Author: kannadanewsnow05

ಮೈಸೂರು : ದೆಹಲಿಯಲ್ಲಿ ಕಾರು ಬಾಂಬ್ ಸ್ಪೋಟ ಬೆನ್ನಲ್ಲೇ ರಾಜ್ಯದಲ್ಲಿ ಕೂಡ ಹೈ ಅಲರ್ಟ್ ಘೋಷಿಸಲಾಗಿದ್ದು, ಇನ್ನು ನಿನ್ನೆ ಮೈಸೂರು ಅರಮನೆ ಆವರಣದಲ್ಲಿ ಹೀಲಿಯಂ ಸಿಲಿಂಡರ್ ಸ್ಫೋಟಕ್ಕೆ ಕಾರಣ ಏನೆಂಬುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಘಟನೆ ಸಂಬಂಧ ಇದೀಗ ಮೈಸೂರು ಪೊಲೀಸರು ಎಫ್​ಐಆರ್ ದಾಖಲಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಇದೀಗ ಈ ಒಂದು ಸ್ಫೋಟಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಇಂದು ಮೈಸೂರಿಗೆ ಎನ್ಐಎ ತಂಡ ಆಗಮಿಸಲಿದೆ. ಮೈಸೂರು ಅರಮನೆಯ ಬಳಿಯ ಘಟನೆಗೆ ಸಂಬಂಧಿಸಿದಂತೆ ಪರಿಶೀಲನೆ ಮಾಡಲಿದೆ. ಸ್ಪೋಟದ ಸಂಪೂರ್ಣ ಮಾಹಿತಿಯನ್ನು ಅಧಿಕಾರಿಗಳು ಕಲೆ ಹಾಕಲಿದ್ದಾರೆ ಸದ್ಯ ಪೊಲೀಸರು ಎಲ್ಲಾ ಆಯಾಮಗಳಿಂದ ತನಿಖೆ ನಡೆಸುತ್ತಿದ್ದಾರೆ.ಇನ್ನು ಹೀಲಿಯಂ ಸಿಲಿಂಡರ್ ಸ್ಫೋಟಕ್ಕೆ ಹೀಲಿಯಂ ಗ್ಯಾಸ್ ತುಂಬುವ ವೇಳೆ ಒತ್ತಡ ಹೆಚ್ಚಾಗಿ ಸ್ಫೋಟಗೊಂಡಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಹೌದು ಮೈಸೂರು ಅರಮನೆ ಮುಂಭಾಗದಲ್ಲಿ ಹೀಲಿಯಂ ಗ್ಯಾಸ್ ತುಂಬಿದ್ದ ಸಿಲಿಂಡರ್ ಸ್ಪೋಟಗೊಂಡು ಬಲೂನ್ ವ್ಯಾಪಾರಿ ಸಲೀಂ ಮೃತಪಟ್ಟ ಘಟನೆಯ ಅಸಲಿ ಕಾರಣ ಈಗ ಬಹಿರಂಗವಾಗಿದೆ. ಸಲೀಂ…

Read More

ಮೈಸೂರು : ದೆಹಲಿಯಲ್ಲಿ ಕಾರು ಬಾಂಬ್ ಸ್ಪೋಟ ಬೆನ್ನಲ್ಲೇ ರಾಜ್ಯದಲ್ಲಿ ಕೂಡ ಹೈ ಅಲರ್ಟ್ ಘೋಷಿಸಲಾಗಿದ್ದು, ಇನ್ನು ನಿನ್ನೆ ಮೈಸೂರು ಅರಮನೆ ಆವರಣದಲ್ಲಿ ಹೀಲಿಯಂ ಸಿಲಿಂಡರ್ ಸ್ಫೋಟಕ್ಕೆ ಕಾರಣ ಏನೆಂಬುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಘಟನೆ ಸಂಬಂಧ ಇದೀಗ ಮೈಸೂರು ಪೊಲೀಸರು ಎಫ್​ಐಆರ್ ದಾಖಲಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಹೀಲಿಯಂ ಸಿಲಿಂಡರ್ ಸ್ಫೋಟಕ್ಕೆ ಹೀಲಿಯಂ ಗ್ಯಾಸ್ ತುಂಬುವ ವೇಳೆ ಒತ್ತಡ ಹೆಚ್ಚಾಗಿ ಸ್ಫೋಟಗೊಂಡಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಹೌದು ಮೈಸೂರು ಅರಮನೆ ಮುಂಭಾಗದಲ್ಲಿ ಹೀಲಿಯಂ ಗ್ಯಾಸ್ ತುಂಬಿದ್ದ ಸಿಲಿಂಡರ್ ಸ್ಪೋಟಗೊಂಡು ಬಲೂನ್ ವ್ಯಾಪಾರಿ ಸಲೀಂ ಮೃತಪಟ್ಟ ಘಟನೆಯ ಅಸಲಿ ಕಾರಣ ಈಗ ಬಹಿರಂಗವಾಗಿದೆ. ಸಲೀಂ ಸತತವಾಗಿ ಬಲೂನ್‌ಗಳಿಗೆ ಹೀಲಿಯಂ ಗ್ಯಾಸ್ ತುಂಬುತ್ತಿದ್ದ. ಅಲ್ಲದೆ, ಸಿಲಿಂಡರ್ ಅನ್ನು ವೇಗವಾಗಿ ಆನ್–ಆಫ್ ಮಾಡಿದ್ದರಿಂದ ಒಳಭಾಗದಲ್ಲಿ ಹೀಟ್ ಉಂಟಾಗಿ ಒತ್ತಡ ಹೆಚ್ಚಾಗಿತ್ತು. ಇದರ ಪರಿಣಾಮ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿರುವುದಾಗಿ ಮೈಸೂರು ಪೊಲೀಸ್ ಮೂಲಗಳು ತಿಳಿಸಿವೆ.

Read More

ಬೆಂಗಳೂರು : ಬೆಂಗಳೂರಲ್ಲಿ ಎರಡು ತಿಂಗಳ ಹಿಂದೆ ವಿವಾಹವಾಗಿದ್ದ ನವವಿವಾಹಿತೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದ ಬಿ ಚೆನ್ನಸಂದ್ರದಲ್ಲಿ ನಿನ್ನೆ ನಡೆದಿತ್ತು. ಮನೆಯಲ್ಲಿ ನೇಣು ಬಿಗಿದುಕೊಂಡು ಗಾನವಿ (26) ಆತ್ಮಹತ್ಯೆಗೆ ಯತ್ನಿಸಿದ್ದಾಳೆ.ಆದರೆ ಇಂದು ಚಿಕಿತ್ಸೆ ಫಲಿಸದೇ ಗಾನವಿ ಸಾವನ್ನಪ್ಪಿದ್ದಾರೆ. ಹನಿಮೂನ್ ಗೆ ಶ್ರೀಲಂಕಾಗೆ ಗಾನವಿ ಹಾಗು ಸೂರಜ್ ತೆರಳಿದ್ದಾರೆ. ಆದರೆ ದಂಪತಿ ಅರ್ಧಕ್ಕೆ ಹಿಂದಿರುಗಿದ್ದಾರೆ. ವರದಕ್ಷಿಣೆ ಕಿರುಕುಳದಿಂದ ಬೆಸತ್ತು ಗಾನವಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎನ್ನುವ ಆರೋಪ ಕೇಳಿ ಬಂದಿದೆ. ಕಳೆದ ಅಕ್ಟೋಬರ್ 29ರಂದು ಗಾನ್ವಿ ಮತ್ತು ಸೂರಜ್ ಮದುವೆಯಾಗಿತ್ತು. ಸೂರಜ್ ಮನೆಯವರ ಬೇಡಿಕೆಯಂತೆ ಅದ್ದೂರಿಯಾಗಿ ಆರತಕ್ಷತೆ ನಡೆದಿತ್ತು. ಈಗ ಚಿಕಿತ್ಸೆ ಫಲಕಾರಿ ಆಗಲೇ ಗಾನವಿ ಸಾವನಪ್ಪಿದ್ದು ಪೊಲೀಸರು ಪತಿ ಸೂರಜ್ ಹಾಗೂ ಆತನ ಅಪ್ಪ ಅಮ್ಮನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವಂತಹ ಭೀಕರ ಕೊಲೆ ನಡೆದಿದ್ದು ಕತ್ತು ಕೊಯ್ದು ಸ್ಟಾಫ್ ನರ್ಸ್ ನನ್ನು ಬರ್ಬರವಾಗಿ ಹತ್ಯೆಗೈಯ್ಯಲಾಗಿದೆ. ಬೆಂಗಳೂರಿನ ಜಯದೇವ ಆಸ್ಪತ್ರೆಯ ಸ್ಟಾಫ್ನರ್ಸ್ ಮಮತಾ (39) ಭೀಕರವಾಗಿ ಕೊಲೆಯಾಗಿದ್ದಾರೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನ ಬಾಡಿಗೆ ಮನೆಯಲ್ಲಿ ಈ ಒಂದು ಕೊಲೆ ನಡೆದಿದ್ದು, ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಡಿಸೆಂಬರ್ 24ರಂದು ರಾತ್ರಿ ಸ್ಟಾಫ್ ನರ್ಸ್ ಮಮತಾ ಕೊಲೆ ನಡೆದಿದೆ. ಆದರೆ ಡಿಸೆಂಬರ್ 25 ರಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಕೊಲೆಯಾಗಿರುವ ಮಮತಾಗಿ ಮದುವೆ ಆಗಿರಲಿಲ್ಲ. ಜಯದೇವ ಆಸ್ಪತ್ರೆಯಲ್ಲಿ ಸ್ಟಾಪ್ ನರ್ಸ್ ಆಗಿ ಮಮತಾ ಕೆಲಸ ಮಾಡುತ್ತಿದ್ದರು. ಸ್ನೇಹಿತೆಯ ಜೊತೆ ಮನೆ ಮಾಡಿಕೊಂಡು ಮತ ವಾಸವಿದ್ದಳು.ಡಿಸೆಂಬರ್ 24ರಂದು ಸ್ನೇಹಿತೆ ಊರಿಗೆ ತೆರಳಿದ್ದಾಳೆ. ಈ ವೇಳೆ ಮನೆಯಲ್ಲಿ ಒಬ್ಬಳೇ ಇದ್ದಾಗ ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಲಾಗಿದೆ. ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಈ ಕುರಿತು…

Read More

ಬೆಂಗಳೂರು : ಬೆಂಗಳೂರಲ್ಲಿ ಎರಡು ತಿಂಗಳ ಹಿಂದೆ ವಿವಾಹವಾಗಿದ್ದ ನವ ವಿವಾಹಿತ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದ ಬಿ ಚೆನ್ನಸಂದ್ರ ದಲ್ಲಿ ನಡೆದಿದೆ. ಮನೆಯಲ್ಲಿ ನೇಣು ಬಿಗಿದುಕೊಂಡು ಗಾನವಿ (26) ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಹನಿಮೂನ್ ಗೆ ಶ್ರೀಲಂಕಾ ಗೆ ಹೋಗಿ ದಂಪತಿ ಅರ್ಧಕ್ಕೆ ಹಿಂದಿರುಗಿದ್ದಾರೆ. ವರದಕ್ಷಿಣೆ ಕಿರುಕುಳದಿಂದ ಬೆಸತ್ತು ಗಾನವಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎನ್ನುವ ಆರೋಪ ಕೇಳಿ ಬಂದಿದೆ. ಕಳೆದ ಅಕ್ಟೋಬರ್ 29ರಂದು ಗಾನ್ವಿ ಮತ್ತು ಸೂರಜ್ ಮದುವೆಯಾಗಿತ್ತು. ಸೂರಜ್ ಮನೆಯವರ ಬೇಡಿಕೆಯಂತೆ ಅದ್ದೂರಿಯಾಗಿ ಆರತಕ್ಷತೆ ನಡೆದಿತ್ತು.

Read More

ಬೆಂಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ಸಿಎಂ ಕುರ್ಚಿ ವಿಚಾರವಾಗಿ ಭಾರಿ ಚರ್ಚೆ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಪರೋಕ್ಷವಾಗಿ ವಾಗ್ದಾಳಿ ನಡೆಸುತ್ತಿದ್ದು, ಇದರ ಮಧ್ಯ ಡಿಕೆ ಶಿವಕುಮಾರ್ ಸಹೋದರ ಡಿಕೆ ಸುರೇಶ್ ಮಾರ್ಮಿಕ ಪೋಸ್ಟ್ ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಗುರಿಯನ್ನು ಬೇಗ ತಲುಪಬೇಕು ಎನ್ನುವವರು ದಾರಿಯಲ್ಲಿ ವಿಶ್ರಮಿಸುತ್ತ ಕುಳಿತುಕೊಳ್ಳಬಾರದು ಎಂದು ಪಾಟೀಲ್ ಪುಟ್ಟಪ್ಪ ಹೇಳಿಕೆಯನ್ನು ಉಲ್ಲೇಖಿಸಿ ಪೋಸ್ಟ್ ಮಾಡಿದ್ದಾರೆ. ಅಂದರೆ ತಮ್ಮ ಸಹೋದರ ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡುವ ವಿಚಾರಕ್ಕೆ ಸಂಬಂಧಪಟ್ಟಂತೆ ಈ ಒಂದು ಪೋಸ್ಟ್ ಮಾಡಿರಬಹುದು ಎಂದು ಇದೀಗ ಭಾರಿ ಚರ್ಚೆ ಆಗುತ್ತಿದೆ. https://twitter.com/DKSureshINC/status/2004009199802744861?t=6VIJDTA42loYsmfpelrLkw&s=19

Read More

ಬೆಂಗಳೂರು : ರಾಜ್ಯದಲ್ಲಿ ನಮ್ಮ ಸ್ವಯಂಕೃತ ಅಪರಾಧದಿಂದ ವಿಪಕ್ಷದಲ್ಲಿ ಕೂತಿದ್ದೇವೆ. ಆದರೆ 2028ಕ್ಕೆ ಚುನಾವಣೆ ನಡೆದರೂ ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬರಲಿದೆ. 130 ರಿಂದ 140 ಕ್ಷೇತ್ರದಲ್ಲಿ ಗೆದ್ದು ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಬಿವೈ ವಿಜಯೇಂದ್ರ ಹೇಳಿಕೆ ನೀಡಿದರು. ನಾಳೆಯೇ ಚುನಾವಣೆ ನಡೆದರೂ ಬಿಜೆಪಿ ಅಧಿಕಾರಕ್ಕೆ ಬರಲಿದೆ. 2028ಕ್ಕೆ ಚುನಾವಣೆ ನಡೆದರೂ ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬರಲಿದೆ. 130 ರಿಂದ 140 ಕ್ಷೇತ್ರದಲ್ಲಿ ಗೆದ್ದು ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ನಾನು ರಾಜ್ಯದ್ಯಂತ ಪ್ರವಾಸ ಮಾಡುತ್ತಿದ್ದೇನೆ.ಮುಂಬರುವ ಜಿಲ್ಲಾ ಪಂಚಾಯತ್ ಹಾಗು ತಾಲೂಕ ಪಂಚಾಯತ್ ಚುನಾವಣೆಗೆ ಸಿದ್ಧರಾಗೋಣ ಎಂದು ಕಾರ್ಯಕರ್ತರಿಗೆ ಬಿವೈ ವಿಜಯೇಂದ್ರ ಕರೆ ನೀಡಿದರು.

Read More

ಬೆಂಗಳೂರು : ರಾಜ್ಯದಲ್ಲಿ ನಮ್ಮ ಸ್ವಯಂಕೃತ ಅಪರಾಧದಿಂದ ವಿಪಕ್ಷದಲ್ಲಿ ಕೂತಿದ್ದೇವೆ ಎಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಬಿವೈ ವಿಜಯೇಂದ್ರ ಹೇಳಿಕೆ ನೀಡಿದರು. ನಾಳೆಯೇ ಚುನಾವಣೆ ನಡೆದರೂ ಬಿಜೆಪಿ ಅಧಿಕಾರಕ್ಕೆ ಬರಲಿದೆ. 2028ಕ್ಕೆ ಚುನಾವಣೆ ನಡೆದರೂ ಸ್ವಂತ ಶಕ್ತಿಗಳು ಮೇಲೆ ಅಧಿಕಾರಕ್ಕೆ ಬರಲಿದೆ. 130 ರಿಂದ 140 ಕ್ಷೇತ್ರದಲ್ಲಿ ಗೆದ್ದು ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ನಾನು ರಾಜ್ಯದ್ಯಂತ ಪ್ರವಾಸ ಮಾಡುತ್ತಿದ್ದೇನೆ.ಮುಂಬರುವ ಜಿಲ್ಲಾ ಪಂಚಾಯತ್ ಹಾಗು ತಾಲೂಕ ಪಂಚಾಯತ್ ಚುನಾವಣೆಗೆ ಸಿದ್ಧರಾಗೋಣ ಎಂದು ಕಾರ್ಯಕರ್ತರಿಗೆ ಬಿವೈ ವಿಜಯೇಂದ್ರ ಕರೆ ನೀಡಿದರು.

Read More

ಹುಬ್ಬಳ್ಳಿ : ಹುಬ್ಬಳ್ಳಿ ಪಕ್ಕದ ತಾರಿಹಾಳ ಬ್ರಿಡ್ಜ್‌ನಿಂದ ಗಾಮನಗಟ್ಟಿಗೆ ಸಂಪರ್ಕ ಕಲ್ಪಿಸುವ ವಿಮಾನ ನಿಲ್ದಾಣದ ಹಿಂಬದಿಯ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷವಾಗಿರುವುದು ಹುಬ್ಬಳ್ಳಿ ನಗರ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಆತಂಕಕ್ಕೆ ಉಂಟುಮಾಡಿದೆ. ಈ ಕುರಿತು ಸ್ಥಳೀಯ ನಿವಾಸಿಗಳು ತಮ್ಮ ಮೊಬೈಲ್ ಫೋನ್‌ಗಳಲ್ಲಿ ಚಿರತೆಯ ಓಡಾಟದ ದೃಶ್ಯಗಳನ್ನು ಸೆರೆ ಹಿಡಿದಿದ್ದಾರೆ.ಇದೇ ಚಿರತೆ ಗೋಕುಲ್ ರೋಡ್ ವ್ಯಾಪ್ತಿಯ ರೇಣುಕಾ ನಗರದಲ್ಲಿಯೂ ಕಾಣಿಸಿಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದ್ದು ಆತಂಕ ಹೆಚ್ಚಿಸಿದೆ. ಈ ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಬೆಂಗಳೂರು : ‘CWC’ ಸಭೆಗೆ ನನ್ನ ಕರೆದಿಲ್ಲ ಕರೆದರೆ ಹೋಗುತ್ತೇನೆ ಎಂದು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು. ಬೆಂಗಳೂರಿನ ಸದಾಶಿವ ನಗರದಲ್ಲಿ ಖರ್ಗೆ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, CWC ಸಭೆಗೆ ನನ್ನ ಕರೆದಿಲ್ಲ ಕರೆದರೆ ಹೋಗುತ್ತೇನೆ.ಸಿಎಂ ಸಿದ್ದರಾಮಯ್ಯ ಸೇರಿ ಮೂವರು ಸಿಎಂಗಳನ್ನು ಕರೆದಿದ್ದಾರೆ. CWC ಸಭೆಗೆ ಸಿಎಂ ಮಾತ್ರ ಕರೆದಿದ್ದಾರೆ, ಡಿಸಿಎಂ ಕರೆದಿಲ್ಲ. AICC ಅಧ್ಯಕ್ಷ ಜೊತೆ ಬೇರೆ ವಿಚಾರ ಚರ್ಚೆ ಮಾಡಿಲ್ಲ ಹೈಕಮಾಂಡ್ ನಿರ್ಧಾರಕ್ಕೆ ಬದ್ದ ಎಂದು ನಾನು ಸಿಎಂ ಹೇಳಿದ್ದೇವೆ ಎಂದು ತಿಳಿಸಿದರು. ನಾನು ಪಕ್ಷದ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ! ನಾನು ಬಾವುಟ ಕಟ್ಟಿದ್ದೇನೆ. ಕಸ ಗುಡಿಸಿದ್ದೇನೆ. ಪಕ್ಷಕ್ಕೆ ಏನೇನು ಬೇಕು ಎಲ್ಲವನ್ನು ಮಾಡಿದ್ದೇನೆ. ಭಾಷಣ ಮಾಡಿಕೊಂಡು ಹೋಗು ಕೆಲಸ ಮಾಡಿಲ್ಲ ಸ್ಟೇಜ್ ಗೆ ಬಂದ ಮೇಲೆ ಭಾಷಣ ಮಾಡಿಕೊಂಡು ಹೋಗಿಲ್ಲ ಎಂದು ಸಿಎಂ ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ತಿರುಗೇಟು ನೀಡಿದ್ದಾರೆ.…

Read More