Author: kannadanewsnow05

ಬೆಂಗಳೂರು : ರಾಜ್ಯದಲ್ಲಿ ಇಂದು ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಪತಿ ಅನೂಪ್ ಕುಮಾರ್, ಪತ್ನಿ ರಾಖಿ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೌದು ಮಕ್ಕಳಿಬ್ಬರಿಗೆ ವಿಷವುಣಿಸಿ ದಂಪತಿಗಳು ನೇಣಿಗೆ ಶರಣಾಗಿದ್ದಾರೆ. 5 ವರ್ಷದ ಒಂದು ಹೆಣ್ಣು ಮಗು ಹಾಗೂ 2 ವರ್ಷದ ಗಂಡು ಮಗುವಿಗೆ ವಿಷ ಹಾಕಿಕೊಂದು ಸೊಸೈಡ್ ಮಾಡಿಕೊಂಡಿದ್ದಾರೆ. ಸದಾಶಿವನ ನಗರದ ಆರ್‌ಎಂವಿ ಎಕ್ಸಟೆನ್ಶನ್ನಲ್ಲಿ ಈ ಒಂದು ಘಟನೆ ನಡೆದಿದೆ. ಸಾಲಭಾದೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೀಗ ವ್ಯಕ್ತವಾಗುತ್ತಿದೆ. ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದ್ದು,  ಇಬ್ಬರು ಮಕ್ಕಳನ್ನು ಕೊಂದು ದಂಪತಿಗಳಾದ ಅನುಪ್ ಕುಮಾರ್ ಹಾಗೂ ಪತ್ನಿ ರಾಖಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನೆ ಸ್ಥಳಕ್ಕೆ ಸದಾಶಿವನಗರ್ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.ಯಾವ ಕಾರಣಕ್ಕಾಗಿ ಇಬ್ಬರು ಮಕ್ಕಳನ್ನು ಕೊಂದು ದಂಪತಿಗಳು ತಾವು ಆತ್ಮಹತ್ಯೆ ಮಾಡಿಕೊಂಡಿದ್ದಾರೆ…

Read More

ಬೆಂಗಳೂರು : ಅಕ್ರಮ ಕಸದ ಡಂಪಿಂಗ್ ಸ್ಥಳದಲ್ಲಿ ಬೆಂಕಿ ತಗುಲಿದ ಪರಿಣಾಮ ದಟ್ಟ ಹೋಗೆ ಆವರಿಸಿದೆ. ಹೊಗೆಯಿಂದಾಗಿ ಉಸಿರಾಡಲು ತೊಂದರೆ ಅನುಭವಿಸಿ ಹೊಸಕೋಟೆ ತಾಲೂಕಿನ ಭುವನಹಳ್ಳಿ ಗ್ರಾಮದ ಮುನೇಗೌಡ (50) ಎನ್ನುವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಹೌದು ಅಕ್ರಮವಾಗಿ ಹಾಕಿದ್ದ ಗಾರ್ಬೇಜ್ ಹೊಗೆಗೆ ಮುನಿಗೌಡ ಎನ್ನುವ ವ್ಯಕ್ತಿಯ ಜೀವ ಹೋಗಿದೆ. ಮುನಿಗೌಡಗೆ ದಟ್ಟ ಹೊಗೆಯಿಂದ ದಿಢೀರ್ ಆಗಿ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದೆ. ಹೊಸಕೋಟೆ ತಾಲೂಕಿನ ಭುವನಹಳ್ಳಿ ಗ್ರಾಮದ ಮುನೇಗೌಡ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಇದೀಗ ಸಾವನಪ್ಪಿರುವ ವ್ಯಕ್ತಿ ಎಂದು ತಿಳಿದುಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಭುವನಹಳ್ಳಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ನಾಲ್ಕು ದಿನಗಳ ಹಿಂದೆ ಉಸಿರಾಟದ ಸಮಸ್ಯೆಯಿಂದ ಮುನೇಗೌಡ ಆಸ್ಪತ್ರೆಗೆ ದಾಖಲಾಗಿದ್ದರು. ಏಕಾಏಕಿ ಕಾಣಿಸಿಕೊಂಡ ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಇದೀಗ ಮುನೇಗೌಡ ಸಾವನಪ್ಪಿದ್ದಾರೆ.

Read More

ಉತ್ತರಕನ್ನಡ : ಆಟಿಕೆ ತುಂಬಿದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಉಳಿದ ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸುಳಿಮೂರ್ಕಿ ಬಳಿ ಒಂದು ಘಟನೆ ನಡೆದಿದೆ. ಆಟಿಕೆ ತುಂಬಿದ ಲಾರಿಯೊಂದು ಸಾಗರದಿಂದ ಹೊನ್ನಾವರ ಕಡೆ ಬರುತ್ತಿತ್ತು. ಇವಳೇ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರಿಗೆ ಗಾಯಗಳಾಗಿವೆ. ಗಾಯಾಳುಗಳಿಗೆ ಹೊನ್ನಾವರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಈ ಒಂದು ಪ್ರಕರಣ ದಾಖಲಾಗಿದೆ.

Read More

ತುಮಕೂರು : ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಕಂಬದಹಳ್ಳಿ ಹತ್ತಿರ ಅತಿ ವೇಗವಾಗಿ ಬಂದ ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿ ಗ್ರಾಮದ ಬಸಣ್ಣನವರ ಮಗ ಪ್ರವೀಣ್ ( 23) ಹಾಗೂ ರಂಗನಾಥನವರ ಮಗ ಹರ್ಷೀತ್ (22) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಗೋವಾಕ್ಕೆ ಹೋಗಿ ಬರುವಾಗ ಕಂಬದಹಳ್ಳಿ ಗ್ರಾಮದ ಆನಂದ್ ಎಂಬುವರಿಗೆ ಸೇರಿದ ಲಾರಿಗೆ ಡಿಕ್ಕಿ ಸಂಭವಿಸಿದೆ. ಮೂವರು ಸ್ನೇಹಿತರು ಗೋವಾಕ್ಕೆ ಹೋಗಿದ್ದರು ಈ ಮೂವರ ಪೈಕಿ ಹರ್ಷಾ ಎಂಬುವರು ತುಮಕೂರು ಜಿಲ್ಲೆಯ ಶಿರಾದಲ್ಲಿ ಇಳಿದಿದ್ದಾರೆ. ಈಗ ನಿದ್ದೆ ಬರುತಿದೆ ನಾವು ನಮ್ಮ ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡು ಬೆಳಿಗ್ಗೆ ಊರಿಗೆ ಹೋಗೋಣ ಎಂದು ಹೇಳಿದರು ಕೇಳದೆ ಈ ಇಬ್ಬರು ಅಲ್ಲಿಂದ ಬಂದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ. ಮಧುಗಿರಿ ಕಡೆಯಿಂದ ಇಟಿಎಸ್ ಕಾರು ಬೆಳಗಿನ ಜಾವ ಸುಮಾರು 3-30 ರೂಂ ಸಮಯದಲ್ಲಿ ಬಂದಿದೆ.ಅದೆ ಸಮಯಕ್ಕೆ ಲಾರಿ ಸಹ ಕಂಬದಹಳ್ಳಿ ಯಿಂದ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಮತ್ತೊಂದು ಅಗ್ನಿ ದುರಂತ ಸಂಭವಿಸಿದ್ದು ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಮೂವರಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಕಿತ್ತಾಗನಹಳ್ಳಿಯಲ್ಲಿ ನಡೆದಿದೆ. ಹೌದು ಕಿತ್ತಾಗನಹಳ್ಳಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಕಿತ್ತಾಕನಹಳ್ಳಿ ಗ್ರಾಮದಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಅಕ್ಕ ಪಕ್ಕದ ನಾಲ್ಕೈದು ಮನೆಗಳು ಹಾಗೂ ಕೆಲವು ವಾಹನಗಳಿಗೂ ಕೂಡ ಹಾನಿಗೊಳಗಾಗಿವೆ.ಘಟನೆಯಲ್ಲಿ ಗಾಯಗೊಂಡ ಇಬ್ಬರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸೂರ್ಯ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ನಡೆದಿದೆ.

Read More

ಬೆಂಗಳೂರು : ಸದನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕುರಿತು ಅಶ್ಲೀಲ ಪದ ಬಳಸಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರನ್ನು ಬೆಳಗಾವಿಯ ಹಿರೇಬಾಗೇವಾಡಿ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದರು. ಇದೀಗ ಈ ಒಂದು ಬಂಧನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಂಎಲ್ಸಿ ಸಿಟಿ ರವಿ ಅವರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ಇಮೇಲ್ ಮುಖಾಂತರ ಸುಮಾರು 13 ಪುಟಗಳ ದೂರು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಹೌದು ಕಳೆದ ಡಿಸೆಂಬರ್ ನಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ಕಲಾಪದ ಸಂದರ್ಭದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕುರಿತು ಬಿಜೆಪಿ ಎಂಎಲ್ಸಿ ಸಿಟಿ ರವಿ ಪ್ರಸ್ಟಿಟ್ಯೂಟ್ ಎಂದು ಅಶ್ಲೀಲವಾಗಿ ಕರೆದಿದ್ದರು. ಇದರಿಂದ ಮನನೊಂದ ಸಚಿವ ಲಕ್ಷ್ಮಿ ಹೆಬ್ಬಾಳಕರ್ ಅವರು ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಸಿಡಿ ರವಿ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಬಳಿಕ ಪೊಲೀಸರು ಸಿಟಿ ರವಿ ಅವರನ್ನು ಅರೆಸ್ಟ್ ಮಾಡಿದ್ದರು. ಅರೆಸ್ಟ್ ಮಾಡಿದ ಬಳಿಕ ಬೆಳಗಾವಿ ಬಾಗಲಕೋಟೆ ಸೇರಿದಂತೆ ಮೂರು ಜಿಲ್ಲೆಗಳನ್ನು…

Read More

ವಿಜಯಪುರ : ಮುಂದಿನ ತಿಂಗಳು ಫೆಬ್ರವರಿ 4ರಂದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನಲ್ಲಿ 1008 ಸಾಧು-ಸಂತರ ಪಾದ ಪೂಜೆ ಮಾಡುವ ಮೂಲಕ ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆ ಮಾಡಲಾಗುತ್ತದೆ ಎಂದು ಬಿಜೆಪಿಯ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಘೋಷಿಸಿದ್ದಾರೆ. ಇಂದು ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,ಫೆಬ್ರವರಿ 4 ರಂದು ಬಸವನಬಾಗೇವಾಡಿಯಲ್ಲಿ ಕ್ರಾಂತಿವೀರ ಬ್ರಿಗೇಡ್ ಉದ್ಘಾಟಿಸುವುದಾಗಿ ಘೋಷಿಸಿದ್ದಾರೆ. ಒಂದು ಲಕ್ಷ ಜನರ ಭಾಗವಹಿಸುವಿಕೆಯೊಂದಿಗೆ ನಡೆಯುವ ಈ ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗದ ಸ್ವಾಮೀಜಿಗಳ ಅಭಿವೃದ್ಧಿ ಮತ್ತು ಹಿಂದೂ ಸಮಾಜದ ಹಿತಾಸಕ್ತಿಗಳ ರಕ್ಷಣೆಗೆ ಬ್ರಿಗೇಡ್ ಕೆಲಸ ಮಾಡಲಿದೆ ಎಂದು ಅವರು ಹೇಳಿದ್ದಾರೆ. ಈ ಕಾರ್ಯಕ್ರಮದಲ್ಲಿ ಕನ್ಹೇರಿ ಮಠದ ಶ್ರೀಗಳು ಹಾಗೂ ಕಾಗಿನೆಲೆ ಮಹಾ ಸಂಸ್ಥಾನದ ಕನಕ ಗುರುಪೀಠದ ತಿಂಥಣಿ ಶಾಖಾ ಮಠದ ಸಿದ್ದರಾಮಾನಂದಪುರಿ‌ ಸ್ವಾಮೀಜಿ ‌ಉದ್ಘಾಟನೆ ಮಾಡುತ್ತಾರೆ. ಜನವರಿ 12 ರಿಂದ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇವೆ. ಪ್ರವಾಸದ ಮೂಲಕ ಬ್ರಿಗೇಡ್ ಬಗ್ಗೆ ಜಾಗೃತಿ ಮೂಡಿಸುತ್ತೇವೆ.ಹಿಂದೂ ಸಮಾಜದ ಪರವಾಗಿ ಬ್ರಿಗೇಡ್ ಹೋರಾಟ ಮಾಡಲಿದೆ. ಹಿಂದುಳಿದ…

Read More

ತುಮಕೂರು : ಟಾಟಾ ಏಸ್ ವಾಹನದಲ್ಲಿ ಜೈ ಭೀಮ್ ಹಾಡು ಹಾಕಿದ್ದಕ್ಕೆ ರೈಲ್ವೆ ಪೊಲೀಸ್ ಹಾಗೂ ಇನ್ನೊಬ್ಬ ವ್ಯಕ್ತಿಯಿಂದ ವಾಹನದ ಚಾಲಕ ಹಾಗೂ ವಾಹನದಲ್ಲಿದ್ದ 19 ವರ್ಷದ ಯುವಕನ ಮರ್ಮಾಂಗಕ್ಕೆ ಒದ್ದು ಭೀಕರವಾಗಿ ಹಲ್ಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದಲ್ಲಿ ನಡೆದಿದೆ. ಈ ಒಂದು ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಗಿಡದಮುದ್ದಿನ ಹಳ್ಳಿ ಬಳಿ ಒಂದು ನಡೆದಿದೆ. ತುಮಕೂರು ತಾಲೂಕಿನ ಸಿರಿವರ ಗ್ರಾಮದ 19 ವರ್ಷದ ದೀಪು ಹಾಗೂ ಟಾಟಾ ಏಸ್ ವಾಹನದ ಚಾಲಕ ನರಸಿಂಹಮೂರ್ತಿ ಎನ್ನುವವರ ಮೇಲೆ ಹಲ್ಲೆ ನಡೆದಿದೆ. ರೈಲ್ವೆ ಪೊಲೀಸ್ ಚಂದ್ರಶೇಖರ್ ಹಾಗೂ ನರಸಿಂಹರಾಜು ಎಂಬುವವರಿಂದ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ. ಹಲ್ಲೆ ಕುರಿತು, ಟಾಟಾ ಏಸ್ ನಲ್ಲಿ ವಾಹನದಲ್ಲಿ ಅಂಬೇಡ್ಕರ್ ಹಾಡು ಹಾಕಿ ಹೋಗುತ್ತಿದ್ದೆವು. ಚಂದ್ರಶೇಖರ್ ನರಸಿಂಹರಾಜು ಬೈಕಿನಲ್ಲಿ ಬಂದಿದ್ದರು. ನಮ್ಮ ವಾಹನ ಅಡಗಟ್ಟಿ ಚಂದ್ರಶೇಖರ್ ಹಾಗೂ ನರಸಿಂಹರಾಜು ಗಲಾಟೆ ಮಾಡಿದ್ದಾರೆ. ಯಾಕೆ ಅಂಬೇಡ್ಕರ್ ಹಾಡು ಹಾಕಿದ್ದೀರಾ ನಿಮ್ಮ ಜಾತಿ ಯಾವುದು?…

Read More

ಬೆಂಗಳೂರು : ಸಾರಿಗೆ ಬಸ್ಗಳಲ್ಲಿ ಟಿಕೆಟ್ ಪ್ರಯಾಣದ ದರ ಶೇಕಡ 15 ರಷ್ಟು ಏರಿಸಿದಕ್ಕಾಗಿ ವಿಪಕ್ಷ ನಾಯಕ ಆರ್ ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದರು. ಇದಕ್ಕೆ ಸಚಿವರ ಅಮಲಿಂಗ ರೆಡ್ಡಿ ಆರ್ ಅಶೋಕ್ ಅವರು ಸಾರಿಗೆ ಸಚಿವರಾಗಿದ್ದಾಗ ಬೆಲೆ ಏರಿಕೆ ಮಾಡಿದ್ದನ್ನು ದಾಖಲೆ ಸಮೇತ ಪಟ್ಟಿ ರಿಲೀಸ್ ಮಾಡಿದರು. ಇದೀಗ ಆರ್ ಅಶೋಕ್ ನನ್ನ ಅವಧಿಯಲ್ಲಿ ಸಾರಿಗೆ ಇಲಾಖೆ 1500 ಕೋಟಿ ರೂಪಾಯಿ ಲಾಭದಲ್ಲಿತ್ತು ಎಂದು ಸಚಿವ ರಾಮಲಿಂಗಾರೆಡ್ಡಿ ಅವರಿಗೆ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕುಂತಿ ಮಕ್ಕಳಿಗೆ ರಾಜ್ಯ ಸಿಕ್ಕ ಹಾಗೆ ನಮಗೆ ಅಧಿಕಾರ ಸಿಕ್ಕಿತ್ತು. ನಮಗೆ ಎಂಟುವರೇ ವರ್ಷಗಳ ಕಾಲ ಮಾತ್ರ ಅಧಿಕಾರ ಸಿಕ್ಕಿತ್ತು. ನಾನು ಸಾರಿಗೆ ಸಚಿವ ಆದಾಗ ಯಾವತ್ತೂ ಸಾರಿಗೆ ಇಲಾಖೆ ಲಾಸ್ ಇರಲಿಲ್ಲ. ಇಲಾಖೆ 1500ಕೋಟಿ ಲಾಭದಲ್ಲಿತ್ತು ಎಂದು ಸಚಿವ ರಾಮಲಿಂಗಾರೆಡ್ಡಿಗೆ ವಿಪಕ್ಷ ನಾಯಕ ಅಶೋಕ್ ಇದೀಗ ತಿರುಗೇಟು ನೀಡಿದ್ದಾರೆ. ದೇಶವನ್ನು…

Read More

ಗದಗ : ಆಗ ತಾನೇ ಶಾಲೆ ಮುಗಿಸಿಕೊಂಡು ಮನೆಗೆ ಬಂದಂತಹ 8 ವರ್ಷದ ಬಾಲಕನೊಬ್ಬ ಸ್ನೇಹಿತರೊಂದಿಗೆ ಆಟವಾಡುವಾಗ ಗೋಡೆಯ ಬಳಿ ಅವಿತುಕೊಂಡಿದ್ದಾನೆ. ಈ ವೇಳೆ ಏಕಾಏಕಿ ಗೋಡೆ ಕುಸಿದು 8 ವರ್ಷದ ಬಾಲಕ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ನರಗುಂದ ಪಟ್ಟಣದ ದಂಡಾಪೂರ ಕುರುಬಗೇರಿ ಓಣಿಯಲ್ಲಿ ಘಟನೆ ಜರುಗಿದೆ. ಮೃತ ಬಾಲಕನನ್ನು ಪ್ರದೀಪ್ ಗೋನಾಳ್ ಎಂದು ತಿಳಿದುಬಂದಿದೆ. ಈತ ಶಾಲೆಯಿಂದ ಮನೆಗೆ ಬಂದ ಬಳಿಕ ಗೆಳೆಯರೊಂದಿಗೆ ಆಟವಾಡುವಾಗ ಘಟನೆ ಜರುಗಿದೆ. ಗೋಡೆ ಬಿದ್ದ ಬವಾರಿ ಶಬ್ದಕ್ಕೆ ಓಡಿ ಬಂದು ಸ್ಥಳೀಯರು ರಕ್ಷಿಸಿದ್ದಾರೆ ಆದರೆ ಆಸ್ಪತ್ರೆಗೆ ಕರೆದೊಯುವಾಗ ಪ್ರದೀಪ್ ಮಾರ್ಗ ಮಧ್ಯೆ ಕೊನೆಯುಸಿರೆಳಿದಿದ್ದಾನೆ.ಘಟನೆ ಕುರಿತು ನರಗುಂದ ಪಟ್ಟಣ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More