Author: kannadanewsnow05

ಕಲಬುರ್ಗಿ : ಜಿಲ್ಲೆಯ ಆಳಂದ್ ಪಟ್ಟಣದಲ್ಲಿರುವ ಲಾಡ್ಲೆ ಮಶಾಕ್ ದರ್ಗಾದಲ್ಲಿ ಶಿವರಾತ್ರಿಯಂದು ರಾಘವ ಚೈತನ್ಯ ಶಿವಲಿಂಗ ದೇವಸ್ಥಾನದ ಅಡಿಗಲ್ಲು ಹಾಕುತ್ತೇವೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಕಲ್ಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಘವ ಚೈತನ್ಯ ಅವರು ಅಲ್ಲಿ ಈಶ್ವರಲಿಂಗ ಸ್ಥಾಪನೆ ಮಾಡಿದ್ದಾರೆ.ಆದರೆ ಮುಸ್ಲಿಮರು ಅಲ್ಲಿ ಅತಿಕ್ರಮಣ ಮಾಡಿ ಮಸೀದಿ ನಿರ್ಮಿಸಿ ಪ್ರತಿ ವರ್ಷ ಉರುಸ್ ಆಚರಿಸುತ್ತಾರೆ.ನೂರಾರು ವರ್ಷದ ಹಿಂದಿನ ಪವಿತ್ರ ಕ್ಷೇತ್ರವಿದು. ಪೂಜೆ ಸಲ್ಲಿಸಲು ಕಳೆದ ವರ್ಷವೇ ಕೋರ್ಟ್ ಅನುಮತಿ ಕೊಟ್ಟಿದೆ ಎಂದರು. ಆ ಸ್ಥಳದಲ್ಲಿ ಈಶ್ವರ ಲಿಂಗ ಇದ್ದ ಮೇಲೆ ಜೀರ್ಣೋದ್ಧಾರ, ದೇವಸ್ಥಾನ ನಿರ್ಮಾಣ ಮಾಡುವುದು ನಮ್ಮ ಕರ್ತವ್ಯ. ಶಿವರಾತ್ರಿ ದಿನ ಗುದ್ದಲಿ ಪೂಜೆಯಿಂದ ಪ್ರಾರಂಭ ಮಾಡುತ್ತೇವೆ. ಯಾವುದೇ ರೀತಿಯ ಕಾನೂನು ಬಾಹಿರವಾಗಿ ಮಾಡುವುದಿಲ್ಲ. ದೇವಸ್ಥಾನ ಅಲ್ಲಿ ಕಟ್ಟುವುದು ನಿಶ್ಚಿತ ಎಂದು ಮುತಾಲಿಕ್ ಹೇಳಿದ್ದಾರೆ. ಆದ್ದರಿಂದ ಶಿವರಾತ್ರಿಯಂದು ಅಲ್ಲಿ ಪೂಜೆ ಮಾಡುವುದು ನಮ್ಮ ಹಕ್ಕು. ಶಿವರಾತ್ರಿ ದಿನ ಆ ಸ್ಥಳದಲ್ಲಿ ಸಾವಿರಾರು ಜನ ಅಲ್ಲ,…

Read More

ಬೆಂಗಳೂರು : ಕೇಂದ್ರದಿಂದ ರಾಜ್ಯಕ್ಕೆ ನೀಡುವ ಅನುದಾನದಲ್ಲಿ ಅನುಸರಿಸುತ್ತಿರುವ ತಾರತಮ್ಯಕ್ಕೆ ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ ಪ್ರತಿಕ್ರಿಯೆ ನೀಡಿದ್ದು, ಕೇಂದ್ರದ NDRF ಅಡಿ ರೈತರಿಗೆ ಹಣ ಕೊಡುವುದು ವಿಳಂಬವಾಗುತ್ತಿದೆ.ಕಳೆದ ವರ್ಷ ರೈತರಿಗೆ ಕೊಡಬೇಕಾದ ಹಣ ಲೂಟಿಯಾಗಿದೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ಕಟ್ಟುವ ರಾಜ್ಯದಲ್ಲಿ ಕರ್ನಾಟಕ ಎರಡನೇ ಸ್ಥಾನ ಹೊಂದಿದೆ. ಹಾಗಾಗಿ ನಮ್ಮ ಹಕ್ಕನ್ನು ಕೇಳುತ್ತಿದ್ದೇವೆ.ಬರ ಪರಿಹಾರಕ್ಕಾಗಿ ಪ್ರತಿಪಕ್ಷಗಳು ಕೂಡ ಒತ್ತಾಯ ಮಾಡಬೇಕಿದೆ.ನಮಗೆ ರಾಜ್ಯದ ಜನರ ಹಿತ ಮುಖ್ಯ ರಾಜಕೀಯ ಮುಖ್ಯ ಅಲ್ಲ ಎಂದು ಬೆಂಗಳೂರಿನಲ್ಲಿ ಕಂದಾಯ ಇಲಾಖೆ ಸಚಿವ ಕೃಷ್ಣ ಬೈರೇಗೌಡ ಹೇಳಿದರು. 18,172 ಕೋಟಿ ಬರ ಪರಿಹಾರಕ್ಕಾಗಿ ಕೇಂದ್ರಕ್ಕೆ ಮನವಿ ಮಾಡಿದ್ದೇವೆ. ಸೆಪ್ಟೆಂಬರ್ 13ರಂದು ಬರ ಪೀಡಿತ ತಾಲೂಕುಗಳಾಗಿ ಕೂಡ ಘೋಷಣೆ ಮಾಡಿದ್ದೇವೆ. ಈ ಕುರಿತಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ. ಪರಿಹಾರಕ್ಕೆ ಕೇಂದ್ರ ಕೃಷಿ ಕಾರ್ಯದರ್ಶಿಯನ್ನು ಕೂಡ ಭೇಟಿ ಮಾಡಿದ್ದೇವೆ. ಡಿಸೆಂಬರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು…

Read More

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ಟೀಕೆ ಮಾಡುವ ವಿಚಾರವಾಗಿ ಬಿಜೆಪಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದು, ಗ್ಯಾರಂಟಿಗಳ ಬಗ್ಗೆ ವಿರೋಧವಿದ್ದರೆ ಒಂದೇ ಬಾರಿ ನೇರ ಸ್ಪಷ್ಟವಾಗಿ ಹೇಳಲಿ ಎಂದು ಗುಡುಗಿದ್ದಾರೆ. ಈ ಕುರಿತಂತೆ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು ಬಿಜೆಪಿ ಆಡಳಿತದ ರಾಜ್ಯಗಳಲ್ಲೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಬೇಕು ಈ ಮೂಲಕ ಬಿಜೆಪಿಯವರು ತಮ್ಮ ದಮ್ ತಾಕತ್ತು ತೋರಿಸಬೇಕು ಅದನ್ನು ಬಿಟ್ಟು ಆಗಾಗ ಗೊಣಗಾಡಿದರೆ ಏನು ಫಲ? ಎಂದು ಪ್ರಶ್ನಿಸಿದ್ದಾರೆ. ಇದೀಗ ಕರ್ನಾಟಕಕ್ಕೆ ಆಗಮಿಸಿರುವ ಕೇಂದ್ರ ಗೃಹಸಚಿವ ಅಮಿತ್ ಶಾಅವರು ‘‘ಗ್ಯಾರಂಟಿ ಯೋಜನೆಗಳಿಂದ ಬೊಕ್ಕಸ ಖಾಲಿಯಾಗಿದೆ’’ ಎಂದು ನಮ್ಮ ಸರ್ಕಾರದ ಬಗ್ಗೆ ಇರುವ ಈರ್ಷ್ಯೆಯನ್ನು ಹೊರಹಾಕಿದ್ದಾರೆ. ಇದು ಅಮಿತ್ ಶಾ ಅವರ ಖಚಿತ ಅಭಿಪ್ರಾಯವಾಗಿದ್ದರೆ ಅವರು ನನ್ನ ಜೊತೆ ಬಹಿರಂಗ ಚರ್ಚೆಯಲ್ಲಿ ಪಾಲ್ಗೊಳ್ಳಲಿ, ಗ್ಯಾರಂಟಿ ಯೋಜನೆಗಳಿಂದ ನಮ್ಮ ಖಜಾನೆ ಬರಿದಾಗಿಲ್ಲ, ಬದಲಿಗೆ ತೆರಿಗೆ ಹಂಚಿಕೆ ಮತ್ತು ಅನುದಾನ ವಿತರಣೆಯಲ್ಲಿ…

Read More

ಬಳ್ಳಾರಿ : ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲದೆ ಹೋದಲ್ಲಿ ಗ್ಯಾರಂಟಿ ಯೋಜನೆಗಳು ರದ್ದಾಗಲಿವೆ ಎಂದು ಹಲವು ಕಾಂಗ್ರೆಸ್ ನಾಯಕರು ಹೇಳಿಕೆ ನೀಡಿದರು ಇದಕ್ಕೆ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ ನೀಡಿದ್ದು, ಇದೆಲ್ಲಾ ಸುಳ್ಳು ಮುಂದಿನ ಐದು ವರ್ಷದವರೆಗೆ ಗ್ಯಾರಂಟಿ ಯೋಜನೆಗಳು ಮುಂದುವರಿಯಲಿವೆ ಎಂದು ಸ್ಪಷ್ಟ ಪಡಿಸಿದರು. ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆರಿಗೆ ವಿಚಾರವಾಗಿ ಸಂಸದ ಡಿಕೆ ಸುರೇಶ್ ಮಾತನಾಡಿದ್ದಾರೆ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ಖರ್ಗೆ ಕೂಡ ಸ್ಪಷ್ಟನೆ ನೀಡಿದ್ದಾರೆ. ನಟಿ ಕಂಗನಾ ಭಿಕ್ಷೆಯಿಂದ ಸ್ವಾತಂತ್ರ್ಯ ಬಂದಿದೆ ಅಂತ ಹೇಳಿದ್ದಾರೆ. ಈ ಬಗ್ಗೆ ಚರ್ಚೆ ಆಗಲೇ ಇಲ್ಲ ಎಂದ ಸಚಿವ ಸಂತೋಷ್ ಲಾಡ್ ತಿಳಿಸಿದರು. ಈಶ್ವರಪ್ಪ ಏನು ಬೇಕಾದರೂ ಮಾತನಾಡುತ್ತಾರೆ ಚರ್ಚೆಯಾಗುವುದಿಲ್ಲ.ಜೋಶಿ ರಾಜ್ಯ ಸರ್ಕಾರವನ್ನು ತಾಲಿಬಾನಿಗೆ ಹೋಲಿಸಿದ್ದಾರೆ. ಆದರೆ ನಾವು ಮಾತನಾಡುವುದು ಮಾತ್ರ ಚರ್ಚೆ ಆಗುತ್ತೆ. ನಮ್ಮ ತೆರಿಗೆ ಹಣದ ಬಗ್ಗೆ ನಾವು ಹೋರಾಟ ಮಾಡುತ್ತಿದ್ದೇವೆ ಎಂದರು. ಈ ಬಾರಿಯ ಲೋಕಸಭಾ ಚುನಾವಣೆ ಬಳಿಕ ಗ್ಯಾರಂಟಿ ರದ್ದಾಗುತ್ತೆ ಎಂಬುವುದು ಸುಳ್ಳು.…

Read More

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ನಾನು ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ  ಅಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೇ ನೀಡಿದರು. ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ರೀತಿಯಾಗಿ ಈ ವಿಷಯದಲ್ಲಿ ಯೂಟರ್ನ ಹೊಡೆಯುವುದಿಲ್ಲ ನನ್ನ ನಿರ್ಧಾರದಲ್ಲಿ ಸ್ಪಷ್ಟತೆ ಇದೆ ಚುನಾವಣೆಯಲ್ಲಿ ಪಾಲ್ಗೊಳ್ಳಬೇಕು ಅಂತ ಮುಖಂಡರು ಒತ್ತಾಯಿಸಿದರು. ಈ ಕಾರಣದಿಂದ ನಾನು ಮಂಡ್ಯ ಭಾಗದಲ್ಲಿ ಓಡಾಡಿದ್ದೆ ಎಂದು ತಿಳಿಸಿದರು. ನನ್ನ ಗಮನ 28 ಕ್ಷೇತ್ರಗಳ ಮೇಲು ಇರುತ್ತದೆ. ನನ್ನ ಸ್ಪರ್ಧೆಗೆ ಸಹಜವಾಗಿ ಮಂಡೆ ಮುಖಂಡರ ಒತ್ತಾಯ ಇದೆ.ಮಂಡ್ಯ ಕ್ಷೇತ್ರದ ಬಿಜೆಪಿ ಟಿಕೆಟ್ ಗೆ ಸುಮಲತ ಒತ್ತಾಯ ವಿಚಾರ ಏನೇ ಪ್ರಶ್ನೆ ಕೇಳಿದರು ಎಲ್ಲದಕ್ಕೂ ಕಾಲವೇ ಉತ್ತರಿಸುತ್ತದೆ. ಎಂದು ಅವರು ತಿಳಿಸಿದರು. ಅಮಿತ್ ಶಾ ಅವರನ್ನು ಎಚ್ ಡಿ ಕುಮಾರಸ್ವಾಮಿ ಭೇಟಿಯಾಗುತ್ತಿಲ್ಲ. ಷಾ ಭಾಗವಹಿಸಲಿದ್ದ ಕಾರ್ಯಕ್ರಮದಿಂದ ಹೆಚ್‍ಡಿ ಕುಮಾರಸ್ವಾಮಿ ದೂರ ಉಳಿದಿದ್ದಾರೆ. ಈ ಕುರಿತು ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದು…

Read More

ಬೆಂಗಳೂರು : ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನುದಾನ ಹಂಚಿಕೆ ವಿಚಾರದಲ್ಲಿ ಮಲತಾಯಿ ಧೋರಣೆ ಆಗುತ್ತಿದೆ ಎಂದು ವಿರೋಧಿಸಿ ಇತ್ತೀಚಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ 136 ಶಾಸಕರು ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸಿದ್ದರು. ಇದೀಗ ಗೃಹ ಸಚಿವ ಜಿ ಪರಮೇಶ್ವರ್ ಕೂಡ ಕೇಂದ್ರದ ವಿರುದ್ಧ ಕಿಡಿ ಕಾರಿದ್ದು ಕೇಂದ್ರದಿಂದ ಒಂದೇ ಒಂದು ರೂಪಾಯಿ ಕೂಡ ಬಂದಿಲ್ಲ ಎಂದು ತಿಳಿಸಿದರು.ಬೆಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಸುದ್ಧಿಗಾರರೊಂದಿಗೆ ಮಾತನಾಡಿ, ಸಂಸತ್ ನಲ್ಲಿ ಸಚಿವೆ ನಿರ್ಮಲಾ ಸೀತಾರಾಮನ ಸುಳ್ಳು ಹೇಳಿದ್ದಾರೆ ಕೇಂದ್ರದಿಂದ ನಮಗೆ ಒಂದೇ ಒಂದು ರೂಪಾಯಿ ಬಂದಿಲ್ಲ ಎಂದು ಕೇಂದ್ರದ ವಿರುದ್ಧ ಆಕ್ರೋಶ ಹೊರಹಕಿದ್ದಾರೆ. ಕರ್ನಾಟಕಕ್ಕೆ ಅನುದಾನ ನೀಡಿದ್ದೇವೆ ಎಂದು ನಿರ್ಮಲ ಸೀತಾರಾಮನ್ ಸುಳ್ಳು ಹೇಳಿದ್ದಾರೆ. ಅಪರಾಧ್ಯಾನ ಮಾಡಿ ಹೋದರು ಹಣ ಬಿಡುಗಡೆ ಮಾಡಿಲ್ಲ. ನಮಗೆ ಕೊಡಬೇಕಾದ ಏನ್ ಡಿ ಆರ್ ಎಫ್ ಹಣ ಕೊಡಿ ಎಂದು ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಡಾ. ಜಿ…

Read More

ಕೊಪ್ಪಳ : ಮನೆಯಲ್ಲಿ ಸಿಲಿಂಡರ್ ಸೋರಿಕೆಯಾಗಿ ಮನೆ ಸಂಪೂರ್ಣವಾಗಿ ಬೆಂಕಿಗೆ ಅಹುತಿಯಾಗಿ ಹೊತ್ತಿ ಉರಿದಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತೋಪಲಕಟ್ಟಿ ಎಂಬ ಗ್ರಾಮದಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ ಆದರೆ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸಿಲಿಂಡರ್ ಸೋರಿಕೆಯಿಂದ ಮನೆಯಲ್ಲಿ ಅಗ್ನಿವಘಡ ಸಂಭವಿಸಿದ್ದು, ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತೋಪಲಕಟ್ಟಿ ಗ್ರಾಮದಲ್ಲಿ ಮುತ್ತಪ್ಪ ಕುಮಾರ್ ಎನ್ನುವವರ ಮನೆಯಲ್ಲಿ ಈ ಸಿಲಿಂಡರ್ ಸೋರಿಕೆಯ ಈ ಘಟನೆ ನಡೆದಿದೆ. ಆದರೆ ಯಾವುದೇ ರೀತಿಯಾದ ಪ್ರಾಣಾಪಾಯ ಸಂಭವಿಸಿಲ್ಲವಾದ್ದರಿಂದ ಭಾರಿ ಅನಾಹುತ ಒಂದು ತಪ್ಪಿದೆ. ಘಟನೆ ನಡೆದ ಕೂಡಲೇ ಮನೆಯಿಂದ ನಿವಾಸಿಗಳು ಹೊರಗೆ ಓಡಿ ಬಂದಿದ್ದಾರೆ. ಸಿಲಿಂಡರ್ ಗೆ ಹೊತ್ತಿದ್ದ ಬೆಂಕಿಯನ್ನು ಅಗ್ನಿಶಾಮಕ ದಳ ಸಿಬ್ಬಂದಿ ನಂದಿಸಿದೆ.ಸಿಲಿಂಡರ್ ಸ್ಫೋಟವಾಗದಂತೆ ಸಿಬ್ಬಂದಿ ಜಾಗೃತಿ ವಹಿಸಿದ್ದರು ಬೆಂಕಿ ಹೊತ್ತುತ್ತಿದ್ದಂತೆ ನಿವಾಸಿಗಳು ಹೊರಗಡೆ ಓಡಿ ಬಂದಿದ್ದಾರೆ ಹೊರಗೆ ಓಡಿಬಂದು ಮನೆಯವರು ಪ್ರಾಣ ಉಳಿಸಿಕೊಂಡಿದ್ದಾರೆ. ಘಟನೆ ಕುರಿತಂತೆ ಕುಷ್ಟಗಿ ತಾಲೂಕಿನಲ್ಲಿ ಪ್ರಕರಣ ದಾಖಲಾಗಿದೆ.

Read More

ಮೈಸೂರು : ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 28 ಕ್ಷೇತ್ರಗಳನ್ನು ಗೆಲ್ಲುವ ಗುರಿ ಹಿನ್ನೆಲೆಯಲ್ಲಿ ಎಂದು ಕೇಂದ್ರ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿದ್ದು, ಮೈಸೂರಿನಲ್ಲಿ ಬಿಜೆಪಿ ನಾಯಕರು ಅಂದಿಗೆ ಸಭೆ ನಡೆಸಲಿದ್ದಾರೆ ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಬಿಜೆಪಿ ಮಾಜಿ ಶಾಸಕ ಪ್ರೀತಮ್ ಗೌಡ ಹಾಗೂ ಹಾಲಿ ಸಂಸದ ಪ್ರತಾಪ್‌ ಸಿಂಹ ನಡುವೆ ಕ್ಲಸ್ಟರ್ ನಾಯಕರ ವಿಚಾರಕ್ಕೆ ಸಂಬಂಧಿಸಿದಂತೆ ಕಿತ್ತಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಅಮಿತ್ ಶಾ ಬೇಟಿ ವೇಳೆ ಬಿಜೆಪಿ ಮಾಜಿ ಶಾಸಕ ಪ್ರೀತಮ್ ಗೌಡ ಹಾಗೂ ಹಾಲಿ ಸಂಸದ ಪ್ರತಾಪ್ ಸಿಂಹ ನಡುವೆ ವಾಕ್ ಸಮರ ನಡೆದಿದೆ. ಸಂಸದ ಹಾಗೂ ಮಾಜಿ ಶಾಸಕ ಪರಸ್ಪರ ಬೈದಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.ಅಮಿತ್ ಶಾ ಸ್ವಾಗತಕ್ಕೆ ಕ್ಲಸ್ಟರ್ ನಾಯಕರ ವಿಚಾರವಾಗಿ ಕಿತ್ತಾಡಿಕೊಂಡಿದ್ದಾರೆ. ಅಮಿತ್ ಶಾ ಸ್ವಾಗತಕ್ಕೆ ನಾಯಕರ ಲೈನಪ್ ಉಸ್ತುವಾರಿಯನ್ನು ಪ್ರೀತಮ್ ಗೌಡ ಹೊತ್ತಿದ್ದರು. ಪಟ್ಟಿಯಲ್ಲಿ ಮೈಸೂರು ಸ್ಥಳೀಯ ನಾಯಕರ ಹೆಸರು ಇರಲಿಲ್ಲ. ಆದ್ದರಿಂದ ಪ್ರಥಮ ಗೌಡರನ್ನು ಈ ವೇಳೆ ಸಂಸದ…

Read More

ರಾಯಚೂರು : ಮಂಗನ ಬಾವು ಕಾಯಿಲೆ ಕೇವಲ ಉತ್ತರ ಕನ್ನಡ ದಕ್ಷಿಣ ಭಾಗದ ಹಲವು ಜಿಲ್ಲೆಗಳಲ್ಲಿ ಮಾತ್ರ ಪ್ರಕರಣಗಳು ಇವೆ ಎಂದು ಹೇಳಲಾಗಿತ್ತು, ಆದರೆ ಇದೀಗ ಈ ಒಂದು ಮಂಗನ ಬಾವು ಕಾಯಿಲೆ ರಾಯಚೂರಿಗೂ ಕಾಲಿಟ್ಟಿದ್ದು ಜಿಲ್ಲೆಯ ಲಿಂಗಸುಗೂರು ತಾಲೂಕಿನ ನೀರಲಕೇರಿ ಗ್ರಾಮದ ಸರ್ಕಾರಿ ಶಾಲೆಯ ಸುಮಾರು 150ಕ್ಕೂ ಹೆಚ್ಚು ಮಕ್ಕಳಲ್ಲಿ ಈ ಕಾಯಿಲೆ ಕಾಣಿಸಿಕೊಂಡಿದೆ. ಕಾಯಿಲೆ ಒಬ್ಬರಿಂದ ಒಬ್ಬರಿಗೆ ಹರಡಿ, ಇಡೀ ಶಾಲೆಯನ್ನು ಆವರಿಸಿದೆ. ಗಂಟಲು ಭಾಗದಲ್ಲಿ ಬಾವು, ತಲೆನೋವು, ಸ್ನಾಯು ಸೆಳೆತದಿಂದ ಮಕ್ಕಳು ಬಳಲುತ್ತಿದ್ದಾರೆ. ಬಾವು ಇರುವ ಕಡೆ ಅರಿಶಿಣ ಮತ್ತು ಪಟ್ಟಿ ಹಾಕಿ ಪೋಷಕರು ಮನೆ ಮದ್ದು ನೀಡುತ್ತಿದ್ದಾರೆ. ಮಂಗನ ಬಾವು ಕಾಯಿಲೆ ಹೆಚ್ಚುತ್ತಿರುವುದರಿಂದ ವಿದ್ಯಾರ್ಥಿಗಳು ಶಾಲೆಗೆ ಗೈರಾಗುತ್ತಿದ್ದಾರೆ. ಸದ್ಯ ಭಾದಿತರಿಗೆ ಆನೆಹೊಸರು, ಲಿಂಗಸಗೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವಿಚಾರ ತಿಳಿದು ಗ್ರಾಮದಲ್ಲಿ ಮುಕ್ಕಾಂ ಹೂಡಿರುವ ಆರೋಗ್ಯ ಇಲಾಖೆ ಅಧಿಕಾರಿಗಳು ಶಾಲೆಯ 300 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮತ್ತು ಗ್ರಾಮಸ್ಥರ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.…

Read More

ತುಮಕೂರು : ಇನ್ನೇನು ಕೆಲವೇ ತಿಂಗಳುಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು ಎಲ್ಲಾ ಪಕ್ಷಗಳು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು ಯಾವ ಕ್ಷೇತ್ರಕ್ಕೆ ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಗೆಲುವು ಖಚಿತ ಎಂಬುವುದು ಲೆಕ್ಕಾಚಾರ ಹಾಕಿ ಆಯಾ ಕ್ಷೇತ್ರಕ್ಕೆ ಅಭ್ಯರ್ಥಿಗಳಿಗೆ ಮಾಡುತ್ತವೆ. ಹೈಕಮಾಂಡ್ ಭೇಟಿ ಬಳಿಕ ತುಮಕೂರು ಕ್ಷೇತ್ರದಲ್ಲಿ ವಿ ಸೋಮಣ್ಣ ಮತ್ತೆ ಆಕ್ಟಿವ್ ಆಗಿದ್ದು ಮದುವೆ ಕಾರ್ಯಕ್ರಮದಲ್ಲಿ ವಿ. ಸೋಮಣ್ಣ ಭಾಗಿಯಾಗಿದ್ದಾರೆ. ಈ ವೇಳೆ ಒಕ್ಕಲಿಗ ನಾಯಕರನ್ನು ಭೇಟಿಯಾಗಿ ಸೋಮಣ್ಣ ಮಾತುಕತೆ ನಡೆಸಿದ್ದಾರೆ. ಲಿಂಗಾಯತ ಸಮುದಾಯದ ಮುಖಂಡರ ಮನೆಗೂ ಭೇಟಿ ನೀಡಿ ಚರ್ಚಿಸಿದ್ದಾರೆ. ವಿ ಸೋಮಣ್ಣಗೆ ಶಾಸಕರಾದ ಜ್ಯೋತಿ ಗಣೇಶ ಸುರೇಶ್ ಗೌಡ ಕೂಡ ಸಾತ್ ನೀಡಿದ್ದಾರೆ. ನಾನು ಲೋಕಸಭೆ ಟಿಕೆಟ್ ಆಕಾಂಕ್ಷಿ ಎಂದು ಈಗಾಗಲೇ ಜೆಸಿ ಮಧು ಸ್ವಾಮಿ ತಿಳಿಸಿದ್ದಾರೆ.ಜೆಸಿ ಮಾಧುಸ್ವಾಮಿ ಹೇಳಿಕೆ ಬೆನ್ನಲ್ಲೇ ವಿಶ್ವಮಣ್ಣ ಇದೀಗ ತುಮಕೂರು ಕ್ಷೇತ್ರದಲ್ಲಿ ಫುಲ್ ಆಕ್ಟಿವ್ ಆಗಿ ಓಡಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಇದರ ಬೆನ್ನಲ್ಲೆ ರಾಜ್ಯದಲ್ಲಿ ಇಂದು ಕೇಂದ್ರ ಸಚಿವ ಅಮಿತ್ ಷಾ ಭೇಟಿ ನೀಡಿದ್ದು…

Read More