Subscribe to Updates
Get the latest creative news from FooBar about art, design and business.
Author: kannadanewsnow05
ರಾಮನಗರ : ಜಮೀನು ವಿಚಾರವಾಗಿ ದಾಯಾದಿಗಳ ನಡುವೆ ಕಲಹ ನಡೆದಿದ್ದು, ದೊಡ್ಡಪ್ಪನ ಮಗನ ಮೇಲೆ ಚಿಕ್ಕಪ್ಪನ ಮಗ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಏಳಗಳ್ಳಿ ಗ್ರಾಮದಲ್ಲಿ ಈ ಒಂದು ಗಲಾಟೆ ನಡೆದಿದೆ. ಚಿಕ್ಕಪ್ಪನ ಮಗ ರಘುನಿಂದ ಲೋಕೇಶ್ ಮೇಲೆ ಹಲ್ಲೆ ನಡೆದಿದೆ. ಲೋಕೇಶ್ ರೇಷ್ಮೆ ಸೊಪ್ಪು ತರುವಾಗ ಮನೆಯ ಬಳಿ ಮಾರಕಾಸ್ತ್ರಗಳಿಂದ ರಾಘು ದಾಳಿ ಮಾಡಿದ್ದಾನೆ ತಕ್ಷಣ ದಯಾನಂದ ಸಾಗರ್ ಆಸ್ಪತ್ರೆಗೆ ಗಾಯಾಳು ಲೋಕೇಶ್ ದಾಖಲಾಗಿದ್ದಾನೆ. ಘಟನೆಯ ನಂತರ ಆರೋಪಿ ರಘು ಪರಾರಿ ಆಗಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಆರೋಪಿಗಾಗಿ ಬಲೆ ಬೀಸಿದ್ದಾರೆ.
ಬೆಂಗಳೂರು : ಶಿವಮೊಗ್ಗದ ಡಿಸಿಸಿ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಶಿವಮೊಗ್ಗ ಮತ್ತು ಬೆಂಗಳೂರಲ್ಲಿ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬ್ಯಾಂಕಿನ ಮಾಜಿ ಅಧ್ಯಕ್ಷ ಮಂಜುನಾಥ ಗೌಡಗೆ ಇಡಿ ಶಾಕ್ ನೀಡಿದೆ. ಬೆಂಗಳೂರಿನಲ್ಲಿ ಕೂಡ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಮಂಜುನಾಥಗೌಡ ನಿವಾಸದ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಶಿವಮೊಗ್ಗ ಡಿಸಿಸಿ ಬ್ಯಾಂಕಿನ ಮಾಜಿ ಅಧ್ಯಕ್ಷ ಮಂಜುನಾಥಗೌಡನನ್ನು ಇಡಿ ಅಧಿಕಾರಿಗಳು ಇದೀಗ ವಿಚಾರಣೆ ನಡೆಸುತ್ತಿದ್ದಾರೆ. ಅಪೇಕ್ಸ್ ಬ್ಯಾಂಕ್ ಗೆಸ್ಟ್ ಹೌಸ್ ನಲ್ಲಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಸುಮಾರು 10ಕ್ಕೂ ಹೆಚ್ಚು ಅಧಿಕಾರಿಗಳಿಂದ ಮಂಜುನಾಥಗೌಡ ವಿಚಾರಣೆ ನಡೆಯುತ್ತಿದೆ. ಮ್ಯಾನೇಜರ್ ಗು ಶಾಕ್ 2014 ರಲ್ಲಿ ಶಿವಮೊಗ್ಗದ ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನ ಅಡವಿಟ್ಟು 62 ಕೋಟಿ ಸಾಲ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಆಗಿದ್ದ ಶೋಭಾ ಮನೆ ಮೇಲೆ ಇಡಿ ದಾಳಿ ಮಾಡಿದೆ. ಶಿವಮೊಗ್ಗದ ಗೋಪಾಲಗೌಡ ಬಡಾವಣೆಯಲ್ಲಿರುವ ಶೋಭಾ ನಿವಾಸದ ಮೇಲೆ…
ಯಾದಗಿರಿ : ಕಳೆದ 3 ವರ್ಷದಿಂದ ನನಗೆ ಸಂಬಳ ಆಗಿಲ್ಲ ಎಂದು ಗ್ರಾಂ ಪಂಚಾಯತ್ ಸ್ವಚ್ಛತಾ ವಾಹಿನಿ ಚಾಲಕಿ ಕಣ್ಣೀರು ಹಾಕಿದ್ದಾರೆ. ಯಾದಗಿರಿಯ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಪುರ ಅವರ ಮುಂದೆ ಕಣ್ಣೀರು ಹಾಕಿದ್ದಾರೆ. ಹತ್ತಿಗುಡೂರು ಗ್ರಾಮ ಪಂಚಾಯತಿ ಸ್ವಚ್ಛತಾ ವಾಹಿನಿ ಚಾಲಾಕಿ ಅನಿರಾಧಾ ಅವರು, ಕಳೆದ 3 ವರ್ಷಗಳಿಂದ ನಾನು ಸಂಬಳ ಇಲ್ಲದೆ ದುಡಿಯುತ್ತಿದ್ದೇನೆ. ಜೀವನ ನಿರ್ವಹಣೆ ತುಂಬಾ ಕಷ್ಟವಾಗಿದೆ. ಹಾಗಾಗಿ ಶೀಘ್ರದಲ್ಲಿ ವೇತನ ಮಾಡಿಸಿಕೊಡಿ ಎಂದು ಚಾಲಕಿ ಸಚಿವರ ಮುಂದೆ ಅಳಲು ತೋಡಿಕೊಂಡಿದ್ದಾರೆ. ಈ ವೇಳೆ ಶರಣಬಸಪ್ಪ ದರ್ಶನಾಪುರ ನಾನು ಈ ಕ್ಷೇತ್ರದ ಶಾಸಕನಿದ್ದೇನೆ. ಕಳೆದ ಮೂರು ವರ್ಷಗಳಿಂದ ವೇತನ ಇಲ್ಲ ಅಂತ ಹೇಳುತ್ತಿದ್ದೀಯಲ್ಲಮ್ಮ ನನ್ನನ್ನು ಭೇಟಿಯಾಗಿ ಒಂದು ಮಾತು ಹೇಳಬೇಕು ತಾನೆ? ಅಧಿಕಾರಿಗಳಿಗೆ ಹೇಳಿ ಶೀಘ್ರದಲ್ಲಿ ವೇತನ ಬಿಡುಗಡೆ ಮಾಡಿಸುವುದಾಗಿ ಈ ವೇಳೆ ಸಚಿವ ಶರಣಬಸಪ್ಪ ದರ್ಶನಾಪುರ್ ಭರವಸೆ ಕೊಟ್ಟಿದ್ದಾರೆ.
ಶಿವಮೊಗ್ಗ : 2014 ರಲ್ಲಿ ಶಿವಮೊಗ್ಗದ ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನ ಅಡವಿಟ್ಟು 62 ಕೋಟಿ ಸಾಲ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಆಗಿದ್ದ ಶೋಭಾ ಮನೆ ಮೇಲೆ ಇಡಿ ದಾಳಿ ಮಾಡಿದೆ. ಶಿವಮೊಗ್ಗದ ಗೋಪಾಲಗೌಡ ಬಡಾವಣೆಯಲ್ಲಿರುವ ಶೋಭಾ ನಿವಾಸದ ಮೇಲೆ ಇದೀಗ ಜಾರಿ ನಿರ್ದೇಶನಲಯದ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸುಮಾರು 8ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಲಾಗುತ್ತಿದೆ. ಶಿವಮೊಗ್ಗದ ಗೋಪಾಲಗೌಡ ಬಡಾವಣೆಯಲ್ಲಿರುವ ಶೋಭಾ ನಿವಾಸದ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. 2014ರ ಜೂನ್ ನಲ್ಲಿ ಡಿಸಿಸಿ ಬ್ಯಾಂಕ್ ಶಾಖೆಯಲ್ಲಿ ಈ ಒಂದು ಹಗರಣ ನಡೆದಿತ್ತು. ಶಿವಮೊಗ್ಗದ ಗಾಂಧಿ ಬಜಾರ್ ನಗರದಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಯಲ್ಲಿ ಹಗರಣ ನಡೆದಿತ್ತು. ಆ ವೇಳೆ ಡಿಸಿಸಿ ಬ್ಯಾಂಕ್ ಶಾಖೆಯ ಮ್ಯಾನೇಜರ್ ಶೋಭಾ ಆಗಿದ್ದರು. ಬ್ಯಾಂಕಿನ ವಾಹನ ಚಾಲಕನಾಗಿದ್ದ ಶಿವಕುಮಾರ್ ಮನೆಯ ಮೇಲು ರೇಡ್ ಮಾಡಲಾಗಿದ್ದು, ಏಕಕಾಲಕ್ಕೆ ಎರಡು ಕಡೆ ದಾಳಿ ನಡೆಸಿರುವ ವಿಡಿಯೋ…
ಹಾವೇರಿ : ಬಹು ಮಹಡಿ ಕಟ್ಟಡಗಳಲ್ಲಿ, ಅಪಾರ್ಟ್ಮೆಂಟ್ ಗಳಲ್ಲಿ, ಆಸ್ಪತ್ರೆ ಮತ್ತು ದೊಡ್ಡ ದೊಡ್ಡ ಕಂಪನಿಗಳಲ್ಲಿ ಲಿಫ್ಟ್ ಗಳ ವ್ಯವಸ್ಥೆ ಇರುತ್ತದೆ. ಆದರೆ ಕೆಲವು ಬಾರಿ ತಾಂತ್ರಿಕ ದೋಷಗಳಿಂದ ಲಿಫ್ಟ್ ಕೈ ಕೊಟ್ಟರೆ, ಜೀವಕ್ಕೆ ಆಪತ್ತು ಎದುರಾಗುವ ಸಂಭವಿವಿರುತ್ತದೆ ಇದೀಗ ಹಾವೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಕೂಡ ಇಂತಹದೇ ಘಟನೆ ನಡೆದಿದ್ದು ತಾಂತ್ರಿಕ ದೋಷಗಳಿಂದ ವ್ಯಕ್ತಿ ಒಬ್ಬ ಲಿಫ್ಟ್ ನಲ್ಲಿಯೇ ಸಿಲುಕಿ ಪರದಾಟ ನಡೆಸಿರುವ ಘಟನೆ ವರದಿಯಾಗಿದೆ. ಹೌದು ವ್ಯಕ್ತಿಯೊಬ್ಬ ಸ್ಥಗಿತಗೊಂಡ ಲಿಫ್ಟ್ನಲ್ಲಿ ಸಿಲುಕಿ ಕೆಲಕಾಲ ಪರದಾಡಿದ ಘಟನೆ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ರೋಗಿಯ ಜೊತೆಗೆ ಆಸ್ಪತ್ರೆಗೆ ಬಂದಿದ್ದ ಮಂಜುನಾಥ ಎಂಬವರು ಲಿಫ್ಟ್ನಲ್ಲಿ ಸಿಲುಕಿ ಗಾಬರಿಗೊಂಡಿದ್ದರು. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮಂಜುನಾಥ ಅವರನ್ನು ರಕ್ಷಣೆ ಮಾಡಿದೆ. ಒಂದು ಮತ್ತು ಎರಡನೇ ಮಹಡಿ ಮಧ್ಯದಲ್ಲಿ ಲಿಫ್ಟ್ ಸ್ಥಗಿತಗೊಂಡಿದ್ದರಿಂದ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಜಿಲ್ಲಾಸ್ಪತ್ರೆ ತಾಂತ್ರಿಕ ಸಿಬ್ಬಂದಿ ಲಿಫ್ಟ್ ಅನ್ನು ಸರಿಯಾಗಿ ನಿರ್ವಹಣೆ ಮಾಡದ ಕಾರಣ ಈ ಆಚಾತುರ್ಯ ನಡೆದಿದೆ ಎಂದು…
ಚಿತ್ರದುರ್ಗ : ಚಿತ್ರದುರ್ಗದ ಗೋನೂರು ಬ್ರಿಡ್ಜ್ ಬಳಿ ನೇತ್ರಾವತಿ (27) ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಇದು ಅಪಘಾತವಲ್ಲ ಕೊಲೆ ಎಂಬ ಆರೋಪದ ಮೇಲೆ ಓಬಯ್ಯನ ಹಟ್ಟಿ ಗೊಲ್ಲರಹಟ್ಟಿ ನಿವಾಸಿ ಲೋಕೇಶ್ (30) ಎನ್ನುವ ಆರೋಪಿಯ ಬಂಧನವಾಗಿದೆ. ಏಪ್ರಿಲ್ 6 ರಂದು ಎಂ ಕೆ ಹಟ್ಟಿ ಗ್ರಾಮದ ನೇತ್ರಾವತಿ ಶವ ಪತ್ತೆಯಾಗಿತ್ತು. ಹಿಟ್ ಅಂಡ್ ರನ್ ಶಂಕಿಸಿ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದರು. ಚಿತ್ರದುರ್ಗದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನೇತ್ರಾವತಿ ಜೊತೆಗೆ ಲೋಕೇಶ್ ಅನೈತಿಕ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಲೋಕೇಶ್ ವಿರುದ್ಧ ನೇತ್ರಾವತಿ ಸಂಬಂಧಿಕರಿಂದ ಇದೀಗ ಕೊಲೆ ಆರೋಪ ಕೇಳಿ ಬಂದಿದೆ. ಲೋಕೇಶ್ ಬೈಕ್ ನಿಂದ ಕೆಳಗೆ ಬೀಳಿಸಿ ನೇತ್ರಾವತಿಯ ಕೊಲೆ ಮಾಡಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ. ಇದೀಗ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಮತ್ತೆ ಪೊಲೀಸರ ಗುಂಡಿನ ಸದ್ದು ಕೇಳಿಸಿದ್ದು ಪೊಲೀಸರ ಮೇಲೆ ಹಲ್ಲೆ ನಡೆಸಿದ ರೌಡಿಶೀಟರ್ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಹುಬ್ಬಳ್ಳಿಯ ಆನಂದನಗರದ ಹೊರವಲಯದಲ್ಲಿ ನಡೆದಿದೆ. ಹೌದು ಹುಬ್ಬಳ್ಳಿಯಲ್ಲಿ ರೌಡಿಶೀಟರ್ ಮಲಿಕ್ ಆದೋನಿ ಕಾಲಿಗೆ ಫೈರಿಂಗ್ ಮಾಡಿದ್ದು, ಹುಬ್ಬಳ್ಳಿಯ ಆನಂದ ನಗರದ ಹೊರವಲಯದಲ್ಲಿ ಪೊಲೀಸರು ರೌಡಿಶೀಟರ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಹಳೆ ಹುಬ್ಬಳ್ಳಿ ಠಾಣೆಯ ಪಿಎಸ್ಐ ವಿಶ್ವನಾಥ್ ಅವರು ರೌಡಿಶೀಟರ್ ಮಲಿಕ್ ಆದೋನಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ನಿನ್ನೆ ಹಣಕಾಸಿನ ವಿಚಾರವಾಗಿ ಗಲಾಟೆ ಆಗಿತ್ತು. ವಿಚಾರಣೆಯ ವೇಳೆ ಪೊಲೀಸರ ಮೇಲೆ ಮಲಿಕ್ ಆಧೋನಿ ಹಲ್ಲೆ ಮಾಡಿದ್ದಾನೆ. ಈ ವೇಳೆ ಆತ್ಮ ರಕ್ಷಣೆಗಾಗಿ ಪಿಎಸ್ಐ ವಿಶ್ವನಾಥ್ ಮಲಿಕ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಪಿಎಸ್ಐ ವಿಶ್ವನಾಥ್, ಪಿಸಿಗಳಾದ ಕಲ್ಲನಗೌಡ, ಶರೀಫ್ ಎನ್ನುವವರಿಗೆ ಗಾಯಗಳಾಗಿವೆ. ಗಾಯಾಳು ಪೊಲೀಸರು ಮತ್ತು ಆರೋಪಿ ಮಲಿಕ್ ಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದರಲ್ಲಿ ನಿಮ್ಮ ಬೆರಳಿನ ಉಗುರನ್ನು ಕತ್ತರಿಸಿ ಹಾಕಿ ಪವಾಡ ನೋಡಿ ಇದರ ಬಗ್ಗೆ ಕನಸಿನಲ್ಲೂ ಕಲ್ಪನೆ ಮಾಡಲು ಸಾಧ್ಯವಿಲ್ಲ ಯಾವುದೇ ಕೈಯಲ್ಲಿರುವ ಬೆರಳುಗಳು ಒಂದೇ ರೀತಿ ಇಲ್ಲ, ಅದೇ ರೀತಿ ಜೀವನದಲ್ಲೂ ಏರುಪೇರು ಆಗುತ್ತಲೇ ಇರುತ್ತದೆ. ಒಂದು ವೇಳೆ ತಂತ್ರ ಶಕ್ತಿಯಿಂದ ತೊಂದರೆ ಅನುಭವಿಸುತ್ತಿದ್ದರೆ ಅಥವಾ ಹಣದ ಸಮಸ್ಯೆಯನ್ನು ಎದುರಿಸುತ್ತಿದ್ದರೆ ,ಶತ್ರುಗಳಿಂದ ನಿಮಗೆ ತೊಂದರೆಯಾಗುತ್ತಿದ್ದರೆ ,ಗಂಡ-ಹೆಂಡತಿ ನಡುವೆ ಯಾವುದಾದರೂ ವಿಚಾರಕ್ಕೆ ಯಾವಾಗಲೂ ಕಲಹ ಆಗುತ್ತಿದ್ದರೆ ನಾವು ಇಂದು ತಿಳಿಸಿಕೊಡುವ ಈ ಉಪಾಯವನ್ನು ಮಾಡಿದರೆ ಜೀವನವಿಡಿ ಸುಖ ಶಾಂತಿ ಹಾಗೂ ನೆಮ್ಮದಿಯಿಂದ ಜೀವನವನ್ನು ನಡೆಸಬಹುದು. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು…
ಮಂಡ್ಯ :- ವಿಶ್ವವಿಖ್ಯಾತ, ಐತಿಹಾಸಿಕ ಮೇಲುಕೋಟೆ ಕ್ಷೇತ್ರದ ಶ್ರೀ ಚೆಲುವನಾರಾಯಣಸ್ವಾಮಿಯ ವೈರಮುಡಿ ಬ್ರಹ್ಮೋತ್ಸವ ಸೋಮವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ವಿಶ್ವಾವಸು ಸಂವತ್ಸರದ ಚೈತ್ರ ಮಾಸದ ಪುಷ್ಯ ನಕ್ಷತ್ರದ ಶುಭ ದಿನದಂದು ವಜ್ರಖಚಿತ ವೈರಮುಡಿ ಧರಿಸಿದ್ದ ಚೆಲುವನಾರಾಯಣಸ್ವಾಮಿಯು ದೇವಾಲಯದಿಂದ ಹೊರ ಬರುತ್ತಿದ್ದಂತೆ ಕಣ್ತುಂಬಿಕೊಂಡ ಲಕ್ಷಾಂತರ ಭಕ್ತರು ಗೋವಿಂದ, ಗೋವಿಂದ ಎಂಬ ಜಯಘೋಷಗಳನ್ನು ಮೊಳಗಿಸಿದರು. ಗಂಡ-ಭೇರುಂಡ ಸ್ವರೂಪಿ ಚಂದ್ರಪ್ರಭೆ ಪ್ರಭಾವಳಿಯ ಮಧ್ಯದಲ್ಲಿ ಅಲಂಕಾರ ಸ್ವರೂಪಿಯಾಗಿದ್ದ ಸ್ವಾಮಿಯ ಉತ್ಸವವನ್ನು ನೋಡಿ ಭಕ್ತರು ದರ್ಶನ ಪಡೆದು ಸಂಭ್ರಮಿಸಿದರು. ರಾಮಾನುಜಾಚಾರ್ಯರ ಸನ್ನಿಧಿಯಲ್ಲಿ ಪ್ರಥಮ ಪೂಜೆ ಸಲ್ಲಿಸಿದ ನಂತರ ವೈರಮುಡಿ ಉತ್ಸವಕ್ಕೆ ಚಾಲನೆ ನೀಡಲಾಯಿತು. ಉತ್ಸವ ಸಾಗುವ ರಾಜಬೀದಿಯನ್ನು ತಳಿರು-ತೋರಣ, ವಿಶೇಷ ವಿದ್ಯುತ್ ದೀಪಾಲಂಕಾರದಿಂದ ಶೃಂಗರಿಸಲಾಗಿತ್ತು. ಬೀದಿಯ ಎರಡೂ ಬದಿಯಲ್ಲಿ ಭಕ್ತರು ಸಾಲುಗಟ್ಟಿ ನಿಂತಿದ್ದರು. ರಾಜ್ಯ ಮಾತ್ರವಲ್ಲದೇ ಪಕ್ಕದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಕೇರಳದಿಂದಲೂ ಸಹಸ್ರಾರು ಭಕ್ತಾದಿಗಳು ಆಗಮಿಸಿದ್ದರು.ಮೇಲುಕೋಟೆಯ ವಸತಿ ಗೃಹಗಳು, ಛತ್ರಗಳು ಭಕ್ತರಿಂದ ಕಿಕ್ಕಿರಿದು ತುಂಬಿದ್ದವು. ಇದಕ್ಕೂ ಮುನ್ನ, ಸೋಮವಾರ ಬೆಳಿಗ್ಗೆ ಜಿಲ್ಲಾ ಖಜಾನೆ…
ದಾವಣಗೆರೆ : ಈಗಾಗಲೇ ಕೋಡಿ ಶ್ರೀಗಳು ಉತ್ತರ ಕರ್ನಾಟಕ ಭಾಗದ ಸಚಿವರಾದಂತಹ ಎಂ ಬಿ ಪಾಟೀಲ್ ರಿಗೆ ಮುಖ್ಯಮಂತ್ರಿ ಆಗುವ ಯೋಗ ಇದೆ ಎಂದು ಭವಿಷ್ಯ ನುಡಿದಿದ್ದಾರೆ. ಇದರ ಬೆನ್ನಲ್ಲೆ ದಾವಣಗೆರೆ ಜಿಲ್ಲೆಯ ಚೆನ್ನಗಿರಿ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಡಿಸೆಂಬರ್ ಒಳಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಸಿಎಂ ಆಗುತ್ತಾರೆ ಅಕಸ್ಮಾತ್ ಆಗದಿದ್ದರೆ ನನ್ನನ್ನು ಬಂದು ಕೇಳಿ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ ಅವರು, ಡಿಸೆಂಬರ್ ಒಳಗೆ ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ. ಆಗದಿದ್ದರೆ ನನ್ನನ್ನು ಬಂದು ಕೇಳಿ. ಈಗಾಗಲೇ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಹೇಳಿದ್ದೇನೆ. ತೆನೆ ಹಾಗಾಗಿ ಮುಂದಿನ ಡಿಸೆಂಬರ್ ಒಳಗಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಸಿಎಂ ಆಗುತ್ತಾರೆ ಅಕಸ್ಮಾತ್ ಆಗದಿದ್ದರೆ ಆಗ ನನ್ನನ್ನು ಬಂದು ಕೇಳಿ ಎಂದು ಡಿಕೆ ಶಿವಕುಮಾರ್ ಪರವಾಗಿ ಬ್ಯಾಟಿಂಗ್ ಬೀಸಿದ್ದಾರೆ. ಡಿಸೆಂಬರ್ ಒಳಗೆ ಸಿಎಂ ಬದಲಾವಣೆಯಾಗ್ತಾರೆ, ಡಿಕೆ ಶಿವಕುಮಾರ್ ಮುಂದಿನ…














