತಿ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಸಿಂಗಾಡಿ ಹಿರೇಕೋಡಿ (45) ಎಂದು ತಿಳಿದುಬಂದಿದೆ. ನಿಡುಗುಂದಿ ಗ್ರಾಮದ ಬಳಿ ಜಮೀನಿನಲ್ಲಿ ಆರೋಪಿ ಗಾಂಜಾ ಬೆಳೆದಿದ್ದ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ಮಹಾರಾಷ್ಟ್ರ ಮತ್ತು ಕರ್ನಾಟಕ ಗಡಿ ಭಾಗದ ಯುವಕರೇ ಈತನ ಟಾರ್ಗೆಟ್ ಆಗಿದ್ದಾರೆ. ಒಂದು ಎಕರೆ ಕಬ್ಬಿನ ಗದ್ದೆಯಲ್ಲಿ ಸಿಂಗಾಡಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ. ಅಂದಾಜು 22 ಲಕ್ಷ ರೂಪಾಯಿ ಮೌಲ್ಯದ ಸುಮಾರು 441 ಕೆಜಿ ಗಾಂಜಾ ಜಪ್ತಿ ಮಾಡಿದ್ದಾರೆ. ಆರೋಪಿ ಸಿಂಗಾಡಿ ಹಿರೇಕೋಡಿಯನ್ನು ಪೊಲೀಸರು ಇದೀಗ ಅರೆಸ್ಟ್ ಮಾಡಿ ಜೈಲಿಗಟ್ಟಿದ್ದಾರೆ. ಜಂಟಿ ಕಾರ್ಯಾಚರಣೆಗೆ ಬೆಳಗಾವಿ ಎಸ್ಪಿ ಡಾ.ಭೀಮಶಂಕರ್ ಗುಳೇದ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗ : ಕರ್ತವ್ಯದಲ್ಲಿ ನಿರ್ಲಕ್ಷ, ಲಂಚಕ್ಕೆ ಬೇಡಿಕೆ ಆರೋಪ ಹಿನ್ನೆಲೆಯಲ್ಲಿ, ಅಧಿಕಾರಿಗಳ ವಿರುದ್ಧ ಸಾರ್ವಜನಿಕರಿಂದ ಈ ಕುರಿತು ದೂರು ಬಂದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ತಹಶೀಲ್ದಾರ್ ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದರು. ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಸೂಚನೆ ಮೇರೆಗೆ ಲೋಕಾಯುಕ್ತ ಪೊಲೀಸರು, ಶಿವಮೊಗ್ಗದ ತಹಶೀಲ್ದಾರ್ ಕಚೇರಿಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ದಾವಣಗೆರೆ, ಚಿತ್ರದುರ್ಗದಿಂದ ಬಂದಿದ್ದ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ನಾಲ್ಕು ತಂಡ ಹಾಗೂ ಶಿವಮೊಗ್ಗ ಲೋಕಾಯುಕ್ತ ಕಚೇರಿಯ ಅಧಿಕಾರಿಗಳನ್ನೊಳಗೊಂಡ ನಾಲ್ಕು ತಂಡ ಕಾರ್ಯಾಚರಣೆ ನಡೆಸಿದೆ. ಇನ್ನು ದಾಳಿಯ ವೇಳೆ ಪರಿಹಾರವಾಗದೇ ಇರುವ ಸಾರ್ವಜನಿಕರ ಅಹವಾಲು, ಕಚೇರಿಯಲ್ಲಿ ಸಿಬ್ಬಂದಿ ಹಾಜರಾತಿ ವಿವರ, ಬಾಕಿ ಇರುವ ಕಡತಗಳು, ಸುದೀರ್ಘ ಕಾಲದಿಂದ ಬಾಕಿ ಉಳಿಸಿಕೊಂಡಿರುವುದಕ್ಕೆ ಕಾರಣ, ಹಕ್ಕು ಬದಲಾವಣೆ, ಭೂ ಮಂಜೂರಾತಿ, ಭೂಮಿ, ಬಗರ್ಹುಕುಂ, ಸಾಮಾಜಿಕ ಭದ್ರತಾ ಯೋಜನೆಗಳಿಗೆ ಸಂಬಂಧಿಸಿದಂತೆ ವಿಲೇವಾರಿಯಾಗದೇ ಉಳಿದಿರುವ ಅರ್ಜಿಗಳ ಪರಿಶೀಲನೆ ನಡೆಸಿದರು.
ಹಾಸನ : ಹಾಸನದಲ್ಲಿ ಜಿಲ್ಲಾ ಆಸ್ಪತ್ರೆ ವೈದ್ಯರ ಮಹಾ ಎಡವಟ್ಟು ಮಾಡಿದ್ದು, ಎಡಗಾಲು ಬದಲು ಬಲಗಾಲಿಗೆ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಬಲಗಾಲು ಕೊಯ್ದಿರುವ ಜಿಲ್ಲಾಸ್ಪತ್ರೆಯ ವೈದ್ಯ ಸಂತೋಷ, ಜ್ಯೋತಿ ಅನ್ನುವವರ ಬಲಗಾಲು ಕುಯ್ದಿದ್ದಾರೆ. ಅಪಘಾತ ಹಿನ್ನೆಲೆಯಲ್ಲಿ ಜ್ಯೋತಿ ಅವರ ಎಡಗಾಲಿಗೆ ರಾಡ್ ಅಳವಡಿಕೆ ಮಾಡಿದ್ದಾರೆ. ಎರಡುವರೆ ವರ್ಷದ ಹಿಂದೆ ಎಡಗಾಲಿಗೆ ರಾಡ್ ಅಳವಡಿಕೆ ಮಾಡಿದ್ದರು ಮತ್ತೆ ಕಾಲು ನೋವು ಹಿನ್ನೆಲೆ ಆಸ್ಪತ್ರೆಗೆ ಜ್ಯೋತಿ ಬಂದಿದ್ದರು. ಆದರೆ ಬಲಗಾಲಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು ಎಡಗಾಲನ್ನು ಕೊಯ್ದು ರಾಡು ಅಳವಡಿಸಿದ್ದರು. ಬಳಿಕ ತಮ್ಮ ತಪ್ಪಿನ ಅರಿವಾದ ನಂತರ ಎಡಗಾಲಿನ ರಾಡ್ ತೆಗೆದು ಮತ್ತೆ ಇದೀಗ ಬಲಗಾಲಿಗೆ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ವೈದ್ಯರ ಎಡವಟ್ಟಿಗೆ ಮಹಿಳೆ ಜ್ಯೋತಿ ಆಘಾತಕ್ಕೆ ಒಳಗಾಗಿದ್ದಾರೆ. ಚಿಕ್ಕಮಂಗಳೂರು ಜಿಲ್ಲೆಯ ಬೂಚನಹಳ್ಳಿಯ ಕಾವಲು ಗ್ರಾಮದ ನಿವಾಸಿಯಾಗಿದ್ದಾರೆ. ಎರಡುವರೆ ವರ್ಷದ ಹಿಂದೆ ಅಪಘಾತದಲ್ಲಿ ಗಾಯಗೊಂಡಿದ್ದರು. ತೀವ್ರ ಪೇಟ್ಟಾಗಿದ್ದರಿಂದ ವೈದ್ಯರು ಎಡಗಾಲಿಗೆ ಅಳವಡಿಸಿದ್ದರು.ಇತ್ತೀಚಿಗೆ ಕಾಲಿಗೆ ಅಳವಡಿಸಿದ್ದ ರಾಡ್ ನಿಂದ ಜ್ಯೋತಿಗೆ ನೋವು ಕಾಣಿಸಿಕೊಂಡಿತ್ತು. ಹಿಮ್ಸ್ ಆಸ್ಪತ್ರೆಯ…
ಬೆಂಗಳೂರು : ರಸ್ತೆಯಲ್ಲಿ ಮೊಬೈಲ್ ನೋಡಿಕೊಂಡು ಹೋಗುವವರೇ ಈ ಸುದ್ದಿಯನ್ನು ಒಮ್ಮೆ ಓದಲೇಬೇಕು. ಹೌದು ರಸ್ತೆಯಲ್ಲಿ ತೆರಳುವಾಗ ಖದೀಮರು ಮೈ ಮರೆತರೆ ಹೊಂಚು ಹಾಕಿ, ಮೊಬೈಲ್ ಕಳ್ಳತನ ಮಾಡುತ್ತಾರೆ. ಬೆಂಗಳೂರಿನ ರಾಜಾಜಿನಗರದಲ್ಲಿ ಇದೀಗ ಮೊಬೈಲ್ ಕಳವು ಆಗಿದೆ. ರಸ್ತೆಯಲ್ಲಿ ಬರುತ್ತಿದ್ದವನಿಂದ ಮೊಬೈಲ್ ಕದ್ದು ಖದೀಮರು ಪರಾರಿಯಾಗಿದ್ದಾರೆ. ಬೆಂಗಳೂರಿನ ರಾಜಾಜಿನಗರದಲ್ಲಿ ಸ್ಕೂಟರ್ ನಲ್ಲಿ ಬಂದ ಇಬ್ಬರು ಖದೀಮರು ರಸ್ತೆಯಲ್ಲಿ ಯುವಕನು ಮೊಬೈಲ್ ನೋಡಿಕೊಂಡು ಹೋಗುತ್ತಿದ್ದ. ಈ ವೇಳೆ ಆತನ ಕೈಯಿಂದ ಮೊಬೈಲ್ ಕಸಿದು ತಕ್ಷಣ ಅಲ್ಲಿಂದ ಪರಾರಿಯಾಗಿದ್ದಾರೆ. ಸೆಪ್ಟೆಂಬರ್ 17ರಂದು ಈ ಒಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸದ್ಯಕ್ಕೆ ಪೊಲೀಸರು ಮೊಬೈಲ್ ಕದ್ದ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ.
ಮೈಸೂರು : ನಿನ್ನೆ ಚಾಮುಂಡೇಶ್ವರಿ ತಾಯಿಗೆ ಪುಷ್ಪಾರ್ಚನೆ ಸಲ್ಲಿಸಿ ಖ್ಯಾತ ಸಾಹಿತಿ ಬಾನು ಮುಷ್ತಾಕ್ ದಸರಾ ಉದ್ಘಾಟಿಸಿದರು. ಬಳಿಕ ಸಿಎಂ ಸಿದ್ದರಾಮಯ್ಯ ನಿನ್ನೆ ಆಹಾರ ಮಳಿಗೆ ಸೇರಿದಂತೆ ಕುಸ್ತಿ ಪಂದ್ಯಾಟಗಳಿಗೆ ಚಾಲನೆ ನೀಡಿದರು. ಇದೀಗ ಇಂದು ಯುವ ದಸರಾ ಸೇರಿದಂತೆ ಹಲವು ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತಿದೆ. ಹೌದು ಮೈಸೂರು ದಸರಾದಲ್ಲಿ ಇಂದು ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತಿದೆ. ಬೆಳಗ್ಗೆ 7:30ಕ್ಕೆ ಅರಮನೆ ಮುಂಭಾಗ ರಂಗೋಲಿ ಸ್ಪರ್ಧೆ ಕಾರ್ಯಕ್ರಮ, ಬೆಳಗ್ಗೆ 10.30 ಕ್ಕೆ ಮೈಸೂರು ವಿಶ್ವವಿದ್ಯಾಲಯದಲ್ಲಿ ಪಂಚಕಾವ್ಯದ ಕವಿಗೋಷ್ಠಿ, ಮೈಸೂರು ವಿಶ್ವವಿದ್ಯಾಲಯ ಕನ್ನಡ ಅಧ್ಯಯನಪೀಠದಲ್ಲಿ ಈ ಒಂದು ಕವಿಗೋಷ್ಠಿ ನಡೆಯಲಿದೆ. ಬಳಿಕ ಬೆಳಿಗ್ಗೆ 11 ಗಂಟೆಗೆ ಜೆಕೆ ಮೈದಾನದಲ್ಲಿ ಮಹಿಳಾ ದಸರಾಗೆ ಚಾಲನೆ ನೀಡಲಾಗುತ್ತದೆ. ಮಹಿಳಾ ದಸರಾವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಕಲಾಮಂದಿರದಲ್ಲಿ ಮಕ್ಕಳ ದಸರಾಕ್ಕೆ ಚಾಲನೆ ನೀಡಲಾಗುತ್ತಿದೆ ಮಕ್ಕಳ ದಸರಾದಲ್ಲಿ ಸಚಿವ ಮಧು ಬಂಗಾರಪ್ಪ ಸಹ ಭಾಗಿಯಾಗಲಿದ್ದಾರೆ. ಸಂಜೆ…
ಬೆಂಗಳೂರು : ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ವಿಪರೀತ ಮಳೆ ಆಗುತ್ತಿದೆ. ಇದೀಗ ರಾಜಧಾನಿ ಬೆಂಗಳೂರು ನಗರ ಸೇರಿದಂತೆ ಮತ್ತೆ ಒಂದು ವಾರಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಸುರಿಯಲಿದ್ದು ರಾಜ್ಯದ ಈ 7 ಜಿಲ್ಲೆಗಳಿಗೆ ಹವಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಅಷ್ಟೇ ಅಲ್ಲದೆ ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗಲಿದ್ದು, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 27ರ ಬಳಿಕ ಭಾರಿ ಮಳೆಯಾಗಲಿದೆ.