Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ವಿಗ್ರಹಗಳ ಇತಿಹಾಸ ನರಹರಿತೀರ್ಥರ ಮೂಲಕ ಬಂದು ಆಚಾರ್ಯರು ಪೂಜಿಸಿದ ಈ ವಿಗ್ರಹಗಳು ಬಹಳ ಪ್ರಾಚೀನವಾದವು, ಇವುಗಳನ್ನು “ಚತುರ್ಯುಗಮೂರ್ತಿಗಳು” ಎಂದು ಜನಪ್ರಿಯವಾಗಿ ಕರೆಯಲಾಗುತ್ತದೆ. ವಸಿಷ್ಠ ರಾಮಾಯಣ, ಅಧ್ಯಾತ್ಮ ರಾಮಾಯಣ ಮತ್ತು ಮಾರ್ಕಂಡೇಯ ಪುರಾಣಗಳಲ್ಲಿ ಅವುಗಳ ವೈಭವದ ಗತಕಾಲದ ಬಗ್ಗೆ ಉಲ್ಲೇಖಗಳಿವೆ. ಈ ಎರಡೂ ವಿಗ್ರಹಗಳು ಬಹಳ ಸುಂದರವಾಗಿವೆ. ಇವುಗಳ ದರ್ಶನ ಪಡೆದ ಯಾವುದೇ ಧರ್ಮನಿಷ್ಠ ಆತ್ಮವು ಆಳವಾದ ಭಕ್ತಿಯನ್ನು ಹುಟ್ಟುಹಾಕದೆ ಇರಲಾರದು. ಶ್ರೀ ಮೂಲರಾಮನ ವಿಗ್ರಹವನ್ನು ನೋಡಿದ ಪುರಾತತ್ವ ಅಧಿಕಾರಿಯೊಬ್ಬರು ಅದರ ರೂಪ, ಸೌಂದರ್ಯ, ಪ್ರಾಚೀನತೆಯ ಸೂಕ್ಷ್ಮತೆಯ ಬಗ್ಗೆ ತಮ್ಮ ದಿಗ್ಭ್ರಮೆಯನ್ನು ವ್ಯಕ್ತಪಡಿಸಿದ್ದಾರೆ. ಶ್ರೀ ಜಗನಾಥದಾಸರು ತಮ್ಮ ಒಂದು ಕೀರ್ತನೆಯಲ್ಲಿ ಈ ವಿಗ್ರಹಗಳ ಇತಿಹಾಸವನ್ನು ಶ್ರೀ ವದೀಂದ್ರತೀರ್ಥರು ತಾವು ಬರೆದ “ಶ್ರೀ ರಾಘವೇಂದ್ರ-ಮಠ-ಗಥಾರ್ಚಗತಿ-ಕ್ರಮ” ಎಂಬ ಪುಸ್ತಕದಲ್ಲಿ ಮಾಡಿದಂತೆಯೇ ಅದೇ ಕಥಾನಕದಲ್ಲಿ ವಿವರಿಸಿದ್ದಾರೆ. ಶ್ರೀ ವಿಜಯದಾಸರು ಈ ವಿಗ್ರಹಗಳನ್ನು ಹೊಂದಲು ಕಾರಣವಾದ ಘಟನೆಗಳನ್ನು ಚಿತ್ರಿಸುವ ಪ್ರತ್ಯೇಕ ಸುಲಾದಿಯನ್ನು ರಚಿಸಿದ್ದಾರೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್…
ಬಾಗಲಕೋಟೆ : 75ರಷ್ಟಿರುವ ದಲಿತರು, ಮುಸ್ಲಿಮರು ಅಧಿಕಾರ ನಡೆಸುವಂತಾಬೇಕು. ಒಗ್ಗಟ್ಟಾಗದಿದ್ದರೆ ಉಳಿಗಾಲವಿಲ್ಲ ಎಂಬುದನ್ನು ತಿಳಿದುಕೊಳ್ಳಬೇಕು. ಎಲ್ಲರೂ ಸಮಾನರಾಗಿ ಬಾಳುವೆ ನಡೆಸಬೇಕು. ಡಾ.ಅಂಬೇಡ್ಕರ್ ಅವರು ನೀಡಿರುವ ಮತದಾನ ಹಕ್ಕನ್ನು ಸರಿಯಾರಿ ಬಳಸಿಕೊಂಡು ನಮಗೆ ಬೇಕಾದ ನಾಯಕರನ್ನು ಆರಿಸಿ ತರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಕರೆ ನೀಡಿದರು. ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಹಜರತ್ ಟಪ್ಪು ಸುಲ್ತಾನ ಜಯಂತ್ಯುತ್ಸವ ಸಮಿತಿ ವತಿಯಿಂದ ಏರ್ಪಡಿಸಿದ್ದ ಕೌಮಿ ಏಕತಾ ಸಮಾಮೇಶ ಉದ್ದೇಶಿಸಿ ಮಾತನಾಡಿದ ಅವರು, ಟಿಪ್ಪು ಸುಲ್ತಾನರು ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದರು. ಆಗಿನ ಕಾಲದಲ್ಲೇ ರಾಕೆಟ್ಗಳನ್ನು ತಯಾರಿಸಿ ಬ್ರಿಟಿಷರಿಗೆ ಸಿಂಹ ಸ್ವಪ್ನವಾಗಿದ್ದರು. ಅನೇಕ ಮಠ, ಮಂದಿರ ನಿರ್ಮಿಸಿದ್ದರು. ನಾಣ್ಯಗಳನ್ನು ಚಲಾವಣೆಗೆ ತಂದಿದ್ದರು. ಸ್ವಾರ್ಥಕ್ಕಾಗಿ ದೇಶವನ್ನು ಗಟ್ಟಿಯಾಗಿ ಕಟ್ಟಲು ಶ್ರಮಿಸಿದ ಟಿಪ್ಪು ಸುಲ್ತಾನರ ಇತಿಹಾಸ ತಿರುಚುವ ಕೆಲಸ ನಡೆದಿದೆ ಎಂದು ಕಳವಳ ವ್ಯಕ್ತಪಡಿಸಿದರು. ಕೆಟ್ಟ ಪ್ರವೃತ್ತಿ ಬಿಟ್ಟು ಒಗ್ಗಟ್ಟಿನಿಂದ ಬಸವತತ್ವಗಳ ಆಚರಣೆಗೆ ತರುವ ಮೂಲಕ ಎಲ್ಲರೂ ಸಮಾನರಾಗಿ ಬಾಳುವೆ ನಡೆಸಬೇಕು. ಡಾ.ಅಂಬೇಡ್ಕರ್ ಅವರು…
ಹುಬ್ಬಳ್ಳಿ : ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರದಲ್ಲಿ ನಡೆದ ಗರ್ಭಿಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿ ಎಸ್ಪಿ ಆದೇಶಿಸಿದ್ದಾರೆ. ಠಾಣೆಯ ವಿಶೇಷ ವಿಭಾಗದ ಕಾನ್ಸ್ಟೇಬಲ್ ಸಂಗಮೇಶ ಸಾಗರ ಮತ್ತು ಬೀಟ್ ಕಾನ್ಸ್ಟೇಬಲ್ ಚಂದ್ರಕಾಂತ ರಾಥೋಡ ಅಮಾನತಾಗಿರುವ ಪೊಲೀಸ್ ಸಿಬ್ಬಂದಿ. ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ಅನ್ಯಜಾತಿ ಯುವಕನ ಮದುವೆಯಾಗಿದ್ದಕ್ಕೆ ಗರ್ಭಿಣಿ ಮೇಲೆ ಆಕೆಯ ತಂದೆ, ಕುಟುಂಬಸ್ಥರು ಹಲ್ಲೆಗೈದು, ಭೀಕರವಾಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪದ ಮೇಲೆ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮಂಗಳವಾರ ತಡರಾತ್ರಿ ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಸಪ್ಪ ಸೋಲಾರಾಗೊಪ್ಪ ಮತ್ತು ಅನಿಲಗೌಡ ಪಾಟೀಲ ಎಂಬುವರನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಕೊಲೆ ಕೃತ್ಯದ ಸಂಬಂಧ 14ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದು 11 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.ಸದ್ಯ ಸಾವಿನ ದವಡೆಯಿಂದ ಇಬ್ಬರು ಯುವತಿಯರು ಹೊರಬಂದಿದ್ದಾರೆ. ಧಗಧಗನೇ ಉರಿಯುತ್ತಿದ್ದ ಬಸ್ನಿಂದ ಇಬ್ಬರು ಯುವತಿಯರು ಪ್ರಾಣ ಉಳಿಸಿ ಬಂದ ದೃಶ್ಯ ವೈರಲ್ ಆಗಿದೆ. ಬಸ್ ದುರಂತದಲ್ಲಿ ಇದೀಗ ರಶ್ಮಿ ಬದುಕುಳಿದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಗೋಕರ್ಣ ಮೂಲದ ಯುವತಿ ರಶ್ಮಿ ಇದೀಗ ಬಚಾವಾಗಿದ್ದಾರೆ ಸಂಬಂಧಿಕರ ಜೊತೆಗೆ ರಶ್ಮಿ ಮಾತನಾಡಿದ್ದಾರೆ ಎನ್ನುವ ಮಾಹಿತಿ ತಿಳಿದು ಬಂದಿದೆ. ಸ್ಥಳೀಯರು ಅಪಘಾತ ನಡೆದ ತಕ್ಷಣ ಬಚಾವ್ ಮಾಡಿದ್ದಾರೆ ಹಾಗಾಗಿ ರಶ್ಮಿ ಪಾರಾಗಿದ್ದಾರೆ. ಕ್ರಿಸ್ಮಸ್ ಹಾಗೂ ಸಾಲು ಸಾಲು ರಜೆ ಇರುವ ಹಿನ್ನೆಲೆ ಸ್ನೇಹಿತರೊಂದಿಗೆ ರಶ್ಮಿ ತಮ್ಮ ಊರಿಗೆ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ಒಂದು ಅಪಘಾತ ಸಂಬಂಧಿಸಿದ ಮತ್ತು ರಕ್ಷಿತಾ ಮೂವರು ಸ್ನೇಹಿತರು ಇದೀಗ ಬಚಾವ್ ಆಗಿದ್ದಾರೆ. ಘಟನೆ ವಿವರ ಗೊರ್ಲತ್ತು ಗ್ರಾಮದ ಬಳಿ ಸೀಬರ್ಡ್…
ಬೆಂಗಳೂರು : ಖಾಸಗಿ ಬಸ್ಗೆ ಕಂಟೇನರ್ ಲಾರಿ ಡಿಕ್ಕಿಯಾಗಿ 9 ಜನರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ ಘಟನೆ ಸಂಭಂದ ಸಿಎಂ ಸಿದ್ದರಾಮಯ್ಯ ಈಗಾಗಲೇ ಸಂಪೂರ್ಣವಾಗಿ ಮಾಹಿತಿ ಪಡೆದುಕೊಂಡಿದ್ದು ಅಪಘಾತಕ್ಕೆ ನಿಖರವಾದ ಕಾರಣ ಪತ್ತೆ ಹಚ್ಚುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಸೂಚಿಸಿದ್ದಾರೆ ಕುಟುಂಬದ ಸದಸ್ಯರಿಗೆ ಪರಿಹಾರ ಘೋಷಿಸುವ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ ಶೀಘ್ರದಲ್ಲಿ ಕುಟುಂಬಸ್ಥರಿಗೆ ಪರಿಹಾರ ಘೋಷಣೆ ಮಾಡಲಿದೆ. ಇನ್ನು ಈ ಒಂದು ಘಟನೆ ಕುರಿತು ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಅಪಘಾತದಲ್ಲಿ ಮೃತರರಿಗೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಚಿತ್ರದುರ್ಗದ ಬಳಿ ಲಾರಿ ಮತ್ತು ಬಸ್ಸಿ ನಡುವೆ ಅಪಘಾತ ಸಂಭವಿಸಿದೆ ಅಪಘಾತದಲ್ಲಿ ಪ್ರಯಾಣಿಕರು ಸಚಿವ ದಹನಗೊಂಡಿದ್ದಾರೆ ಸುದ್ದಿ ಕೇಳಿ ಎದೆ ನಡುಗಿತು. ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ…
ಚಿಕ್ಕಬಳ್ಳಾಪುರ : ಹುಬ್ಬಳ್ಳಿಯಲ್ಲಿ ದಲಿತ ಯುವಕನನ್ನು ಮದುವೆಯಾಗಿದ್ದಕ್ಕೆ ತಂದೆಯೇ ತನ್ನ ಗರ್ಭಿಣಿ ಮಗಳನ್ನ ಭೀಕರವಾಗಿ ಕೊಲೆ ಮಾಡಿದ್ದ ಈ ಒಂದು ಮರ್ಯಾದಾ ಹತ್ಯೆ ಮಾಸುವ ಮುನ್ನವೇ ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ಪಟ್ಟಣದಲ್ಲಿ ಮರ್ಯಾದಾ ಹತ್ಯೆಯ ಶಂಕೆ ವ್ಯಕ್ತವಾಗಿದೆ. 40 ದಿನಗಳ ಗಂಡುಶಿಶುವಿನ ಸಾವಿಗೆ ಮುತ್ತಜ್ಜಿಯೇ ಕಾರಣ ಎಂಬ ಅನುಮಾನ ವ್ಯಕ್ತವಾಗಿದೆ ಹೌದು ಅಪ್ರಾಪ್ತ ಮೊಮ್ಮಗಳು ಹಿಂದೂ ಯುವಕನನ್ನು ಪ್ರೀತಿಸಿ ಮದುವೆ ಮಾಡಿಕೊಂಡಿದ್ದಕ್ಕೆ ದ್ವೇಷ ಹೊಂದಿದ್ದ ಅನ್ಯಕೋಮಿಗೆ ಸೇರಿದ ಅಜ್ಜಿ, ಮೊಮ್ಮಗಳ 40 ದಿನದ ನವಜಾತ ಶಿಶುವನ್ನು ಕೊಂದಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಪ್ರೀತಿಸಿ ಮದುವೆಯಾದ ದಂಪತಿಗೆ ಜನಸಿದ್ದ ಗಂಡು ಮಗು ಡಿಸೆಂಬರ್ 21 ರಂದು ಮೃತಪಟ್ಟಿದೆ. ಸಾವು ಸಂಭವಿಸಿದ ವೇಳೆ ಮಗು ಅಜ್ಜಿ ಬಳಿ ಇತ್ತು. ಆದರೆ, ಈ ಕುರಿತು ಪೊಲೀಸರಿಗೆ ಮಾಹಿತಿ ನೀಡುವ ಅಗತ್ಯವಿಲ್ಲ ಎಂದು ಅಜ್ಜಿ ವಾದಿಸಿದ್ದಾಳೆ ಎನ್ನಲಾಗಿದೆ. ಆದರೆ ತನ್ನ ಮಗುವಿನ ಸಾವಿನಲ್ಲಿ ಅಜ್ಜಿಯ ಕೈವಾಡವಿದೆ ಎಂಬ ಅನುಮಾನ ವ್ಯಕ್ತಪಡಿಸಿದ 17 ವರ್ಷದ ಅಪ್ರಾಪ್ತ ಬಾಲಕಿ, ಚೇಳೂರು ಪೊಲೀಸ್…
ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದು 11 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.ಸದ್ಯ ಸಾವಿನ ದವಡೆಯಿಂದ ಇಬ್ಬರು ಯುವತಿಯರು ಹೊರಬಂದಿದ್ದಾರೆ. ಧಗಧಗನೇ ಉರಿಯುತ್ತಿದ್ದ ಬಸ್ನಿಂದ ಇಬ್ಬರು ಯುವತಿಯರು ಪ್ರಾಣ ಉಳಿಸಿ ಬಂದ ದೃಶ್ಯ ವೈರಲ್ ಆಗಿದೆ. ಇನ್ನು ಇದೆ ವೇಳೆ ಅಪಘಾತದ ಭೀಕರತೆ ನಡುವೆ ಬಚಾವಾದ ಮತ್ತೊಂದು ಬಸ್ ಅಪಘಾತವಾದ ಖಾಸಗಿ ಬಸ್ ಹಿಂದೆಯೇ ಶಾಲಾ ವಾಹನ ತೆರಳುತ್ತಿತ್ತು. ಶಾಲಾ ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಮತ್ತೊಂದು ಭಾರಿ ದುರಂತ ತಪ್ಪಿದೆ. ಶಾಲಾ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 46 ಮಕ್ಕಳು ಹಾಗೂ ಶಿಕ್ಷಕರು ಬಚಾವ್ ಆಗಿದ್ದಾರೆ. ಬೆಂಕಿ ಹತ್ತಿದ್ದ ಬಸ್ ನಲ್ಲಿ ಇದ್ದ ಏಳು ಜನರನ್ನು ನಾನೇ ರಕ್ಷಣೆ ಮಾಡಿದೆ ಆ ಬಳಿಕ ಖಾಸಗಿ ಬಸ್ ನಲ್ಲಿ ಸ್ಪೋಟವಾಯಿತು. ಅದಾದ ಬಳಿಕ ನನಗೆ ಬಸ್ ಒಳಗೆ ಹೋಗಲು ಆಗಲಿಲ್ಲ ಎಂದು ಬಸ್ ಚಾಲಕ ಸಚಿನ್…
ರಾಜಸ್ತಾನ್ : ರಾಜಸ್ಥಾನದ ಉದಯಪುರದಲ್ಲಿ ಚಲಿಸುವ ಕಾರಿನಲ್ಲಿ ಐಟಿ ಕಂಪನಿ ಮ್ಯಾನೇಜರ್ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಘಟನೆ ಬೆಳಕಿಗೆ ಬಂದಿದೆ. ಹುಟ್ಟುಹಬ್ಬದ ಪಾರ್ಟಿ ಮುಗಿಸಿ ಬಂದ ನಂತರ ಸಂತ್ರಸ್ತೆಯನ್ನು ಸುರಕ್ಷಿತವಾಗಿ ಕಾರಿನಲ್ಲಿ ಕರೆದುಕೊಂಡು ಹೋಗುವುದಾಗಿ ಹೇಳಿ ಕಾರಿನೊಳಗೆ ಸೇರಿಸಲಾಗಿತ್ತು. ದಾರಿಯಲ್ಲಿ ಮಾದಕ ದ್ರವ್ಯ ನೀಡಿ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. ಕಂಪನಿಯ ಸಿಇಒ ಮತ್ತು ಮಹಿಳಾ ಕಾರ್ಯನಿರ್ವಾಹಕ ಮುಖ್ಯಸ್ಥೆ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಈ ಘಟನೆ ಕಳೆದ ಶನಿವಾರ ನಡೆದಿದೆ. ಸಂತ್ರಸ್ತೆ ಉದಯಪುರದ ಖಾಸಗಿ ಐಟಿ ಕಂಪನಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಾರೆ . ಶನಿವಾರ ರಾತ್ರಿ ಕಂಪನಿಗೆ ಸಂಬಂಧಿಸಿದ ಹುಟ್ಟುಹಬ್ಬದ ಪಾರ್ಟಿ ನಡೆಯುತ್ತಿತ್ತು. ಪಾರ್ಟಿ ಮುಗಿದು ಎಲ್ಲಾ ಅತಿಥಿಗಳು ನಿಧಾನವಾಗಿ ಹೊರಟುಹೋದ ನಂತರ, ಸಂತ್ರಸ್ತೆ ಒಬ್ಬಂಟಿಯಾಗಿ ಉಳಿದಿದ್ದಳು. ಆ ಸಮಯದಲ್ಲಿ, ಕಂಪನಿಯ ಮಹಿಳಾ ಕಾರ್ಯನಿರ್ವಾಹಕ ಮುಖ್ಯಸ್ಥರು ಅವಳನ್ನು ತನ್ನ ಕಾರಿನಲ್ಲಿ ಸುರಕ್ಷಿತವಾಗಿ ಮನೆಗೆ ಬಿಡಲು ಮುಂದಾದರು. ಮಹಿಳಾ ಕಾರ್ಯನಿರ್ವಾಹಕ ಮುಖ್ಯಸ್ಥೆ ಕಾರಿನಲ್ಲಿ ತನ್ನ ಪತಿ ಮತ್ತು…
ಬೆಂಗಳೂರು : ನಾಳೆ ರಾಜ್ಯಾದ್ಯಂತ ವಾಜಪೇಯಿ ಅವರ ಹುಟ್ಟುಹಬ್ಬ ಆಚರಣೆ ಮಾಡುತ್ತೇವೆ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬಂದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ದುರಾಡಳಿತದಿಂದ ಜನರು ಬೇಸತ್ತಿದ್ದಾರೆ. ಜನರು ಬೇಸತ್ತಿದ್ದಾರೆ ಎನ್ನುವುದಕ್ಕೆ ಈ ಫಲಿತಾಂಶ ಸ್ಪಷ್ಟ ಸಂದೇಶವಾಗಿದೆ. ಬ್ಯಾಲೆಟ್ ಪೇಪರ್ ಬೇಕೆಂದು ಕಾಂಗ್ರೆಸ್ ನವರು ಆರೋಪ ಮಾಡುತ್ತಿದ್ದರು. ರಾಹುಲ್ ಗಾಂಧಿ ಸಿದ್ದರಾಮಯ್ಯ ಆದಿಯಾಗಿ ನಾಟಕ ಮಾಡಿದರು. ಬ್ಯಾಲೆಟ್ ಪೇಪರ್ ನಲ್ಲಿ ನಡೆದ ಚುನಾವಣೆಯಲ್ಲೂ ಬಿಜೆಪಿ ಗೆದ್ದಿದೆ. ಕಾಂಗ್ರೆಸ್ ಪಕ್ಷಕ್ಕೆ ಜನರು ಸ್ಪಷ್ಟ ಸಂದೇಶ ನೀಡಿದ್ದಾರೆ ಎಂದು ಬಿವೈ ವಿಜಯೇಂದ್ರ ತಿಳಿಸಿದರು. ಇಂದು ಮಾಜಿ ಪ್ರಧಾನ ಮಂತ್ರಿ ವಾಜ್ಪೇಯ್ ಅವರ ಜನ್ಮ ಶತಮಾನೋತ್ಸವ ಹಿನ್ನೆಲೆಯಲ್ಲಿ ಮಲ್ಲೇಶ್ವರಂನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಅಟಲ್ ದೀಪೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರು ಯಾವ ರೀತಿ ದೇಶವನ್ನು ಮುನ್ನಡೆಸಿದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ. ದೇಶದ ಮಹಾನ್ ನಾಯಕನನ್ನು ಸ್ಮರಣೆ ಮಾಡುವ ದಿನ ಅಟಲ್ ದೀಪೋತ್ಸವ ಕಾರ್ಯಕ್ರಮದಲ್ಲಿ ಬಿ…
ಬೆಂಗಳೂರು : ಮಂಗನ ಕಾಯಿಲೆ ತಡೆ ಮತ್ತು ಮುನ್ನೆಚ್ಚರಿಕೆ ಕುರಿತು ವಿಕಾಸಸೌಧದಲ್ಲಿ ಆರೋಗ್ಯ ಇಲಾಖೆ ಆಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಈಗ ಶಿವಮೊಗ್ಗದಲ್ಲಿ ಒಂದು ಲ್ಯಾಬ್ ಕೆಲಸ ಮಾಡುತ್ತಿದ್ದು, ಒತ್ತಡ ಹೆಚ್ಚಾಗಿರುವುದರಿಂದ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನೂತನ ಲ್ಯಾಬ್ ಪ್ರಾರಂಭಕ್ಕೆ ಎಲ್ಲ ಉಪಕರಣ ಖರೀದಿಸಲಾಗಿದ್ದು ಶೀಘ್ರದಲ್ಲಿ ಕಾರ್ಯಾರಂಭಮಾಡಲಿದೆ ಎಂದು ತಿಳಿಸಿದರು. ಇದರಿಂದ ಸಿರಸಿ, ಸಿದ್ದಾಪುರ ಭಾಗದ ಜನರಿಗೆ ಹೆಚ್ಚು ಉಪಯೋಗ ಆಗಲಿದೆ. ಬೇಗ ರೋಗವನ್ನು ಗುರುತಿಸಲು ಮತ್ತು ಸಾವಿನ ಪ್ರಮಾಣವನ್ನು ಶೂನ್ಯಕ್ಕೆ ಇಳಿಸಲು ಇದು ಸಹಕಾರಿ ಆಗಲಿದೆ. ಮಂಗನ ಕಾಯಲೆ ಎಂದು ಕರೆಸಿಕೊಳ್ಳುವ ಈ ಕಾಯಿಲೆ ಪ್ರತಿ ವರ್ಷ ಅಕ್ಟೊಬರ್ ನಿಂದ ಜೂನ್ ವರೆಗೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು, ಉಡುಪಿ ಜಿಲ್ಲೆಗಳಲ್ಲಿ ಕಂಡುಬರುವ ಈ ಕಾಯಿಲೆ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಸನ್ನಧ್ದವಾಗಿದೆ. ಸರಿಯಾದ ರೀತಿಯ ತಪಾಸಣೆಯನ್ನು ನಿಯಮಿತವಾಗಿ ಮಾಡಲಾಗುತ್ತಿದೆ. ಈವರೆಗೆ ಶಿವಮೊಗ್ಗ -1163, ಚಿಕ್ಕಮಗಳೂರು- 124, ಉತ್ತರ ಕನ್ನಡ- 368,…














