Author: kannadanewsnow05

ವಿಜಯಪುರ : ಮುಂದಿನ ತಿಂಗಳು ಫೆಬ್ರವರಿ 4ರಂದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನಲ್ಲಿ 1008 ಸಾಧು-ಸಂತರ ಪಾದ ಪೂಜೆ ಮಾಡುವ ಮೂಲಕ ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆ ಮಾಡಲಾಗುತ್ತದೆ ಎಂದು ಬಿಜೆಪಿಯ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಘೋಷಿಸಿದ್ದಾರೆ. ಇಂದು ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,ಫೆಬ್ರವರಿ 4 ರಂದು ಬಸವನಬಾಗೇವಾಡಿಯಲ್ಲಿ ಕ್ರಾಂತಿವೀರ ಬ್ರಿಗೇಡ್ ಉದ್ಘಾಟಿಸುವುದಾಗಿ ಘೋಷಿಸಿದ್ದಾರೆ. ಒಂದು ಲಕ್ಷ ಜನರ ಭಾಗವಹಿಸುವಿಕೆಯೊಂದಿಗೆ ನಡೆಯುವ ಈ ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗದ ಸ್ವಾಮೀಜಿಗಳ ಅಭಿವೃದ್ಧಿ ಮತ್ತು ಹಿಂದೂ ಸಮಾಜದ ಹಿತಾಸಕ್ತಿಗಳ ರಕ್ಷಣೆಗೆ ಬ್ರಿಗೇಡ್ ಕೆಲಸ ಮಾಡಲಿದೆ ಎಂದು ಅವರು ಹೇಳಿದ್ದಾರೆ. ಈ ಕಾರ್ಯಕ್ರಮದಲ್ಲಿ ಕನ್ಹೇರಿ ಮಠದ ಶ್ರೀಗಳು ಹಾಗೂ ಕಾಗಿನೆಲೆ ಮಹಾ ಸಂಸ್ಥಾನದ ಕನಕ ಗುರುಪೀಠದ ತಿಂಥಣಿ ಶಾಖಾ ಮಠದ ಸಿದ್ದರಾಮಾನಂದಪುರಿ‌ ಸ್ವಾಮೀಜಿ ‌ಉದ್ಘಾಟನೆ ಮಾಡುತ್ತಾರೆ. ಜನವರಿ 12 ರಿಂದ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇವೆ. ಪ್ರವಾಸದ ಮೂಲಕ ಬ್ರಿಗೇಡ್ ಬಗ್ಗೆ ಜಾಗೃತಿ ಮೂಡಿಸುತ್ತೇವೆ.ಹಿಂದೂ ಸಮಾಜದ ಪರವಾಗಿ ಬ್ರಿಗೇಡ್ ಹೋರಾಟ ಮಾಡಲಿದೆ. ಹಿಂದುಳಿದ…

Read More

ತುಮಕೂರು : ಟಾಟಾ ಏಸ್ ವಾಹನದಲ್ಲಿ ಜೈ ಭೀಮ್ ಹಾಡು ಹಾಕಿದ್ದಕ್ಕೆ ರೈಲ್ವೆ ಪೊಲೀಸ್ ಹಾಗೂ ಇನ್ನೊಬ್ಬ ವ್ಯಕ್ತಿಯಿಂದ ವಾಹನದ ಚಾಲಕ ಹಾಗೂ ವಾಹನದಲ್ಲಿದ್ದ 19 ವರ್ಷದ ಯುವಕನ ಮರ್ಮಾಂಗಕ್ಕೆ ಒದ್ದು ಭೀಕರವಾಗಿ ಹಲ್ಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದಲ್ಲಿ ನಡೆದಿದೆ. ಈ ಒಂದು ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಗಿಡದಮುದ್ದಿನ ಹಳ್ಳಿ ಬಳಿ ಒಂದು ನಡೆದಿದೆ. ತುಮಕೂರು ತಾಲೂಕಿನ ಸಿರಿವರ ಗ್ರಾಮದ 19 ವರ್ಷದ ದೀಪು ಹಾಗೂ ಟಾಟಾ ಏಸ್ ವಾಹನದ ಚಾಲಕ ನರಸಿಂಹಮೂರ್ತಿ ಎನ್ನುವವರ ಮೇಲೆ ಹಲ್ಲೆ ನಡೆದಿದೆ. ರೈಲ್ವೆ ಪೊಲೀಸ್ ಚಂದ್ರಶೇಖರ್ ಹಾಗೂ ನರಸಿಂಹರಾಜು ಎಂಬುವವರಿಂದ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ. ಹಲ್ಲೆ ಕುರಿತು, ಟಾಟಾ ಏಸ್ ನಲ್ಲಿ ವಾಹನದಲ್ಲಿ ಅಂಬೇಡ್ಕರ್ ಹಾಡು ಹಾಕಿ ಹೋಗುತ್ತಿದ್ದೆವು. ಚಂದ್ರಶೇಖರ್ ನರಸಿಂಹರಾಜು ಬೈಕಿನಲ್ಲಿ ಬಂದಿದ್ದರು. ನಮ್ಮ ವಾಹನ ಅಡಗಟ್ಟಿ ಚಂದ್ರಶೇಖರ್ ಹಾಗೂ ನರಸಿಂಹರಾಜು ಗಲಾಟೆ ಮಾಡಿದ್ದಾರೆ. ಯಾಕೆ ಅಂಬೇಡ್ಕರ್ ಹಾಡು ಹಾಕಿದ್ದೀರಾ ನಿಮ್ಮ ಜಾತಿ ಯಾವುದು?…

Read More

ಬೆಂಗಳೂರು : ಸಾರಿಗೆ ಬಸ್ಗಳಲ್ಲಿ ಟಿಕೆಟ್ ಪ್ರಯಾಣದ ದರ ಶೇಕಡ 15 ರಷ್ಟು ಏರಿಸಿದಕ್ಕಾಗಿ ವಿಪಕ್ಷ ನಾಯಕ ಆರ್ ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದರು. ಇದಕ್ಕೆ ಸಚಿವರ ಅಮಲಿಂಗ ರೆಡ್ಡಿ ಆರ್ ಅಶೋಕ್ ಅವರು ಸಾರಿಗೆ ಸಚಿವರಾಗಿದ್ದಾಗ ಬೆಲೆ ಏರಿಕೆ ಮಾಡಿದ್ದನ್ನು ದಾಖಲೆ ಸಮೇತ ಪಟ್ಟಿ ರಿಲೀಸ್ ಮಾಡಿದರು. ಇದೀಗ ಆರ್ ಅಶೋಕ್ ನನ್ನ ಅವಧಿಯಲ್ಲಿ ಸಾರಿಗೆ ಇಲಾಖೆ 1500 ಕೋಟಿ ರೂಪಾಯಿ ಲಾಭದಲ್ಲಿತ್ತು ಎಂದು ಸಚಿವ ರಾಮಲಿಂಗಾರೆಡ್ಡಿ ಅವರಿಗೆ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕುಂತಿ ಮಕ್ಕಳಿಗೆ ರಾಜ್ಯ ಸಿಕ್ಕ ಹಾಗೆ ನಮಗೆ ಅಧಿಕಾರ ಸಿಕ್ಕಿತ್ತು. ನಮಗೆ ಎಂಟುವರೇ ವರ್ಷಗಳ ಕಾಲ ಮಾತ್ರ ಅಧಿಕಾರ ಸಿಕ್ಕಿತ್ತು. ನಾನು ಸಾರಿಗೆ ಸಚಿವ ಆದಾಗ ಯಾವತ್ತೂ ಸಾರಿಗೆ ಇಲಾಖೆ ಲಾಸ್ ಇರಲಿಲ್ಲ. ಇಲಾಖೆ 1500ಕೋಟಿ ಲಾಭದಲ್ಲಿತ್ತು ಎಂದು ಸಚಿವ ರಾಮಲಿಂಗಾರೆಡ್ಡಿಗೆ ವಿಪಕ್ಷ ನಾಯಕ ಅಶೋಕ್ ಇದೀಗ ತಿರುಗೇಟು ನೀಡಿದ್ದಾರೆ. ದೇಶವನ್ನು…

Read More

ಗದಗ : ಆಗ ತಾನೇ ಶಾಲೆ ಮುಗಿಸಿಕೊಂಡು ಮನೆಗೆ ಬಂದಂತಹ 8 ವರ್ಷದ ಬಾಲಕನೊಬ್ಬ ಸ್ನೇಹಿತರೊಂದಿಗೆ ಆಟವಾಡುವಾಗ ಗೋಡೆಯ ಬಳಿ ಅವಿತುಕೊಂಡಿದ್ದಾನೆ. ಈ ವೇಳೆ ಏಕಾಏಕಿ ಗೋಡೆ ಕುಸಿದು 8 ವರ್ಷದ ಬಾಲಕ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ನರಗುಂದ ಪಟ್ಟಣದ ದಂಡಾಪೂರ ಕುರುಬಗೇರಿ ಓಣಿಯಲ್ಲಿ ಘಟನೆ ಜರುಗಿದೆ. ಮೃತ ಬಾಲಕನನ್ನು ಪ್ರದೀಪ್ ಗೋನಾಳ್ ಎಂದು ತಿಳಿದುಬಂದಿದೆ. ಈತ ಶಾಲೆಯಿಂದ ಮನೆಗೆ ಬಂದ ಬಳಿಕ ಗೆಳೆಯರೊಂದಿಗೆ ಆಟವಾಡುವಾಗ ಘಟನೆ ಜರುಗಿದೆ. ಗೋಡೆ ಬಿದ್ದ ಬವಾರಿ ಶಬ್ದಕ್ಕೆ ಓಡಿ ಬಂದು ಸ್ಥಳೀಯರು ರಕ್ಷಿಸಿದ್ದಾರೆ ಆದರೆ ಆಸ್ಪತ್ರೆಗೆ ಕರೆದೊಯುವಾಗ ಪ್ರದೀಪ್ ಮಾರ್ಗ ಮಧ್ಯೆ ಕೊನೆಯುಸಿರೆಳಿದಿದ್ದಾನೆ.ಘಟನೆ ಕುರಿತು ನರಗುಂದ ಪಟ್ಟಣ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More

ಚಿಕ್ಕಮಗಳೂರು : ಕಳೆದ ಕೆಲವು ದಿನಗಳ ಹಿಂದೆ ಚಿಕ್ಕಮಂಗಳೂರು ಭಾಗದಲ್ಲಿ ನಕ್ಷಲ್ ಚಟುವಟಿಕೆ ಹೆಚ್ಚಾಗಿದ್ದು, ಈ ವೇಳೆ ವಿಕ್ರಂ ಗೌಡನನ್ನು ಎನ್ಕೌಂಟರ್ ಮಾಡಿದ ಬಳಿಕ ಇದೀಗ 6 ನಕ್ಸಲರು ಚಿಕ್ಕಮಂಗಳೂರು ಜಿಲ್ಲಾಡಳಿತದ ಮುಂದೆ ಶರಣಾಗತಿಗೆ ನಿರ್ಧರಿಸಿದ್ದು, ಮುಂದಿನ ಮೂರು ದಿನಗಳಲ್ಲಿ ಆರು ನಕ್ಸಲರು ಶರಣಾಗೋ ಸಾಧ್ಯತೆ ಇದೆ ಎನ್ನಲಾಗಿದೆ. ಹೌದು ಚಿಕ್ಕಮಗಳೂರಿನ ಜಿಲ್ಲಾಡಳಿತದ ಮುಂದೆ ಶರಣಾಗತಿ ಆಗಲು ನಿರ್ಧಾರ ಮಾಡಿದ್ದಾರೆ. ಕರ್ನಾಟಕ, ಕೇರಳ, ಆಂಧ್ರಕ್ಕೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ನಕ್ಸಲರು ಇದೀಗ ಶರಣಾಗತಿಗೆ ನಿರ್ಧಾರ ಮಾಡಿದ್ದಾರೆ. ಕರ್ನಾಟಕದ ನಕ್ಸಲ್ ತುಂಗಾ ದಳದ ನಕ್ಸಲ್ ನಾಯಕಿ ಮುಂಡಗಾರು ಲತಾ, ಸುಂದರಿ, ವನಜಾಕ್ಷಿ, ದಕ್ಷಿಣ ಭಾರತದ ಮೋಸ್ಟ ವಾಂಟೆಡ್ ನಕ್ಸಲ್ ಜೀಶ ಆಂಧ್ರಪ್ರದೇಶದ ಕೆ. ವಸಂತ್, ಮಾರಪ್ಪ ಅರೋಲಿ ಶರಣಾಗತಿಗೆ ನಿರ್ಧರಿಸಿದ್ದಾರೆ. ಈ ಬಗ್ಗೆ ಶಾಂತಿಗಾಗಿ ನಕ್ಸಲರು ನಾಗರೀಕ ವೇದಿಕೆಗೆ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ವೇದಿಕೆ ಸದಸ್ಯರು ಚರ್ಚಿಸಿದ್ದಾರೆ. ಮೂರು ದಿನಗಳಲ್ಲಿ ಆರು ನಕ್ಸಲರು…

Read More

ಬೆಂಗಳೂರು : ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಅವಗಡ ಸಂಭವಿಸಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಗೊಟ್ಟಿಗೆರೆ ಬಳಿ ಒಂದು ಘಟನೆ ನಡೆದಿದೆ. ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಈ ಅಗ್ನಿ ದುರಂತ ಸಂಭವಿಸಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿ ಚಲಿಸುತ್ತಿದ್ದ ನಾಲ್ವರು ತಕ್ಷಣ ಹೊರಗಡೆ ಬಂದಿದ್ದಾರೆ. ಕಾರಿನಲ್ಲಿ ತೆರಳುತ್ತಿದ್ದ ನಾಲ್ವರು ಸದ್ಯ ಯಾವುದೇ ಅಪಾಯವಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೂಡಲೇ ಸ್ಥಳೀಯ ನಿವಾಸಿಗಳು ಬೆಂಕಿ ಹೊತ್ತಿಕೊಂಡಿದ್ದ ಕಾರನ್ನು ನಂದಿಸಿದ್ದಾರೆ. ಹುಳಿಮಾವು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.

Read More

ಹುಬ್ಬಳ್ಳಿ : ಕಳೆದ ಡಿಸೆಂಬರ್ ನಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ಸದನದ ವೇಳೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಬಿಜೆಪಿ ಎಂಎಲ್ಸಿ ಸಿಟಿ ರವಿ ಅಶ್ಲೀಲ ಪದ ಬಳಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಭಾಪತಿ ಬಸವರಾಜ ಹೊರಟ್ಟಿ ಅವರು, ಮೇಲ್ಮನೆಯಲ್ಲಿ ಸಿಐಡಿ ಅಧಿಕಾರಿಗಳಿಗೆ ಮಹಾಜರು ನಡೆಸಲು ಅನುಮತಿ ನೀಡಲ್ಲ ಎಂದು ಸ್ಪಷ್ಟಪಡಿಸಿದರು. ಇಂದು ಹುಬ್ಬಳ್ಳಿಯಲ್ಲಿ ಸಭಾಪತಿ ಬಸವರಾಜ್ ಹೊರಟ್ಟಿ ಮಾಧ್ಯಮಗಳೊಂದಿಗೆ ಮಾತನಾಡಿದ ಆವರು, ಸಿಐಡಿಯವರು ಯಾವ ರೀತಿ ಸ್ಥಳ ಮಹಜರು ಮಾಡ್ತಾರೆ ಎಂದು ಹೇಳಬೇಕಾಗುತ್ತದೆ. ಅಲ್ಲೇನು ಕುರ್ಚಿ ಅಥವಾ ಟೇಬಲ್ ಸ್ಥಳ ಮಹಜರು ಮಾಡುತ್ತಾರೋ? ಅಥವಾ ಸದನಕ್ಕೆ ಕರೆದುಕೊಂಡು ಬಂದು ಮಾಡುತ್ತಾರೆ ಎನ್ನುವುದನ್ನು ಹೇಳಬೇಕು. ಯಾವ ರೀತಿ ಪಂಚನಾಮೆ ಮಾಡುತ್ತಾರೆ ಅನೋದನ್ನ ಸಿಐಡಿ ಹೇಳಲಿ. ಪಂಚನಾಮೆ ಮಾಡ್ತಾರೆ ಅಂದರೆ ಹೇಗೆ ಮಾಡ್ತಾರೆ ಎಂದು ಅವರು ಪ್ರಶ್ನಿಸಿದರು. ಸೂಕ್ತವಾದ ಕಾರಣವನ್ನು ಸಿಐಡಿ ನಮಗೆ ಕೊಡಲಿ. ಸದನ ಅಡ್ಡನ್ ಆಗಿದೆ. ಹೀ ಗಾಗಿ ನಮ್ಮೆ ಕ್ಯಾಮೆರಾ, ಆಡಿಯೋ, ವಿಡಿಯೋ ಆಟೋಮ್ಯಾಟಿಕ್ ಆಗಿ ಬಂದ್ ಆಗುತ್ತವೆ. ಸದನ…

Read More

ಚಿಕ್ಕಬಳ್ಳಾಪುರ : ಜಿಲ್ಲೆಯ ತಮ್ಮನಾಯಕನಹಳ್ಳಿ ಗೇಟ್​ ಬಳಿ ನಿನ್ನೆ ಲಾಂಗ್​ನಿಂದ ಕೊಚ್ಚಿ ಜೆಡಿಎಸ್ ಮುಖಂಡ ವೆಂಕಟೇಶ್ ನನ್ನು ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇದೀಗ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಗಳನ್ನು ಧನು ಅಲಿಯಾಸ್ ಧನರಾಜ್ ಹಾಗೂ ಆತನ ಸಹಚರ ಸತೀಶ್ ಎಂದು ಗುರುತಿಸಲಾಗಿದೆ. ಹಳೆಯ ದ್ವೇಷ ಹಿನ್ನಲೆ ಹತ್ಯೆ ಮಾಡಿದ್ದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್ ಚೌಕ್ಸೆ ಮಾಹಿತಿ ನೀಡಿದ್ದಾರೆ.ವೆಂಕಟೇಶ್ ತೆರಳುತ್ತಿದ್ದ ಸ್ಕೂಟಿಯನ್ನು ಅಡ್ಡಗಟ್ಟಿದ್ದ ಧನರಾಜ್ ಹಾಗೂ ಸತೀಶ್ ಮೊದಲು ಹಂದಿ ಕೊಯ್ಯುವ ಚಾಕುವಿನಿಂದ ಬೆನ್ನಿಗೆ ಇರಿದಿದ್ದರು. ನಂತರ ಹೊಟ್ಟೆ, ಮುಖಕ್ಕೆ ಮೂರು ಬಾರಿ ಹೊಡೆದಿದ್ದರು. ಅಲ್ಲದೇ ಕೈ ಕಟ್ ಮಾಡಿ ಸ್ಥಳದಿಂದ ಪರಾರಿಯಾಗಿದ್ದರು. ಇದೀಗ ಬಳಿಕ ಆರೋಪಿಗಳು ಬೆಂಗಳೂರಿನಲ್ಲಿ ರೂಮ್ ಮಾಡಿಕೊಂಡಿದ್ದರು. ಆರೋಪಿಗಳನ್ನು ಬಂಧಿಸಿ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಮೂರು ದಿನಗಳ ಹಿಂದೆ ತಮ್ಮನಾಯ್ಕನಹಳ್ಳಿ ಗೆಟ್ ಬಳಿ ಇರುವ ಬಾರ್ ಹತ್ತಿರ ಕೆಲವರು ಕುಡಿದು ಗಲಾಟೆ ಮಾಡುತ್ತಿದ್ದರಂತೆ. ಆಗ ವೆಂಕಟೇಶ್​…

Read More

ಬೆಂಗಳೂರು : ಸಾರಿಗೆ ಬಸ್ಗಳಲ್ಲಿ ಟಿಕೆಟ್ 15 ರಷ್ಟು ಹೆಚ್ಚಿಗೆ ಮಾಡಿ ರಾಜ್ಯ ಸರ್ಕಾರ ನಿನ್ನೆ ಅಧಿಕೃತ ಆದೇಶ ಹೊರಡಿಸಿದೆ. ಈ ವಿಚಾರವಾಗಿ ವಿಪಕ್ಷ ಬಿಜೆಪಿ ನಾಯಕರು ಬೆಂಗಳೂರಿನ ಮೆಜೆಸ್ಟಿಕ್ ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಪ್ರಯಾಣಿಕರಿಗೆ ಹೂ ನೀಡಿ ಪ್ರತಿಭಟನೆ ನಡೆಸಿದರು. ಈ ವಿಚಾರವಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬಿಜೆಪಿ ಅವಧಿಯಲ್ಲಿ ಕೂಡ ಸಾರಿಗೆ ಬಸ್ ಗಳ ಟಿಕೆಟ್ ದರದಲ್ಲಿ ಏರಿಕೆ ಮಾಡಿರುವ ಪಟ್ಟಿ ರಿಲೀಸ್ ಮಾಡಿದ್ದಾರೆ. ಹೌದು ಬಿಜೆಪಿ ಅವಧಿಯಲ್ಲಿ ಸಾರಿಗೆ ಸಚಿವರಾಗಿದ್ದ ವಿಪಕ್ಷ ನಾಯಕ ಆರ್​​. ಅಶೋಕ್ ಅವಧಿಯಲ್ಲಿ ಟಿಕೆಟ್​ ದರ ಏರಿಕೆ ಪಟ್ಟಿಯನ್ನು ಬಿಡುಗಡೆ ಮಾಡುವ ಮೂಲಕ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಟಾಂಗ್​ ಕೊಟ್ಟಿದ್ದಾರೆ.ಬಿಜೆಪಿ ಸರ್ಕಾರ ಇದ್ದಾಗ ವಿಪಕ್ಷ ನಾಯಕ ಆರ್​​. ಅಶೋಕ್ ಅವಧಿಯಲ್ಲಿ ಯಾವ್ಯಾವ ವರ್ಷದಲ್ಲಿ ಎಷ್ಟೆಷ್ಟು ದರ ಏರಿಕೆ‌ ಎಂದು ಪಟ್ಟಿ ರಿಲೀಸ್​ ಮಾಡಿದೆ. https://twitter.com/RLR_BTM/status/1875578459692679383?t=sIzF3882AXhFscvKG8-HaA&s=19

Read More

ಮಂಡ್ಯ : ಠಾಣೆಗೆ ಕರೆದೊಯ್ಯಲು ಯತ್ನಿಸಿದಾಗ ಎ ಎಸ್ ಐ ಅಧಿಕಾರಿಯೊಬ್ಬ ಮೇಲೆ ಆರೋಪಿಯೊಬ್ಬ ನಡು ರಸ್ತೆಯಲ್ಲಿಯೇ ಹಲ್ಲೆ ನಡೆಸಿದ್ದು, ಆತನನ್ನು ಅರೆಸ್ಟ್ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ನಡೆದಿದೆ. ನಾಗಮಂಗಲ ಗ್ರಾಮಾಂತರ ಎಎಸ್‌ ಐ ರಾಜು ಮೇಲೆ ಮಜ್ಜನಕೊಪ್ಪಲು ಪೂಜಾರಿ ಕೃಷ್ಣ ಎಂಬಾತ ಹಲ್ಲೆ ಮಾಡಿದ್ದಾನೆ.ಆರೋಪಿ ಕೃಷ್ಣನ ವಿರುದ್ಧ ಆತನ ತಾಯಿ ಠಾಣೆಗೆ ದೂರು ನೀಡಿದ್ದರು. ಹಣಕ್ಕೆ ಬೇಡಿಕೆ ಇಟ್ಟು ಪ್ರತಿ ದಿನ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ದೂರಿನ ಹಿನ್ನೆಲೆಯಲ್ಲಿ ಕೃಷ್ಣನನ್ನು ಠಾಣೆಗೆ ಕರೆತರಲು ಎಎಸ್‌ಐ ರಾಜು ತೆರಳಿದ್ದರು. ನಾಗಮಂಗಲದ ಕೋರ್ಟ್ ಹತ್ತಿರ ನಿಂತಿದ್ದ ಕೃಷ್ಣನನ್ನು ಎಎಸ್‌ಐ ರಾಜು ಠಾಣೆಗೆ ಕರೆದಿದ್ದರು.ಠಾಣೆಗೆ ಬರಲು ಒಪ್ಪದಿದ್ದಾಗ ಕೃಷ್ಣನ ಕಾಲರ್ ಹಿಡಿದು ಬಲವಂತವಾಗಿ ಆಟೋಗೆ ಹತ್ತಿಸಲು ಎಎಸ್‌ಐ ಮುಂದಾಗಿದ್ದರು. ಈ ವೇಳೆ ಎಎಸ್‌ಐ ರಾಜುವನ್ನು ಕೃಷ್ಣ ತಳ್ಳಿದ್ದಾನೆ. ಆಗ ಅವರು ಕೆಳಗೆ ಬಿದ್ದಿದ್ದಾನೆ. ನಂತರ ಕೃಷ್ಣನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Read More