Author: kannadanewsnow05

ಬೆಳಗಾವಿ : ಕಾರು ಪಾರ್ಕಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ವೈದ್ಯರ ಮೇಲ್ ಕಾಂಗ್ರೆಸ್ ಮುಖಂಡನೊಬ್ಬ ಗುಂಡಾ ವರ್ತನೆ ತೋರಿದ್ದು, ವೈದ್ಯರಿಗೆ ಕಪಾಳ ಮೋಕ್ಷ ಮಾಡಿರುವ ಘಟನೆ ಬೆಳಗಾವಿಯ ಸದಾಶಿವ ನಗರದಲ್ಲಿ ನಡೆದಿದೆ. ವೈದ್ಯನಿಗೆ ಕೈ ಮುಖಂಡ ಕಪಾಳ ಮೋಕ್ಷ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.ವೈದ್ಯ ಪ್ರದೀಪ್ ಎನ್ನುವವರ ಮೇಲೆ ಕಾಂಗ್ರೆಸ್ ಮುಖಂಡ ಆರಿಫ್ ದೇಸಾಯಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಹಲ್ಲೆ ಮಾಡಿ ಆರಿಫ್ ವೈದ್ಯನಿಗೆ ಗೆ ಅವಾಚ್ಯ ಶಬ್ದ ಬಳಿಸಿ ನಿಂದಿಸಿದ್ದಾನೆ ಎಂದು ಹೇಳಲಾಗುತ್ತಿದೆ. ಬೆಳಗಾವಿಯ ಸದಾಶಿವನಗರದ ಅಪಾರ್ಟ್ಮೆಂಟ್ ಒಂದರಲ್ಲಿ ಪಾರ್ಕಿಂಗ್ ವಿಚಾರಕ್ಕೆ ಜಗಳ ವಿಕೋಪಕ್ಕೆ ತಿರುಗಿ ತಾಳ್ಮೆ ಕಳೆದುಕೊಂಡ ಕಾಂಗ್ರೆಸ್ ಮುಖಂಡ ಆರಿಫ್ ವೈದ್ಯ ಪ್ರದೀಪಗೆ ಪತ್ನಿಯ ಮುಂದೆ ಕಪಾಳಕ್ಕೆ ಹೊಡೆದಿರುವ ಘಟನೆಯಾಗಿದೆ. ಒಂದೇ ಅಪಾರ್ಟ್ಮೆಂಟ್ ಇಬ್ಬರು ವಾಸಿಸುತ್ತಿದ್ದರು ಎನ್ನಲಾಗುತ್ತಿದ್ದು, ವೈದ್ಯ ದಂಪತಿ ಈ ವೇಳೆ ಊಟಕ್ಕೆಂದು ಹೊರಗಡೆ ಹೋಗಿರುತ್ತಾರೆ. ಈ ವೇಳೆ ತಿರುಗಿ ಬಂದಾಗ ಪಾರ್ಕಿಂಗ್ ವಿಚಾರವಾಗಿ ಇಬ್ಬರ ನಡುವೆ ವಾಗ್ವಾದ ನಡೆಯುತ್ತದೆ ಇದೆ ಒಂದು ಸಂದರ್ಭದಲ್ಲಿ ಪತ್ನಿ ಎದುರುಗಡೆ…

Read More

ದಕ್ಷಿಣ ಕನ್ನಡ : ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಚಲಿಸುತ್ತಿದ್ದ ರೈಲಿನಿಂದ ಯುವತಿಯೊಬ್ಬಳು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಮಿಡಿಗೇಶಿ ಪಡಸಾಲೆ ಹಟ್ಟಿ ನಿವಾಸಿ ಎಂಜಿ ನಯನ (27) ಆತ್ಮಹತ್ಯೆ ಮಾಡಿಕೊಂಡಿರುವ ಯುವತಿಯಾಗಿದ್ದಾಳೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿಯ ಪಡಸಾಲೆ ಹಟ್ಟಿಯ ನಿವಾಸಿ ಎಂದು ಹೇಳಲಾಗುತ್ತಿದೆ. ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಚ್ಚಿನಿಂದ ಪತ್ನಿಯ ಕುತ್ತಿಗೆ ಕೊಯ್ದು ಭೀಕರವಾಗಿ ಹತ್ಯೆಗೈದ ಪತಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೊಬ್ಬ ತನ್ನ ಪತ್ನಿಯ ಕುತ್ತಿಗೆಯನ್ನು ಮಚ್ಚಿನಿಂದ ಕೊಯ್ದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಕೆ ಜಿ ಎಫ್ ನಗರದಲ್ಲಿ ನಡೆದಿದೆ ಎಂದು ತಿಳಿದುಬಂದಿದೆ.ಮಚ್ಚಿನಿಂದ ಕೊಚ್ಚಿ ಪತ್ನಿ ಪವಿತ್ರ (36)ಳನ್ನು ಪತಿ ಲೋಕೇಶ್ ಮಚ್ಚಿನಿಂದ ಕುತ್ತಿಗೆ ಕೊಯ್ದು ಪತ್ನಿಯ ಕೊಲೆಮಾಡಿದ್ದೂ, ಕೋಲಾರ ಜಿಲ್ಲೆಯ ಕೆ ಜಿ ಎಫ್ ನಗರದಲ್ಲಿ ನಡೆದ ಭೀಕರ ಹತ್ಯೆಯಾಗಿದೆ. ಉರಿಗಾಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/constable-assault-case-constable-hanumantharaya-launches-signature-campaign/ https://kannadanewsnow.com/kannada/breaking-rowdy-threatens-woman-from-jail-demands-money-by-keeping-nude-photo/ https://kannadanewsnow.com/kannada/big-news-bengaluru-chalo-to-be-held-by-farmers-on-february-17-to-press-for-various-demands/

Read More

ಬೆಂಗಳೂರು : ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ರೌಡಿಶೀಟರ್ ಮನೋಜ್ ಅಲಿಯಾಸ್ ಕೆಂಚ ಎನ್ನುವ ರೌಡಿಯೊಬ್ಬ ಜೈಲಿನಿಂದ ಯುವತಿಯ ನಗ್ನ ಫೋಟೋ ಕಳುಹಿಸಿ ಹಣ ನೀಡುವಂತೆ ಯುವತಿಯ ತಾಯಿಗೆ ಬೆದರಿಕೆ ಒಡ್ಡಿರುವಂತಹ ಘಟನೆ ನಡೆದಿದೆ. ಯುವತಿಯ ಬೆತ್ತಲೆ ಫೋಟೋ ಇಟ್ಟುಕೊಂಡು ರೌಡಿ ಮನೋಜ್ ಎಂಬತನಿಂದ ಬೆದರಿಕೆ ಹಾಕಲಾಗುತ್ತಿದೆ. ಈ ಹಿಂದೆಯೂ ಇದೆ ರೀತಿ ಬೆದರಿಕೆ ಹಾಕಿ ಮನೋಜ್ ಮತ್ತು ಆತನ ಗ್ಯಾಂಗ್ ಹಣ ಕಿತ್ತುಕೊಂಡಿದ್ದರು ಎನ್ನಲಾಗುತ್ತಿದೆ.ಯುವತಿಯ ತಾಯಿಗೆ ಫೋಟೋ ಕಳಿಸಿ ಮನೋಜ್ ಮತ್ತು ತಂಡ ಹಣ ಪಡೆದಿದ್ದರು ಎಂದು ಹೇಳಲಾಗುತ್ತಿದೆ. ನಿನ್ನ ಮಗಳ ಬೆತ್ತಲೆ ಫೋಟೋ ನಿನ್ನ ಅಳಿಯನಿಗೆ ಕಳುಹಿಸುತ್ತೇನೆ ಅಂತ ಬೆದರಿಕೆ ಹಾಕಿದ್ದರು.ಮಗಳ ಬೆತ್ತಲೆ ಫೋಟೋ ತೋರಿಸಿ ಮನೋಜ್ 40,000 ಗಳನ್ನು ಪಡೆದಿದ್ದ ಫೆಬ್ರವರಿ 9ರಂದು ಮನು ಅಸೋಸಿಯೇಟ್ ಕಾರ್ತಿಕ್ ನಿಂದ ಕರೆ ಮಾಡಿ ಬೆದರಿಕೆ ಒಡಲಾಗಿತ್ತು. 5 ಲಕ್ಷ ಕೊಡದಿದ್ರೆ ನಿನ್ನ ಅಳಿಯನಿಗೆ ಮಗಳ ಬೆತ್ತಲೆ ಫೋಟೋ ಕಳಿಸುತ್ತೇನೆ ಅಂತ ಅವಾಜ್ ಹಾಕಿದ್ದ ಎನ್ನಲಾಗಿದೆ. https://kannadanewsnow.com/kannada/constable-assault-case-constable-hanumantharaya-launches-signature-campaign/ ಫೆಬ್ರವರಿ 12ರಂದು ರೌಡಿ…

Read More

ರಾಯಚೂರು : ಕಳೆದ ಕೆಲವು ದಿನಗಳ ಹಿಂದೆ ರಾಯಚೂರನ್ ನ ದೇವದುರ್ಗ ಪಟ್ಟಣದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಪುತ್ರ ಸಂತೋಷ್ ಹಲ್ಲೆ ನಡೆಸಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ದೇವದುರ್ಗ ಎಲ್ ಆ್ಯಂಡ್ ಓ ಹಾಗೂ ಟ್ರಾಫಿಕ್ ಠಾಣೆ ಎಲ್ಲಾ ಪೊಲೀಸ್ ಕಾನ್ಸ್ಟೇಬಲ್​ಗಳು ಸಹಿ ಆಂದೋಲನ ಮಾಡುತ್ತಿದ್ದಾರೆ ಈಗಾಗಲೇ ಘಟನೆಯ ಕುರಿತಂತೆ ಕಾನ್ಸ್ಟೇಬಲ್ ಹನುಮಂತರಾಯ ಶಾಸಕ ಕರೆಮ್ಮ ನಾಯಕ್ ಪುತ್ರ ಸಂತೋಷ ಹಾಗೂ ಪಿಎ ಇಲಿಯಾಸ ಸೇರಿದಂತೆ 8 ಜನರ ವಿರುದ್ಧ ದೂರು ಸಲ್ಲಿಸಿದ್ದಾರೆ.ಆದರೆ ಇದುವರೆಗೂ ಸಂತೋಷ್ ಹಾಗೂ ಉಳಿದ ಆರೋಪಿಗಳನ್ನು ಬಂಧಿಸಿಲ್ಲ ಎಂದು ಟ್ರಾಫಿಕ್ ಠಾಣೆ ಎಲ್ಲಾ ಪೊಲೀಸ್ ಕಾನ್ಸ್ಟೇಬಲ್​ಗಳು ಸಹಿ ಆಂದೋಲನ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ದೇವದುರ್ಗ ಎಲ್ ಆ್ಯಂಡ್ ಓ ಹಾಗೂ ಟ್ರಾಫಿಕ್ ಠಾಣೆ ಎಲ್ಲಾ ಪೊಲೀಸ್ ಕಾನ್ಸ್ಟೇಬಲ್​ಗಳು ಸಹಿ ಆಂದೋಲನ ಮಾಡುತ್ತಿದ್ದಾರೆ. ಘಟನೆ ನಡೆದು ಹಲವು ದಿನಗಳೇ ಕಳೆದರೂ ರಾಜಕೀಯ ಒತ್ತಡಕ್ಕೆ ಶಾಸಕಿ‌ ಪುತ್ರ ಸಂತೋಷ್ ಬಂಧಿಸದೇ ಇರೋದಕ್ಕೆ…

Read More

ಬೆಂಗಳೂರು : ಈಗಾಗಲೇ ರೈತ ವಿರೋಧಿ ಕಾನೂನು ರದ್ದುಗೊಳಿಸಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ದೆಹಲಿಯಲ್ಲಿ ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ . ಇದರ ಬೆನ್ನಲ್ಲೇ ರಾಜ್ಯದಲ್ಲಿಯೂ ಕೂಡ ರೈತ ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿದ್ದು ಫೆಬ್ರವರಿ 17ರಂದು ಅಂದರೆ ನಾಡಿದ್ದು ಬೆಂಗಳೂರು ಚಲೋ ಗೆ ಕರೆ ನೀಡಿವೆ ಎಂದು ಹೇಳಲಾಗುತ್ತಿದೆ. ಕರ್ನಾಟಕ ರಾಜ್ಯ ರೈತ ಸಂಘಗಳ ಒಕ್ಕೂಟ ಆಶ್ರಯದಲ್ಲಿ ವಿವಿಧ ಬೇಡಿಕೆಗೆ ಆಗ್ರಹಿಸಿ ಫೆ.17ರಂದು ʻಬೆಂಗಳೂರು ಚಲೋʼ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮಾವೇಶಕ್ಕೆ ಬರುವ ರೈತರಿಗೆ ಆಯಾ ಜಿಲ್ಲೆಗಳಿಂದ ಉಚಿತ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘಗಳ ಒಕ್ಕೂಟ ಅಧ್ಯಕ್ಷ ಬೀರಪ್ಪ ದೇಶನೂರ ತಿಳಿಸಿದ್ದಾರೆ. ಫೆ.16ರಂದು ಸಂಜೆ ಪ್ರತಿಯೊಬ್ಬ ರೈತರೂ ತಮ್ಮ ಜಿಲ್ಲೆಯ ಹಾಗೂ ತಾಲೂಕು, ಪಟ್ಟಣ, ಗ್ರಾಮಗಳಿಂದ ಬೆಂಗಳೂರಿಗೆ ಬರಬೇಕು ಎಂದು ಮನವಿ ಮಾಡಿದ್ದಾರೆ.ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಫೆ.17ರಂದು ರೈತರು ತಮ್ಮ ಬೇಡಿಕೆಗಳನ್ನು ಆಗ್ರಹಿಸಿ ಮುಖ್ಯಮಂತ್ರಿಸಿದ್ದರಾಮಯ್ಯನವರಿಗೆ ಮನವಿ ಪತ್ರ ಸಲ್ಲಿಸಲಿದ್ದಾರೆ. ಈ ಬೃಹತ್‌…

Read More

ಬೆಂಗಳೂರು : ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 15ನೇ ಬಜೆಟ್ ಮಂಡಿಸುತ್ತಿದ್ದು 2024 25 ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚಿಗಷ್ಟೇ ಕೇಂದ್ರ ಸರ್ಕಾರ ಮಧ್ಯಂತರ ಬಜೆಟ್ ಮಂಡಿಸಿತ್ತು. ಈ ಸಂದರ್ಭದಲ್ಲಿ ತೆರಿಗೆ ವಿಷಯದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಡಿಸೈನ್ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ದೆಹಲಿಯಲ್ಲಿ ಇತ್ತೀಚೆಗೆ ಪ್ರತಿಭಟನೆ ನಡೆಸಿದರು. ಇದೀಗ ಲೋಕಸಭೆ ಚುನಾವಣೆಯ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಣ್ಣಿಟ್ಟಿರುವ ಹಿನ್ನೆಲೆಯಲ್ಲಿ ಶತಾಯಗತಾಯ ಅತ್ಯಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಪ್ರಮುಖ ಗುರಿ ಹೊಂದಿದ್ದಾರೆ ಎನ್ನಲಾಗಿದೆ.ಈ ಹಿನ್ನೆಲೆಯಲ್ಲಿ ಬಜೆಟ್ ನಲ್ಲಿ ಅತ್ಯಂತ ಮಹತ್ವದ ಘೋಷಣೆಗಳನ್ನು ಘೋಸಿಸುವ ಸಾಧ್ಯತೆ ಇದೇ ಎನ್ನಲಾಗಿದೆ. ಆದರೆ ಅದಕ್ಕೂ ಮುನ್ನ ಸರ್ಕಾರದ ಮುಂದೆ ಹಲವು ಸವಾಲುಗಳಿವೆ. ಗ್ಯಾರಂಟಿ ಹೊರೆ-ಬರದ ಬರೆ ಈವರೆಗೂ ರಾಜ್ಯದ ಬಜೆಟ್ ಗಾತ್ರ 3.27 ಲಕ್ಷ ಕೋಟಿ ರೂಪಾಯಿ ದಾಟಿರಲಿಲ್ಲ. ಆದರೆ, ಈ ಬಾರಿ ಸುಮಾರು 50 ಸಾವಿರ ಕೋಟಿ ರೂಪಾಯಿ ಹೆಚ್ಚಳವಾಗಲಿದೆ. ಇದರೊಂದಿಗೆ ಈ ಬಾರಿ ಬಜೆಟ್​ ಗಾತ್ರ 3.80…

Read More

ವಿಜಯಪುರ : ರಾಜ್ಯದಲ್ಲಿ ಗೋಹತ್ಯೆ ಹಾಗೂ ಅಕ್ರಮವಾಗಿ ಗೋವುಗಳ ಮಾರಾಟ ನಿಷೇಧವಿದ್ದರೂ ಕೂಡ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಗೋವುಗಳನ್ನು ರಕ್ಷಣೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿರೆಬೇವನೂರು ಗ್ರಾಮದಲ್ಲಿ ನಡೆದಿದೆ. ಗ್ರಾಮಸ್ಥರೇ ವಾಹನಗಳನ್ನು ಅಡ್ಡಗಟ್ಟಿ 110 ಕ್ಕೂ ಹೆಚ್ಚು ಗೋವು ಮತ್ತು ಕರುಗಳನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ನೆರೆಯ ರಾಜ್ಯ ಮಹಾರಾಷ್ಟ್ರದಿಂದ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣಕ್ಕೆ ಅಕ್ರಮವಾಗಿ ಗೋವು ಮತ್ತು ಕರುಗಳನ್ನು ಸಾಗಾಟ ಮಾಡುತ್ತಿದ್ದರು ಎಂಬುದಾಗಿ ತಿಳಿದು ಬಂದಿದೆ.ತಡರಾತ್ರಿ ಬುಲೆರೋ ಪಿಕ್ ಅಪ್ ಗೂಡ್ಸ್ ವಾಹನಗಳಲ್ಲಿ ಅಕ್ರಮವಾಗಿ ಹಸುಗಳು ಹಾಗೂ ಕರುಗಳನ್ನು ಸಾಗಾಟ ಮಾಡಲಾಗುತ್ತಿತ್ತು.ಖಚಿತ ಮಾಹಿತಿ ಮೇರೆಗೆ ಗ್ರಾಮಸ್ಥರು ವಾಹನಗಳನ್ನು ತಡೆದಿದ್ದಾರೆ. ವಾಹನಗಳನ್ನು ತಡೆಯುತ್ತಿದ್ದಂತೆ ಎರಡು ವಾಹನಗಳ ಚಾಲಕರು ಪರಾರಿಯಾಗಿದ್ದಾರೆ. ಈ ವೇಳೆ ಓರ್ವ ಗ್ರಾಮಸ್ಥರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ತಪಾಸಣೆ ನಡೆಸಿದಾಗ ಒಟ್ಟು ಮೂರು ವಾಹನಗಳಲ್ಲಿ ಗೋವುಗಳ ಕಾಲುಗಳನ್ನು ಕಟ್ಟಿ ಬಾಯಿಗೆ ಪ್ಲಾಸ್ಟಿಕ್ ಟೇಪ್‌ ಅಂಟಿಸಿದ್ದು, ಒಂದರ ಮೇಲೊಂದರಂತೆ ದುಷ್ಕರ್ಮಿಗಳು ಕಟ್ಟಿಹಾಕಿರುವುದು ಗೊತ್ತಾಗಿದೆ. ಪ್ರಕರಣ ಬೆಳಕಿಗೆ…

Read More

ಚಿತ್ರದುರ್ಗ : 60 ದಿನಗಳಲ್ಲಿ ಹಣ ಡಬಲ್ ಆಗುತ್ತದೆ ಎಂದು ಹೇಳಿ ಸುಮಾರು 4.79ಕೋಟಿ ರೂಪಾಯಿಗೂ ಅಧಿಕ ವಂಚನೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜುರು ಎಂಬಲ್ಲಿ ನಡೆದಿದೆ. ರೈಲ್ವೆ ನೌಕರ ರಮೇಶ್ ಎಂಬವರಿಗೆ ಆಂಧ್ರ ಮೂಲದ ವ್ಯಕ್ತಿ ಸುಮಾರು ಒಂದು ಲಕ್ಷ ನಾಲ್ಕು ಸಾವಿರಕ್ಕೂ ಹೆಚ್ಚಿಗೆ ಹಣ ಪಡೆದುಕೊಂಡು ಡಬಲ್ ಮಾಡಿಕೊಡುತ್ತೇನೆ ಎಂದು ವಂಚಿಸಿದ್ದಾನೆ. ಕಳೆದ ವರ್ಷ ಡಿಸೆಂಬರ್ 15ರಂದು ಚಿಕ್ಕಜಾಜೂರು ಠಾಣೆಯಲ್ಲಿ ದಾಖಲಾದ ಪ್ರಕರಣ ಇದೀಗ ಬೆಳಕಿಗೆ ಬಂದಿದೆ ಎಂದು ಹೇಳಲಾಗುತ್ತಿದೆ. ರೈಲ್ವೆ ನೌಕರ ರಮೇಶಪ್ಪ ಎನ್ನುವವರು , 1ಲಕ್ಷ 4 ಕೊಟ್ಟಿದ್ದಲ್ಲದೆ ಅವರ ಸಂಬಂಧಿಕರು ಸೇರಿದಂತೆ 106 ಜನರು ಸೇರಿದಂತೆ ಒಟ್ಟು 4.79 ಕೋಟಿ ಆಂಧ್ರ ಮೂಲದ ವ್ಯಕ್ತಿಯಿಂದ ವಂಚನೆಗೆ ಒಳಗಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಕ್ರೌಡ್ ಕ್ಲಬ್ ಇಂಟರ್ನ್ಯಾಷನಲ್ ಕಂಪನಿ ಹೆಸರಲ್ಲಿ ವಂಚನೆ ಎಸಗಿದ್ದಾನೆ 60 ದಿನದಲ್ಲಿ ಡಬಲ್ ಮಾಡಿ ಕೊಡುತ್ತೇನೆ ಎಂದು ಹೇಳಿ ವಂಚನೆ ಎಸಗಿದ್ದಾನೆ ಎಂದು ಹೇಳಲಾಗುತ್ತಿದೆ ಆಂಧ್ರ ಮೂಲದ ಕೋಡೆ…

Read More

ಬೆಂಗಳೂರು : ರಾಜ್ಯದಲ್ಲಿ ಲಕ್ಷಾಂತರ ಭಕ್ತರು ಆಗಮಿಸುವಂತಹ ದೇವಸ್ಥಾನಗಳ ಅಭಿವೃದ್ಧಿಗಾಗಿ ಪ್ರತ್ಯೇಕವಾದಂತಹ ಪ್ರಾಧಿಕಾರವನ್ನು ರಚನೆ ಮಾಡಲಾಗುವುದು ಎಂದು ಮುಜರಾಯಿ ಇಲಾಖೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದರು. ವಿಧಾನಸಭೆಯಲ್ಲಿ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸುವ ಕುರಿತಂತೆ ಕಾಂಗ್ರೆಸ್‌ನ ಎಸ್‌. ರವಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ 12ರಿಂದ 15 ಲಕ್ಷ ಭಕ್ತರು ಬರುತ್ತಾರೆ. ಅಲ್ಲಿನ ಸಮಸ್ಯೆಗಳನ್ನು ಪಟ್ಟಿ ಮಾಡಿ ಅದರ ನಿವಾರಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ. ಪ್ರಮುಖವಾಗಿ ವಾಹನ ನಿಲುಗಡೆಗೆ ಸ್ಥಳಾವಕಾಶ, ದಾಸೋಹ ಭವನ ನಿರ್ಮಾಣ, ರಸ್ತೆ ಅಗಲೀಕರಣಕ್ಕೆ ಯೋಜನೆ ರೂಪಿಸಲಾಗುತ್ತಿದೆ. ಇದೇ ಮಾದರಿಯಲ್ಲಿ ವಾರ್ಷಿಕ ಲಕ್ಷಾಂತರ ಭಕ್ತರು ಬರುವ ಮೈಸೂರಿನ ಚಾಮುಂಡೇಶ್ವರಿ, ಸವದತ್ತಿ ಯಲ್ಲಮ್ಮ ಸೇರಿದಂತೆ ಇನ್ನಿತರ ದೇವಸ್ಥಾನಗಳ ಅಭಿವೃದ್ಧಿಗಾಗಿ ಪ್ರತ್ಯೇಕ ಅಭಿವೃದ್ಧಿ ಪ್ರಾಧಿಕಾರ ರಚಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು. https://kannadanewsnow.com/kannada/breaking-two-killed-as-bike-collides-with-mini-tempo-in-tumkur/ https://kannadanewsnow.com/kannada/breaking-man-slits-wifes-throat-with-machete-in-kolar/

Read More

ತುಮಕೂರು : ನಿಂತಿದ್ದ ಮಿಣಿ ಟೆಂಪೋಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮರಳಪ್ಪನ ಹಳ್ಳಿ ಬ್ರಿಡ್ಜ್ ಬಳಿ ಅಪಘಾತ ಸಂಭವಿಸಿದೆ.ಪ್ರಭುಗೌಡ (28) ಹಾಗೂ ಆನಂದ್ (30) ಮೃತ ದುರ್ದೈವಿಗಳಾಗಿದ್ದಾರೆ ಕಳ್ಳಂ ಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಚ್ಚಿನಿಂದ ಪತ್ನಿಯ ಕುತ್ತಿಗೆ ಹತ್ಯೆಗೈದ ಪತಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೊಬ್ಬ ತನ್ನ ಪತ್ನಿಯ ಕುತ್ತಿಗೆಯನ್ನು ಮಚ್ಚಿನಿಂದ ಕೊಯ್ದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಕೆ ಜಿ ಎಫ್ ನಗರದಲ್ಲಿ ನಡೆದಿದೆ ಎಂದು ತಿಳಿದುಬಂದಿದೆ. ಮಚ್ಚಿನಿಂದ ಕೊಚ್ಚಿ ಪತ್ನಿ ಪವಿತ್ರ (36)ಳನ್ನು ಪತಿ ಲೋಕೇಶ್ ಮಚ್ಚಿನಿಂದ ಕುತ್ತಿಗೆ ಕೊಯ್ದು ಪತ್ನಿಯ ಕೊಲೆಮಾಡಿದ್ದೂ, ಕೋಲಾರ ಜಿಲ್ಲೆಯ ಕೆ ಜಿ ಎಫ್ ನಗರದಲ್ಲಿ ನಡೆದ ಭೀಕರ ಹತ್ಯೆಯಾಗಿದೆ. ಉರಿಗಾಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More